Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಂಜು ದೇವಾಡಿಗ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರಾದ ಗುರುರಾಜ ಹೆಬ್ಬಾರ್, ಪ್ರಕಾಶ್ ಎಸ್. ಪೂಜಾರಿ, ರಾಜೇಶ ದೇವಾಡಿಗ, ದಿನೀತಾ ಶೆಟ್ಟಿ, ಕೆ.ಲಲಿತಾ ಪೂಜಾರಿ, ಉದಯಕುಮಾರ ಶೆಟ್ಟಿ, ಈಶ್ವರ ಹಕ್ಲತೋಡು, ಹೂವ ನಾಯ್ಕ, ಭರತ್‌ ದೇವಾಡಿಗ ಉಪಸ್ಥಿತರಿದ್ದರು. ಜ.30 ಗುರುವಾರ ನೂತನ ಅಧ್ಯಕ್ಷರು, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ರೋಹಿತ್ ಕುಮಾರ್‌ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್ ಪೈ. ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನ ಟೌನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವ‌ರ್ ಚಂದ್ ಗೆಹೋಟ್ ಅವರು ಬೈಂದೂರು ವಲಯದ ಆಲೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕ ಉದಯ ಕುಮಾರ್ ಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ. ಈ ವೇಳೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ ಮೀನಾ, ಬಿ.ಬಿ.ಎಂ.ಪಿ ಆಯುಕ್ತ ತುಷಾರ ಗಿರಿನಾಥ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ  ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್‌ವತಿಯಿಂದ ಕುವೆಂಪು ಸಭಾಂಗಣದಲ್ಲಿ ಅಘನಾಶಿನಿ ಸ್ಪೀಕ್ಸ್ – ರಿವರ್ ರಿದಮ್ಸ್ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಘನಾಶಿನಿ ಸಾಕ್ಷ್ಯಚಿತ್ರ ನಿರ್ದೇಶಕ ಅಶ್ವಿನಿ ಕುಮಾರ್ ಭಟ್ ಮಾತನಾಡಿ, ಸಾಕ್ಷ್ಯಚಿತ್ರ ರಚನೆಯ ಸೂಕ್ಷ್ಮಗಳನ್ನು ವಿವರಿಸಿದರು. ಕಥೆ ಹೇಳುವ ಮಹತ್ವವನ್ನು ತಿಳಿಸಿದರು. “ಸಾಕ್ಷ್ಯಚಿತ್ರ ನಿರ್ಮಾಣ ಕೇವಲ ಕ್ಷಣಗಳನ್ನು ಸೆರೆಹಿಡಿಯುವುದೇ ಮುಖ್ಯ ಅಲ್ಲ, ಚಿತ್ರಕಥೆ, ಸಂಕಲನ ಮತ್ತು ಛಾಯಾಗ್ರಹಣದ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಅಂಶಗಳು ಸಮ್ಮಿಳಿತಗೊಂಡು ನೈಜ್ಯತೆಯ ಸಾಕ್ಷೀಕರಣವಾದಾಗ ಮನಸೆಳೆಯುವ ಸಾಕ್ಷ್ಯಚಿತ್ರ ಹೊರಹೊಮ್ಮಲು ಸಾಧ್ಯ ಎಂದರು. ಅಘನಾಶಿನಿ ಸಾಕ್ಷ್ಯಚಿತ್ರ ನಿರ್ಮಾಣ ನಂತರದ ಪ್ರಭಾವದ ಕುರಿತು ಮಾತನಾಡಿದ ಅವರು ಈ ಸಾಕ್ಷ್ಯಚಿತ್ರವು ನದಿಗಳನ್ನ ಅವುಗಳ ನೈಸರ್ಗಿಕ ಸ್ಥಿತಿಯಲ್ಲಿ ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಿತು. ಅಘನಾಶಿನಿ ಅಳಿವೆ ಪ್ರದೇಶವನ್ನು ರಾಮ್ಸಾರ್ ಸೈಟ್ ಎಂದು ಪ್ರಸ್ತಾಪಿಸುವಲ್ಲಿ ಈ ಸಾಕ್ಷ್ಯಚಿತ್ರವು ಪ್ರಮುಖ ಪಾತ್ರ ವಹಿಸಿತು ಎಂದರು. ಸ್ಥಳೀಯ ನೇತ್ರಾವತಿ ನದಿಯನ್ನು ಸಂರಕ್ಷಿಸಲು ಹೇಗೆ ಕೊಡುಗೆ ನೀಡಬಹುದು ಎಂದು ವಿದ್ಯಾರ್ಥಿ ಕೇಳಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೂಟ ಮಹಾಜಗತ್ತು ಸಾಲಿಗ್ರಾಮ ರಿ. ಅಂಗಸಂಸ್ಥೆ ಕಿರಿಮಂಜೇಶ್ವರ ಇದರ ವತಿಯಿಂದ ಬೈಂದೂರು ತಾಲೂಕಿನ ಕಿರಿಮಂಜೇಶ್ವರದಲ್ಲಿ ನೂತನವಾಗಿ 1.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶ್ರೀ ಗುರುನರಸಿಂಹ ಸಭಾಭವನದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು. ಸಾಲಿಗ್ರಾಮದ ತಂತ್ರಿ ವೇದಮೂರ್ತಿ ಕೃಷ್ಣ ಸೋಮಯಾಜಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ಭಗವಂತ ಎಲ್ಲರಿಗೂ ಒಳ್ಳೆದು ಮಾಡಲಿ ಎಂದು ಆಶೀರ್ವದಿಸಿದರು. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ. ಎಸ್. ಕಾರಂತರು ಮಾತನಾಡಿ, ಈ ಭಾಗದ ವಿಪ್ರರು ವಿಶೇಷವಾಗಿ ಕೃಷಿ, ವೈದಿಕ ಕ್ಷೇತ್ರ, ಬಾಣಸಿಗರು ಹಲವು ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದವರು ಇದ್ದು ಇದು ನಮಗೆ ಹೆಮ್ಮೆಯ ವಿಚಾರವಾಗಿದ್ದು ಕಿರಿಮಂಜೇಶ್ವರದಲ್ಲಿ ನಿರ್ಮಾಣವಾಗಿರುವ ಸಭಾಭವನದ ನಿರ್ಮಾಣದಲ್ಲಿ ಅಂಗಸಂಸ್ಥೆಯ ಪದಾಧಿಕಾರಿಗಳ ಐದು – ಆರು ವರ್ಷಗಳ ಸತತ ಪರಿಶ್ರಮದಿಂದ ಆಗಿರುತ್ತದೆ. ಸಭಾಭವನದ ಸದ್ಬಳಕೆ ಮುಂದಿನ ದಿನದಲ್ಲಿ ಆಗಲಿ ಎಂದು ಶುಭಹಾರೈಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಮಾತನಾಡಿ, ವಿಪ್ರ ಸಮೂದಾಯಕ್ಕೆ ಎಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2025ರ ಅಂಗವಾಗಿ ಇಲ್ಲಿನ ವೆಂಕಟರಮಣ, ಒಕ್ ವುಡ, ಸೈಂಟ್ ಪಿಯೂಷ್ ಶಾಲೆಗಳ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ನಿಯಮ ಪಾಲಿಸುವ ಬಗ್ಗೆ ನಿಯಮಗಳ ಘೋಷಣೆಯೊಂದಿಗೆ ಕುಂದಾಪುರ ಶಾಸ್ತ್ರೀ ಪಾರ್ಕ್‌ನಿಂದ ಕುಂದಾಪುರ ಸಂಚಾರ ಠಾಣೆಯವರೆಗೆ ಜಾಥಾ ನಡೆಯಿತು. ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯ ನೇತೃತ್ವದಲ್ಲಿ ನಡೆದ ಜಾಥಾದಲ್ಲಿ ಪಿ.ಐ ನಂಜಪ್ಪ, ಕುಂದಾಪುರ ಸಂಚಾರ ಠಾಣೆ ಪಿಎಸ್ಐ ಪ್ರಸಾದ್ ಕುಮಾರ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಮೊಗೆ ಗ್ರಾಮದ ನಿವಾಸಿ ವೆಂಕಟರಮಣ (65) ಅವರು ಸೋಮವಾರ ರಾತ್ರಿ ಮನೆ ಸಮೀಪದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಂಜೆ ಯಕ್ಷಗಾನ ನೋಡಲು ಹೋಗುವುದಾಗಿ ಮನೆಯಿಂದ ಹೊರಹೋದವರು ವಾಪಸ್ ಬಾರದಿರುವುದನ್ನು ನೋಡಿ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಶಂಕರನಾರಾಯಣ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆದ  ಗಣರಾಜ್ಯೋತ್ಸವ ಪಥಸಂಚಲನ ಶಿಬಿರ 2025ರಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ (ಎನ್‌ಸಿಸಿ) ಕರ್ನಾಟಕ ಗೋವಾ ನಿರ್ದೇಶನಾಲಯವು ಪ್ರತಿಷ್ಠಿತ ಪ್ರಧಾನಮಂತ್ರಿಗಳ ಬ್ಯಾನರ್‌ನ್ನು ಗೆದ್ದುಕೊಂಡಿತು. ಕರ್ನಾಟಕ ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಆಂಡ್ ಡಿಸೈನ್ ವಿಭಾಗದ ವಾಯುದಳದ ಎನ್‌ಸಿಸಿ ಕೆಡೆಟ್ ಹಾರ್ದಿಕ್ ಶೆಟ್ಟಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಸ್ವೀಕಾರ ಮಾಡುವ ಅವಕಾಶ ಒದಗಿತು. ಎನ್‌ಸಿಸಿ ಕರ್ನಾಟಕ ಗೋವಾ ನಿರ್ದೇಶನಾಲಯವು 124 ಕೆಡೆಟ್‌ಗಳನ್ನು ಈ ಭಾರಿ ಗಣರಾಜ್ಯೋತ್ಸವ ಪಥಸಂಚಲನ ಶಿಬಿರಕ್ಕೆ ಕಳುಹಿಸಿದ್ದು, ಅವರಲ್ಲಿ ಆಳ್ವಾಸ್‌ನ ಹಾರ್ದಿಕ್ ಶೆಟ್ಟಿ ಎಲ್ಲಾ ವಿಭಾಗದಲ್ಲೂ ಉತ್ತಮ ಕಾರ್ಯಕ್ಷಮತೆ ಮೆರೆದಿದ್ದು, ಡ್ರಿಲ್ ಚಟುವಟಿಕೆಯಲ್ಲಿ ಶ್ರೇಷ್ಠ ಮಟ್ಟದ ಪ್ರದರ್ಶನ ತೋರಿದ್ದರಿಂದಾಗಿ ಈ ಅವಕಾಶ ಒದಗಿ ಬಂದಿದೆ. ಪ್ರಧಾನಮಂತ್ರಿಗಳ ಬ್ಯಾನರ್ ಪ್ರಶಸ್ತಿಯನ್ನು ಪಡೆಯುವ ತಂಡವು ಹಲವು ಹಂತದ ಸ್ಪರ್ಧೆಗಳನ್ನು ಗೆದ್ದು, ಈ ಪ್ರಶಸ್ತಿಯನ್ನು ಸ್ವೀಕಾರ ಮಾಡುತ್ತದೆ. ಮುಖ್ಯವಾಗಿ ಅತ್ಯುತ್ತಮ ಗೌರವ ರಕ್ಷೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪರ: ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ ಶಿಬಿರದ ಉದ್ಘಾಟನಾ ಸಮಾರಂಭವು ಶಿರಸಿಯ ಲಯನ್ಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಶಿರಸಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಎಂ.ಎಸ್ ಪ್ರಸನ್ನಕುಮಾರ್ ಅವರು ಪ್ರೇರಣಾ ಶಿಬಿರ ಸಾಗಿ ಬಂದ ಹಾದಿಯ ಕುರಿತು ಮಾತನಾಡಿದರು. ಕಳೆದ ಬಾರಿಯ ವಾರ್ಷಿಕ ಫಲಿತಾಂಶದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ 39 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ಅತ್ಯುತ್ತಮ ಅಂಕಗಳೊಂದಿಗೆ ಗುರುತಿಸಿಕೊಂಡಿದ್ದು, ಈ ಪ್ರೇರಣಾ ಶಿಬಿರಕ್ಕೆ ಸಹಕರಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳದ ಸಹಕಾರವನ್ನು ಸ್ಮರಿಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್ ರವರು ಎಸ್.ಎಸ್.ಎಲ್.ಸಿ.ಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನು ಪಡೆಯುವ ಸಲುವಾಗಿ ವಿಶೇಷ ತರಬೇತಿ ನೀಡುವ ಈ ಪ್ರೇರಣಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತಾಗಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ’’ಸೃಜನಾತ್ಮಕ ಸ್ಮರಣೆ’’ ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಯಿತು. ಮೈಸೂರಿನ ”Mind Power Learning Systems” ನ ಸ್ಥಾಪಕರು ಹಾಗೂ ನಿರ್ದೇಶಕರಾಗಿರುವ ಎಸ್. ಪ್ರಶಾಂತ್ ಅವರು ವಿನಯಚಂದ್ರ ಅವರ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಜ್ಞಾಪಕ ಶಕ್ತಿಯನ್ನು ವೃದ್ಧಿಸುವ ಕಲೆಯನ್ನು ತಿಳಿಸಿದರು. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು. ಶಿಕ್ಷಕಿ ಲೋನಾ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿ, ಮುಖ್ಯೋಪಾಧ್ಯಯರು ಸ್ವಾಗತಿಸಿ, ಶಿಕ್ಷಕಿ ಪ್ರತಿಭಾ ಪೈ ವಂದನಾರ್ಪಣೆಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾ ಮಿಷನ್ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ಉಡುಪಿ ಇವರುಗಳ ಸಹಯೋಗದೊಂದಿಗೆ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ ಕಾರ್ಯಕ್ರಮವು ಫೆಬ್ರವರಿ 19ರಂದು ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು ಹಾಗೂ https://udupi.nic.in/ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಛೇರಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಂ:201, ಬಿ ಬ್ಲಾಕ್, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9449943882, 9481456741, 9964428002 ಹಾಗೂ 9481510655 ಅನ್ನು ಸಂಪರ್ಕಿಸಬಹುದಾಗಿದೆ…

Read More