ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗದ 40 ಸ್ಪರ್ಧೆಗಳಲ್ಲಿ ಭಾಗವಹಿಸಿ 36 ವಿಭಾಗಗಳಲ್ಲಿಯೂ ಪ್ರಶಸ್ತಿಯನ್ನು ಗಳಿಸಿ ಅತೀ ಹೆಚ್ಚಿನ ಬಹುಮಾನ ಪಡೆದುಕೊಂಡಿದ್ದಾರೆ. 1ರಿಂದ 4ನೇ ತರಗತಿ ವಿಭಾಗದಲ್ಲಿ ಐದು ಪ್ರಥಮ, ಎರಡು ದ್ವಿತೀಯ ಹಾಗೂ ಎರಡು ತೃತೀಯ ಬಹುಮಾನ ಪಡೆದುಕೊಂಡರೆ, 5ರಿಂದ 7ನೇ ತರಗತಿ ವಿಭಾಗದಲ್ಲಿ ಎಂಟು ಪ್ರಥಮ, ಐದು ದ್ವಿತೀಯ ಹಾಗೂ ಒಂದು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. 8ರಿಂದ 12ನೇ ತರಗತಿ ವಿಭಾಗದಲ್ಲಿ ಮೂರು ಪ್ರಥಮ, ಆರು ದ್ವಿತೀಯ ಹಾಗೂ ನಾಲ್ಕು ತೃತೀಯ ಬಹುಮಾನ ಗಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಂತಾರಾಷ್ಟ್ರೀಯ ಕ್ರೀಡಾ ಭೂಪಟದಲ್ಲಿ ಮೊದಲ ಬಾರಿಗೆ ಭಾರತ ಮಿನುಗುವಂತೆ ಮಾಡಿದ, ಸ್ವಾತಂತ್ರ್ಯ ಪೂರ್ವದಲ್ಲೇ ಭಾರತಕ್ಕೆ ಮೂರು ಒಲಿಂಪಿಕ್ಸ್ ಚಿನ್ನದ ಪದಕವನ್ನು ಗೆದ್ದುಕೊಟ್ಟ ಕ್ರೀಡಾ ಲೋಕದ ದಿಗ್ಗಜ ಮೇಜರ್ ಧ್ಯಾನ್ಚಂದ್ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ನುಡಿದರು. ಅವರು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ, ಗುರುವಾರ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಹಾಗೂ ಆಳ್ವಾಸ್ ಕಾಲೇಜು ಜಂಟಿಯಾಗಿ ರಾಷ್ಟೀಯ ಕ್ರೀಡಾ ದಿನದ ಹಿನ್ನಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶವೇ ಹೆಮ್ಮೆ ಪಡುವಂಥ ಸಾಧನೆ:ತಮ್ಮ ಅದ್ಭುತ ಕ್ರೀಡಾ ಕೌಶಲದ ಮೂಲಕ ಇಡೀ ದೇಶವೇ ಹೆಮ್ಮೆ ಪಡುವಂಥ ಸಾಧನೆಯನ್ನು ಮಾಡಿದ ಹಿನ್ನೆಲೆಯಲ್ಲಿ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಈ ದಿನದ ಆಚರಣೆಯ ಮುಖ್ಯ ಉದ್ದೇಶ ಕ್ರೀಡೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿಯನ್ನುಂಟು ಮಾಡುವುದಾಗಿದೆ ಎಂದರು. ಆಳ್ವಾಸ್ನಲ್ಲಿ ಕ್ರೀಡಾಪಟುಗಳಿಗೆ ಪ್ರತೀ ದಿನ ಹಬ್ಬ:ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ತನ್ನ ಅಸ್ತಿತ್ವ ಹೊಂದುವ ಮೊದಲೇ ಆಳ್ವಾಸ್ನಲ್ಲಿ ಏಕಲವ್ಯ ಸ್ಪೋಟ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಪ್ರತಿಯೊಬ್ಬ ನಾಗರೀಕನ ದೈನಂದಿನ ಜೀವನದಲ್ಲಿ ಆಧಾರ್ ಕಾರ್ಡ್ ಮಹತ್ವದ್ದಾಗಿದ್ದು, ವ್ಯಕ್ತಿಯನ್ನು ಗುರುತಿಸುವುದು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯವಾಗಿದ್ದು ಇದನ್ನು ಪ್ರತಿಯೊಬ್ಬರು ಚಾಲ್ತಿಯಲ್ಲಿರುವ ಆಧಾರ್ ಗುರುತಿನ ಚೀಟಿ ಹೊಂದಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತೀಯ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ ಚೀಟಿಯನ್ನು ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ ವಯೋಮಾನದವರಿಗೂ ಹೊಸಕಾರ್ಡ್ಗಳು, ಕಾರ್ಡುಗಳ ಸ್ಯಾಚುರೇಷನ್ ಹಾಗೂ ಕಡ್ಡಾಯ ಬಯೋ ಮೆಟ್ರಿಕ್ ನವೀಕರಣಗೊಳಿಸುವುದರೊಂದಿಗೆ ಎಲ್ಲಾ ವಯೋಮಾನದವರೂ ಚಾಲ್ತಿಯಲ್ಲಿರುವ ಆಧಾರ್ ಕಾರ್ಡ್ ಅನ್ನು ಹೊಂದಬೇಕು ಎಂದರು. 5 ವರ್ಷದೊಳಗಿನ ಮಕ್ಕಳು ಹೊಸದಾಗಿ ಆಧಾರ್ ಕಾರ್ಡ್ ನೊಂದಣಿಯನ್ನು ಸಮೀಪದ ಅಂಚೆ ಕಚೇರಿ, ತಾಲೂಕು ಕಚೇರಿ ಅಥವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಅವಶ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಗಣಕಯಂತ್ರ ವಿಭಾಗ ಹಾಗೂ ಇನ್ಸ್ಟಿಟ್ಯೂಷನ್ ಇನ್ನೋವೆಷನ್ ಕೌನ್ಸಿಲ್ ಇವರ ಸಹಯೋಗದೊಂದಿಗೆ ಪ್ರಥಮ ಪದವಿಯ ಬಿಸಿಎ ವಿದ್ಯಾರ್ಥಿಗಳಿಗಾಗಿ “ಬಿ.ಸಿ.ಎ ಕೋರ್ಸ್ ಪರಿಚಯ ಎನ್ನುವ ಮಾಹಿತಿ ಮತ್ತು ಅವಕಾಶಗಳು” ಕಾರ್ಯಾಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಬಿಸಿಎ ಪದವಿಯ ಉಪಯುಕ್ತತೆ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಯಾಗಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ ಅವರು ಉಪಸ್ಥಿತರಿದ್ದರು. ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಗಣೇಶ್ ಕೆ. ಅವರು ವಿದ್ಯಾರ್ಥಿಗಳಿಗೆ ಡೇಟಾ ಅನಾಲಿಟಿಕ್ಸ್, ಅದರ ಪಠ್ಯಕ್ರಮ ಮತ್ತು ವೃತ್ತಿ ಅವಕಾಶಗಳ ಬಗ್ಗೆ ವಿವರಿಸಿದರು. ಕಂಪ್ಯೂಟರ್ ಸೈನ್ಸ್ ಉಪನ್ಯಾಸಕಿಯಾದ ವಿಜಯಲಕ್ಷ್ಮಿ ಎನ್. ಶೆಟ್ಟಿ ವಿದ್ಯಾರ್ಥಿಗಳಿಗೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಮಶಿನ್ ಲರ್ನಿಂಗ್ ಕೋರ್ಸ ಅವಶ್ಯಕತೆ ಹಾಗೂ ವಿವಿಧ ವೃತ್ತಿ ಅವಕಾಶಗಳ ಬಗ್ಗೆ, ಅಂತೆಯೇ ಇನ್ನೊರ್ವ ಉಪನ್ಯಾಸಕರಾದ ಕೃಷ್ಣ ಅವರು ಸಾಮಾನ್ಯ ಬಿಸಿಎ ಕೋರ್ಸ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಹಯೋಗದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕೆರಾಡಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ವಿ. ಹೆಚ್ 4ನೇ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರನ್ನು ಆಡಳಿತ ಮಂಡಳಿ ಅವರು , ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅವರು ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೇರಂಜಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತೋತ್ಸವ ಅಂಗವಾಗಿ ಅಸ್ಮ ಕಮ್ ಸಂಸ್ಕೃತಂ ಸರಣಿ ಕಾರ್ಯಕ್ರಮ ಶ್ರೀ ಮಹಾಲಿಂಗೇಶ್ವರ ಸಂಸ್ಕೃತ ಪಾಠಶಾಲೆ ಬಹುಳಾಪುರ ಇವರ ಜಂಟಿ ಆಶ್ರಯದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಉದಯ್ ಆಚಾರ್ಯ ಅವರು ವಹಿಸಿಕೊಂಡಿರುತ್ತಾರೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರಶಾಂತ್ ಅರೆ ಶಿರೂರು ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಂಬದ ಕೋಣೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ದೇವಾಡಿಗ, ಗ್ರಾಮ ಪಂಚಾಯಿತಿ ಸದಸ್ಯೆ ಜಲಜಾಕ್ಷಿ ಗಾಣಿಗ ಎಸ್. ವಿ. ಎಸ್. ಗಂಗೊಳ್ಳಿ ಇಲ್ಲಿಯ ಅಧ್ಯಾಪಕರಾದ ಶ್ರೀಧರ ಗಾಣಿಗ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿಯಾದ ಅಚ್ಚುತ ಬಿಲ್ಲವ. ದುರ್ಗಾ ಮಿತ್ರ ಮಂಡಳಿ ಕಂಚಿಕಾನ್ ಇದರ ಅಧ್ಯಕ್ಷರಾದ ಸಂದೀಪ್ ದೇವಾಡಿಗ, ಮಹಾಲಿಂಗೇಶ್ವರ ಸಂಸ್ಕೃತ ಪಾಠಶಾಲೆ ಬಹುಳಾಪುರ ಇಲ್ಲಿಯ ಮುಖ್ಯ ಶಿಕ್ಷಕರಾದ ತಿರುಮಲೇಶ್ವರ ಭಟ್ ಇನ್ನಿತರರು ಉಪಸ್ಥಿತರಿದ್ದರು. ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಏಷ್ಯಾನ್ ಫೆಸಿಪಿಕ್ ಯೋಗಾಸನ ಚಾಂಪಿಯನ್ಶಿಪ್ನಲ್ಲಿ ಎರಡು ಬೆಳ್ಳಿ ಪದಕ ಹಾಗೂ ” ಏಷ್ಯಾನ್ ಫೆಸಿಪಿಕ್ ಐಕಾನಿಕ್ ಕೋಚ್ ಅವಾರ್ಡ್” ದಿವ್ಯಾ ಶೆಟ್ಟಿ ಪಡೆದಿದ್ದಾರೆ. ಅವರು ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರೆಹೊಳೆ, ಫ್ರೌಢ ಶಿಕ್ಷಣ ಸರಕಾರಿ ಪ್ರೌಢ ಶಾಲೆ ಕಿರಿಮಂಜೇಶ್ವರ ಹಾಗೂ ಪದವಿ ಪೂರ್ವ ಶಿಕ್ಷಣ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದದಲ್ಲಿ ಪಡೆದಿದ್ದರೆ. ಯೋಗಾಸನ ಕ್ಷೇತ್ರದಲ್ಲಿ ರಾಜ್ಯ- ರಾಷ್ಟ್ರ ಮಟ್ಟದಲ್ಲಿ ಪ್ರತಿಷ್ಠಿತ ಹಲವಾರು ಪದಕ- ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರು ಮೂಲತಃ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಕುದ್ರು ಗೋಡಿನ ಮಂಜು ಶೆಟ್ಟಿ ಹಾಗೂ ಕುಸುಮ ದಂಪತಿಗಳ ಮಗಳು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 9ನೇ ತರಗತಿ ವಿದ್ಯಾರ್ಥಿನಿ ನಂದಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಅವರಿಗೆ ವಿಜ್ಞಾನ ಶಿಕ್ಷಕಿ ಚೈತ್ರಾ ಮಾರ್ಗದರ್ಶನ ನೀಡಿದ್ದು ಆಡಳಿತಮಂಡಳಿ, ಮುಖ್ಯಶಿಕ್ಷಕರು ಬೋಧಕ ಮತ್ತು ಬೋಧಕೇತರ ವೃಂದದವರು ಶುಭ ಕೋರಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪದವಿ, ಸ್ನಾತಕೋತ್ತರ ಶಿಕ್ಷಣ ಪಡೆದ ತಕ್ಷಣ ಉದ್ಯೋಗ ದೊರಕಬೇಕೆಂದು ಹಲವರ ಬೇಡಿಕೆ ಇದ್ದರೂ ಕೂಡ ಅದು ಕಷ್ಟಸಾಧ್ಯ. ಈಗಾಗಲೇ ಪದವಿ ಪಡೆದವರು ಕೂಡ ಇನ್ನೂ ಉದ್ಯೋಗ ದೊರಕದೇ ಹಿಂದಿದ್ದಾರೆ. ಇನ್ನು ಕೆಲವರಿಗೆ ಉದ್ಯೋಗ ಅವಕಾಶಗಳಿದ್ದರೂ ಕೂಡ ಕೌಶಲ್ಯತೆ ಕೊರತೆ, ಭಾಷೆ, ಸ್ಥಳ ಹಾಗೂ ಕೆಲವು ತಪ್ಪು ಮಾಹಿತಿಗಳಿಂದ ಹಿಂದೇಟು ಹಾಕುತ್ತಿದ್ದಾರೆ. ವಿಶ್ವದ ಬೇರೆ ಬೇರೆ ರಾಷ್ಟ್ರಗಳಲ್ಲಿ ಉದ್ಯೋಗ ಅವಕಾಶಗಳು ತುಂಬಾ ಇದೆ. ಸಮೃದ್ಧ ಬೈಂದೂರು ಅಲ್ಲಿ ಹೋಗುವವರಿಗೆ ಸೇತುವೆಯಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಎನ್ಎಸ್ಡಿಸಿ ಹಾಗೂ ಅಜಿನೊರ್ಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಅಗಸ್ಟ್ 31ರಂದು ಬೃಹತ್ ಅಂತರಾಷ್ಟ್ರೀಯ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಜಿಲ್ಲೆ, ರಾಜ್ಯಗಳಲ್ಲಿ ಹಲವಾರು ಉದ್ಯೋಗ ಮೇಳಗಳನ್ನು ವಿವಿಧ ಕಂಪೆನಿಗಳ ಮೂಲಕ ಆಯೋಜಿಸಲಾಗುತ್ತದೆ. ಆದರೆ ಮೇಳದಲ್ಲಿ ಪ್ರಕ್ರೀಯೆಗಳ ಮುಗಿದ ನಂತರ ಸಂPಪರ್ಕದ ಕೊರತೆ ಸೇರಿದಂತೆ ಅನೇಕ ಕಾರಣಗಳಿಂದ ಇದು ಮುಂದುವರಿಯದೇ ಬಾಕಿಯಾಗುತ್ತದೆ. ಬಂದೂರು ಕ್ಷೇತ್ರದ ವಿದ್ಯಾವಂತರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನೇರಪ್ರಸಾರ ಸೇವೆ ನೀಡುತ್ತಿರುವ ಲೈವ್ ಸ್ಟೀಮಿಂಗ್ ಗುಣಮಟ್ಟ, ಏಕರೂಪದ ದರ ನಿಗದಿ ಮೊದಲಾದ ವಿಚಾರಗಳ ಬಗ್ಗೆ ಅಸೋಸಿಯೇಷನ್ ರಚಿಸುವ ಸಂಬಂಧ ಗುರುವಾರ ಮೂಡಬಿದಿರೆ ಕೋಟೆಬಾಗಿಲು ವೀರ ಮಾರುತಿ ದೇವಸ್ಥಾನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ನೇರಪ್ರಸಾರದ ಗುಣಮಟ್ಟ, ಏಕರೂಪದ ದರ ನಿಗದಿ ಹಾಗೂ ಸೌಹಾರ್ದ ವ್ಯವಹಾರ ಮಾಡುವುದು ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆದು ನೇರ ಪ್ಸಾರ ಮಾಡುತ್ತಿರುವ ಎಲ್ಲರನ್ನೂ ಒಂದೇ ವೇದಿಕೆಯಡಿಯಲ್ಲಿ ತಂದು ಸಂಘಟನೆಯನ್ನು ಮಾಡುವ ಉದ್ದೇಶದಿಂದ ಅಸೋಸಿಯೇಷನ್ ರಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಈ ಬಗ್ಗೆ ಮುಂದಿನ ಹಂತದ ಸಭೆಯನ್ನು ಸೆಪ್ಟಂಬರ್ 17 ರಂದು ಕಾರ್ಕಳದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು ಈ ಸಭೆಗೆ ದ.ಕ. ಉಡುಪಿ ಹಾಗೂ ಇತರ ಕಡೆಗಳ ನೇರಪ್ರಸಾರ ಮಾಡುತ್ತಿರುವ ಸಂಸ್ಥೆಗಳನ್ನು ಸೇರಿಸಿಕೊಂಡು ಮುಂದುವರಿಯುವ ಬಗ್ಗೆಯೂ ಮಾತುಕತೆ ನಡೆಸಲಾಯಿತು. ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವಿವಿಧ ಸಂಸ್ಥೆಗಳಿಂದ ಸುಮಾರು 25ಕ್ಕಿಂತಲೂ ಅಧಿಕ ಮಂದಿ…
