ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಲೋಕಸಭಾ ಚುನಾವಣೆಯನ್ನು ನ್ಯಾಯ ಸಮತ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ಅವರು ತಿಳಿಸಿದರು. ಅವರು ಉಡುಪಿಯ ರಜತಾದ್ರಿಯ ಕೆಸ್ವನ್ ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಉಡುಪಿ ಜಿಲ್ಲಾ ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವ ಸಿದ್ಧತೆ ಕುರಿತ ಅಂತರ್ ಜಿಲ್ಲಾ ಸಮನ್ವಯ ಸಮಿತಿಯ ಸಭೆಯಲ್ಲಿ ಮಾತನಾಡುತ್ತಿದ್ದರು. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನಗರ ವ್ಯಾಪ್ತಿಯಲ್ಲಿ 26 ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 220 ಓಟ್ಟು246 ಮತಗಟ್ಟೆಗಳಿದ್ದು ,11 6310 ಪುರುಷರು,1 21413 ಮಹಿಳೆಯರು 3 ತೃತೀಯ ಲಿಂಗದವರು ಸೇರಿದಂತೆ ಒಟ್ಟು 2,37,726 ಮತದಾರರು ಇದ್ದಾರೆ ಎಂದರು. ಜಿಲ್ಲೆಯಲ್ಲಿ 246 ಮತದಾನ ಕೇಂದ್ರಗಳಿದ್ದು ಅವುಗಳಲ್ಲಿ 42 ಸೂಕ್ಷ್ಮ 12 ಅತಿಸೂಕ್ಷ್ಮ 190 ಸಾಮಾನ್ಯ ಮತದಾನ ಕೇಂದ್ರಗಳಿವೆ ಎಂದ ಅವರು ಎಂ.ಸಿ.ಸಿ ಉಲ್ಲಂಘನೆಯ ದೂರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಮರ್ಪಕ ದಾಖಲೆಗಳಿಲ್ಲದೆ ರೂ.50,000/- ಕ್ಕೂ ಮೀರಿದ ನಗದು ಹಣವನ್ನು ಕೊಂಡೊಯ್ಯುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ತಿಳಿಸಿದ್ದಾರೆ. ಒಂದು ವೇಳೆ ದಾಖಲೆ ರಹಿತ ನಗದು ದೊರೆತಲ್ಲಿ ಸದ್ರಿ ನಗದನ್ನು ಮುಟ್ಟುಗೋಲು ಹಾಕಲಾಗುವುದು, ಹಾಗೂ ಸಂಬಂಧಿಸಿದವರ ಮೇಲೆ ಪ್ರಕರಣ ದಾಖಲಿಸಲಾಗುವುದು. ಆದ್ದರಿಂದ ಸಾಧ್ಯವಾದಷ್ಟು ಮಟ್ಟಿಗೆ ನಗದು ಹಣ ಸಾಗಾಣಿಕೆ ಬದಲಿಗೆ ಖಾತೆ ವರ್ಗಾವಣೆ, UPI ಹಾಗೂ ಇತರೆ ಮಾಧ್ಯಮದ ಮೂಲಕ ಹಣವನ್ನು ವರ್ಗಾಯಿಸಲು ಕ್ರಮವಹಿಸುವುದು. ಸಂಶಯಾಸ್ಪದ ವ್ಯವಹಾರಗಳ ಮೇಲೆ ನಿಗಾ ಇಡಲು ಬ್ಯಾಂಕ್ ಮತ್ತು ಆದಾಯ ತೆರಿಗೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಚುನಾವಣಾ ಕೋಶ ಇರುತ್ತದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯ ಪೂರ್ಣ ಪ್ರಮಾಣದ ಅನುಷ್ಟಾನಕ್ಕಾಗಿ ಒಟ್ಟು 15 ಚೆಕ್ಪೋಸ್ಟ್ಗಳನ್ನು ಗುರುತಿಸಿದ್ದು, ಸದರಿ ಚೆಕ್ಪೋಸ್ಟ್ಗಳಲ್ಲಿ 24×7 ಮಾದರಿಯಲ್ಲಿ ಕಾರ್ಯ ನಿರ್ವಹಿಸಲು ಒಟ್ಟು 52 SST ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ. ಸದ್ರಿ ಚೆಕ್ಪೋಸ್ಟ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ…
ಕೇಂದ್ರದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಿದ್ದೇವೆ: ಸಂಸದ ಬಿ.ವೈ. ರಾಘವೇಂದ್ರ
ಚುನಾವಣಾ ಅಖಾಡದಲ್ಲಿ ನಟ ಶಿವರಾಜ್ಕುಮಾರ್ | ಪತ್ನಿ ಗೀತಾ ಪರ ಬೈಂದೂರಿನಲ್ಲಿ ಪ್ರಚಾರ ಶುರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಯಾವತ್ತೂ ಜಾತಿ ಧರ್ಮಗಳ ಆಧಾರದಲ್ಲಿ ಚುನಾವಣೆ ಎದುರಿಸಿಲ್ಲ. ಬದಲಾಗಿ ಜನರ ಭಾವನೆಗಳನ್ನು ಅರಿತುಕೊಂಡು ಅವರ ಹೊಟ್ಟೆ ಹಸಿವನ್ನು ನೀಗಿಸುವಲ್ಲಿ ಪ್ರಯತ್ನಿಸುತ್ತದೆ. ಹಾಗಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಶೇ.91ರಷ್ಟು ಜನರನ್ನು ಗ್ಯಾರೆಂಟಿಗಳ ಮೂಲಕ ತಲುಪಿರುವ ಹೆಮ್ಮೆ ಇದೆ. ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದ ಕಾಂಗ್ರೆಸ್ ಸರಕಾರದ ಸಾಧನೆಗಳ ಮೂಲಕವೇ ಮತ ಯಾಚಿಸುತ್ತೇವೆ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕುಂದಾಪುರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿ, ರಾಜಕಾರಣಿಗಳು ಜಾತಿ ಧರ್ಮಗಳ ಆಧಾರದಲ್ಲಿ ಹಾಗೂ ಭಾವನಾತ್ಮಕವಾಗಿ ಚುನಾವಣೆ ಎದುರಿಸುತ್ತಾರೆ. ನಾವು ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರೆಂಟಿಗಳನ್ನೂ ಪೂರೈಸುವ ಮೂಲಕ ರಾಜಕಾರಣದಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಂಡಿದೆ ಎಂದರು. ಶಿವಮೊಗ್ಗ ಸಂಸದರ ಸಾಧನೆ ಶೂನ್ಯ:ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಅವರ ಸಾಧನೆಗಳು ಬ್ಯಾನರುಗಳಿಗಷ್ಟೇ ಸೀಮಿತವಾಗಿದೆ. ಅದನ್ನು ಮೀರಿ ಏನೂ ಸಾಧನೆ ಮಾಡಿಲ್ಲ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಮುಖ್ಯವಾಗಿ ಉಪಕಾರ ಮಾಡುವ ಸಮಾಜವೇ ವಿನಹ: ಅಪಕಾರ ಮಾಡುವ ಸಮಾಜವಲ್ಲ. ಜನರ ಒಳಿತನ್ನೇ ಬಯಸುತ್ತದೆ ವಿನಹ: ಕೆಟ್ಟ ಚಿಂತನೆ ಮಾಡುದಿಲ್ಲ ಎಂಬುದನ್ನು ನಾರಾಯಣ ಮಲ್ಯರು ಮೂರ್ತಿ ಪ್ರತಿಷ್ಠಾಪನೆ ಮೂಲಕ ತೋರಿಸಿಕೊಟ್ಟಿದ್ದಾರೆ. ಪಂಚ ನದಿಗಳ ಸಂಗಮವಾಗುವ ಪವಿತ್ರವಾದ ಗಂಗೊಳ್ಳಿಯು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಪರಂಪರೆಗೆ ಎರಡು ಯತಿಗಳನ್ನು ನೀಡಿದ ಶ್ರೇಷ್ಠ ಕ್ಷೇತ್ರವಾಗಿದೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವದ ನಿಮಿತ್ತ ಮೊಕ್ಕಾಂಗೆ ದೇವಸ್ಥಾನಕ್ಕೆ ಆಗಮಿಸಿದ ಶ್ರೀಗಳು ಆಶೀರ್ವಚನ ನೀಡಿ ಮಾತನಾಡಿದರು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಪ್ರಾರಂಭಗೊಂಡು ಮುಂದಿನ ವರ್ಷ 550 ಪೂರ್ಣಗೊಳ್ಳುತ್ತಿದೆ. ಇದರ ಉದ್ದೇಶಕ್ಕಾಗಿ ಮತ್ತು ಮಠದ ಮೂಲ ಶ್ರೀ ರಾಮ ದೇವರ ಪ್ರೀತ್ಯರ್ಥ 550 ದಿನಗಳ 550 ಕೋಟಿ ರಾಮತಾರಕ ಮಂತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಿನದಿಂದ ದಿನಕ್ಕೆ ದೈಹಿಕ, ಮಾನಸಿಕ, ಸಾಮಾಜಿಕವಾಗಿ ದುರ್ಬಲರಾಗುತ್ತಿರುವ ನಾವು ನಮ್ಮ ಸಂಸ್ಕೃತಿ, ಸಂಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅದು ನಮಗೆ ಉತ್ತಮವಾದ ಕಾರ್ಯ ಸಾಮರ್ಥ್ಯ, ಕರ್ತವ್ಯ ನಿಷ್ಠೆ ಹಾಗೂ ಸೇವಾ ಮನೋಭಾವನೆಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ಹೊಸದೊಂದು ವರ್ಷವನ್ನು ನಿರ್ಮಾಣ ಮಾಡಲು ನೆರವಾಗುವುದು ಎಂದು ಯಳಜಿತ್ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಹೇಳಿದರು. ಉಪ್ಪುಂದ ದೇವಕಿ ಸಭಾಂಗಣದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಸ್ವರಚಿತ ’ಸಂಸ್ಕಾರಗಳ ದಿವ್ಯತೆ, ಜೀವನದ ಭವ್ಯತೆ ಕೃತಿಯನ್ನು ಲೋಕಾರ್ಪಣೆಗೊಳಿಸಿ ಉಪನ್ಯಾಸ ನೀಡಿದರು. ಸನಾತನ ಸಂಸ್ಕೃತಿಯು ಮಾನವನ ಸಾಂಸ್ಕೃತಿಕ ಆಧ್ಯಾತ್ಮಿಕ ವ್ಯವಹಾರಿಕ ಉನ್ನತಿಗೆ ಸಹಾಯಕಾರಿಯಾದ ನಮ್ಮದೇ ಜ್ಞಾನ ಸಂಪತ್ತು. ಇದು ಸರ್ವಜನ ಹಿತವನ್ನು ಬಯಸುವ ವಿಪುಲವಾದ ಜ್ಞಾನರಾಶಿ. ಪ್ರಸ್ತುತ ಇಂದಿನ ಶಿಕ್ಷಣದ ಮೂಲಕ ಅಥವಾ ಮಾಧ್ಯಮಗಳ ಮೂಲಕ ಮಕ್ಕಳಿಗೆ ಅವಶ್ಯಕತೆ ಪ್ರಮಾಣದಲ್ಲಿ ತಲುಪುತ್ತಿಲ್ಲ ಎಂಬುದು ಸರ್ವವಿಧಿತ. ಆದ್ದರಿಂದ ನಾವು ಇಂತಹ ಅನರ್ಘ್ಯ ಸಂಸ್ಕಾರಗಳನ್ನು ಮುಂದಿನ ಪೀಳಿಗೆಗೆ ಕೊಡುವ ಪ್ರಾಯೋಗಿಕ ಮಾರ್ಗವನ್ನು ಕಂಡುಹಿಡಿಯದಿದ್ದರೆ ಇದು ಕ್ರಮೇಣ…
ಯಡಿಯೂರಪ್ಪನವರ ಲಂಚದ ಹಣದಲ್ಲಿ ಗೆದ್ದು ಬಂದ ರಾಘವೇಂದ್ರ ಅವರ ಕೊಡುಗೆ ಏನಿದೆ? ಸಚಿವ ಮಧು ಬಂಗಾರಪ್ಪ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಲೋಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ಸಭೆ ಸಮಾರಂಭ ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ನಡೆಸಲು ಸುವಿಧಾ ತಂತ್ರಾಂಶದ ಮೂಲಕ ಅನುಮತಿ ಪಡೆಯಬೇಕೆಂದ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ .ಕೆ ರವರು ತಿಳಿಸಿದರು . ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಹಾಗೂ ಪ್ರಿಂಟರ್ ಮತ್ತು ಪಬ್ಲಿಷರ್ಸ್ ಗಳ ಮಾಲೀಕರರೂಂದಿಗೆ ಸಭೆ ನಡೆಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಸಾರ್ವಜನಿಕ ಸಭೆ, ಸಮಾರಂಭ, ರ್ಯಾಲಿ ನಡೆಸಲು, ಸಂಚಾರಿ ವಾಹನ, ಧ್ವನಿವರ್ಧಕ, ಹೆಲಿಕಾಪ್ಟರ್ ಹಾಗೂ ಹೆಲಿಪ್ಯಾಡ್ ಅನುಮತಿ ಸೇರಿದಂತೆ ಇನ್ನಿತರೆ ಕಾರ್ಯ ಚಟುವಟಿಕೆಗಳಿಗೆ ಸುವಿಧಾ ತಂತ್ರಾಂಶ ಮೂಲಕವೇ ಅನುಮತಿ ಪಡೆಯಬೇಕೆಂದರು. ಲೋಕಸಭೆ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿಯಂತೆ ಅಧಿಸೂಚನೆ ಹೊರಡಿಸಲಾಗುವುದು. ಲೋಕಸಭೆ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ಘೋಷಿಸಿದ್ದು , ಆಯೋಗ ಜಾರಿಗೊಳಿಸಿರುವ ನೀತಿ ಸಂಹಿತೆಗಳನ್ನು ರಾಜಕೀಯ ಪಕ್ಷಗಳು ತಪ್ಪದೇ ಪಾಲಿಸ ಬೇಕೆಂದರು. ಮಾದರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಕೆಡಿಪಿ ಸದಸ್ಯ, ಹೇರಿಕುದ್ರುವಿನ ಗಂಗಾಧರ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅತ್ಯಂತ ಆರೋಗ್ಯಪೂರ್ಣರಾಗಿದ್ದ ಅವರು ಮಾರ್ಚ್ 13ರಂದು ಬೆಳಿಗ್ಗೆ 6 ಗಂಟೆಗೆ ಹಠಾತ್ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದರು. ತತ್ ಕ್ಷಣವೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಲಾಗಿತ್ತು. ಆದರೆ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿರುವುದು ಸ್ಪಷ್ಟಗೊಂಡ ಹಿನ್ನಲೆಯಲ್ಲಿ ಆ ನಂತರದಲ್ಲಿ ಉಡುಪಿಯ ದೊಡ್ಡ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಕಾಂಗ್ರೆಸ್ ಪಕ್ಷದ ನಾಯಕರುಗಳಾದ ದಿವಂಗತ ಆಸ್ಕರ್ ಫರ್ನಾಂಡೀಸ್, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ ಹೆಗ್ಡೆ ಮುಂತಾದ ನಾಯಕರುಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ಅವರು ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿಯವರ ಅನುಯಾಯಿಯಾಗಿದ್ದರು. ಗ್ರಾಮಪಂಚಾಯಿತಿ ಮಟ್ಟದಲ್ಲಿ ಸತತವಾಗಿ ಕಾಂಗ್ರೆಸ್ ಪಕ್ಷವನ್ನು ಅತ್ಯಂತ ಬಲಿಷ್ಠವಾಗಿ ಕಟ್ಟಿದ್ದ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಮಟ್ಟದಲ್ಲಿ ಉತ್ತಮವಾದ ಗೌರವವನ್ನು ಪಡೆದಿದ್ದಾರೆ. ಆ ನಿಟ್ಟಿನಲ್ಲಿ…
