ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಅಮೂಲ್ಯಾ ಸಿ. ಶೆಟ್ಟಿ 95.11, ಅನುಷ್ ನಾಯಕ್ 94.23, ಚೈತ್ರಾ 93.31, ಕೀರ್ತನಾ 91.56, ಅಬ್ದುಸ್ ಸಲಾಂ 91.39, ಭೂಮಿಕಾ 91.05 ಪರ್ಸೆಂಟೈಲ್ ಪಡೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಕಾಡೆಮಿ ಆಫ್ ಸರ್ಟಿಫೈಡ್ ಹಝಾರ್ಡಸ್ ಮೆಟೀರಿಯಲ್ಸ್ ಮ್ಯಾನೇಜರ್ (ಎಸಿಎಚ್ಎಂಎಂ)-ಇಂಡಿಯಾ ಚಾಪ್ಟರ್, ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಹಾಗೂ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಜಂಟಿ ಸಹಯೋಗದಲ್ಲಿ ನಡೆಯಲಿರುವ 3 ದಿನಗಳ ಕಾರ್ಯಗಾರವನ್ನು ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಉದ್ಘಾಟಿಸಲಾಯಿತು. ಭಾರತ ಹಾಗೂ ಅಮೆರಿಕಾ ದೇಶಗಳ ಸಂಪನ್ಮೂಲ ವ್ಯಕ್ತಿಗಳನ್ನು ಒಳಗೊಂಡ ಈ ಕಾರ್ಯಗಾರವನ್ನು ಎಸಿಎಚ್ಎಂಎಂ-ಇಂಡಿಯಾ ಚಾಪ್ಟರ್ ಸಂಸ್ಥೆಯ ಸ್ಥಾಪಕ ಹಾಗೂ ಅಧ್ಯಕ್ಷ ಡಾ. ರಾಂಪುರ್ ವಿಶ್ವನಾಥ್ ಉದ್ಘಾಟಿಸಿ ಅಪಾಯಕಾರಿ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ವಹಿಸುವುದು ಮಾನವ ಹಾಗೂ ಪರಿಸರದ ಸುಸ್ಥಿರತೆಗೆ ಬಹಳ ಅಗತ್ಯ. ಅಪಾಯಕಾರಿ ವಸ್ತುಗಳನ್ನು ನಿರ್ವಹಿಸುವುದು ಪ್ರತಿಯೊಬ್ಬರ ಜವಬ್ದಾರಿ. ನಾವು ಯಾವುದೇ ಜ್ಞಾನವನ್ನು ಇತರರೊಂದಿಗೆ ಹಂಚಿಕೊಂಡಾಗ ಆ ಜ್ಞಾನವು ಕೆಲವರಿಗಾದರು ಉಪಯುಕ್ತವಾಗುತ್ತದೆ. ಪ್ರತಿಯೊಬ್ಬರು ತಮ್ಮ ಅನುಭವ, ಪರಿಣತಿ ಹಾಗೂ ವಿಷಯದ ತಿಳಿವಳಿಕೆಯನ್ನು ಹಂಚಿಕೊಳ್ಳಲು ಉತ್ಸುಕರಾಗಿರಬೇಕು. ಎಸಿಎಚ್ಎಂಎಂ ಸಂಸ್ಥೆಯ ಮೂಲಕ ಅಪಾಯಕಾರಿ ವಸ್ತುಗಳನ್ನು ನಿರ್ವಹಣೆಗೆ ಸಂಬಂಧಿಸಿದ 30 ಮಾದರಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇವುಗಳಲ್ಲಿ 18 ನಿರ್ವಹಣಾ ಮಾದರಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೇವೆ ಮತ್ತು ಸ್ವಾತಂತ್ರ್ಯ ಈ ಎರಡು ಪರಿಕಲ್ಪನೆಗಳ ನೈಜ ಅರ್ಥವನ್ನು ಸ್ವಯಂಸೇವಕರು ಅರಿತುಕೊಳ್ಳಬೇಕು. ಸಾಹಿತ್ಯದ ಜೀವಾಳವೇ ಜೀವನ. ಬದುಕಿನ ಉದ್ದೇಶವನ್ನು ಸಾಹಿತ್ಯ ಕಟ್ಟಿ ಕೊಡುತ್ತದೆ. ವಿದ್ಯಾರ್ಥಿಗಳು ಬದುಕಿನಲ್ಲಿ ಸಮರ್ಪಣ ಮನೋಭಾವ, ಶ್ರಮದ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಬೇಕು. ನಿರಂತರವಾದ ಸಾಹಿತ್ಯ ಓದಿನಲ್ಲಿ ತೊಡಗಿಕೊಳ್ಳುವ ಮೂಲಕ, ಮೌಲ್ಯಯುತ ಜೀವನವನ್ನು ಕಟ್ಟಿಕೊಳ್ಳಿ ಎಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರೊಫೆಸರ್ ಡಾ| ರವಿರಾಜ್ ಶೆಟ್ಟಿ ಹೇಳಿದರು. ಅವರು ವಡ್ಡರ್ಸೆಯಲ್ಲಿ ನಡೆಯುತ್ತಿರುವ ಕುಂದಾಪುರದ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಿ ಸಾಹಿತ್ಯ ಮತ್ತು ಜೀವನ ಮೌಲ್ಯ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ನಿವೃತ್ತ ವಿಜಯ ಬ್ಯಾಂಕ್ ಅಧಿಕಾರಿ ಪ್ರಶಾಂತ್ ಶೆಟ್ಟಿ ವಡ್ಡರ್ಸೆ ಅಧ್ಯಕ್ಷತೆ ವಹಿಸಿದ್ದರು, ಕಾಲೇಜಿನ ಪ್ರಾಂಶುಪಾಲರಾದ ಕೊತ್ತಾಡಿ ಉಮೇಶ್ ಶೆಟ್ಟಿ ಶುಭ ಹಾರೈಸಿದರು. ಈ ಸಂದರ್ಭ ಮಾಜಿ ಗ್ರಾಮ ಪಂಚಾಯತ್ ಸದಸ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಿರ್ಮಾಣ ಹಂತದ ಮನೆಯ ಸ್ಲಾಬ್ನಿಂದ ಕೆಳಗಡೆ ಬಿದ್ದು ಮನೆಯ ಯಜಮಾನ ಮೃತಪಟ್ಟ ಘಟನೆ ಇಲ್ಲಿನ ಬೇಳೂರು ದೇವಸ್ಥಾನಬೆಟ್ಟು, ಕಲ್ಮಂಡೆಯಲ್ಲಿ ಸೋಮವಾರ ಸಂಭವಿಸಿದೆ. ಸ್ಥಳೀಯ ನಿವಾಸಿ ಗೋಪಾಲ ಆಚಾರ್ಯ (62) ಅವರು ಮೃತಪಟ್ಟ ವ್ಯಕ್ತಿ. ಅವರು ಬೇಳೂರಿನಲ್ಲಿ ಹೊಸ ಮನೆಯನ್ನು ನಿರ್ಮಿಣ ಮಾಡುತ್ತಿದ್ದು, ಅದನ್ನು ನೋಡಲು ಮಕ್ಕಳ ಜೊತೆ ಹೋಗಿದ್ದರು. ಈ ವೇಳೆ ಗೋಪಾಲ ಮನೆಯ ಮೊದಲ ಅಂತಸ್ತಿಗೆ ಹೋಗಿ ನೋಡುತ್ತಿರುವಾಗ ಆಯತಪ್ಪಿ ಸ್ಲಾಬ್ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಗೋಪಾಲ ಆಚಾರ್ಯ ಅವರು ಅದಾಗಲೇ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ವಾಹನ ದಟ್ಟಣೆಯು ದಿನೇ ದಿನೇ ಹೆಚ್ಚಿ, ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಸುಗಮ ಸಂಚಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳು ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಇರುವುದು, ಅನಧಿಕೃತವಾಗಿ ರಚನೆಗೊಂಡಿರುವ ಗೂಡಂಗಡಿಗಳು, ತಳ್ಳುವ ಗಾಡಿಗಳು ರಸ್ತೆಯಲ್ಲಿಯೇ ವ್ಯಾಪಾರ ಕೈಗೊಳ್ಳುವುದು ಸೇರಿದಂತೆ ಮತ್ತಿತರರ ಕಾರಣಗಳಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. ಉಡುಪಿ ನಗರದ ವ್ಯಾಪ್ತಿಯಲ್ಲಿ 58 ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡಗಳ ಮುಂಭಾಗ ರಸ್ತೆಯ ಮೇಲೆ ಅಂಗಡಿ ಮಾಲೀಕರು ಹಾಗೂ ಗ್ರಾಹಕರು ಪಾರ್ಕಿಂಗ್ ಮಾಡುವ ಹಿನ್ನೆಲೆ, ಸಾರ್ವಜನಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್. ಎಸ್. 99.46, ಸಾನಿಕಾ ಕೆ. ಎನ್ 99. 20, ಎಂ. ಮಂಜುನಾಥ್ 99.01, ಮೋಹಿತ್ ಎಂ. 99.16, ಎಚ್. ಎ. ರಾಜೇಶ್ 99.10, ಪರ್ಸಂಟೈಲ್ ಗಳಿಸಿರುತ್ತಾರೆ. ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಜೆ.ಇ.ಇ (ಮೈನ್) ಪರೀಕ್ಷೆಯ ಸಂಯೋಜಕರಾದ ನಂದೀಶ್ ಎಚ್. ಬಿ, ಆದಿತ್ಯ ವಟಿ ಕೆ, ಮತ್ತು ವಿನಯ ಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಂತರ್ಜಾಲ ಬಳಕೆಯ ಸಮಯದಲ್ಲಿ ಜನ ಸಾಮಾನ್ಯರು ಜವಾಬ್ದಾರಿಯಿಂದ ಎಚ್ಚರಿಸಿ ವ್ಯವಹರಿಸಬೇಕು. ಒಂದೊಮ್ಮೆ ನಿರ್ಲಕ್ಷ್ಯ ವಹಿಸಿದಲ್ಲಿ ವಂಚನೆಗೆ ಒಳಗಾಗುವ ಸಾಧ್ಯತೆಗಳು ಇರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣ ದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನಸಾಮಾನ್ಯರು ಆಧುನಿಕ ತಂತ್ರಜ್ಞಾನಗಳ ಮೊರೆ ಹೊಗಿ ಕ್ಷಣಾರ್ಧದಲ್ಲಿ ತಮ್ಮ ದೈನಂದಿನ ಕಾರ್ಯ ಚಟುವಟಿಕೆಗಳಲ್ಲಿ ಆರ್ಥಿಕ ವ್ಯವಹಾರಗಳನ್ನು ಡಿಜಿಟಲ್ ಎಲೆಕ್ಟ್ರಾನಿಕ್ ಬಳಕೆಯನ್ನು ಹೆಚ್ಚು ಹೆಚ್ಚು ಮಾಡುತ್ತಿದ್ದಾರೆ. ಇಂತಹ ವ್ಯವಹಾರಗಳನ್ನು ಮಾಡುವಾಗ ಜವಾಬ್ದಾರಿಯಿಂದ ಎಚ್ಚರಿಕೆ ವಹಿಸಿ ಮಾಡಬೇಕು. ಸ್ವಲ್ಪ ಎಚ್ಚರ ತಪ್ಪಿದರೆ ವಂಚನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಪ್ರತಿದಿನ ಹೊಸ ಹೊಸ ರೂಪದಲ್ಲಿ ಸೈಬರ್ ಅಪರಾಧ ಪ್ರಕರಣಗಳೂ ಸಹ ನಡೆಯುತ್ತಿರುವುದು ಕೇಳಿ ಬರುತ್ತಿದೆ ಎಂದರು. ಜನಸಾಮಾನ್ಯರು ಅಲ್ಪ ಅವಧಿಯಲ್ಲಿಯೇ ಹೆಚ್ಚಿನ ಹಣವನ್ನು ದ್ವಿಗುಣಗೊಳಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳು ಚಲನಚಿತ್ರ ನಟ ವಿಶಾಲ್ ಅವರು ಭೇಟಿ ನೀಡಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬು ಹೆಗ್ಡೆ ಹಾಗೂ ಸದಸ್ಯರಾದ ರಘುರಾಮ್ ದೇವಾಡಿಗ ಶ್ರೀ ದೇವಿಯ ಪ್ರಸಾದ ನೀಡಿ ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಪ್ರಸಿದ್ಧ ಹೋಟೆಲ್ ‘ಶ್ರೇಯಸ್ ಇನ್’ ವತಿಯಿಂದ ಫೆ.13ರಿಂದ ಫೆ.25ರ ತನಕ ‘ಸೀಪುಡ್ ಫೆಸ್ಟಿವಲ್’ ಆಯೋಜಿಸಲಾಗಿದೆ. ಆಹಾರೋದ್ಯಮ ಕ್ಷೇತ್ರದಲ್ಲಿ ಉತ್ಕೃಷ್ಟತೆ ಕಾಯ್ದುಕೊಂಡಿರುವ ಕುಂದಾಪುರದ ‘ಶ್ರೇಯಸ್ ಇನ್’ ಮೊದಲ ಭಾರಿಗೆ ‘ಸೀಪುಡ್ ಫೆಸ್ಟಿವಲ್’ ಆಯೋಜಿಸುತ್ತಿದೆ. ಮೀನು, ಸಿಗಡಿ, ಏಡಿ, ಸೇರಿದಂತೆ ಕರಾವಳಿಯ ವಿವಿಧ ಆಹಾರ ಖಾದ್ಯಗಳನ್ನು ಗ್ರಾಹಕರಿಗೆ ವಿಶೇಷವಾಗಿ ನೀಡಲಾಗುತ್ತದೆ. ಮಧ್ಯಾಹ್ನ 12ರಿಂದ 3:30ರ ತನಕ ಹಾಗೂ ಸಂಜೆ 6:30ರಿಂದ ರಾತ್ರಿ 11ರ ತನಕ ಸೀಪುಡ್ ಫೆಸ್ಟಿವಲ್ ಜರುಗಲಿದ್ದು, ಖಾದ್ಯ ಪ್ರಿಯರು ಹೋಟೆಲಿಗೆ ಭೇಟಿ ನೀಡಿ ತಮ್ಮಿಷ್ಟದ ಆಹಾರವನ್ನು ಸವಿಯಬಹುದಾಗಿದೆ. ಸೀಪುಡ್ ಫೆಸ್ಟಿವಲ್’ನಲ್ಲಿ ನೀವು ಭಾಗಿಯಾಗಿವಿಳಾಸ:ಶ್ರೇಯಸ್ ಇನ್ ಎನ್.ಹೆಚ್ – 66, ಚೌಟ ಟವರ್ಸ್, ಸಂಗಮ್ ಜಂಕ್ಷನ್, ಕುಂದಾಪುರ7666619994, 7666019995
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟೀಮ್ ಕುಂದಾಪುರದ ಪ್ರಸ್ತುತಿಯಲ್ಲಿ ಫೆಬ್ರವರಿ 12ರಿಂದ ಫೆಬ್ರವರಿ 16ರ ತನಕ ಕೋಡಿಯಲ್ಲಿ ಕುಂದ ಉತ್ಸವ-2025 ಐದು ದಿನಗಳ ಅದ್ದೂರಿಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಉದ್ಯಮಿ, ಕುಂದ ಉತ್ಸವದ ಸಾರಥ್ಯ ವಹಿಸಿರುವ ದಿನೇಶ ಹೆಗ್ಡೆ ಮೊಳಹಳ್ಳಿ ಹೇಳಿದರು. ಅವರು ಕುಂದಾಪುರ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೆ.12 ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಯೋಗ, ಬೀಚ್ ಸ್ವಚ್ಛತಾ ಕಾರ್ಯಕ್ರಮ, ಸಂಜೆ 7 ಗಂಟೆಯಿಂದ ಸಾಂಸ್ಕಂತಿಕ ಕಾರ್ಯಕ್ರಮ, 8 ಗಂಟೆಗೆ ಕುಂದ ಉತ್ಸವ ಉದ್ಘಾಟನೆ ನಡೆಯಲಿದೆ. ಬಳಿಕ ಶಿವಾನಿ ಮ್ಯೂಸಿಕಲ್ಸ್ ಇವರ ಸಂಯೋಜನೆಯಲ್ಲಿ ಝಿ ಕನ್ನಡ ಸರಿಗಮಪ ಖ್ಯಾತಿಯ ಕಲಾವಿದರಿಂದ ಸಂಗೀತ ಸಂಜೆ ನಡೆಯಲಿದೆ. ಫೆ.13ರಂದು ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ, ರಾಜ್ಯ ಮಟ್ಟದ ಡಾನ್ಸ್ ಸ್ಪರ್ಧೆ ನಡೆಯಲಿದೆ. ಫೆ.14ರಂದು ಸಂಜೆ 7 ಗಂಟೆಗೆ ಝಿ ಕನ್ನಡ ಡಿ.ಕೆ.ಡಿ ಖ್ಯಾತಿಯ ಶಿಪಾಲಿ ಪೂಜಾರಿ ಹಾಗೂ ಶಿವಾನಿ ಪೂಜಾರಿ ಇವರ ಭಾಗವಹಿಸುವಿಕೆಯಲ್ಲಿ ಸುಧೀರ್ ಉಳ್ಳಾಲ ನೇತೃತ್ವದ ರಾಜ್ಯದ ಹೆಸರಾಂತ…
