ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.02: ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿಯಲ್ಲಿಯೂ ಮುಂದಿನ 2 ದಿನಗಳ ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.03ರಂದು ಭಾರಿ ಮಳೆ ಡಿ.04ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸದಸ್ಯರು ಕೇಂದ್ರಸ್ಥಾನದಲ್ಲಿದ್ದು ಸೂಕ್ತ ಮುನ್ನಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಸಾರ್ವಜನಿಕರು ಹಾಗೂ ಮೀನುಗಾರರ ನದಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ವಿದ್ಯುತ್ ಕಂಬ, ತಗ್ಗು ಪ್ರದೇಶ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಿಂದ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿಗಲೂ ಸೂಚಿಸಿದ್ದಾರೆ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವು ನೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಜಗನ್ಮಾತೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ಆಶೀರ್ವಾದದೊಂದಿಗೆ ದಾನಿಗಳು ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಕ್ಷೇತ್ರದ 100 ಅಶಕ್ತರಿಗೆ ‘ದೇವಿ ನೆಲೆ-ನಮ್ಮ ಮನೆ’ ಎಂಬ ಹೆಸರಿನಲ್ಲಿ ಸೂರು ನಿರ್ಮಿಸುವ ಯೋಜನೆಗೆ ಡಿ.1ರಂದು ಚಾಲನೆ ದೊರೆಯಿತು. ಕೊಡ್ಲಾಡಿ ಗ್ರಾಮದ ಮಾರ್ಡಿ ಶಾಲಾ ಮೈದಾನದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಗುರುಪುರದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿ, ಹಿಂದುಗಳು ಒಂದಾಗುವ ಜತೆಗೆ ಅಶಕ್ತ ಎಲ್ಲ ರೀತಿಯಲ್ಲೂ ನೆರವಾಗಲು ಇಡೀ ಸಮಾಜವೇ ಮುಂದೆ ಬರಬೇಕು. ರಾಷ್ಟ್ರೀಯ ಸ್ವಯಂಸೇವಕ ಸಂಘ 100 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಮುಂದಾಳತ್ವದಲ್ಲಿ ಕಾರ್ಯಕರ್ತರು, ದಾನಿಗಳು, ಹಿತೈಷಿಗಳು ಅರ್ಥಪೂರ್ಣ ಸಂಕಲ್ಪ ಮಾಡಿದ್ದಾರೆ. ರಾಮ ರಾಜ್ಯದ ಪರಿಕಲ್ಪನೆಯ ಭಾಗವಾಗಿ ಪ್ರತಿಯೊಬ್ಬರು ಸ್ವಂತ ಮನೆ ಹೊಂದಬೇಕು. ಈ ನಿಟ್ಟಿನಲ್ಲಿ ದೇವಿ ನೆಲೆ-ನಮ್ಮ ಮನೆ ಸಂಕಲ್ಪ ಶೀಘ್ರ ಸಾಕಾರಿಯಾಗಲಿ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ, ಇದರ 37 ನೇ ‘ಸ್ವಚ್ಛ ಕಡಲತೀರ – ಹಸಿರು ಕೋಡಿ’ ಅಭಿಯಾನವು ಡಿ.1ರಂದು ಯಶಸ್ವಿಯಾಗಿ ನಡೆಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸೈಯದ್ ಮೊಹಮ್ಮದ್ ಬ್ಯಾರಿ ಇವರು ಅಭಿಯಾನವನ್ನು ಉದ್ದೇಶಿಸಿ “ಭಗವಂತನಿಗೆ ಪ್ರೀತಿಪೂರ್ವಕವಾದ ಈ ಕಾಯಕವು ನಿರಂತರವಾಗಿ ಸಾಗಬೇಕಾದದ್ದು ಮಾತ್ರವಲ್ಲದೆ, ಮಾಡುವ ಕೆಲಸದಲ್ಲೂ ಪರಿವರ್ತನೆಯಾಗಬೇಕು. ಪ್ರಸಾದ ನೀಡುವ ಅರ್ಚಕನಿಗಿಂತ, ಪ್ರಸಾದ ಸ್ವೀಕರಿಸುವ ಭಕ್ತನಿಗೆ ಹೇಗೆ ಪ್ರಸಾಧದ ಕುರಿತು ಹೆಚ್ಚು ಭಕ್ತಿಗೌರವವಿರುತ್ತದೋ ಹಾಗೆಯೇ ನಮ್ಮಲ್ಲೂ ಈ ಪರಿಸರದ ಕುರಿತು ಮಾಡುವ ಸೇವೆಯಲ್ಲಿ ಭಕ್ತಿಗೌರವ ಇರಬೇಕು. ಪ್ರತಿ ತಿಂಗಳು ಈ ಕಾಯಕವನ್ನು ಹಮ್ಮಿಕೊಳ್ಳುವುದರೊಂದಿಗೆ ಪರಿಸರ ಸ್ವಚ್ಛತೆಯ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಾಧ್ಯ ಹಾಗಾಗಿ ನಾವು ಮಾಡುವ ಈ ಅಭಿಯಾನ ಮುಂದಿನ ದಿನಗಳಲ್ಲಿ ವಿಭಿನ್ನವಾಗಿ ನಡೆಯಬೇಕು” ಎಂದು ನುಡಿದರು. ಪ್ರತಿ ತಿಂಗಳ ಕೊನೆಯ ಭಾನುವಾರದಂದು ನಡೆಯುತ್ತಿದ್ದ ಈ ಅಭಿಯಾನವನ್ನು ಈ ತಿಂಗಳಿಂದ ಮೊದಲ ಭಾನುವಾರದಂದು ಮಾಡಲು ಸಂಚಾಲಕರು ತಿಳಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾನವೀಯ ಹಾಗೂ ಭಾವನಾತ್ಮಕ ಸಂಬಂಧಗಳ ಕೊರತೆಯ ನಡುವೆ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಕೌಟುಂಬಿಕ ವ್ಯವಸ್ಥೆಗಳ ಅರಿವು ಮೂಡಿಸುವ ಅನಿವಾರ್ಯತೆಯಿದೆ. ನಮ್ಮ ಸಂಸ್ಕೃತಿ, ದೇಶದ ಪರಂಪರೆಯನ್ನು ಕಲಿಸುವ ಶಿಕ್ಷಣ ಅತ್ಯವಶ್ಯವಾಗಿದೆ. ನಾವು ಜಗತ್ತಿನ ಅಲೌಕಿಕ ಸುಖದ ಭ್ರಮೆಗೆ ಒಳಗಾಗುತ್ತಿದ್ದೇವೆ. ಇದರಿಂದ ಹೊರಬಂದು ನಮ್ಮೊಳಗಿನ ಆನಂದ ಕಾಣುವಂತಾಗಬೇಕು ಎಂದು ನಾಯ್ಕನಕಟ್ಟೆ ಶ್ರೀ ವೆಂಕಟರಮಣ ದೇವಸ್ಥಾನದ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷ ಉಪ್ರಳ್ಳಿ ನಾರಾಯಣ ಶ್ಯಾನುಭಾಗ್ ಹೇಳಿದರು. ನಾಯ್ಕನಕಟ್ಟೆ ಶ್ರೀ ವೆಂಕಟರಮಣ ದೇವಸ್ಥಾನದ ಸೇವಾ ಸಮಿತಿ ಟ್ರಸ್ಟ್ನ ಸುವರ್ಣ ಸಂಭ್ರಮಾಚರಣೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು. ಅಗ್ನಿ ದಿವ್ಯದಲ್ಲಿ ಸ್ಪುಟಗೊಂಡು ಬಂಗಾರ ಮೆರುಗು ಪಡೆಯುವಂತೆ ಸಂಘರ್ಷದ ಕುಲುಮೆಯಲ್ಲಿ ಹದಗೊಂಡು ಲೋಕಕ್ಕೆ ಮಾದರಿಯಾಗ ಹೊರಟ ಸಮಾಜವಿದ್ದರೆ ಅದು ಗೌಡಸಾರಸ್ವತ ಸಮಾಜ. ಕಳೆದ 800ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿರುವ ಈ ದೇವಸ್ಥಾನದ ಇತಿಹಾಸದ, ಹಿರಿಯರು ಆಚರಿಸಿಕೊಂಡು ಬಂದಂತಹ ಆಚರಣೆ, ಸಂಪ್ರದಾಯಗಳ ಬಗ್ಗೆ ದಾಖಲೀಕರಣ ಮಾಡುವ ಅವಶ್ಯಕತೆಯಿದ್ದು, ಈ ಕುರಿತು ಮುಂದಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.02: ಡ್ಯಾಂನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ವೆ ಸಮೀಪದ ಗುಮ್ಮೋಲ ಎಂಬಲ್ಲಿ ಭಾನುವಾರ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ ಆಚಾರ್ (14) ಹಾಗೂ ಜಯಂತ್ (20) ಎಂದು ಗುರುತಿಸಲಾಗಿದೆ. ಬೆಳ್ವೆ ಸಮೀಪದ ಗೂಮ್ಮೋಲ ಚರ್ಚ್ ಹಿಂಭಾಗದಿಂದ ಕಜ್ಕೆ ಸಂತೆಕಟ್ಟೆ ಸಂಪರ್ಕ ರಸ್ತೆಯ ಬಳಿ ಇರುವ ಕಿಂಡಿ ಅಣೆಕಟ್ಟುವಿನ ಮೇಲ್ಭಾಗದಲ್ಲಿ ಶ್ರೀಶ ಆಚಾರ್, ಜಯಂತ್ ನಾಯ್ಕ್ ಸೇರಿದಂತೆ ನಾಲ್ಕು ಮಕ್ಕಳು ಈಜಲು ತೆರಳಿದ್ದರು ಎನ್ನಲಾಗಿದೆ. ಶ್ರೀಶ ನೀರಿನಲ್ಲಿ ಆಯ ತಪ್ಪುತ್ತಿದ್ದಂತೆ ರಕ್ಷಣೆಗೆ ಜಯಂತ್ ನೀರಿಗೆ ಧುಮುಕಿದ್ದು ಇಬ್ಬರು ನೀರು ಪಾಲಾಗಿದ್ದಾರೆ. ಶ್ರೀಶ ಹೆಬ್ರಿಯ ಎಸ್ಆರ್ಎಸ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಸ್ಥಳದಲ್ಲಿದ್ದ ಇತರ ಮಕ್ಕಳು ಬೊಬ್ಬೆ ಹೊಡೆದಿದ್ದನ್ನು ಕೇಳಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ನೀರಿನಲ್ಲಿ ಮುಳುಗಿದ್ದ ಮಕ್ಕಳ ಹುಡುಕಲು ಮುಂದಾದರು. ತಕ್ಷಣ ಶಂಕರನಾರಾಯಣ ಪೊಲೀಸ್ ಠಾಣೆಗೂ ಮಾಹಿತಿ ನೀಡಲಾಯಿತು. ನೀರಿನಲ್ಲಿ ಮುಳುಗಿದ್ದ ಮಕ್ಕಳನ್ನು ಹುಡುಕಲು ಸ್ಥಳೀಯರು ಪೊಲೀಸರಿಗೆ ಸಹಕರಿಸಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮೆರೆದು, 7 ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕ್ರಮವಾಗಿ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ರಕ್ಷಿತಾ ಭಟ್ ಪ್ರಥಮ ಸ್ಥಾನ, ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಸ್ಮೃತಿಕಾ ಪ್ರಥಮ ಸ್ಥಾನ, ಸಂಸ್ಕ್ರತ ಭಾಷಣ- ಪ್ರಥಮ್ ಜಿ. ಪ್ರಥಮ ಸ್ಥಾನ, ಭರತನಾಟ್ಯ- ವೈಷ್ಣವಿ ಪ್ರಥಮ ಸ್ಥಾನ, ಸಂಸ್ಕ್ರತ ಧಾರ್ಮಿಕ ಪಠಣ- ಅವನಿ ಭಟ್ ಪ್ರಥಮ ಸ್ಥಾನ, ಭಾವಗೀತೆ- ಜಯಶ್ರೀ ಪ್ರಥಮ ಸ್ಥಾನ, ಗಝಲ್- ಶ್ರೀ ರಾಮ್ ಭಟ್ ದ್ವಿತಿಯ ಸ್ಥಾನ, ಕವ್ವಾಲಿ(ಗುಂಪು ಸ್ಪರ್ಧೆ)ರಿಷಿಕಾ, ದಿತ್ಯಾ, ದೀಕ್ಷಾ, ನಿರೀಕ್ಷಾ, ನಿಶಾಂತ್ ಕಿಣಿ, ಮಂದಿರ್ ತೃತೀಯ ಸ್ಥಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋವಾ ಬಂಟರ ಸಂಘದ ವಾರ್ಷಿಕ ಮಹಾಸಭೆ ಮತ್ತು ರಜತ ಮಹೋತ್ಸವದ ಕಾರ್ಯಕ್ರಮ ಜ.19ರ ಭಾನುವಾರ ಹೋಟೆಲ್ ಲಕ್ಷ್ಮಿ ಎಂಪೈರ್ ಮಡಗಾಂವ್ನಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯನ್ನು ಸಂಘದ ಅಧ್ಯಕ್ಷರಾದ ಕಾವಡಿ ಸದಾಶಿವ ಶೆಟ್ಟಿ ಅವರ ನೇತೃತ್ವದಲ್ಲಿ ನ.30ರ ಶನಿವಾರ ಸಂಜೆ ಹೋಟೆಲ್ ಸಾಗರ್ ವಿವ್ ಕನ್ಸೋಲಿನ್ ಪಣಜಿಯಲ್ಲಿ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ರಜತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಗೋವಾ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಶಶಿ ಶೆಟ್ಟಿ ಬೊಮ್ಮರ ಬೆಟ್ಟು, ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ ಬೆಳ್ಳಂಪಳ್ಳಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ವಿಜಯೇಂದ್ರ ಶೆಟ್ಟಿ ಪರ್ಕಳ, ಜಗದೀಶ್ ಶೆಟ್ಟಿ ಪಳ್ಳಿ, ಜೊತೆ ಕಾರ್ಯದರ್ಶಿ ರಾಘವ ಶೆಟ್ಟಿ ಕೊಡ್ಲಾಡಿ, ಹರ್ಷ ಶೆಟ್ಟಿ ಕಾವಡಿ, ಕರುಣಾಕರ ಶೆಟ್ಟಿ ಪೆರ್ಡೂರು ಹಾಗೂ ಕುಂದಾಪುರ ಯುವ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರಕಾರದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳು ಸರಕಾರಕ್ಕೆ ಹಾಗೂ ಜನರ ಮಧ್ಯ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು. ಸರಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಯಶಸ್ವಿಗೊಳಿಸೋಣ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಅವರು ಅಂದು ನಗರದ ತಾಲೂಕು ಪಂಚಾಯತ್ ಕಟ್ಟಡದಲ್ಲಿ ರಾಜ್ಯ ಸರಕಾರದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಜನ ಸಾಮಾನ್ಯರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿದೆ. ಅಭಿವೃದ್ಧಿಗಳ ಜೊತೆಗೆ ಮಹಿಳೆಯರಿಗೆ, ಮಕ್ಕಳಿಗೆ, ಯುವಕರಿಗೆ ಅವರ ಆರ್ಥಿಕ ಸಬಲೀಕರಣಕ್ಕೆ ಸಹಾಯಮಾಡುತ್ತಿದೆ. ಸರಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದರೊಂದಿಗೆ ಜನಸಾಮಾನ್ಯರಿಗೆ ಐದು ಗ್ಯಾರಂಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ 5 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿ ಡಿಸೆಂಬರ್ 9 ರ ಒಳಗಾಗಿ ಸಲ್ಲಿಸಬಹುದಾಗಿದೆ. ಪ್ರವರ್ಗ ಸಿ ದೇವಸ್ಥಾನಗಳು:ಕಾರ್ಕಳ ತಾಲೂಕು ತೆಳ್ಳಾರು ಗ್ರಾಮದ ಶ್ರೀ ಜಲದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ಮಾಳ ಹಳೆಪಳ್ಳಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಾಮಾನ್ಯ ವರ್ಗದ 1 ಸ್ಥಾನಕ್ಕೆ ಮಾತ್ರ ಮರುಪ್ರಕಟಣೆ ಹಾಗೂ ತೆಳ್ಳಾರು ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಮರು ಪ್ರಕಟಣೆ, ಬ್ರಹ್ಮಾವರ ತಾಲೂಕು ಹೊಸಾಳ ಬದನಗೋಳಿ ಶ್ರೀ ಬ್ರಹ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂಡ ಶೇಕಡ 17 ರಷ್ಟು ಹೆಚ್ಚು ಮಳೆಯಾಗಿದೆ. ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಸರ್ಕಾರಿ ಕಟ್ಟಡಗಳು, ಸೇತುವೆ ಸೇರಿದಂತೆ ಮತ್ತಿತ್ತರ ಆಸ್ತಿ ಪಾಸ್ತಿಗಳಿಗೆ ಹಾನಿವುಂಟಾಗಿದೆ. ಈ ಸಂಬಂಧ ಈಗಾಗಲೇ ಬೆಳೆಹಾನಿ, ಮಾನವನಹಾನಿಗೆ ಸೇರಿದಂತೆ ಮತ್ತಿತರ ಹಾನಿಗಳಿಗೆ ಪರಿಹಾರವನ್ನು ನೀಡಲಾಗಿದೆ ಎಂದರು. ಮೂಲಭೂತ ಸೌಕರ್ಯಗಳ ಹಾನಿಗಳ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಕೃತಿ ವಿಕೋಪ ಅನುದಾನದ ಅಡಿಯಲ್ಲಿ…
