ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾನು ಶಾಸಕನಾಗಲು ನೂರಾರು ಕಾರ್ಯಕರ್ತರು ಶ್ರಮ ವಹಿಸಿದ್ದಾರೆ. ನೀವೆಲ್ಲರೂ ನನ್ನ ಮೇಲಿಟ್ಟ ನಂಬಿಕೆಗಳಿಗೆ ನಾನು ಋಣಿಯಾಗಿದ್ದೇನೆ. ನಿಮ್ಮೆಲ್ಲರ ಋಣ ತೀರಿಸಲು ಇನ್ನೊಂದು ಜನ್ಮವೇ ಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕೋಟೇಶ್ವರದ ಸರಸ್ವತಿ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಮಾತನಾಡಿ ನಾನು ದೊಡ್ಡ ರಾಜಕಾರಣಿಯಲ್ಲ. ನನಗೆ ವೇಷ ಹಾಕಲು ಬರುವುದಿಲ್ಲ. ಸಹಜವಾಗಿ ಬದುಕಿದ್ದೇನೆ. ನನ್ನ ಇಚ್ಚಾಶಕ್ತಿ ಸ್ಪಷ್ಟವಾಗಿದೆ. ನಾನು ಒಮ್ಮೆ ತೀರ್ಮಾನಿಸಿದರೆ ಅದನ್ನೇ ಪಾಲಿಸುತ್ತೇನೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯವನ್ನು ಒಪ್ಪಿಕೊಂಡು ಕೆಲಸ ಮಾಡಿದ್ದೇನೆ. ಜಾತ್ಯಾತೀತವಾಗಿ ನನ್ನನ್ನು ಮತದಾರರು ಆಯ್ಕೆಮಾಡಿದ್ದಾರೆ ಎಂದ ಅವರು ನಾವು ನಿಮಗೆ ಗ್ಯಾರೆಂಟಿ ಕಾರ್ಡ್ ನೀಡುವುದಿಲ್ಲ. ನಿಮಗೆ ನಾನೇ ಗ್ಯಾರೆಂಟಿ ಎಂದರು. ಚುನಾವಣೆ ಎನ್ನುವುದು ಎರಡು ತಂಡಗಳ ನಡುವಿನ ಧರ್ಮ ಯುದ್ಧವಾಗಬೇಕೇ ಹೊರತು ಹೊಲಸು ರಾಜಕೀಯವಾಗಬಾರದು. ಸಭೆಯೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿಯು, ನನಗೆ ವಯಸ್ಸಾಗಿದೆ ಎಂದು ಹೇಳಿದ್ದನ್ನು ಕೇಳಿದೆ. ನನ್ನ ವರಸ್ಸಿನ ಜಾತಕ ಅವರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಕಾಂಗ್ರೆಸ್ ಎಂ.ಎಲ್.ಎ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ನಾಮಪತ್ರ ಸಲ್ಲಿಸುವ ಪೂರ್ವಭಾವಿಯಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಾರ್ವಜನಿಕ ಸಭೆ ಆಯೋಜಿಸಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬಿಜೆಪಿ ಪಕ್ಷದ ಎಂ.ಎಲ್.ಎ ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದ ಬಳಿಕ ಬೈಂದೂರು ಬಿಜೆಪಿ ಕಛೇರಿಗೆ ಗುರುರಾಜ ಗಂಟಿಹೊಳೆ ಅವರು ಭೇಟಿ ನೀಡಿದರು. ಈ ವೇಳೆ ಬಿಜೆಪಿ ಕಛೇರಿಯಲ್ಲಿ ಜರುಗಿದ ಅಂಬೇಡ್ಕರ್ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಬೈಂದೂರು ಬಿಜೆಪಿ ಉಸ್ತುವಾರಿ ಕಿಶೋರ್ ಕುಮಾರ್ ಕುಂದಾಪುರ, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಯುವಮೋರ್ಚ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಶೆಟ್ಟಿ, ಬೈಂದೂರು ಯುವಮೋರ್ಚಾ ಅಧ್ಯಕ್ಷ ಸಂತೋಷ್ ಸೇರಿದಂತೆ ವಿವಿಧ ಮೋರ್ಚಾಗಳ ಪ್ರಮುಖರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡುವ ವೇಳೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರೂ ಕಾಣಿಸಿಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಶೆಟ್ಟಿ ರಾಜಕೀಯಕ್ಕೆ ಬರುತ್ತಾರಾ ಎಂಬ ಚರ್ಚೆ ಎದ್ದಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ರಿಷಬ್ ಶೆಟ್ಟಿ, ಕೊಲ್ಲೂರು ದೇವಸ್ಥಾನಕ್ಕೆ ಹೋಗಿದ್ದಾಗ ಮುಖ್ಯಮಂತ್ರಿ ಅವರ ಭೇಟಿ ಆಯಿತು. ನನಗೆ ರಾಜಕೀಯಕ್ಕೆ ಬರುವ ಉದ್ದೇಶವಿಲ್ಲ. ಸದ್ಯ ಕಾಂತರದ ಬರವಣಿಗೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ. ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಕೂಡ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಿಷಬ್ ಅವರದ್ದು ಆಕಸ್ಮಿಕ ಭೇಟಿಯಾಷ್ಟೇ. ಆದರೆ ಅವರ ಸಿದ್ಧಾಂತ ಹಾಗೂ ವಿಚಾರಧಾರೆಗಳು ನಮ್ಮ ಪಕ್ಷಕ್ಕೆ ಹತ್ತಿರವಾಗಿವುದರಿಂದ ಆಗಾಗ ಅವರು ಬಹಿರಂಗವಾಗಿ ನಮ್ಮ ಪಕ್ಷದ ಪರ ಪ್ರತಿಪಾದನೆ ಮಾಡುತ್ತಿದ್ದಾರೆ. ನಟ ಸುದೀಪ್ ಅವರಂತೆ ರಿಷಬ್ ಶೆಟ್ಟಿಯವರನ್ನು ಪ್ರಚಾರಕ್ಕೆ ತೊಡಗಿಸಿಕೊಳ್ಳುವ ಬಗ್ಗೆ ಈಗ ಯಾವುದೇ ಯೋಚನೆ ಇಲ್ಲ, ಅದು ದೇವರ ಇಚ್ಛೆ ಎಂದಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸಮಸ್ತ ರಾಜ್ಯದ ಜನರಿಗೆ ಒಳ್ಳೆಯದಾಗಬೇಕು, ರಾಜ್ಯ ಸುಭಿಕ್ಷೆಯಿಂದ ಕೂಡಿರಬೇಕು, ಮುಂದಿನ ವಿಧಾನಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಹೆಚ್ಚಿನ ಸ್ಥಾನ ಪಡೆಯುವ ಮೂಲಕ ಮತ್ತೊಮ್ಮೆ ಅಕಾರದ ಚುಕ್ಕಾಣಿ ಹಿಡಿದು ನವನಾಡು ಕಟ್ಟುವ ಸಂಕಲ್ಪದೊಂದಿಗೆ ದೇವರ ಆಶೀರ್ವಾದ ಪಡೆಯಲು ಕೊಲ್ಲೂರು ದೇವಳಕ್ಕೆ ಬಂದಿರುವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಗುರುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಪತ್ನಿಯೊಂದಿಗೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ವೆ ವರದಿ ಆಧರಿಸಿ ಟಿಕೆಟ್:ವಿಧಾನಸಭಾ ಚುನಾವಣೆಯಲ್ಲಿ ಸರ್ವೇ ವರದಿ ಆಧರಿಸಿ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಲಾಗಿದೆ, ಟಿಕೆಟ್ ಕೈ ತಪ್ಪಿರುವ ಶಾಸಕ ಎಚ್. ಕೆ. ಕುಮಾರಸ್ವಾಮಿ ಸೇರಿದಂತೆ ಕೆಲವರಿಗೆ ಅಸಮಾಧಾನವಿದೆ, ಅಸಮಾಧಾನಗೊಂಡಿರುವ ಎಲ್ಲ ಶಾಸಕರೊಂದಿಗೆ ಮಾತನಾಡಿ ಪಕ್ಷ ಬಿಡದಂತೆ ಮನವೊಲಿಸಲಾಗುವುದು ಎಂದರು. ಪ್ರಯೋಗ ಶಾಲೆಯಾಗಿ ಅಲ್ಲ:ಉಡುಪಿ ಜಿಲ್ಲೆಯಲ್ಲಿರುವ ಐವರು ಶಾಸಕರುಗಳ ಪೈಕಿ, ನಾಲ್ವರನ್ನು ಬದಲಾಯಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಉಡುಪಿ ಜಿಲ್ಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಭಾರಿ ಮತ್ತೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದ ಬಗ್ಗೆ ಬೇಸರವಿದೆ. ಸ್ಪರ್ಧಿಸಬೇಡಿ ಎಂದು ಮುಂಚಿತವಾಗಿ ತಿಳಿಸದಿರುವುದಕ್ಕೂ ನೋವಿದೆ. ಸದ್ಯ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಬೈಂದೂರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವ ಬಗ್ಗೆ ಇನ್ನೆರಡು ದಿನಗಳಲ್ಲಿ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ತಮ್ಮ ನಿವಾಸದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ದುಡುಕಿನ ನಿರ್ಧಾರಕ್ಕೆ ಬಾರದಂತೆ ಸಲಹೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮೊಂದಿಗೆ ಬರುವಂತೆ ಆಹ್ವಾನಿಸಿದ್ದಾರೆ ಆದರೆ ಬಿಜೆಪಿ ತೊರೆಯಲ್ಲ ಎಂದು ಸ್ಪಷ್ಟಪಡಿಸಿದ್ದೇನೆ. ಯಡಿಯೂರಪ್ಪ ಅವರು ಮುಂದೆ ಉತ್ತಮ ಅವಕಾಶ ಸಿಗಲಿದ್ದು, ದುಡುಕಿ ನಿರ್ಧಾರ ಮಾಡದಂತೆ ಸಲಹೆ ಮಾಡಿದ್ದಾರೆ. ಬೈಂದೂರು ಅಭ್ಯರ್ಥಿ ಬಗ್ಗೆ ಅಸಮಾಧಾನವಿಲ್ಲ ಎಂದು ಹೇಳಿದರು. ತಾನು ಶಾಸಕನಾದ ಹೊಸತರಲ್ಲಿ ಕಾಂಗ್ರೆಸ್ ಜೆಡಿಎಸ್ ಸರ್ಕಾರವಿದ್ದು, ನಂತರ ಎರಡು ವರ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆಯು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಿವೈನ್ ಪಾರ್ಕ್ನ ಎಸ್ ಎಚ್ ಆರ್ ಎಫ್ ವಿಭಾಗದ ವೈದ್ಯಕೀಯ ನಿರ್ದೇಶಕರಾದ ಡಾ. ವಿವೇಕ್ ಎ. ಉಡುಪರವರು ಆಗಮಿಸಿದ್ದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಅವರು ಐ.ಎಂ.ಜಯರಾಮ ಶೆಟ್ಟಿಯವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಿದ ಸಂಸ್ಥೆಯ ಉದ್ಧೇಶ ಇಡೇರುತ್ತಿದೆಯಲ್ಲದೆ. ಅವರ ಮಗನಾದ ಶ್ರೀ ಸಿದ್ಧಾರ್ಥ ಜೆ. ಶೆಟ್ಟಿಯವರು ಸಂಸ್ಥೆಯನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿಸಿದರು. ಸಂಸ್ಥೆಯಲ್ಲಿ ಸಿಗುತ್ತಿರುವ ಮೌಲ್ಯಯುತ ಶಿಕ್ಷಣಕ್ಕಾಗಿ ಅವರು ಎಲ್ಲರನ್ನು ಅಭಿನಂದಿಸಿದರು. ಚಿಕ್ಕ ವಯಸ್ಸಿನಿಂದಲೂ ತಮಗೆ ಐ.ಎಂ.ಜಯರಾಮ ಶೆಟ್ಟಿಯವರು ಸ್ಪೂರ್ತಿ ಎಂದು ತಿಳಿಸಿದರು. ಐಎಂಜೆ ಸಂಸ್ಥೆಗಳ ನಿರ್ದೇಶಕರಾದ ದೋಮ ಚಂದ್ರಶೇಖರ್ರವರು ಮಾತನಾಡಿ ಸಂಸ್ಥಾಪಕರ ಸಾಧನೆಗಳ ಬಗ್ಗೆ ಒಂದು ಪುಸ್ತಕವನ್ನು ಬಿಡುಗಡೆ ಮಾಡುವುದು ಸೂಕ್ತ ಏಕೆಂದರೆ ಅದು ಯುವಜನತೆಗೆ ಸ್ಪೂರ್ತಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಶ್ರೀದೇವಿ ಆಂಬುಲೆನ್ಸ್ ಸರ್ವಿಸ್, ಕುಂದಾಪುರದ ಶ್ರೀ ವಾಸುದೇವ ಹಂದೆ ಅವರಿಗೆ ಅವರ ನಿರಂತರ ಸಮಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಾ ವಿಭಾಗದ ವತಿಯಿಂದ ಬೈಂದೂರು ಆಡಳಿತ ಸೌಧದಲ್ಲಿ ಬುಧವಾರ ಬೈಂದೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಜನಸಂಪರ್ಕ ಸಭೆ ನಡೆಯಿತು. ಈ ವೇಳೆ ಉಡುಪಿ ವಿಭಾಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಕೆ.ಸಿ. ಪ್ರಕಾಶ್, ಸಾರ್ವಜನಿಕರ ದೂರಗಳ ಸ್ವೀಕರಿಸಿ ಮಾತನಾಡಿ ಸಾರ್ವಜನಿಕ ಕೆಲಸಗಳನ್ನು ನಿಗದಿತ ಕಾಲಮಿತಿಯಲ್ಲಿ ಮಾಡಿಕೊಡುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಸರಿಯಾದ ಸಮಯಕ್ಕೆ ಸರಕಾರಿ ಅಧಿಕಾರಿಗಳಿಂದ ಕೆಲಸಗಳು ಆಗದಿದ್ದಾಗ ಸಹಜವಾಗಿ ಸಾರ್ವಜನಿಕರು ಸಿಟ್ಟುಗೇಳುತ್ತಾರೆ. ಇಂತಹ ಪರಿಸ್ಥಿತಿಯನ್ನು ಎದುರಿಸುವ ಬದಲಿಗೆ ಅವರಿಗೆ ತಿಳಿಹೇಳುವ ಹಾಗೂ ಸಕಾಲದಲ್ಲಿ ಯಾವುದೇ ಅಪೇಕ್ಷೆ ಇಲ್ಲದೇ ಕೆಲಸ ಮಾಡಿಕೊಡುವ ಮನೋಭಾವ ಮುಖ್ಯವಾಗಿದೆ ಎಂದರು. ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಕೆ.ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ. ಗೌಡ ಮತ್ತು ರಫೀಕ್ ಎಂ ಸಾರ್ವಜನಿಕರ ದೂರುಗಳನ್ನು ಆಲಿಸಿದರು. ಈ ವೇಳೆ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ, ವೃತ್ತ ನಿರೀಕ್ಷಕ ಸಂತೋಷ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಪಕ್ಷ ತನ್ನ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ್ದು, ಬೈಂದೂರು ಕ್ಷೇತ್ರಕ್ಕೆ ಗುರುರಾಜ ಗಂಟಿಹೊಳೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ಮೂಲಕ ಬೈಂದೂರು ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ಮಿಸ್ ಆಗಿದೆ. ಬೈಂದೂರು ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಲವು ಹೆಸರುಗಳಿದ್ದು ಭಾರಿ ಜಟಾಪಟಿ ಏರ್ಪಟ್ಟಿತ್ತು. ಮೊದಲ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿ ಅಂತಿಮಗೊಳಿಸಲು ಸಾಧ್ಯವಾಗಿತ್ತು. ಕೊನೆಗೂ ಕಗ್ಗಂಟಾಗಿದ್ದ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದ್ದು, ಚುನಾವಣಾ ಕಣ ರಂಗೇರಲಿದೆ. ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಬಡವರ ಮನೆ ಹುಡುಗನಿಗೆ ಟಿಕೆಟ್ ದೊರೆತಿದೆ ಎಂದು ಸಂದೇಶದೊಂದಿಗಿನ ಪೋಸ್ಟ್ ವೈರಲ್ ಆಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ ಕಳೆದ ಎರಡೂವರೆ ದಶಕಗಳಿಂದಲೂ ರಾಷ್ಟ್ರೀಯ ಪಕ್ಷಗಳ ನಡುವೆ ಹಣಾಹಣಿ ನಡೆಯುತ್ತಿದ್ದು, ಈ ಭಾರಿಯೂ ಕಾಂಗ್ರೆಸ್ ಪಕ್ಷದ ಕೆ. ಗೋಪಾಲ ಪೂಜಾರಿ ಹಾಗೂ ಬಿಜೆಪಿ ಪಕ್ಷದ ಗುರುರಾಜ ಗಂಟಿಹೊಳೆ ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ವಿಧಾನಸಭಾ ಚುನಾವಣೆಗೆ ಸರ್ವ ತಯಾರಿಗಳು ನಡೆಯುತ್ತಿದ್ದು, ಈ ನಡುವೆ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪೈಕಿ ಉಡುಪಿ ಜಿಲ್ಲೆಯ 5 ಕ್ಷೇತ್ರಗಳ ಪೈಕಿ ಬೈಂದೂರು ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ವಿ. ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಯಶಪಾಲ್ ಸುವರ್ಣ, ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸುರೇಶ್ ಶೆಟ್ಟಿ ಗುರ್ಮೆ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಬೈಂದೂರು ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿಯ ರಘುಪತಿ ಭಟ್ ಹಾಗೂ ಕಾಪುವಿನ ಲಾಲಾಜಿ ಆರ್. ಮೆಂಡನ್ ಅವರಿಗೆ ಟಿಕೆಟ್ ಮಿಸ್ ಆಗಿದೆ. ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹಾಗೂ…
