Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇದೇ ಆ.30,31ಮತ್ತು ಸೆ.1ರಂದು ಅಮೇರಿಕಾದ ವಾಷಿಂಗ್ಟನ್ ಡಿಸಿಯ ರಿಚ್‌ಮಂಡ್ ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 12ನೇ ‘ಅಕ್ಕ’ ವಿಶ್ವ ಕನ್ನಡ ಸಮ್ಮೇಳನದಲ್ಲಿ (ಅಮೇರಿಕ ಕನ್ನಡ ಕೂಟಗಳ ಆಗರ) ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶನದ ಸೂಕ್ಷ್ಮ ಸಂವೇದನೆಯ ಸಿನಿಮಾ ‘ಟ್ರಿಪಲ್ ತಲಾಖ್’ ಪ್ರದರ್ಶನ ಮತ್ತು ಸಂವಾದ ನಡೆಯಲಿದೆ. 2018 ರಲ್ಲಿ ಅಮೇರಿಕಾದ ಡಲ್ಲಾಸ್ ನಡೆದ ಸಮ್ಮೇಳನದಲ್ಲಿ ಕೂಡ ಇವರ ನಿರ್ಮಾಣದ ರಾಷ್ಟ್ರ ಪ್ರಶಸ್ತಿ ಪಡೆದ ‘ರಿಸರ್ವೇಶನ್’ ಸಿನಿಮಾದ ಪ್ರದರ್ಶನ ನಡೆದಿದ್ದು 2016ರಲ್ಲಿ ನ್ಯೂಯಾರ್ಕ್ ನ್ಯೂಜೆರ್ಸಿಯಲ್ಲಿ, 2014 ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ನಡೆದ ಸಮ್ಮೇಳನದ ಬಹುಭಾಷ ಕವಿಗೋಷ್ಟಿಯ ಭಾಗವಹಿಸುವ ಮೂಲಕ ಸತತ ನಾಲ್ಕು ಸಮ್ಮೇಳನಗಳಲ್ಲಿ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ. 2006 ರಲ್ಲಿ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪಡೆದ ಚಲನಚಿತ್ರಗಳ ಮೂಲಕ ಸಿನಿಮಾ ರಂಗ ಪ್ರವೇಶಿಸಿದ ಯಾಕೂಬ್ ಖಾದರ್ ಗುಲ್ವಾಡಿ ಕನ್ನಡದ ಖ್ಯಾತ ನಿರ್ದೇಶಕರಾದ ಡಾ. ಗಿರೀಶ ಕಾಸರವಳ್ಳಿ ಅವರ ‘ಗುಲಾಬಿ ಟಾಕೀಸ್’ ನಿರ್ದೇಶಕ ನಿಖಿಲ್ ಮಂಜು ಲಿಂಗೇಗೌಡ ಅವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು. ಸಾವಯವ ಕೃಷಿಯನ್ನು ಬೆಂಬಲಿಸಿದರೆ ಮಾತ್ರ ಮಾನವ ಸಂಕುಲ ಆರೋಗ್ಯ ಪೂರ್ಣ ಜೀವನವನ್ನು ನಡೆಸಲು ಸಾಧ್ಯ ಎಂಬುದಾಗಿ ಡಾ. ನರೇಂದ್ರ ರೈ ದೇರ್ಲ ಹೇಳಿದರು. ಅವರು ” ಒಂದು ಬೊಗಸೆ ಹಸಿರು” ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆದ ಕ್ರಿಯೇಟಿವ್ ಸ್ಫೂರ್ತಿ ಮಾತು 6 ನೇ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು, ಬೋಧಕ ವರ್ಗದವರು, ವಸತಿ ನಿಲಯ ಪಾಲಕರು, ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಬೋಧಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಕನ್ನಡ ಭಾಷಾ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಪಿ ತಂತ್ರಾಂಶದಲ್ಲಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://ssp.postmatric.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೆರ್ಗಾಲು ಮಟ್ಟಕಟ್ಟೆ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಮೊಗೇರಿ ಸೂರ್ಯ ಸಿದ್ಧಾಂತ ಫೌಂಡೇಶನ್ ಮತ್ತು ಕುಂದಾಪುರ ದ್ರಾವಿಡ ಬ್ರಾಹ್ಮಣ ಪರಿಷತ್ ಉಪ್ಪುಂದ ವಲಯ ಇವರ ಸಹಯೋಗದೊಂದಿಗೆ ಶ್ರಾವಣ ಸಂಧ್ಯಾ ಕಾರ್ಯಕ್ರಮ ಮತ್ತು ಸೂರ್ಯ ಸಿದ್ಧಾಂತ ಫೌಂಡೇಶನ್ ದಶಮಾನೋತ್ಸವದ ಆ.25 ರವಿವಾರ ಮಧ್ಯಾಹ್ನ 2.30ರಿಂದ ನಡೆಯಲಿದೆ. ಸೂರ್ಯ ಸಿದ್ಧಾಂತ ಫೌಂಡೇಶನ್ ನಿರ್ದೇಶಕರಾದ ಉಪ್ಪುಂದ ಚಂದ್ರಶೇಖರ ಹೊಳ್ಳರು ಕಾರ್ಯಕ್ರಮದ ಉದ್ಘಾಟನೆ ನಡೆಸಿ ಆಶೀರ್ವಚನ ನೀಡಲಿದ್ದಾರೆ. ವಿದ್ವಾನ್ ಭರತ್‌ ಐತಾಳ್ ಅವರು ಪಂಚಾಂಗ ಶ್ರವಣ ಮತ್ತು ಧಾರ್ಮಿಕ ಪ್ರವಚನ ನೆಡೆಸಿಕೊಡುವರು. ಸಭಾಧ್ಯಕ್ಷರಾಗಿ ಯು. ಸಂದೇಶ್ ಭಟ್, ಅಧ್ಯಕ್ಷರು ದ್ರಾವಿಡ ಬ್ರಾಹ್ಮಣ ಪರಿಷತ್ ಉಪ್ಪುಂದ ವಲಯ, ಮುಖ್ಯ ಅತಿಥಿಗಳಾಗಿ ವರಮಹಾಲಕ್ಷ್ಮಿ ಹೊಳ್ಳ, ಅರುಣ್ ಶಾನುಭೋಗ, ಅನುಪಮ ಅಡಿಗ, ವೀಣಾ ಕೆ. ಹೆಬ್ಬಾರ್ ಭಾಗವಹಿಸುವರು. ಪರಿಷತ್‌ ಸದಸ್ಯೆಯರಿಂದ ವಿಷ್ಣು ಸಹಸ್ರನಾಮ ಮತ್ತು ಲಲಿತ ಸಹಸ್ರನಾಮ ಪಠಣ ಮತ್ತು ರಕ್ಷಾ ಬಂಧನದ ಕಾರ್ಯಕ್ರಮವಿರುತ್ತದೆ. ಪರಿಷತ್‌ ಸದಸ್ಯರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಗೌರವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೋಗಿ ಸಮಾಜ ಸೇವಾ ಸಂಘ ರಿ. ಘಟಕ ಇದರ 2024 -26ನೇ ಸಾಲಿನ ಅಧ್ಯಕ್ಷರಾಗಿ ಕೊಲ್ಲೂರಿನ ಚಂದ್ರ ಜೋಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಜೋಗಿ ಹಳಗೇರಿ, ಕೋಶಾಧಿಕಾರಿಯಾಗಿ ರವೀಂದ್ರ ಜೋಗಿ ನಾಡ ಗುಡ್ಡೆಯಂಗಡಿ, ಉಪಾಧ್ಯಕ್ಷರಾಗಿ ನಾಗೇಶ್ ಜೋಗಿ ಹಳಗೇರಿ, ಜಗದೀಶ್ ಜೋಗಿ ಹಳಗೇರಿ, ನಾಗೇಂದ್ರ ಜೋಗಿ ಕೊಲ್ಲೂರು ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುಳ್ಳಾಡಿಯ ಯುವ ನಿರೂಪಕ ನಿತಿನ್ ಶೆಟ್ಟಿ ಅವರಿಗೆ ಟಿಎನ್‌ಐಟಿ ಸೌತ್ ಇಂಡಿಯನ್ ಮೀಡಿಯಾ ಅವಾರ್ಡ್ಸ್ 2024ರಲ್ಲಿ ಅವರ ಹಿನ್ನೆಲೆ ಧ್ವನಿಗಾಗಿ ಬೆಸ್ಟ್ ವಾಯ್ಸ್ ಓವರ್ ಪ್ರಶಸ್ತಿ ಲಭಿಸಿದೆ. ಮೂಲತಃ ಕುಂದಾಪುರದ ಬೇಳೂರು ಗ್ರಾಮದ ಗುಳ್ಳಾಡಿಯವರಾಗಿದ್ದು, ಅದ್ಭುತ ಕಂಠಸಿರಿ, ಇಂಪಾದ ಹಿನ್ನೆಲೆ ಧ್ವನಿ ಯೊಂದಿಗೆ ಮನೆ ಮಾತಾಗಿರುವ ನಿತಿನ್ ಶೆಟ್ಟಿ ಟಿವಿ9 ಖಾಸಗಿ ವಾಹಿನಿಯಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಇದರ 51ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಬಿಡುಗಡೆಗೊಳಿಸಲಾಯಿತು. ಧಾರವಾಡದ ಯು. ಬಿ. ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಯು. ಬಿ. ಶೆಟ್ಟಿ ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂದೇಶ್ ಭಟ್, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಸದಸ್ಯರಾದ ರವೀಂದ್ರ ಪ್ರಭು, ರಂಜನಾ ಶೆಟ್ಟಿ, ಮಂಜು ದೇವಾಡಿಗ ಅರೆಹಾಡಿ, ವಕೀಲರಾದ ರಂಜಿತ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಪಂಚಾಯತ್ ಮಾಜಿ ಸದಸ್ಯರಾದ ಗೌರಿ ದೇವಾಡಿಗ, ಪಾಂಡುರಂಗ ಖಾರ್ವಿ, ಶಂಕರ್ ನಾರಾಯಣ ಭಟ್, ವೆಂಕಟರಮಣ ಭಟ್, ಓಂಕಾರ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ ಬೈಂದೂರು ಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ – ಗಮ್ಮತ್ತ್” ಕಾರ್ಯಕ್ರಮವನ್ನು ಅಗಸ್ಟ್ 25ರ ಭಾನುವಾರ ಬೆಳಿಗ್ಗೆ 9ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಕೆಸರುಗದ್ದೆ ಹಾಗೂ ಅದರ ಪಕ್ಕದ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮುಂದಾಳು, ಉದ್ಯಮಿ ಶರತ್ ಶೆಟ್ಟಿ ಉಪ್ಪುಂದ ಹೇಳಿದರು. ಅವರು ಬೈಂದೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸಮಾನ ಮನಸ್ಕರ ತಂಡ ಒಂದುಗೂಡಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಎಂಬ ಸಂಸ್ಥೆಯನ್ನು ಆರಂಭಿಸಿ ಅದರ ಮೂಲಕ ಮೊದಲ ಭಾರಿಗೆ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರಿಗೆ ಸ್ಪರ್ಧೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮದುಮಗ ನಾಪತ್ತೆಯಾದ ಕಾರಣ ಸೋಮವಾರ ನಡೆಯಬೇಕಾಗಿದ್ದ ಮದುವೆ ರದ್ದುಗೊಂಡ ಘಟನೆ ನಡೆದಿದೆ. ಉಪ್ಪುಂದದ ಯುವಕನೊಂದಿಗೆ ಮರವಂತೆಯ ಹುಡುಗಿಗೆ ವಿವಾಹ ಸೋಮವಾರ ನಾಗೂರಿನಲ್ಲಿ ನಿಗದಿಯಾಗಿತ್ತು. ಎರಡು ಕಡೆಯವರು ಮದುವೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಹುಡುಗ ಸಹಕಾರಿ ಸಂಘದಲ್ಲಿ ಕೆಲಸ ಮಾಡಿಕೊಂಡಿದ್ದು, ಮನೆಯವರು ಪರಸ್ಪರ ಮಾತು ಕತೆಯ ಮೂಲಕ ಒಪ್ಪಿ ಮದುವೆಗೆ ದಿನ ನಿಶ್ಚಯ ಮಾಡಿದ್ದರು. ಅದರಂತೆ ಮದುಮಗ ಸೇರಿದಂತೆ ಮನೆಯವರು ಸಕಲ ತಯಾರಿ ಮಾಡಿ ಕೊಂಡಿದ್ದರು.ಆ.18ರಂದು ಹುಡುಗನ ಮನೆಯಲ್ಲಿ ಮೆಹೆಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸಿದ್ದರು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದುಕೊಂಡು, ಮನೆಯಲ್ಲಿ ಇಟ್ಟು ಕೆಲವೊಂದು ವಸ್ತುಗಳನ್ನು ತರಲು ಇದೆ ಎಂದು ಮನೆಯವರಲ್ಲಿ ಹೇಳಿ ಹೋಗಿದ್ದ. ಮೊಬೈಲ್, ಚಿನ್ನದ ಬ್ರೇಸ್‌ಲೆಟ್‌ನ್ನು ಮನೆಯಲ್ಲಿ ಇಟ್ಟು ಹೋದ ಮದುಮಗ ವಾಪಸ್ ಬಾರದೆ ನಾಪತ್ತೆಯಾಗಿದ್ದಾನೆ. ಮೆಹಂದಿಯ ಸಂಭ್ರಮದಲ್ಲಿದ್ದ ಮನೆಯವರು ಹುಡುಗ ಮನೆಗೆ ಬಾರದೆ ಇರುವುದರಿಂದ ಗಾಬರಿಯಿಂದ ಹುಡುಕಾಟದಲ್ಲಿ ತೊಡಗಿದರು. ಹುಡುಗ ನಾಪತ್ತೆ ವಿಷಯ ತಿಳಿದು ಸಂಬಂಧಿಕರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೆಲವು ನಿಯಮ ಬದಲಾವಣೆ ಮಾಡಿರುವುದರಿಂದ ತೊಂದರೆಯಾಗುತ್ತಿದ್ದು, ನಿಯಮ ಸಡಿಲಗೊಳಿಸುವಂತೆ ಆಗ್ರಹಿಸಿ ಎನ್.ಎಸ್.ಯು.ಐ ಕುಂದಾಪುರ ತಾಲೂಕು ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು. ಕಾಲೇಜಿನಲ್ಲಿ ಅವಧಿ ಮಧ್ಯದಲ್ಲಿ ತರಗತಿಗೆ ರಜೆ ಹಾಕಲು, ಬೆಳಿಗ್ಗೆ ತಡವಾಗಿ ತರಗತಿಗೆ ತೆರಳಲು ಮೊದಲಿನಿಂದಲೂ ಅನುಮತಿ ಇದೆ. ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಇದ್ದು, ಎಲ್ಲಾ ದಿನವೂ ಸರಿಯಾದ ಸಮಯಕ್ಕೆ ಕಾಲೇಜಿಗೆ ಬರಲು ಸಾಧ್ಯವಾಗುತ್ತಿಲ್ಲ. ದೂರದ ಪ್ರದೇಶದಿಂದ ಬರುವವರಿಗೆ ಕೆಲವೊಮ್ಮೆ ಮೊದಲ ತರಗತಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ. ನಿಯಮ ಬದಲಾವಣೆ ಮಾಡಿರುವುದರಿಂದ ಅದು ಸಾಧ್ಯವಾಗುವುದಿಲ್ಲ. ಇನ್ನು ತುರ್ತು ಕೆಲಸಕ್ಕೆ ಒಂದು ತರಗತಿಗೆ ರಜೆ ಹಾಕಿ ಹೋಗಲು, ಲೈಬ್ರೆರಿಗೆ ಹೋಗಲು, ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಕಾಲೇಜು ಆಡಳಿತ ಮಂಡಳಿ ಏಕಾಏಕೀ ನಿಯಮ ಬದಲಾವಣೆ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ಅತೀವ ತೊಂದರೆಯಾಗಿದೆ. ಆಡಳಿತ ಮಂಡಳಿ ಹಿಂದೆ ಇದ್ದ ನಿಯಮಗಳನ್ನೇ ಮುಂದುವರಿಸುವಂತೆ ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು. ಕಾಲೇಜು…

Read More