ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜನೋಪಯೋಗಿ ಕಾರ್ಯವನ್ನು ಯಾರು ಮಾಡುತ್ತಿದ್ದಾರೆ ಅನ್ನುವುದಕ್ಕಿಂದ ಅದರಿಂದ ಯಾರಿಗೆ ಉಪಯೋಗವಾಗುತ್ತದೆ ಎಂಬುದು ಬಹುಮುಖ್ಯ. ಕೈಗೊಳ್ಳುವ ಯೋಜನೆಗಳ ಫಲ ಕಟ್ಟ ಕಡೆಯ ಜನರಿಗೂ ತಲುಪಿದಾಗಲೇ ಅದರಲ್ಲೊಂದು ಸಾರ್ಥಕ ಭಾವ ಮೂಡುತ್ತದೆ ಎಂದು ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷ ಪ್ರಸಾದ್ ಪ್ರಭು ಹೇಳಿದರು. ಅವರು ಶಿರೂರು ಕರಾವಳಿಯ ಕುಟುಂಬವೊದಕ್ಕೆ ರೋಟರಿ ಕ್ಲಬ್ ಬೈಂದೂರು ವತಿಯಿಂದ ನಿರ್ಮಿಸಲಾದ ಮನೆ ಹಸ್ತಾಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರೋಟರಿಯ ಶಾಶ್ವತ ಯೋಜನೆಯಾಗಿ ಅರ್ಹ ಕುಟುಂಬಕ್ಕೆ ಮನೆ ನಿರ್ಮಿಸಿಕೊಡಲಾಗಿದೆ ಎಂದರು. ರೋಟರಿ ಜಿಲ್ಲೆ 3182 ಝೋನ್1ರ ಸಹಾಯಕ ಗವರ್ನರ್ ಡಾ. ಸಂದೀಪ್ ಶೆಟ್ಟಿ ಅವರು ನೂತನ ಗೃಹವನ್ನು ಉದ್ಘಾಟಿಸಿ ಶುಭಹಾರೈಸಿದರು. ರೋಟರಿ ವಲಯ ಸೇನಾನಿ ರಂಜಿತ್ ಕುಮಾರ್ ಶೆಟ್ಟಿ, ಬೈಂದೂರು ರೋಟರಿ ಸದಸ್ಯರುಗಳಾದ ಐ. ನಾರಾಯಣ, ಹರೀಶ್ ಶೇಟ್, ರೋಟರಿ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಉಪ್ಪುಂದ, 2024-25 ಸಾಲಿನ ನಿಯೋಜಿತ ಅಧ್ಯಕ್ಷ ಮೋಹನ್ ರೇವಣ್ಕರ್, ನಿಯೋಜಿತ ಕಾರ್ಯದರ್ಶಿ ಸುನಿಲ್ ಹೆಚ್. ಜಿ ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ. ಇಂದು ರೋಟರಿ ಮೂಲಕ ನಾವು ಮಾಡುವ ಸೇವೆ ವಿದ್ಯಾರ್ಥಿಗಳ ಭವಿಷ್ಯ ಕಟ್ಟಿಕೊಡಲಿದೆ ಎಂಬ ಹೆಮ್ಮ ನಮ್ಮದಾಗಿದೆ ಎಂದು ರೋಟರಿ ಝೋನ್1ರ ಸಹಾಯಕ ಗವರ್ನರ್ ಡಾ. ಸಂದೀಪ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ರೋಟರಿ ಕ್ಲಬ್ ಬೈಂದೂರು ವತಿಯಿಂದ ರತ್ತೂಬಾಯಿ ಜನತಾ ಪ್ರೌಢಶಾಲಾಗೆ ಕೊಡುಗೆಯಾಗಿ ನೀಡಿದ 1.40ಲಕ್ಷ ಮೌಲ್ಯದ ಇಂಟರ್ಯಾಕ್ಟಿವ್ ಡಿಜಿಟಲ್ ಬೋರ್ಡ್ಗೆ ಚಾಲನೆ ನೀಡಿ ಮಾತನಾಡಿ ಬೈಂದೂರು ರೋಟರಿ ನಿರಂತರವಾಗಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಈ ಶಾಲೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಗುಣಾತ್ಮಕ ಕಲಿಕೆಗೆ ಪೂರಕ ವ್ಯವಸ್ಥೆ ಕಲ್ಪಿಸುವುದು ಶ್ಲಾಘನೀಯ ಎಂದರು. ವಿವಿವಿ ಮಂಡಳಿ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಅವರು ಮಾತನಾಡಿ ನಮಗಾಗಿ ಬದುಕುವುದು ಮಾತ್ರವಲ್ಲದೇ ಸಮಾಜಕ್ಕಾಗಿ ಬದುಕುವುದು ಮುಖ್ಯ. ಉದ್ಯಮ ಹಾಗೂ ಬದುಕಿನ ನಿರಂತರ ಹೋರಾಟದ ನಡುವೆಯೂ ಸಮಾಜ ಸೇವೆಗಾಗಿ ಸಮಯ ಮೀಸಲಿಡುವವರು ನಿಜಕ್ಕೂ ಮಾದರಿ ವ್ಯಕ್ತಿಗಳು ಎಂದರು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ್ ಪ್ರಭು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.28: ಹೊಸ್ಕೋಟೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ ಆಡಳಿತ ಮಂಡಳಿ ಚುನಾವಣೆಯು ನ್ಯಾಯಸಮ್ಮತವಾಗಿ ನಡೆದಿಲ್ಲವೆಂದು, 2023ರ ಅಗಸ್ಟ್ 27ರಂದು ನಡೆದ ಆಡಳಿತ ಮಂಡಳಿ ಸದಸ್ಯರ ಚುನಾವಣೆಯನ್ನು ರದ್ದುಗೊಳಿಸಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯ ತೀರ್ಪು ನೀಡಿದೆ. ಹೊಸ್ಕೋಟೆ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯು ನ್ಯಾಯಸಮ್ಮತವಾಗಿ ನಡೆದಿಲ್ಲ ಎಂದು ಹೊಸ್ಕೋಟೆ ನಿವಾಸಿ, ಸಂಘದ ಸದಸ್ಯ ಗೋಪಾಲ ಪೂಜಾರಿ ಎಂಬುವವರು ಸಹಕಾರಿ ಸಂಘಗಳ ಸಹಾಯಕ ನಿಬಂಧಕರಿಗೆ ದೂರು ನೀಡಿದ್ದರು. 123 ಜನ ಅರ್ಹ ಮತದಾರರಿದ್ದರೂ ಮತದಾನದ ದಿನದಂದು ಕೇವಲ 75 ಜನರ ಮತದಾರರ ಪಟ್ಟಿ ತಯಾರಿಸಿ ಚುನಾವಣೆ ನಡೆಸಿದ್ದು, 43 ಜನರನ್ನು ಕೈಬಿಡಲಾಗಿತ್ತು. ಇದಕ್ಕೆ ಯಾವುದೇ ನೋಟಿಸು ನೀಡಿರಲಿಲ್ಲ. ಇದು ಉದ್ದೇಶಪೂರ್ವಕವಾಗಿ ಮಾಡಿದ ಪ್ರಕ್ರಿಯೆ ಎಂದು ಹೊಸ್ಕೋಟೆಯ ಗೋಪಾಲ ಪೂಜಾರಿ ದೂರಿದ್ದರು. ಸಂಘದ ಆಡಳಿತ ಮಂಡಳಿಯ ಚುನಾವಣೆ ಪೂರ್ವದಲ್ಲಿ ಕರ್ನಾಟಕ ಸಹಕಾರ ಸಂಘಗಳ ನಿಯಮ 13-ಡಿ ಪ್ರಕಾರ ನೋಟೀಸು ನೀಡಿಲ್ಲ. ಸಂಘದ ದಿ.27-08-2023ರಂದು ನಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) 2024-25ನೇ ಸಾಲಿನ ಶಾಲಾ ಸಂಸತ್ತು ಚುನಾವಣೆ ಮೊಬೈಲ್ ಇವಿಎಮ್ ಮೂಲಕ ಗುರುವಾರ ಶಾಲಾ ವಠಾರದಲ್ಲಿ ನಡೆಯಿತು. ಸಂಸ್ಥೆಯ ಉಪಪ್ರಾಂಶುಪಾಲರಾದ ಕಿರಣ ಹೆಗ್ಡೆ ಅವರು ಮುಖ್ಯ ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು. ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಸುವಿಕೆ, ಪರಿಶೀಲನೆ, ಹಿಂತೆಗದುಕೊಳ್ಳುವಿಕೆ, ಮತದಾನ, ಫಲಿತಾಂಶ ಘೋಷಣೆ ಎಲ್ಲವನ್ನೂ ಅತ್ಯಂತ ಕ್ರಮಬದ್ಧವಾಗಿ ನಡೆಸಲಾಯಿತು. ಆಧಾರ ಕಾರ್ಡ್ ಅಥವಾ ಬ್ಯಾಂಕ್ ಪಾಸ್ ಪುಸ್ತಕವನ್ನು ದಾಖಲೆಯಾಗಿ ಬಳಸಿ ಸುಮಾರು 440 ವಿದ್ಯಾರ್ಥಿಗಳು ಮತದಾನ ಮಾಡಿದರು. ಈ ಸಂದರ್ಭದಲ್ಲಿ ಶಾಲೆಗೆ ಭೇಟಿ ನೀಡಿದ ಕುಂದಾಪುರದ ಸಹಾಯಕ ಆಯುಕ್ತೆ ರಶ್ಮಿ ಎಸ್. ಆರ್. ಹಾಗೂ ತಹಶೀಲ್ದಾರ್ ಶೋಭಾಲಕ್ಷ್ಮೀ ಅವರು ಚುನಾವಣಾ ಪ್ರಕ್ರಿಯೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಎಸಿ ರಶ್ಮಿ ಎಸ್.ಆರ್. ಅವರು ಮಾತನಾಡಿ, ಮಕ್ಕಳಿಗೆ ಚುನಾವಣಾ ಶಿಕ್ಷಣ ನೀಡುವುದರಿಂದ ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ ಇನ್ನಷ್ಟು ಯಶ್ವಸ್ಸು ಸಾಧ್ಯ ಎಂದು ಹೇಳಿದರು. ಚುನಾವಣೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬವಳಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಸಂಘದ ನೇತೃತ್ವದಲ್ಲಿ ನಿರ್ಮಾಣವಾಗಲಿರುವ ನೂತನ ರಂಗಮಂದಿರದ ಶಂಕುಸ್ಥಾಪನೆಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಉದ್ಯಮಿ ಗೋಕುಲ ಜಿ. ಶೆಟ್ಟಿ ಅವರು ನೆರವೇರಿತು. ಧಾರ್ಮಿಕ ಪೂಜಾ ಕಾರ್ಯಕ್ರಮವನ್ನು ಹಳೆ ವಿದ್ಯಾರ್ಥಿಯೂ ಆದ ತಿರುಮಲೇಶ ಭಟ್ ಮಕ್ಕಿ ದೇವಸ್ಥಾನ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ರಘುರಾಮ ಶೆಟ್ಟಿ ಗೋಳಿಕಟ್ಟೆ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಘವೇಂದ್ರ ಗಾಣಿಗ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಘವೇಂದ್ರ ಆಚಾರಿ ಕಟ್ಟಿನಮಕ್ಕಿ, ಕೋಶಾಧಿಕಾರಿ ಶಂಕರಶೆಟ್ಟಿ ಗಾಯಾಡಿ, ಹಿರಿಯರಾದ ಸೂಲಿಯಣ್ಣ ಶೆಟ್ಟಿ, ಸಂಘದ ಕ್ರೀಡಾ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ವಕೀಲರು ಗಂಟಿಹೊಳೆ, ಅರ್ಚಕರಾದ ಗಣಪತಿ ಭಟ್,ಎಸ್ ಡಿ ಎಂ. ಸಿ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯ ಎನ್ ಕೆ ಬಿಲ್ಲವ, ಅಧ್ಯಾಪಕ ವೃಂದ, ಪಾಲಕ ಪೋಷಕರು ಮತ್ತು ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಏಳು ಪರೀಕ್ಷಾ ಕೇಂದ್ರದಲ್ಲಿ ಜೂನ್ 30 ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಟಿ.ಇ.ಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶಿಕ್ಷಕರಾ ಅರ್ಹತಾ ಪರೀಕ್ಷೆಯು ಜೂನ್ 30 ರಂದು ಜಿಲ್ಲೆಯ ಏಳು ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ಚ್ಛಕ್ತಿಯಿಂದ ಬೆಳಕಿನ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಮೊದಲ ಅಧಿವೇಶನ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ನಡೆಯಲಿದ್ದು, ಒಟ್ಟು 960 ಅಭ್ಯರ್ಥಿಗಳು ಹಾಗೂ ಅಪರಾಹ್ನ 2 ರಿಂದ 4.30 ರ ವರೆಗೆ ಎರಡನೇ ಅಧಿವೇಶನ ನಡೆಯಲಿದ್ದು, ಒಟ್ಟು 1653 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು. ಪರೀಕ್ಷಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು ಹಾಗೂ ನಿಟ್ಟೆಯ ವ್ಯಾಪ್ತಿಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಭೂ ಸ್ವಾಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಿಸಿ, ಉದ್ಯೋಗ ಸೃಷ್ಠಿಸಿ, ಸ್ಥಳೀಯ ಜನರಿಗೆ ಉದ್ಯೋಗ ಲಭಿಸಬೇಕೆಂಬ ಆಶಯದೊಂದಿಗೆ ಹೆಬ್ರಿ ತಾಲೂಕಿನ ಶಿವಪುರ ಹಾಗೂ ಕೆರೆಬೆಟ್ಟು ಗ್ರಾಮಗಳಲ್ಲಿ 113.59 ಎಕ್ರೆ, ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ 50.42 ಎಕ್ರೆ, ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ 101.19 ಎಕ್ರೆ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್, ಶಿರೂರು ಅಸೋಶಿಯೇಷನ್ ಹಾಗೂ ಕುಂದಾಪುರ ದೇವಾಡಿಗ ಮಿತ್ರ ದುಬೈ ಜಂಟಿಯಾಗಿ ಹಮ್ಮಿಕೊಂಡಿದ್ದ ಸೌಹಾರ್ದ ಭೇಟಿ ಹಾಗೂ ಕಾರ್ಯಕ್ರಮಕ್ಕಾಗಿ ದುಬೈ ಪ್ರವಾಸ ಕೈಗೊಂಡಿದ್ದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ನಮ್ಮ ಕುಂದಾಪ್ರ ಕನ್ನಡ ಬಳಗದ ಗೌರವಾಧ್ಯಕ್ಷರುಗಳಾದ ರಾಮೀ ಗ್ರೂಪ್ನ ವರದರಾಜ ಶೆಟ್ಟಿ, ಫಾರ್ಚೂನ್ ಗ್ರೂಪ್ನ ವಕ್ವಾಡಿ ಪ್ರವೀಣಕುಮಾರ್ ಶೆಟ್ಟಿ, ಶಿರೂರು ಅಸೋಸಿಯೇಷನ್ ಪ್ರಧಾನ ಪೋಷಕ ಮಣೆಗಾರ್ ಮೀರಾನ್ ಸಾಹೇಬ್, ಕದಂ ರೂವಾರಿ, ಎಲಿಗೆಂಟ್ ಗ್ರೂಪ್ ಎಂಡಿ ದಿನೇಶ್ ದೇವಾಡಿಗ ನಾಗೂರು, ಕುಂದಾಪ್ರ ಕನ್ನಡ ಬಳಗ ಗಲ್ಫ್ ಅಧ್ಯಕ್ಷರಾದ ಸದನ್ ದಾಸ್, ಕಾರ್ಯದರ್ಶಿ ಸುಧಾಕರ್ ಪೂಜಾರಿ, ಬೈಂದೂರಿನ ಉದ್ಯಮಿಗಳಾದ ಕೆ. ವೆಂಕಟೇಶ್ ಕಿಣಿ, ಬಿ.ಎಸ್. ಸುರೇಶ್ ಶೆಟ್ಟಿ, ಕೃಷ್ಣಪ್ರಸಾದ್ ಅಡ್ಯಂತಾಯ, ಅರುಣ್ ಕುಮಾರ್ ಶಿರೂರು ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.27: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು. ಸಾರ್ವಜನಿಕರು ತಗ್ಗು ಪ್ರದೇಶ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪಬೇಕು ಅಥವಾ ಅಗತ್ಯವಿದ್ದಲ್ಲಿ ಈಗಾಗಲೇ ಸಂಬAಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆಯಬೇಕು. ತುರ್ತು ಸೇವೆಗೆ ಶುಲ್ಕ ರಹಿತ ಸಂಖ್ಯೆ: 1077 ಹಾಗೂ ದೂ.ಸಂ:0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. “ಡ್ರಗ್ಸ್ ಸೇವನೆಯಂಥ ದುಶ್ಚಟವು ವ್ಯಕ್ತಿಯ ಕೌಟುಂಬಿಕ ಮತ್ತು ಸಾಮಾಜಿಕ ವಲಯಗಳಲ್ಲೂ ಮಾರಕ ಪರಿಣಾಮ ಬೀರುತ್ತದೆ. ಮಾದಕ ದ್ರವ್ಯ ವ್ಯಸನಿಗಳು ದುಶ್ಚಟಕ್ಕೊಳಗಾದ ಎಷ್ಟೋ ವರ್ಷಗಳ ನಂತರವೂ ಸುಭದ್ರ ಜೀವನವನ್ನು ಸಡೆಸುವುದು ಕಷ್ಟವಾಗುವುದರಿಂದ ಪ್ರಾರಂಭದಲ್ಲೇ ದುಶ್ಚಟಗಳಿಂದಾಗುವ ಹಾನಿಗಳ ಬಗ್ಗೆ ಎಚ್ಚರವಹಿಸಬೇಕು” ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿ ವಿನಯ್ ಕೊರ್ಲಳ್ಳಿಯವರು ಹೇಳಿದರು.ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ- 2024, ಇದರ ಪ್ರಯುಕ್ತ ಕುಂದಾಪುರ ಪೊಲೀಸ್ ಠಾಣೆಯ ಸಹಯೋಗದಲ್ಲಿ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ನಡೆದ ಮಾಹಿತಿ ಉಪನ್ಯಾಸದಲ್ಲಿ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿ ಅವರು ಇಂದಿನ ಯುವಪೀಳಿಗೆಯು ಎಲ್ಲೆಂದರಲ್ಲಿ ಲಭ್ಯವಿರುವ ವಿವಿಧ…
