Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಗೋಪಾಲ ಪೂಜಾರಿ ಅವರ ಸೋಲು ಇಂದಿಗೂ ನಮಗೆ ಆಘಾತಕಾರಿಯಾಗಿದ್ದು, ಅವರ ಸೋಲಿನ ನೋವನ್ನು ಗೀತಾ ಶಿವರಾಜಕುಮಾರ್ ಅವರ ಗೆಲುವಿನೊಂದಿಗೆ ಮರೆಯೋಣ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದರು. ಅವರು ಬೈಂದೂರು – ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೂರು ಸಾಲಿಮಕ್ಕಿಯಲ್ಲಿ ಗುರುವಾರ ಜರುಗಿದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ದಿವಂಗತ ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಜನರಿಗಾಗಿ ನೀಡಿದ ಕೊಡುಗೆಗಳು ಇಂದಿಗೂ ಜಾರಿಯಲ್ಲಿದೆ. ರಾಜ್ಯ ಕಾಂಗ್ರೆಸ್ ಸರಕಾರದ ನೀಡಿದ ಗ್ಯಾರೆಂಟಿ ಯೋಜನೆಗಳು ಪ್ರತಿ ಮನೆಯನ್ನೂ ತಲುಪಿದೆ. ಗೀತಾ ಶಿವರಾಜಕುಮಾರ್ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ. ಅವರನ್ನು ಗೆಲ್ಲಿಸುವ ಮೂಲಕ ಋಣ ತೀರಿಸಿ ಎಂದರು. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ತಂದೆಯವರು ಜನರಿಗಾಗಿ ನೀಡಿದ ಯೋಜನೆಗಳು ಕೋಟ್ಯಂತರ ಮಂದಿಗೆ ನೆರವಾಗಿದೆ. ಅವರ ಜನಸೇವೆಯ ದಾರಿಯಲ್ಲಿಯೇ ಮುಂದುವರಿಯಬೇಕೆಂಬ ಆಸೆ ನನ್ನದು. ಈ ಭಾರಿ ಗೆಲುವಿಗೆ ಅವಕಾಶ ಮಾಡಿಕೊಡಿ ಎಂದು ವಿನಂತಿಸಿದರು.…

Read More

ಕುಂದಾಪ್ರ ಡಾಟ್ ಕಾಂಸತೀಶ್ ನೀನಾಸಂ ಹಾಗೂ ಡಿಂಪಲ್ ಕ್ವೀನ್ ರಚಿತರಾಮ್ ಅಭಿನಯದ ಮ್ಯಾಟ್ನಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮ್ಯಾಟಿ ಸಿನಿಮಾದ ಟ್ರೈಲರ್ ಲಾಂಚ್ ಮಾಡುವ ಮೂಲಕ ಸಿನಿಮಾಗೆ ಸಾಥ್ ನೀಡಿದರು. ಇಷ್ಟು ದಿನಗಳ ಕಾಲ ತೆರೆ ಮೇಲೆ ಕ್ಯೂಟ್ ಹಾಗೂ ರೋಮ್ಯಾಂಟಿಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದ ರಚಿತಾ ರಾಮ್ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಸತೀಶ್ ನಿನಾಸಂ ಕೂಡ ಇದೆ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಸದ್ಯ ರಿಲೀಸ್ ಆಗಿರುವ ಟ್ರೈಲರ್ ಸಾಕಷ್ಟು ಕುತೂಹಲ ಮೂಡಿಸಿದ್ದು ಸಿನಿಮಾದಲ್ಲಿ ಯಾರು ಡೆವಿಲ್ ಎನ್ನುವುದು ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಸತೀಶ್, ರಚಿತಾ ರಾಮ್ ಸೇರಿದಂತೆ ಅದಿತಿ ಪ್ರಭುದೇವಾ ಶಿವರಾಜ್ ಕೆಆರ್ ಪೇಟೆ, ನಾಗಭೂಷಣ್, ಪೂರ್ಣ ಮೈಸೂರು, ದಿಗಂತ್ ದಿವಾಕರ್, ತುಳಸಿ ಶಿವರಾಮ್ ತಬಲ ನಾಣಿ ಹೀಗೆ ಸಾಕಷ್ಟು ಕಲಾವಿದರು ಅಭಿನಯ ಮಾಡಿದ್ದಾರೆ. ಇನ್ನು ಮ್ಯಾಟ್ನಿ ಸಿನಿಮಾವನ್ನು ಮನೋಹರ್ ಕಾಂಪಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೊಂಕಣಿ ಖಾರ್ವಿ ಸಮಾಜದ ಆರಾಧ್ಯ ಕ್ಷೇತ್ರ ಖಾರ್ವಿಕೇರಿ ಶ್ರೀಮಹಾಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬಣ್ಣದ ಅಲಂಕಾರ ಪೂಜೆ ನೆರವೇರಿತು. ಹೋಳಿ ಉತ್ಸವ ಕೊನೆಯ ಆಚರಣೆ ಯ ಈ ವಿಶೇಷ ಪೂಜಾ ವಿಧಿಯಲ್ಲಿ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. 6 ದಿನಗಳ ಹೋಳಿ ಉತ್ಸವದ ಕೊನೆಯ ದಿನ ಶ್ರೀ ದೇವರಿಗೆ ವಿಶೇಷ ಅಭಿಷೇಕದ ಬಳಿಕ ಬಣ್ಣಗಳಿಂದ ಅಲಂಕರಿಸಲಾಯಿತು. ನಾನಾ ಬಣ್ಣಗಳನ್ನು ದೇವಿಯ ಸಮ್ಮುಖ ಇಟ್ಟು ಮಂಗಳಾರತಿ ಬೆಳಗ ಲಾಯಿತು. ಬಣ್ಣದ ನೀರಿನ ವೈವೇದ್ಯ ಬಳಿಕ ಭಕ್ತರಿಗೆ ಸಮರ್ಪಿಸಿ ಹಂಚಲಾಯಿತು. ಬಣ್ಣ ಹಾಗೂ ಬಣ್ಣದ ನೀರನ್ನು ಪ್ರಸಾದವಾಗಿ ಸ್ವೀಕರಿಸಿದ ಭಕ್ತರು ಸಮಾಜದ ಪ್ರತಿ ಮನೆಗಳಿಗೂ ವಿತರಿಸಿ, ಪರಸ್ಪರ ಹಚ್ಚಿಕೊಂಡು ಸಂಭ್ರಮಿಸಿದರು. ಸಾಂಪ್ರದಾಯಿಕ ಗುಮಟೆ ವಾದನದೊಂದಿಗೆ ದೇವಳಕ್ಕೆ ಆಗಮಿಸಿದ ಭಕ್ತರು, ಸಂಜೆಯ ವೇಳೆಗೆ ಕುಂದಾಪುರ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹೋಳಿ ಹಬ್ಬವನ್ನು ಸಂಭ್ರಮಿಸಿದರು. ಈ ಈ ಸಂದರ್ಭ ದೇವಳದ ಅಧ್ಯಕ್ಷ ಜಯಾನಂದ ಖಾರ್ವಿ, ಖಜಾಂಚಿ ರಾಜು ನಾಯ್ಕ, ಮೊತ್ತೇಸರರಾದ ಶಂಕರ ಕೊಗ್ಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮಿಯೋರ್ವರಿಗೆ ವಂಚಿಸಿ ಜೈಲುಪಾಲಾಗಿ, ಸದ್ಯ ಬೇಲ್ ಪಡೆದು ಹೊರಗಿರುವ ಚೈತ್ರಾ ಕುಂದಾಪುರ ಮತ್ತು ಸಹಚರರು ಮತ್ತೆ ಪುಂಡಾಟಕ್ಕೆ ಇಳಿದಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ವಂಚನೆ ಪ್ರಕರಣದ ಪ್ರಮುಖ ಸಾಕ್ಷಿಯೋರ್ವ ಈ ಬಗ್ಗೆ ಚಿಕ್ಕಮಗಳೂರು ಎಸ್ಪಿಗೆ ದೂರು ನೀಡಿದ್ದಾನೆ. ಚೈತ್ರಾ ಗ್ಯಾಂಗ್‌ನ ಟಿಕೆಟ್ ಡೀಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿರುವ ರಾಮಕುಮಾರ್ ಕೊಲೆಗೆ ಯತ್ನ ಆರೋಪ ಕೇಳಿಬಂದಿದೆ. ಸಲೂನ್ ಮಾಲೀಕನಾಗಿರುವ ರಾಮಕುಮಾರ್ ಮೇಲೆ ಗಗನ್ ಕಡೂರು ಕಡೆಯವರಿಂದ ದಾಳಿ ನಡೆದಿದೆ ಎಂದು ದೂರು ದಾಖಲಿಸಿದ್ದಾನೆ. ಗೋವಿಂದ ಪೂಜಾರಿ ಎಂಬುವವರಿಗೆ ವಂಚನೆ ಕೇಸ್ನಲ್ಲಿ ಪ್ರಮುಖ ಸಾಕ್ಷಿಯಾಗಿರುವ ರಾಮಕುಮಾರ್ ಎಂಬುವವರಿಗೆ ಸಾಕ್ಷಿ ಹೇಳದಂತೆ ಆರೋಪಿ ಕಡೆಯಿಂದ ಬೆದರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾನೆ. ಈ ಬಗ್ಗೆ ಮೊದಲಿಗೆ ಕಡೂರು ಠಾಣೆಯಲ್ಲಿ ದೂರು ನೀಡಲಾಗಿತ್ತು ಆದರೆ ಸರಹದ್ದು ಸಮಸ್ಯೆ ಕಾರಣಕ್ಕಾಗಿ ಬೀರೂರು ಠಾಣೆಗೆ ತೆರಳಿ ದೂರು ನೀಡಲಾಗಿತ್ತು. ಹಲ್ಲೆ, ಗಾಯ ಬಗ್ಗೆ ವೈದ್ಯಕೀಯ ವರದಿ ಇದ್ದರೂ ಎಫ್.ಐ.ಆರ್ ದಾಖಲಿಸದೇ ಎನ್.ಸಿ.ಆರ್ ದಾಖಲಿಸಿ ಕಳುಹಿಸಿದ್ದರು. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ‘ಜಾನಪದ ಲೋಕ’ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್. ಸಚ್ಚಿದಾನಂದ ಚಾತ್ರ ಅವರು ಮಾತನಾಡಿ ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ತಮ್ಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ಶಂಕರದಾಸ ಚಂಡ್ಕಲಾ ಊಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಅರುಣ್ ಎ. ಎಸ್. ಕಾರ್ಯಕ್ರಮ ನಿರೂಪಿಸಿದರು. ನಂತರ ನಡೆದ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಕಲಾ ವಿಭಾಗದ ವಿದ್ಯಾರ್ಥಿಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮಾ.27: ತಾಲೂಕಿನ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆಶಾ ಎಸ್. ( 52) ಅವರು ಮಾರ್ಚ್ 20ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಹೊಸ ತಿರುವು ಸಿಕ್ಕಿದ್ದು, ಕಛೇರಿಯ ಸಿಬ್ಬಂದಿಗಳ ವಿರುದ್ಧವೇ ದೂರು ದಾಖಲಾಗಿದೆ. ಸಂಘದ ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ರಾವ್, ಸಿಬ್ಬಂದಿ ಮಂಜುನಾಥ್, ವಲಯ ಮೇಲ್ವಿಚಾರಕ ಉದಯ್ ಕುಮಾರ್ ಶೆಟ್ಟಿ ಅವರೇ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆ ಎಂದು ಮೃತ ಆಶಾ ಅವರ ಪತಿ ವಿಜಯ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕಚೇರಿಯ ಸಿಬ್ಬಂದಿ ಪತ್ನಿಗೆ ಸದಾ ಕಿರುಕುಳ ನೀಡುತ್ತಿದ್ದು,ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ಯಾರೊಂದಿಗೂ ಅವರು ಹೆಚ್ಚು ಮಾತನಾಡುತ್ತಿರಲಿಲ್ಲ ಇದರ ಬಗ್ಗೆ ವಿಚಾರಿಸಿದಾಗ ಸಂಘದ ಮಹೇಶ್ ರಾವ್, ಮಂಜುನಾಥ್ ಶೆಟ್ಟಿ ಅವರು ಸಂಘದಲ್ಲಿ ನಡೆದ ವಂಚನೆಯನ್ನು ತಾವೇ ಒಪ್ಪಿಕೊಳ್ಳುವಂತೆ ಒತ್ತಡ ಹಾಕಿದ್ದಲ್ಲದೆ ವಂಚನೆಗೊಳಗಾದ ಸಂಘದ ಹಣವನ್ನು ಕೂಡಲೇ ಕೊಡು ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೋ ಎಂದು ಸತಾಯಿಸುತ್ತಿದ್ದರು. ಮಾರ್ಚ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಹಳೆ ಗೀತಾಂಜಲಿ ಟಾಕೀಸ್‌ ಸಮೀಪದ ಅಪಾರ್ಟ್‌ಮೆಂಟಿನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಮುಖ್ಯ ರಸ್ತೆಯ ಗೀತಾಂಜಲಿ ಟಾಕೀಸ್ ಸಮೀಪ ನಡೆದಿದೆ. ಮೃತರನ್ನು ಲಕ್ಷ್ಮೀ ಪ್ರತಾಪ್ ಅವರ ಪತ್ನಿ ಲಕ್ಷ್ಮೀ ಪ್ರತಾಪ್ ನಾಯಕ್( 41) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ 7ಗಂಟೆಯ ಹೊತ್ತಿಗೆ ಪ್ಲಾಟಿನ ಮಹಡಿಯ ಮೇಲೆ ಒಣಗಿಸಲು ಹಾಕಿದ್ದ ತೆಂಗಿನ ಕಾಯಿ ತರಲು ಹೋಗಿದ್ದ ಲಕ್ಷ್ಮಿ ಪ್ರತಾಪ್ ಆಕಸ್ಮಿಕವಾಗಿ ಮಹಡಿಗೆ ಅಳವಡಿಸಲಾಗಿದ್ದ ಫೈಬರ್ ಶೀಟ್ ಮೇಲೆ ಕಾಲಿಟ್ಟಿದ್ದರಿಂದ ಅದು ತುಂಡಾಗಿ ಎರಡನೇ ಫ್ಲೋರಿಗೆ ಅವರು ಬಿದ್ದಿದ್ದಾರೆ ಇದರಿಂದ ತೀವ್ರ ತಲೆಗೆ ಪೆಟ್ಟಾಗಿದೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರ ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪ್ರಕರಣ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರತಿಷ್ಠಿತ ಭಂಡಾರ್ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಎಸ್. ಹರಿಚಾತ್ರ ಹಳ್ಳಿಹೊಳೆ ಹಾಗೂ ಕಾರ್ಯದರ್ಶಿಯಾಗಿ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭಾ ಚುನಾವಣೆಗೆ ಎದುರಿಸಲು ಪಕ್ಷ ತಯಾರಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯಿದೆ. ಈ ಭಾರಿ ಹೆಚ್ಚಿನ ಸ್ಥಾನಪಡೆಯುವ ವಿಶ್ವಾಸವಿದೆ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಮಂಗಳವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.‌ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪನವರು ಪಕ್ಷೇತರರಾಗಿ ಕಣಕ್ಕಿಳಿಯುವ ಬಗ್ಗೆ, ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಸದ್ಯ ನಾನು ದೇವರ ದರ್ಶನಕ್ಕಾಗಿ ಆಗಮಿಸಿದ್ದು, ರಾಜಕೀಯದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು. ದೇವಳದ ಅರ್ಚಕರಾದ ಕೆ.ಎನ್. ನರಸಿಂಹ ಅಡಿಗ ಹಾಗೂ ಕೆ.ವಿ.ಶ್ರೀಧರ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಯು.ಬಿ. ಶೆಟ್ಟಿ, ಅಶೋಕಕುಮಾರ ಕೊಡವೂರು, ಎಸ್. ರಾಜು ಪೂಜಾರಿ,‌ ಮಿಥುನ್ ರೈ, ದಿನೇಶ ಹೆಗ್ಡೆ ಮೊಳಹಳ್ಳಿ, ಪ್ರಸಾದ ಕಾಂಚನ್, ಸುರೇಂದ್ರ ಶೆಟ್ಟಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಬಳಿಕ ಧ್ವಜಾರೋಹಣ ನೆರವೇರಿಸಲಾಯಿತು. ತಂತ್ರಿ ನಿತ್ಯಾನಂದ ಅಡಿಗ ಅವರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಕಾರ್ಯನಿರ್ವಾಹಣಧಿಕಾರಿ ಪ್ರಶಾಂತ್ ಶೆಟ್ಟಿ, ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಂಡಬಳ್ಳಿ ಜಯರಾಮ್ ಶೆಟ್ಟಿ, ರತ್ನ ರಮೇಶ್ ಕುಂದರ್, ತಂತ್ರಿಗಳದ ನಿತ್ಯಾನಂದ ಅಡಿಗ, ಗೋವಿಂದ ಅಡಿಗ, ಸುಬ್ರಮಣ್ಯ ಅಡಿಗ ಹಾಗೂ ಅರ್ಚಕರು ಮತ್ತು ದೇವಸ್ಥಾನ ಸಿಬ್ಬಂದಿಗಳು, ಭಕ್ತರು ಉಪಸ್ಥಿತರಿದ್ದರು. ಸಂಜೆ ಮಹ್ಮಾಹಾ ರಥೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಮಾ.25ರಿಂದ ಮೊದಲ್ಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಏ.1ರ ಸಂಜೆ 5 ಗಂಟೆಗೆ ಮನ್ಮಹಾ ರಥೋತ್ಸವ ಜರುಗಲಿದೆ.

Read More