ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ್ ಅವರು ಅತ್ಯುತ್ತಮ ಸೇವೆಗಾಗಿ ರಾಷ್ಟ್ರಪತಿಗಳ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೂ ಪಾತ್ರರಾಗಿದ್ದರು. ಮೂಲತಃ ಬೈಂದೂರು ತಾಲೂಕು ಬಿಜೂರಿನವರಾದ ಶಂಕರ ಪೂಜಾರಿ ಅವರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ್ದು, ಓಟ, ರಿಲೇ ಮೊದಲಾದ ವಿಭಾಗದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಕವೂ ಭಾಗವಹಿಸಿದ್ದಾರೆ. 2014ರಲ್ಲಿ ನಡೆದ 26ನೇ ಮಲೇಷಿಯಾ ಅಥ್ಲೆಟಿಕ್ ಚಾಂಪಿಯನ್’ಶಿಪ್’ನಲ್ಲಿ 2 ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆದ್ದಿದ್ದರು.ಇತ್ತಿಚಿಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟ್ ಸ್ಪೋರ್ಟ್ಸ್ 2021 ಕ್ರೀಡಾಕೂಟ 100 ಹಾಗೂ 200 ಮೀಟರ್ ಓಟದ ಸ್ವರ್ಧೆಯಲ್ಲಿ ಅವರು ಬೆಳ್ಳಿಯ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಶಂಕರ ಪೂಜಾರಿ ಅವರು ಪ್ರಸ್ತುತ ಅವರು ಯಡ್ತಾಡಿ ಸೈಬ್ರಕಟ್ಟೆಯಲ್ಲಿ ನೆಲೆಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೀಕೊ ಕೈ ಕರಾಟೆ ಇಂಟರ್ನ್ಯಾಷನಲ್, ಇಂಡಿಯಾ ಮತ್ತು ಭಾರತ್ ಕರಾಟೆ ಅಕಾಡೆಮಿ ಸಂಯೋಜನೆಯಲ್ಲಿ ಇತ್ತಿಚಿಗೆ ದೆಹಲಿ ತಾಲ್ಕಟೋರನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ ಕುಮಿಟೆ ವಿಭಾಗದಲ್ಲಿ, ತಾಲೂಕಿನ ನೇರಳಕಟ್ಟೆಯ ಶ್ರೀಶ ಗುಡ್ರಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಶ್ರೀಶ ಗುಡ್ರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಗ ಮಾಡುತ್ತಿದ್ದು ಶೈಕ್ಷಣಿಕವಾಗಿಯೂ ಉತ್ತಮವಾಗಿದ್ದಾರೆ. ಗ್ರಾಮೀಣ ಪ್ರತಿಭೆಯಾದ ಶ್ರೀಶ ಗುಡ್ರಿ ಅವರು ಕೋಚ್ ಅಕ್ಷಯ್ ಹೆಮ್ಮಾಡಿ ಅವರಲ್ಲಿ ತರಬೇತಿ ಪಡಯುತ್ತಿದ್ದಾರೆ. ವಿದ್ಯಾರ್ಥಿ ಶ್ರೀಶ ಸಂತೋಷ್ ಮೇಲ್ ಹರ್ಜಿ ಮತ್ತು ಹೇಮಾವತಿ ಗುಡ್ರಿ ದಂಪತಿಯ ಪುತ್ರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದುಡಿಯುವ ಪ್ರತಿಯೊಬ್ಬರೂ ಕುಟುಂಬದ ಆಧಾರವಾಗಿರುತ್ತಾರೆ. ಪ್ರತಿಯೊಬ್ಬರ ಜೀವವೂ ಅಮೂಲ್ಯವಾದುದು. ಹಾಗಾಗಿ ನಮ್ಮ ಅಜಾಗರೂಕತೆಯಿಂದ ಕುಟುಂಬ ಸದಸ್ಯರಿಗೆ ನೋವು ನೀಡುವ ಬದಲಿಗೆ ಕಡಲಿಗೆ ಇಳಿಯುವಾಗ ಲೈಫ್ ಜಾಕೆಟ್, ರಸ್ತೆಯಲ್ಲಿ ತೆರಳುವಾಗ ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಸೋಮವಾರ ಬೈಂದೂರು ಶಾಸಕರ ಕಛೇರಿಯಲ್ಲಿ ಮೀನುಗಾರಿಕಾ ಇಲಾಖೆಯಿಂದ ಉಚಿತವಾಗಿ ಒದಗಿಸಲಾದ ಲೈಫ್ ಜಾಕೆಟ್ ಹಾಗೂ ರೀಲ್ಗಳನ್ನು ಮೀನುಗಾರರಿಗೆ ವಿತರಿಸಿ ಮಾತನಾಡಿ, ಮೀನುಗಾರಿಕೆಯಲ್ಲಿ ತೊಡಗಿಕೊಳ್ಳುವಾಗ ಲೈಫ್ ಜಾಕೇಟ್ ತೊಂದರೆಯಾಗುತ್ತದೆ ಎಂಬಿತ್ಯಾದಿ ಕಾರಣ ನೀಡುವ ಬದಲಿಗೆ ನಮ್ಮ ರಕ್ಷಣೆಗೆ ಮೊದಲ ಆದ್ಯತೆ ನೀಡುವುದು ಮುಖ್ಯ. ಕನಿಷ್ಠಪಕ್ಷ ಕಡಲಿಗೆ ಹೊರಡುವ ಹಾಗೂ ಹಿಂದಿರುಗುವ ಸಂದರ್ಭವಾದರೂ ಲೈಫ್ ಜಾಕೆಟ್ ಧರಿಸುವುದು ಮುಖ್ಯ ಎಂದ ಅವರು ಮೀನುಗಾರಿಕಾ ಇಲಾಖೆಯಲ್ಲಿದೇ ದಾನಿಗಳಿಂದಲೂ ಲೈಫ್ ಜಾಕೆಟ್ ವಿತರಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು. ಈ ವೇಳೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ವಿವೇಕ್, ಉಪ ನಿರ್ದೇಶಕರಾದ ಅಂಜನದೇವಿ, ಸಹಾಯಕ ನಿರ್ದೇಶಕರಾದ ಸುಮಲತಾ, ಬಿಜೆಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ 2023-24ನೇ ಸಾಲಿನ ಇಂಟರ್ಯಾಕ್ಟ್ ಕ್ಲಬ್ ಪದಪ್ರದಾನ ಸಮಾರಂಭ ಶನಿವಾರ ಜರುಗಿತು. ಬೈಂದೂರು ರೋಟರಿ ಪೂರ್ವಾಧ್ಯಕ್ಷ ಗೋವಿಂದ ನಾಯ್ಕನಕಟ್ಟೆ ಅವರು ನೂತನ ಇಂಟರ್ಯಾಕ್ಟ್ ಅಧ್ಯಕ್ಷೆ ಸಿಂಚನಾ ಹಾಗೂ ಕಾರ್ಯದರ್ಶಿ ವಿಕಾಸ್ ಅವರಿಗೆ ಪದಪ್ರದಾನ ನೆರವೇರಿಸಿದ ಬಳಿಕ ಮಾತನಾಡಿ, 23 ವಿದ್ಯಾರ್ಥಿಗಳಿಂದ ಆರಂಭವಾದ ಇಂಟರ್ಯಾಕ್ಟ್ ಕ್ಲಬ್ ಇಂದು ಪ್ರಪಂಚದ ಪ್ರತಿ ರೋಟರಿ ಕ್ಲಬ್ ಪ್ರಾಯೋಜನೆಯಡಿ 5ಕ್ಕೂ ಹೆಚ್ಚು ಕ್ಲಬ್ಗಳು ಕಾರ್ಯನಿರ್ವಹಿಸುತ್ತಿದೆ. ವಿಧ್ಯಾರ್ಥಿಗಳಿಗೆ ನಾಯಕತ್ವ ಹಾಗೂ ಸೇವೆಯ ಗುಣವನ್ನು ತಿಳಿಸುವುದು ಇಂಟರ್ಯಾಕ್ಟ್ ಕ್ಲಬ್ನ ಮುಖ್ಯ ಉದ್ದೇಶವಾಗಿದ್ದು, ಇದೂ ಹೀಗೆಯೇ ಮುಂದುವರಿದು ದೇಶಕ್ಕೆ ಉತ್ತಮ ಪ್ರಜೆ ಹಾಗೂ ನಾಯಕರನ್ನು ರೂಪಿಸುವ ತನಕವೂ ಸಾಗುತ್ತದೆ ಎಂದರು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಪದ್ಮನಾಭ ಎಚ್, ವಿದ್ಯಾರ್ಥಿ ನಾಯಕ ಆನಂದ್ ಉಪಸ್ಥಿತರಿದ್ದರು. ನೂತನ ಇಂಟರ್ಯಾಕ್ಟ್ ಅಧ್ಯಕ್ಷೆ ಸಿಂಚನ ತಮ್ಮ ತಂಡವನ್ನು ಪರಿಚಯಿಸಿದರು. ಕಾರ್ಯದರ್ಶಿ ವಿಕಾಸ್ ವರ್ಷದ ಯೋಜನೆಗಳನ್ನು ಸಭೆಯ ಮುಂದಿಟ್ಟರು. ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಧನೆ ಮಾಡುವ ಛಲ ಹಾಗೂ ಮನಸ್ಸು ಹರೇಕಳ ಹಾಜಬ್ಬರಂತೆ ಅಕ್ಷರಕ್ರಾಂತಿ ಹಾಗೂ ತುಳಸಿ ಗೌಡರಂತೆ ಪರಿಸರ ಕಾಳಜಿವಹಿಸಲು ಸಾಧ್ಯವಿದೆ. ಅದಕ್ಕೆ ಶ್ರೀಮಂತಿಕೆ, ಜಾತಿ, ಧರ್ಮ, ಭಾಷೆಯ ಅಗತ್ಯತೆಯಿಲ್ಲ ಎಂದು ಕುಂದಾಪುರ ಡಾ. ಬಿ.ಬಿ.ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಶನಿವಾರ ಇಲ್ಲಿನ ಉಪ್ಪುಂದ ಜೆಸಿಐ 2022-23ನೇ ಸಾಲಿನ 100 ಕಾರ್ಯಕ್ರಮದಲ್ಲಿ ಮಾತನಾಡಿ, ಪದ್ಮಶ್ರೀ ಪುರಸ್ಕೃತರಾದ ಇವರಿಬ್ಬರೂ ಕಡು ಬಡತನದಲ್ಲಿ ಅತ್ಯಂತ ಹಿಂದುಳಿದ ಕುಗ್ರಾಮದಲ್ಲಿ ಜನಿಸಿ, ನಿರಕ್ಷರಕುಕ್ಷಿಗಳಾದರೂ ಕೂಡ ತಾವು ಕಟ್ಟಿದಕೊಂಡ ಕನಸಿನ ಜತೆಗೆ ಸಮಾಜ ಸೇವೆ ಮೂಲಕ ಪ್ರಸ್ತುತ ದೇಶವೇ ಗುರುತಿಸಿದ ಮಾದರಿ ವ್ಯಕ್ತಿಗಳಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಇಂದಿನ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಇವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು. ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಹಾಗೂ ವೃಕ್ಷಮಾತೆ ತುಳಸಿಗೌಡ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. 100ನೇ ಕಾರ್ಯಕ್ರಮದ ಅಂಗವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿ, ಎನ್ಸಿಸಿ ಆರ್ಮಿ ಕೆಡೆಟ್ ಭರತ್ ಬಾಬು ದೇವಾಡಿಗ ಅವರು ಅಖಿತ ಭಾರತ ಮಟ್ಟದ 54ನೇ ಎನ್.ಸಿ.ಸಿ ವಿಶೇಷ ಪ್ರವೇಶ [NCC Special Entry] ಪರೀಕ್ಷೆಯಲ್ಲಿ 15ನೇ ರ್ಯಾಂಕ್ ಗಳಿಸಿದ್ದಾರೆ. ಅಖಿಲ ಭಾರತ ಮಟ್ಟದ ಪರೀಕ್ಷೆಯಲ್ಲಿ 50 ವಿದ್ಯಾರ್ಥಿಗಳು ಮಾತ್ರವೇ ಅರ್ಹತೆ ಪಡೆದಿದ್ದು ಈ ಪೈಕಿ ಭರತ್ ದೇವಾಡಿಗ ಕೂಡ ಓರ್ವರಾಗಿದ್ದಾರೆ. ಇವರನ್ನು ಕೇಂದ್ರದ ಸಿಬ್ಬಂದಿ ಆಯ್ಕೆ ಮಂಡಳಿ [ಎಸ್.ಎಸ್.ಬಿ] – 21 ಭೂಪಾಲ್ ಬೋರ್ಡ್ನಿಂದ ಶಿಫಾರಸು ಮಾಡಲಾಗಿದೆ. ಭರತ್ ತರಬೇತಿಯ ಬಳಿಕ ಲೆಫ್ಟಿನೆಂಟ್ ರ್ಯಾಂಕ್ ಹುದ್ದೆ ಪಡೆಯಲಿದ್ದಾರೆ. ಭರತ್ ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಿ .ಶುಭಕರಾಚಾರಿ, ಎನ್.ಸಿ.ಸಿ ಸೇನಾ ಅಧಿಕಾರಿ ಕ್ಯಾ. ಅಂಜನ್ ಕುಮಾರ್ ಎ. ಎಲ್, ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ “PANCHAPRAN PLEGDE” ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡು, ವಸಾಹತುಶಾಹಿ ಮನಸ್ಥಿತಿಯನ್ನು ಸಂಪೂರ್ಣ ತೊಡೆದು ಹಾಕುವುದರೊಂದಿಗೆ ನಮ್ಮ ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ದೇಶದ ಏಕತೆ ಮತ್ತು ಒಗ್ಗಟ್ಟಿಗೆ ಶ್ರಮಿಸುವುದರೊಂದಿಗೆ ದೇಶಕ್ಕಾಗಿ ಬಲಿದಾನಗೈದ ವೀರಯೋಧರಿಗೆ ಗೌರವ ಸಲ್ಲಿಸುತ್ತಾ ದೇಶ ರಕ್ಷಣೆ ಹಾಗೂ ಪ್ರಗತಿಗೆ ತನ್ನನ್ನು ತಾನು ಸಮರ್ಪಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ಎನ್.ಎಸ್.ಎಸ್ ಯೋಜನಾಧಿಕಾರಿಯಾದ ಉಮೇಶ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳಿಗೆ ಉತ್ತಮ ಸೇವೆ ಒದಗಿಸುವಂತೆ ಹಾಗೂ ತುರ್ತು ಸಂದರ್ಭದಲ್ಲಿ ಅಗತ್ಯವಿರುವ ಎಲ್ಲಾ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಸೂಚನೆ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಹಂತದಲ್ಲಿ ವಾಣಿಜ್ಯೇತರ ವಿಭಾಗಗಳಲ್ಲಿ ತೇರ್ಗಡೆಗೊಂಡು ಪ್ರಸ್ತುತ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸೇತುಬಂಧ ತರಗತಿಗಳನ್ನು ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಕೈಗಾರಿಕೆ, ಉದ್ಯಮ, ವ್ಯಾಪಾರ ಮುಂತಾದವುಗಳ ಬಗ್ಗೆ ಪ್ರಾತ್ಯಕ್ಷಿತೆಯನ್ನು ನೀಡುವುದು ಮತ್ತು ಪ್ರಾಯೋಗಿಕವಾಗಿ ವಾಣಿಜ್ಯ ವಿಷಯಗಳನ್ನು ಅರ್ಥೈಸುವ ನಿಟ್ಟಿನಲ್ಲಿ ಬೈಂದೂರು ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರ ಕೈಗಾರಿಕೆಗಳಾದ ಮುಳ್ಳುಗುಡ್ಡೆ ಸೌಪರ್ಣಿಕ ಹಂಚಿನ ಕಾರ್ಖಾನೆ, ಸೌಪರ್ಣಿಕ ಡೆಕೋರೇಟಿವ್ ಟೈಲ್ಸ್, ಸೌಪರ್ಣಿಕ ಗೇರುಬೀಜ ಕಾರ್ಖಾನೆಗೆ ಭೇಟಿ ನೀಡಲಾಯಿತು. ಈ ಸಂದರ್ಭ ಕಾರ್ಖಾನೆಯ ಮ್ಯಾನೇಜರಾದ ದಯಾನಂದ ಗಾಣಿಗ, ಅಕೌಂಟೆಂಟ್ ಸತೀಶ್ ಅಡಿಗ ಇವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಮಾಹಿತಿ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಜೇಶ್ ಶೆಟ್ಟಿ, ಸತೀಶ್ ಶೆಟ್ಟಿ, ದೀಪ ಪೂಜಾರಿ, ಶರತ್ ಕುಮಾರ್, ಅಕ್ಷಯ್ ಕುಮಾರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ಆಶ್ರಯದಲ್ಲಿ ಇಲ್ಲಿನ ವಡೇರಹೋಬಳಿಯಲ್ಲಿ ಜರುಗಿದ ಬ್ಲಾಕ್ ಮಟ್ಟದ ಚೆಸ್ ಪಂದ್ಯಾಟದಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಸ್ಕೂಲ್ 7ನೇ ತರಗತಿ ವಿದ್ಯಾರ್ಥಿ ಮುತ್ತು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿಜೇತ ವಿದ್ಯಾರ್ಥಿಗೆ ಶಾಲಾ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಅಭಿನಂದನೆ ತಿಳಿಸಿದೆ.
