ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ತಾಂತ್ರಿಕ ಸಮಸ್ಯೆಯಿಂದಾಗಿ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಹಂಗಾರಕಟ್ಟೆ ಬಳಿ ಸಂಭವಿಸಿದೆ. ಸೆಪ್ಟೆಂಬರ್ 17ರಂದು ಬೆಳಗ್ಗೆ ಕೋಡಿ ಬೆಂಗ್ರೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮಧ್ಯಾಹ್ನ ಹಂಗಾರಕಟ್ಟೆ ಬಂದರು ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇಂಜಿನ್ ಸ್ಥಗಿತಗೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಇಂಜಿನ್ ಪುನಃ ಆರಂಭಗೊಂಡಿಲ್ಲ. ಈ ನಡುವೆ, ಬಿರುಗಾಳಿ ಮತ್ತು ಅಲೆಗಳ ರಭಸಕ್ಕೆ ಬೋಟ್ ಸಮುದ್ರ ತೀರಕ್ಕೆ ಬಂದು ಕೋಡಿ ಕನ್ಯಾನ ಗ್ರಾಮದ ಕೋಡಿ ಬಳಿ ದಡಕ್ಕೆ ಅಪ್ಪಳಿಸಿತು. ಬೋಟ್ನಲ್ಲಿದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಬೋಟ್ ಮತ್ತು ಅದರಲ್ಲಿದ್ದ ಇತರೆ ಸಾಮಾಗ್ರಿಗಳು ಹಾನಿಗೊಳಗಾಗಿದ್ದು, ಸುಮಾರು 10 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ. ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಇದಾಗಿದೆ. ಈ ಘಟನೆ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಪರಿಶುದ್ಧ ಆಹಾರ ಸೇವನೆ ಬದುಕಿನ ಎಲ್ಲ ಹಂತಗಳಲ್ಲೂ ವ್ಯಕ್ತಿಗಳ ಮೊದಲ ಆದ್ಯತೆಯಾಗಿರುತ್ತದೆ. ಇಂಥ ಆಹಾರ ಪದಾರ್ಥಗಳನ್ನು ಶ್ರಮವಹಿಸಿ ಜನರಿಗೆ ತಲುಪಿಸುವ ಗುರುತರ ಜವಾಬ್ದಾರಿಯಿಂದ ಕೃಷಿಕಾಯಕದ ಬಗ್ಗೆ ಮತ್ತು ರೈತರು ಅನುಸರಿಸುವ ಸುರಕ್ಷಿತ ಆಧುನಿಕ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಆಸಕ್ತಿ ಇರಬೇಕು” ಎಂದು ಪ್ರಗತಿ ಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿ ಹೇಳಿದರು. ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾದ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ ರಿ., ಬೆಚ್ಚಳ್ಳಿಯ ಸಹಭಾಗಿತ್ವದಲ್ಲಿ ಆಯೋಜಿಸಿದ ಕೃಷಿ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಮಾತನಾಡಿ, ಕೃಷಿಯನ್ನು ವೃತ್ತಿಯನ್ನಾಗಿ ಮಾಡಿಕೊಳ್ಳಲು ಎಲ್ಲರಿಗೂ ಸಾಧ್ಯವಿಲ್ಲದಿದ್ದರೂ ಜೀವನದ ಪ್ರಮುಖ ಭಾಗವಾಗಿಸಿ ಕಾಳಜಿ ತೋರಿಸಲು ಸಾಧ್ಯವಿದೆ ಎಂದು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ತಿಳಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಕೃಷಿಗೀತೆಯನ್ನು ಹಾಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಾದಕ ವಸ್ತುಗಳ ಸೇವನೆಯು ಯುವಜನರ ಭವಿಷ್ಯದ ಜೀವನವನ್ನು ಹಾಳುಮಾಡುತ್ತದೆ. ಮಾದಕ ವ್ಯಸನಕ್ಕೆ ಒಳಗಾದ ಯುವಕರು ಅದರಿಂದ ಹೊರಬಂದು ಕ್ರಮಬದ್ಧ ಶಿಸ್ತು ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಯುವಜನರು ಮಾದಕ ವಸ್ತುಗಳಿಗೆ ದಾಸರಾಗಿ ಶಿಕ್ಷಣದಿಂದ ವಂಚಿತರಾಗುವುದರೊAದಿಗೆ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹೀಗಾಗದಂತೆ ನೋಡಿಕೊಳ್ಳಬೇಕು. ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲು ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು. ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್ಗಳಲ್ಲಿ ಸಿ.ಸಿ.ಟಿ.ವಿ ಆಳವಡಿಸಿರುವ ಬಗ್ಗೆ ನಿಯಮಿತವಾಗಿ ಪರಿಶೀಲಿಸಬೇಕು. ಅಂಚೆ ಇಲಾಖೆಯ ಅಧಿಕಾರಿಗಳು ಹೊರ ದೇಶಗಳಿಂದ ಬರುವ ಪಾರ್ಸೆಲ್ ಹಾಗೂ ಕೊರಿಯರ್ಗಳ ಮೇಲೆ ನಿಗಾ ಇರಿಸಿ ಸಂಶಯಾಸ್ಪದ ಅಂಚೆಪತ್ರಗಳು ಕಂಡುಬಂದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪವನ್ ರಿಷಾ, ಅಪೂರ್ವ ತಮ್ಮ ಅಪೂರ್ವ ಸಾಧನೆ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿನಿಂದ ಮನೆಗೆ ತೆರಳಬೇಕಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯ ಮೃತದೇಹ ಗಂಗೊಳ್ಳಿ ದಾಕುಹಿತ್ಲು ನದಿ ತೀರದಲ್ಲಿ ಪತ್ತೆಯಾಗಿದೆ. ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ, ಪ್ರಥಮ ಪಿಯುಸಿಯ ನಮೇಶ್ (17) ಮೃತ ವಿದ್ಯಾರ್ಥಿ. ಗುರುವಾರ ಬೆಳಿಗ್ಗೆ ಕಾಲೇಜಿಗೆ ತೆರಳಿದ್ದು ನಮೇಶ್ ಸಂಜೆ ನಾಲ್ಕು ಗಂಟೆಯವರೆಗೂ ಕಾಲೇಜಿನಲ್ಲಿದ್ದು ಆನಂತರ ಮನೆಗೆಂದು ತೆರಳಿದ್ದಾನೆ. ಆದರೆ ಸಂಜೆಯಾದರೂ ಮನೆಗೆ ಬರದಿದ್ದಾಗ ಹುಡುಕಾಟ ನಡೆಸಿದ್ದಾರೆ. ಬೈಕ್ನಲ್ಲಿ ತೆರಳಿದ್ದ ನಮೇಶ್ ಕನ್ನಡಕುದ್ರು ನದಿ ತೀರದಲ್ಲಿ ಬೈಕ್ ಹಾಗೂ ತನ್ನ ಕಾಲೇಜು ಬ್ಯಾಗ್ ಬಿಟ್ಟು ನಾಪತ್ತೆಯಾಗಿದ್ದನು. ಗುರುವಾರ ಸಂಜೆ ಹಾಗೂ ಶುಕ್ರವಾರ ಕೂಡ ಹುಟುಕಾಟ ಮುಂದುವರೆಸಿದ್ದು, ಅಗ್ನಿಶಾಮಕದಳ, ಗಂಗೊಳ್ಳಿಯ ಈಜುಪಟು ದಿನೇಶ್ ಖಾರ್ವಿ ಹಾಗೂ ಸ್ಥಳೀಯರು ನದಿಯಲ್ಲಿ ಸಂಜೆಯ ತನಕವೂ ಹುಟುಕಾಟ ನಡೆಸಿದ್ದರು. ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಹುಡುಕಾಟ ನಡೆಸಿದಾಗ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವೈಜ್ಞಾನಿಕ ಅಧ್ಯಯನಗಳ ಮೂಲಕ ಹೋಮಿಯೋಪಥಿಗೆ ಇನ್ನೂ ಹೆಚ್ಚಿನ ಮಾನ್ಯತೆ ಸಿಗಬೇಕು ಎಂದು ದೆಹಲಿಯ ಕೇಂದ್ರೀಯ ಹೋಮಿಯೋಪತಿ ಸಂಶೋಧನಾ ಪರಿಷತ್ನ ವೈಜ್ಞಾನಿಕ ಸಲಹಾ ಮಂಡಳಿ ಅಧ್ಯಕ್ಷ ಡಾ. ಎ. ಎಸ್. ಕುಮಾರ್ ಮಿತ್ರಚಂದ್ರ ಧಾವಲೆ ಹೇಳಿದರು. ಅವರು ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವತಿಯಿಂದ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆಯುತ್ತಿರುವ 2 ದಿನಗಳ ಪ್ರೊವಿನಿಯೋ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಹೊಮಿಯೋಪತಿ ಪಠ್ಯಕ್ರಮದಲ್ಲಿ ಸಂಶೋಧನಾ ವಿಧಾನಶಾಸ್ತ್ರ ವಿಷಯವನ್ನು ಪರಿಚಯಿಸಿರುವುದು ಉತ್ತಮ ನಿರ್ಧಾರ. ಇದರಿಂದ ಹೋಮಿಯೋಪಥಿ ವಿದ್ಯಾರ್ಥಿಗಳಿಗೆ ಹೋಮಿಯೋಪಥಿಯನ್ನು ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಮಾಡಲು, ಸಂಶೋಧನೆ ನಡೆಸಲು ಮತ್ತು ಲೇಖನಗಳನ್ನು ಪ್ರಕಟಿಸಲು ಸಹಾಯವಾಗುತ್ತದೆ. ಹೋಮಿಯೋಪಥಿಯಲ್ಲಿ ವೈಜ್ಞಾನಿಕವಾಗಿ ಸಾಬೀತಾದ ಅಧ್ಯಯನಗಳು ಮತ್ತು ಅವುಗಳ ಪ್ರಕಟಣೆಗಳಿಲ್ಲದೆ, ಅದಕ್ಕೆ ತಕ್ಕ ಮಾನ್ಯತೆ ಸಿಗುವುದಿಲ್ಲ. ಹೋಮಿಯೋಪಥಿಗೆ 250 ವರ್ಷಗಳ ಇತಿಹಾಸವಿದ್ದರೂ, ಅದನ್ನು ವಿಜ್ಞಾನವೆಂದು ಸ್ವೀಕರಿಸುವಲ್ಲಿ ಇನ್ನೂ ಅಡೆತಡೆಗಳಿವೆ. ವೈಜ್ಞಾನಿಕ ಅಧ್ಯಯನಗಳ ಚರ್ಚೆ ಇನ್ನಷ್ಟು ವಿಚಾರ ಸಂಕಿರಣಗಳಲ್ಲಿ ನಡೆಯಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಅವರ ಶಾಸಕರ ಅನುದಾನದಿಂದ ಕೋಟತಟ್ಟು ಪಡುಕರೆ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಶುಕ್ರವಾರ ಹಸ್ತಾಂತರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಜಾನಕಿ ಅವರು ಮಾತನಾಡಿ, ಪಂಚಾಯತ್ ವಾರ್ಡ್ ಸದಸ್ಯರಾದ ರವೀಂದ್ರ ತಿಂಗಳಾಯ ಅವರು ಬಹುಕಾಲದ ಬೇಡಿಕೆಯ ಕುಡಿಯುವ ನೀರಿನ ಘಟಕ ಮಂಜೂರು ಮಾಡಿಸಲು ಶ್ರಮಿಸಿದ್ದು ಅವರಿಗೆ ಹಾಗೂ ಅನುದಾನ ನೀಡಿದ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಅವರಿಗೆ ಶಾಲೆಯ ಮತ್ತು ವಿದ್ಯಾರ್ಥಿಗಳ ಪರವಾಗಿ ಧನ್ಯವಾದ ತಿಳಿಸಿದರು. ಕೋಟತಟ್ಟು ಪಂಚಾಯತ್ ಸದಸ್ಯರಾದ ಅಶ್ವಿನಿ ದಿನೇಶ್, ರವೀಂದ್ರ ತಿಂಗಳಾಯ, ಸೀತಾ, ಮುಖ್ಯೋಪಾಧ್ಯಾಯರಾದ ಜಾನಕಿ, ಮಾಜಿ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಮಾಜಿ ಉಪಾಧ್ಯಕ್ಷ ಲೋಕೇಶ್ ಶೆಟ್ಟಿ, ಮಾಜಿ ಪಂಚಾಯತ್ ಸದಸ್ಯ ರಾಮ ಎಂ. ಬಂಗೇರ, ಶಿಕ್ಷಕಿ ಸಂಗೀತ ಎಸ್.ಕೆ, ಗಣೇಶ್ ಆಚಾರಿ, ಲಕ್ಷಣ ಸುವರ್ಣ, ಶೈಲಜಾ ಎಲ್.ಆರ್, ವೀಣಾ ಪ್ರಕಾಶ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ಉದ್ದಿಮೆ ಪರವಾನಿಗೆ ಜೊತೆಗೆ ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಹೊಂದಬೇಕು ಎಂಬ ನಿಯಮ ಜಾರಿಯಲ್ಲಿದ್ದು, ಪ್ರಸ್ತುತ ಪ್ರಗತಿಯು ನಿರೀಕ್ಷಿತ ಮಟ್ಟದಲ್ಲಿ ಇರುವುದಿಲ್ಲ. ಪ್ರತ್ಯೇಕ ಪರವಾನಿಗೆ ಹೊಂದುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ದ್ವಿತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ನಿಗಾ ವಹಿಸಬೇಕು. ಕೋಟ್ಪಾ ಕಾಯಿದೆಯ ಉಲ್ಲಂಘನೆ ಕಂಡುಬಂದಲ್ಲಿ ಕೂಡಲೇ ಸಮಿತಿಗೆ ಮಾಹಿತಿ ನೀಡಬೇಕು ಎಂದ ಅವರು ಸ್ಥಳೀಯ ಸಂಸ್ಥೆಗಳು ನಿಯಮ ಮೀರಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆಯನ್ನು ರದ್ದು ಮಾಡಲು ಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತೀ ಜೋಡಿಗೆ 50,000 ರೂ. ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ:0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ದೇವಿ ಮಾರಿಕಾಂಬ ಸೌಹಾರ್ದ ಸಹಕಾರಿ ಸಂಘ ಕೋಡಿ ಕನ್ಯಾಣ ಇದರ 2024-258ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಶ್ರೀ ದೇವಿ ಮಾರಿಕಾಂಬ ನಾಲ್ಕು ಪಾದದ ಹೈಗುಳಿ ದೇವಸ್ಥಾನದ ವಠಾರದಲ್ಲಿ ಇತ್ತೀಚಿಗೆ ಜರುಗಿತು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ ಎಸ್.ಕೆ. ಮಾತನಾಡಿ, ಕರಾವಳಿ ಭಾಗದಲ್ಲಿ ಸಹಕಾರಿ ಸಂಘಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಸುತ್ತಿದೆ ಅದರಲ್ಲಿ ಶ್ರೀದೇವಿ ಮಾರಿಕಾಂಬ ಸಹಕಾರಿ ಸಂಘ ಜನಸ್ನೇಹಿಯಾಗಿ ಆರ್ಥಿಕ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ ಎಂದು ಸಂಘದ ಅಭಿವೃದ್ಧಿಗೆ ಸಲಹೆ ಸೂಚನೆ ನೀಡಿದರು. ಸಂಘವು ವರದಿ ವರ್ಷದಲ್ಲಿ 25,34,946 ರಷ್ಟು ಲಾಭವನ್ನು ಗಳಿಸಿ ಸದಸ್ಯರಿಗೆ ಶೇಕಡಾ 9.5 ಡಿವಿಡೆಂಡ್ ಸಂಸ್ಥೆಯ ಅಧ್ಯಕ್ಷ ಕೃಷ್ಣ ಕೆ. ಸಭೆಯ ಅಧ್ಯಕ್ಷತೆ ವಹಿಸಿ ಘೋಷಿಸಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮುಖ್ಯ ಶಿಕ್ಷಕಿ ಸಂಪ ಟೀಚರ್ ಹಾಗೂ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡ ಗಣಪ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವತಿಯಿಂದ…
