Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಪ್ರತಿಭೆ ನಿಮ್ಮದು ವೇದಿಕೆ ನಮ್ಮದು” ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 102 ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಇದೇ ವೇದಿಕೆಯಲ್ಲಿ ಫಣಿಗಿರಿ ಪ್ರತಿಷ್ಠಾನ, ಶಿರೂರು ಇವರಿಂದ ಪ್ರಕಟಿತ ಡಾ. 11 ಶಿವಕುಮಾರ ಅಳಗೋಡು ವಿರಚಿತ ಪೌರಾಣಿಕ ಯಕ್ಷಗಾನ ಪ್ರಸಂಗಗಳ ಕೃತಿ ಬಿಡುಗಡೆ ಕಾರ್ಯಕ್ರಮವೂ ಜರಗಿತು. ಕೃತಿ ಪರಿಚಯವನ್ನು ನಾಗರತ್ನ ಹೇರ್ಳೆ ಅವರು ಮಾಡಿದರು. ಕೃತಿಯನ್ನು ಸುಜಯೀಂದ್ರ ಹಂದೆ ಅವರು ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಫಣಿಗಿರಿ ಪ್ರತಿಷ್ಠಾನದ ಅಧ್ಯಕ್ಷ ಉಮೇಶ್ ಶಿರೂರು ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ತರಂಗಿಣಿ ಭಜನಾ ಮಂಡಳಿ ಉಡುಪಿ, ಇದರ ಮುಖ್ಯಸ್ಥೆ ಸುಲೇಖಾ ದಯಾನಂದ ಅವರನ್ನು ಅಕಾಡೆಮಿ ವತಿಯಿಂದ ಸಮ್ಮಾನಿಸಲಾಯಿತು. ನಂತರ ತರಂಗಿಣಿ ಭಜನಾ ಮಂಡಳಿ, ಉಡುಪಿ ಇವರು “ಭಜನ್ ಸಂಧ್ಯಾ ಕಾರ್ಯಕ್ರಮ ನಡೆಸಿಕೊಟ್ಟರು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಶನಿವಾರ ನಡೆಯಿತು. ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್‌ಐ ಮುಕ್ತ ಅವರು ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಎಸ್. ಡಿ. ಎಂ. ಸಿ. ಅಧ್ಯಕ್ಷ ರವಿಶಂಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ. ಸದಸ್ಯ ಅಶೋಕ್ ಪೂಜಾರಿ, ಎಎಸ್‌ಐ ರಾಘವೇಂದ್ರ ಪ್ರಸಾದ್, ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳಾದ ಸಂತೋಷ್‍, ಕೃಷ್ಣ, ಅಮರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ, ಸಹಶಿಕ್ಷಕರು ಉಪಸ್ಥಿತರಿದ್ದರು, ಶಿಕ್ಷಕಿಯರಾದ ಶಾಂತಿ ಸ್ವಾಗತಿಸಿದರು. ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ನಾಗರತ್ನ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಬೆಂಗಳೂರಿನ ಕ್ರೆಸ್ಟ್ ವಿವಿಯಲ್ಲಿ ನಡೆದ 38ನೇ  ಅಂತರ್ ವಿವಿ  ಆಗ್ನೇಯ ವಲಯದ ಸಾಂಸ್ಕೃತಿಕ ಯುವಜನೋತ್ಸವ – ‘ಕ್ರೆಸೆಂಡೋ’ದಲ್ಲಿ ಮಂಗಳೂರು ವಿವಿ ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಸಂಗೀತ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳಿಸಿ, ಸಮಗ್ರ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. ಜಾನಪದ ವಾದ್ಯ ಮೇಳ ಪ್ರಥಮ, ಭಾರತೀಯ ಶಾಸ್ತ್ರೀಯ ಸ್ವರ ವಾದ್ಯ (ಬಾನ್ಸೂರಿ)ದಲ್ಲಿ ಪ್ರಥಮ,  ಸಮೂಹ ಗೀತೆಯಲ್ಲಿ ದ್ವಿತೀಯ, ಜಾನಪದ ನೃತ್ಯ (ಗುಂಪು) ದ್ವಿತೀಯ, ಶಾಸ್ತ್ರೀಯ ಗಾಯನ ವೈಯಕ್ತಿಕದಲ್ಲಿ ದ್ವಿತೀಯ, ಶಾಸ್ತ್ರೀಯ ನೃತ್ಯದಲ್ಲಿ ತೃತೀಯ, ಭಾರತೀಯ ಲಘು ಶಾಸ್ತ್ರೀಯ ಸಂಗೀತದಲ್ಲಿ ತೃತೀಯ, ಪಾಶ್ಚಾತ್ಯ ವಾದ್ಯ ವೈಯಕ್ತಿಕ- ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ವೈಯಕ್ತಿಕ ಐದನೇ ಸ್ಥಾನ,  ಪಾಶ್ಚಾತ್ಯ ಗಾಯನ ಸಮೂಹ ಐದನೇ ಸ್ಥಾನ, ಏಕಾಂಕ ನಾಟಕದಲ್ಲಿ ಐದನೇ ಸ್ಥಾನ ಪಡೆದು ರನ್ಸ್‌ ಅಪ್ ಪಟ್ಟ ತನ್ನದಾಗಿಸಿಕೊಂಡಿತು. ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಆಳ್ವಾಸ್ ವಿದ್ಯಾರ್ಥಿಗಳುಭಾರತೀಯ ಶಾಸ್ತ್ರೀಯ ಸ್ವರ ವಾದ್ಯ(ಬಾನ್ಸೂರಿ)ದಲ್ಲಿ ಸ್ವಯಂ ಪ್ರಕಾಶ ಪ್ರಭು ಪ್ರಥಮ, ಶಾಸ್ತ್ರೀಯ ಗಾಯನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬ್ಯಾರೀಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ  ಪ್ರೇರಣೆ, ಜ್ಞಾಪಕಶಕ್ತಿ  ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ ಸೋಮವಾರದಂದು ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ಬೆಂಗಳೂರಿನ ಸಿ.ಇ.ಒ ಮತ್ತು ಸಂಸ್ಥಾಪಕರಾದ ಅಮೀನ್ ಇ ಮುದಸ್ಸರ್ ಅವರು ಆಗಮಿಸಿದ್ದರು. ಸಿಗ್ಮಾ ದ್ವಿತೀಯ ಪಿಯುಸಿ ತರಗತಿಗಳಿಗೆ ಬಹುವಿಧದ ಜ್ಞಾಪಕಶಕ್ತಿಯ ತಂತ್ರಗಳನ್ನು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಪುನಶ್ಚೇತನ ಶಿಬಿರವನ್ನು ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ವಹಿಸಿಕೊಂಡಿದ್ದರು. ಟ್ರಸ್ಟಿಗಳಾದ ಕಾರ್ಯಕ್ರಮದ ವೇದಿಕೆಯಲ್ಲಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ಉಪಪ್ರಾಂಶುಪಾಲೆ ಝಿಯಾನ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ .ಟಿ, ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಹೆಚ್. ಉಪಸ್ಥಿತರಿದ್ದರು. ಡಾ. ಆಸಿಫ್ ಬ್ಯಾರಿ ಪ್ರಸ್ತಾವಿಕವಾಗಿ ಮಾತನಾಡಿದರು. ಮನಃಶಾಸ್ತ್ರ ಉಪನ್ಯಾಸಕಿ ಲಾಮಿಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡಬಿದಿರೆಯ ಆಳ್ವಾಸ್ ಸೆಂಟ್ರಲ್ ಶಾಲೆಯಲ್ಲಿ ಡಿ.21ರಂದು ನಡೆದ ಎಐಸಿಎಸ್ ಮಟ್ಟದ ಅಂತರ್ ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆಯಿತು. 14 ವರ್ಷದೊಳಗಿನ ಬಾಲಕರ ವಿಭಾಗದ 600 ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ಸಿದ್ದಲಿಂಗ ಪಿ. ಓಲೇಕಾರ್ ದ್ವಿತೀಯ ಸ್ಥಾನವನ್ನು, 17 ವರ್ಷದೊಳಗಿನ ಬಾಲಕರ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ 10ನೇ ತರಗತಿಯ ತೇಜಸ್ ಲಕ್ಷ್ಮಣ ಸಂಭಾಜಿ ದ್ವಿತೀಯ ಸ್ಥಾನವನ್ನು ಹಾಗೂ 400ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ಈರಣ್ಣ ಕಾಳಪ್ಪ ಪತ್ತಾರ್ ತೃತೀಯ ಸ್ಥಾನವನ್ನು, 17 ವರ್ಷದೊಳಗಿನ ಬಾಲಕಿಯರ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ 9ನೇ ತರಗತಿಯ ಅನಿಕಾ ಹೆಚ್ ವೈ ತೃತೀಯ ಸ್ಥಾನವನ್ನು ಪಡೆದರು. ವಿದ್ಯಾರ್ಥಿಗಳ ಈ ಅಮೋಘ ಪ್ರದರ್ಶನದ ಕುರಿತಾಗಿ ಪ್ರತಿಕ್ರಿಯಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ “2024-25ನೇ ಸಾಲಿನಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ನಾಪತ್ತೆ ಆಗಿದ್ದ ಜೆಟ್‌ ಸ್ಕೀ ರೈಡರ್ ರೋಹಿದಾಸ್ ಯಾನೆ ರವಿ (41) ಅವರ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆ ಆಗಿದೆ. ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಅವರು 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿಗೆ ಮಾಹಿತಿ ನೀಡಿ, ತದನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು. ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ ಗಂಗೊಳ್ಳಿ, ಕೆ. ಎನ್. ಡಿ. ಸಿಬ್ಬಂದಿ ನಿಶಾಂತ್ ಖಾರ್ವಿ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಮೃತ ರೊಹಿದಾಸ್ ಸಹೋದ್ಯೋಗಿಗಳು ಶವವನ್ನು ತೀರದಿಂದ ಸಾಗಿಸಲು ಸಹಕರಿಸಿದರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೂರ್‌ಕೆಲಾ, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ನಿವೃತ್ತ ಎ.ಜಿ.ಎಂ. ಬೆಂಗಳೂರಿನ ಖ್ಯಾತ ಉದ್ಯಮಿ ನೈಲಾಡಿ ದೊಡ್ಡಮನೆ ಮಂಜಯ್ಯ ಶೆಟ್ಟಿ (98) ಡಿ. 14 ರಂದು ನಿಧನರಾದರು. ಕುಂದಾಪುರದ ನೈಲಾಡಿ ಮನೆಯಲ್ಲಿದ್ದು, ಅಕ್ಕ ದಿ. ನೈಲಾಡಿ ಭವಾನಿ ಶೆಡ್ತಿ, ಬಾವ ಚಿತ್ತೂರು ಮಂಜಯ್ಯ ಶೆಟ್ಟಿ ಅವರ ಪ್ರೋತ್ಸಾಹದಿಂದ ಉನ್ನತ ವಿದ್ಯಾಭ್ಯಾಸ ಪಡೆದು ಮದ್ರಾಸ್‌ನ ಅಣ್ಣಾಮಲೈ ಯುನಿವರ್ಸಿಟಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದು ಕುಂದಾಪುರ ತಾಲೂಕಿನ ಬಂಟ್ಸ್ ಸಮಾಜದಲ್ಲಿ ಪ್ರಥಮ ಇಂಜಿನಿಯರ್ ಎಂದು ಸಾಧನೆ ಮಾಡಿದವರು. ರೂರ್‌ಕೆಲಾ ಉಕ್ಕಿನ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಎ.ಜಿ.ಎಂ. ಆಗಿ ನಿವೃತ್ತಿ ಪಡೆದು ಬೆಂಗಳೂರಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದರು. ಬ್ರಹ್ಮಾವರ ಪಡುಬೆಟ್ಟುಬೀಡು ದಿ. ರಾಮಣ್ಣ ಶೆಟ್ಟಿ ಮತ್ತು ನೈಲಾಡಿ ದೊಡ್ಡಮನೆ ಅಕ್ಕಯ್ಯ ಶೆಟ್ಟಿ ಇವರ ಪುತ್ರರಾದ ಜನಾನುರಾಗಿಯಾಗಿದ್ದರು. ಇವರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ ಇದರ ವತಿಯಿಂದ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಗಂಗೊಳ್ಳಿಯ ಮುಖ್ಯ ಬೀದಿಯಲ್ಲಿ ಜನಜಾಗೃತಿ ಜಾಥಾ ಶನಿವಾರ ನಡೆಯಿತು. ಗಂಗೊಳ್ಳಿಯ ಪೋಸ್ಟ್ ಆಫೀಸ್ ಬಳಿಯಿಂದ ಪ್ರಾರಂಭವಾದ ಜನಜಾಗೃತಿ ಜಾಥಾ ಮುಖ್ಯರಸ್ತೆ ಮೂಲಕ ಎಸ್. ವಿ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ತನಕ ನಡೆಯಿತು. ಜಾಥಾದಲ್ಲಿ ಕರಾವಳಿ ಕಾವಲು ಪೊಲೀಸ್ ಠಾಣೆ ಸಿಬ್ಬಂದಿಗಳು, ಕೆಎನ್‌ಡಿ ಸಿಬ್ಬಂದಿಗಳು, ಎಸ್.ವಿ. ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ, ಉರ್ದು ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಕಿರಿಯ ಪ್ರಾಥಮಿಕ (ರಥಬೀದಿ) ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎಸ್.ವಿ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಟಿ. ವಿಮಲಾ ವಿ.ಪೈ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ಉಪನಿರೀಕ್ಷಕರಾದ ಸುಬ್ರಹ್ಮಣ್ಯ ಹರ್ಕೇರಿ, ಮುಕ್ತಬಾಯಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಮನ್ವಿತಾ ಎಸ್. ಈ ಬಾರಿಯ ಉಡುಪಿ ಜಿಲ್ಲಾ 10ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆಯಾಗಿರುತ್ತಾಳೆ. ಈಕೆ ಚಿಕ್ಕ ವಯಸ್ಸಿನಲ್ಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದು ತನ್ನ 4ನೇ ವಯಸ್ಸಿಗೆ ಯಕ್ಷಗಾನ ಗೆಜ್ಜೆ ಕಟ್ಟಿ ವೇದಿಕೆ ಏರಿ ನೃತ್ಯ ಪ್ರದರ್ಶನ ನೀಡಿರುತ್ತಾಳೆ. ಭರತನಾಟ್ಯದಲ್ಲಿ ಜ್ಯೂನಿಯರ್ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಸಿನಿಯರ್ ವಿಭಾಗದಲ್ಲಿ ತರಭೇತಿ ಮುಂದುವರಿಸಿದ್ದಾಳೆ. ಭಾಷಣ ಮತ್ತು ಕಾರ್ಯಕ್ರಮ ನಿರೂಪಣೆ ಈಕೆಯ ಪ್ರೀತಿಯ ಕ್ಷೇತ್ರವಾಗಿದ್ದು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡು ಜಿಲ್ಲಾ ಮಟ್ಟಕ್ಕೂ ಆಯ್ಕೆಯಾಗಿತ್ತಾಳೆ. ಅಲ್ಲದೇ 2023-24 ನೇ ಸಾಲಿನ ಮಕ್ಕಳ ಜಿಲ್ಲಾ ಸಾಹಿತ್ಯ ಸಮ್ಮೇಳನದ  ಉದ್ಘಾಟನಾ ಸಮಾರಂಭದ ನಿರೂಪಣೆಗೆ ಆಯ್ಕೆಯಾಗಿ ಉತ್ತಮ ನಿರೂಪಣೆಯಿಂದ ಜನಮನ ಗೆದ್ದಿದ್ದಾಳೆ. ಕುಂದಾಪುರ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನ “ತಾರ್ಕಣಿ-2024” ಪ್ರಯುಕ್ತ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿರುತ್ತಾಳೆ. ಸ್ವಾತಂತ್ರ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರೈತರನ್ನು ಉದ್ಯಮಿಗಳನ್ನಾಗಿ ಮಾಡಿ, ಅವರ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ, ಸಂಸ್ಕರಿಸಿ, ದೇಶ ಮತ್ತು ವಿದೇಶಗಳಿಗೆ ದೇಶೀಯ ಉತ್ಪನ್ನಗಳನ್ನು ರಪ್ತು ಮಾಡುವ ಮೂಲಕ ವಿದೇಶಗಳಿಗೆ ಪರಿಚಯಿಸುವ ಉದ್ಧೇಶ ಹೊಂದಿದ್ದು, ಇದಕ್ಕಾಗಿ ಕಿರು ಉದ್ಯಮಗಳನ್ನು ಸ್ಥಾಪಿಸಲು ಜಿಲ್ಲೆಯ ಉದ್ದಿಮೆದಾರರು ಮುಂದೆ ಬರಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ರೈತರ ದಿನಾಚರಣೆಯ ಅಂಗವಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಮಾಹಿತಿ ಕಾರ್ಯಾಗಾರ ಹಾಗೂ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ಆಹಾರ ಸಂಸ್ಕರಣಾ ಉದ್ದಿಮೆ ಬಲಪಡಿಸುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಸ್ಥಾಪಿಸುವುದರೊಂದಿಗೆ ಜಿಲ್ಲೆಯ…

Read More