ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬಂದಿರುವ ಅನಂತ ಚತುರ್ದಶಿ ವೃತವನ್ನು ಮಂಗಳವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್. ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಅನಂತ ಚತುರ್ದಶಿ ವೃತದ ವಿವಿಧ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ಜರುಗಿತು. ಅನಂತ ಚತುರ್ದಶಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ, ಪುನಸ್ಕಾರಗಳು, ನಮಸ್ಕಾರ ಸೇವೆ ಸಹಿತ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಪುರೋಹಿತರು, ಅರ್ಚಕರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಧೃಡ ಸಮಾಜದ ನಿರ್ಮಾಣದ ಶಿಲ್ಪಿಗಳಂತೆ ಶಿಕ್ಷಕರು ತಮ್ಮ ವೃತ್ತಿಯಲ್ಲಿ ತೊಡಗಿಸಿಕೊಂಡು, ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಸುಸಂಸ್ಕೃತ ಬದುಕಿಗೆ ಬೇಕಾಗಿರುವ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಶ್ರಮಿಸುತ್ತಿರುವ ಶಿಕ್ಷಕರ ಕೆಲಸ ಶ್ಲಾಘನೀಯ. ಇಂತಹ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಬ್ರಹ್ಮಾವರ ವಲಯ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆದ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಹಂಗಾರಕಟ್ಟೆ-ಸಾಸ್ತಾನ ಆಶ್ರಯದಲ್ಲಿ ಸಾಹಿತ್ಯ ಸಲ್ಲಾಪ, ಕೃತಿ ಬಿಡುಗಡೆ, ನಾಟಕ ಪ್ರದರ್ಶನ, ಡಾ|| ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಿರ್ದಿಗಂತ (ಸಾಧನೆಯ ಪವಮಾನ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಶಿಕ್ಷಕರು ತಮ್ಮ ಶೈಕ್ಷಣಿಕ ಪಠ್ಯದ ಜೊತೆಯಲ್ಲಿ ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಯಾವುದೇ ವಿಷಯದಲ್ಲಿ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಯುಪಿಎಸ್ಸಿ ಹಾಗೂ ಕೆಪಿಎಸ್ಸಿಯ- ಪೂರ್ವಭಾವಿ (ಪ್ರೀಲಿಮ್ಸ್) ಹಾಗೂ ಮುಖ್ಯ ಪರೀಕ್ಷೆಗಳಿಗೆ (ಮೈನ್ಸ್) 9 ತಿಂಗಳ ನಿರಂತರ ಸನಿವಾಸ ತರಬೇತಿಯನ್ನು ನೀಡಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮುಂದಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸಾಧನಾ ಕೋಚಿಂಗ್ ಸೆಂಟರ್ನೊಂದಿಗೆ ಈಗಾಗಲೆ ಒಡಂಬಡಿಕೆ ಮಾಡಿಕೊಂಡಿದ್ದು, ಎಲ್ಲರಿಗೂ ಕೈಗೆಟಕುವ ರೀತಿಯಲ್ಲಿ ಉತ್ತಮ ಗುಣಮಟ್ಟದ, ಅತ್ಯುತ್ತಮ ತರಬೇತಿಯನ್ನು ನೀಡಲು ಉದ್ದೇಶಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದರು. ಈ ತರಬೇತಿಯು ಎಸ್ಡಿಎ, ಎಫ್ಡಿಎ, ಬ್ಯಾಂಕಿಂಗ್, ಪೋಲೀಸ್ ಇಲಾಖೆ, ಪಿಡಿಒ, ಕಂದಾಯ ಇಲಾಖೆಗಳ ಪರೀಕ್ಷೆಗಳು ಸೇರಿದಂತೆ ಇನ್ನಿತರ ಎಲ್ಲಾ ಸರ್ಕಾರಿ ಉದ್ಯೋಗಗಳ ಆಯ್ಕೆ ಪ್ರಕ್ರಿಯೆಯ ಪರೀಕ್ಷೆಗಳನ್ನು ಎದುರಿಸಲು ಅನುವುಮಾಡಿಕೊಡಲಿದೆ. ಕಾಲ ಕಾಲಕ್ಕೆ ಬರುವ ಸರ್ಕಾರಿ ಹಾಗೂ ಅರೆ ಸರ್ಕಾರಿ ಹುದ್ದೆಗಳಿಗೆ ತಯಾರುಗೊಳಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ವಿನೂತನ ಪ್ರಯತ್ನಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಸಾಧನಾ ಕೋಚಿಂಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಗದ್ಗುರು ಶ್ರೀ ನಾಗಲಿಂಗ ಸ್ವಾಮಿ ಹಾಗೂ ವಿಶ್ವಕರ್ಮೇಶ್ವರ ಸಾನಿಧ್ಯವಿರುವ ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಕೂಡುವಳಿಕೆ ವಿಶ್ವಕರ್ಮ ಸಮಾಜದ ಎಲ್ಲ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಸಮಾಜ ಬಾಂಧವರ ಸಹಕಾರದೊಂದಿಗೆ ಶ್ರೀ ವಿಶ್ವಕರ್ಮ ಜಯಂತಿ ಪ್ರಯುಕ್ತ ಹೊರೆಕಾಣಿಕೆ ಬೃಹತ್ ವಾಹನ ಜಾಥಾ ಬೈಂದೂರು ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಳಿ ಚಂದ್ರಯ್ಯ ಆಚಾರ್ಯ ಅವರು ಚಾಲನೆ ನೀಡಿದರು. ವಿಶ್ವಕರ್ಮ ಭಾವಚಿತ್ರದ ಟ್ಯಾಬ್ಲೋ ಹೊರಟು ಬೈಂದೂರು ತಹಶೀಲ್ದಾರ್ ಕಛೇರಿಯಿಂದ ಬೈಂದೂರು ರಥಬೀದಿಯಲ್ಲಿ ಸಾಗಿ ಬಂದು ರಾಷ್ಟ್ರೀಯ ಹೆದ್ದಾರಿಯ ಮೂಲಕ ನಾಗೂರು ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ತನಕ ಹೊರೆಕಾಣಿಕೆ ವಾಹನ ಜಾಥಾ ನಡೆಯಿತು. ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಎರಡನೇ ಮೊಕ್ತೇಸರ ಚಿತ್ತೂರು ಪ್ರಭಾಕರ ಆಚಾರ್ಯ, ಮೂರನೇ ಮೊಕ್ತೇಸರ ಆಲೂರು ಶ್ರೀಧರ್ ಆಚಾರ್ಯ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ತ್ರಾಸಿ ಸುಧಾಕರ್ ಆಚಾರ್ಯ, ವಿಶ್ವಕರ್ಮ ಯುವಕ ಸಂಘ ಅಧ್ಯಕ್ಷ ನಾಗರಾಜ್ ಆಚಾರ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರಿ ಸಂಘ ಬೈಂದೂರು ಇದರ ನೂತನ ಕಛೇರಿ ಇಂದು ಮುಕಾಂಬಿಕಾ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. ಸಹಕಾರಿ ಧುರೀಣ ಎಸ್.ರಾಜು ಪೂಜಾರಿ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಖನ್ಯ ಹಾಗೂ ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ, ಸದಾಶಿವ ಡಿ. ಪಡುವರಿ, ಬಾಲಯ್ಯ ಶೇರುಗಾರ, ಸಂಘದ ಅಧ್ಯಕ್ಷರಾದ ಅನಸೂಯ ಶೇಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆಹನಾ ಸುಲ್ತಾನಾ, ಸಿಬ್ಬಂದಿಗಳಾದ ಪೂರ್ಣಿಮಾ, ನಾಗರಾಜ್, ನಾಗಶ್ರೀ ಮುಂತಾದವರು ಉಪಸ್ಥಿತರಿದ್ದರು. ಪತ್ರಕರ್ತ ಅಂದುಕಾ ನಿರೂಪಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಾಪಂಚಿಕವಾಗಿ ನಮ್ಮ ದೇಹ ಮತ್ತು ಮನಸ್ಸು ಇಲ್ಲಿ ಇರಬೇಕಾದರೆ ನಮ್ಮ ತಂದೆ ತಾಯಿಯ ಒಂದೊಂದು ಜೀವಕೋಶಗಳನ್ನು ನಾವು ಪಡೆದಿರುತ್ತೇವೆ, ತಂದೆ ತಾಯಿ ಇದ್ದರೆ ಮಾತ್ರ ನಾವೆಲ್ಲಾ. ಈ ಸೃಷ್ಟಿಯ ಆದಿಯಲ್ಲಿ ಅದೆಷ್ಟೋ ಜೀವ ಕಣಗಳಿದ್ದು, ಇಲ್ಲಿ ನಮ್ಮನ್ನು ನಾವು ಹಿಂದಿರುಗಿ ಹುಡುಕಿಕೊಂಡು ಹೋದಾಗ ಮಾತ್ರ ಭಗವಂತನ ಸಾಕ್ಷಾತ್ಕಾರ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಲ್ಲಿ ನಾವು ದೇವರನ್ನು ಕಾಣಬೇಕು ಇದೇ ಸೃಷ್ಟಿಕರ್ತ ವಿಶ್ವಕರ್ಮ. ಪ್ರಪಂಚದಲ್ಲಿ ಅತ್ಯಂತ ಶ್ರೇಷ್ಠವಾದ ಧರ್ಮ ಎನ್ನುವುದಿದ್ದರೇ ಅದು ವಿಶ್ವಕರ್ಮ ಧರ್ಮ ಎಂದು ಮಂಗಳೂರಿನ ಅಜಲಸ್ ಡಯಾಗ್ನಾಸ್ಟಿಕ್ಸ್ ಇಲ್ಲಿನ ಡಾ| ಚಂದ್ರಯ್ಯ ಆಚಾರ್ಯ ಅವರು ಹೇಳಿದರು. ಅವರು ಕೋಟೇಶ್ವರ ಶ್ರೀ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಯುವಕ ದಳ, ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಯುವಕ ಸೇವಾ ಸಂಘ ಹಾಗೂ ಶ್ರೀದೇವಿ ಮಹಿಳಾ ಮಂಡಳಿ ಕೋಟೇಶ್ವರ ಇವರ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯಲ್ಲಿ ನೂತನ ಹಿಂದೂಸ್ಥಾನ ಗೋಲಿ ಸೋಡಾ ಮತ್ತು ಪಾನೀಯ ಉತ್ಪಾದನಾ ಲೋಕಾರ್ಪಣೆಗೊಂಡಿತ್ತು. ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಲೋಕಾರ್ಪಣೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಹೆಮ್ಮಾಡಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೇತ್ರಾವತಿ ಹಾಗೂ ಉಪ್ಪಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕಳಿ ಚಂದ್ರಯ್ಯ ಆಚಾರ್ಯ, ಮಾಲಿಕರಾದ ಶಂಕರ ಆಚಾರ್ಯ, ದಿನೇಶ್ ಆಚಾರ್ಯ ಇನ್ನಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ನ ಮಾಜಿ ಸದಸ್ಯ, ಗಂಗೊಳ್ಳಿ ದಾಕುಹಿತ್ಲು ನಿವಾಸಿ ಬಾಣಿ ರಾಮಕೃಷ್ಣ ಖಾರ್ವಿ (57) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಅವರು 10 ವರ್ಷಗಳ ಕಾಲ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ದಾಕುಹಿತ್ಲು ಶ್ರೀ ರಾಮ ಮಂದಿರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿದ್ದ ಅವರು ಪಕ್ಷಬೇಧ ಮರೆತು ಎಲ್ಲರೊಂದಿಗೆ ಬೆರೆತು ಸಹಾಯ ಮಾಡುವ ಮೂಲಕ ಜನಾರಾಗಿದ್ದರು. ರಾಜಕೀಯ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಅನುಪಮ ಸೇವೆ ಮೂಲಕ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸತ್ಯ ವಾಕ್ಯದ ಮೂಲಕ ಮೌಢ್ಯ ಮತ್ತು ಅಂಧ ಶೃದ್ಧೆಯಿಂದ ನಲುಗಿ ಹೋಗಿರುವ ಶೋಷಿತ ಸಮಾಜವನ್ನು, ಸಾಮಾಜಿಕ ಪರಿವರ್ತನೆಯ ಮೂಲಕ ಮೌನಕ್ರಾಂತಿ ನಡೆಸಿ ಸಮಾಜ ನಿರ್ಮಾಣಕ್ಕೆ ಮೇಲ್ಪಂಕ್ತಿ ಹಾಕಿದ ಮಹಾನ್ ದಾರ್ಶನಿಕರಾಗಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಾಗೂರು ಮಹಾಲಸಾ ಕಲ್ಚರಲ್ ಹಾಲ್ನಲ್ಲಿ ಸೋಮವಾರ ಬಿಜೆಪಿ ಬೈಂದೂರು ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನಾಚರಣೆಯ ಅಂಗವಾಗಿ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಶೇ. 50ರಷ್ಟು ಜನರು ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದು, ಕಳೆದ 70 ವರ್ಷದಿಂದ ಅಕಾರ ನಡೆಸಿದ ಕಾಂಗ್ರೆಸ್ ಪಕ್ಷ ಕೇವಲ ಮತಕ್ಕಾಗಿ ಅವರನ್ನು ಬಳಸಿಕೊಂಡಿದೆಯೇ ಹೊರತು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿಲ್ಲ. ಕಾಂಗ್ರೆಸ್ ಅಕಾರಕ್ಕಾಗಿ ಮೊಸಳೆ ಕಣ್ಣೀರು ಸುರಿಸುವ ಕೆಲಸ ಮಾಡುತ್ತಿದೆ ಎಂದು ದೂರಿದ ಅವರು ರಾಜ್ಯದಲ್ಲಿ ಬಿಜೆಪಿ…
