Author: ನ್ಯೂಸ್ ಬ್ಯೂರೋ

ಕುಂದಾಪ್ರ ಡ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಹಾರಾಷ್ಟ್ರದ ರಾಯಘಢ ಜಿಲ್ಲೆಯ ಕಾಮೋತೆಯಲ್ಲಿ ನಡೆದ  70 ನೇ ರಾಷ್ಟ್ರೀಯ ಸೀನಿಯರ್ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಚಾಂಪಿಯನ್ ಆಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆರು ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು. ವಿಜೇತ ತಂಡದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆರು ಮಂದಿ ಆಟಗಾರರು ಭಾಗವಹಿಸಿದ್ದರು. ರಾಜ್ಯ ತಂಡದ ನಾಯಕಿ ಮೇಘನಾ ಎಚ್. ಎಂ., ಪಲ್ಲವಿ ಬಿ. ಎಸ್., ಸಹನಾ ಎಚ್. ವೈ, ಲಕ್ಷ್ಮಿ ದೇವಿ, ತನುಶ್ರೀ, ಗೀತಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ರಾಜ್ಯ ತಂಡದ ಪರವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಆಳ್ವಾಸ್‌ನ ಪಲ್ಲವಿ ಬಿ.ಎಸ್. ಹಾಗೂ ಸಹನಾ ಎಚ್. ವೈ. ಅವರು ಅಖಿಲ ಭಾರತ ಬಾಲ್‌ಬ್ಯಾಡ್ಮಿಂಟನ್ ಫೆಡರೇಶನ್ ನೀಡುವ ‘ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ’ಗೆ ಭಾಜನರಾದರು. ಲೀಗ್ ಹಂತದಲ್ಲಿ ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಆಂಧ್ರಪ್ರದೇಶ ತಂಡವನ್ನು ನೇರ ಸೆಟ್‌ಗಳಿಂದ ಸೋಲಿಸಿದ ಕರ್ನಾಟಕ ನಾಕ್‌ಔಟ್ ಹಂತಕ್ಕೆ ಅರ್ಹತೆ ಪಡೆದುಕೊಂಡಿತ್ತು. ಚಾಂಪಿಯನ್‌ಶಿಪ್‌ನಲ್ಲಿ 28 ರಾಜ್ಯ ತಂಡಗಳು ಭಾಗವಹಿಸಿದ್ದವು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ 21 ಕೆಎಆರ್‌ ಬಿಎನ್‌ ಎನ್‌ಸಿಸಿ ಉಡುಪಿಯ ಕೆಡೆಟ್ ಆಗಿರುವ ಸಿಎಸ್‌ಎಮ್‌ ನಿರ್ಭಯ್ ಯು ಶೆಟ್ಟಿ ಪ್ರತಿಷ್ಠಿತ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಮೊದಲ ಶಿಬಿರದಿಂದ ಪ್ರಾರಂಭಿಸಿ ಪೂರ್ವ ಆರ್‌ಡಿಸಿ I ಮತ್ತು III ರವರೆಗೆ  ಅಸಾಧಾರಣ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರದರ್ಶಿಸಿ ನವದೆಹಲಿ ಗಣರಾಜ್ಯೋತ್ಸವ ಶಿಬಿರ 2025ಕ್ಕೆ ಹೆಮ್ಮೆಯಿಂದ ನಮ್ಮ 21 ಕೆಎಆರ್‌ ಬಿಎನ್‌ ಎನ್‌ಸಿಸಿ ಉಡುಪಿ, ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸುತ್ತಾರೆ. ಹಲವು ವರ್ಷಗಳ ನಂತರ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸುತ್ತಿರುವ ಪ್ರೌಢ ವಿಭಾಗದ ಕೆಡೆಟ್ ಇವರಾಗಿದ್ದು ಉಡುಪಿ ಬೆಟಾಲಿಯನ್ ಗೆ ಇದೊಂದು ಹೆಮ್ಮೆಯ ಸಂಗತಿ, ವಿದ್ಯಾರ್ಥಿಯ ಈ ಕಠಿಣ ಪರಿಶ್ರಮದ ಸಾಧನೆಗೆ ಪ್ರತಿ ಹಂತದಲ್ಲೂ ಪ್ರೋತ್ಸಾಹ ನೀಡಿ, ಹಂತ ಹಂತವಾಗಿ ಆತನಲ್ಲಿ ಆತ್ಮಸ್ಥೈರ್ಯ ತುಂಬುವಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಹಾಗೂ ಅಸೋಸಿಯೇಟ್ ಎನ್ ಸಿಸಿ ಅಧಿಕಾರಿ ವೆಂಕಟ ಕೃಷ್ಣ ಅವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಟಿ. ವಿಮಲಾ ವಿ. ಪೈ ಸಭಾಂಗಣದಲ್ಲಿ ಬಿಲ್ಲವರ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ನೆಡೆಯಿತು. ಮಾಜಿ ಶಾಸಕ ಗೋಪಾಲ ಪೂಜಾರಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಸಂಘಟನೆಯಿಂದ ಯಾವುದೇ ಕೆಲಸವನ್ನು ಸುಲಭವಾಗಿ ಮಾಡಲು ಸಾಧ್ಯ. ಎಲ್ಲರೂ ಸಂಘಟಿತರಾಗಿ ಪ್ರಯತ್ನ ನಡೆಸಿದರೆ ಯಶಸ್ಸು ದೊರೆಯುತ್ತದೆ. ಗಂಗೊಳ್ಳಿ ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಅಗತ್ಯವಿರುವ ನಿವೇಶನ ದೊರಕಿಸಿ ಕೊಡುವಲ್ಲಿ ಮತ್ತು ಸಂಘದ ಕಚೇರಿ ಪ್ರಾರಂಭಿಸಲು ಅಗತ್ಯ ನೆರವು ಒದಗಿಸುವುದಾಗಿ ಅವರು ಭರವಸೆ ನಿಡಿದರು. ಸಂಘದ ಅಧ್ಯಕ್ಷ ಗೋಪಾಲ್ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಬಿಲ್ಲವರ ಹಿತರಕ್ಷಣೆ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ ಶುಭ ಹಾರೈಸಿದರು. ಸಂಘದ ಪದಾಧಿಕಾರಿಗಳು ಈ ಸಂಧರ್ಭದಲ್ಲಿ ಗಂಗೊಳ್ಳಿ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಲ್ಲವ ಸಮಾಜ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಲಕ್ಷ್ಮಣ ಬಿಲ್ಲವ ಸ್ವಾಗತಿಸಿದರು. ಕೃಷ್ಣ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಖ್ಯಾತ ಚಿತ್ರ ನಟ, ನಿರ್ದೇಶಕ ಉಪೇಂದ್ರ ಹಾಗೂ ಮತ್ತಿತರರು ದೇವರ ದರ್ಶನಕ್ಕೆ ಆಗಮಿಸಿದ್ದರು. ಶ್ರೀ ದೇವಸ್ಥಾನದ ವತಿಯಿಂದ ಅವರನ್ನು ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಅರ್ಚಕ ಹಾಗೂ ಮಾಜಿ ಮೊಕ್ತೇಸರರಾದ ಕೆ. ಸೂರ್ಯನಾರಾಯಣ ಉಪಾಧ್ಯಾಯರು, ಮೊಕ್ತೇಸರ ನಿರಂಜನ ಉಪಾಧ್ಯಾಯರು ಪರ್ಯಾಯ ಅರ್ಚಕರಾದ ಕೃಷ್ಣಾನಂದ ಉಪಾಧ್ಯಾಯರು, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಜನಪದ ಗೀತೆ (ಗುಂಪು ವಿಭಾಗ) ಸ್ಪರ್ಧೆಗೆ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ., ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. 2025ರ ಬಹುನಿರೀಕ್ಷೆಯ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಕರಾವಳಿ ಸಿನಿಮಾ ಕೂಡ ಜಾಗ ಗಿಟ್ಟಿಸಿಕೊಂಡಿರುವುದು ವಿಶೇಷ. ಪೋಸ್ಟರ್ಸ್ ಮತ್ತು ಟೀಸರ್ ಮೂಲಕ ಈಗಾಗಲೇ ಕುತೂಹಲ ಹೆಚ್ಚಿಸಿರುವ ಕರಾವಳಿ ಹೊಸ ವರ್ಷದ ಪ್ರಯುಕ್ತ ಮತ್ತೊಂದು ಭರ್ಜರಿ ಟೀಸರ್ ಮೂಲಕ ಸಿನಿ ಅಭಿಮಾನಿಗಳ ಮುಂದೆ ಬಂದಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಗುರುದತ್ ಗಾಣಿಗ ನಿರ್ದೇಶನದ ಕರಾವಳಿಯ ವಿಭಿನ್ನವಾದ ಟೀಸರ್ ಆಕರ್ಷಕವಾಗಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಸಾಮಾನ್ಯವಾಗಿ ಟೀಸರ್ ನಾಯಕ, ನಾಯಕಿ ಅಥವಾ ಸಿನಿಮಾದ ಒಬ್ಬ ವ್ಯಕ್ತಿಯ ಮೇಲೆ ಕೇಂದ್ರೀಕೃತವಾಗಿರುತ್ತದೆ. ಆದರೆ ಕರಾವಳಿಯಿಂದ ಬಂದಿರುವ ಹೊಸ ಟೀಸರ್ ಒಂದು ಪ್ರತಿಷ್ಠಿಯ ವಸ್ತುವಿನ ಮೇಲೆ ಇರುವುದು ವಿಶೇಷ. ಸದ್ಯ ರಿಲೀಸ್ ಆಗಿರುವ ಟೀಸರ್ ನಲ್ಲಿ ಪ್ರತಿಷ್ಠಿಯ ಕುರ್ಚಿ ಹೈಲೆಟ್. ಅದು ಬರಿ ಕುರ್ಚಿಯಲ್ಲ ಪ್ರತಿಷ್ಠಿಯ ಪಿಚಾಚಿ ಎನ್ನುವ ಸಂಭಾಷಣೆಯಿಂದ ಟೀಸರ್ ಪ್ರಾರಂಭವಾಗುತ್ತೆ. ಪ್ರತಿಷ್ಠೆಯ ಕುರ್ಚಿ ಮೇಲೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾನವೀಯತೆಗಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ. ನಾವು ಬೆಳೆದು ಉಳಿದವರನ್ನು ಕೂಡ ಬೆಳೆಸುತ್ತಾ ಸಾಗುವಲ್ಲಿ ಜೀವನದ ನಿಜವಾದ ಸಾರ್ಥಕತೆ ಅಡಗಿದೆ ಎಂದು ಉದ್ಯಮಿ ಮೌಲಾನ ಇಬ್ರಾಹಿಂ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿ.ಎಸ್​.ವಿ.ಎಸ್ ಅಸೋಸಿಯೇಷನ್ ವತಿಯಿಂದ ನಡೆದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಬದುಕಿನಲ್ಲಿ ಏರಿಳಿತಗಳು ಸಾಮಾನ್ಯ. ಆದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಧೃತಿ ಗೆಡದೆ ನಮ್ಮ ಗುರಿಯ ಕಡೆ ನಾವು ಮುಂದುವರಿಯಬೇಕು ಎಂದು ಅವರು ಅಭಿಪ್ರಾಯ ಪಟ್ಟರು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಮೌಲಾನ ಇಬ್ರಾಹಿಂ ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ 94 ವಿದ್ಯಾರ್ಥಿಗಳಿಗೆ 6.50 ಲಕ್ಷ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಂಚಾಲಕ ಎನ್. ಸದಾಶಿವ ನಾಯಕ್ ಪ್ರಸ್ತಾವಿಕ ಮಾತುಗಳನ್ನಾಡಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಖಾಸಗಿ ಬಸ್ಸಿನ (ಸಿಸಿಟಿ) ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಕುಂದಾಪುರದ ನಿವಾಸಿ ಸುಧೀಂದ್ರ (40) ಡಿ.4 ರ ಬೆಳಗ್ಗೆ ಕೆಲಸಕ್ಕೆ ತೆರಳಿದವರು ನಾಪತ್ತೆಯಾಗಿದ್ದು, ಅದಾಗಿ 25 ದಿನ ಕಳೆದರೂ ಇನ್ನೂ ಇವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಡಿ.5 ರಿಂದ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಮನೆಯಿಂದ ತೆರಳುವಾಗ ಕಪ್ಪು- ಬಿಳಿ ಬಣ್ಣದ ಬಟ್ಟೆ ಧರಿಸಿದ್ದು, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಬಲಗೈನಲ್ಲಿ ಆಂಜನೇಯ ದೇವರ ಟ್ಯಾಟೂ ಇದೆ. ತಾಯಿ ಮೀನಾಕ್ಷಿ (72) ಅವರು ನೀಡಿದ ದೂರಿನಂತೆ ಕುಂದಾಪುರ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ತಾಲೂಕಿನ ಬನ್ನಾಡಿ ಗ್ರಾಮದ ಉಪ್ಲಾಡಿ ತೆಂಕಬೆಟ್ಟು ಎಂಬಲ್ಲಿ ಸ್ಕೂಟರ್ ಪಲ್ಟಿ ಆಗಿ ಸಹಸವಾರ ಬೇಬಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್ ಸವಾರ ರಾಜು ಅವರಿಗೆ ತರುಚಿದ ಗಾಯವಾಗಿದೆ. ಈ ಬಗ್ಗೆ ಕೋಟ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಾಂಧಿ ಮೈದಾನದ ಎದುರು ಸರ್ವಿಸ್ ರಸ್ತೆಯ ಚರಂಡಿಯ ಮೇಲ್‍ ಹಾಸಿನ ಮೇಲೆ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಅವರು ಡಿ. 27ರಂದು ತೀವ್ರ ಅಸ್ವಸ್ಥಗೊಂಡಿದ್ದು ಸ್ಥಳೀಯರು ಚಿಕಿತ್ಸೆ ಬಗ್ಗೆ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತ ಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More