ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ವತಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ 1ನೇ ತರಗತಿಯಿಂದ 7ನೇ ತರಗತಿವರೆಗಿನ ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ 95,000 ಶಾಲಾ ಬ್ಯಾಗ್ಗಳನ್ನು ನೀಡಿದರು. ಅವರು ಶಿವಮೊಗ್ಗ ನಗರದ ದುರ್ಗಿಗುಡಿ ಅಲ್ಲಿರುವ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಗ್ ವಿತರಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ 8 ರಿಂದ 10 ನೇ ತರಗತಿಯ ಸರ್ಕಾರಿ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಶಾಲಾ ಬ್ಯಾಗ್ ವಿತರಣೆ ಮಾಡುವ ಗುರಿಯನ್ನು ಹೊಂದಿದ್ದು, ಅದರ ಜೊತೆಗೆ ಉಚಿತವಾಗಿ ಸ್ವೆಟರ್, ನೋಟ್ ಪುಸ್ತಕ ಹಾಗೂ ಇನ್ನಿತರೆ ಕಲಿಕಾ ಉಪಕರಣಗಳನ್ನು ರಾಷ್ಟ್ರೀಯ ಸಾಕ್ಷರತಾ ಮಿಷನ್ ವತಿಯಿಂದ ನೀಡಲಾಗುವುದೆಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ರೀಯಾಶೀಲ ಚಟುವಟಿಕೆಗಳು ಇಲ್ಲದೇ ಹೋದರೆ ಸಮಾಜ ಬೇಗನೆ ಬಿದ್ದು ಹೋಗುತ್ತದೆ. ಈ ಹಿನ್ನೆಲೆಯಲ್ಲಿ ಸಮುದಾಯ ಹಾಗೂ ವ್ಯಕ್ತಿಗಳ ನಡುವೆ ಸಮನ್ವಯತೆ ಸಾಧಿಸುವ ನಗರಗಳು ಸಾಂಸ್ಕೃತಿಕವಾಗಿ ಬಲಿಷ್ಠವಾಗಿದ್ದು, ಪ್ರಸ್ತುತ ಗ್ರಾಮೀಣ ಭಾಗಗಳು ಕೂಡ ಈ ಸಾಲಿಗೆ ಸೇರುತ್ತಿವೆ ಎಂದು ಬೈಂದೂರು ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾಧ ನಾಗರಾಜ ಶೆಟ್ಟಿ ಅವರು ಹೇಳಿದರು. ಇಲ್ಲಿನ ಶ್ರೀ ಶಾರದಾ ವೇದಿಕೆಯಲ್ಲಿ ಸೋಮವಾರ ಸುರಭಿ ರಿ. ಬೈಂದೂರು ಸಂಸ್ಥೆಯ ರೋಟರಿ ಕ್ಲಬ್ ಸಹಯೋಗದಲ್ಲಿ ಸುರಭಿ ಕಲಾಸಂಸ್ಥೆಯ 25ನೇ ವರ್ಷದ ರಜತಯಾನದ ಅಂಗವಾಗಿ ಹಮ್ಮಿಕೊಂಡ ತಿಂಗಳ ತಿರುಳು ಕಾರ್ಯಕ್ರಮದಲ್ಲಿ ಬೈಂದೂರು ರೋಟರಿ ಸದಸ್ಯರಿಂದ ಪ್ರದರ್ಶನಗೊಂಡ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಟಕ ಸೇರಿದಂತೆ ಕಲಾಪ್ರದರ್ಶನಗಳಿಲ್ಲದ ದೇಶ ಸಾಂಸ್ಕೃತಿಕವಾಗಿ ಬರಡಾಡುಗತ್ತದೆ ಎನ್ನುವುದಕ್ಕೆ ಅವುಗಳನ್ನು ನಿಷೇಧಿಸಿದ ದೇಶಗಳಲ್ಲಿ ಉದಾಹರಣೆ ದೊರೆಯುತ್ತದೆ. ಮನುಷ್ಯ ಪ್ರವೃತ್ತಿ ಮತ್ತು ಸ್ವಭಾವಗಳನ್ನು ಪ್ರತಿನಿಧಿಸುವ ಪಾತ್ರಗಳಿಂದ ನಾಟಕಗಳು ಕೂಡಿರುವುದರಿಂದ ಅವುಗಳಿಗೆ ಜಾಗತಿಕ ಆಯಾಮ ಇದೆ. ರಂಗಭೂಮಿ ಚಟುವಟಿಕೆಗಳು ನಿರಂತರವಾಗಿರುವ ಪ್ರದೇಶದಲ್ಲಿ ಸ್ವಭಾವ ಮತ್ತು ಪ್ರವೃತ್ತಿಯ ಆತ್ಮಾವಲೋಕನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಉತ್ಪನ್ನ ಘಟಕದ ಬಗ್ಗೆ ಮಾಹಿತಿ – ಪ್ರಾತ್ಯಕ್ಷಿಕೆ ನೀಡುವ ಸಲುವಾಗಿ ‘ಇಂಡಸ್ಟ್ರಿಯಲ್ ವಿಸಿಟ್’ ನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಉಪ್ಪೂರಿನ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಫ್ಯಾಕ್ಟರಿ ಮತ್ತು ಶಿರಿಯಾರದ ತಂಪು ಪಾನೀಯ ಉತ್ಪಾದನಾ ಘಟಕ ‘ಶ್ರೀ ಕಟೀಲೇಶ್ವರಿ ಬಾಟ್ಲಿಂಗ್ ಕಂಪೆನಿ’ಗೆ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಕೋಟಾದ ಕಾರಂತ ಥೀಮ್ ಪಾರ್ಕ್ಗೂ ಭೇಟಿ ನೀಡಲಾಯಿತು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಷ್ಮಾ ಶೆಣೈ, ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ. ಬಿ., ಹಿಂದಿ ಉಪನ್ಯಾಸಕಿ ಜಯಶೀಲಾ ಪೈ ಹಾಗೂ ಇತರ ಉಪನ್ಯಾಸಕರು ವಿದ್ಯಾರ್ಥಿಗಳ ಜೊತೆಗೂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಮಮತಾ ದೇವಿ ಜಿ ಎಸ್. ಅವರು ಉದ್ಘಾಟಿಸಿದ ಮಾತನಾಡಿ, ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಅಂದರೆ ಅರ್ಧ ಜಯಶಾಲಿಯಾದಂತೆ. ಪಠ್ಯ ವಿಷಯದ ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭೆಯನ್ನು ತೋರಿಸಿ ವಿಜೇತರಾಗಿ ಎಂದು ಶುಭ ಹಾರೈಸಿದರು. ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಇದರ ಉಪನಿರ್ದೇಶಕರಾದ ಮಾರುತಿ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಗ್ರಾಮಾಂತರ ಭಾಗದಲ್ಲಿ ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ರಚನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಮಂಜೂರಾದ 2 ಲಕ್ಷ ಸಹಾಯಧನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಕೊಡೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಯಿತು. ಸಹಾಯಧನದ ಮಂಜೂರಾತಿ ಪತ್ರದ ವಿತರಣೆಯನ್ನು ಸಹಕಾರಿ ಧುರೀಣರು, ಸಹಕಾರ ರತ್ನ ಪ್ರಶಸ್ತಿ ವಿಜೇತರು, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರು,ಕಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಪ್ರಕಾಶ್ ಚಂದ್ರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಅನ್ನುವಂತೆ ಪೂಜ್ಯ ವೀರೇಂದ್ರ ಹೆಗ್ಗಡೆ ಅವರು ಇಲ್ಲದ ಕ್ಷೇತ್ರ ಇಲ್ಲ. ಹೈನುಗಾರಿಕಾ ಕ್ಷೇತ್ರವನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಬೇಕೆಂಬ ಉದ್ದೇಶದಿಂದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ನಿರ್ಮಾಣಕ್ಕೆ ಮತ್ತು ಹೈನುಗಾರಿಕೆಗೆ ಅನೇಕ ರೀತಿಯಲ್ಲಿ ಅನುದಾನಗಳನ್ನ ನೀಡುತ್ತಾ ಹೈನುಗಾರಿಕೆಯನ್ನ ಪ್ರೋತ್ಸಾಹಿಸುತ್ತ ಬಂದಿದ್ದಾರೆ. ವೀರೇಂದ್ರ ಹೆಗ್ಗಡೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಂದಾಪುರದ ಪಸಿದ್ಧ ವಕೀಲರಾದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಅವರು ಮುಖ್ಯ ಅಥಿತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಸೂಕ್ತ ಸಲಹೆ ನೀಡಿ, ವಿವಿಧ ಸ್ಪರ್ಧೆಗಳಲ್ಲಿ ವೀಜೆತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಇನ್ನೋರ್ವ ಮುಖ್ಯ ಅಥಿತಿ ಮಂಜುನಾಥ ಆಸ್ಪತ್ರೆ, ಕುಂದಾಪುರ ಇಲ್ಲಿಯ ನೇತ್ರ ತಜ್ಞರಾದ ಡಾ. ಅನ್ವತಾ ಶೆಟ್ಟಿ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ಜೀವನದ ಗುರಿಯನ್ನು ರೂಪಿಸಿಕೊಂಡಿರಬೇಕು ಎಂದು ತಿಳಿಸಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿ’ಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜಾ ಹಾಗೂ ಸಂಸ್ಥೆಯ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ’ ಎಂದು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಭಾವುಕರಾದರು. ಇಲ್ಲಿನ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಬುಧವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ’30ನೇ ವರ್ಷದ ಆಳ್ವಾಸ್ ವಿರಾಸತ್’ನಲ್ಲಿ ಪ್ರತಿಷ್ಠಿತ ’ಆಳ್ವಾಸ್ ವಿರಾಸತ್-2024’ ಪ್ರಶಸ್ತಿಯನ್ನು ಸ್ವೀಕರಿಸಿದ ಅವರು ಮನದುಂಬಿ ಮಾತನಾಡಿದರು. ಶಿಸ್ತು, ಸಂಯಮ, ಸಮಯ ಬಹಳ ದೊಡ್ಡದು. ಅದನ್ನು ತೋರಿಸಿದ ಡಾ.ಎಂ. ಮೋಹನ ಆಳ್ವ ಅವರ ಸಾಧನೆ ಅನನ್ಯ. ಅವರಿಂದ 101 ವರ್ಷ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು. ಇಂತಹ ಕಾರ್ಯಕ್ರಮ ಕಷ್ಟದ ಕಾರ್ಯ ಎಂದು ಉಲ್ಲೇಖಿಸಿದರು. ತಂದೆ- ತಾಯಿಗಳ ಬಳಿಕ ಗುರುವೇ ನಮ್ಮ ಪುಣ್ಯ ಗವಾಯಿಗಳು ರಾಜ್ಯದಲ್ಲಿ ಹಿಂದೂಸ್ತಾನಿ ಸಂಗೀತ ಪಸರಿಸಲು ಕಾರಣ. ಅದಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾತ್ಮ ಎಂದರು. ಪ್ರಶಸ್ತಿ ಹುಡುಕಿಕೊಂಡು ಬರಬೇಕು. ನಾವು ಅದರ ಹಿಂದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ‘ಮಕ್ಕಳ ಸಂತೆ’ ಬಿಜಿನೆಸ್ ಡೇ ಕಾರ್ಯಕ್ರಮ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಮತ್ತು ಸ್ಪರ್ಧೆ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಗುರುವಾರ ನಡೆಯಿತು. ಗಂಗೊಳ್ಳಿಯ ಉದ್ಯಮಿ ವಿನೋದ್ ಪೈ ಮಕ್ಕಳ ಸಂತೆಯನ್ನು ಮತ್ತು ಗಂಗೊಳ್ಳಿ ಕ್ಲಸ್ಟರ್ನ ಸಿಆರ್ಪಿ ಪ್ರದೀಪ್ ಕುಮಾರ್ ಶೆಟ್ಟಿ ವಿಜ್ಞಾನ ಮಾದರಿ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿಯ ವಿವಿಧ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಾದ ಗೋಪಾಲ ದೇವಾಡಿಗ, ರಾಘವೇಂದ್ರ ಶೇರುಗಾರ್, ಭಗಿನಿ ಕ್ರೆಸೆನ್ಸ್, ಸಭಾ ಭಾನು ಮತ್ತು ಸುಮಯ್ಯ ಮಕ್ಕಳ ಸಂತೆಯ ವಿವಿಧ ಮಳಿಗೆಗಳನ್ನು ಉದ್ಘಾಟಿಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದಾರೆ. ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶೀನಾಥ್ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಸಂಚಾಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.13: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತಿಗೆ ಡಿ.10ರಂದು ನಡೆದ ಚುನಾವಣೆಯ ಫಲಿತಾಂಶವು ಗುರುವಾರ ರಾತ್ರಿ ಹೊರಬಿದ್ದಿದ್ದು ಕಾಂಗ್ರೆಸ್ – ಎಸ್ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಒಟ್ಟು 33 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 12, ಎಸ್ಡಿಪಿಐ ಬೆಂಬಲಿತ 7, ಬಿಜೆಪಿ ಬೆಂಬಲಿತ 12 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ – ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಗಳ ಚುನಾವಣಾ ಮೈತ್ರಿ ಇದ್ದುದರಿಂದ ಒಂದೂವರೆ ದಶಕದ ಬಳಿಕ ಕಾಂಗ್ರೆಸ್ ಬೆಂಬಲಿತರು ಗಂಗೊಳ್ಳಿ ಗ್ರಾಮ ಪಂಚಾಯತಿಯ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಗಂಗೊಳ್ಳಿಯ ಒಟ್ಟು 8 ವಾರ್ಡ್ಗಳಲ್ಲಿ 1ನೇ ವಾರ್ಡಿನ ಒಟ್ಟು ಐದು ಸ್ಥಾನಗಳಲ್ಲಿ ಗುರುರಾಜ, ರೇಖಾ ಖಾರ್ವಿ ಸರೋಜಕೃಷ್ಣ ಪೂಜಾರಿ, ನಾಗರಾಜ ಖಾರ್ವಿ, ನಾಗರತ್ನ ಶೇರುಗಾರ್ ಗೆಲುವು ಸಾಧಿಸಿದ್ದಾರೆ. 2ನೇ ವಾರ್ಡಿನಲ್ಲಿ ತಬ್ರರೈಸ್, ಶರೀನಾ, ಅಬೂಬಕ್ಕರ್ ನಾಕುದಾ ಹಾಗೂ ರಜಬ್ ಗೆಲುವು ಸಾಧಿಸಿದ್ದಾರೆ. 3ನೇ ವಾರ್ಡಿನಲ್ಲಿ ದೀಪಾ, ಗೋಪಾಲ್ ಖಾರ್ವಿ, ಮಮತಾ…
