Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಆಗಸ್ಟ್ 27 ರಿಂದ ನಾಲ್ಕು ದಿನ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಸೇರಿದಂತೆ 20 ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ, ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಕರಾವಳಿಯಲ್ಲಿ ಗುಡುಗು ಸಹಿತ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪತ್ರಿಕೋದ್ಯಮದಲ್ಲಿ ನೀತಿಸಂಹಿತೆಗಳನ್ನು ಪಾಲಿಸುವುದು ಅತಿ ಮುಖ್ಯ ಎಂದು ಹಿರಿಯ ಪತ್ರಕರ್ತ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್. ಶೆಣೈ ಹೇಳಿದರು. ಅವರು ಸೋಮವಾರದಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಪತ್ರಿಕೋದ್ಯಮ ವಿಭಾಗ ಮತ್ತು ರೇಡಿಯೋ ಕುಂದಾಪ್ರ 89.6 ಎಫ್.ಎಮ್ ಅವರು ಜಂಟಿಯಾಗಿ ಆಯೋಜಿಸಿದ್ದ “ತಿಂಗಳ ಅತಿಥಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಿಕೋದ್ಯಮ ಇಂದು ತುಂಬಾ ಬೆಳೆದಿದೆ. ಮುದ್ರಣ ತಂತ್ರಜ್ಞಾನದಿಂದ ಆರಂಭಿಸಿ ಇಂದು ಕಂಪ್ಯೂಟರ್ ತಂತ್ರಜ್ಞಾನವನ್ನು ಬಳಸಿ ವಸ್ತು ವಿಷಯಗಳನ್ನು ಕ್ಷಣ ಕ್ಷಣಕ್ಕೂ ಮಾಹಿತಿಯನ್ನು ನೀಡುವವರೆಗೆ ಬೆಳೆದಿದೆ. ಅಂತರ್ಜಾಲವನ್ನು ಬಳಸಿಕೊಂಡು ವಿಷಯಗಳನ್ನು ಪಸರಿಸುವಲ್ಲಿ ಸಾಮಾಜಿಕ ಮಾಧ್ಯಮಗಳು ಮೇಲುಗೈ ಸಾಧಿಸುತ್ತಿದೆ. ಹೀಗಿರುವಾಗ ನಾವು ವಿಷಯಗಳನ್ನು ನೀಡುವಲ್ಲಿನ ಧಾವಂತವೋ ಅಥವಾ ಪ್ರಚಾರಕ್ಕಾಗಿ ಸುದ್ದಿಯನ್ನು ನೀಡಬಾರದು. ಆದರೆ ಸುದ್ದಿಯನ್ನು ಸಾರ್ವಜನಿಕರಿಗೆ ಕೊಡುವಾಗ ಕೂಲಂಕಷವಾಗಿ ಗಮನಿಸಿ ಪತ್ರಿಕೋದ್ಯಮದ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತಿ ಮುಖ್ಯ ಎಂದು ಅಭಿಪ್ರಾಯಪಟ್ಟರು. ಬರವಣಿಗೆಯ ನಮ್ಮಲ್ಲಿ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ. ಬರೆಯಬೇಕು ಎಂಬ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ರಿ. ಪ್ರವರ್ತಿತ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಮಂಡಿಸಿದ “ಕರಾವಳಿ ಕರ್ನಾಟಕದಲ್ಲಿರುವ ಗ್ರಾಮೀಣ ಮಹಿಳಾ ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕೊಯಮುತ್ತೂರಿನ ಭಾರತೀಯಾರ್ ವಿಶ್ವ ವಿದ್ಯಾನಿಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದ್ದಾರೆ. ಅವರ ಸಂಶೋಧನೆಗೆ ಉಡುಪಿ ಜಿಲ್ಲೆಯ ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ನಿವೃತ್ತ ವಾಣಿಜ್ಯ ಪ್ರಾಧ್ಯಾಪಕರಾದ ಡಾ|. ಎಸ್. ಗಣೇಶ ಭಟ್ ಮಾರ್ಗದರ್ಶನ ನೀಡಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖರು) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರಾತಿಗಾಗಿ ಅರ್ಹ ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 5 ರ ವರೆಗ ವಿಸ್ತರಿಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ಕೆವೈಎಸ್‌ಎ) ಆಯೋಜಿಸಿದ್ದ 6ನೇ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್‌ಶಿಪ್ ನಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಲಾಸ್ಯಾ ಮಧ್ಯಸ್ಥ ಅತ್ಯುತ್ತಮ ಪ್ರದರ್ಶನದ ಮೂಲಕ ರಾಷ್ಟ್ರೀಯ ಯೋಗಾಸನ ಕ್ರೀಡಾ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ಸಾಂಪ್ರದಾಯಿಕ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಟ್ವಿಸ್ಟಿಂಗ್ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ, ಸಾಂಪ್ರದಾಯಿಕ ತಂಡ ವಿಭಾಗದಲ್ಲಿ ಪ್ರಥಮ ಸ್ಥಾನ, ಬ್ಯಾಕ್ಬೆಂಡ್ ವೈಯಕ್ತಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ 3 ಚಿನ್ನದ ಪದಕಗಳನ್ನು ಹಾಗೂ 1 ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ. ಹಾಗೂ ಸಂಸ್ಥೆಯ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು, ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ಸೈನ್ಸಸ್ ಇನ್ಸ್ಟಿಟ್ಯೂಟ್ ಮತ್ತು ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಸಿಯೋತೆರೇಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಸಭೆ ಮತ್ತು ಪ್ರತಿಜ್ಞೆ ಸ್ವೀಕಾರ ಆಯೋಜಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾದ ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ಸಬ್ ಇನ್ಸ್ಪೆಕ್ಟರ್ ಭೀಮಶಂಕರ್ ಸಿನ್ನೂರ ಕಂಡ್ಲೂರು, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಸ್ ಹಾಗೂ ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ. ಎಸ್. , ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಇನ್ಸ್ಟಿಟ್ಯೂಟ್‌ನ ಡೀನ್ ಡಾ. ಪದ್ಮಚರಣ ಸ್ವೈನ್,  ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಹಾಗೂ ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್‌ನ ಉಪಪ್ರಾಂಶುಪಾಲರಾದ ಸೌಜನ್ಯಾ ಅವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ಸಬ್ ಇನ್ಸ್ಪೆಕ್ಟರ್ ಭೀಮಶಂಕರ್ ಸಿನ್ನೂರ ಕಂಡ್ಲೂರು ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರಾದ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟು ಮಾತನಾಡಿ, “ತಂದೆ ತಾಯಿ ಮತ್ತುಗುರುಗಳಿಗೆ ಗೌರವ ನೀಡಿ ಓದಿನಲ್ಲಿ ಕಠಿಣ ಶ್ರಮವನ್ನು ಹಾಕಿದ್ದಲ್ಲಿ ಖಂಡಿತ ಉತ್ತುಂಗ ಮಟ್ಟಕ್ಕೆ ಏರಬಹುದು. ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಪ್ರತಿಕ್ಷಣವೂ ಕೂಡ ಅಮೂಲ್ಯವಾದದ್ದು, ಋಣಾತ್ಮಕ ಚಿಂತನೆಯನ್ನು ಬಿಟ್ಟು ಧನಾತ್ಮಕವಾಗಿ ಆಲೋಚಿಸಿದಾಗ ನಮ್ಮ ಪ್ರಗತಿ ಸಾಧ್ಯ” ಎಂದು ವಿದ್ಯಾರ್ಥಿಗಳೊಂದಿಗೆ ಗಾದೆ, ಮನೋರಂಜನೆಯ ಆಟಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸಹ ಸಂಸ್ಥಾಪಕರಲ್ಲಿ ಓರ್ವರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಟಾನಗೊಳಿಸಲಾದ ಯೋಜನೆಗಳಾದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಬ್ಯಾಟರಿಚಾಲಿತ ಗಾಲಿಕುರ್ಚಿ, ನಿರಾಮಯ ಯೋಜನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಅಥವಾ ಖುದ್ದಾಗಿ ಮೇಲ್ಕಂಡ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕಿಶೋರ ಕನಕ ಕಾವ್ಯ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದ್ದು, 10 ರಿಂದ 15 ವರ್ಷದೊಳಗಿನ ಕಿಶೋರ ಪ್ರತಿಭೆಗಳಿಂದ ವೆಬ್‌ಸೈಟ್ https://kanakadasaresearchcenter.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 20 ರ ಒಳಗಾಗಿ ತಮ್ಮ ಇತ್ತೀಚಿನ ಭಾವಚಿತ್ರಗಳೊಂದಿಗೆ ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅಂಚೆ/ಕೊರಿಯರ್/ಖುದ್ದಾಗಿ ಅಥವಾ ಇ-ಮೇಲ್ kanakaresearchcentre@gmail.com ಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 6364529319 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಮಾಜದ ಕಟ್ಟ ಕಡೆಯ ಕೊರಗ ಕಾಲೋನಿಯಲ್ಲಿ ಸುಸರ್ಜಿತ ಮನೆ ನಿರ್ಮಿಸಿ ಕೊಡುವ ಗ್ರಾಮ ಪಂಚಾಯತ್ ಕೋಟತಟ್ಟು ಇವರ ಕಾರ್ಯ ನಿಜಕ್ಕೂ ದೇವರ ಪೂಜೆಗೆ ಸಮಾನ ಎಂದು ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್ ಕಾರಂತ್ ಅಭಿಪ್ರಾಯಪಟ್ಟರು. ಅವರು ಕೋಟತಟ್ಟು ಗ್ರಾಮಪಂಚಾಯತ್‌ನ ಚಿಟ್ಟಿಬೆಟ್ಟು ಪರಿಶಿಷ್ಟ ಪಂಗಡ ಕಾಲೋನಿಯಲ್ಲಿ ಮನೆ ನಿರ್ಮಿಸುವ ಕಾರ್ಯಕ್ಕೆ ದೇವಸ್ಥಾನದ ವತಿಯಿಂದ ಎರಡು ಲಕ್ಷ ಚೆಕ್ ವಿತರಿಸಿ ಮಾತನಾಡಿದರು. ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಅವರು ಗ್ರಾಮ ಪಂಚಾಯತ್ ಪರವಾಗಿ ಆಡಳಿತ ಮಂಡಳಿಗೆ ಧನ್ಯವಾದ ಸಮರ್ಪಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಗಣೇಶ್ ಮೂರ್ತಿ ನಾವಡ ಸದಸ್ಯರಾದ ಅನಂತ ಪದ್ಮನಾಭ ಐತಾಳ್, ಚಂದ್ರಶೇಖರ್ ಉಪಾಧ್ಯ ,ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಗ್ರಾಮ ಪಂಚಾಯತ್ ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ ವಿದ್ಯಾ ಪಿ. ಸಾಲಿಯಾನ್ ಉಪಸ್ಥಿತರಿದ್ದರು.

Read More