Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗ್ರಾಮ ಪಂಚಾಯತ್ ಗುಜ್ಜಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಗುಜ್ಜಾಡಿ ಗ್ರಾಪಂ. ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಕಾರದೊಂದಿಗೆ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಾಗೂ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರವು ಇಲ್ಲಿನ ಗುಜ್ಜಾಡಿ ಗ್ರಾಮ ಪಂಚಾಯತ್‌ನ ಸಭಾಭವನದಲ್ಲಿ ಶನಿವಾರ ನಡೆಯಿತು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರವು ಹಮ್ಮಿಕೊಂಡಿರುವ ಒಂದು ಪ್ರಮುಖ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಬೆಳವಣಿಗೆಯ ಕುಂಠಿತವನ್ನು ಕಡಿಮೆ ಮಾಡುವುದು. ಗರ್ಭಿಣಿಯರು, ಹದಿಹರೆಯದ ಹೆಣ್ಣುಮಕ್ಕಳು ಮತ್ತು ಮಕ್ಕಳಲ್ಲಿ ರಕ್ತಹೀನತೆಯನ್ನು ಕಡಿಮೆ ಮಾಡುವುದು. ಪೌಷ್ಟಿಕ ಆಹಾರದ ಬಗ್ಗೆ ಮತ್ತು ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮ ಮುಖ್ಯ ಉದ್ದೇಶ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಹಿಳೆಯರು ತಮಗಿರುವ ಹಕ್ಕುಗಳನ್ನು  ತಿಳಿದುಕೊಳ್ಳಬೇಕು. ಮುಖ್ಯವಾಗಿ ವೈಯಕ್ತಿಕ ನೆಲೆಯಲ್ಲಿ ಯೋಚಿಸಬೇಕು. ತನ್ನ ಬದುಕಿನುದ್ದಕ್ಕೂ  ಬರುವಂತಹ ಸವಾಲುಗಳನ್ನು ಎದುರಿಸುವುದಕ್ಕೆ ಸಿದ್ಧವಾಗುವುದಕ್ಕೆ ತಯಾರಾಗಿರಬೇಕು ಎಂದು ಉಡುಪಿಯ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಮತ್ತು ಸಲಹೆಗಾರರಾದ ಸೌಜನ್ಯ ಶೆಟ್ಟಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ “ಮಹಿಳಾ ಕಿರುಕುಳ ವಿರೋಧಿ ಕೋಶ 2025-26” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ, ಆರ್ಥಿಕ, ಸಾಮಾಜಿಕ, ಉದ್ಯೋಗ, ಕಾನೂನು ಜ್ಞಾನ ಇವೆಲ್ಲವುಗಳನ್ನು ತಿಳಿದಿರಬೇಕು. ಮುಖ್ಯವಾಗಿ ಯುವತಿಯರು ತಮ್ಮ ಹದಿಹರೆಯದಲ್ಲಿ ಬರುವಂತಹ ಸಮಸ್ಯೆಗಳು ಬರದಂತೆ ಜಾಗೃತರಾಗಬೇಕು. ಅಲ್ಲದೆ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಿಂದ ಮಹಿಳೆಯರು ಮತ್ತು ಯುವತಿಯರು ಮೋಸಕ್ಕೆ ಒಳಗಾಗುತ್ತಿರುವದು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆ ಇತಿಮಿತಿಯಲ್ಲಿರಲಿ. ಈಗಿನ ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಖಾಸಗಿ ಫೋಟೊ ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಪ ಲೋಡ್ ಮಾಡುವಾಗ ಸೊಸೆ ತುಂಬಾ ಜಾಗೃತರಾಗಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಮೂಡುಬಿದಿರೆ: ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಪದವಿ ಪೂರ್ವ ವಿಭಾಗದಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಗಾಗಿ ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು(ಆಸೆ) ಕಳೆದ ಎರಡು ವರ್ಷಗಳಿಂದ ಆಯೋಜಿಸುತ್ತಿದೆ.   10ನೇ ತರಗತಿ (ಎಸ್ಸೆಸ್ಸೆಲ್ಸಿ)ಯಲ್ಲಿ ಸಿಬಿಎಸ್‌ಇ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ), ಐಸಿಎಸ್‌ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ)ದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ವಿದ್ಯಾರ್ಥಿಗಳು ಶ್ರೇಷ್ಠ ಗುಣಮಟ್ಟದ ಪದವಿಪೂರ್ವ ಶಿಕ್ಷಣವನ್ನು ಆಳ್ವಾಸ್ ಪದವಿ ಪೂರ್ವ ಕಾಲೇಜಿನಿಂದ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಷಯಗಳಲ್ಲಿ ಪಡೆಯಬಹುದು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ದಾನಗಳಲ್ಲೇ ಅತ್ಯಂತ ಶ್ರೇಷ್ಠ ದಾನ ರಕ್ತದಾನ. ಒಬ್ಬ ವ್ಯಕ್ತಿಯು ನೀಡುವ ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಕಾರ್ಯಗಳಲ್ಲಿ ಕೈಜೋಡಿಸಿ ಜನರ ಜೀವ ಉಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತನಿಧಿ ಕೇಂದ್ರ, ಯೂತ್ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಪೂರ್ಣ ಪ್ರಜ್ಞ (ಸ್ವಾಯತ್ತ) ಕಾಲೇಜು, ಪೂರ್ಣ ಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಪೂರ್ಣ ಪ್ರಜ್ಞ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್ ಇವರ ಸಂಯುಕ್ತ ಆಶ್ರಯದಲ್ಲಿ ಪೂರ್ಣ ಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನ ಪ್ರಜ್ಞ ಸಭಾಂಗಣದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2025 ಹಾಗೂ ರಕ್ತದಾನಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಅತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ ಕ್ಷೇತ್ರಕ್ಕೆ ಸುಬ್ರಹ್ಮಣ್ಯ ಧಾರೇಶ್ವರರ ಕೊಡುಗೆ ಅಪಾರವಾದ್ದು ಅಂತಹ ಮಹಾನ್ ಚೇತನರ ಹೆಸರನ್ನು ಚಿರಸ್ಥಾಯಿಯಾಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಯಕ್ಷಪ್ರೋತ್ಸಾಹ ಪಾರಂಪಳ್ಳಿ ರವೀಂದ್ರ ಐತಾಳ್ ನುಡಿದರು. ಅವರು ಗುಂಡ್ಮಿ ಯಕ್ಷಗಾನ ಕಲಾಕೇಂದ್ರ ಐರೋಡಿ ಹಂಗಾರಕಟ್ಟೆಯಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಯಕ್ಷಸಪ್ತೋತ್ಸವ ಆರನೇ ದಿನದ ಭಾಗವತ ದಿ. ಸುಬ್ರಹ್ಮಣ್ಯ ಧಾರೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಮರಣಾ ನುಡಿಗಳನ್ನಾಡಿದರು. ಧಾರೇಶ್ವರರಂತಹ ಮಹಾನ್ ಕಲಾವಿದರು ಬಡಗುತಿಟ್ಟನ್ನು ಶ್ರೀಮಂತವಾಗಿಸಿದ್ದಾರೆ, ಕಲಾವಿದರಿಗೆ ಚೈತನ್ಯ ತುಂಬುವುದರ ಜತೆಗೆ ಯಕ್ಷಗಾನದ ಪಾರಂಪರಿಕ ಸೊಗಡನ್ನು ಶ್ರೇಷ್ಠವಾಗಿಸಿದ್ದಾರೆ. ಇಂತಹ ಮಹಾನ್ ಯಕ್ಷಕಲಾವಿದರ ಹೆಸರನ್ನು ಕಲಾಕೇಂದ್ರದ ಮೂಲಕ ಉಳಿಸಿ ಬೆಳೆಸವಂತೆ ಮಾಡಿದ್ದಾರೆ ಎಂದರು. ಇದೇ ವೇಳೆ ತೆಂಕು ತಿಟ್ಟಿನ ಭಾಗವತ ಪೆರ್ಲ ಸತ್ಯನಾರಾಯಣ ಪುಣೆಂಚಿತ್ತಾಯ ಅವರಿಗೆ ಸುಬ್ರಹ್ಮಣ್ಯ ಧಾರೇಶ್ವರ ಪ್ರಶಸ್ತಿ ಪ್ರದಾನಿಸಲಾಯಿತು. ಪತ್ರಕರ್ತ ರವೀಂದ್ರ ಕೋಟ ಅಭಿನಂದನಾ ನುಡಿಗಳನ್ನಾಡಿದರು. ಸಭೆಯ ಅಧ್ಯಕ್ಷತೆಯನ್ನು ಕಲಾಕೇಂದ್ರದ ಯಕ್ಷಗುರು ಸದಾನಂದ ಐತಾಳ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಅಜಪುರ ಕರ್ನಾಟಕ ಯಕ್ಷಗಾನ ಸಂಘದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯದ ಹೆಸರಾಂತ ಸಾಂಸ್ಕೃತಿಕ ಸಂಸ್ಥೆಯಾದ ಸುರಭಿ ರಿ. ಬೈಂದೂರು ತನ್ನ 25ನೇ ವರ್ಷದ ರಜತಯಾನದ ಪ್ರಯುಕ್ತ ಡಿಸೆಂಬರ್ ತಿಂಗಳ 3ನೇ ವಾರದಲ್ಲಿ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆಯನ್ನು ಆಯೋಜಿಸಿದೆ. ನಾಟಕ ಸ್ಪರ್ಧೆಯಲ್ಲಿ ರಾಜ್ಯದ ಯಾವುದೇ ಜಿಲ್ಲೆಯ (ಕಾಸರಗೋಡು ಸಹಿತ)  ಹವ್ಯಾಸಿ ನಾಟಕ ತಂಡಗಳು ಭಾಗವಹಿಸಲು ಮುಕ್ತ ಅವಕಾಶವಿದೆ. ಸ್ಪರ್ಧಾ ವಿವರಗಳು: ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕನಿಷ್ಠ 01 ಘಂಟೆ 30ನಿಮಿಷದ ಹಾಗೂ ಗರಿಷ್ಠ 02 ಘಂಟೆ 15 ನಿಮಿಷ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ನಾಟಕ ಪ್ರದರ್ಶನ ಮಾಡಬಹುದು. ಸ್ಫರ್ಧೆಗೆ ಗರಿಷ್ಠ 8 ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ಅನುಕ್ರಮವಾಗಿ ರೂ 40,000/-ರೂ 30,000/- ರೂ 20,000/- ದ ನಗದು ಬಹುಮಾನಗಳನ್ನು ಹಾಗೂ ಶಾಶ್ವತ ಫಲಕಗಳನ್ನು ನೀಡಲಾಗುವುದು. ಅಲ್ಲದೇ ಶ್ರೇಷ್ಠ ನಿರ್ದೇಶನ, ನಟ, ನಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ  ಮತ್ತು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. 17ರ ವಯೋಮಾನದ ಬಾಲಕಿಯರ ವಿಭಾಗದ ಸಾಂಪ್ರದಾಯಿಕ (ಟ್ರಡೀಷನಲ್) ಯೋಗಾಸನ ಸ್ಪರ್ಧೆಯಲ್ಲಿ ವಿಜೇತಳಾಗಿರುವ ವಿದ್ಯಾರ್ಥಿನಿಯು ಅರುಣ ಮಧ್ಯಸ್ಥ ಮತ್ತು ಲತಾ ಮಧ್ಯಸ್ಥ ದಂಪತಿಯ ಪುತ್ರಿ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ ಒಟ್ಟು 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್‌ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಇದುವರೆಗೆ 392 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅವುಗಳು ಪರಿಶೀಲನೆಗೆ ಅಲಭ್ಯವಾಗಿದ್ದು ಅರ್ಜಿ ಸಲ್ಲಿಕೆಯನ್ನು ಅ.20 ರವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆಯನ್ನು ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd ನಲ್ಲಿ ನಮೂದಿಸಿ ಮೊದಲಿಗೆ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಸಹಿ ಹಾಗೂ ಭಾವಚಿತ್ರವನ್ನು ಅಪ್ ಲೋಡ್ ಮಾಡಿ ಕಡ್ಡಾಯವಾಗಿ ಇ-ಸೈನ್ ಹಾಕಿದ ಬಳಿಕ ಮೂರನೇ ಹಂತದಲ್ಲಿ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ಅಪ್ ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಅರ್ಜಿಗಳನ್ನು ಮುದ್ರಿಸಬಹುದಾಗಿದ್ದು, ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಸಾಹಿತ್ಯ ಕೃಷಿ ಆರಂಭಿಸಿದ ಡಾ. ಶಿವರಾಮ ಕಾರಂತರು ಈ ನೆಲದ ಸಂಸ್ಕೃತಿಯನ್ನು ತಮ್ಮ ಕೃತಿಗಳಲ್ಲಿ ಅಭಿವ್ಯಕ್ತಗೊಳಿಸಿದ್ದಾರೆ. ಇಂದಿನ ಯುವಜನಾಂಗ ಅಧ್ಯಯನ ಮಾಡಿದಲ್ಲಿ ಅವರಿಗೆ ಸೃಜನಶೀಲ ಬರವಣಿಗೆಗೆ ಪ್ರೇರಣೆಯಾಗಬಹುದು ಎಂದು ಮಾಹೆಯ ಗಾಂಧಿ ಅಧ್ಯಯನ ಕೇಂದ್ರ ನಿರ್ದೇಶಕ ಡಾ. ವರದೇಶ್ ಹಿರೇಗಂಗೆ ಹೇಳಿದರು. ಅವರು ಕನ್ನಡ ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ನ ಯುವ ಬರಹಗಾರರ ಸಮಾವೇಶ ಮತ್ತು ಕಾರಂತ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತ ಅಧಿಕಾರಿಯಾದ ಡಾ. ಕೆ. ಶ್ರೀಧರ್ ಪೈ ಅವರು ಮಾತನಾಡಿ, ಕಾರಂತರ ಬಹುಮುಖ ಪ್ರತಿಭೆ ಇಂದಿನ ವಿದ್ಯಾರ್ಥಿಗಳಿಗೆ ಪರಿಚಯವಾಗಲು ಈ ಶಿಬಿರ ಪೂರಕವಾಗಿದೆ ಎಂದು ಶುಭ ಹಾರೈಸಿದರು. ಎಂ.ಜಿ.ಎಂಸಂಧ್ಯಾಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅವರು ಅಧ್ಯಕ್ಷತೆ ವಹಿಸಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗರ್ಭಿಣಿಯರು ಸೇರಿದಂತೆ ಮಕ್ಕಳ ಪೌಷ್ಟಿಕಾಹಾರ ಸಮತೋಲನಕ್ಕಾಗಿ ಪ್ರಧಾನಮಂತ್ರಿಗಳು ಪೋಷಣ್ ಅಭಿಯಾನವನ್ನು ಅನುಷ್ಠಾನಗೊಳಿಸಿ ನಿರಂತರವಾಗಿ ಜನರಿಗೆ ತಲುಪಿದಾಗ ಯಶಸ್ಸು ಕಾಣಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಡುಪಿ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ ಹೇಳಿದರು. ಅವರು ಗುರುವಾರ ಸಾಲಿಗ್ರಾಮ ಪಟ್ಟಣಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ನರು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಸಾಲಿಗ್ರಾಮಪ್ರಾಥಮಿಕ ಆರೋಗ್ಯ ಕೇಂದ್ರ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಇವರ ಸಹಯೋಗದೊಂದಿಗೆ ಪೋಷಣ್ ಅಭಿಯಾನ, ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರಿಸರಕ್ಕೆ ಪೂರಕವಾದ ವಾತಾವರಣ ಸೃಷ್ಠಿಸಲು ಸಲುವಾಗಿ ತಾಯಿ ಹೆಸರಿನಲ್ಲಿ ಗಿಡ ನಡುವ ಸಂಕಲ್ಪಕ್ಕೆ ಕರೆ ನೀಡಿ ಗ್ರಾಮಗ್ರಾಮದಲ್ಲಿ ಪೋಷಣ್ ಯೋಜನೆ ಪರಿಣಾಮಕಾರಿಯಾಗಿ ಕಾರ್ಯಾಚರಿಸುತ್ತಿದೆ ಇದರ ಪ್ರಯೋಜನ ಪಡೆಯುವಂತೆ ತಾಯಂದಿರರಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ…

Read More