Author: ನ್ಯೂಸ್ ಬ್ಯೂರೋ
ಬೈಂದೂರು ಚಂದ್ರಶೇಖರ ನಾವಡ | ಕುಂದಾಪ್ರ ಡಾಟ್ ಕಾಂಕುಂದಾಪ್ರ ಕನ್ನಡ ಎನ್ನುವ ಕನ್ನಡದ ಭಾಷಾ ಪ್ರಾಕಾರವೊಂದು ಸಿನಿಮಾಗಳಲ್ಲಿ ಹೆಚ್ಚಾಗಿ ಹಾಸ್ಯಕ್ಕಷ್ಟೇ ಸೀಮಿತವಾದ ಕಾಲವೊಂದಿತ್ತು. ಸದ್ಯ ಅಂತಹ ಸನ್ನಿವೇಶಗಳಿಲ್ಲ. ಕುಂದಾಪ್ರ ಕನ್ನಡದಲ್ಲಿಯೂ ಹಲವು ಸಿನಿಮಾ ಕಿರುಚಿತ್ರಗಳು ನಿರ್ಮಾಣಗೊಂಡಿದೆ. ಕಾಂತಾರದ ಯಶಸ್ಸಿನ ನಂತರ ಇದೀಗ ಸತೀಶ್ ಎಂ ಬೈಂದೂರು ಅವರ ಲಕ್ಷ್ಮೀ ಪ್ರೊಡಕ್ಷನ್ ಬ್ಯಾನರ್ ಅಡಿ ರಾಘವೇಂದ್ರ ಶಿರಿಯಾರ ನಿರ್ದೇಶನದಲ್ಲಿ ಕುಂದಗನ್ನಡದ ಗ್ರಾಮೀಣ ಸೊಗಡಿನ ’ವಸಂತಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಸಿನಿಮಾದ ಶೂಟಿಂಗಿಗೆ ಆಯ್ಕೆ ಮಾಡಿಕೊಂಡ ಸಹ್ಯಾದ್ರಿಯ ತಪ್ಪಲಿನ ಹಾಲಾಡಿ ಪರಿಸರ ನೈಸರ್ಗಿಕ ಸೌಂದರ್ಯದ ಖನಿ. ಇಲ್ಲಿನ ನೆಲ-ಜಲ, ನದಿ, ಕಾಡು, ಗುಡ್ಡ-ಬೆಟ್ಟ, ಗದ್ದೆ, ತೋಟದ ನಡುವೆಯ ಸುಂದರ ಚಿತ್ರಣ ’ವಸಂತಿ’ಯ ಮೂಲಕ ಸಮಸ್ತ ಕನ್ನಡಿಗರಿಗೆ ಪರದೆಯ ಮೇಲೆ ನೋಡಿ ಆನಂದಿಸುವ ಅವಕಾಶ ದೊರೆತಂತಾಗಿದೆ. ಕರಾವಳಿಯ ಭೂತಾರಾಧನೆ, ನಾಗಾರಾಧನೆ, ಕುಂದಾಪ್ರ ಕನ್ನಡದ ಕಂಪು-ತಂಪು ಇಂಪಾಗಿ ಪ್ರೇಕ್ಷಕನ ಹೃದಯ ತಟ್ಟುತ್ತದೆ. ಸ್ಥಳೀಯ ರಂಗ ಕಲಾವಿದರೇ ಅಭಿನಯಿಸಿರುವ ಸಿನಿಮಾದ ನಾಯಕಿ ವಸಂತಿ ಓರ್ವ ಗೇರು ಬೀಜ ಕಾರ್ಖಾನೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.14: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರ ಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಕುಶಲಕರ್ಮಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದರ ಜೊತೆಗೆ ಅವರುಗಳಿಗೆ ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಿ, ಸ್ವಾವಲಂಭಿ ಜೀವನ ನಡೆಸುವುದರೊಂದಿಗೆ ಆರ್ಥಿಕರಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದರು. ಈ ಯೋಜನೆ ಕುಶಲಕರ್ಮಿಗಳಿಗೆ ಸಹಾಯ ಆಧಾರಿತ ಯೋಜನೆಯಾಗಿದ್ದು, ವಿವಿಧ ವೃತ್ತಿಯಲ್ಲಿ ತೊಡಗಿಸುವ ಕುಶಲಕರ್ಮಿಗಳಿಗೆ ಸೌಲಭ್ಯ ಕಲ್ಪಿಸುವ ಉದ್ದೇಶವಾಗಿದೆ. ಸಾಮಾನ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಅಧಿದೇವತೆ ಶ್ರೀ ಕುಂದೇಶ್ವರನ ಸನ್ನಿಧಿಯ ದೀಪೋತ್ಸವವು ಮಂಗಳವಾರ ಸಂಭ್ರಮದಿಂದ ಜರುಗಿತು. ಭಾನುವಾರದಿಂದ ದೇವಳದಲ್ಲಿ ಪುಣ್ಯಾಹ ವಾಚನ, ದೇವನಾಂದಿ, ದ್ವಾದಶ ನಾರಿಕೇಳ ಮಹಾ ಗಣಪತಿ ಹೋಮ, ಸಂಪೂರ್ಣ ನವಗ್ರಹ ಹೋಮ, ದುರ್ಗಾ ಹೋಮ ಸಹಿತ ಲೋಕಕಲ್ಯಾಣಾರ್ಥವಾಗಿ ಸದ್ಯೋಜಾತಾದಿ ಅಧಿವಾಸ ಯಾಗ, ಪೂರ್ಣಾಹುತಿ ಬ್ರಹ್ಮಕಲಶಾಭಿಷೇಕ, ಮಹಾಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಬಳಿಕ ಸಂಜೆ ಸಾಲಿಗ್ರಾಮ ಮಕ್ಕಳ ಮಹಿಳಾ ಕೋಟ ಇವರಿಂದ ವೀರಶ ಸೇನಾ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಮಂಗಳವಾರ ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ಕುಂದಾಪುರ ತಾಲೂಕಿನ ಭಜನಾ ಮಂಡಳಿಗಳ ಒಕ್ಕೂಟದಿಂದ ದೇವರ ನಾಮ ಸಂಕೀರ್ತನೆ ಮತ್ತು ಕುಣಿತ ಭಜನೆ ಕಾರ್ಯಕ್ರಮ ನಡೆಯಿತು. ಕುಂದೇಶ್ವರ ದೇವರ ಸನ್ನಿಧಿಯಲ್ಲಿ ರಂಗಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ಬಳಿಕ ಸಾವಿರಾರು ಭಕ್ತರ ಸಮ್ಮುಖದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಪುಷ್ಪಕ ರಥದಲ್ಲಿ ಶ್ರೀದೇವರ ಪುರ ಮೆರವಣಿಗೆ, ಕಟ್ಟೆ ಪೂಜೆ, ಕೆರೆದೀಪ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು. ದೇವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಜತ ಸಂಭ್ರಮದಲ್ಲಿರುವ ಶಂಕರನಾರಾಯಣದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ‘ರೌಪ್ಯೋತ್ಸವ’ ಲಾಂಛನವನ್ನು ಸೋಮವಾರ ಬಿಡುಗಡೆ ಮಾಡಲಾಯಿತು. ರೌ ರೌಪ್ಯೋತ್ಸವ ಮುನ್ನುಡಿ ಎನ್ನುವಂತೆ ‘ಪ್ರೀತಿ ಎಲ್ಲವನ್ನು ಗೆಲ್ಲುತ್ತದೆ ‘ ಎಂಬ ಸಂಸ್ಥೆಯ ಸಂದೇಶದೊಂದಿಗೆ ಪ್ರೀತಿಯ ಸಂಕೇತದ ಕೆಂಪು ಬಲೂನ್ ಗಳನ್ನು ರೌಪ್ಯದ ಲಾಂಛನದೊಂದಿಗೆ ಆಕಾಶದ ಎತ್ತರಕ್ಕೆ ಹಾರಿಸಿಬಿಡುವ ಮೂಲಕ ರೌಪ್ಯದ ಲೋಗೋವನ್ನು ಆಡಳಿತ ನಿರ್ದೇಶಕರು ಬಿಡುಗಡೆಗೊಳಿಸಿದರು. ರೌಪ್ಯದ ಲಾಂಛನ ಬಿಡುಗಡೆಗೊಳಿಸಿದ ಸಂಸ್ಥೆಯ ಆಡಳಿತ ನಿರ್ದೇಶಕರು ಮಾತನಾಡಿ, ರೌಪ್ಯ ಎನ್ನುವುದು ಬೆಳ್ಳಿಯ ಸಂಸ್ಕೃತ ಪದವಾಗಿದೆ. ಲಾಂಛನದಲ್ಲಿರುವ ಕುದುರೆಯು ಅವಿರತವಾದ ಓಟವನ್ನು ಹಾಗೂ ಅದರಲ್ಲಿನ ಸೂರ್ಯಕಿರಣಗಳು 25 ಸಂವತ್ಸರಗಳನ್ನು ಸೂಚಿಸುತ್ತವೆ ಎಂದರು. ಬಡ ಹಾಗೂ ಮಧ್ಯಮ ವರ್ಗದ ಮಕ್ಕಳು ಶಿಕ್ಷಣವನ್ನು ಅರಸಿ ತುಂಬಾ ದೂರ ಹೋಗಬೇಕಾದ ಸನ್ನಿವೇಶದಲ್ಲಿ ಶಂಕರನಾರಾಯಣದ ಸುತ್ತಮುತ್ತ ಗ್ರಾಮಗಳ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟ ಶಿಕ್ಷಣ ನೀಡಿದ್ದರ ಕುರಿತು ಸಾರ್ಥಕತೆ ಕಂಡುಕೊಂಡ ಕುರಿತು ಸಂತಸ ವ್ಯಕ್ತಪಡಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕ ಶಿಕ್ಷಕೇತರ ಬಂಧುಗಳು ಸ್ನೇಹ ಮತ್ತು ಶಾಂತಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ರಕ್ತದಾನ ಮಾನವಕುಲಕ್ಕೆ ಸಹಾಯ ಮಾಡುವ ಅತ್ಯುತ್ತಮ ಮಾರ್ಗಗಳಲ್ಲಿ ಒಂದೆಂದು ಪರಿಗಣಿಸಿರುವುದರಿಂದ ರಕ್ತದಾನ ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕು. ರಕ್ತದಾನವು ಆರೋಗ್ಯ ರಕ್ಷಣೆಯ ಪ್ರಮುಖ ಭಾಗವಾಗಿದೆ ಮತ್ತು ಅನೇಕ ಆರೋಗ್ಯ ಸಮಸ್ಯೆಗಳ ನಿರ್ವಹಣೆಯಲ್ಲಿ ರಕ್ತದ ಅವಶ್ಯಕತೆ ಇದೆ. ಅಲ್ಲದೇ ರಕ್ತ ವರ್ಗಾವಣೆಯ ಕ್ಷೇತ್ರದಲ್ಲಿ ವಿಜ್ಞಾನವು ಹೆಚ್ಚಿನ ಪ್ರಗತಿ ಸಾಧಿಸಿದ್ದು, ಇದರಿಂದಾಗಿ ಅನೇಕ ಜೀವಗಳನ್ನು ಉಳಿಸಲಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ ಹೇಳಿದರು. ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಭಾರತೀಯ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ಭಾನುವಾರ ಸಂಘದ ಆವರಣದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ವ್ಯವಸಾಯಕ್ಕೆ ಪೂರಕವಾಗಿ ಸೇವಾ ಮನೋಭಾವನೆಯಿಂದ ರೈತರ ಹಿತಕ್ಕಾಗಿರುವ ಸಹಕಾರಿ ಸಂಸ್ಥೆ ಗ್ರಾಮೀಣ ಭಾಗದ ಜನರಿಗೆ ರಕ್ತದಾನದ ಮಹತ್ವ, ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸುವಂತ ಕಾರ್ಯ ಮಡುತ್ತಿರುವುದು ಶ್ಲಾಘನೀಯ ಎಂದರು. ಭಾರತೀಯ ರೆಡ್ಕ್ರಾಸ್ ಸೊಸೈಟಿ ಅಧ್ಯಕ್ಷ ಜಯಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ರೌಪ್ಯೋತ್ಸವದ ಅಂಗವಾಗಿ ಆಕೃತಿ ಶೀರ್ಷಿಕೆಯಡಿಯಲ್ಲಿ 09-12-23 ಶನಿವಾರದಂದು ಪೋಷಕರಿಗಾಗಿ ರಂಗೋಲಿ, ಚಿತ್ರಕಲೆ, ಕೋಲೇಜ್ ರಚನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಉದ್ಘಾಟನೆ ಗೈದು ಮಾತನಾಡಿದ ಶ್ರೀಯುತ ರಾಘವೇಂದ್ರ ಚಾತ್ರಮಕ್ಕಿ ಆಕೃತಿ ಎಂಬ ಪರಿಕಲ್ಪನೆಯನ್ನು ತಮ್ಮ ಚಿತ್ರಕಲಾ ಭಾಷೆಯಲ್ಲಿ ವಿಶ್ಲೇಷಿಸುತ್ತಾ ಬಿಂದು, ರೇಖೆಗಳಿಂದ ಸಂಪೂರ್ಣ ಆಕೃತಿ ರಚನೆಯಾಗುತ್ತದೊ ಹಾಗೆ 1998ರಲ್ಲಿ ಬಿಂದುವಿನಿಂದ ಆರಂಭವಾದ ಶಿಕ್ಷಣ ಸಂಸ್ಥೆ ಇಂದು 25 ಸಂವತ್ಸರಗಳನ್ನು ಪೂರೈಸಿ ಒಂದು ಪರಿಪೂರ್ಣ ಆಕೃತಿಯನ್ನು ಪಡೆದುಕೊಂಡಿದೆ ಎಂಬುದರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು . ಕಾರ್ಯಕ್ರಮದ ಮುಖ್ಯ ಅತಿಥಿಗಳು ಹಾಗೂ ತೀರ್ಪುಗಾರರಾಗಿ ಸರಕಾರಿ ಪ್ರೌಢಶಾಲೆ ಸಿದ್ದಾಪುರದ ಚಿತ್ರಕಲಾ ಶಿಕ್ಷಕರಾದ ರಾಘವೇಂದ್ರ ಚಾತ್ರಮಕ್ಕಿ, ಸರಕಾರಿ ಪ್ರೌಢಶಾಲೆ ವಡೇರ ಹೋಬಳಿ ಯ ಚಿತ್ರಕಲಾ ಶಿಕ್ಷಕರಾದ ವೇಣುಗೋಪಾಲ್ ಶೆಟ್ಟಿ ಹಾಗೂ ಚಿತ್ತಾರ ಸಂಸ್ಥೆಯ ಸಂಚಾಲಕರಾದ ರಾಜೇಂದ್ರ ಹಳ್ಳಿಹೊಳೆ ಆಗಮಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯ ಅತಿಥಿಗಳು ಕಲಾ ಕುಂಚದ ಮೂಲಕ ದೀಪವನ್ನು ಪ್ರಜ್ವಲಿಸುವಂತೆ ಮಾಡಿ ವಿನೂತನ ಮಾದರಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಸ್ಯಾಂಡಲ್ವುಡ್ ನಲ್ಲಿ ಕರಾವಳಿ ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಿದ್ದು ಸದ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅನ್ನು ಮಂಗಳೂರಿನಲ್ಲಿ ಅದ್ದೂರಿಯಾಗಿ ಲಾಂಚ್ ಮಾಡಲಾಯಿತು. ಅಂದಹಾಗೆ ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ. ಸದ್ಯ ರಿಲೀಸ್ ಆಗಿರುವ ಟೀಸರ್ನಲ್ಲಿ ಜಗತ್ತಿಗೆ ಎಂಟ್ರಿ ಕೊಡುವ ಎರಡು ಹೊಸ ಜೀವಗಳನ್ನು ನೋಡಬಹುದು. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜೊತೆಗೆಯೇ ಎಮ್ಮೆ ಕೂಡ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಈ ಟೀಸರ್ ನೋಡ್ತಿದ್ರೆ ಮನುಷ್ಯ…
