ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮದ್ರಾಸ್ ಐ.ಐ.ಟಿ ವತಿಯಿಂದ 2024ರ ಆರ್ಕಿಟೆಕ್ಚರ್ ಆಪ್ಟಿಟ್ಯೂಡ್ ಟೆಸ್ಟ್ ( ಎ.ಎ.ಟಿ ) ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೆಲವೇ ಐ ಐ ಟಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಕಲಿಯಲು ಅವಕಾಶವಿರುತ್ತದೆ. ಇಂತಹ ಅತ್ಯಂತ ಕಷ್ಟಕರವಾದ ಪರೀಕ್ಷೆಯಲ್ಲಿಯೂ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿ ಶಮಿತ್. ಎನ್ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಿಸ್ತು, ಸಮಯಪ್ರಜ್ಞೆ, ಸೃಜನಶೀಲತೆ, ಕ್ರೀಡಾಮನೋಭಾವ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಅಪಾರ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಡಾ. ಎಂ ಮೋಹನ ಆಳ್ವ ಹೇಳಿದರು. ನಗರದ ಸ್ವರಾಜ್ ಮೈದಾನದ ಸ್ಕೌಟ್ಸ್ – ಗೈಡ್ಸ್ ಕನ್ನಡ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠತನದ ಮೂಡುಬಿದಿರೆ ಸಹಯೋಗದಲ್ಲಿ ನಡೆದ 2024-205 ಸಾಲಿನ ಎಸ್ಸಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೆಂಜರ್ಸ್ಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣದ ಪಠ್ಯ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳು ಶೈಕ್ಷಣಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿರುವುದು ಅಭಿನಂದನಾರ್ಹ ಎಂದರು. ಉತ್ತಮ ಅಂಕಗಳನ್ನು ಗಳಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 96ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ವೇದಿಕೆಯಲ್ಲಿ ಸದಾನಂದ ಕುಂದಾಪುರ, ಗಣೇಶ್ ಪೂಜಾರಿ ಗಂಗೊಳ್ಳಿ, ಮಾಲತಿ ಗಣೇಶ್ ಪೂಜಾರಿ, ಶ್ರೀಧರ್ ನಾಯಕ್ ಗುಡ್ಡೆಯಂಗಡಿ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ರವರು ಉಪಸ್ಥಿತರಿದ್ದರು. ಅಕಾಡೆಮಿಯ ವತಿಯಿಂದ ಉದಯೋನ್ಮುಖ ಕೊಳಲು ವಾದಕ ಶಾಮ್ ಜಿ.ಎನ್. ಪೂಜಾರಿ, ಗಂಗೊಳ್ಳಿ ಹಾಗೂ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ 2023-24ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸಮೀಕ್ಷಾ ಪೂಜಾರಿಯವರನ್ನು ಗೌರವಿಸಲಾಯಿತು. ನಂತರ ಬಾಲ ಪ್ರತಿಭೆ ಶಾಮ್ ಜಿ.ಎನ್. ಪೂಜಾರಿಯವರು ನಡೆಸಿಕೊಟ್ಟ ಕೊಳಲು ವಾದನ ಕಛೇರಿ ನೆರೆದ ಪ್ರೇಕ್ಷಕರನ್ನು ದಿಗ್ಭ್ರಮೆಗೊಳಿಸಿತು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ರವರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾಗ ದಾಳಿ ನಡೆಸಿದ ಬೈಂದೂರು ಪೊಲೀಸರು ಎತ್ತು ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಸೋಮವಾರ ರಾತ್ರಿ 9.30 ರ ಸುಮಾರಿಗೆ ಘಟನೆ ನಡೆದಿದ್ದು, ಬೈಂದೂರು ಎಸೈ ತಿಮ್ಮೇಶ್.ಬಿ.ಎನ್, ಗಸ್ತಿನಲ್ಲಿದ್ದಾಗ ಬಂದ ಮಾಹಿತಿಯಂತೆ ದಾಳಿ ನಡೆಸಿದ್ದಾರೆ. ಇಬ್ಬರು ಆರೋಪಿಗಳು ಟಾಟಾ ಎಸ್ ವಾಹನದಲ್ಲಿ ಜಾನುವಾರನ್ನು ತುಂಬಿಕೊಂಡು ಶಿರೂರು ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದರು. ಶಿರೂರು ಕೆಳಪೇಟೆ ಬಳಿ ವಾಹನ ತಪಾಸಣೆ ಮಾಡುತ್ತಿರುವಾಗ ವಾಹನವನ್ನು ತಡೆಯಲಾಯಿತು. ಟಾಟಾ ಏಸ್ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕನು ವಾಹನವನ್ನು ನಿಲ್ಲಿಸದೇ ಮುಂದಕ್ಕೆ ಚಲಾಯಿಸಿಕೊಂಡು ಹೋಗಿದ್ದು, ಕೂಡಲೇ ಟಾಟಾ ಎಸ್ ವಾಹನವನ್ನು ಜೀಪಿನಲ್ಲಿ ಬೆನ್ನಟ್ಟಿ ಕೊಂಡು ಹೋಗಿ ಮೊಮಿನ್ ಮೊಹಲ್ಲಾ ಬಳಿ ತಡೆದು ನಿಲ್ಲಿಸಿದಾಗ ಟಾಟಾ ಎಸ್ ವಾಹನದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿಯು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ವಾಹನದ ಹಿಂಬದಿಯಲ್ಲಿ ಒಂದು ಎತ್ತನ್ನು ಹಿಂಸಾತ್ಮಕವಾಗಿ ಹಳದಿ ನೈಲಾನ್ ಹಗ್ಗದಿಂದ ಕೈಕಾಲುಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನೇತೃತ್ವದಲ್ಲಿ ಈ ಭಾರಿ ಆಯೋಜಿಸಲಾಗುತ್ತಿರುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪೂರ್ವಭಾವಿ ಸಭೆ ಸೋಮವಾರ ಕಲಾಕ್ಷೇತ್ರ ಕಛೇರಿಯಲ್ಲಿ ಜರುಗಿತು. ಈ ವೇಳೆ ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಮಾತನಾಡಿ, ಕುಂದಾಪುರ ಊರು ಚಿಕ್ಕದಿರಬಹುದು ಆದರೆ ಇಲ್ಲಿನವರ ಸಾಧನೆ, ಸಾಧಕರನ್ನು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಹಲವು ಪ್ರಥಮಗಳಿಗೆ ಸಾಕ್ಷಿಯಾದ ಕುಂದಾಪುರ ಹಾಗೂ ಕುಂದಾಪುರ ಕನ್ನಡಕ್ಕೆ ತನ್ನದೇ ಆದ ವೈಶಿಷ್ಟ್ಯತೆ ಇದೆ. ನಮ್ಮ ಊರು, ಸಂಸ್ಕೃತಿ ಹಾಗೂ ಪರಂಪರೆಯ ನೆನಪಿಸಿಕೊಳ್ಳುವುದು ಬಹುಮುಖ್ಯ. ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಆಚರಣೆ ಅರಂಭಿಸಿದಾಗಿಂದ ಭಾಷೆಯ ಅಭಿಮಾನ ಹೆಚ್ಚಿದೆ ಎಂದರು. ಸಂಘಟಕ ವಸಂತ್ ಗಿಳಿಯಾರ್ ಮಾತನಾಡಿ, ಕನ್ನಡ ಸಾರಸತ್ವ ಜಗತ್ತಿಗೆ ಮೂಲಭೂಮಿಕೆ ಒದಗಿಸಿದ್ದು ಕುಂದಾಪ್ರ ಕನ್ನಡ. ಕೆಲವರ್ಷದ ಈಚೆಗೆ ಭಾಷೆಗೆ ಬಹುದೊಡ್ಡ ಮೌಲ್ಯ ಕಟ್ಟಿಕೊಡುವ ಕೆಲಸವಾಗುತ್ತಿದೆ. ಇದು ಹೀಗೆಯೇ ಮುಂದುವರಿಯುವುದು ಬಹುಮುಖ್ಯ ಎಂದರು. ಸಭೆಯಲ್ಲಿದ್ದ ಉದಯ ಶೆಟ್ಟಿ, ಜಾಯ್ ಜೆ. ಕರ್ವೆಲ್ಲೋ ಮಾತನಾಡಿ ಗ್ರಾಮೀಣ ಕ್ರೀಡೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವಿದ್ಯಾಗಿರಿಯ ಜಗಜ್ಯೋತಿ ಬಸವೇಶ್ವರ ವೃತ್ತದ, ಜ್ಞಾನಯೋಗಿ ಸರ್ವಜ್ಞ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ಕಾಲೇಜು ಸಂಕೀರ್ಣ ಹಾಗೂ ವಿದ್ಯಾರ್ಥಿನಿ ವಸತಿ ನಿಲಯದ ಉದ್ಘಾಟನಾ ಸಮಾರಂಭ ನಡೆಯಿತು. ನೂತನ ಕಾಲೇಜು ಸಂಕೀರ್ಣ-‘ಜಗನ್ಮೋಹನ’ದ ಉದ್ಘಾಟನೆಯನ್ನು ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮಖ್ಯ ಆಯುಕ್ತ ಪಿಜಿಆರ್ ಸಿಂಧ್ಯ, ಉದ್ಯಮಿ ಕೆ. ಶ್ರೀಪತಿ ಭಟ್ ನೆರವೇರಿಸಿದರು. ಡಾ. ಎಂ ಮೋಹನ ಆಳ್ವರ ಧರ್ಮಪತ್ನಿ ದಿ. ಶೋಭಾ ಆಳ್ವರ ನೆನಪಿಗಾಗಿ ನೂತನ ವಸತಿ ನಿಲಯಕ್ಕೆ ‘ಶೋಭಾಯಮಾನ’ ಎಂದು ಹೆಸರಿಡಲಾಗಿದ್ದು, ಇದರ ಉದ್ಘಾಟನೆಯನ್ನು ಲಲಿತ ರಾಮಣ್ಣ ಶೆಟ್ಟಿ ಮತ್ತು ಜಯಶ್ರೀ ಅಮರನಾಥ್ ಶೆಟ್ಟಿ ನೇರವೇರಿಸಿದರು. ‘ಜಗನ್ಮೋಹನ’ದ ವಿಶೇಷತೆಗಳು:ಅತ್ಯಾಧುನಿಕ ವ್ಯವಸ್ಥೆಯನ್ನೊಳಗೊಂಡ ನೂತನ ಕಾಲೇಜು ಕಟ್ಟಡ- ‘ಜಗನ್ಮೋಹನ’ದಲ್ಲಿ 68 ತರಗತಿ ಕೊಠಡಿಗಳಿದ್ದು, 3 ಭೌತಶಾಸ್ತ್ರದ ಲ್ಯಾಬ್, 3 ರಸಾಯಶಾಸ್ತ್ರದ ಲ್ಯಾಬ್, 2 ಜೀವಶಾಸ್ತ್ರದ ಲ್ಯಾಬ್ ಹಾಗೂ ಒಂದು ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ನ್ನು ಹೊಂದಿದೆ. ವಿಶಾಲವಾದ ಸ್ಟಡಿಹಾಲ್ನ್ನು ಹೊಂದಿರುವ ಈ ಕಟ್ಟಡ, ಪ್ರತಿಧ್ವನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಲ್ಲಿ ಪರಿಶ್ರಮವನ್ನು ಪಡಬೇಕು. ಆಗ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಅವರು ಹೇಳೀದರು. ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ಯಾವುದೇ ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಒಟ್ಟು 140 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಬಿಲ್ಲವರ ಹಿತರಕ್ಷಣ ವೇದಿಕೆ ಉಪಾಧ್ಯಕ್ಷ ಜಿ.ಕೆ ವೆಂಕಟೇಶ ಕೊಡೇರಿ ಸ್ವಾಗತಿಸಿದರು. ಅನಂತ ಪೂಜಾರಿ ಕೊಡೇರಿ ಕಾರ್ಯಕ್ರಮ ನಿರ್ವಹಿಸಿದರು. ಆಕಾಶ್ ಪೂಜಾರಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್ಗಳಲ್ಲಿ ತಲಾ 01 ರಂತೆ “ನಗರ ಪುನರ್ವಸತಿ ಕಾರ್ಯಕರ್ತರ” (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ “ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ” (ವಿ.ಆರ್.ಡಬ್ಲ್ಯೂ) ನೇಮಕಾತಿಗಾಗಿ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿ.ಆರ್.ಡಬ್ಲ್ಯೂ ನೇಮಕಾತಿಗಾಗಿ ಬಾಕಿ ಇರುವ ಗ್ರಾಮ ಪಂಚಾಯತ್ಗಳು: ಉಡುಪಿ ತಾಲೂಕಿನ ಕಡೆಕಾರು, ಕೆಮ್ಮಣ್ಣು ಹಾಗೂ ಪೆರ್ಡೂರು. ಬ್ರಹ್ಮಾವರ ತಾಲೂಕಿನ 38 ಕಳತ್ತೂರು ಹಾಗೂ ಚಾಂತಾರು. ಹೆಬ್ರಿ ತಾಲೂಕಿನ ಶಿವಪುರ ಹಾಗೂ ಬೆಳ್ವೆ. ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ. ಕುಂದಾಪುರ ತಾಲೂಕಿನ ಹೆಂಗವಳ್ಳಿ ಮತ್ತು ಗುಜ್ಜಾಡಿ. ಬೈಂದೂರು ತಾಲೂಕಿನ ಹಳ್ಳಿಹೊಳೆ ಹಾಗೂ ಕಾರ್ಕಳ ತಾಲೂಕಿನ ಮಾಳ ಮತ್ತು ನಿಟ್ಟೆ. ಕುಂದಾಪುರ ಪುರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ನಲ್ಲಿ ಖಾಲಿ ಇರುವ ಯು.ಆರ್.ಡಬ್ಲ್ಯೂ ಹುದ್ದೆಗಳ ನೇಮಕಾತಿಗಾಗಿ, ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ನಡೆಯುತ್ತಿರುವ ‘ಸಮೃದ್ಧಿ-ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಎರಡನೇ ದಿನವೂ ಉತ್ತಮ ಜನಸ್ಪಂದನೆ ದೊರೆಯಿತು. ಮೂರು ದಿನಗಳ ಮೇಳದಲ್ಲಿ ಒಟ್ಟು 287 ಸ್ಟಾಲ್ಗಳನ್ನು ಪಾಲ್ಗೊಂಡಿದ್ದು, ಮೊದಲ ದಿನ 15,000ದಷ್ಟು ಜನರು ಪಾಲ್ಗೊಂಡರೆ, ಎರಡನೇ ದಿನ ಶನಿವಾರ 20,000ಕ್ಕೂ ಅಧಿಕ ಜನ ಆಗಮಿಸಿದರು. ಕೇರಳದ ಪಾಲಕ್ಕಾಡ್ನಿಂದ ಆಗಮಿಸಿದ್ದ, ಜಯಚಂದ್ರ ವಿವಿಧ ಬಗೆಯ ತರಕಾರಿ ಬೀಜಗಳ ಸ್ಟಾಲ್ ತೆರೆದಿದ್ದು, ತರಹೇವಾರಿ ಬೀಜಗಳ ಸಂಗ್ರಹ ಅವರ ಬಳಿಯಲ್ಲಿತ್ತು. 6 ತರಹದ ಅಲಸಂಡೆಯ ಬೀಜ, 3 ತರಹದ ಬೆಂಡೆಯ ಬೀಜ, 6 ತರಹದ ಬದನೆಯ ಬೀಜಗಳು ಲಭ್ಯವಿರುವುದಲ್ಲದೇ, ಒಟ್ಟು 60 ಬಗೆಯ ತರಕಾರಿ, ಹೂವು ಹಣ್ಣುಗಳ ಬೀಜಗಳು ವ್ಯಾಪಾರಕ್ಕೆ ಲಭ್ಯವಿದ್ದವು. ಚಿಕ್ಕ ಪ್ಯಾಕೆಟ್ನಲ್ಲಿ ಲಭ್ಯವಿದ್ದ ಬೀಜಗಳಿಗೆ 20ರೂ ಮುಖಬೆಲೆಯಾದರೆ, 3 ಪೊಟ್ಟಣಗಳಿಗೆ 50…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆಯ ಪರಿಕಲ್ಪನೆ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಪ್ರಸ್ತುತ ಸಾಲಿನ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕರ ಸ್ಥಾನಕ್ಕೆ ಚುನಾವಣೆಯನ್ನು ನಡೆಸಲಾಯಿತು. ಸಾರ್ವತ್ರಿಕ ಚುನಾವಣೆಯ ಅರಿವು ಮೂಡಿಸುವ ಸಲುವಾಗಿ ಚುನಾವಣೆಯನ್ನು ಇ.ವಿ.ಎಮ್ ಆಪ್ ಮೂಲಕ ನಡೆಸಲಾಯಿತು. ಶಾಲಾ ನಾಯಕನಾಗಿ ವಿಘ್ನೇಶ್ ರಾಜೇಶ್ ಪ್ರಭು 267 ಮತಗಳಿಂದ ಮತ್ತು ಉಪನಾಯಕನಾಗಿ ಹರಿದಾಸ್ ಆರ್ ಮಲ್ಯ 311 ಮತಗಳಿಂದ ಆಯ್ಕೆಯಾಗಿದ್ದು, ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಭೋದಕ – ಭೋದಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
