Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತ್ರಾಸಿ ಕಡಲ ಕಿನಾರೆಯಲ್ಲಿರುವ ಪ್ರವಾಸಿಗನನ್ನು ಕರೆದೊಯ್ದಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ಸ್ಕೀ ರೈಡರ್ ರೋಹಿದಾಸ್ (45) ನಾಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಬೀಚ್ನಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗರನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಿ ಕರೆತರಲಾಗಿದೆ. ರೈಡ್ ಮಾಡುತ್ತಿದ್ದ ರೋಹಿದಾಸ್ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ. ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ಕುಟುಂಬದೊಂದಿಗೆ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ಸ್ಕೀ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು. ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಚಿತ್ರ: ಸಾಂದರ್ಭಿಕ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಈ ಸಾಧನೆ ನಿಜಕ್ಕೂ ಶಾಲೆಗೆ ಹೆಮ್ಮೆ ತರುವ ವಿಷಯ. ಎಲ್ಲಾ ವಿದ್ಯಾರ್ಥಿಗಳಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ ಅದನ್ನು ಗುರುತಿಸುವ ಕೆಲಸ ಶಾಲಾ ಶಿಕ್ಷಕರು ಮತ್ತು ಪೋಷಕರಿಂದ ಆಗಬೇಕು ಹಾಗೂ ಇವರಿಬ್ಬರ ಯಶಸ್ಸು ಉಳಿದ ಮಕ್ಕಳಿಗೆ ಸ್ಫೂರ್ತಿ ಆಗಲಿ ಮುಂದಿನ ದಿನಗಳಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರನ್ನು ಗಳಿಸುವಂತಾಗಲಿ ಎಂದು ಅನುಪಮಾ ಎಸ್. ಶೆಟ್ಟಿ ಹೇಳಿದರು ಅವರು ಗುರುಕುಲ ಶಾಲೆಯಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಫರ್ಧೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಿ. 15 ರಂದು ದೆಹಲಿಯ ಕಿಯೋದಲ್ಲಿ ನಡೆದ ಅಖಿಲ ಭಾರತ ಸಬ್ ಜೂನಿಯರ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯ ಎಂಟನೇ ತರಗತಿಯ ವಿದ್ಯಾರ್ಥಿನಿ ಝಾರ, ಸಬ್ ಜೂನಿಯರ್ 13 ವಯೋಮಿತಿಯ 52 ಕೆಜಿ ಕುಮಿಟೆ ವಿಭಾಗದಲ್ಲಿ ಕಂಚಿನ ಪದಕ ಪಡೆದರೆ, ಏಳನೇ ತರಗತಿಯ ವಿದ್ಯಾರ್ಥಿನಿ ಸಾನಿಧ್ಯ ಸಂತೋಷ್ ನಾಯ್ಕ್, ಸಬ್ ಜೂನಿಯರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಾಂಸ್ಕೃತಿಕ ಚಟುವಟಿಕೆಗಳು ಕೇವಲ ಆಸಕ್ತಿಗೆ ಮಾತ್ರ ವೇದಿಕೆಯಲ್ಲ. ಬದಲಾಗಿ ಊರಿನ ಅಭಿವೃದ್ದಿಯ ಚಿಂತನೆಗಳು ಕೂಡ ಪುಟಿದೇಳುತ್ತದೆ. ಗ್ರಾಮೀಣ ಭಾಗದಲ್ಲಿ ಸಂಚಲನ ಸಂಸ್ಥೆ ರಂಗಾಸಕ್ತಿಯ ಮೂಲಕ ರಾಜ್ಯಮಟ್ಟದಲ್ಲಿಗುರುತಿಸಿಕೊಂಡಿರುವುದು ಇತರ ಗ್ರಾಮಗಳಿಗೆ ಮಾದರಿಯಾಗಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಸಂಚಲನ ರಿ. ಹೊಸೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ವತಿಯಿಂದ ಹೊಸೂರಿನಲ್ಲಿನಡೆದ ವನಸಿರಿಯಲ್ಲೊಂದು ರಂಗ ಸುಗ್ಗಿ ಮೂರು ದಿನಗಳ ರಾಜ್ಯಮಟ್ಟದ ನಾಟಕೋತ್ಸವದ ಸಮಾರೋಪ ಸಮಾರಂಭದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಈ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಮಹಾದೇವ ಮರಾಠಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕಿ ಪೂರ್ಣಿಮಾ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೆಶಿತ ಸದಸ್ಯರಾದ ನಾಗರಾಜ ಶೆಟ್ಟಿ, ನಾಗರಾಜ ಗಾಣಿಗ, ಪಶುಪಾಲನಾ ಇಲಾಖೆಯ ನಿವೃತ್ತ ಉಪನಿರ್ದೆಶಕ ಶಂಕರ ಶೆಟ್ಟಿ, ಉದ್ಯಮಿ ಮ್ಯಾಥ್ಯ ಕೆ.ಎಸ್. ನಂದರಗದ್ದೆ, ಬೈ.ವ್ಯ. ಸೇವ ಸ. ಸಂಘ ತೂದಳ್ಳಿ ಶಾಖೆಯ ಶಾಖಾಧಿಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಂಡ್ಸೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವದ ಕಾರ್ಯಕ್ರಮಕ್ಕೆ ಶಾಲಾ ಧ್ವಜಾರೋಹ್ಹಣದ ಮೂಲಕ ಚಾಲನೆ ನೀಡಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಡಾ. ಪೂರ್ಣಿಮಾ ಟಿ. ಧ್ವಜಾರೋಹಣ ನೆರವೇರಿಸಿದರು. ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ಧನ್ ಜೋಗಿ ಕಾರ್ಯಕ್ರಮ ಉದ್ದೇಸಿಸಿ ಮಾತನಾಡಿ, ಮನೆ ಹಾಗೂ ಶಾಲೆ ವಿಶ್ವದ ಅತ್ಯಂತ ಸುಂದರ ಸ್ಥಳಗಳು. ಜಾತಿ ಧರ್ಮ ಭೇದ ವಿಲ್ಲದ ಸ್ಥಳವೆಂದರೆ ಅದು ಶಾಲೆ. ಶಾಲೆ ವಾರ್ಷಿಕೋತ್ಸವವೆಂದರೆ ಮಕ್ಕಳ ಹಬ್ಬ ಎಂದರು. ಗ್ರಾಮ ಪಂಚಾಯತ್ ವಂಡ್ಸೆಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಉದಯಕುಮಾರ್ ಶೆಟ್ಟಿ, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಶ್ರೀಧರ್ ರಾವ್, ವಿದ್ಯಾರ್ಥಿ ಆರಾಧ್ಯ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತತೆಯರು ಉಪಸ್ಥಿತರಿದ್ದರು. ಪ್ರಭಾರ ಮುಖ್ಯ್ಯಪಾಧ್ಯಯರಾದ ಸದಾಶಿವ ಸ್ವಾಗತಿಸಿದರು. ಸಹಶಿಕ್ಷಕ ಸೋಮಯ್ಯ ಜನ್ನು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ದೈಹಿಕ ಶಿಕ್ಷಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಫ್ರೆಂಡ್ಸ್ ಮಾರಿಕಾಂಬ ಕ್ರಿಕೆಟರ್ಸ್ ಕಳವಾಡಿ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಪೂರ್ಣಚಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಸುರೇಂದ್ರ ದೇವಾಡಿಗ ಅವರನ್ನು ಆಯ್ಕೆಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಲಾಗಿದೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ (ಈಅI) ಮೈಸೂರು ಹಾಗೂ ಇನ್ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (Iಊಒ) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ  ವಿವರ:ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -100 ಹಾಗೂ ಪರಿಶಿಷ್ಟ ಪಂಗಡದ – 49 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ರೂಮ್ ಅಟೆಂಡೆಂಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ – 30 ಹಾಗೂ ಪರಿಶಿಷ್ಟ ಪಂಗಡದ – 19 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಐದನೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ಲೋಕಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಗೂ ಉಡುಪಿ ಜಿಲ್ಲೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಸದನದಲ್ಲಿ ಅವಾಚ್ಯ ಪದ ಬಳಕೆ ಮಾಡಿದ ಶಾಸಕ ಸಿ.ಟಿ. ರವಿ ವಿರುದ್ಧ ಬೈಂದೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಸಮಿತಿ, ಎಸ್.ಸಿ ಘಟಕ ಹಾಗೂ ಕಿಸಾನ್ ಘಟಕ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಬಿಜೆಪಿ ನಾಯಕರ ನಡೆಯನ್ನು ಖಂಡಿಸಿದರು. ಈ ವೇಳೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಪೂಜಾರಿ, ಮಾಜಿ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೂರ್ಯಕಾಂತಿ, ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಎಸ್.ಸಿ. ಘಟಕದ ಅಧ್ಯಕ್ಷ ಮಂಜುನಾಥ ನಾಗೂರು, ಮುಖಂಡರುಗಳಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಊರನ್ನು ಸಾಂಸ್ಕೃತಿಕವಾಗಿ ಶ್ರೀಮಂತವನ್ನಾಗಿಡಲು ಕಲಾ ಸಂಸ್ಥೆಗಳ ಪಾತ್ರ ಹಿರಿದು. ಆ ನಿಟ್ಟಿನಲ್ಲಿ ಕಳೆದ ಎರಡೂವರೆ ದಶಕದಿಂದ ಸಕ್ರೀಯವಾಗಿರುವ ಯುಸ್ಕೋರ್ಡ್ ಟ್ರಸ್ಟ್ ಇನ್ನಿತರ ಕಲಾ ಸಂಸ್ಥೆಗಳ ಪೋಷಕ ಸಂಸ್ಥೆಯಾಗಿಯೂ ಬೆಳೆದಿದೆ ನಿಂತಿದೆ ಎಂದು ಆಡಿಟರ್ ಹಾಗೂ ಟ್ಯಾಕ್ಸ್ ಕನ್ಸಲ್ಟೆಂಟ್ ಜತೀಂದ್ರ ಮರವಂತೆ ಹೇಳಿದರು. ಅವರು ಶುಕ್ರವಾರ ಯುಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ವರ್ಷ ವೈಭವ – 3 ದಿನಗಳ ಯಕ್ಷ – ನಾಟಕೋತ್ಸವದ 2ನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲೆಯನ್ನು ಆಸ್ವಾದಿಸುವ ಮನಸ್ಸುಗಳು ಹೆಚ್ಚಿದಂತೆ ಕಲಾವಿದರು ಹಾಗೂ ಕಲಾ ಸಂಸ್ಥೆಗಳು ಇನ್ನಷ್ಟು ಗಟ್ಟಿಗೊಳ್ಳುತ್ತವೆ ಎಂದರು. ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಗುಲಾಬಿ ಮರವಂತೆ, ಸುರಭಿ ರಿ. ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಉಪಸ್ಥಿತರಿದ್ದರು. ಯುಸ್ಕೋರ್ಡ್ ಟ್ರಸ್ಟ್ ಅಧ್ಯಕ್ಷ ಸುಧಾಕರ ಪಿ. ಬೈಂದೂರು ಸ್ವಾಗತಿಸಿದರು. ಕಾರ್ಯದರ್ಶಿ ಕೃಷ್ಣಮೂರ್ತಿ ಉಡುಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಳಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಗೋದಲಿಯಲ್ಲಿ ಬಾಲ ಯೇಸು ಜನನದ ದರ್ಶನ,  ಕ್ಯಾರೆಲ್ ಹಾಡಿದ ವಿದ್ಯಾರ್ಥಿಗಳ ಗುಂಪು, ನಡುವೆ ಬಂದ ಸಂತ ಕ್ಲಾಸ್, ವಿದ್ಯುದ್ದೀಪಾಲಂಕಾರದಿಂದ ಕಂಗೊಳಿಸಿದ ಕ್ರಿಸ್‌ಮಸ್ ಮರ- ಸಭಾಂಗಣ, ಏಂಜೆಲ್ಸ್, ಜಿಂಗಲ್ ಬೆಲ್ ಸಂಗೀತ, ಪುಟಾಣಿಗಳ ಬಾಯಿ ಸಿಹಿ ಮಾಡಿದ ಕೇಕ್. ಕರುಣಾಮಯಿ ಬಾಲಯೇಸು ಜನನದ ಕ್ರಿಸ್‌ಮಸ್ ಸಂಭ್ರಮ, ಭಕ್ತಿ -ಭಾವ , ಆರಾಧನೆಯ ಸಂಪ್ರೀತಿಯು  ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಗುರುವಾರ ಸಂಜೆ ಮೂಡಿತು. ಅದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ‘ಆಳ್ವಾಸ್ ಕ್ರಿಸ್‌ಮಸ್’ ಸಂಭ್ರಮಾಚರಣೆ. ಸಂದೇಶ ನೀಡಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯಾಧ್ಯಕ್ಷ (ಬಿಷಪ್) ಡಾ. ಪೀಟರ್ ಪಾವ್ಲ್ ಸಲ್ಡಾನಾ, ‘ಭರವಸೆ ನಿರಾಶೆ ಮೂಡಿಸುವುದಿಲ್ಲ. ಬದುಕು ಪ್ರೀತಿಯ ಪಥ. ಜೀವನದಲ್ಲಿ ಉನ್ನತ ಭರವಸೆಯೇ ಕ್ರಿಸ್ ಮಸ್ ಸಂದೇಶ’ ಎಂದರು. ‘ಹ್ಯಾಪಿ ಕ್ರಿಸ್ ಮಸ್’ ಎಂದು ಶುಭಕೋರಿ ಮಾತು ಆರಂಭಿಸಿದ ಅವರು, ‘ಇಲ್ಲಿಗೆ ಕ್ರಿಸ್ ಮಸ್ ಬಂದಿದೆ. ಸತ್ಯ ಮತ್ತು ಬದುಕು ನಮ್ಮದಾಗಲಿ. ನಮ್ಮೆಲ್ಲ ಒಳಿತಿಗಾಗಿ ದೈವಿಕ ಮನುಷ್ಯನಾದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಯುವ ನೀತಿಯ ಅನ್ವಯ ರಾಜ್ಯ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ ಎಪಿಡೀಮಿಯಾಲ್ಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆ ಮೂಲಕ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಜಿಲ್ಲೆಯಲ್ಲಿ ಖಾಲಿ ಇರುವ ಯುವ ಪರಿವರ್ತಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಕನಿಷ್ಠ 21 ರಿಂದ 35 ವರ್ಷದೊಳಗಿನ ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡುವ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿರುವ ಯುವಕ ಹಾಗೂ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಸಂಪೂರ್ಣ ಹೆಸರು, ವಯಸ್ಸು,…

Read More