Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ತುರ್ತು ಸಂದರ್ಭ, ಪ್ರಾಕೃತಿಕ ವಿಕೋಪ ಸೇರಿದಂತೆ ಪೊಲೀಸ್ ಇಲಾಖೆಯ ಜೊತೆಯಲ್ಲಿ ಆಂತರಿಕ ಭದ್ರತಾ ಕಾರ್ಯಗಳನ್ನು ಗೃಹ ರಕ್ಷಕ ದಳದವರು ಉತ್ತಮವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು  ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶ್ಲಾಘಿಸಿದರು. ಅವರು ಅಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು. ಪೊಲೀಸ್ ಸಿಬ್ಬಂದಿಗಳ ಕೊರತೆ ಅಥವಾ ಸಂಕಷ್ಟ ಸಂದರ್ಭದಲ್ಲಿ ಜಿಲ್ಲಾಡಳಿತದ ಜೊತೆ ಗೃಹ ರಕ್ಷಕ ದಳದವರು ಕೈಜೋಡಿಸಿ, ಸಮಾಜಕ್ಕೆ ಉತ್ತಮ ಸೇವೆಯನ್ನು ಗೃಹ ರಕ್ಷಕ ದಳದವರು ನೀಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗೃಹರಕ್ಷಕ ದಳದವರು ತಮ್ಮ ಕರ್ತವ್ಯವನ್ನು ನಿರ್ವಹಿಸುವುದರ ಜೊತೆಗೆ ತಮ್ಮ ಕುಟುಂಬ ವರ್ಗದವರ ಜೊತೆ ಉತ್ತಮ ಬಾಂಧವ್ಯ ಹೊಂದಿ, ತಮ್ಮ ಮಕ್ಕಳ ವಿಧ್ಯಾಭ್ಯಾಸಕ್ಕೆ ಉತ್ತೇಜನ ನೀಡುವುದರ ಜೊತೆಗೆ ತಾವುಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆ, ತಮ್ಮ ಆರೋಗ್ಯದ ಕಾಳಜಿಯನ್ನು ವಹಿಸಿ, ಕಾಲಕಾಲಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ (ಈಅI) ಮೈಸೂರು ಹಾಗೂ ಇನ್ಸಿಟಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (Iಊಒ) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ವಿವರ: ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -100 ಹಾಗೂ ಪರಿಶಿಷ್ಟ ಪಂಗಡದ – 49 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ರೂಮ್ ಅಟೆಂಡೆಂಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ – 30 ಹಾಗೂ ಪರಿಶಿಷ್ಟ ಪಂಗಡದ – 19 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂಬರ್ ಗ್ರೀಸ್ ಕಳ್ಳ ಸಾಗಾಣಿಕೆಯ ಮಾಹಿತಿ ಆಧರಿಸಿ ಕೋಡಿ ಗ್ರಾಮದ ಮಧ್ಯ ಕೋಡಿಗೆ ಮಪ್ತಿಯಲ್ಲಿ ತೆರಳಿದ್ದ ಸಿಐಡಿ ಅರಣ್ಯ ವಿಭಾಗದ ಅಧಿಕಾರಿಗಳ ಮೇಲೆ ತಪ್ಪು ಗ್ರಹಿಕೆಯಿಂದ ಸ್ಥಳೀಯರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಅಧಿಕಾರಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳು ಗುರುತು ಪರಿಚಯ ಹೇಳಿಕೊಳ್ಳದೇ ವಯೋವೃದ್ಧ ವ್ಯಕ್ತಿಗೆ ಗನ್‌ ತೋರಿಸಿರುವುದು ಸಂಘರ್ಷಕ್ಕೆ ಕಾರಣವಾಗಿದ್ದು, ಸ್ಥಳೀಯರು ಆಕ್ರೋಶಗೊಂಡು ಮುಗಿಬಿದ್ದು ತಳ್ಳಾಟ ನಡೆಸಿದ್ದಾರೆ. ಬುಧವಾರ ಮಧ್ಯಾಹ್ನ 2:30ರ ಸಮಾರಿಗೆ ಎನ್‌.ಎನ್‌.ಎಂ. ಸೌಹಾರ್ದ ಭವನದ ಎದುರಿನ ಐಸ್‌ಕ್ರೀಮ್‌ ಅಂಗಡಿ ಎದುರು 2 ಕಾರುಗಳು ಬಂದಿತ್ತು. ಕಾರಿನಲ್ಲಿ ಒಬ್ಬರು ಮಹಿಳೆ ನಾಲ್ವರು ಪುರುಷರು ಇಳಿದು ಅಂಗಡಿ ಬಳಿ ಇದ್ದ 3 ಮಂದಿ ಯುವಕರು ಹಾಗೂ ಓರ್ವ ವೃದ್ಧರಿಗೆ ಗನ್‌ ತೋರಿಸಿ ಕಾರು ಹತ್ತುವಂತೆ ಹೇಳಿದರು. ಆ ಸಂದರ್ಭ ಮಪ್ತಿಯಲ್ಲಿದ್ದ ಅಧಿಕಾರಿಗಳ ಬಳಿ ಐಡಿ ಕಾರ್ಡ್‌ ತೋರಿಸುವಂತೆ ಕೇಳಿದ್ದಾರೆ. ಆದರೆ ಅವರು ತೋರಿಸದೇ ಗನ್‌ ಹಿಡಿದಿದ್ದರಿಂದ ನಾಲ್ವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು 2018 ರಿಂದಲೇ ಕಾಮಗಾರಿಗಳನ್ನು ಕೈಗೊಳ್ಳಲು ಪತ್ರ ವ್ಯವಹಾರಗಳು ನಡೆದಿದ್ದವು, ಕಳೆದ ಮೂರು ವರ್ಷದಿಂದ ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡಿದ್ದರೂ ಸಹ ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಹೆಚ್ಚಿನ ವ್ಯತ್ಯಯ ಉಂಟಾಗಿ ಪ್ರತೀ ದಿನವೂ ಜಿಲ್ಲಾಡಳಿತಕ್ಕೆ ದೂರುಗಳು ಕೇಳಿ ಬರುತ್ತಿವೆ. ಹಾಗೂ ಅಪಘಾತಗಳು ಸಹ ಕಾಮಗಾರಿಯ ವಿಳಂಬದಿಂದಾಗಿ ಉಂಟಾಗಿವೆ. ಇವಕ್ಕೆಲ್ಲಾ ಅಭಿಯಂತರರುಗಳು, ಗುತ್ತಿಗೆದಾರರೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಟ ಕಂಡುಬಂದಿದೆ. ಮಂಗಳವಾರ ರಾತ್ರಿ ಹಾಗೂ ಬುಧವಾರ ಮುಂಜಾನೆ ಹೊಂಬಾಡಿ-ಮಂಡಾಡಿ, ಹಾಗೂ ಹಳ್ಳಾಡಿ-ಹರ್ಕಾಡಿ ಗ್ರಾಮ ವ್ಯಾಪ್ತಿಯ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕವನ್ನುಂಟುಮಾಡಿದೆ. ಹೊಂಬಾಡಿ-ಮಂಡಾಡಿಯ ಕರಿನಕಟ್ಟೆ ರಾಮದಾಸ ಭಂಡಾರಿ ಎನ್ನುವರ ಮನೆಯ ಬಾಗಿಲಿನ ತನಕ ಮಂಗಳವಾರ ಮಧ್ಯರಾತ್ರಿ ವೇಳೆಗೆ ಚಿರತೆ ತೆರಳಿದ್ದು, ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಬುಧವಾರ ಮುಂಜಾನೆ ವೇಳೆಯೂ ಕೂಡ ಇಲ್ಲಿಗೆ ಸಮೀಪದ ಹಳ್ಳಾಡಿ-ಹರ್ಕಾಡಿ ಗರಿಕೆಮಠ, ಸಿರಿಮಠ ಎಂಬಲ್ಲಿ ಚಿರತೆ ಓಡಾಟ ಮಾಡಿರುವ ಬಗ್ಗೆ ತಿಳಿದ ಜನರು ಆತಂಕ್ಕೀಡಾಗಿದ್ದಾರೆ. ಬೋನ್ ಇರಿಸಿದ ಇಲಾಖೆ:ಅರಣ್ಯ ಇಲಾಖೆಯ ಮೊಳಹಳ್ಳಿ ಶಾಖೆಗೊಳಪಡುವ ಹೊಂಬಾಡಿ – ಮಂಡಾಡಿ ಭಾಗದಲ್ಲಿ ಕಾಡಿಗೆ ಸಮೀಪದ ಮನೆಯ ಸುತ್ತ ಆಗಾಗ್ಗೆ ಚಿರತೆಗಳು ಆಹಾರವನ್ನರಿಸಿ ಓಡಾಟ ಮಾಡತ್ತಿರುವುದು ಕಂಡಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದು, ಆಯಕಟ್ಟಿನ ಸ್ಥಳದಲ್ಲಿ ಬೋನು ಇರಿಸಿ ಚಿರತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಕ್ಷರದ ಒಡನಾಟದಿಂದ ಶಿಕ್ಷಣ ದೊರತರೆ, ರಂಗಭೂಮಿ ಬದುಕನ್ನು ಕಟ್ಟಿಕೊಡುತ್ತದೆ. ಇಲ್ಲಿ ನೋವು ಮರೆತು ನಲಿವು ಹೆಚ್ಚಿಸಿಕೊಳ್ಳಲು ಸಾಧ್ಯವಿದೆ. ರಂಗ ಸಂಚಲನದ ಮೂಲಕ ಹೊಸೂರಿನ ಮರಾಠಿ ಸಮುದಾಯದ ಯುವಕರು ಹೊಸ ಸಾಧ್ಯತೆನ್ನು ಕಂಡುಕೊಂಡಿರುವುದು ಶ್ಲಾಘನಾರ್ಹ ಎಂದು ಗಂಗೊಳ್ಳಿ ಎಸ್‍.ವಿ. ಕಾಲೇಜು ಉಪನ್ಯಾಸಕರಾದ ಸುಜಯೀಂದ್ರ ಹಂದೆ ಹೇಳಿದರು. ಅವರು ಮಂಗಳವಾರ ಸಂಚಲನ ರಿ. ಹೊಸೂರು ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಆಯೋಜಿಸಲಾದ ವನಸಿರಿಯಲ್ಲೊಂದು ರಂಗ ಸುಗ್ಗಿ 3 ದಿನಗಳ ರಾಜ್ಯಮಟ್ಟದ ನಾಟಕೋತ್ಸವದ 2ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿ, ರಂಗಭೂಮಿ ಎಂದರೆ ಕೇವಲ ನಾಟಕವಲ್ಲ, ಅಲ್ಲಿ ಸಂಗೀತ, ನೃತ್ಯ, ಯಕ್ಷಗಾನ ಎಲ್ಲವೂ ಇದೆ. ರಂಗ ಪ್ರದರ್ಶನಗಳನ್ನು ಸ್ವೀಕರಿಸುವ ಮನೋಭೂಮಿಕೆಯು ಸಾಕ್ಷರತೆಯ ಪ್ರತೀಕವಾಗಿದೆ ಎಂದರು ಕಾರ್ಯಕ್ರಮ ಅಧ್ಯಕ್ಷತೆಯನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಅವರು ವಹಿಸಿದ್ದರು. ಈ ವೇಳೆ ಸಮಾಜ ಸೇವಕ ಲಿಜೋ ಇ.ಜೆ ಅಂಬಿಕಾನ್‍ ಹಾಗೂ ಕೊಲ್ಲೂರು ಶ್ರೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯಾದ್ಯಂತ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ (ಜೆಲ್ಲಿ , ಮರಳು, ಕಲ್ಲು) ಸರಿಯಾಗಿ ದೊರೆಯದ ಕಾರಣ ಕಟ್ಟಡ ನಿರ್ಮಾಣದ ಕಾರ್ಮಿಕರ ಕುಟುಂಬ ಬೀದಿಗೆ ಬರಬೇಕಾದ ಸ್ಥಿತಿ ಉಂಟಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷ ಗಿರೀಶ್ ಕುಂದಾಪುರ ಆಗ್ರಹಿಸಿದ್ದಾರೆ. ಅವರು ಈ ಬಗ್ಗೆ ಮಂಗಳವಾರ ಕುಂದಾಪುರದ ಸಹಾಯಕ ಕಮಿಷನರ್ ಮಹೇಶ್ ಚಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಪ್ರತಿ ವರ್ಷವೂ ಇದೆ ಸಮಸ್ಯೆ ಎದುರಾಗುತ್ತಿದೆ. ಅವೈಜ್ಞಾನಿಕವಾದ ಕಾನೂನು ತೊಡಕುಗಳನ್ನು ಸರಿಪಡಿಸಿ ಪರಿಹಾರ ಒದಗಿಸಬೇಕು. ಇಲ್ಲದಿದ್ದರೆ ಜಿಲ್ಲೆಯಾದ್ಯಂತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಸಂಘಟನೆ ವತಿಯಿಂದ ಉಗ್ರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತಿರ್ಮಾನಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ, ಜಿಲ್ಲಾ ಕಟ್ಟಡ ಕಾರ್ಮಿಕ ಸಂಘಟನಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಎಲೆಕ್ಟ್ರಾನಿಕ್ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಡಿಪ್ಲೊಮಾ ವ್ಯಾಸಂಗ ಪೂರ್ಣಗೊಳಿಸಿರುವ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ವಸತಿ ಸಹಿತ 60 ದಿನಗಳ ಕಾಲ ಪತ್ರಿಕೋದ್ಯಮ ಎಲೆಕ್ಟ್ರಾನಿಕ್ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಅನುಭವ ನೀಡಲು ಅರ್ಜಿ ಆಸಕ್ತರಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಎರಡನೇ ಮಹಡಿ, ಬಿ. ಬ್ಲಾಕ್, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಸಂಪರ್ಕಿಸಬಹುದಾಗಿದೆ ಎಂದು ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವೆಲಾಸಿಟಿ ಅಕಾಡೆಮಿ ಇಂಡಿಯಾ ಇದರ ಮುಖ್ಯಸ್ಥರಾದ ಅಕ್ಷಯ್ ಹೆಮ್ಮಾಡಿ ಇವರಲ್ಲಿ ತರಬೇತಿ ಪಡೆದು ಕರಾಟೆ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮವು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ ವಹಿಸಿಕೊಂಡರು. ಕಾರ್ಯಕ್ರಮದ ಪ್ರಾರಂಭದಲ್ಲಿ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡು ಹಲವಾರು ಪ್ರಶಸ್ತಿ ಪುರಸ್ಕಾರವನ್ನು ಮುಡಿಗೇರಿಸಿಕೊಂಡಂತಹ ಕೊಳಲುವಾದಕರಾದ ಶ್ಯಾಮ್ ಅವರಿಂದ ಕೊಳಲುವಾದನ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಇದರ ಪ್ರಾಂಶುಪಾಲರಾದ (ವಿಯೆಟ್ನಾಂ ಅಂತರಾಷ್ಟ್ರೀಯ ಬೆಸ್ಟ್ ಐಕಾನ್ ಅವಾರ್ಡ್ ಪ್ರಶಸ್ತಿ ಪುರಸ್ಕೃತರು) ಗಣೇಶ ಮೊಗವೀರ ಅವರು ಹಾಗೂ ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ (ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ಪ್ರಶಸ್ತಿ ಪುರಸ್ಕ್ರತರು) ಹಟ್ಟಿಯಂಗಡಿ ಉದಯ್ ಕುಮಾರ್, ಯೋಗೀಶ್ ಗುಡ್ರಿ, ನಾಗರಾಜ್ ಪುತ್ರನ್, ರಾಘವೇಂದ್ರ ಕುಲಾಲ್ ಹೆಮ್ಮಾಡಿ,‌ ಸುರೇಂದ್ರ ಶೆಟ್ಟಿ ಇನ್ನಿತರರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದೇಶ ಬಿಟ್ಟು ಗಾಂಧಿಯಿಲ್ಲ,  ಗಾಂಧಿ ಬಿಟ್ಟು ಭಾರತವಿಲ್ಲ ಎಂಬುದನ್ನು ಎಲ್ಲರು ಅರಿತುಕೊಳ್ಳುವ ಅಗತ್ಯವಿದೆ ಎಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ ಕೃಷ್ಣ ಹೇಳಿದರು . ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಕನ್ನಡ ವಿಭಾಗ ಮತ್ತು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಂಯುಕ್ತಾಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ನಡೆದ ’ ಮಹಾತ್ಮರನ್ನು ಅರ್ಥ ಮಾಡಿಕೊಳ್ಳಲು ಕೆಲವು ಪ್ರಶ್ನೆಗಳು ’ ಎರಡು ದಿನಗಳ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಂತಿಯುತವಾಗಿ ಸ್ವಾತಂತ್ರ್ಯವನ್ನು ತಂದುಕೊಟ್ಟು, ನೈತಿಕತೆಯ ಉತ್ತುಂಗದಲ್ಲಿ ಬದುಕಿ ಬಾಳಿದ ಕೀರ್ತಿ ಗಾಂಧಿಯವರಿಗೆ ಸಲ್ಲುತ್ತದೆ ಎಂದರು. ಗಾಂಧೀಜಿ ಅವರ ಬಗ್ಗೆ ಅಧಿಕೃತ ಸಾಹಿತ್ಯ ಓದಿ ಅರ್ಥೈಸಿಕೊಳ್ಳಿ. ನಂತರ ಪ್ರಶ್ನಿಸಿ. ಆದರೆ ಗೊತ್ತಿಲ್ಲದೇ ಟೀಕಿಸಬೇಡಿ ಎಂದರು. ಅಹಿಂಸಾತ್ಮಕ ಮತ್ತು ಸಾಮುದಾಯಿಕ ಸಮಾಜದ ಪರಿಕಲ್ಪನೆಯ ಆಲೋಚನೆಯನ್ನು ಮೈಗೂಡಿಸಿ ಬದುಕಿದರೆ ಗಾಂಧಿಗೆ ಸಲ್ಲಿಸುವ ಗೌರವವಾಗುತ್ತದೆ ಎಂದು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.…

Read More