Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಸಿದ್ಧಿ ಸೌರಭ ವಾರ್ಷಿಕೋತ್ಸವ ಸಮಾರಂಭದ ಸಂದರ್ಭದಲ್ಲಿ ನೂತನ ಎಲ್. ಟಿ. ತಿಮ್ಮಪ್ಪ ಹೆಗಡೆ ಮೆಮೋರಿಯಲ್ ಹಾಲ್ ‘ಜ್ಞಾನನಿಕೇತನʼ ವನ್ನು ಲೋಕಾರ್ಪಣೆಗೊಳಿಸಲಾಯಿತು. ತುರುವೆಕೆರೆ ಮಾದಿಹಳ್ಳಿಯ ರಾಮಕೃಷ್ಣ ಮಠದ ಶ್ರೀ ಧರ್ಮಾವೃತಾನಂದ ಸ್ವಾಮಿಗಳು ಈ ನೂತನ ಮೆಮೋರಿಯಲ್ ಹಾಲ್‌ನ್ನು ಉದ್ಘಾಟಿಸಿದರು. ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಎಲ್ ಟಿ. ತಿಮ್ಮಪ್ಪ ಹೆಗಡೆ ಅವರ ಜೀವನ ಮತ್ತು ಸಾಮಾಜಿಕ ಕೊಡುಗೆಗಳ ಕುರಿತಾಗಿ ಮಾತನಾಡುತ್ತಾ, ಎಲ್ ಟಿ ತಿಮ್ಮಪ್ಪ ಹೆಗಡೆ ಅವರು ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿಗಳಾಗಿದ್ದ ದಿ. ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರಿಗೆ ಆತ್ಮೀಯರಾಗಿದ್ದು, ಅವರೆಲ್ಲ ಕಾರ್ಯಚಟುವಟಿಕೆಗಳಿಗೆ ಬೆನ್ನೆಲುಬಾಗಿದ್ದರು. ಕುಗ್ರಾಮವಾಗಿದ್ದ ಈ ಪ್ರದೇಶದಲ್ಲಿ ಅತ್ಯುತ್ತಮ ಗುಣಮಟ್ಟದ ವಿದ್ಯಾಸಂಸ್ಥೆಯ ಅಗತ್ಯತೆಯನ್ನು ಮನಗಂಡು ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ಜೊತೆಗಿದ್ದು ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ಸ್ಥಾಪನೆಗೆ ಹೆಗಲೇಣಿಯಾದರು. ಅವರ ತ್ಯಾಗ ಮನೋಭಾವ, ಸಮಾಜಸೇವೆ, ಧಾರ್ಮಿಕ ಶ್ರದ್ಧೆ, ಪರಿಸರ ಕಾಳಜಿ, ಸಹಕಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಮೂಲಕ ಟ್ರಸ್ಟ್ ಅಧ್ಯಕ್ಷ, ಉದ್ಯಮಿ ಹೆಚ್. ಎಸ್. ಶೆಟ್ಟಿ ಅವರು ಜನ್ನಾಡಿಯ ಕೊರಗ ಕುಟುಂಬಗಳಿಗೆ 14 ಮನೆ ನಿರ್ಮಿಸಿ ಇತ್ತೀಚೆಗೆ ಹಸ್ತಾಂತರಿಸಲಾದ ಮನೆಗಳ ಗೃಹ ಪ್ರವೇಶ ಸೋಮವಾರ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿಯವರ ಮುಂದಾಳತ್ವದಲ್ಲಿ ಶಾಸ್ತ್ರೋಕ್ತ ವಾಗಿ ನೆಡೆಯಿತು. ಪುರೋಹಿತರಾದ ಉದಯ ಐತಾಳ ಸೌಡ ಹಾಗೂ ಶ್ರೀಧರ ಉಡುಪ ಮೊಳಹಳ್ಳಿಯವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪುರೋಹಿತರು ಗೃಹ ಪ್ರವೇಶದ ಪೂಜಾ ವಿಧಿ ವಿಧಾನ ನೆರವೇರಿಸಿದರು. ನಂತರ ಸಹಬೋಜನ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಲವಕರ ಶೆಟ್ಟಿ ಮಾಲಾಡಿ, ರಂಜಿತ್ ಸೌಡ, ದೀಕ್ಷಿತ ಮಡಿವಾಳ, ವೆಂಕಟೇಶ ಪ್ರಭು, ಗಣೇಶ್ ಮಡಿವಾಳ, ಶರತ ಕಾನ್ಮಕ್ಕಿ ಮಂಜುನಾಥ ಜನ್ನಾಡಿ, ಶರತ ಮೊಗವೀರ, ಸುನಿಲ್ ಶೆಟ್ಟಿ ಹಾಗೂ ನೂತನ ಗೃಹದ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅವಿಭಜಿತ ಕುಂದಾಪುರ ತಾಲೂಕಿನಲ್ಲಿ ಪದವಿ ಕಾಲೇಜು ಇಲ್ಲದ ಸಂದರ್ಭ ಜನ್ಮ ತಳೆದ ಭಂಡಾರ್‌ಕಾರ್ಸ್ ಕಾಲೇಜು ಇಂದು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲು ಕಾರಣ ಡಾ.ಎಚ್.ಶಾಂತಾರಾಮ್ ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿ ಕಾಲೇಜನ್ನು ಕಟ್ಟಿದ ಪರಿ ಅದ್ವಿತೀಯ. ಅವರೊಬ್ಬ ನಿಜಾರ್ಥದ ಸ್ವಪ್ನಶಿಲ್ಪಿ ಎಂದು ಕುಂದಾಪುರ ಶಾಸಕ ಕಿರಣ್‌ ಕುಮಾರ ಕೊಡ್ಗಿ ಹೇಳಿದರು. ಸೋಮವಾರ ಇಲ್ಲಿನ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜರುಗಿದ ಡಾ. ಎಚ್. ಶಾಂತಾರಾಮ್ ಭಾವಾಭಿನಂದನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಹಿರಿಯ ನ್ಯಾಯವಾದಿ ಎ.ಎಸ್‍.ಎನ್‍. ಹೆಬ್ಬಾರ್‍ ಅಭಿನಂದನಾ ನುಡಿಗಳನ್ನಾಡಿದರು. ಮಣಿಪಾಲ ಅಕಾಡೆಮಿ ರಿಜಿಸ್ಟ್ರಾರ್ ಡಾ. ಎಚ್‍.ಎಸ್‍. ಬಲ್ಲಾಳ್‍ ಅಧ‍್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕಾಲೇಜು, ಹಳೆ ವಿದ್ಯಾರ್ಥಿಗಳ ವಿಶ್ವಸ್ಥ ಮಂಡಳಿ, ರಕ್ಷಕ-ಶಿಕ್ಷಕ ಸಂಘ, ಸಮಸ್ತ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಡಾ.ಎಚ್.ಶಾಂತಾರಾಮ್ ಮತ್ತು ವಿಜಯಲಕ್ಷ್ಮೀ ದಂಪತಿಯನ್ನು ಸನ್ಮಾನಿಸಲಾಯಿತು. ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಮುಖರು, ಸಂಘ ಸಂಸ್ಥೆಗಳ ಪ್ರಮುಖರು ಗೌರವ ಸಲ್ಲಿಸಿದರು. ಮಾಜಿ ಸಚಿವ ಅಭಯಚಂದ್ರ ಜೈನ್, ವರದರಾಯ ಪೈ, ದೇವದಾಸ ಕಾಮತ್, ರಾಜೇಂದ್ರ ತೋಳಾರ್, ಡಾ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಜನರ ಸಮಸ್ಯೆ ಪರಿಹರಿಸಲು ವಿಫಲರಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಅಕ್ರಮ-ಸಕ್ರಮ, ಅರ್ಜಿ ನಮೂನೆ 94ಸಿ ಹಾಗೂ 94ಸಿಸಿ ಯಡಿ ಭೂ ಮಂಜೂರಾತಿ, ಸರಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ಪಶ್ಚಿಮ ವಾಹಿನಿ ಯೋಜನೆಯಡಿ ನಡೆದ ಕಿಂಡಿ ಅಣೆಕಟ್ಟುಗಳ ಅಸಮರ್ಪಕ ನಿರ್ವ ಹಣೆ ಹಾಗೂ ಕೋಟ್ಯಂತರ ರೂ. ಅವ್ಯವಹಾರ, ಮರಳು, ಜಲ್ಲಿ, ಕಲ್ಲು ಇತ್ಯಾದಿ ಪೂರೈಕೆಯಲ್ಲಿ ಸಮಸ್ಯೆ, ಸ್ಥಳೀಯ ಸಂಸ್ಥೆಗಳಲ್ಲಿ ದೈನಂದಿನ ಜನಸಾಮಾನ್ಯರ ವ್ಯವಹಾರಗಳಲ್ಲಿ ಅನಗತ್ಯ ಕಿರುಕುಳ, ಪ್ರವಾಸೋದ್ಯಮದಲ್ಲಿ ಹಿನ್ನಡೆ, ಸಿಆರ್ ಝಡ್ ಸಮಸ್ಯೆ, ಡೀಮ್ಸ್‌ ಅರಣ್ಯ ಸಮಸ್ಯೆ, ಕಸ್ತೂರಿ ರಂಗನ್ ವರದಿ, ಪರಿಸರ ಸೂಕ್ಷ್ಮ ವಲಯದ ಸಮಸ್ಯೆಗಳಿಗೆ ಹಿಂದಿನ ಬಿಜೆಪಿ ಸರಕಾರ ಹಾಗೂ ಬಿಜೆಪಿ ಜನಪ್ರತಿನಿಧಿಗಳೇ ಕಾರಣ. ಉಡುಪಿ ಬಿಜೆಪಿ ಜನಪ್ರತಿನಿಧಿ ಗಳು ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿ ಕಾಂಗ್ರೆಸ್ ಸರಕಾರ ಹಾಗೂ ಉಸ್ತುವಾರಿ ಸಚಿವರನ್ನು ಟೀಕಿಸುವುದು ಅವರ ರಾಜ ಕೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾವಾಡಿ ಗ್ರಾಮದ ನಿವಾಸಿ ಸತೀಶ (48) ಎಂಬುವರು ಕಾಲಿಗೆ ಬಾಟಲಿ ತಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅವರು ಹಾಲಾಡಿ ಶ್ರೀ ಗುರುರಾಘವೇಂದ್ರ ಹೊಟೇಲ್‌ನಲ್ಲಿ 12 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು. ಭಾನುವಾರದಂದು ಕೆಲಸದ ವೇಳೆ ಸೋಡಾ ಬಾಟಲಿಗಳ ಕ್ರೇಟ್ ಅನ್ನು ಎತ್ತಿ ಇಡುವಾಗ ಒಂದು ಬಾಟಲಿ ನೆಲಕ್ಕೆ ಬಿದ್ದು ಒಡೆದು, ಬಲ ಕಾಲಿಗೆ ಚೂರುತಾಗಿ ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ ದೊಡ್ಡ ಆಸ್ತಿ. ಉತ್ತಮ ಸ್ನೇಹಿತರನ್ನು ಪಡೆದುಕೊಳ್ಳುವಂತಹ ವ್ಯಕ್ತಿತ್ವವನ್ನು ನಾವು ನಮ್ಮದಾಗಿಸಿಕೊಳ್ಳಬೇಕು ಎಂದು ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಗಂಗೊಳ್ಳಿಯಲ್ಲಿ ಸ್ನೇಹಿತರ ಬಳಗ ಹಮ್ಮಿಕೊಂಡಿದ್ದ ಸರಸ್ವತಿ ವಿದ್ಯಾಲಯದ ನಿವೃತ್ತ ಇತಿಹಾಸ ಉಪನ್ಯಾಸಕ ಹೆಚ್. ಭಾಸ್ಕರ್ ಶೆಟ್ಟಿ ಅವರ ಅಭಿಮಾನದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶಿನಾಥ್ ಪಿ ಪೈ ಮಾತನಾಡಿ, ಸರಳತೆ ಮತ್ತು ಸಜ್ಜನಿಕೆಯಂತಹ ಉತ್ತಮ ಅಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನದಲ್ಲಿ ಉತ್ತಮ ಸ್ನೇಹಿತರು ಸಿಗುತ್ತಾರೆ. ಅಂತಹ ಸ್ನೇಹವನ್ನು ಯಾವತ್ತು ಕಾಪಿಟ್ಟುಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಉಡುಪಿಯ ಖ್ಯಾತ ವಕೀಲ ಹೆಚ್. ರಾಘವೇಂದ್ರ ಶೆಟ್ಟಿ, ಗಂಗೊಳ್ಳಿಯ ಸಮಾಜ ಸೇವಕಿ ಮಂಜುಳ ದೇವಾಡಿಗ, ಗಂಗೊಳ್ಳಿಯ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ  ಉಪಸ್ಥಿತರಿದ್ದರು. ಹೆಚ್. ಭಾಸ್ಕರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶಾಲಾ ಹಾಗೂ ಕಾಲೇಜು ಮಕ್ಕಳು ಕೆರೆ, ನದಿ, ಹಾಗೂ ಕಿಂಡಿ ಆಣೆಕಟ್ಟಿನ ಹಿನ್ನೀರು ಮುಂತಾದ ಪ್ರದೇಶಗಳಲ್ಲಿ ಆಟ ಆಡಲು ಅಥವಾ ಈಜಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣ ಬಿಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಪೋಷಕರು ಇಂತಹ ವಿಷಯಗಳನ್ನು ಗಂಭೀರವಾಗಿ ತೆಗೆದುಕೊಂಡು ಮಕ್ಕಳ ಚಲನವಲನಗಳನ್ನು ಗಮನಿಸಿ, ಸೂಕ್ತ ಎಚ್ಚರಿಕೆ ವಹಿಸಿದ್ದಲ್ಲಿ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸೂರು ಜನತಾ ಕಾಲೊನಿಗೆ ಹೋಗುವ ಅಡ್ಡ ರಸ್ತೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಸೈಕಲ್ ಸವಾರ ಭಾನುವಾರ ಮೃತಪಟ್ಟ ಘಟನೆ ನಡೆದಿದೆ. ಕಂಡ್ಲೂರಿನಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಬೈಕ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ಮಂಜುನಾಥ್ (54) ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಸಮಾರಂಭ ‘ಸಿದ್ಧಿ ಸೌರಭ-2024’ ಬಹಳ ವಿಜೃಂಭಣೆಯಿಂದ ನಡೆಯಿತು. ಪೂರ್ವಾಹ್ನದ ಅವಧಿಯಲ್ಲಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ, ರೂಪಕ ಮತ್ತು ಪ್ರಹಸನದಂತಹ ಮನೋರಂಜನಾ ಕಾರ್ಯಕ್ರಮಗಳು ನಡೆದವು. ಪ್ರಾಥಮಿಕ ಶಾಲಾ ಸಹಶಿಕ್ಷಕಿ ವಿನಯಾ ಸ್ವಾಗತಿಸಿದರು. 5ನೇ ತರಗತಿಯ ವಿದ್ಯಾರ್ಥಿಗಳಾದ ಸುಶಾನ್, ನಿಯತಿ, ದಿಲ್ಶಾನ್, ಅಹನಾ, ವಿನೀಶ್, ಪ್ರಾರ್ಥನಾ, ಸೃಷ್ಠಿ, ಅಪೂರ್ವ, ಆರಾಧ್ಯ, ಶ್ರೇಯಾಂಕ್ ಮತ್ತು ಸಂಹಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಸಹಶಿಕ್ಷಕಿ ಗೀತಾ ಶೆಟ್ಟಿ ವಂದಿಸಿದರು. ಸಂಜೆಯ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಸದಾರಾಮ್ ಸಂಸ್ಥೆ ನಡೆದು ಬಂದ ಹಾದಿ ಮತ್ತು ಇಲ್ಲಿನ ಶೈಕ್ಷಣಿಕ ಚಟುವಟಿಕೆಗಳು, ಪ್ರಸ್ತುತ ವರ್ಷದಲ್ಲಿ ಸಂಸ್ಥೆಗೆ ಸಂದ ಗೌರವ ಪುರಸ್ಕಾರಗಳು ಇತ್ಯಾದಿಗಳ ಕುರಿತಾದ ವಾರ್ಷಿಕ ವರದಿಯನ್ನು ವಾಚಿಸಿದರು. ಪ್ರಾಥಮಿಕ ಶಾಲಾ ಸಹಶಿಕ್ಷಕಿ ರೋಹಿಣಿ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ರಮಾದೇವಿ ಭಟ್, ಶ್ರೀ ಸಿದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರು ಹೆಚ್.ಐ.ವಿ ರೋಗದ ಹರಡುವಿಕೆ, ಅದರಿಂದಾಗುವ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಹೊಂದಿ, ಅಗತ್ಯ ಎಲ್ಲಾ ರೀತಿಯಲ್ಲಿ ಮುನ್ನೆಚ್ಚರಿಕೆಯನ್ನು ವಹಿಸಿದ್ದಲ್ಲಿ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ. ಇದಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಂಬಲಪಾಡಿ ಪ್ರಗತಿಸೌಧ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ವಿದ್ಯಾರತ್ನ ಸ್ಕೂಲ್ & ಕಾಲೇಜು ಆಫ್ ನರ್ಸಿಂಗ್ ಉಡುಪಿ, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್, ಗಾರ್ಡ್ ಸಂಸ್ಥೆ, ದೀಪ ಜ್ಯೋತಿ ನೆಟ್‌ವರ್ಕ್, ಆಸರೆ ಚಾರಿಟೇಬಲ್ ಟ್ರಸ್ಟ್…

Read More