Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ ಇವೆಯೇ ಎಂಬುದನ್ನು ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಅಂತಿಮ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ ಮಾತನಾಡಿದರು. ಜಿಲ್ಲೆಯ ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,17,890 ಪುರುಷರು, 1,22,914 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,40,806 ಮತದಾರರು, ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,01,959 ಪುರುಷರು, 1,10,025 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,11,986 ಮತದಾರರು, ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,06,782…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಅಂಪಾರು ಗ್ರಾಮದ ನಿವಾಸಿ ರಾಜು (53) ಅವರು ಮನೆಯ ಒಳಗೆ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ. ಅವರು ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿಯಿಂದ ಮಣಿಪಾಲ್‌ಗೆ ಹೋಗುವ ರಸ್ತೆ ಅಗಲೀಕರಣ ಕಾಮಗಾರಿಯ ಸಂದರ್ಭದಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ರೈಲ್ವೇ ಇಲಾಖೆಯ ಉಕ್ಕಿನ ಸೇತುವೆ ನಿರ್ಮಾಣ ಮಾಡಬೇಕೆಂದು ಸೂಚನೆ ನೀಡಿದ ಹಿನ್ನಲೆಯಲ್ಲಿ, 2018 ನೇ ಸಾಲಿನಲ್ಲಿ ಉಕ್ಕಿನ ಸೇತುವೆ ನಿರ್ಮಾಣ ಕಾಮಗಾರಿ ಪ್ರಕ್ರಿಯೆಯು ಪ್ರಾರಂಭವಾಗಿ, ಕಳೆದ 5 ವರ್ಷ ಕಳೆದರೂ ಪೂರ್ಣಗೊಳ್ಳದೇ ಸಾರ್ವಜನಿಕರ ಸಂಚಾರಕ್ಕೆ ಅವ್ಯವಸ್ಥೆ ಉಂಟಾಗಿ ಸಾರ್ವಜನಿಕರಿಂದ ದೂರುಗಳು ಪ್ರತಿದಿನವೂ ಕೇಳಿಬರುತ್ತಿದೆ. ಆದರೆ, ಗುತ್ತಿಗೆದಾರರುಗಳು ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.  ಉಡುಪಿ: ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಆತ್ಮಸ್ಥೈರ್ಯದಿಂದ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಯ ಲಾಭ ಪಡೆಯಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಅಲಿಂಕೋ ಸಂಸ್ಥೆಯ ವತಿಯಿಂದ ಜಿಲ್ಲೆಯಲ್ಲಿ ಆಯ್ಕೆ ಮಾಡಲಾದ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಉಚಿತ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಶಕ್ತಿ ತುಂಬುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುವುದರೊಂದಿಗೆ ಗುಣಮಟ್ಟದ ಸಲಕರಣೆಗಳನ್ನು ದೊರಕುವಂತೆ ಮಾಡಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜ್ಞಾನಾರ್ಜನೆಯ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿಯನ್ನು ರೂಢಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಉಪಪ್ರಧಾನ ವ್ಯವಸ್ಥಾಪಕರು, ಮಾನವ ಸಂಪನ್ಮೂಲ ಇಲಾಖೆ, ಕರ್ಣಾಟಕ ಬ್ಯಾಂಕ್, ಮಂಗಳೂರು ಪ್ರಧಾನ ಕಚೇರಿ ಗೋಪಾಲಕೃಷ್ಣ ಸಾಮಗ ಬಿ. ಹೇಳಿದರು. ಅವರು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್. ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಾಗಿಬಂದ ಸಾಧನೆಯ ಹಾದಿಯ ಸಮಗ್ರ ಮಾಹಿತಿಗಳನ್ನು ಒದಗಿಸಿದರು. ಮುಖ್ಯ ಅತಿಥಿ ಎನ್ ಸಿ ಎಸ್ ಮತ್ತು ಕೋ. ಸ್ಥಾಪಕರಾದ ಅಂ ನಿತೇಶ್ ಶೆಟ್ಟಿ ಅವರು ಮಾತನಾಡಿ, ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಮತ್ತು ಇದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದರು. ಪ್ರಧಾನ ಶಿಲ್ಪಿಗಳಾದ ಎಂಡಿ ಸುನಿಲ್ ಕುಮಾರ್ ಅವರು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಹಕಾರಿ ಎಂದರು. ಹಿರ್ಗಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಡವ ಶ್ರೀಮಂತರೆಂಬ ಹಂಗು ಹಮ್ಮಿಲ್ಲದೇ ಎಲ್ಲರನ್ನೂ ಪ್ರಭಾವಿಸುವ ಶಕ್ತಿಶಾಲಿ ಮಾಧ್ಯಮವೆಂದರೆ ಕಲೆ. ಅದರ ಮೂಲಕವೇ ಸಮುದಾಯವನ್ನು ತಲುಪಲು ಮತ್ತು ಎಚ್ಚರವಾಗಿರಿಸಲು ಸಾಧ್ಯವಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಲಿಂಗ ನಾಯ್ಕ್ ಜೋಗಿಜೆಡ್ಡು ಹೇಳಿದರು. ಅವರು ಸುರಭಿ ರಿ. ಬೈಂದೂರು ಸಂಸ್ಥೆಯ ರಜತಯಾನ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ಸ್ನೇಹ ತರಂಗ ಬೈಂದೂರು ಸಹಯೋಗದೊಂದಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಮೂರು ದಿನಗಳ ಕಾಲ ಶಾರದಾ ವೇದಿಕೆಯಲ್ಲಿ ಹಮ್ಮಿಕೊಂಡ ಯಕ್ಷ – ಗೊಂಬೆ ವೈಭವ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಮಹಾಲಿಂಗ ನಾಯ್ಕ್ ಜೋಗಿಜೆಡ್ಡು ಅವರನ್ನು ಸನ್ಮಾನಿಸಲಾಯಿತು. ಸುರಭಿ ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯ ನಾಗರಾಜ ಶೆಟ್ಟಿ, ಬೈಂದೂರು ರಾಮಕ್ಷತ್ರಿಯ ಸಮಾಜದ ಅಧ್ಯಕ್ಷ ರಾಮಕೃಷ್ಣ ಸಿ,, ಸಮಷ್ಟಿ ಪ್ರತಿಷ್ಟಾನದ ಮ್ಯಾನೇಜಿಂಗ್ ಟ್ರಸ್ಟೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭಾರತೀಯ ಸೇನೆ ಯುವಕರಲ್ಲಿ ದೇಶಭಕ್ತಿಯ ಭಾವವನ್ನು ಮೂಡಿಸುವ ಭರಪೂರ ಪ್ರಯತ್ನ ಮಾಡುತ್ತದೆ. ಅಂತಹ ಅತ್ಯುತ್ತಮ ತರಬೇತಿ ವ್ಯವಸ್ಥೆ ನಮ್ಮ ಸೇನೆಯಲ್ಲಿದೆ. ಅಂತೆಯೇ ಸೈನ್ಯ ಅಧಿಕಾರಿ ಎಷ್ಟೇ ಕರ್ತವ್ಯ ನಿಷ್ಟುರನಾದರೂ, ಗಡಸು ಸ್ವಭಾವದವನಾದರೂ ಆತನೊಳಗೊಂದು ಮಾನವೀಯ ಮುಖ ಇದ್ದೇ ಇರುತ್ತದೆ ಎನ್ನುವುದು ನನ್ನ ನಂಬಿಕೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ನಾಗೂರಿನಲ್ಲಿ ಭಾನುವಾರ ನಿವೃತ್ತ ಯೋಧ ಬೈಂದೂರು ಚಂದ್ರಶೇಖರ ನಾವಡ ಅವರ ಕಂಟೋನ್ಮೆಂಟ್ ಕಥೆಗಳು ಎಂಬ ಕಥಾಸಂಕಲನದ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸೈನಿಕರೂ ಸಹ ನಾಗರಿಕ ಸಮಾಜದಲ್ಲೇ ಹುಟ್ಟಿ ಬೆಳೆದವರು. ಅವರೂ ನಮ್ಮ ಸಮಾಜದ ಭಾಗವೇ ಆಗಿರುವುದರಿಂದ ಅಲ್ಲಿಯೂ ಸಹ ನಾಗರಿಕ ಸಮಾಜದಲ್ಲಿ ಕಾಣಬಹುದಾದ ಕೆಲವು ನ್ಯೂನತೆಗಳಿವೆ, ವ್ಯಕ್ತಿಗಳ ನಡುವಿನ ಸಂಘರ್ಷಗಳೂ ಇವೆ ಎನ್ನುವುದನ್ನು ಅಲ್ಲಗಳೆಯಲಾಗದು. ಆದರೆ ಸೈನ್ಯಶಿಸ್ತು, ಕಠಿಣ ನಿಯಮಗಳು ಇವುಗಳನ್ನೆಲ್ಲಾ ಹದ್ದುಬಸ್ತಿನಲ್ಲಿರಿಸಲು ಸಮರ್ಥವಾಗಿದೆ. ಸೇನೆಯ ನ್ಯಾಯ ತಂತ್ರವೂ ಮಜಬೂತಾಗಿದೆ. ಅವನೊಳಗೊಂದು ದೇಶಭಕ್ತಿಯ ಭಾವ ಇದ್ದೇ ಇರುತ್ತದೆ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಆಲೂರು ವೆಂಕಟರಾವ್ ಭಾಷಾ ಕೌಶಲ್ಯ ಕೇಂದ್ರ ಮೈಸೂರು, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇದರ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕನ್ನಡ ಭಾಷಾ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಗಳಾದ ಆರಾಧ್ಯ ಆರ್. ದ್ವಿತೀಯ ಸ್ಥಾನವನ್ನು ಮತ್ತು ಪ್ರಖ್ಯಾತ್‌ ತೃತೀಯ ಸ್ಥಾನ ಪಡೆದಿದ್ದಾರೆ. ಅವರಿಗೆ ಶಾಲಾ ಶಿಕ್ಷಕರು ಮತ್ತು ಶಾಲಾ ಅಭಿವೃದ್ಧಿ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಂ.ಮಹೇಶ್ ಹೆಗ್ಡೆ ಮೊಳಹಳ್ಳಿ, ಉಪಾಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ ಚಿಟ್ಟೆಬೈಲು ಆಯ್ಕೆಯಾಗಿದ್ದಾರೆ. ಜ.೬ರಂದು ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ಸಂಘದ ನಿರ್ದೇಶಕರಾದ ಎಚ್.ಹರಿಪ್ರಸಾದ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಲವಕರ ಶೆಟ್ಟಿ, ಅನಿಲ್ ಕುಮಾರ್ ಶೆಟ್ಟಿ, ಶ್ರೀಮತಿ ಇಂದಿರಾ ಯು ಶೆಟ್ಟಿ, ಶ್ರೀಮತಿ ವಾಣಿ ಆ‌ರ್ ಶೆಟ್ಟಿ, ಶ್ರೀಮತಿ ಚೈತ್ರ ಅಡಪ, ದಿನೇಶ ಮೊಗವೀರ, ಉಮೇಶ ಶೆಟ್ಟಿ, ಗಣೇಶ, ಗಿರೀಶ್, ಉದ್ಯಮಿ ಎಂ. ದಿನೇಶ ಹೆಗ್ಡೆ ಮೊಳಹಳ್ಳಿ, ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ದೀಪಾ, ಜಿಲ್ಲಾ ಬ್ಯಾಂಕ್ ಪ್ರತಿನಿಧಿಗಳಾದ ಚಂದ್ರಶೇಖರ ಶೆಟ್ಟಿ, ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು. ಇದನ್ನೂ ಓದಿ ► ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ: ಕಾಂಗ್ರೆಸ್‌ ಬೆಂಬಲಿತ ಗುಂಪಿಗೆ ಜಯ – https://kundapraa.com/?p=80665 . ಆಯ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಡಿ.06: ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಇದರ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಎಲ್ಲಾ 13ಕ್ಕೆ 13 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯ ಸಾಧಿಸಿದ್ದಾರೆ. ಪಂಚಗಂಗಾ ಸಹಕಾರಿ ಬಳಗದ ಹಿಂದುಳಿದ ಬಿ ವರ್ಗದಿಂದ ಹಾಲಿ ಅಧ್ಯಕ್ಷ ಹಕ್ಲಾಡಿ ಸಂತೋಷಕುಮಾರ ಶೆಟ್ಟಿ, ಹಿಂದುಳಿದ ಎ ವರ್ಗದಿಂದ ರಾಘವೇಂದ್ರ ಪೂಜಾರಿ, ಸಾಮಾನ್ಯ ಕ್ಷೇತ್ರದಲ್ಲಿ ಶರತ್ ಕುಮಾರ್ ಶೆಟ್ಟಿ, ಆನಂದ ಬಿಲ್ಲವ ಉಪ್ಪಿನಕುದ್ರು, ಚಂದ್ರ ಪೂಜಾರಿ, ಚಂದ್ರ ಎಸ್. ನಾಯ್ಕ, ತಮ್ಮಯ್ಯ ದೇವಾಡಿಗ, ಸಂತೋಷ ಕುಮಾರ ಶೆಟ್ಟಿ ತೋಟಬೈಲು, ಸುಧಾಕರ ಎನ್. ದೇವಾಡಿಗ ಹಾಗೂ ಮಹಿಳಾ ಮೀಸಲು ಕ್ಷೇತ್ರದಿಂದ ಚಂದ್ರಮತಿ ಹೆಗಡೆ, ಸುನಿತ ಪೂಜಾರಿ, ಪ. ಜಾತಿ ಮೀಸಲು ಕ್ಷೇತ್ರದಿಂದ ಸಂಜೀವ ಹಕ್ಲಾಡಿ, ಪ ಪಂಗಡ ಕ್ಷೇತ್ರದಿಂದ ಶಾರದ ಚುನಾವಣೆಯಲ್ಲಿ ಜಯ ಸಾಧಿಸಿದರು. ಚುನಾವಣಾಧಿಕಾರಿಯಾಗಿ ಸುಮಿತ್ರಾ ಕುಮಾರಿ ಚುನಾವಣೆ ನಡೆಸಿಕೊಟ್ಟರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಪೂಜಾರಿ, ಲೇಖಪಾಲ ಭಾಸ್ಕರ ಪೂಜಾರಿ ಸಹಕರಿಸಿದರು.

Read More