ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದದ ಸುಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಹಾ ರಥೋತ್ಸವವು ಇದೇ ಫೆಬ್ರವರಿ 16 ಹಾಗೂ ಫೆಬ್ರವರಿ 27 ರಿಂದ ಮಾರ್ಚ್ 8ನೇ ತಾರೀಖಿನವರೆಗೂ ನಡೆಯಲಿದೆ. ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಹಾ ರಥೋತ್ಸವ ಸಮಿತಿಯ ಅಧ್ಯಕ್ಚತೆಯನ್ನು ಬಿ.ಎಸ್. ಸುರೇಶ್ ಶೆಟ್ಟಿ ವಹಿಸಿದ್ದು ಈಗಾಗಲೇ ಹಲವು ಸಮಿತಿಗಳ ರಚಿಸಿ ಪೂರ್ವಸಿದ್ಧತಾ ಕಾರ್ಯ ಆರಂಭಿಸಲಾಗಿದೆ. ಈ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀಮನ್ಮಹಾ ರಥೋತ್ಸವದ ಶುಭಕಾರ್ಯಕ್ಕಾಗಿ ಉದ್ಯಮಿ ಯು.ಬಿ. ಶೆಟ್ಟಿಯವರು ಐದು ಲಕ್ಷದ ಐದು ರೂಪಾಯಿಗಳನ್ನು ಸೇವೆಯ ರೂಪದಲ್ಲಿ ದೇಗುಲಕ್ಕೆ ನೀಡಿದ್ದು, ಇನ್ನೂ ಹೆಚ್ಚಿನ ದಾನಿಗಳು ತನು ಮನ ಧನ ಸಹಿತ ದೇವಿಯ ಸೇವೆಗೆ ಮುಂದಾಗಿದ್ದಾರೆ ಉತ್ಸವಗಳ ವಿವರ:ಫೆಬ್ರವರಿ 16ರ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ ಮೂಲಕ ಶುಭ ಕಾರ್ಯದ ಶುಭಾರಂಭ ಆಗಲಿದೆ. ನಂತರದ ಪುಣ್ಯಾಹ, 12 ಕಾಯಿ ಗಣಪತಿ ಹೋಮ, ದುರ್ಗಾ ಹವನ, ಪ್ರಾಯಶ್ಚಿತ್ತ ಕಲಾವೃದ್ಧಿ ಹೋಮ, ಕಲಶಾಭಿಷೇಕ, ವಿಶೇಷ ಪಂಚಾಮೃತ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ವರದಿ.ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಮಂಜುನಾಥ ಭಂಡಾರಿ ಅವರು ದಿನಾಂಕ 14-02-2023ರಂದು ಕುಂದಾಪುರ ಕನ್ನಡ / ಕುಂದಗನ್ನಡ ಭಾಷಾ ಅಕಾಡೆಮಿ ಸ್ಥಾಪನೆಗೆ ಹಕ್ಕೊತ್ತಾಯನವನ್ನು ಮಂಡಿಸಿದ್ದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಸುನಿಲ್ ಕುಮಾರ್ ಅವರು ನೀಡಿರುವ ಉತ್ತರ ವಿಷಾದನೀಯ ಭಾಷಾವಿಭಿನ್ನತೆಯನ್ನು ಹೊಂದಿರುವ ಕನ್ನಡಕ್ಕೆ ಪ್ರತ್ಯೇಕ ಕುಂದಾಪುರ ಕನ್ನಡ ಅಕಾಡೆಮಿ ಸ್ಥಾಪಿಸುವುದು ಕನ್ನಡ ಭಾಷಾ ಸಮಗ್ರತೆಯ ದೃಷ್ಟಿಯಿಂದ ಸೂಕ್ತವಲ್ಲ ಎಂದು ಸಚಿವರು ಪ್ರತಿಕ್ರಿಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ಸಂಶೋಧಕರಾದ ಡಾ. ಗಾಯತ್ರೀ ನಾವಡ ಹಾಗೂ ಪ್ರೋ. ಎ.ವಿ. ನಾವಡ ಅವರು ಕುಂದಗನ್ನಡ ಅಕಾಡೆಮಿ ಸ್ಥಾಪನೆಯಾಗುವುದು ಭಾಷಾ ಬೆಳವಣಿಗೆ ದೃಷ್ಠಿಯಿಂದ ಸೂಕ್ತವಾದುದು ಎಂಬ ಅಭಿಪ್ರಾಯ ಮಂಡಿಸಿದ್ದಾರೆ. ಅದರ ಪೂರ್ಣಪಾಠ ಹೀಗಿದೆ. ಕನ್ನಡ ನಾಡು ಕೇವಲ ಒಂದು ಕನ್ನಡ ಭಾಷಾ ನೆಲವಲ್ಲ. ಇದು ಬಹುರೂಪಿ ಕನ್ನಡಗಳ ನೆಲೆ. ಕವಿರಾಜಮಾರ್ಗಕಾರ ಹೇಳಿದಂತೆ ಕನ್ನಡಂಗಳ್ ತಾಣ. ಇದು ಕನ್ನಡ ಸಂಸ್ಕೃತಿಯ ಅಸ್ಮಿತೆ ಮತ್ತು ಸಮೃದ್ಧತೆ. ಭಾಷಾ ಬಹುರೂಪತೆಯೇ ಕನ್ನಡದ ಅಂತಃ ಚೈತನ್ಯ, ಸಮೃದ್ಧತೆ. ಭಾಷಾ…
ಕುಂದಾಪುರದಲ್ಲಿ ಎಆರ್ಟಿಓ ಕಛೇರಿ ಮಾಡಿ. ವಾಹನ ನೊಂದಣಿ, ಟೆಸ್ಟ್ ನೀಡಲು ೭೦ಕೀ.ಮೀ ಸಂಚರಿಸಬೇಕಾದ ಅನಿವಾರ್ಯತೆ ಇದೆ – ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕುಂದಾಪುರ ತಾಲೂಕು ಘಟಕದ 2023 – 24ನೇ ಅವಧಿಯ ಅಧ್ಯಕ್ಷರಾಗಿ ಎಸ್. ದಸ್ತಗೀರ್ ಕಂಡ್ಲೂರು ಸರ್ವಾನುಮತದಿಂದ ಆಯ್ಕೆಯಾದರು. 2023-24ನೇ ಸಾಲಿನ ಮೊದಲ ಸಭೆ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ಇಬ್ರಾಹಿಮ್ ಸಾಹೇಬ್ ಕೋಟರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು ಉಪಾಧ್ಯಕ್ಷರಾಗಿ ಎಸ್. ಎಸ್. ಹನೀಫ್ ಗುಲ್ವಾಡಿ, ಕಾರ್ಯದರ್ಶಿಯಾಗಿ ರಿಯಾಝ್ ಕೋಡಿ, ಜೊತೆ ಕಾರ್ಯದರ್ಶಿಯಾಗಿ ಜಿ. ಎಮ್. ಅಬೂಬಕರ್ ಮಾವಿನಕಟ್ಟೆ, ಕೋಶಾಧಿಕಾರಿಯಾಗಿ ಮುಜಾವರ್ ಅಬು ಮುಹಮ್ಮದ್ ಕುಂದಾಪುರ ಆಯ್ಕೆಯಾದರು. ತಾಲೂಕು ಸಮಿತಿಯ ಸದಸ್ಯರಾಗಿ ಮುಹಮ್ಮದ್ ರಫೀಕ್ ವಂಡ್ಸೆ, ಎಸ್. ಮುನೀರ್ ಕಂಡ್ಲೂರು, ಪಳ್ಳಿ ಉಸ್ಮಾನ್ ಗುಲ್ವಾಡಿ, ಮುನಾಫ್ ಕೋಡಿ, ನಸೀರ್ ನಯ್ನಾರ್ ಕೋಡಿ, ಅಬ್ದುಲ್ ಖಾದರ್ ಮೂಡಗೋಪಾಡಿ ಇವರುಗಳು ತಾಲೂಕು ಸಮಿತಿ ಸದಸ್ಯರಾಗಿ ಆಯ್ಕೆಯಾದರು. ಝಹೀರ್ ನಾಖುದಾ ಗಂಗೊಳ್ಳಿ, ಫಾರೋಕ್ ಹಳವಳ್ಳಿ, ಮುಹಮ್ಮದ್ ರಫೀಕ್ ಬೆಳ್ವೆ, ಆಸಿಫ್ ಕೋಟೇಶ್ವರ, ಕಲಂದರ್ ಹಂಗಳೂರು ಅವರನ್ನು ನಾಮ ನಿರ್ದೇಶನ ಮಾಡಲಾಯಿತು. ಮುಹಮ್ಮದ್ ರಫೀಕ್ ಬಿ. ಎಸ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಪೃಥ್ವಿ ಕ್ರೀಡಾ ಮತ್ತು ಯುವಕ ಸಂಘದ 30ನೇ ವಾರ್ಷಿಕೋತ್ಸವ ಹಾಗೂ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ‘ಪ್ರಥ್ವಿ ಟ್ರೋಫಿ – 2023’ ಫೆ.25ರ ಶನಿವಾರ ಸಂಜೆ 5 ಗಂಟೆಯಿಂದ ಬೈಂದೂರು ಗಾಂಧಿ ಮೈದಾನದಲ್ಲಿ ಜರುಗಲಿದೆ. ಪಂದ್ಯಾಟದ ಪೂರ್ವದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದ್ದು, ಈ ವೇಳೆ ಸಾಧಕ ಕ್ರೀಡಾಪಟುವಿಗೆ ‘ಪ್ರಥ್ವಿ ಕ್ರೀಡಾ ರತ್ನ ಪ್ರಶಸ್ತಿ 2023’ ಪ್ರಶಸ್ತಿ ಪ್ರದಾನಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಜಯಾನಂದ ಹೋಬಳಿದಾರ್ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಯಡ್ತರೆ ಫ್ರೆಂಡ್ಸ್ ಆಶ್ರಯದಲ್ಲಿ ಬೈಂದೂರು ತಾಲೂಕು ಮಟ್ಟದ ಕು ಮಟ್ಟದ 30 ಗಜಗಳ ಕ್ರಿಕೆಟ್ ಪಂದ್ಯಾಟ ‘ಯಡ್ತರೆ ಟ್ರೋಫಿ – 2023’ ಫೆ.25 ಹಾಗೂ 26ರಂದು ಎರಡು ದಿನಗಳ ಕಾಲ ಯಡ್ತರೆ ಕ್ರೀಡಾಂಗಣದಲ್ಲಿ ಜರುಗಲಿದೆ. ಫೆ.25ರ ಬೆಳಿಗ್ಗೆ ಪಂದ್ಯಾಟ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ. ಫೆ.26ರ ಸಂಜೆ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭ ಜರುಗಲಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಲಿದೆ. ಈ ವೇಳೆ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮವಾಗಿ ನೃತ್ಯ ವೈವಿಧ್ಯ, ಹಾಸ್ಯಮಯ ನಗೆ ನಾಟಕ ಪ್ರದರ್ಶನಗೊಳ್ಳಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರವು ಶುದ್ಧ ಕನ್ನಡದ ನೆಲ. ಕುಂದಾಪ್ರ ಕನ್ನಡ ಭಾಷೆಯ ಮೇಲೆ ಬೇರೆ ಭಾಷೆಯ ಪ್ರಭಾವವಿಲ್ಲ. ಕರ್ನಾಟಕ ರಾಜ್ಯದಲ್ಲಿ ವಿಭಿನ್ನ ರೀತಿಯಲ್ಲಿ ಕನ್ನಡದ ಉಚ್ಛಾರವಿದೆಯಾದರೂ ಕುಂದಾಪ್ರ ಕನ್ನಡದ ಪರಿಶುದ್ಧತೆ, ಜನಪದ ಸಾಹಿತ್ಯದಲ್ಲಿನ ವೈಶಿಷ್ಟ್ಯ, ಸಂಸ್ಕೃತಿ ಬೇರೆಲ್ಲೂ ಇಲ್ಲ. ಸಾವಿರಾರು ವರ್ಷಗಳಿಂದ ತನ್ನತನ ಉಳಿಸಿಕೊಂಡಿರುವ ಈ ಭಾಷೆಯ ವೈಶಿಷ್ಟ್ಯ ಮತ್ತು ಚೆಲುವಿಗೆ ಇನ್ನೊಂದರ ಹೋಲಿಕೆ ಸಾಧ್ಯವಿಲ್ಲ. ಇಂತಹ ಭಾಷೆಗೆ ಪ್ರತ್ಯೇಕ ಅಕಾಡೆಮಿಯ ಅಗತ್ಯವಿದ್ದು, ಸರಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಈ ಬಗ್ಗೆ ನೀರಾಸಕ್ತಿ ತೋರಿರುವುದು ಖಂಡನೀಯ ಎಂದು ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಕುಂದಾಪುರದ ಖಾಸಗಿ ಹೋಟೆಲಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಐದು ಸಾವಿರಕ್ಕೂ ಹೆಚ್ಚು ಶಬ್ದಗಳನ್ನು ಹೊಂದಿರುವ ಕುಂದಾಪ್ರ ಕನ್ನಡ ಭಾಷೆಯಲ್ಲಿ ನಿಘಂಟು ಪ್ರಕಟವಾಗಿದೆ. ಸಾಹಿತ್ಯ, ಸಂಗೀತ, ಚಲನಚಿತ್ರ ರಂಗಭೂಮಿ ಹಾಗೂ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕುಂದ ಕನ್ನಡ ನಿರಂತರವಾಗಿ ಬಳಕೆಯಾಗುತ್ತಿದೆ. ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್, ಕುಂದಾಪುರ ಮತ್ತು ಹಿಂದೂ ಅಭ್ಯುದಯ ಸಂಘ(ರಿ.), ನಾವುಂದ ಇವರ ಜಂಟಿ ಆಶ್ರಯದಲ್ಲಿ, ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಮುದ್ದುಮನೆ-ಶಿರೂರು (ಮಂದಾರ್ತಿ) ಇವರ ಸಹಯೋಗದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರವನ್ನು, ಕುಂದಾಪುರ ರೋಟರಿಯ ಕ್ಲಬ್ ನ ಮಾಜಿ ಅಧ್ಯಕ್ಷರೂ, ಖ್ಯಾತ ವಕೀಲರೂ ಆದ ಶಶಿಧರ ಹೆಗ್ಡೆ ಇವರು ಉದ್ಘಾಟಿಸಿ, ಕಣ್ಣಿನ ರಕ್ಷಣೆ ಮತ್ತು ಮಹತ್ವದ ಬಗ್ಗೆ ತಿಳಿಸಿದರು. ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷರಾದ ವೆಂಕಟೇಶ ನಾವುಂದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಿರೂರು ಮುದ್ದುಮನೆ ಕಣ್ಣಿನ ಆಸ್ಪತ್ರೆಯ ಪ್ರತಿನಿಧಿ ಶಂಕರ ಶೆಟ್ಟಿ ಕುಂದಾಪುರ ಇವರು ಶಿಬಿರದ ಬಗ್ಗೆ ಅಗತ್ಯ ಮಾಹಿತಿಯನ್ನು ನೀಡಿದರು. ರಾಘವೆಂದ್ರ ಗೋಪಾಡಿ, ಆಸ್ಪತ್ರೆಯ ವೈದ್ಯರಾದ ಮನೂಜ್ ಭಟ್, ಹಿಂದೂ ಅಭ್ಯುದಯ ಸಂಘದ ಉಪಾಧ್ಯಕ್ಷರಾದ ಪ್ರವೀಣ್ ನಾವುಂದ, ಕೋಶಾಧಿಕಾರಿಗಳಾದ ರತ್ನಾಕರ ಕೆ., ಜೊತೆ ಕಾರ್ಯದರ್ಶಿ ವಿಘ್ನೇಶ್ವರ ಕೆ. ಮತ್ತು ಸದಸ್ಯರಾದ ಸಂಜೀವ ಗಾಣಿಗ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಟಕಗಳು ಮನೋರಂಜನೆಯ ಮಾಧ್ಯಮವಾಗಿರುವುದರ ಜತೆಗೆ ಸಮಾಜಕ್ಕೆ ಉಪಯುಕ್ತ ಸಂದೇಶ ನೀಡುವುದೂ ಸಾಧ್ಯ. ತಂಡಗಳು ತಾವು ಪ್ರದರ್ಶಿಸುವ ನಾಟಕಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಅದರಿಂದ ಸಮಾಜದ ಸ್ವಾಸ್ಥ್ಯ ಕಾಪಾಡಲು ಕೊಡುಗೆ ನೀಡಿದಂತಾಗುತ್ತದೆ ಎಂದು ಯುಬಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಶಿ ಹೇಳಿದರು. ಬೈಂದೂರು ಶ್ರೀ ಶಾರದಾ ವೇದಿಕೆಯಲ್ಲಿ ಸ್ಥಳೀಯ ಕಲಾಸಂಸ್ಥೆ ಲಾವಣ್ಯದ 46ನೇ ವಾರ್ಷಿಕೋತ್ಸವ ಹಾಗೂ ರಂಗಪಂಚಮಿ-23 ಐದು ದಿನಗಳ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದರು. ಕಲಾವಿದರು ತಮ್ಮ ಪಾತ್ರಗಳಿಗಾಗಿ ಬೇಡಿಕೆ ಹಾಗೂ ಆರ್ಥಿಕ ಸಂಕಷ್ಟಗಳಿಂದ ಇಂದು ಹಲವು ನಾಟಕ ಕಲಾ ಸಂಸ್ಥೆಗಳು ಮುಚ್ಚಲ್ಪಟ್ಟಿದೆ, ಆದರೆ ಬೈಂದೂರಿನ ಲಾವಣ್ಯ ಸಂಸ್ಥೆ ಇದಕ್ಕೆ ಅಪವಾದವಾಗಿದ್ದು, ಕಳೆದ 45ವರ್ಷಗಳಿಂದ ಹಲವು ತ್ರಾಸದಾಯಕ ಪರಿಸ್ಥಿತಿಯನ್ನು ಎದುರಿಸಿಯೂ, ತಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೇ, ಪರಸ್ಪರ ವಿಶ್ವಾಸದಿಂದ ಮುನ್ನೆಡೆದುಕೊಂಡು ಹೋಗುತ್ತಿರುವುದಲ್ಲದೇ, ಈ ಭಾಗದ ಜನರಿಗೆ ಮನೋರಂಜನೆಯೊಂದಿಗೆ ಉತ್ತಮ ಸಂದೇಶ ನೀಡುವ ಕೆಲಸ ಮಾಡುತ್ತಿದೆ ಎಂದರು. ಅರೆಹೊಳೆ ಪ್ರತಿಷ್ಠಾನದ ಮುಖ್ಯಸ್ಥ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಇದರ “ಆ್ಯನ್ಸ್ ಡೇ ” ಕಾರ್ಯಕ್ರಮವು ಗಿಳಿಯಾರು ಕುಶಲ್ ಹೆಗ್ಡೆ ರೋಟರಿ ಭವನದಲ್ಲಿ ಆನ್ಸ್ ಮತ್ತು ಅನೆಟ್ಸ್ ಸಾಂಸ್ಕೃತಿಕ ಸಂಜೆ ಕಲರವ ಸಂಭ್ರಮದಿಂದ ನಡೆಯಿತು. ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿದ್ದ ಕುಂದಾಪುರದ ಖ್ಯಾತ ನ್ಯಾಯವಾದಿ, ರೋಟರಿ ಕುಂದಾಪುರದ ಹಿರಿಯ ಸದಸ್ಯ ಟಿ.ಬಿ.ಶೆಟ್ಟಿ ಅತ್ಯಂತ ಪ್ರತಿಭಾವಂತರಿಂದ ಕೂಡಿದ ಆ್ಯನ್ಸ್ ಕ್ಲಬ್, ರೋಟರಿ ಸದಸ್ಯರನ್ನು ಒಳಗೊಂಡು ಪ್ರಸಕ್ತ ನಗುಮೊಗದ ಅಧ್ಯಕ್ಷ ವೆಂಕಟೇಶ ನಾವುಂದ ಕ್ಲಬ್ ನಡೆಸಿದ ರೀತಿ ಶ್ಲಾಘನೀಯವಾದದ್ದು ಎಂದರು. ಇನ್ನೊರ್ವ ಮುಖ್ಯ ಅತಿಥಿ ಖ್ಯಾತ ಉದ್ಯಮಿ ಪ್ರಶಾಂತ್ ತೋಳಾರ್ ಆನ್ಸ್ ಕ್ಲಬ್ ಚಟುವಟಿಕೆಗಳನ್ನು ಕೊಂಡಾಡಿದರು. ಅಧ್ಯಕ್ಷತೆ ವಹಿಸಿದ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ವೆಂಕಟೇಶ್ ನಾವುಂದ ಆನ್ಸ್ ಕ್ಲಬ್ ನೀಡಿದ ಸಹಕಾರವನ್ನು ಸ್ಮರಿಸಿದರು. ವೇದಿಕೆಯಲ್ಲಿ ಆನ್ಸ್ ಸಭಾಪತಿ ಪಾರ್ವತಿ ಕೊತ್ವಾಲ್ ಪ್ರಾಸ್ತಾವಿಕ ನುಡಿಯನ್ನಾಡಿದರು, ಆನ್ಸ್ ಅಧ್ಯಕ್ಷೆ ಸ್ಮಿತಾ ವೆಂಕಟೇಶ್ ಸ್ವಾಗತಿಸಿದರು, ರೋಟರಿ ಕುಂದಾಪುರದ ಕಾರ್ಯದರ್ಶಿ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ ಆನ್ಸ್ ಕ್ಲಬ್…
