ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗಳನ್ನು ಮಾಡುವಲ್ಲಿ ಬಹಳ ದೊಡ್ಡ ಪ್ರೇರಣೆಯನ್ನು ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಖ್ಯಾತ ಉದ್ಯಮಿ ವಿಠಲ ಶೆಣೈ ಅವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಎಸ್. ವಿ. ಪಿ. ಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಜಿ. ಎಸ್. ವಿ. ಎಸ್ ಅಸೋಸಿಯೇಷನ್ನ ಅಧ್ಯಕ್ಷ ಡಾಕ್ಟರ್ ಕಾಶಿನಾಥ್ ಪೈ, ಸರಸ್ವತಿ ವಿದ್ಯಾಲಯ ಸಂಸ್ಥೆಗಳ ಸಂಚಾಲಕರಾದ ಸದಾಶಿವ ನಾಯಕ್ ಎನ್,, ಜಿ.ಎಸ್. ವಿ.ಎಸ್ ಅಸೋಸಿಯೇಷನ್ ಖಜಾಂಜಿ ಅಶ್ವಿನ್ ನಾಯಕ್, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್, ಉಪನ್ಯಾಸಕಿ ಸುಗುಣ ಆರ್. ಕೆ. ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಹಮ್ಮಿಕೊಂಡ ವಿವಿಧ ಕ್ರೀಡಾಕೂಟಗಳ ಯಶಸ್ವಿಗೆ ಶ್ರಮಿಸಿದ ವಿವಿಧ ಕ್ರೀಡಾಳುಗಳನ್ನು ಅಭಿನಂದಿಸಿ ಗೌರವಿಸಲಾಯಿತು. …
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕೊಡಮಾಡುವ ನಾಲ್ಕನೇ ವರುಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅವನಿ ಎಂ. ಎಸ್. ಮತ್ತು ಸೋನಾ ಎ., ತೆಕ್ಕಟ್ಟೆಯ ಕೊಯ್ಕುರ್ ಶ್ರೀ ಕುವೆಂಪು ಶತಮಾನೋತ್ಸವ ಮಾದರಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿನಿ ದಶಮಿ ಶೆಟ್ಟಿ, ಬೇಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶ್ರೀಜನ್ಯಾ, ಕೊಕ್ಕರ್ಣೆ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿನಿ ಮಾನ್ವಿ ಕೆ. ಪಿ. ಎಸ್., ತೆಕ್ಕಟ್ಟೆ ವಿಶ್ವ ವಿನಾಯಕ ನ್ಯಾಶನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ಕ್ನ ವಿದ್ಯಾರ್ಥಿ ದಿವಿನ್ ಪಿ. ಶೆಟ್ಟಿ, ಕುಂದಾಪುರ ಎಚ್. ಎಂ. ಎಂ. ಇಂಗ್ಲಿಷ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಾಣಿಜ್ಯೀಕರಣದತ್ತ ಸಾಗುತ್ತಿರುವ ಶಿಕ್ಷಣ ಸಂಸ್ಥೆಗಳ ನಡುವೆ ಖಂಬದಕೋಣೆಯ ಆರ್. ಕೆ. ಸಂಜೀವ್ ರಾವ್ ಸ್ಮಾರಕ ದತ್ತಿನಿಧಿ ನಾಗೂರಿನಲ್ಲಿ ನಡೆಸುತ್ತಿರುವ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯು ಶೈಕ್ಷಣಿಕ ಮೌಲ್ಯಗಳಿಗೆ ಬದ್ಧವಾಗಿ ಭಿನ್ನತೆ ಮೆರೆಯುತ್ತಿದೆ. ಜನರ ಕೈಗೆಟಕುವ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ರಿ. ಆಗಿರುವ ಡಾ. ನಾರಾಯಣ ಶೆಟ್ಟಿ ಹೇಳಿದರು. ಅವರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಮೂರನೆಯ ದಿನ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳ ಪಠ್ಯಾಧರಿತ ಪರೀಕ್ಷೆಗಳ ಅಂಕಗಳೇ ಅವರ ಸಾಧನೆಯ ಮಾನದಂಡವಲ್ಲ. ಸಹಪಠ್ಯ ವಿಷಯಗಳಲ್ಲಿನ ಸಾಧನೆಯೂ ಪರಿಗಣನೆಗೆ ಬರಬೇಕು. ವಿದ್ಯಾರ್ಥಿಗಳ ನಾಗರಿಕ ವರ್ತನೆಗೆ ಆದ್ಯತೆ ದೊರೆಯಬೇಕು ಎಂದು ಅವರು ಹೇಳಿದರು. ಮುಖ್ಯ ಅತಿಥಿಗಳಾಗಿದ್ದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯಕ್ ಶಾಲೆಯ ಶೈಕ್ಷಣಿಕ ಗುಣಮಟ್ಟಕ್ಕೆ ಇಲ್ಲಿ ಕಲಿತ ತಮ್ಮ ಪುತ್ರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 625…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಪ್ರೆಸ್ಟೀಜ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.14 ರಂದು ಎ ಐ ಸಿ ಎಸ್ ಒಕ್ಕೂಟದವರು ಆಯೋಜಿಸಿದ ಉಡುಪಿ- ದಕ್ಷಿಣ ಕನ್ನಡ ಜಿಲ್ಲಾ ಅಂತರ್ ಶಾಲಾ ಕಬಡ್ಡಿ ಪಂದ್ಯಾಟದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 14 ಮತ್ತು 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪಾರಮ್ಯ ಮೆರೆಯಿತು. ಫೈನಲ್ ಕಾದಾಟದಲ್ಲಿ 14 ವರ್ಷದೊಳಗಿನ ಬಾಲಕರ ತಂಡ 21-14 ಅಂಕಗಳ ಅಂತರದಲ್ಲಿ ಹಾಗೂ 17 ವರ್ಷದೊಳಗಿನ ಬಾಲಕರ ತಂಡ 28-13 ಅಂಕಗಳ ಅಂತರದಲ್ಲಿ ಎದುರಾಳಿ ತಂಡಗಳನ್ನು ಮಣಿಸಿತು. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಹಟ್ಟಿಅಂಗಡಿ ವಸತಿಶಾಲೆಯ ವಿಕಾಸ್ ಸಿ. ಬೆಸ್ಟ್ ಆಲ್ರೌಂಡರ್, 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಹಟ್ಟಿಅಂಗಡಿ ವಸತಿಶಾಲೆಯ ಶಶಾಂಕ್ ಡಿ. ಎನ್. ಬೆಸ್ಟ್ ರೈಡರ್ ಹಾಗೂ ಪ್ರಜ್ವಲ್ ಹೆಗಡೆ ಬೆಸ್ಟ್ ಡಿಫೆಂಡರ್ ಗೌರವಕ್ಕೆ ಪಾತ್ರರಾದರು. ವಿದ್ಯಾರ್ಥಿಗಳ ಪ್ರಚಂಡ ಪ್ರದರ್ಶನದ ಕುರಿತಾಗಿ ಪ್ರತಿಕ್ರಿಯಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾವು ಯಾವುದನ್ನು ಯಾಕಾಗಿ ಮಾಡುತ್ತೇವೆ ಎಂಬ ಸ್ಪಷ್ಟತೆ ಇಲ್ಲದೇ ಅನುಕರಣೆಯ ದಾರಿ ಹಿಡಿದಿರುವುದರಿಂದ ಚಿಂತನಶೀಲತೆ ಕಡಿಮೆಯಾಗುತ್ತಿದೆ. ಮನುಷ್ಯ ತನ್ನ ಶಕ್ತಿಯನ್ನು ಯಂತ್ರಗಳಿಗೆ ವರ್ಗಾಯಿಸುತ್ತಿರುವುದರಿಂದ ಆತ ತನ್ನ ಸಾಮರ್ಥ್ಯವನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾನೆ ಎಂದು ಶಿಕ್ಷಕ, ಚಿಂತಕ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಶನಿವಾರ ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಿಂದ ಕಾಲೇಜಿನ ಮೊಗೇರಿ ಗೋಪಾಲಕೃಷ್ಣ ಅಡಿಗ ರಂಗಮಂಟಪದಲ್ಲಿ ಆಯೋಜಿಸಲಾದ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸ್ಫೂರ್ತಿ ಹಸ್ತ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಭಾಷೆಯ ಬಳಕೆಯಲ್ಲಿ ಎಚ್ಚರದಿಂದ ಇರುವ ಜೊತೆಗೆ ಅದನ್ನು ಸ್ವಭಾವ ಸಹಿತ ಅರ್ಥಮಾಡಿಕೊಳ್ಳಬೇಕು. ಭಾಷೆ ನಮ್ಮ ನಡವಳಿಕೆ, ಯೋಚನೆಯನ್ನು ನಿಯಂತ್ರಿಸುತ್ತದೆ. ಭಾಷಾ ಹಿನ್ನೆಲೆಯಲ್ಲಿ ಪಠ್ಯವನ್ನು ಅರ್ಥಮಾಡಿಕೊಂಡರೆ ಕಲಿಕೆಯ ವರ್ತನೆ ಬದಲಾಗುತ್ತದೆ. ನಿಗದಿತ ಚೌಕಟ್ಟಿನೊಳಗೆ ಪಠ್ಯಕ್ರಮ ಇರುವುದರಿಂದ ಕಲಿಯಬೇಕಾದ ಕಲಿಕೆ ಕಡಿಮೆಯಾಗಿ ವಿದ್ಯಾರ್ಥಿಗಳ ನಿಜವಾದ ಸಾಮರ್ಥ್ಯವೂ ಕಡಿಮೆಯಾಗಿದೆ ಎಂದರು. ಬಾಯಿಪಾಠ ಮಾಡಿಯೂ ಒಳ್ಳೆಯ ಅಂಕ ಬರಬಹುದು. ಆದರೆ ಕಲಿಕೆಯ ಕಾರಣದಿಂದ ಉತ್ತಮ ಅಂಕ ಬಂದರೆ ಅದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯುಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ವರ್ಷವೈಭವ – 3 ದಿನಗಳ ರಂಗ ಯಕ್ಷೋತ್ಸವ 2024 ಕಾರ್ಯಕ್ರಮ ಇಲ್ಲಿನ ಶಾರದಾ ವೇದಿಕೆಯಲ್ಲಿ ಡಿ.19ರಿಂದ 21ರ ತನಕ ಪ್ರತಿದಿನ ಸಂಜೆ 6.30ಕ್ಕೆ ನಡೆಯಲಿದೆ. ಡಿ. 19ರಂದು ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೈಂದೂರು ಯುಸ್ಕೋರ್ಡ್ ಟ್ರಸ್ಟ್ ರಿ. ಕಾರ್ಯದರ್ಶಿ ಕೃಷ್ಣಮೂರ್ತಿ ಉಡುಪ ಕಬ್ಸೆ ಅವರು ವಹಿಸಲಿದ್ದಾರೆ. ಉಡುಪಿಯ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಕುಂದಾಪುರ ಅವರು ಸೇರಿದಂತೆ ವಿವಿಧ ಅತಿಥಿ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಅಂದು ಬಳ್ಳಾರಿ ಧಾತ್ರಿ ರಂಗಸಂಸ್ಥೆ ಕಲಾವಿದೆ ಸುಮಂಗಲಾ ಅವರಿಗೆ ಸನ್ಮಾನಿಸಲಾಗುತ್ತದೆ. ಬಳಿಕ ಡಾ.ಎಂ, ಬೈರೇಗೌಡ ರಚಿಸಿ ನವೀನ್ ಭೂಮಿ ನಿರ್ದೆಶಿಸಿದ ಧಾತ್ರಿ ರಂಗಸಂಸ್ಥೆ ಸಿರಿಗೇರಿ ಬಳ್ಳಾರಿ ಪ್ರಸ್ತುತಿಯಲ್ಲಿ ʼಸರಸತಿಯಾಗಲೊಲ್ಲೆʼ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.20 ರಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಅಡಿಟರ್ ಜತೀಂದ್ರ ಮರವಂತೆ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯೆ ಕಲಿಸಿದ ಗುರು ಮತ್ತು ಕಲಿತ ಶಾಲೆಯನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ಪ್ರತಿಯೊಂದು ಶಾಲೆಗೆ ಹಳೆ ವಿದ್ಯಾರ್ಥಿಗಳು ಶಾಲೆಯ ಆಧಾರ ಸ್ತಂಭಗಳಾಗಿದ್ದು, ಶಾಲೆಯ ಮೇಲೆ ಪ್ರೀತಿ, ವಿಶ್ವಾಸವನ್ನಿಟ್ಟುಕೊಂಡು ತಮ್ಮಿಂದಾಗುವ ಸಹಕಾರ ನೀಡುವ ಮೂಲಕ ಶಾಲೆಯ ಅಭಿವೃದ್ಧಿಗೆ ಮುಂದಾಗಬೇಕಿದೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ಮಂದಿ ದೇಶ ವಿದೇಶಗಳಲ್ಲಿ ಉತ್ತಮ ಸ್ಥಾನಮಾನ ಪಡೆದುಕೊಂಡು ಊರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿರುವುದು ಹೆಮ್ಮೆಯ ವಿಷಯ. ಈ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಪಾಠೇತರ ಚಟುವಟಿಕೆಗಳಲ್ಲೂ ಸಾಧನೆಗೈಯುತ್ತಿರುವುದು ಶ್ಲಾಘನೀಯ ಎಂದು ಕುಂದಾಪುರ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಾಬಣ್ಣ ಪೂಜಾರಿ ಹೇಳಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಶಾಂತೇರಿ ಬಾ ರಂಗ ಮಂಟಪದಲ್ಲಿ ಭಾನುವಾರ ಜರಗಿದ ಗಂಗೊಳ್ಳಿಯ ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 55ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಗಂಗೊಳ್ಳಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಸದಸ್ಯ ಕೆ.ರಾಮನಾಥ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ತ್ರಾಸಿಯ ಸೌಪರ್ಣಿಕ ವಿವಿಧೋದ್ದೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಸೋಸಿಯನ್ ಹಾಗೂ ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಇವುಗಳ ಜಂಟಿ ಆಶ್ರಯದಲ್ಲಿ ಮಧುಗಿರಿ ಸ್ಪೋಟ್ಸ್ ಕ್ಲಬ್ ಮಧುಗಿರಿಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಜ್ಯೂನಿಯರ ಬಾಲಕ ಹಾಗೂ ಬಾಲಕಿಯರ ಎರಡು ವಿಭಾಗದ ಪ್ರಥಮ ಪ್ರಶಸ್ತಿ ಹಾಗೂ ಬಾಲಕಿಯರ ದ್ವಿತೀಯ ಪ್ರಶಸ್ತಿಯನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡರು. ಬಾಲಕರ ವಿಭಾಗದ ಪೈನಲ್ನಲ್ಲಿ ಆಳ್ವಾಸ್ ಬಾಲಕರ ತಂಡ ಬೆಂಗಳೂರಿನ ರಾಜೇಶ್ವರಿ ಯುತ್ ಕ್ಲಬ್ (ಆರ್ವೈಸಿ) ತಂಡವನ್ನು 35-31 ಹಾಗೂ 35-27 ನೇರ ಸೆಟ್ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗಳಿಸಿತು. ಆಳ್ವಾಸ್ ಬಾಲಕಿಯರ ತಂಡ ಫೈನಲ್ಸ್ ಹಣಾಹಣಿಯಲ್ಲಿ ಆಳ್ವಾಸ್ನ ಎ ತಂಡವನ್ನು, ಆಳ್ವಾಸ್ನ ಬಿ ತಂಡವು 35-29 ಹಾಗೂ 35-33 ನೇರ ಸೆಟ್ಗಳಿಂದ ಸೋಲಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದುಕೊಂಡವು. ಬಾಲಕರ ವಿಭಾಗದಲ್ಲಿ ರಾಜ್ಯದ ಸುಮಾರು 24 ತಂಡಗಳು ಹಾಗೂ ಬಾಲಕಿಯರ ವಿಭಾದಲ್ಲಿ 16 ತಂಡಗಳು ಭಾಗವಹಿಸಿದ್ದವು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕಚೇರಿ ಹಾಗೂ ಕೊಠಡಿಗಳ ಬೀಗ ಒಡೆದು 3 ಎನ್ವಿಆರ್ ಕೆಮರಾಗಳನ್ನು ಯಾರೋ ಕಳ್ಳರು ಕದ್ದೊಯ್ದ ಘಟನೆ ಡಿ. 15ರ ಸಂಜೆ ಹಾಗೂ ಡಿ. 16ರ ಬೆಳಿಗ್ಗೆ ನಡೆದಿದೆ. ಕಳವಾದ ಸೊತ್ತಿನ ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿದ್ಯಾರ್ಥಿಗಳಲ್ಲಿ ಶಿಸ್ತು, ಶೈಕ್ಷಣಿಕ ಕಠಿಣತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕೆವಿಎಸ್ ಪಾತ್ರ ಮಹತ್ವವಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಹೇಳಿದರು. ಅವರು ಇತ್ತೀಚಿಗೆ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ 62 ನೇ ಕೆವಿಎಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕೆವಿಎಸ್ ವಿದ್ಯಾರ್ಥಿಯಾದ ತಾನು ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಕೇಂದ್ರೀಯ ವಿದ್ಯಾಲಯದಿಂದ ಪಡೆದ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡುವ ದೊಡ್ಡ ಕನಸು ಕಾಣುವಂತೆ ಮತ್ತು ಅದನ್ನು ನನಸು ಮಾಡಿಕೊಳ್ಳಲು ಪರಿಶ್ರಮ ಪಡುವಂತೆ ಪ್ರೇರೇಪಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕರೀಂ ಖಾನ್ ಸ್ವಾಗತಿಸಿ, ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಕೆವಿಎಸ್ನ ಪಾತ್ರ, ಪರಂಪರೆ ಮತ್ತು ಸಾಧನೆಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಕಾರ್ಯಕ್ರಮಗಳು ಮತ್ತು ಭಾಷಣ ನಡೆಯಿತು. ಪ್ರಾಥಮಿಕ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ ನಡೆಯಿತು. 2023-24ರ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಚಂದನಾ…
