ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಹೊಸೂರು ಶಾಖೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಶಿಲಾನ್ಯಾಸ ನೆರವೇರಿಸಿ, ಸಹಕಾರ ಸಂಘಗಳು ಗ್ರಾಮಾಂತರ ಪ್ರದೇಶದ ಜನರ ಒಡನಾಡಿಯಂತೆ ಕಾರ್ಯನಿರ್ವಹಿಸುತ್ತಿದೆ. ಆ ಹಿನ್ನೆಲೆ ಹೊಸೂರಿನಲ್ಲಿ ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘವು ಜನರ ಅವಶ್ಯಕತೆಗಳನ್ನು ಪೂರೈಸುವ ಮೂಲಕ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಎನ್,ಮಂಜಯ್ಯ ಶೆಟ್ಟಿ ಸಬ್ಲಾಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, ನಮ್ಮ ಸಂಘವು ಕಾರ್ಯವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಶಾಖೆ ಆರಂಭಿಸಲಾಗಿದೆ. ಇಡೂರು ಶಾಖೆಗೆ ಸ್ವಂತ ಸ್ಥಳದಲ್ಲಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಕೆರಾಡಿಯಲ್ಲಿ ಸ್ವಂತ ಕಟ್ಟಡ ಹೊಂದಿದೆ. ಬೆಳ್ಳಾಲದಲ್ಲಿ ಶಾಖಾ ಕಟ್ಟಡಕ್ಕೆ ಸ್ಥಳ ಗುರುತಿಸಲಾಗಿದೆ. ಹೊಸೂರು ಶಾಖೆಯ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದ್ದು ಮಾರ್ಚ್ ಒಳಗೆ ಕಟ್ಟಡ ನಿರ್ಮಾಣವಾಗಲಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ, ಕೊಲ್ಲೂರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಡಾಲಿ ಪಿಚ್ಚರ್ ಅಡಿಯಲ್ಲಿ ನಿರ್ಮಾಣ ಆಗಿರುವಂತಹ ಟಗರುಪಲ್ಯ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ.. ಟಗರುಪಲ್ಯ ಸಿನಿಮಾದಲ್ಲಿ ನಾಗಭೂಷಣ್ ನಾಯಕನಾಗಿ ಅಭಿನಯ ಮಾಡಿದ್ದು ಅಮೃತ ಪ್ರೇಮ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ… ಸಿನಿಮಾ ಈಗಾಗಲೇ ಟ್ರೈಲರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ… ಟಗರುಪಲ್ಯ ಸಿನಿಮಾ ಈಗಾಗಲೇ ಮನೆಮನೆಗೂ ತಲುಪಿದೆ.. ಇದೆ ಅಕ್ಟೋಬರ್ 27ರಂದು ಸಿನಿಮಾ ತೆರೆಗೆ ಬರುತ್ತಿದ್ದು ಈ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಇತ್ತೀಚಿಗಷ್ಟೇ ನಟ ಡಾಲಿ ಧನಂಜಯ್ ಚಿತ್ರೀಕರಣದಲ್ಲಿ ಬಿಸಿಯಾಗಿದ್ದಾಗ ಹಿರಿಯರು ಒಬ್ಬರು ಡಾಲಿಯನ್ನ ಭೇಟಿ ಮಾಡಿ ಟಗರುಪಲ್ಯ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.. ಟಗರುಪಲ್ಯ ಸಿನಿಮಾ ಬಗ್ಗೆ ಡಾಲಿ ಹೇಳಲು ಹೊರಟಾಗ ಅವರೇ ಟಗರುಪಲ್ಯ ಸಿನಿಮಾ ಬರ್ತಾ ಇದೆ ನನಗೆ ಗೊತ್ತಿದೆ ನಾವು ನೋಡುತ್ತೇವೆ ಎಂದು ಹೇಳಿ ಡಾಲಿ ಧನಂಜಯ್ ಅವರಿಗೆ ಹಾಗೂ ಅವರ ಸಿನಿಮಾಗೆ ಆಶೀರ್ವಾದ ಮಾಡಿದ್ದಾರೆ…. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿತ್ತು ಇದೇ ವಾರ ತೆರೆಗೆ ಬರುತ್ತಿರುವಂತಹ ಟಗರುಪಲ್ಲಿ ಸಿನಿಮಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ‘ಜೋಕಾಲಿ’, ‘ರಾಜಹಂಸ’ ಎನ್ನುವ ಸಿನಿಮಾಗಳು ಕನ್ನಡ ಚಿತ್ರಪ್ರಿಯರಿಗೆ ನೆನಪಿರಬಹುದು. ಸಿನಿಮಾ ಮರೆತಿದ್ದರೂ ‘ಚುಚ್ಚಿ ಚುಚ್ಚಿ ಕೊಂದೆಯಲ್ಲೇ..’ ಎನ್ನುವ ಹಾಡು ಮರೆಯಲು ಸಾಧ್ಯವಿಲ್ಲ. ಯಾಕಂದ್ರೆ ಇದೇ ಹಾಡಿನಲ್ಲಿ ಗೌರಿ ಶಂಕರ್ ನಾಯಕನಾಗಿ ಮಿಂಚಿದ್ದರು. ರಾಜಹಂಸ ಸಿನಿಮಾ ರಿಲೀಸ್ ಆಗಿ 5 ವರ್ಷಗಳ ಮೇಲಾಗಿದೆ. ಇದೀಗ ಆ ಸಿನಿಮಾಗಳ ಬಗ್ಗೆ ಯಾಕೆ ಅಂತಿರ. ನಾಯಕ ಗೌರಿ ಶಂಕರ್ ಇದೀಗ ಮತ್ತೊಂದು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗೌರಿ ಶಂಕರ್ ಅಭಿನಯದ ‘ರಾಜಹಂಸ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸದಭಿರುಚಿಯ ಕೌಟುಂಬಿಕ ಚಿತ್ರವಾಗಿತ್ತು. ಆ ಸಿನಿಮಾದ ಹಾಡುಗಳು ಸೂಪರ್ ಹಿಟ್ ಆಗಿದ್ದವು. ನಾಯಕ ಗೌರಿ ಶಂಕರ್ ಅಭಿನಯಕ್ಕೆ ಮೆಚ್ಚುಗೆಯ ಮಾತುಗಳು ಕೇಳಿ ಬಂದಿತ್ತು. ಇದೀಗ ಮತ್ತೊಂದು ಉತ್ತಮ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸ್ಜಾಗಿದ್ದಾರೆ. ಗ್ಯಾಪ್ನ ಬಳಿಕ ಗೌರಿ ಶಂಕರ್ ಹಳ್ಳಿ ಸೊಗಡಿನ ಸಿನಿಮಾ ಮೂಲಕ ಮಿಂಚಲು ಸಜ್ಜಾಗಿದ್ದಾರೆ. ಕನ್ನಡ ಚಿತ್ರರಂದಲ್ಲಿ ವಿನೂತನ ಸಿನಿಮಾಗಳಿಗೇನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾ ನವರಾತ್ರಿ ಉತ್ಸವದ ಅಂಗವಾಗಿ ಮಂಗಳವಾರ ನಡೆದ ಶ್ರೀ ದೇವಿಯ ವೈಭವದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ನವರಾತ್ರಿ ಒಂಬತ್ತು ದಿನಗಳ ಕಾಲ ವಿವಿಧ ಪೂಜೆ ಹಾಗೂ ಧಾರ್ಮಿಕ ಆಚರಣೆಗಳು ಸಾಂಗವಾಗಿ ನೆರವೇರಿದ್ದು, ಮಹಾನವಮಿಯ ಮಧ್ಯಾಹ್ನ ಬಲಿ ಸೇವೆ ಹಾಗೂ ಪ್ರದಕ್ಷಿಣಿ ನಡೆಸಿದ ಬಳಿಕ ಶ್ರೀ ದೇವಿಯ ಉತ್ಸವ ಮೂರ್ತಿಯನ್ನು ಅಲಂಕರಿಸಿದ ಮರದ ಪುಷ್ಪ ರಥದಲ್ಲಿ ಕುಳ್ಳಿರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ, ತಂತ್ರಿ ನಿತ್ಯಾನಂದ ಅಡಿಗ ಅವರು ರಥಾರೋಹಣಳಾದ ಶ್ರೀ ದೇವಿಗೆ ಪೂಜೆ ನೆರವೇರಿಸಿ, ಮಂಗಳಾರತಿ ಎತ್ತಿದ ಬಳಿಕ, ರಥ ಪೂಜೆಯ ನಡೆಸಲಾಯಿತು. ನಂತರ ಸೇರಿದ್ದ ಸಾವಿರಾರು ಜನರು ಶ್ರೀ ದೇವಿಯ ಜಯ ಘೋಷದೊಂದಿಗೆ ರಥವನ್ನು ಎಳೆದರು. ದೇವಳದ ಒಳ ಪ್ರಾಂಗಣದಲ್ಲಿ ಒಂದು ಸುತ್ತು ಬಂದ ಬಳಿಕ ರಥದ ಮೇಲಿನಿಂದ ಅರ್ಚಕರು ಎಸೆದ ನಾಣ್ಯವನ್ನು ಪಡೆಯಲು ಭಕ್ತರು ಮುಗಿಬಿದ್ದರು. ಉತ್ಸವ ಮೂರ್ತಿಯನ್ನು ರಥದಿಂದ ಕೆಳಕ್ಕೆ ತರುವ ಕ್ಷಣಗಳಿಗಾಗಿ ಕಾಯುತ್ತಿದ್ದ ಭಕ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿದ್ದ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ. ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಅಕ್ರಮ ಎಸಗಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಬೇಕೆಂದು ಉಡುಪಿ ಜಿಲ್ಲಾ ರೈತ ಸಂಘ ಸಲ್ಲಿಸಿದ್ದ ದೂರನ್ನು ಹೆಚ್ಚುವರಿ ಸಿವಿಲ್ ನ್ಯಾಯಾಲಯ ದಾಖಲು ಮಾಡಿಕೊಂಡಿದೆ. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಡಿಸೆಂಬರ್ 12ರೊಗಳಗೆ ವರದಿ ಸಲ್ಲಿಸುವಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋರ್ಟ್ ನ್ಯಾಯಾಧೀಶರು ಆದೇಶಿಸಿದ್ದಾರೆ. ಗುಜರಿ ಮಾರಾಟದಲ್ಲಿನ ಭ್ರಷ್ಟಾಚಾರವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಇತ್ತೀಚೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕಾರ್ಖಾನೆಯ ಆಡಳಿತ ಮಂಡಳಿ ಗುಜರಿ ಸರಕುಗಳನ್ನು 21 ಕೋಟಿ ರೂಪಾಯಿಗೆ ಮಾರಿ, ಅದರಲ್ಲಿ 14 ಕೋಟಿಗಿಂತಲೂ ಹೆಚ್ಚು ಹಣವನ್ನು ಸರ್ಕಾರ ಮತ್ತು ರೈತರಿಗೆ ವಂಚನೆ ಮಾಡಿದೆ. ಇದರಲ್ಲಿ ಬಿಜೆಪಿಯ ಕೈವಾಡವೂ ಇದೆ ಎಂದು ಆರೋಪಿಸಿತ್ತು. ಗುಜರಿ ಮಾರಾಟದ ಪ್ರಕ್ರಿಯೆಯನ್ನು ಶಾಸನಬದ್ಧವಾಗಿ ಇ-ಪ್ರಾಕ್ಯುರ್ಮೆಂಟ್ ಟೆಂಡರ್ ಮುಖೇನ ಮಾಡಬೇಕಿತ್ತು. ಅಥವಾ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ಸೆಂಟ್ರಲ್…
ಕುಂದಾಪ್ರ ಡಾಟ್ ಕಾಂ.ಬೈಂದೂರು: ತಾಲೂಕಿನ ಶ್ರೀ ದುರ್ಗಾ ಫ್ರೆಂಡ್ಸ್ ರಥಬೀದಿ ಉಪ್ಪುಂದ ಇದರ 2023-24 ಸಾಲಿನ ನೂತನ ಅಧ್ಯಕ್ಷರಾಗಿ ರಾಘವೇಂದ್ರ ದೇವಾಡಿಗ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಂಜುನಾಥ ರಾಯರಡಿ,ಅಕ್ಷಯ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಬಾಕಿಮನೆ ಆಯ್ಕೆಯಾಗಿದ್ದಾರೆ. ಜೊತೆ ಕಾರ್ಯದರ್ಶಿಯಾಗಿ ನಂದೀಶ್ ಪೂಜಾರಿ, ಕೋಶಾಧಿಕಾರಿಯಾಗಿ- ವೀರಭದ್ರ, ಜೊತೆ ಕೋಶಾಧಿಕಾರಿಯಾಗಿ ಶಿವರಾಜ ದೇವಾಡಿಗ, ಸಾಂಸ್ಕೃತಿಕ ಕಾರ್ಯದರ್ಶಿ -ಓಂಕಾರ ಡಿ., ಮಹಾದೇವ ರಾಯರಡಿ, ಕ್ರೀಡಾ ಕಾರ್ಯದರ್ಶಿ -ಕೇಶವ ಬಾಕಿಮನೆ, ಭರತ,ವಸಂತ, ರಮೇಶ್ ಮಣ್ಣಿಮನೆ, ಸಂಘಟನಾ ಕಾರ್ಯದರ್ಶಿ -ರೋಹಿತ್ ಖಾರ್ವಿ, ಜಗದೀಶ್ ದೇವಾಡಿಗ, ಸುಧಾಕರ ದೇವಾಡಿಗ, ಪ್ರಭಾಕರ ದೇವಾಡಿಗ ರಾಯರಡಿ, ವೆಂಕಟೇಶ್ ದೇವಾಡಿಗ, ಮಂಜುನಾಥ ದೇವಾಡಿಗ, ರಾಜೇಶ್ ದೇವಾಡಿಗ, ಸುನಿಲ್ ಬಾಕಿ ಮನೆ, ರಾಜೇಶ್ ಕೋಟೆಬೆಟ್ಟು, ಪ್ರಚಾರ ಸಮಿತಿ ಕಾರ್ಯದರ್ಶಿ – ಆದರ್ಶ ಕೃಷ್ಣಾಪುರ, ಕೀರ್ತನ ಪೂಜಾರಿ, ರಂಜಿತ್ ದೇವಾಡಿಗ ಆಯ್ಕೆಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮಕ್ಷತ್ರಿಯ ಸಮುದಾಯ ಜನಸಂಖ್ಯೆಯಲ್ಲಿ ಕಡಿಮೆಯಿದ್ದರೂ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ರಂಗದಲ್ಲಿ ಹಲವರು ಮುಂಚೂಣಿಯಲ್ಲಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಅಭಿಪ್ರಾಯಭೇದಗಳು ಹಲವಿದ್ದರೂ ಧರ್ಮ ಹಾಗೂ ಸಮುದಾಯದ ಅಭ್ಯುದಯದಲ್ಲಿ ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಸತೀಶ್ ಬಟವಾಡಿ ಕೆಎಎಸ್ ಹೇಳಿದರು. ಅವರು ಶ್ರೀ ರಾಮಕ್ಷತ್ರಿಯ ಯುವಕ ಮಂಡಲ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ವತಿಯಿಂದ ಆಯೋಜಿಸಲಾಗುತ್ತಿರುವ 37ನೇ ವರ್ಷದ ಶಾರದೋತ್ಸವದಲ್ಲಿ ಶನಿವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ ಎಲ್ಲಾ ರಂಗದಲ್ಲಿ ಪ್ರಗತಿ ಸಾಧಿಸುವುದಷ್ಟೇ ಅಲ್ಲದೇ ಸಾಧನೆಗೈಯುವರ ಇತರರಿಗೂ ದಾರಿ ತೋರುವ ಕೆಲಸವನ್ನು ಸಮುದಾಯದ ನಾಯಕರು ಮಾಡಬೇಕಿದೆ. ಒಗ್ಗಟ್ಟಿನ ಹೋರಾಟ ಹಾಗೂ ಕೆಲಸಕ್ಕೆ ಯಾವಾಗಲು ಜಯ ಸಂದಿದೆ ಎಂದರು. ಬೈಂದೂರು ರಾಮಕ್ಷತ್ರಿಯ ಸಮಾಜದ ಅಧ್ಯಕ್ಷರಾದ ರಾಮಕೃಷ್ಣ ಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಪೊಲೀಸ್ ನಿರೀಕ್ಷಕರಾದ ಸವಿತ್ರತೇಜ್, ಉಡುಪಿ ಕರಾವಳಿ ಕಾವಲುಪಡೆ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್, ಬೆಂಗಳೂರು ಸಿಸಿಬಿ ಪೊಲೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ,ಅ.21:, ಮನೆಯ ಸಮೀಪ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ತಾಲೂಕಿನ ತಲ್ಲೂರಿನಲ್ಲಿ ನಡೆದಿದೆ. ತಲ್ಲೂರಿನಲ್ಲಿ ವಾಸವಿರುವ ಅರುಣ್ ಕುಮಾರ್ ಶೆಟ್ಟಿ ಎಂಬುವರ ಪುತ್ರ, ಏಳನೇ ತರಗತಿ ವಿದ್ಯಾರ್ಥಿ ಪೃಥ್ವಿರಾಜ್ ಶೆಟ್ಟಿ ಸಾವನ್ನಪ್ಪಿದ ಬಾಲಕ. ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಯಾಗಿರುವ ಪೃಥ್ವಿರಾಜ್ ಶೆಟ್ಟಿ ನಿನ್ನೆಯಷ್ಟೇ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ. ಇಂದು ಶಾಲೆಗೆ ತೆರಳಬೇಕಿದ್ದರಿಂದ, ಬೆಳಿಗ್ಗೆ ಶಾಲಾ ವಾಹನಕ್ಕಾಗಿ ತಾಯಿಯೊಂದಿಗೆ ಕಾಯುತ್ತಿದ್ದ ಸಂದರ್ಭ ಎದೆ ನೋವು ಕಾಣಿಸಿಕೊಂಡಿದೆ. ಬಾಲಕನನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಅಷ್ಟರಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷಾ ವರದಿ ಇನ್ನಷ್ಟೇ ಕೈಸೇರಬೇಕಿದೆ. ಕಳೆದ ವರ್ಷ ಅ.27ರಂದು ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಪ್ರಥ್ವಿರಾಜ ಶೆಟ್ಟಿಯ ಸಹೋದರಿ ಅನುಶ್ರೀ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಶಿಕ್ಷಕಿ ಭಾರತಿ ದಂಪತಿಗಳು ತಮಗಿದ್ದ ಇಬ್ಬರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ21: ಸಮಾಜದ ಪ್ರತಿಯೊಬ್ಬ ನಾಗರಿಕರು ಕಾನೂನುಗಳನ್ನು ಪಾಲಿಸಿದ್ದಲ್ಲಿ ಅಪರಾಧಿಕ ಪ್ರಕರಣಗಳಿಂದ ದೂರ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ರವರು ತಿಳಿಸಿದರು. ಅವರು ಇಂದು ನಗರದ ಚಂದು ಮೈದಾನದ ಜಿಲ್ಲಾ ಸಶಸ್ತç ಮೀಸಲು ಪೊಲೀಸ್ ಪಡೆ ಕೇಂದ್ರ ಸ್ಥಾನದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಿ, ಮಾತನಾಡಿದರು. ಪೊಲೀಸರು ತಮ್ಮ ಕರ್ತವ್ಯದ ಸಂದರ್ಭದಲ್ಲಿ ಅನುಭವಿಸಿದ ತೊಂದರೆಯನ್ನು ಸಮಾಜದಲ್ಲಿ ಯಾರೂ ಗಮನ ಹರಿಸುವುದಿಲ್ಲ. ಪತ್ರಿಕೆಯಲ್ಲಿ ಬಂದಾಗ ಒಂದು ದಿನ ಸಹಾನುಭೂತಿ ತೋರಿಸಿ, ಮುಂದೆ ಅದನ್ನು ಮರೆಯುತ್ತಾರೆ ಹೀಗಾಗಬಾರದು, ಜನರು ದಿನನಿತ್ಯ ತಪ್ಪದೇ ಕಾನೂನು ಪಾಲನೆ ಮಾಡಬೇಕು ಎಂದರು. ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಜನರು ಸಹಕರಿಸಬೇಕು. ಪ್ರಸ್ತುತ ಪೊಲೀಸ್ ಇಲಾಖೆಯು ಸುಧಾರಿಸಿದೆ. ಆಧುನಿಕ ಶಸ್ತಾçಸ್ತçಗಳನ್ನು ಸಹ ನೀಡಲಾಗಿದೆ. ನುರಿತ ತರಬೇತಿ ಹೊಂದಿದವರನ್ನು ಪೊಲೀಸ್ ಇಲಾಖೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜತನಾ ಸ್ವತಂತ್ರ ಪಿಯು ಕಾಲೇಜಿಗೆ ಲಗ್ಗೆ ಇಟ್ಟ ನವರಾತ್ರಿ ಹುಲಿಗಳ ತಂಡ ತಾಸೆಯ ಸದ್ದಿಗೆ ತಕ್ಕಂತೆ ಹೆಜ್ಜೆ ಹಾಕುತ್ತಾ, ಸಾಹಸ ಪ್ರದರ್ಶಿಸುತ್ತಾ ಮೆಚ್ಚುಗೆಗೆ ಪಾತ್ರವಾಯಿತು. ಶನಿವಾರ ಕಾಲೇಜಿನ ಆವರಣದಲ್ಲಿ ಜೆಸಿಐ ಕುಂದಾಪುರ, ಕಿಯೋನಿಕ್ಸ್ ಯುವ.ಕಾಂ ಹಾಗೂ ಚಾಲುಕ್ಯ ಕ್ರಿಕೆಟರ್ಸ್ ಸಹಯೋಗದೊಂದಿಗೆ ಟಿ.ಟಿ. ಟೈಗರ್ಸ್ ಕುಂದಾಪುರ ತಂಡದ ಹುಲಿಗಳ ಕುಣಿತ ನವರಾತ್ರಿಯ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕವರ್ಗವನ್ನು ಪುಳಕಿತಗೊಳಿಸಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ಅವರು ಮಾತನಾಡಿ, ಕಾಲೇಜು ಆವರಣದಲ್ಲಿ ಹುಲಿವೇಷ ನೃತ್ಯ ಆಯೋಜನೆ ಮಾಡುವ ಮೂಲಕ ವಿದ್ಯಾರ್ಥಿಗಳು ಹತ್ತಿರದಲ್ಲಿಯೇ ಹುಲಿವೇಷದ ಸೊಗಬಗನ್ನು ನೋಡುವಂತೆ ಮಾಡಿದ ಎಲ್ಲಾ ಸಂಘ ಸಂಸ್ಥೆಗಳಿಗೂ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು. ನವರಾತ್ರಿ ಹುಲಿ ಕುಣಿತದ ಕೊನೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ತಾಸೆಯ ಸದ್ದಿನೊಂದಿಗೆ ಹೆಜ್ಜೆ ಹಾಕಿದರು. ಈ ಸಂದರ್ಭ ಜೆಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೆನ್ ಹೈಕಾಡಿ, ಅಧ್ಯಕ್ಷೆ ಡಾ. ಸೋನಿ ಡಿಕೊಸ್ಟಾ, ಮಾಜಿ ಅಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ,…
