ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಹಾಗೂ ಸೂರ್ಯಫೌಂಡೇಶನ್ ವತಿಯಿಂದ ಇಂಡೋಗ್ಲೋಬ್ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ 2024ನೇ ಸಾಲಿನ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಸಮ್ಮೇಳನದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆಗೈದಿರುವ ಶಾಲೆಯನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಾಲಿನಲ್ಲಿ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ಶಾಲೆಗೆ ನೀಡುವ “ಶಿಕ್ಷಣ ಚೈತನ್ಯ ಪ್ರಶಸ್ತಿ – 2024″ಯು ಕುಂದಾಪುರದ ಯಡಾಡಿ – ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಗೆ ದೊರಕಿತು. ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮುನ್ನೆಡೆಸುವ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಹಾಗೂ ಖಜಾಂಚಿ ಭರತ್ ಶೆಟ್ಟಿ ಸಮಾರಂಭದಲ್ಲಿ ಉಪಸ್ಥಿತರಿದ್ದು ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿದರು. ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಶಿಕ್ಷಣವನ್ನು ನೀಡುತ್ತಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯು ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ರ ಸ್ಥಾನದಲ್ಲಿದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಣಿ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಪಕ್ಕದಲ್ಲೇ ಇದ್ದ ಬ್ಯಾಂಕಿನ ಎಟಿಎಂಗೆ ನುಗ್ಗಿ ಯಂತ್ರ ತೆರೆಯಲು ಯತ್ನಿಸುತ್ತಿರುವಾಗ ಹೈದರಾಬಾದ್ ನಿಂದ ಸೆಕ್ಯೂರಿಟಿ ಸಂಸ್ಥೆಯವರು ಎಚ್ಚರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಕಳ್ಳರು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಕೋಣಿಯಲ್ಲಿರುವ ಕರ್ನಾಟಕ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಇಬ್ಬರು ವ್ಯಕ್ತಿಗಳು ಜಾಲಾಡಿದ್ದಾರೆ. ಲಾಕರ್ ತೆರೆಯುವ ಯತ್ನ ಫಲ ನೀಡಲಿಲ್ಲ, ಕೊನೆಗೆ ಅದರ ಪಕ್ಕದಲ್ಲಿರುವ ಎಟಿಎಂಗೆ ಪ್ರವೇಶಿಸಿದ್ದಾರೆ. ಎಟಿಎಂ ಯಂತ್ರವನ್ನು ತಡೆಯಲು ಯತ್ನಿಸಿದಾಗ ಸೈರನ್ ಮೊಳಗಿದೆ. ಎಟಿಎಂ ನಿರ್ವಹಿಸುವ ಸಂಸ್ಥೆಯ ಭದ್ರತಾ ನಿಗಾ ವಹಿಸುವವರು ಹೈದರಾಬಾದಿನಲ್ಲಿ ಸಿಸಿಟಿವಿ ಮಾನಿಟರಿಂಗ್ ಮಾಡುತ್ತಿದ್ದು, ಅವರ ಗಮನಕ್ಕೆ ಬಂದ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಎಸ್ಐ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡುವಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ವಾತಂತ್ರ್ಯ ಹೋರಾಟಗಾರರ ನೆನಪು ಸ್ವಾತಂತ್ರ್ಯೋತ್ಸವ ದಿನಕ್ಕೆ ಸೀಮಿತವಾಗುತ್ತಿರುವುದು ವಿಷಾದನೀಯ. ಸ್ವಾತಂತ್ರ ಹೋರಾಟಗಾರರನ್ನು ಗೌರವಿಸುವುದು ಕುಟುಂಬಸ್ಥರ ತ್ಯಾಗವನ್ನು ಸ್ಮರಿಸಿಕೊಳ್ಳವುದು ಅಗತ್ಯದ ವಿಷಯವಾಗಿದೆ. ಈ ದಿಸೆಯಲ್ಲಿ ಈ ಕಾರ್ಯಕ್ರಮ ಶ್ಲಾಘನೀಯ ಮತ್ತು ಅನುಕರಣೀಯವಾಗಿದೆ ಎಂದು ಕುಂದಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಗ್ರಾಮ ಪಂಚಾಯತ್ ಪ್ರಸ್ತುತಿ ರೋಟರಿ ಕ್ಲಬ್ ಕೋಟ – ಸಾಲಿಗ್ರಾಮ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ, ಜಿಲ್ಲಾಮಟ್ಟದ ಚಿತ್ರರಚನೆ ಮತ್ತು ಕಾರಂತರ ಕೃತಿಗಳ ಹೆಸರು ಬರೆಯುವ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಆನಂದ ಸಿ. ಕುಂದರ್ ಅವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುವಂತಾಗಲಿ ಎಂದು ಹಾರೈಸಿ ಕುಟುಂಬಸ್ಥರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೇಶದಲ್ಲಿ ಪ್ರಸ್ತುತ ಬಾಧಿಸುತ್ತಿರುವ ಕ್ಯಾನ್ಸರ್ಗಳ ಪಟ್ಟಿಯಲ್ಲಿ ಗರ್ಭಕಂಠದ ಕ್ಯಾನ್ಸರ್ ಎರಡನೇ ಸ್ಥಾನದಲ್ಲಿದ್ದು, ಪ್ರತಿ 8 ನಿಮಿಷಕ್ಕೆ ಒಬ್ಬ ಮಹಿಳೆ ಬಲಿಯಾಗುತ್ತಿದ್ದಾಳೆ ಎಂದು ಎ.ಜೆ. ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕಿ ಡಾ. ಮರಿಯಾ ನೆಲ್ಲಿಯನಿಲ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮೂಡುಬಿದಿರೆ ರೋಟರಿ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡ ’ಗರ್ಭಕಂಠದ ಕ್ಯಾನ್ಸರ್ ಮತ್ತು ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ಬಗ್ಗೆ ಅರಿವುʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಚ್ಪಿವಿ ಸೋಂಕು ನಿಯಂತ್ರಣಕ್ಕಾಗಿ ದೇಶದಲ್ಲಿ ಶೇಕಡಾ 1ರಷ್ಟು ಜನ ಲಸಿಕೆ ಪಡೆದುಕೊಳ್ಳುತ್ತಿದ್ದು, ಶೇಕಡಾ 2ರಷ್ಟು ಜನ ಸ್ಕ್ರೀನಿಂಗ್ಗೆ ಒಳಪಟ್ಟಿದ್ದಾರೆ ಎಂದರು. ಎಚ್ಪಿವಿ ಸೋಂಕು ಮಾತ್ರವಲ್ಲದೇ ಧೂಮಪಾನ, ಅಸುರಕ್ಷಿತ ಲೈಂಗಿಕ ಕ್ರಿಯೆ, ಬಹು ಗರ್ಭಧಾರಣೆ ಇನ್ನಿತರ ಅಂಶಗಳು ಗರ್ಭಕಂಠದ ಕ್ಯಾನ್ಸರ್ಗೆ ಕಾರಣವಾಗುವ ಅಂಶಗಳೆಂದು ಹೇಳಲಾಗುತ್ತದೆ ಎಂದು ವಿಶ್ಲೇಷಿಸಿದರು. ಎಚ್ಪಿವಿ ಲಸಿಕೆಯಿಂದ ಮುಂಜಾಗ್ರತೆ ಹಾಗೂ ರಕ್ಷಣೆ ಸಿಗುತ್ತದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಆರನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ಜ್ವರ ರೋಗ ನಿಯಂತ್ರಣಕ್ಕೆ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಕೆ ಲಸಿಕೆ ಹಾಕಿಸುವುದರೊಂದಿಗೆ, ಯಾವುದೇ ಜಾನುವಾರುಗಳು ಲಸಿಕೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದರು. ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಬಗ್ಗೆ ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚಾರ ಕೈಗೊಂಡು, ಸಾರ್ವಜನಿಕರಿಗೆ ಲಸಿಕಾ ಕಾರ್ಯಕ್ರಮದ ಕುರಿತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ) ಬೆಳಗಾವಿ, ಶಾಂತಿನಿಕೇತನ ಪದವಿ ಪೂರ್ವ ಕಾಲೇಜು, ಖಾನಾಪೂರ ಇವರ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ 2024 – 25ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಶ್ರೀನಿತಾ. ಎಸ್. ಕಾಮತ್ 53 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ, ಸ್ಕಂದ 97 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದು ಅಮೋಘ ಸಾಧನೆ ಮೆರೆದಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಹಾಗೂ ಕುಸ್ತಿ ಪಟು ಕೃಷ್ಣ ಮೊಗವೀರ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಂಬಳ ಸಮಿತಿಯ ಸಹಕಾರದಲ್ಲಿ ಬಿಜೂರು ಗ್ರಾಮದ ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ ಸಂಭ್ರಮ ಸಡಗರದಲ್ಲಿ ನೆರವೇರಿತು. ಪ್ರಥಮದರ್ಜೆ ಗುತ್ತಿಗೆದಾರರಾದ ಗೋಕುಲ್ ಶೆಟ್ಟಿ ಕಂಬಳೋತ್ಸವ ಉದ್ಘಾಸಿದರು. ರಘುರಾಮ ಶೆಟ್ಟಿ ಬಿಜೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕಂಬಳದ ಆಯೋಜಕ ಸಂತೋಷ ಪೂಜಾರಿ ಕಾಡಿನತಾರು, ಬೈಂದೂರು ವಲಯ ಕಂಬಳ ಸಮಿತಿಯ ಉಪಾಧ್ಯಕ್ಷ ಪರಮೇಶ್ವರ ಭಟ್ ಬೋಳಂಬಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ಹಿರಿಯ ಕಂಬಳ ಓಟಗಾರರಾದ ಹೆರಿಯ ದೇವಾಡಿಗ ಮೆಲ್ಮಿಯಾಣಿ, ಉದಯ ದೇವಾಡಿಗ ಮೇಲ್ಮಿಯಾಣಿ, ಆನಂದ ಪೂಜಾರಿ ಹರ್ಲಮಕ್ಕಿ, ಚಂದ್ರ ದೇವಾಡಿಗ ಮೇಲ್ಮಿಯಾಣಿ ಹಾಗೂ ವಾಸು ದೇವಾಡಿಗ ಮೇಲ್ಮಿಯಾಣಿ ಅವರನ್ನು ಸನ್ಮಾನಿಸಲಾಯಿತು. ಕಂಬಳೋತ್ಸವದಲ್ಲಿ ಸುಮಾರು 65ಕ್ಕೂ ಹೆಚ್ಚು ಜೊತೆ ಕೋಣಗಳು ಪಾಲ್ಗೊಂಡಿದ್ದವು. ಫಲಿತಾಂಶ: ಕಂಬಳೋತ್ಸವದಲ್ಲಿ ಹಗ್ಗ ಅತೀ ಕಿರಿಯ, ಹಗ್ಗ ಕಿರಿಯ, ಹಗ್ಗ ಹಿರಿಯ ಹಾಗೂ ಹಲಗೆ ಮುಕ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಚಿನ್ಮಯಿ ಆಸ್ಪತ್ರೆಯ ಲೇಸರ್ ಎಂಡ್ ಕಾಸ್ಮೆಟೋಲಜಿ ವಿಭಾಗದಲ್ಲಿ ಹಾಲಿವುಡ್ ಸ್ಪೆಕ್ಟ್ರಾ ಎಂಬ ಅತ್ಯಾಧುನಿಕ ಲೇಸರ್ ಯಂತ್ರ ಅಳವಡಿಸಲಾಗಿದ್ದು ಅದರ ಉದ್ಘಾಟನೆಯನ್ನು ಐಎಂಎ ಕುಂದಾಪುರ ಘಟಕದ ಅಧ್ಯಕ್ಷೆ, ಖ್ಯಾತ ಪ್ರಸೂತಿ ತಜ್ಞೆ ಡಾ| ಪ್ರಮೀಳಾ ನಾಯಕ್ ಉದ್ಘಾಟಿಸಿ, ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ಸೇವೆಯನ್ನು ಶ್ಲಾಘಿಸಿದರು. ರೋಟರಿ ಜಿಲ್ಲಾ ಮಾಜಿ ಗವರ್ನರ್, ಖ್ಯಾತ ಉದ್ಯಮಿ ಅಭಿನಂದನ್ ಎ. ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅಭಿನಂದನೆ ಸಲ್ಲಿಸಿದರು. ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ, ಖ್ಯಾತ ಚರ್ಮರೋಗ ತಜ್ಞ ಡಾ| ಉಮೇಶ ಪುತ್ರನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತ್ವಚೆಯ ಆರೈಕೆಯಲ್ಲಿ ಲೇಸರ್ ಚಿಕಿತ್ಸೆ ಪರಿಣಾಮಕಾರಿಯಾಗಿದ್ದು, ಚರ್ಮದ ಸೌಂದರ್ಯ ವರ್ಧನೆಯಲ್ಲಿ ಅನುಕೂಲಕರ ವಾಗಿದೆ. ಎಂದು ನೂತನ ಲೇಸರ್ ಯಂತ್ರದ ಉಪಯುಕ್ತತೆಯನ್ನು ಡಾ| ಉಮೇಶ ಪುತ್ರನ್ ವಿವರಿಸಿದರು. ತಜ್ಞ ವೈದ್ಯರಾದ ಡಾ| ಬಾಲಕೃಷ್ಣ ಶೆಟ್ಟಿ, ಡಾ| ದಿನೇಶ ಶೆಟ್ಟಿ, ಡಾ| ಮೋಹನ ಕಾಮತ್, ಡಾ| ಶ್ರೀದೇವಿ ಕಟ್ಟೆ, ಡಾ| ಶೇಖರ, ಡಾ. ಲಕ್ಷ್ಮೀನಾರಾಯಣ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಂತರಾಷ್ಟ್ರೀಯ ಶಿಕ್ಷಕ ದಿನಾಚರಣೆ ಪ್ರಯುಕ್ತ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಗಂಗನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಪ್ರಭಾಕರ ಬಿಲ್ಲವ ಅವರಿಗೆ ಪ್ರದಾನ ಮಾಡಲಾಗಿದೆ. ಸವದತ್ತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾಕರ ಬಿಲ್ಲವ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
