Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ನ್ಯಾಕ್ ಪೀರ್ ತಂಡವು ಇತ್ತೀಚಿಗೆ ಭೇಟಿ ನೀಡಿತು. ತಂಡದ ಅಧ್ಯಕ್ಷರಾಗಿ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಡಾ. ಅಶೋಕ್ ಬೊಯ್ಟಿ, ತಂಡದ ಸದಸ್ಯ ಸಂಯೋಜಕರಾಗಿ ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಶಹೀದ್ ರಸೂಲ್ ಮತ್ತು ಅಸ್ಸಾಂನ ಟನ್ಷುಕಿಯಾದ ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಬಾದಲ್ ಕುಮಾರ್ ಸೇನ್ ಇದ್ದರು. ಸದಸ್ಯರನ್ನು ಸಂಸ್ಥೆಗೆ ಸ್ವಾಗತಿಸಲಾಯಿತು, ಅಲ್ಲಿ ಅವರಿಗೆ ಸಾಂಸ್ಥಿಕ ಮುಖ್ಯಾಂಶಗಳು ಮತ್ತು ವಿವಿಧ ಇಲಾಖೆಗಳಿಂದ ನ್ಯಾಕ್ ನ ಮೌಲ್ಯಮಾಪನ ಮಾನದಂಡಗಳಿಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪ್ರಸ್ತುತಪಡಿಸಲಾಯಿತು. ತಂಡವು ಕಾಲೇಜಿನ ಎಲ್ಲಾ ವಿಭಾಗಗಳ ಸೌಲಭ್ಯಗಳು, ಕ್ಯಾಂಪಸ್ ಮೂಲಸೌಕರ್ಯಗಳು, ಸಂಘಗಳಿಗೆ ಭೇಟಿ ನೀಡಿದರು. 14 ರಂದು ಸಂಜೆ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಯಿತು. 15ರಂದು ಕಾಲೇಜಿನಲ್ಲಿ ನ್ಯಾಕ್ ಪೀರ್ ತಂಡದವರು ನಿರ್ಗಮನ ಸಭೆ ನಡೆಸಿದರು. ತಂಡದ ಸದಸ್ಯರು ತಮ್ಮ ಅವಲೋಕನಗಳ ಆಧಾರದ ಮೇಲೆ ಸಂಸ್ಥೆಯ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳನ್ನು…

Read More

ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ಆಯೋಜಿಸಲಾದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದೆಲ್ಲೆಡೆ ನೆಲೆಸಿರುವ ಕುಂದಾಪ್ರ ಕನ್ನಡಿಗರು ತಮ್ಮದೇ ಅಸ್ಥಿತ್ವ ಉಳಿಸಿಕೊಳ್ಳುವುದರ ಜೊತೆಗೆ ಎಲ್ಲರಿಗೂ ಬೇಕಾಗುವ ವ್ಯಕ್ತಿಯಾಗಿ ಬೆಳೆದಿದ್ದಾರೆ. ಇದು ಕುಂದಾಪುರ ಮಣ್ಣಿನ ತಾಕತ್ತು. ಆಧುನಿಕರಣದ ಭರಾಟೆಯಲ್ಲಿ ಭಾಷೆ – ಸಂಸ್ಕೃತಿ ನಾಶವಾಗುತ್ತದೆ ಎಂಬ ಆತಂಕದ ನಡುವೆಯೂ ಯುವ ಜನತೆ ಮತ್ತೆ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕೆಲಸದಲ್ಲಿ ತೊಡಗಿಕೊಂಡಿರುವುದು ಶ್ಲಾಘನಾರ್ಹ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಸೋಮವಾರ ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬೈಂದೂರು – ಕುಂದಾಪುರ ಭೌಗೋಳಿಕ ಪ್ರದೇಶ ದೈವದತ್ತವಾದ ಕೊಡುಗೆ. ಇಲ್ಲಿನ ಬದುಕು, ಭಾಷೆ, ಸಂಸ್ಕೃತಿ, ಸಂಪ್ರದಾಯಗಳೆಲ್ಲವೂ ಭಿನ್ನವಾಗಿದೆ. ಭೌಗೋಳಿಕವಾಗಿ ಇರುವ ಸಮಸ್ಯೆಗಳ ನಡುವೆಯೂ ಸಂತಸದ ಬದುಕು ಕಟ್ಟಿಕೊಂಡಿದ್ದೇವೆ. ಇಲ್ಲಿನ ಸಮಸ್ಯೆ ಹಾಗೂ ಮೂಲಭೂತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆ ಭಾಷೆಯ ಮೂಲಕವೇ ವ್ಯಕ್ತವಾಗುತ್ತದೆ. ಹಿರಿಯರ ಬಳಸುತ್ತಿದ್ದ ಭಾಷೆಯ ಬಗ್ಗೆ ಹೆಮ್ಮೆ ಹೊಂದಿರುವ ಜೊತೆಗೆ ಹೆಚ್ಚು ಬಳಸುವ ಬಗ್ಗೆಯೂ ಗಮನಹರಿಸಬೇಕಿದೆ ಎಂದು ಕುಂದಾಪ್ರ ಕನ್ನಡದ ಕಲಾವಿದ ಚೇತನ ನೈಲಾಡಿ ಹೇಳಿದರು. ಅವರು ಉಪ್ಪುಂದ ಶಂಕರ ಕಲಾಮಂದಿರದಲ್ಲಿ ಕುಂದ ಅಧ್ಯಯನ ಕೇಂದ್ರ ಹಾಗೂ ಕುಂದಾಪ್ರ ಡಾಟ್ ಕಾಂ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಬೈಂದೂರು, ಜೆಸಿಐ ಬೈಂದೂರು ಸಿಟಿ, ಜೆಸಿಐ ಉಪ್ಪುಂದ, ಲಯನ್ಸ್ ಕ್ಲಬ್ ಬೈಂದೂರು – ಉಪ್ಪುಂದ, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಬೈಂದೂರು ಹಾಗೂ ಉಪ್ಪುಂದ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಪ್ರತಿ ಆಚರಣೆ, ಸಂಪ್ರದಾಯಗಳೂ ಈಗ ಅಳಿವಿನಂಚಿನಲ್ಲಿದೆ. ಆದರೆ ಅದೆಲ್ಲವನ್ನೂ ಉಳಿಸಿ ಮುಂದಿಸಿ ಜನಾಂಗಕ್ಕೆ ದಾಟಿಸುವ ಕೆಲಸವಾಗಬೇಕು. ಹೊಸತನಕ್ಕೆ ಹೊಂದಿಕೊಳ್ಳುವುದು ತಪ್ಪಲ್ಲ ಆದರೆ ನಮ್ಮತನವನ್ನು ಮರೆಯಬಾರದು ಎಂದರು. ಕುಂದ ಅಧ್ಯಯನ ಕೇಂದ್ರದ ಅಧ್ಯಕ್ಷರಿಗೆ ಉಳುಮೆಯ ನೊಗ ಹಸ್ತಾಂತರಿಸುವ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ಕುಂದಾಪುರ – ಬೈಂದೂರು ವಲಯದ ವಾರ್ಷಿಕ ಕ್ರೀಡಾಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟವನ್ನು ದೀಪ ಬೆಳಗಿಸುದರ ಮೂಲಕ ದಿನಕರ್ ನಾಯ್ಕ್ ಉದ್ಯಮಿಗಳು ಬೆಳಂಜೆ ನೇರವೆರಿಸಿದರು. ಇದೇ ಸಂಧರ್ಭದಲ್ಲಿ ಇಂಡಿಯನ್ ಪ್ಯಾರಾ ಕ್ರಿಕೆಟ್ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಇವರನ್ನು ಸನ್ಮನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಬೈಂದೂರು ವಲಯ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ವಹಿಸಿದ್ದರು. ಈ ಸಂಧರ್ಭ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ಕಾರ್ಯದರ್ಶಿ ಸುರೇಶ್ ಜಮದಗ್ನಿ, ಸಂಘದ ಮಾಜಿ ಅಧ್ಯಕ್ಷ ರಾಜ ಮಠದಬೆಟ್ಟಿ, ಛಾಯಾ ಕಾರ್ಯದರ್ಶಿ ಅಮೃತ್ ಬೀಜಾಡಿ ,ಕ್ರೀಡಾ ಕಾರ್ಯದರ್ಶಿಗಳಾದ ಸಿರಿ ಕುಂದಾಪುರ,ದಿನೇಶ್ ನಾಗೂರು,ರಾಘವೇಂದ್ರ ಬಸ್ರೂರು ಮೊದಲಾದವರು ಉಪಸ್ಥಿತರಿದ್ದರು. ನಾಗರಾಜ್ ರಾಯಪ್ಪನ ಮಠ ಸ್ವಾಗತಿಸಿದರು, ಸುರೇಶ್ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ದೇಶಾದಾದ್ಯಂತ ಆರ್ಕಿಟೆಕ್ಚರ್ ಕೋರ್ಸ್‌ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ (NATA) ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಪ್ರಣವ್‌ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28ನೇ ರ‍್ಯಾಂಕ್‌ ಪಡೆದಿದ್ದರೇ, ದೀಕ್ಷಾ ಪಾಂಡುಗೆ 42ನೇ ರ‍್ಯಾಂಕ್‌, ವರುಣ್‌ ಜಿ ನಾಯಕ್‌ 67ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಉಳಿದಂತೆ ಸಹನಾ ಎನ್‌ ಸಿ 104 ನೇ ರ‍್ಯಾಂಕ್‌, ನಾಗಮನಸ್ವಿನಿ ಕೆ 134 ನೇ ರ‍್ಯಾಂಕ್‌, ಧರಿನಾಥ್‌ ಬಸವರಾಜ್‌ ಕುಂಬಾರ್‌ 138 ನೇ ರ‍್ಯಾಂಕ್‌, ದೀಪಕ್‌ ಕೆ ಎಸ್‌ 171 ನೇ ರ‍್ಯಾಂಕ್‌, ಸಂತೃಪ್ತಿ 209 ನೇ ರ‍್ಯಾಂಕ್‌, ಶ್ರವಣ್‌ ಎಸ್‌ 212 ನೇ ರ‍್ಯಾಂಕ್‌, ಅನ್ವಿತಾ ಕೆ 227 ನೇ ರ‍್ಯಾಂಕ್‌, ಹೇಮಂತ್‌ ಗೌಡ ಎಸ್‌ ಆರ್‌ 229 ನೇ ರ‍್ಯಾಂಕ್‌, ಸ್ಪರ್ಶ ಪಾರ್ಶ್ವನಾಥ್‌ 235 ನೇ ರ‍್ಯಾಂಕ್‌, ಅನುಷಾ ಐನಾಪುರ್‌ 254 ನೇ ರ‍್ಯಾಂಕ್‌, ಕುಶಾಲ್‌ ಸೂರ್ಯ ಹೆಚ್‌ ಎಂ 259 ನೇ ರ‍್ಯಾಂಕ್‌, ಸ್ವಸ್ತಿಕ್‌ ಕೃಷ್ಣಮೂರ್ತಿ…

Read More

ಬಡವರಿಗೆ ಯಾರೇ ಅಕ್ಕಿ ಕೊಟ್ಟರೂ ಒಳ್ಳೆಯದೇ. ಆದರೆ ಅದು ಆಡಳಿತದ ವಿಚಾರವಾಗಬಾರದು – ಶಾಸಕ ಗುರುರಾಜ ಗಂಟಿಹೊಳೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಕುಂದಾಪುರ ಕನ್ನಡ ಹಬ್ಬದ ಸಂಭ್ರಮ ಮನೆಮಾಡಿತ್ತು. ಟೀಮ್ ಕುಂದಾಪುರಿಯನ್ಸ್ ವತಿಯಿಂದ ಬಸವೇಶ್ವರ ನಗರದಲ್ಲಿ ಮಾತಿನ್ ಹಬ್ಬ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಇಲ್ಲಿ ಕುಂದಾಪುರಿಗರು ಎದುರಿಸುತ್ತಿರೋ ಸಮಸ್ಯೆ ಹಾಗೂ ಕನಸಿನ ಕುಂದಾಪುರದ ಬಗ್ಗೆ ಹಲವು ನಿರ್ಣಯ ಕೈಗೊಳ್ಳಲಾಯ್ತು. ಬದುಕು ಕಟ್ಟಕೊಳ್ಳುವ ಸಲುವಾಗಿ ಊರು ಬಿಟ್ಟು ಬೆಂಗಳೂರಿನಲ್ಲಿ ನೆಲೆಯಾದ ಕುಂದಾಪುರ ಭಾಗದವರೇ ಸೇರಿ ಕಟ್ಟಿದ ತಂಡವೇ ಟೀಂ ಕುಂದಾಪುರಿಯನ್ಸ್. ಈಗಾಗಲೇ ಹತ್ತು-ಹಲವು ಸಾಮಾಜಿಕ ಕಾರ್ಯಗಳ ಮೂಲಕ ಮಹಾನಗರಿಯಲ್ಲಿ ಮನೆಮಾತಾದ ತಂಡ, ಇಂದು ಕುಂದಾಪುರದ ಹಬ್ಬದ ಮೂಲಕ ತಮ್ಮ ಭಾಷಾ ಪ್ರೇಮ ಮತ್ತು ಬದ್ದತೆಯನ್ನ ಮೆರೆದಿದೆ. ಕುಂದಾಪುರದ ಗ್ರಾಮೀಣ ಸೊಗಡಿನ ಅಟ:ಮಾತಿನ ಹಬ್ಬ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಕನ್ನಡ ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ದೀಪಕ್ ಶೆಟ್ಟಿ ಬಾರ್ಕೂರು, ನಟ ಕವೀಶ್ ಶೆಟ್ಟಿ, ಸಮಾಜಸೇವಕ ಗೋವಿಂದ್ ಪೂಜಾರಿ, ಅಜಿತ್ ಶೆಟ್ಟಿ ಉಳ್ತೂರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಇದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅತ್ಯುತ್ತಮವಾಗಿ ಪ್ರತಿಭೆಯನ್ನು ತೋರ್ಪಡಿಸುವತಂಹ ವಿದ್ಯಾರ್ಥಿಗಳಿಗೆ ಸಮಾಜ ಮೆರವಣಿಗೆ ಮಾಡುತ್ತದೆ. ಸೊಮಾರಿಗಳಾಗಿ ಎಲ್ಲೋ ಮೂಲೆಯಲ್ಲಿ ಕುಳಿತರೇ ನಿಮ್ಮನ್ನು ಈ ಸಮಾಜ ಗುರುತಿಸುವುದಿಲ್ಲ ಎಂದು ಶಾಲಾ ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ಶುಕ್ರವಾರ ಹಳೇ ವಿದ್ಯಾರ್ಥಿ ಸಂಘದಿಂದ ಜರುಗಿದ ’ಸ್ನೇಹ ಸಂಗಮ’ ಕಾರ್ಯಕ್ರಮದಲ್ಲಿ ಕಳೆದ ಬಾರಿಯ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹತ್ತನೇ ವರ್ಷದ ಪ್ರತಿಭಾ ಪುರಸ್ಕಾರ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಲಿಕೆ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರ ಯಾವುದಾದರಲ್ಲಿ ಕೂಡ ನಾವು ಪ್ರತಿಭಾವಂತರಾದರೇ ನಮ್ಮನ್ನು ಹೊತ್ತು ಮೆರವಣಿಗೆ ಮಾಡುವ ವಿವಿಧ ಸಂಸ್ಥೆಗಳು ಈ ಸಮಾಜದಲ್ಲಿವೆ. ಸಂಘಟನೆಯ ಆರಂಭ ಮಾಡುವುದು ಸುಲಭ ಅದನ್ನು ಮುನ್ನೆಡೆಸಿಕೊಂಡು ಹೋಗುವುದು ಬಹಳ ಕಠಿಣ. ಇತಂಹ ದುರ್ಗಮ ಪರಿಸ್ಥಿತಿಯಲ್ಲೂ ಕೂಡ ಈ ಕಾರ್ಯ ಮುಂದುವರೆಸಿಕೊಂಡು ಬಂದಿರುವುದರ ಜೊತೆಗೆ ಈ ಶಾಲೆಯಲ್ಲಿ ಕಲಿತು ಸಮಾಜದಲ್ಲಿ ಪಡೆದಕೊಂಡಿರುವುದನ್ನ ಸಮಾಜಕ್ಕೆ ಹಿಂದಿರುಗಿಸಿದ ಸ್ನೇಹ ಸಂಗಮದ ಕಾರ್ಯ ಶ್ಲಾಘನೀಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ಹಾಗೂ ಇನ್ನರ್ವೀಲ್ ಕ್ಲಬ್ ಬೈಂದೂರು ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ರತ್ತು ಬಾಯಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವೃಕ್ಷ ರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷ ಪ್ರಸಾದ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇನ್ನರ್ವೀಲ್ ಅಧ್ಯಕ್ಷೆ ಚಂದ್ರಿಕಾ ರಾಮು, ಕಾರ್ಯದರ್ಶಿ ಮಾನಸ ರಾವ್, ಅರಣ್ಯ ಇಲಾಖೆಯ ರವಿರಾಜ್, ರೋಟರಿ ಪೂರ್ವಾಧ್ಯಕ್ಷರಾದ ಐ. ನಾರಾಯಣ, ಗೋವಿಂದ ಎಮ್.,ಉಪಸ್ಥಿತರಿದ್ದರು. ರತ್ತುಬಾಯಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಆನಂದ ಮದ್ದೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಟರಾಕ್ಟ್ ಸಂಯೋಜಕ ಪ್ರಕಾಶ ಮಾಕೋಡಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಧುವಿಗೆ ಇಷ್ಟವಿಲ್ಲದ ಮದುವೆಯೊಂದು 2 ತಿಂಗಳೋಳಗೆ ಮುರಿದು ಬಿದ್ದಿದೆ. ಮದುವೆಯಾಗಿ ನಾಲ್ಕೇ ದಿನ ಗಂಡನ ಮನೆಯಲ್ಲಿ ವಾಸವಿದ್ದು, ತವರು ಸೇರಿದ್ದ ಪತ್ನಿ, ಆಕೆಯ ಪೋಷಕರು ಹಾಗೂ ಪತ್ನಿ ಪ್ರಿಯಕರನ ವಿರುದ್ಧ ದೂರು ದಾಖಲಾದ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಕ್ತಿಯಲ್ಲಿ ನಡೆದಿದೆ. ತಾಲೂಕಿನ ಉಳ್ಳೂರು-74 ಗ್ರಾಮದ ಸಂಪಿಗೇಡಿ ನಿವಾಸಿ ಸಂಕೇತ್ ಶೆಟ್ಟಿ ಎಂಬುವವರೊಂದಿಗೆ ಹಾಗೂ ವಡೇರಹೋಬಳಿಯ ಸ್ಪೂರ್ತಿ ಶೆಟ್ಟಿ ಎಂಬವವರ ವಿವಾಹ ಮೇ. 21ರಂದು ನಡೆದಿತ್ತು. ಆದರೆ ಮದುವೆಯ ಬಳಿಕ ಸ್ಪೂರ್ತಿ ಶೆಟ್ಟಿ 4 ದಿನ ಮಾತ್ರ ಗಂಡನ ಮನೆಯಲ್ಲಿ ಇದ್ದು ಬಳಿಕ ಪದೇ ಪದೇ ತವರು ಮನೆಗೆ ಹೋಗುತ್ತಿದ್ದರು. ಈ ಬಗ್ಗೆ ಪತಿ ಸಂಕೇತ್ ಶೆಟ್ಟಿ ಪತ್ನಿಯಲ್ಲಿ ವಿಚಾರಿಸಿದಾಗ ಹೊಸದಾಗಿ ಮದುವೆಯಾಗಿರುವುದರಿಂದ ಹೊಂದಾಣಿಕೆ ಮಾಡಿಕೊಳ್ಳಲು ಸ್ವಲ್ಪ ಸಮಯಬೇಕು ಎಂಬ ಉತ್ತರ ಬಂದಿದೆ. ಇದಕ್ಕೆ ಪತಿಯೂ ಒಪ್ಪಿ ಸುಮ್ಮನಾಗಿದ್ದರು. ಆದರೆ ದಿನ ಕಳೆದಂತೆ ಪತ್ನಿ ಯಾರೊಂದಿಗೋ ಮೊಬೈಲ್ನಲ್ಲಿ ಮಾತನಾಡುತ್ತಿರುವುದು, ವಾಟ್ಸಪ್ ವೀಡಿಯೋ ಕಾಲಿಂಗ್ ಮಾಡುವುದನ್ನು ಹೆಚ್ಚು…

Read More