ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಅವರ ಹೋರಾಟದ ಮನೋಭಾವ, ಆತ್ಮವಿಶ್ವಾಸ, ಶೌರ್ಯ, ಪರಾಕ್ರಮಗಳ ವ್ಯಕ್ತಿತ್ವ ಪ್ರತಿಯೊಬ್ಬ ಮಹಿಳೆಯರಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ, 200 ವರ್ಷ ಪೂರೈಸಿರುವ ಹಿನ್ನೆಲೆ, ರಾಜ್ಯ ಸರ್ಕಾರವು ಕಿತ್ತೂರು ಉತ್ಸವ -2024 ರ ಪ್ರಯುಕ್ತ ವಿಜಯ ಜ್ಯೋತಿ ರಥಯಾತ್ರೆಯನ್ನು ಆಯೋಜಿಸಿದ್ದು, ರಥವು ರಾಜ್ಯದಾದ್ಯಂತ ಸಂಚರಿಸುವ ಮೂಲಕ ರಾಣಿ ಚೆನ್ನಮ್ಮರ ಸಂದೇಶ, ಸಾಹಸಗಾಥೆಯ ಬಗ್ಗೆ ಸಮಾಜಕ್ಕೆ ತಿಳಿಸುವ ಮೂಲಕ ಅರಿವು ಮೂಡಿಸಲಾಗಿದೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿಲ್ಲಾಡಳಿತ, ರಾಮನಗರ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ರಾಮನಗರ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕನಕಪುರ ಇವರ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರದ ಟೌನ್ ಟೆನ್ನಿಸ್ ಕ್ಲಬ್ನಲ್ಲಿ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರು ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರಿನಲ್ಲಿ ಅ.7ರಂದು ನಡೆದ ಮೈಸೂರು ವಿಭಾಗದ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿಸಲು ಇವರು ಆಯ್ಕೆಯಾಗಿದ್ದರು. ಈಕೆ ಗಂಗೊಳ್ಳಿಯ ಪತ್ರಕರ್ತ ಬಿ. ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಅವರನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ‘ಹಳೆಗನ್ನಡ ಹಿಂದಕ್ಕೆ ಸರಿದು ಹೊಸಗನ್ನಡ ಮುನ್ನೆಲೆಗೆ ಬರುವ ಸ್ಥಿತ್ಯಂತರ ಕಾಲದ ಕವಿ ಮುದ್ದಣ’. ತುಳು ಸೇರಿದಂತೆ ಪ್ರಾದೇಶಿಕ ಘಾಟಿನ ಭಾಷೆಯನ್ನು ಬಳಸಿರುವ ಮುದ್ದಣ ಹಳೆಗನ್ನಡ, ಹೊಸಗನ್ನಡ- ವನ್ನು ಹಿತವಾಗಿ ಬೆಸೆದ ಬರಹಗಾರ. ಸರಾಗವಾಗಿ ಆಸಕ್ತಿಯಿಂದ ಓದಿಸಿಕೊಂಡು ಹೋಗುವ ಶೈಲಿ ಅವರದ್ದು ಎಂದು ಸಂಶೋಧಕ ಹಂಪ ನಾಗರಾಜಯ್ಯ ಹೇಳಿದರು. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರೊ. ಎ. ವಿ. ನಾವಡ ಸಂಪಾದಿಸಿದ ‘ಮುದ್ದಣ ಕೃತಿ ಕರಜನ’ – ಮುದ್ದಣ ಕವಿಯ ಸಮಗ್ರ ಕಾವ್ಯ ಸಂಪುಟ ಬುಧವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಹಳೆಗನ್ನಡ ಕಾವ್ಯಗಳು ಈಗ ಕಪಾಟುಗಳಲ್ಲೇ ಉಳಿಯುತ್ತಿವೆ. ಹೊಸ ತಲೆಮಾರಿನ ಓದುಗರೂ ಆಸಕ್ತಿ ವಹಿಸುತ್ತಿಲ್ಲ. ವಿಶ್ವವಿದ್ಯಾಲಯ-ಎ.ವಿ. ನಾವಡ ಅವರು ಸಂಪಾದಿಸಿರುವ ‘ಮುದ್ದಣ ಕೃತಿ ಕರಜನ’ ಕಾವ್ಯ ಸಂಪುಟದ ಮೊದಲ ಪ್ರತಿಯನ್ನು ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ವಿಧಾನ ಸಭೆಯ ಅಧ್ಯಕ್ಷ ಯು.ಟಿ.ಖಾದರ್ ಸ್ವೀಕರಿಸಿದರು. ಶೇಷಾದ್ರಿಪುರಂ ಶಿಕ್ಷಣ ದತ್ತಿ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ. ಕೃಷ್ಣ, ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯದಲ್ಲಿ ಈಗಾಗಲೇ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ (PPP) ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ತಲೆ ಎತ್ತಲಿವೆ. ಉಡುಪಿ ಜಿಲ್ಲೆಗೆ ಪಿಪಿಪಿ ಬದಲಾಗಿ ಪೂರ್ಣ ಪ್ರಮಾಣದ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಎಲ್ಲಾದರೂ ಇರಿ, ಹೇಗಾದರೂ ಇರಿ. ಭಾರತೀಯತೀಯತೆ ಎತ್ತಿ ಹಿಡಿಯಿರಿ. ಉತ್ತಮ ಜೀವನ ರೂಪಿಸಿಕೊಳ್ಳಲು ಭಾರತವೇ ಶ್ರೇಷ್ಠ ಎಂದು ಶ್ರೀ ಕ್ಷೇತ್ರ ಕಟೀಲಿನ ವಿದ್ವಾನ್ ಕಮಲಾದೇವಿ ಪ್ರಸಾದ ಆಸ್ರಣ್ಣ ಹೇಳಿದರು . ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಳ್ವಾಸ್ ಕಾಲೇಜು (ಸ್ವಾಯತ್ತ) ಸಂಸ್ಕೃತ ವಿಭಾಗ ಮತ್ತು ಪ್ರಜ್ಞಾ – ಜಿಜ್ಞಾಸಾವೇದಿ ಆಶ್ರಯದಲ್ಲಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಆರಂಭಗೊಂಡ 7 ದಿನಗಳ “ಶ್ರೀಮದ್ ವಾಲ್ಮೀಕಿ ರಾಮಾಯಣ – ಶ್ರವಣಸಪ್ತಾಹ ” ಉದ್ಘಾಟಿಸಿ ಅವರು ಮಾತನಾಡಿದರು . ರಾಮಾಯಣ ಎನ್ನುವುದು ರಾಮ, ರಾಮಸ್ಯ, ಅಯಣಂ. ಅಂದರೆ ರಾಮ ನಡೆದ ದಾರಿಯಲ್ಲಿ ಸಾಗುವುದು ಎಂದರ್ಥ. ರಾಮಾಯಣ ಎಂಬ ಪೂಜ್ಯನೀಯ ಕಾವ್ಯವನ್ನು ಲೋಕಕ್ಕೆ ಕೊಡುಗೆಯಾಗಿ ನೀಡಿದ ಕೀರ್ತಿ ಶ್ರೀ ವಾಲ್ಮೀಕಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ರಾಮನ ಕಾಲದಲ್ಲಿ ಪ್ರಜಾಪ್ರಭುತ್ವ ಇಲ್ಲದ್ದಿದರೂ ಪ್ರಜೆಗಳು ರಾಮನ ಆದರ್ಶಗಳನ್ನು ಪರಿಪಾಲನೆ ಮಾಡುತ್ತಿದ್ದರು. ಕೇವಲ ರಾಮನ ಹೆಸರನ್ನು ಪೂಜಿಸುವುದಲ್ಲದೆ ರಾಮನ ನಿಜಗುಣ, ಆದರ್ಶಗಳ ಪರಿಪಾಲನೆ ಮಾಡುತ್ತಾ ಜೀವನವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಮಾಜಿಕ ರಂಗದಲ್ಲಿ ಸುಧೀರ್ಘವಾಗಿ ತೊಡಗಿಸಿಕೊಂಡ ಫಲವಾಗಿ ಇಂದು ದೇವರ ಸೇವೆ ಮಾಡುವ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು. ಅವರು ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ದಕ್ಷಿಣ ಭಾರತದ ಪುಣ್ಯ ಕ್ಷೇತ್ರದಲ್ಲಿ ಸೇವೆ ಮಾಡುವುದು ನಮ್ಮ ಪುಣ್ಯವೆಂದು ಭಾವಿಸುತ್ತೇನೆ. ದೇವಳದ ಅಭಿವೃದ್ಧಿಯೊಂದಿಗೆ ದೇವಸ್ಥಾನದ ಮೂಲಕ ಊರಿನ ಅಭಿವೃದ್ಧಿಗೂ ಕೈಜೋಡಿಸುವುದಾಗಿ ತಿಳಿಸಿದರು. ಬೈಂದೂರು ರೋಟರಿ ಟ್ರಸ್ಟ್ ಅಧ್ಯಕ್ಷರಾಗಿರುವ ಕೆ. ಬಾಬು ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ 1ರ ಮಾಜಿ ಸಹಾಯಕ ಗವರ್ನರ್ ಸೋಮನಾಥನ್ ಆರ್., ನಿಯೋಜಿತ ಸಹಾಯಕ ಗವರ್ನರ್ ಐ. ನಾರಾಯಣ್, ಬೈಂದೂರು ರೋಟರಿ ಪೂರ್ವಾಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು. ಸುಧಾಕರ ಪಿ ಸನ್ಮಾನಿತರನ್ನು ಪರಿಚಯಿಸಿದರು. ಕಾರ್ಯದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಗಂಗೊಳ್ಳಿಯ ಬಾಲ ಪ್ರತಿಭೆ ಸಂಜಿತ್ ಎಂ. ದೇವಾಡಿಗ ಅವರಿಂದ ಸಾಕ್ಸೋ ಫೋನ್ ವಾದನ ಸೇವೆ ಶಾರದಾ ಮಂಟಪದಲ್ಲಿ ನಡೆಯಿತು. ತವಿಲ್ನಲ್ಲಿ ನಿತ್ಯಾನಂದ ದೇವಾಡಿಗ, ತಬಲಾದಲ್ಲಿ ರಾಮಕೃಷ್ಣ ಶೆಣೈ ಮತ್ತು ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ, ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, ಪತ್ರಿಕೋದ್ಯಮ ಪ್ರಭಾವಿ ಮಾಧ್ಯಮವಾಗಿದ್ದು, ಜನರು ಪತ್ರಿಕೆ ಓದುವ ಹಾವ್ಯಸ ಬೆಳೆಸಿಕೊಳ್ಳಬೇಕು. ಪತ್ರಕರ್ತರು ದಿನದ 30 ನಿಮಿಷಗಳನ್ನು ಕ್ರೀಡಾ ಚಟುವಟಿಕೆಗಳಿಗೆ ಮೀಸಲಿಡಬೇಕು. ಇದರಿಂದ ಆರೋಗ್ಯವಂತರಾಗಿ ರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು. ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಪ್ತಿ ಗ್ರಾಮದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಲಾಬ್ನಿಂದ ಬಿದ್ದು ಮೃತಪಟ್ಟಿದ್ದಾರೆ. ಜಾರ್ಖಂಡ್ನ ಲೋಹರ್ದಗಾ ಜಿಲ್ಲೆಯ ಜೋಗಿಂದರ್ ಒರೋನ್ (29) ಮೃತ ವ್ಯಕ್ತಿ. ಇವರು ಕೆಲಸಕ್ಕೆ ರಜೆ ಮಾಡಿ ಸರೋಜ್ ಒರೊನ್, ಶಬ್ಬಿರ್ ಹಾಗೂ ಮುನ್ನಾ ಒರೋನ್ ಜತೆ ಕುಡಿದು ಫ್ಯಾಕ್ಟರಿ ಕಟ್ಟಡದ ಸ್ಲಾಬ್ನ ಮೇಲೆ ಮೊಬೈಲ್ನಲ್ಲಿ ಮಾತಾಡುತ್ತಿದ್ದಾಗ ಸುಮಾರು 15 ಅಡಿ ಎತ್ತರದಿಂದ ಕೆಳಗಡೆ ಸಿಮೆಂಟ್ ನೆಲದ ಮೇಲೆ ಬಿದ್ದು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಸಾಹಿತಿ, ಕಾದಂಬರಿಗಾರ, ಕೋಟೇಶ್ವರ ಅಂಕದಕಟ್ಟೆಯ ಕೆ.ವಿ. ಕ್ರೃಷ್ಣಯ್ಯ (91) ಬೆಂಗಳೂರಿನ ಸ್ವಗ್ರೃಹದಲ್ಲಿ ನಿಧನರಾದರು. ಅವರು ಸಾತ್ವಿಕ ಸ್ವಭಾವದ, ಪ್ರತಿಭಾವಂತ ಬರಹಗಾರರಾಗಿದ್ದರು.
