ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಇಂದಿನ ಕಾಲದಲ್ಲಿ ಅರ್ಥಪೂರ್ಣವಾದ ಶ್ರೇಷ್ಠ ಬದುಕನ್ನು ಬದುಕುವುದು ಸವಾಲಿನ ಕೆಲಸ. ಅಂತಹ ಸವಾಲನ್ನು ನಾವೆಲ್ಲ ಸ್ವೀಕರಿಸಬೇಕು ಎಂದು ಮಂಗಳೂರಿನ ಎಂಆರ್ಪಿಎಲ್- ಒಎನ್ಜಿಸಿ ಪ್ರಧಾನ ವ್ಯವಸ್ಥಾಪಕ (ಕಾರ್ಪೊರೇಟ್ ಸಂವಹನ) ಡಾ. ರೊಡಲ್ ನೊರಾನ್ಹಾ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಕುವೆಂಪು ಸಭಾಂಗಣ ಮಂಗಳವಾರ ನಡೆದ ’ಸ್ಫಟಿಕ’ ವೇದಿಕೆಯ 2024-25ರ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮೊಳಗಿನ ಬ್ರಹ್ಮಾಂಡವನ್ನು ಅವಲೋಕಿಸುವ ರೀತಿಯಲ್ಲಿ ನಮ್ಮ ಮೌಲ್ಯಯುತ ಜೀವನ ನಿರ್ಧರಿತವಾಗಬೇಕು. ಸಾಮಾನ್ಯರಾಗಿ ಉಳಿಯುವವರು ಋಣಾತ್ಮಕ ವಿಚಾರಗಳಿಗೆ ಒತ್ತು ನೀಡಿದರೆ, ಅಸಾಮಾನ್ಯರು ಧನಾತ್ಮಕ ವಿಚಾರಗಳನ್ನು ಅನುಸರಿಸುತ್ತಾರೆ ಎಂದು ಅವರು ವಿವರಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸಮಾಜ ಕಾರ್ಯವು ವಿದ್ಯಾರ್ಥಿಗಳಲ್ಲಿ ಅಂತರ್ಗತವಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರಕುವ ಹಲವಾರು ವಿಷಯಗಳನ್ನು ಸದುಪಯೋಗಗೊಳಿಸಬೇಕು ಎಂದು ಅವರು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಮನುಷ್ಯನ ಬಗ್ಗೆ ಯೋಚಿಸುವ ವೃತ್ತಿಯೇ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ದಸರಾ ಎಂದೇ ಖ್ಯಾತಿ ಪಡೆದ ಗಂಗೊಳ್ಳಿ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ. ಶ್ರೀ ಶಾರದಾ ಮಹೋತ್ಸವದ ಸುವರ್ಣ ಮಹೋತ್ಸವ ಪ್ರಯುಕ್ತ ಈ ಬಾರಿಯ ಶ್ರೀ ಶಾರದಾ ಮಹೋತ್ಸವ ವಿಶೇಷ ಆಕರ್ಷಣೆ ಪಡೆದುಕೊಂಡಿತ್ತು. ವಿವಿಧ ಜಿಲ್ಲೆಗಳ ಕಲಾ ತಂಡಗಳು, ಆಕರ್ಷಕ ಸ್ತಬ್ಧಚಿತ್ರಗಳು, ಹುಲಿವೇಷ ತಂಡಗಳು ಶೋಭಾಯಾತ್ರೆಯ ಮೆರಗು ಹೆಚ್ಚಿಸಿದವು. ಗಂಗೊಳ್ಳಿಯ ಶ್ರೀ ಶಾರದಾ ಮಂಟಪದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಯು ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗೆ ಸಾಗಿ ಬಂದು ಅಲ್ಲಿಂದ ನಾಯಕವಾಡಿ ಸರ್ಕಲ್ವರೆಗೆ ಸಾಗಿ ಮರಳಿ ಗಂಗೊಳ್ಳಿ ಮುಖ್ಯರಸ್ತೆ ಮೂಲಕ ಸಾಗಿ ಬಂದು ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಕೊನೆಗೊಂಡಿತು. ಶೋಭಾಯಾತ್ರೆಯಲ್ಲಿ ನವದುರ್ಗೆಯರನ್ನು ಕಾಣಲು ಜನತೆ ಸಾವಿರಾರು ಸಂಖ್ಯೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದರು. ಕೇರಳದ ಆಕರ್ಷಕ ಚಂಡೆ ವಾದನ, ಡೊಳ್ಳು ಕುಣಿತ, ಗೊಂಬೆಗಳು, ಛದ್ಮವೇಷಗಳ ತಂಡ ಸೇರಿದಂತೆ ಹಲವು ವೇಷಗಳು ಅದ್ಭುತ ಪ್ರದರ್ಶನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.15: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಬೇಕು. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಹಾಗೂ ಮರಗಳ ಕೆಳಗೆ ನಿಲ್ಲಬಾರದು. ಈ ಮೇಲ್ಕಂಡ ಅಂಶಗಳನ್ನು ಮಳೆಗಾಲದ ಎಲ್ಲಾ ಸಂದರ್ಭಗಳಲ್ಲಿ ಚಾಚುತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು. ತುರ್ತುಸೇವೆಗೆ ಶುಲ್ಕರಹಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡ ಘಟನೆ ಕೋಟದ ಮಣೂರಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಉಡುಪಿ ಮೂಲದ ಗೌತಮ್ ಪಿ. ಪ್ರಭು (35) ಎಂದು ಗುರುತಿಸಲಾಗಿದೆ. ಇನ್ನೋವಾ ಕಾರಿನಲ್ಲಿ ಗಂಗೊಳ್ಳಿಯಿಂದ ಉಡುಪಿ ಕಡೆ ಹೋಗುತ್ತಿದ್ದ ವೇಳೆ ಕೋಟ ಮಣೂರು ಸಮೀಪ ಮುಂಬೈಯಿಂದ ಮಂಗಳೂರು ಹೋಗುತ್ತಿದ್ದ ಸರ್ಕಾರಿ ವೋಲ್ವೋ ಬಸ್ ಹಿಂದಿನಿಂದ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿಯಾಗಿದೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ನಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿದೆ. ಗಂಭೀರ ಗಾಯಗೊಂಡ ಕಾರು ಗೌತಮ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್ಸಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯಗಳಾಗಿಲ್ಲ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ’ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು ಕಾರ್ಯ ಬದ್ಧತೆಯಿಂದ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ನಿರ್ದಿಷ್ಟ ಗುರಿಯೆಡೆಗೆ ಸ್ಪಷ್ಟತೆ ಇರಲಿ. ಗೊಂದಲ ಬೇಡ’ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತ ಒಲಂಪಿಯನ್, ಕೋಲ್ಕತ್ತಾದಲ್ಲಿನ ಯೂನಿಯನ್ ಬ್ಯಾಂಕ್ ಇಂಡಿಯಾದ ಸಹಾಯಕ ಮಹಾಪ್ರಬಂಧಕ ಸತೀಶ್ ರೈ ಹೇಳಿದರು. ವಿದ್ಯಾಗಿರಿಯ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ಸೋಮವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ’ ಕೀರ್ತಿಶೇಷ ಲೋಕನಾಥ ಬೋಳಾರ್ ವೆಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭವಿಷ್ಯದ ಗುರಿಯನ್ನು ಈಡೇರಿಸಲು ಇಂದೇ ಶ್ರಮವಹಿಸಿ ಹೆಜ್ಜೆ ಇಡಬೇಕು. ಪ್ರತಿ ಕ್ರೀಡಾಪಟುವಿನಲ್ಲೂ ಶಿಸ್ತು, ಸಂಯಮ, ಸಮಯಪಾಲನೆ ಅತ್ಯವಶ್ಯಕ. ಕ್ರೀಡಾ ಮನೋಭಾವದಿಂದ ಕ್ರೀಡೆ, ಸಂಸ್ಥೆ ಹಾಗೂ ದೇಶಕ್ಕೂ ಹೆಮ್ಮೆಯ ವಿದ್ಯಾರ್ಥಿಗಳಾಬೇಕು ಎಂದು ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ, ಪ್ರತಿಯೊಬ್ಬರಲ್ಲೂ ಇಚ್ಛಾ ಶಕ್ತಿ ಇದ್ದೆ ಇರುತ್ತದೆ. ಅದನ್ನು ಸರಿಯಾದ ದಾರಿಯಲ್ಲಿ ವಿನಿಯೋಗಿಸಿಕೊಳ್ಳಬೇಕು. ಹಲವಾರು ನುರಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿಯು ಆರಂಭಗೊಂಡಿದೆ. ಭಾರತೀಯ ಆರೋಗ್ಯ ವ್ಯವಸ್ಥೆಯು ದೂರದರ್ಶಿತ್ವದ ನಾಯಕ ಡಾ. ಟಿ.ಎಂ.ಎ. ಪೈ ಅವರ ಸಮರ್ಪಣೆ ಮತ್ತು ಸಮಾಜ ಸೇವೆಯಲ್ಲಿ ಬದ್ಧತೆ ಅಸಾಧಾರಣವಾಗಿ ಅಪರೂಪ. ಅವರ ಕನಸನ್ನು ನನಸಾಗಿಸುವಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವಂತೆ ಮಾಡುವುದು ಈ ಕಾರ್ಡ್ನ ಉದ್ದೇಶವಾಗಿದೆ. ಮಣಿಪಾಲ್ ಆರೋಗ್ಯ ಕಾರ್ಡ್ “ಇಡೀ ಕುಟುಂಬಕ್ಕಾಗಿ, ಉತ್ತಮ ಮೌಲ್ಯ, ವಿಶ್ವಾಸಾರ್ಹ ಸೇವೆ ” ಎಂಬ ಅಡಿಬರಹದ ಅಡಿಯಲ್ಲಿ, ಎಲ್ಲಾ ಸದಸ್ಯರಿಗೆ ಸಮಗ್ರ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ಹೇಳಿದರು. ಅವರು ಅ.15ರಂದು ಕುಂದಾಪುರ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಮಾಹೆಯ ಕುಲಾಧಿಪತಿ ಡಾ. ರಾಮದಾಸ್ ಪೈ ಅವರ ನೇತೃತ್ವದಲ್ಲಿ 2000ರಲ್ಲಿ ಪ್ರಾರಂಭವಾದ ಮಣಿಪಾಲ್ ಆರೋಗ್ಯ ಕಾರ್ಡ್ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿಆರೋಗ್ಯ ಸೇವೆಯನ್ನು ಒದಗಿಸಲು ಶ್ರಮಿಸುತ್ತಿದೆ. ಉಚಿತ ಆರೋಗ್ಯ ಸೇವೆಯನ್ನು ನೀಡುವುದು ಸವಾಲಿನದ್ದಾಗಿದ್ದರೂ, ಈ ಉಪಕ್ರಮವು ರಿಯಾಯಿತಿ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿಯ ನಿರಂತರ ಸುಳ್ಳು ಅಪಾದನೆಗಳಿಂದ ಜನಪರ ರಾಜ್ಯ ಸರ್ಕಾರವನ್ನು ಅಸ್ಥಿರ ಗೊಳಿಸುವುದು ಅಸಾಧ್ಯ ವಿಧಾನಪರಿಷತ್ತಿನಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳ ಜನಪ್ರತಿನಿಧಿಗಳ ಧ್ವನಿ ಆಗಬಲ್ಲ ರಾಜು ಪೂಜಾರಿ ಅವರನ್ನು ಬೆಂಬಲಿಸಿದರೆ ,ಕರಾವಳಿಯ ಸ್ಥಳೀಯ ಆಡಳಿತಕ್ಕೆ ಶಕ್ತಿ ಬಂದಂತಾಗುತ್ತದೆ, ಮಾತ್ರವಲ್ಲದೆ ಸಿದ್ದರಾಮಯ್ಯನವರ ಕೈ ಬಲಪಡಿಸಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾ ಕೆಪಿಸಿಸಿ ಉಸ್ತುವಾರಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಹೇಳಿದರು. ಕೋಟೇಶ್ವರ ಸಹನಾ ಹೋಟೆಲ್ ಸುಮುಖ ಹಾಲಿನಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯ ಕುಂದಾಪುರ ಕಾಂಗ್ರೆಸ್ ಉಸ್ತುವಾರಿಗಳನ್ನು ಉದ್ದೇಶಿಸಿ ಇವರು ಮಾತನಾಡಿ, ಪ್ರತಿಯೊಂದು ಮನೆಗೆ ಆರ್ಥಿಕ ಶಕ್ತಿಯನ್ನು ನೀಡಿದ ಕಾಂಗ್ರೆಸ್ ಆಡಳಿತದಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆಯವರು ನುಡಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ವಹಿಸಿದ್ದರು. ವೇದಿಕೆಯಲ್ಲಿ ಅಭ್ಯರ್ಥಿ ಎಸ್. ರಾಜು ಪೂಜಾರಿ, ಕುಂದಾಪುರ ಬ್ಲಾಕ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕಿಶನ್ ಹೆಗ್ಡೆ, ದಿನೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ವಿಕಾಸಕ್ಕಾಗಿ ವಿಧಾನಪರಿಷತ್ ಚುನಾವಣೆಯಾಗಿದೆ. ಇದಕ್ಕೆ ಶಕ್ತಿ ತುಂಬುವ ಕೆಲಸಕ್ಕಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಸಾಮಾನ್ಯ ಕಾರ್ಯಕರ್ತರನ್ನು ಸ್ಥಳೀಯ ಮಟ್ಟದಿಂದ ದಿಲ್ಲಿಯ ಮಟ್ಟದವರೆಗೆ ಬೆಳೆಸುವ ಪಕ್ಷ ಇದ್ರೆ ಅದು ಬಿಜೆಪಿ ಪಕ್ಷ ಮಾತ್ರ. ಸಾಮಾನ್ಯ ಕಾರ್ಯಕರ್ತನನ್ನು ಪರಿಷತ್ಗೆ ಕಳಿಸುವ ಕೆಲಸವನ್ನು ಸ್ಥಳೀಯಾಡಳಿತ ಸದಸ್ಯರು ಒಗ್ಗಟ್ಟಿನ ಮೂಲಕ ಮಾಡಬೇಕು ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು. ಅವರು ಸಿದ್ದಾಪುರ ಶ್ರೀ ರಂಗನಾಥ ಸಭಾಭವನದಲ್ಲಿ ಸೋಮವಾರ ವಿಧಾನಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯ ಪರವಾಗಿ ಸಿದ್ದಾಪುರ ಬಿಜೆಪಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸ್ಥಳೀಯಾಡಳಿತ ಸದಸ್ಯರ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಅವೈಜ್ಞಾನಿಕ ಕಸ್ತೂರಿರಂಗನ್ ವರದಿ ಬಗ್ಗೆ ಕೇಂದ್ರ ಸರಕಾರದ ಗಮನಕ್ಕೆ ತರಲಾಗಿದೆ. ಪ್ರಕೃತಿಯ ಜತೆಯಲ್ಲಿ ಜನ ಜೀವನ ಉಳಿಯಬೇಕು. ಪ್ರಕೃತಿ ಉಳಿದರೆ ಮನುಷ್ಯ ಕೂಡ ಬದುಕುತ್ತಾನೆ. ಕಸ್ತೂರಿರಂಗನ್ ವರದಿಯಲ್ಲಿ ಜನ ವಸತಿ ಪ್ರದೇಶವನ್ನು ಬಿಟ್ಟು, ಅರಣ್ಯ ಪ್ರದೇಶವನ್ನು ವರದಿಗೆ ಸೇರಿಸಲು ಅಭ್ಯಂತರ ಇಲ್ಲ ಎಂದರು. ಉಡುಪಿ ಚಿಕ್ಕಮಗಳೂರು ಸಂಸದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹಣ, ಅಂತಸ್ತಿನಿಂದ ದೇವರ ಸಾಕ್ಷಾತ್ಕಾರವಾಗುವುದಿಲ್ಲ. ನಿಷ್ಕಲ್ಮಶ ಭಕ್ತಿ, ಪ್ರಾರ್ಥನೆಯಿಂದ ದೇವರ ಸಾಕ್ಷಾತ್ಕಾರವಾಗಿ ನಮ್ಮ ಜೀವನದಲ್ಲಿ ಖುಷಿ, ಸಂತೋಷ ಹೆಚ್ಚಾಗುತ್ತದೆ. ದೇವರ ಮೇಲೆ ಶ್ರದ್ಧೆ, ನಂಬಿಕೆ ಇಟ್ಟುಕೊಂಡು ಮುನ್ನಡೆದರೆ ಜೀವನದಲ್ಲಿ ಎದುರಾಗುವ ಎಲ್ಲಾ ಕಷ್ಟಗಳು ದೂರವಾಗಿ ಯಶಸ್ಸು ಪ್ರಾಪ್ತಿಯಾಗುತ್ತದೆ ಎಂದು ಪ್ರಸಿದ್ಧ ವಾಗ್ಮಿ ಅಕ್ಷಯ ಗೋಖಲೆ ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ-2024 ಅಂಗವಾಗಿ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಈ ಕಾಲಘಟ್ಟದಲ್ಲಿ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರದ ಬಗ್ಗೆ ತಿಳಿ ಹೇಳುವ ಮತ್ತು ಅವರು ತಪ್ಪು ದಾರಿ ಹಿಡಿಯದಂತೆ ಎಚ್ಚರ ವಹಿಸುವ ಅಗತ್ಯತೆ ಇದೆ. ಸಮಾಜಕ್ಕಾಗಿ ಬದುಕುವ ಮಕ್ಕಳನ್ನಾಗಿ ರೂಪಿಸಿ ನಮ್ಮ ದೇಶ ಹಾಗೂ ಸಮಾಜದ ಬೆಳವಣಿಗೆ ಸಹಕಾರ ನೀಡಬೇಕಾದ ಅನಿವಾರ್ಯತೆ ಇದೆ. ನಮ್ಮ ಜೊತೆ ಇದ್ದುಕೊಂಡು ನಮ್ಮ ಸಮಾಜವನ್ನು ಹಾಳು ಮಾಡುತ್ತಿರುವ ದುಷ್ಟಶಕ್ತಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಆಳ್ವಾಸ್ ಫಾರ್ಮಸಿಯು 1982ರಲ್ಲಿ ಆರಂಭಗೊಂಡಿದ್ದು, ಆಯುರ್ವೇದ ಔಷಧಿ ಮತ್ತು ಇತರ ಆಯುಷ್ ಉತ್ಪನ್ನಗಳನ್ನು ನಿರಂತರವಾಗಿ ವಿಕಸನಗೊಳ್ಳುತ್ತಿರುವ ಉತ್ಪಾದಕರಾಗಿ ಅಭಿವೃದ್ಧಿಗೊಂಡಿದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು. ಮಿಜಾರಿನ ಆಳ್ವಾ ಫಾರ್ಮಸಿಯಲ್ಲಿ ಸೋಮವಾರ ನಡೆದ ವಿವಿಧ ಔಷಧೀಯ ಉತ್ಪನ್ನಗಳ ‘ಫ್ಯಾಕ್ಟರಿ ಔಟ್ಲೆಟ್, ವೆಬ್ಸೈಟ್ ಬಿಡುಗಡೆ ಮತ್ತು ಟಿವಿಸಿ ಬಿಡುಗಡೆ’ ಸಮಾರಂಭದಲ್ಲಿ ಅವರು ಮಾತನಾಡಿದರು. ಹೇಗೆ ನಮ್ಮ ನೆರಳು ನಮ್ಮನ್ನು ಹಿಂಬಾಲಿಸುತ್ತದೆಯೋ, ಹಾಗೆಯೇ ನಾವು ನಂಬಿರುವ ಮೌಲ್ಯಗಳು ನಮ್ಮನ್ನು ರಾಜ ಮಾರ್ಗದಲ್ಲಿ ಕ್ರಮಿಸುವಂತೆ ಮಾಡುತ್ತವೆ. ಆದರೆ ಇಂದಿನ ಸ್ಪರ್ಧಾತ್ಮಕ ಜಾಹೀರಾತಿನ ಯುಗದಲ್ಲಿ ವಸ್ತುಗಳ ಮಾರುಕಟ್ಟೆ ವಿಧಾನವು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಉತ್ಪನ್ನವೊಂದು ತನ್ನ ಅಂತಸತ್ವದ ಜೊತೆ ಜಾಹೀರಾತುಗೊಂಡಾಗ ಜನರನ್ನು ತಲುಪುತ್ತದೆ. ಜಾಹೀರಾತು ಪ್ರಾಮಾಣಿಕರಾಗಿರಬೇಕು. ಜನರಲ್ಲಿ ವಿಶ್ವಾಸರ್ಹತೆಯನ್ನು ಮೂಡಿಸಬೇಕು ಎಂದರು. ಆಳ್ವಾಸ್ ಫಾರ್ಮಸಿಯ ನೂತನ ಉತ್ಪನ್ನ ಸುಕೇಶ್ ಪೋಷಕ ತೈಲವು ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪೂರಕವಾಗಿದೆ. ಇನ್ನಿತರ ಔಷಧೀಯ ಉತ್ಪನ್ನಗಳನ್ನು ಉತ್ತಮ…
