ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಬೈಂದೂರು, ವಾಕ್ ಶ್ರವಣ ವಿಭಾಗ ಯನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯಲ್ಲಿ ಶ್ರವಣ ತಪಾಸಣೆ ಮತ್ತು ಆಟೋಟ ಸ್ಪರ್ಧೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರವೀಂದ್ರ ಹೆಚ್. ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ರೋಟರಿ ಪೂರ್ವಾಧ್ಯಕ್ಷರಾದ ಪ್ರಕಾಶ್ ಭಟ್ ಉಪ್ಪುಂದ, ಯನೆಪೋಯ ಕಾಲೇಜಿನ ಶ್ರವಣ ತಜ್ಞರು ಪ್ರತೀಕ್ಷಾ, ಪಾಲಕರ ಸಂಘದ ಅಧ್ಯಕ್ಷರಾದ ಶ್ರೀಲತಾ ಜೆ. ಶೆಟ್ಟಿ, ಕ್ಲಿನಿಕಲ್ ಮೇಲ್ವಿಚಾರಕರಾದ ರಚನಾ, ಪ್ರಣೀತಾ ಉಪಸ್ಥಿತರಿದ್ದರು. ಶಿಕ್ಷಕಿ ಪ್ರಮಿಳಾ ಕಾರ್ಯಕ್ರಮ ಸ್ವಾಗತಿಸಿ, ವಂದನಾರ್ಪಣೆ ಗೈದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಹಕಾರ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆ ಮತ್ತು ಆರ್ಥಿಕ ಸ್ಥಿರತೆ ಸಾಧಿಸಿರುವ ಹಿನ್ನೆಲೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪ್ರದಾನ ಮಾಡಲಾದ ‘ಸಹಕಾರ ಮಾಣಿಕ್ಯ’ ಪ್ರಶಸ್ತಿ ಲಭಿಸಿದೆ. 67 ವರ್ಷಗಳ ಸೇವೆಯ ಇತಿಹಾಸ ಹೊಂದಿರುವ ಸಂಘವು 68ನೇ ವರ್ಷಕ್ಕೆ ಪ್ರವೇಶಿಸುತ್ತಿದ್ದು, 302 ಕೋಟಿ ರೂ. ಠೇವಣಿ, 251 ಕೋಟಿ ರೂ. ಸಾಲ ವಿತರಣೆ ಹಾಗೂ1386 ಕೋಟಿ ರೂ. ವಾರ್ಷಿಕ ವಹಿವಾಟು ದಾಖಲಿಸಿದೆ. ಸಂಸ್ಥೆ ಸತತ 16 ವರ್ಷಗಳ ಕಾಲ ‘ಅ’ ತರಗತಿ ಆಡಿಟ್ ವರ್ಗೀಕರಣ ಪಡೆಯುತ್ತಿರುವುದು ಅದರ ಪರಿಣಾಮಕಾರಿ ಆಡಳಿತ ಮತ್ತು ಜನನಂಬಿಕೆಯ ಸಂಕೇತವಾಗಿದೆ. 2024-25ನೇ ಸಾಲಿನಲ್ಲಿ ಸಂಸ್ಥೆ ಶೇ. 98.53 ರಷ್ಟು ಸಾಲ ವಸೂಲಾತಿ ಮತ್ತು 5.83 ಕೋಟಿ ರೂಪಾಯಿ ಲಾಭ ಸಾಧಿಸಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ಸಹಕಾರಿ ಸಂಸ್ಥೆಯಾಗಿ ಅನುಷ್ಠಾನಗೊಳಿಸಿರುವ ವಿಶೇಷತೆ ಸಂಸ್ಥೆಗೆ ಸೇರಿದೆ. ರೈತರಿಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಉತ್ತಮವಾಗಿ ಅನುಭವಿಸಿ, ಶಿಕ್ಷಣ ಸೇರಿದಂತೆ ಮತ್ತಿತರ ಬಗ್ಗೆ ಜ್ಞಾನ ಹೊಂದಿ, ವಿಕಸನ ಹೊಂದಲು ಅನುಕೂಲವಾಗುವಂತೆ ಸರಕಾರ ಅನೇಕ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದೆ. ಇವುಗಳು ಸಮರ್ಪಕವಾಗಿ ಅನುಷ್ಠಾನವಾದಾಗ ಮಾತ್ರ ಮಕ್ಕಳ ಅಭಿವೃದ್ದಿ ಸಾಧ್ಯ ಇದಕ್ಕೆ ಒತ್ತು ನೀಡಬೇಕು ಎಂದರು. ಜಿಲ್ಲೆಯಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕಳೆದ ಸಭೆಯಲ್ಲಿ ತೀಮಾನಿಸಲಾಗಿತ್ತು. ಆದರೂ ಇವರೆಗೂ ಅದಕ್ಕೆ ಸ್ಪಂದನೆ ಸಿಕ್ಕಿಲ್ಲ. ಸರಕಾರಕ್ಕೆ ಮತ್ತೊಮ್ಮೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರಿನಲ್ಲಿ ನಡೆದ ಜಿಲ್ಲಾಮಟ್ಟದ ನೆಟ್ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನ 7 ವಿದ್ಯಾರ್ಥಿಗಳು ಜಿಲ್ಲಾಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಪ್ರಜ್ಞಾ (8ನೇ ತರಗತಿ), ಅಪೇಕ್ಷಾ(8ನೇ ತರಗತಿ), ವೈಭವಿ (7ನೇ ತರಗತಿ) ಚಾರ್ವಿ (7ನೇ ತರಗತಿ) ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ರ ವಯೋಮಾನದ ಹುಡುಗರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಇಬ್ಬರು ವಿದ್ಯಾರ್ಥಿಗಳಾದ ಅಭಿಲಾಶ್ (8ನೇ ತರಗತಿ) ಮತ್ತು ಶ್ರೇಯಸ್ (8ನೇ ತರಗತಿ) ರಾಜ್ಯಮಟ್ಟದಲ್ಲಿ ಆಡುವ ಅರ್ಹತೆಯನ್ನು ಗಳಿಸಿರುತ್ತಾರೆ. 17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಸಾನ್ವಿ (9ನೇ ತರಗತಿ) ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಪಂದ್ಯಾಟದಲ್ಲಿ ಭರ್ಜರಿ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅಭಿನಂದನೆಗಳನ್ನು ಸಲ್ಲಿಸಿದರು. ಹೆಮ್ಮಾಡಿ ಜನತಾ ಪದವಿಪೂರ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಲಾವಿದನೊರ್ವ ಪಾತ್ರ ನಿರ್ವಹಿಸುವುದು ಸುಲಭದ ಮಾತಲ್ಲ ಬದಲಾಗಿ ಅವನ ಪರಿಶ್ರಮ ಹಾಗೂ ರಂಗದಲ್ಲಿ ಕಠಿಣವಾಗಿ ಪಾತ್ರ ನಿರ್ವಹಣೆ ಆದರದ ಮೇಲೆ ಕಲಾಭಿಮಾನಿಗಳನ್ನು ಸಂಪಾದಿಸುತ್ತಾನೆ ಎಂದು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಯಕ್ಷಗುರು ಸದಾನಂದ ಐತಾಳ್ ಹೇಳಿದರು. ಅವರು ಇಲ್ಲಿನ ಕೋಟದ ಅಮೃತೇಶ್ವರೀ ಶ್ರೀ ದೇಗುಲದ ವತಿಯಿಂದ ನಡೆಸಲ್ಪಡುವ ದಶಾವತಾರ ಮೇಳದ 2025-26ನೇ ಸಾಲಿನ ತಿರುಗಾಟದ ದೇವರ ಪ್ರಥಮ ಸೇವೆ ಆಟ ಆವಳಿ ಯಕ್ಷ ಸಾಧಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಕಲಾಭಿಮಾನಿಗಳಿಗೆ ರಂಗದೊಕುಳಿ ನೀಡುವುದರ ಜತೆಗೆ ಭಾಷಾ ಪರಿಜ್ಞಾನ ಹೆಚ್ಚಿಸಿ ಸಂಸ್ಕೃತಿಯನ್ನು ಅನಾವರಣಗೊಳಿಸುತ್ತಾರೆ, ಯಕ್ಷಕಲಾವಿದನೊರ್ವ ವೈಯಕ್ತಿಕ ಬದುಕಿನ ಬಗ್ಗೆ ಮರೆತು ಕಲೆಗೆ ಜೀವತುಂಬಿ ಸ್ವಸ್ಥ ಸಮಾಜ ನಿರ್ಮಾಣ ಕಾಯಕದಲ್ಲಿ ಪಾತ್ರ ವಹಿಸುತ್ತಾನೆ. ಅಂತಹ ಕಲಾವಿದರನ್ನು ಗುರುತಿಸಿ ನಾರಾಯಣಪ್ಪ ಉಪ್ಪೂರ ಹಾಗೂ ಕೋಟ ವೈಕುಂಠ ಪ್ರಶಸ್ತಿ ನೀಡಿರುವುದು ಅರ್ಥಪೂರ್ಣ ಎಂದರು. ಸಭೆಯ ಅಧ್ಯಕ್ಷತೆಯನ್ನು ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ವಹಿಸಿದ್ದರು. ಇದೇ ವೇಳೆ ಶ್ರೀ ಕ್ಷೇತ್ರದಿಂದ ನೀಡುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕ 2025 ಇದರ ಅಂಗವಾಗಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವು ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಶ್ರೀ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ನಿಹಾರಿಕಾ ಆರ್. ದೇವಾಡಿಗ ಅವರು ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಮ್ಮೆ ತಂದಿರುತ್ತಾರೆ. ಸಾಂಸ್ಕೃತಿಕ, ಧಾರ್ಮಿಕ ಹಾಗೂ ನೈತಿಕ ಮೌಲ್ಯಗಳನ್ನು ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರೂ, ನಿಹಾರಿಕಾ ತೋರಿದ ಸ್ಪಷ್ಟಪಾಠ, ಸ್ವರಮಾಧುರ್ಯ ಮತ್ತು ಗೀತಾ ಶ್ಲೋಕಗಳ ಶುದ್ಧಉಚ್ಚಾರಣೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈಕೆ ಬೈಂದೂರು ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರ ದೇವಾಡಿಗ ಹಾಗೂ ಶಿಕ್ಷಕಿಯಾದ ರವಿಕಲಾ ದೇವಾಡಿಗ ದಂಪತಿಯ ಪುತ್ರಿ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕವೃಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ರೀಡೆ ದೈಹಿಕ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳುವಲ್ಲಿ ಸಹಕಾರಿ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಕೀರ್ತಿ ಪಡೆಯಿರಿ, ಜನತಾ ವಿದ್ಯಾ ಸಂಸ್ಥೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ವಿದ್ಯಾರ್ಥಿ ಪ್ರತಿಭೆಗಳಿದ್ದಾರೆ. ಪ್ರತಿಭೆಗಳಿಗೆ ಸೂಕ್ತ ವೇದಿಕೆ ಜನತಾ ಸಂಸ್ಥೆಯಲ್ಲಿ ದೊರಕುತ್ತಿದೆ ಎಂದು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್ ಹೆಗ್ಡೆ ಹೇಳಿದರು. ಅವರು ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಖೇಲೋ ಜನತಾ ಕಾರ್ಯಕ್ರಮದ ಧ್ವಜಾರೋಹಣ ಗೈದು ಶುಭ ಹಾರೈಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೆರಂಜಾಲು ಇಲ್ಲಿಯ ಪ್ರಾಂಶುಪಾಲರಾದ ಕಮಲಾ ಕೆ.ವಿ. ಮಾತನಾಡಿ, ಕ್ರೀಡಾ ಉತ್ಸವ ನಮ್ಮ ಜೀವನಕ್ಕೆ ಜೀವನೋತ್ಸಾಹ ತಂದು ಕೊಡುತ್ತದೆ.ಎಲ್ಲ ರಂಗದಲ್ಲೂ ಸಿಕ್ಕಿರುವ ಅವಕಾಶ ಉಪಯೋಗಿಸಿಕೊಳ್ಳಿ. ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಜೊತೆಯಲ್ಲಿ ಕ್ರೀಡೆಗೂ ಅವಕಾಶ ಮಾಡಿಕೊಟ್ಟಿದ್ದೇವೆ. ಕ್ರೀಡೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಜಿಲ್ಲೆ 3182 ವಲಯ 01ರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಡೆದ ಎಲ್ಲಾ ಸ್ಪರ್ಧೆಗಳಲ್ಲಿ ರೋಟರಿ ಕ್ಲಬ್ ಬೈಂದೂರು ಬಹುಮಾನ ಗಳಿಸುವುದರ ಮೂಲಕ ವಲಯ 1 ಸಾಂಸ್ಕೃತಿಕ ಚಾಂಪಿಯನ್ ಆಗಿದೆ ಇಲ್ಲಿನ ಆನಗಳ್ಳಿ ರೆಸಾರ್ಟ್ ನಲ್ಲಿ, ರೋಟರಿ ಕುಂದಾಪುರ ಸೌತ್ ಆಯೋಜನೆಯಲ್ಲಿ ನಡೆದ ವಲಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ರಿಧಮ್’ ನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಜಾನಪದ ಗೀತೆಯಲ್ಲಿ ಪೂರ್ಣಿಮಾ ಪೈ ಪ್ರಥಮ ಸ್ಥಾನ, ಸಿನಿಮಾ ಗೀತೆಯಲ್ಲಿ ಜತೀಂದ್ರ ಮರುವಂತೆ ಪ್ರಥಮ ಸ್ಥಾನ, ಏಕವ್ಯಕ್ತಿ ನೃತ್ಯದಲ್ಲಿ ನಾಗೇಂದ್ರ ಬಂಕೇಶ್ವರ್ ಪ್ರಥಮ ಸ್ಥಾನ, ಏಕಪಾತ್ರ ಅಭಿನಯ ಸುಬ್ರಹ್ಮಣ್ಯ ಜಿ. ದ್ವಿತೀಯ ಸ್ಥಾನ, ಮಕ್ಕಳ ನೃತ್ಯದಲ್ಲಿ ನಿಧಿ ನಾಗೇಂದ್ರ ತೃತೀಯ ಸ್ಥಾನ, ಯುಗಳ ಗೀತೆಯಲ್ಲಿ ರಾಘವೇಂದ್ರ ಉಡುಪ ಮತ್ತು ಪೂರ್ಣಿಮ ಪೈ ದ್ವಿತೀಯ ಸ್ಥಾನ, ಗುಂಪುಗಾಯನ ಪ್ರಥಮ ಗುಂಪು ನೃತ್ಯ ಪ್ರಥಮ ಹಾಗೂ ನಾಟಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ನಡೆದ ಎಲ್ಲಾ 9…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್ ಶಾಲಾಮಟ್ಟದ ಹ್ಯಾಂಡ್ಬಾಲ್ ಟೂರ್ನಮೆಂಟ್ ’ಪಾಸ್ ಮಾಸ್ಟರ್’ ಹೆಸರಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂತಾರಾಷ್ಟ್ರೀಯ ಟೆನಿಸ್ ಕೋಚರ್ ಆದ ಅಶ್ವಿನ್ ಕುಮಾರ್ ಪಡುಕೋಣೆ ಅವರು ಮಾತನಾಡಿ, ಈ ಶಾಲೆಯ ಪ್ರಾಂಶುಪಾಲರು ಆಟಗಾರರಿಗೆ ಉತ್ತಮವಾದ ಪ್ರೋತ್ಸಾಹಕರು. ಆಟಗಾರರು ತಮ್ಮ ಆಸಕ್ತಿಯಿಂದ, ತಮ್ಮ ಸಂತೋಷಕ್ಕಾಗಿ ಆಡಬೇಕು. ಪುನಃ ಪುನಃ ಆಟವಾಡಿ ಅಭ್ಯಾಸ ಮಾಡುವುದರಿಂದ ದೇಹವು ಅದಕ್ಕೆ ಸಿದ್ಧವಾಗುತ್ತದೆ. ವಿದ್ಯಾರ್ಥಿಗಳು ಹೇಗೆ ಮೆದುಳಿಗೆ ಕೆಲಸ ನೀಡುತ್ತಾರೋ ಹಾಗೆಯೇ ದೇಹದ ಎಲ್ಲಾ ಭಾಗಗಳಿಗೂ ಕೆಲಸ ನೀಡಬೇಕು. ದೇಹದ ಆರೋಗ್ಯಕ್ಕೆ ಯೋಗ್ಯವಾದ ಆಹಾರವನ್ನಷ್ಟೇ ಸ್ವೀಕರಿಸಬೇಕು ಎಂದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಕಾರ್ಯಕ್ರಮದ ಅಧ್ಯಕ್ಷರಾಗಿ ಮಾತನಾಡಿ, ನಾಡಿನ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರತರುವ ಸಲುವಾಗಿ, ಮಕ್ಕಳ ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಈ ಸ್ಪರ್ಧೆಗಳು ನಡೆಸಲ್ಪಡುತ್ತವೆ. ಮಕ್ಕಳ ಸತತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶಿರೂರು ಗ್ರಾಮದ ಸರಕಾರಿ ಹಾಡಿಯಲ್ಲಿ ಅಂದರ್-ಬಹರ್ ಇಸ್ಪೀಟ್ ಜುಗಾರಿ ನಿರತ 6 ಮಂದಿಯನ್ನು ಬೈಂದೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ತಿಮ್ಮೇಶ್ ಮತ್ತು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ, ಆರೋಪಿಗಳಾದ ಶೇಖರ್ ಪಡುವರಿ, ಹರೀಶ್ ನಾಯ್ಕ ಭಟ್ಕಳ, ದೇವೇಂದ್ರ ಜಟ್ಟಪ್ಪ ನಾಯ್ಕ ಭಟ್ಕಳ, ಅಶೋಕ ವೆಂಕಟೇಶ್ ನಾಯ್ಕ ಭಟ್ಕಳ, ನಾಗಪ್ಪ ಗೋವಿಂದ ನಾಯ್ಕ ಭಟ್ಕಳ, ದಿವಾಕರ ಶಿರೂರು ಎಂಬವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳಿಂದ ನಗದು 24,010, 3 ಬೈಕ್, 1 ಸ್ಕೂಟರ್, ಇಸ್ಪೀಟ್ ಎಲೆ ಸ್ವಾಧಿ ನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
