Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಲ್ಪಾಡಿ ಅರಣ್ಯ ಘಟಕದ ಉಪವಲಯ ಅರಣ್ಯಾಧಿಕಾರಿ ಹೇಮಾ ಅವರು ಅರಣ್ಯ ಪಾಲಕ ರಾಘವೇಂದ್ರ ಅವರ ಬೈಕಿನ ಹಿಂಬದಿ ಕುಳಿತು, ಹೆಬ್ರಿ ತಾ। 9ನೇ ಮೈಲುಕಲ್ಲು ಬಳಿ ಅರಣ್ಯ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭ ಗಣೇಶ ಅವರು ಚಲಾಯಿಸುತ್ತಿದ್ದ ಪಿಕಪ್, ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕಿನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡರು. ಇಬ್ಬರನ್ನು ಸ್ಥಳೀಯರು ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.      ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಉಡುಪಿ ವತಿಯಿಂದ ಗಿರಿಜನ ಉಪಯೋಜನೆಯಡಿ ಗ್ರಾಮೀಣ ಭಾಗದ ಪರಿಶಿಷ್ಠ ಪಂಗಡದ ರೈತರಿಗೆ ಶೇ.90 ರಷ್ಟು ಸಹಾಯಧನದೊಂದಿಗೆ 10+1 ಕುರಿ/ಮೇಕೆ ಘಟಕ ಪೂರೈಕೆ ಯೋಜನೆಯನ್ನು ಅನುಷ್ಟಾನಗೊಳಿಸಲು ಪರಿಶಿಷ್ಠ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು, ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳನ್ನು ಹಾಗೂ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಇಲ್ಲದೇ ಇರುವ ಜಿಲ್ಲೆ /ತಾಲೂಕುಗಳಲ್ಲಿಯೂ ಸಹ ಕುರಿ ಸಾಕಾಣಿಕೆದಾರರುಗಳನ್ನು ಫಲಾನುಭವಿಗಳನ್ನಾಗಿ  ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮದ ವ್ಯಾಪ್ತಿಯಲ್ಲಿರುವ ಪಶು ಆಸ್ಪತ್ರೆ / ಪಶು ಚಿಕಿತ್ಸಾಲಯ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಉಡುಪಿ ದೂರವಾಣಿ ಸಂಖ್ಯೆ: 9449157129 ಅನ್ನು ಸಂಪರ್ಕಿಸಬಹುದಾಗಿದೆ ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ   ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಹೊಸದಾಗಿ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ (ನಿ) ಸ್ಥಾಪನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘ ಸ್ಥಾಪನೆಯಿಂದ ಕಾರ್ಮಿಕರು, ಹೊರ ಗುತ್ತಿಗೆದಾರರು, ವಿವಿಧ ಆರ್ಥಿಕ ಲಾಭಗಳನ್ನು ಪಡೆಯಲು ಅನುಕೂಲವಾಗುವ ದರ ಜೊತೆಗೆ ಸರಕಾರದ ವಿವಿಧ ಇಲಾಖೆಗಳು ಹಾಗೂ ಇವುಗಳ ಅಧೀನದಲ್ಲಿ ಬರುವ ನಿಗಮ ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರ ಸೇವೆಗಳನ್ನು ಒದಗಿಸಲು ಅನುಕೂಲವಾಗಲಿದೆ. ಹೊರಗುತ್ತಿಗೆದಾರರ ವೇತನ ಪಾವತಿ, ಇ.ಎಸ್.ಐ, ಪಿ.ಎಫ್ ಮುಂತಾದ ಶಾಸನಾತ್ಮಕ ಸೌಲಭಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.          ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಇಂಡಿಯನ್‌ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದೊಂದಿಗೆ ಎಚ್‌ಐವಿ / ಏಡ್ಸ್ ಅರಿವು ಕಾರ್ಯಕ್ರಮ ಬುಧವಾರದಂದು ನಡೆಯಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಇಂದಿನ ಯುವ ಸಮೂಹ ಹೇಗೆ ತಮ್ಮನ್ನು ಸಮಾಜದ ಆರೋಗ್ಯವಂತ ಪೀಳಿಗೆಯಾಗಿ ಮಾರ್ಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಸರಕಾರಿ ತಾಲ್ಲೂಕು ಆಸ್ಪತ್ರೆಯ ಕೌನ್ಸಿಲರ್ ಆಗಿರುವ ನಳಿನಾಕ್ಷಿ ಅವರು ಎಚ್‌ಐವಿ ಹಾಗೂ ಏಡ್ಸ್ ಬಗ್ಗೆ ಸವಿಸ್ತಾರವಾಗಿ ಮಾಹಿತಿ ತಿಳಿಸಿ ಅದರ ಮುನ್ನೆಚ್ಚರಿಕೆಯ ಆವಶ್ಯಕತೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದದರು. ಕಾರ್ಯಕ್ರಮದ ಘನ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸಿನಲ್ಲಿ ಎಚ್‌ಐವಿಯ ಅರಿವು ಅತ್ಯವಶ್ಯಕ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಪೌಷ್ಠಿಕ ಆಹಾರಗಳ ಸೇವನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಅವರುಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತಾಯಿ ಮರಣ ತನಿಖಾ ಸಮಿತಿ ಸಭೆ, ಜಿಲ್ಲಾ ಲಸಿಕಾ ಕಾರ್ಯಪಡೆ ಸಮಿತಿ ಸಭೆ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಯಿ ಮತ್ತು ಮಕ್ಕಳ ಮರಣವನ್ನು ತಡೆಗಟ್ಟಲು ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಇವುಗಳ ಜೊತೆಗೆ ತಮ್ಮ ಮಗುವಿನ ಆರೈಕೆ ಕೈಗೊಳ್ಳುವ ಕುರಿತು ಮಾಹಿತಿಗಳನ್ನು ಒದಗಿಸಬೇಕು ಎಂದರು. ಬಾಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ರನ್ನರ್ಸ್ ಕ್ಲಬ್ ಮತ್ತು  ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ಸಹಯೋಗದಲ್ಲಿ ಆಸ್ಪತ್ರೆಯ 101 ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ ‘ಉಡುಪಿ ಮ್ಯಾರಥಾನ್-2024’ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, 14 ವರ್ಷದೊಳಗಿನವರ ವಿಭಾಗದಲ್ಲಿ 8 ನೇ ತರಗತಿಯ ಸಿದ್ದಲಿಂಗ ವಾಲೀಕಾರ್ ತೃತೀಯ ಸ್ಥಾನದೊಂದಿಗೆ 2000 ರೂಪಾಯಿಗಳ ನಗದು ಬಹುಮಾನವನ್ನು ಪಡೆದರು. ದೇಶದಾದ್ಯಂತ ಸುಮಾರು 1500 ಸ್ಪರ್ಧಿಗಳು ವಿವಿಧ ವಿಭಾಗಗಳಲ್ಲಿ ಇದರಲ್ಲಿ ಸ್ಪರ್ಧಿಸಿದ್ದು, ಮುಂಜಾನೆ 5 ಗಂಟೆಗೆ ಮಲ್ಪೆಯ ಸೀವಾಕ್ ನಿಂದ ಆರಂಭಗೊಂಡು ಪಡುಕೆರೆ, ಉದ್ಯಾವರ, ಮಟ್ಟು ಮಾರ್ಗವಾಗಿ ಸಾಗಿ, ಪುನಃ ಮಲ್ಪೆ ಸೀ ವಾಕ್ ನಲ್ಲಿ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ ಸುಶೀಲ್ ಜಾತಣ್ಣ “ಚಿಕಿತ್ಸೆಯ ಜೊತೆಗೆ ನಾವು ರೋಗಗಳನ್ನು ತಡೆಗಟ್ಟುವ ಬಗ್ಗೆಯೂ ಗಮನ ಹರಿಸುತ್ತೇವೆ. ವ್ಯಾಯಾಮವು ಅನೇಕ ಪ್ರಯೋಜನಗಳನ್ನು ಹೊಂದಿದೆ. ಮುಖ್ಯವಾಗಿ ಇಂದಿನ ಜೀವನಶೈಲಿಯಿಂದ ಹೃದ್ರೋಗ ಹೆಚ್ಚುತ್ತಿದೆ. ಈ ಮ್ಯಾರಥಾನ್ ಮೂಲಕ ದೈಹಿಕ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಹೆಗ್ಡೆಯವರ ಮನೆ ಕಂಬಳಗದ್ದೆಯಲ್ಲಿ ಅನುವಂಶಿಕವಾಗಿ ನಡೆದು ಬಂದ “ಸಾಂಪ್ರದಾಯಕ ಕಂಬಳೋತ್ಸವ”ವು ಡಿಸೆಂಬರ್ 06ರ ಶುಕ್ರವಾರದಂದು ವಿಜೃಂಭಣೆಯಿಂದ ಜರುಗಲಿದೆ. ಕಂಬಳದಲ್ಲಿ ಹಗ್ಗ ಅತೀ ಕಿರಿಯ ವಿಭಾಗ, ಹಗ್ಗ ಕಿರಿಯ ವಿಭಾಗ, ಹಗ್ಗ ಹಿರಿಯ ವಿಭಾಗ ಹಾಗೂ ಹಲಗೆ ಮುಕ್ತ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತ ಕೋಣಗಳಿಗೆ ಹಾಗೂ ಕೋಣ ಓಡಿಸುವವರಿಗೆ ಬಹುಮಾನ ನೀಡಲಾಗುತ್ತದೆ. ಈ ವೇಳೆ ಕಂಬಳಾಭಿಮಾನಿಗಳು ಭಾಗವಹಿಸುವಂತೆ ತಗ್ಗರ್ಸೆ ಕಂಠದಮನೆ ಟಿ. ನಾರಾಯಣ ಹೆಗ್ಡೆ ಹಾಗೂ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುತ್ತಿರುವ ಬ್ರಹತ್ ವಿಜ್ಞಾನ ವಾಣಿಜ್ಯ ಕಲೆ ಪರಿಸರ ಸಾಮಾನ್ಯ ಜ್ಞಾನ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಕೈಗಾರಿಕಾ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನ ಶಿಬಿರ, ವಿದ್ಯಾರ್ಥಿಗಳ ವ್ಯಾಪಾರ ಮಳಿಗೆ ಮತ್ತು ಗ್ರಂಥಾಲಯದ ಕಲಾ ಗ್ಯಾಲರಿಯನ್ನು ಗಂಗೊಳ್ಳಿ ಉದ್ಯಮಿಯಾದ ದತ್ತಾನಂದ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಪ್ರಭಾಕರ, ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯ ಅಂತರದಲ್ಲಿ ಯಾವುದೇ ಅಂಗಡಿ, ಹೋಟೆಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಅವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ ಕೋಟ್ಪಾ ಕಾಯಿದೆ ಅನುಷ್ಠಾನ ಸಭೆಯಲ್ಲಿ ಶಾಲಾ- ಕಾಲೇಜುಗಳ ವ್ಯಾಪ್ತಿಯ ನೂರು ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ. ಆದರೆ ಬೈಂದೂರು ತಾಲೂಕಿನ ನಾವುಂದ, ಶಿರೂರು, ಹಕ್ಲಾಡಿ, ಉಪ್ಪುಂದ ಗ್ರಾಮ ಪಂಚಾಯಿತಿ ಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದರು ಸಹ ಬರಿ ಎಚ್ಚರಿಕೆ ಹಾಗೂ ತಿಳುವಳಿಕೆ ನೋಟಿಸ್ ಅನ್ನು…

Read More