Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಒಂದು ವರ್ಷದಲ್ಲಿ ಮೊಬೈಲ್ ಕಳೆದು ಕೊಂಡು ಸಿಇಐಆರ್ ಪೋರ್ಟಲ್ ಮೂಲಕ ಪೊಲೀಸರಿಗೆ ದೂರು ನೀಡಿದವರ 20 ಮೊಬೈಲ್ ಫೋನುಗಳನ್ನು ಕುಂದಾಪುರ ಪೊಲೀಸರು ಪತ್ತೆ ಮಾಡಿದ್ದು ಪೊಲೀಸ್ ಠಾಣೆಯಲ್ಲಿ ಮೊಬೈಲ್ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ದಾಖಲಾದ ದೂರು ಆಧರಿಸಿ ಪ್ರಕರಣದ ಬೆನ್ನುಬಿದ್ದ ಪೊಲೀಸರು ಸಿಇಐಆರ್ (ಸೆಂಟ್ರಲ್ ಇಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್) ಪೋರ್ಟಲ್ ಮೂಲಕ ತನಿಖೆ ಕೈಗೊಂಡು 20 ಮೊಬೈಲ್ಗಳನ್ನು ಪತ್ತೆ ಮಾಡಿದ್ದಾರೆ. ಇದರಲ್ಲಿ ಒಂದು ಮೊಬೈಲ್ ಜಾರ್ಖಂಡ್ ಹಝಾರಿಭಾಗ್ ಎಂಬಲ್ಲಿ ಮತ್ತು ಇನ್ನೊಂದು ಮೊಬೈಲನ್ನು ಆಂಧ್ರಪ್ರದೇಶದ ಗೊಂಡ ಎಂಬಲ್ಲಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿ, ಬೆಂಗಳೂರು ಸಹಿತ ಕರ್ನಾಟಕದ ವಿವಿಧೆಡೆ ಗಳಿಂದ ಉಳಿದ ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಎಸ್.ಟಿ.ಸಿದ್ಧಲಿಂಗಪ್ಪ ನಿರ್ದೇಶನದಲ್ಲಿ ಕುಂದಾಪುರ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ ನೇತೃತ್ವದಲ್ಲಿ, ಕುಂದಾಪುರ ನಗರ ಠಾಣೆ ನಿರೀಕ್ಷಕ ನಂದಕುಮಾರ್, ಉಪ ನಿರೀಕ್ಷಕರಾದ ವಿನಯ್ ಎಂ. ಕೊರ್ಲಹಳ್ಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ |ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಯಾಗಿರುವ ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಮಂಗಳೂರಿನ ಥಿಯೋಲಾಜಿಕಲ್ ಸಂಶೋಧನಾ ಕೇಂದ್ರದ ಮೂಲಕ ಪ್ರಸಿದ್ಧ ಅಂಕಣ ಬರಹಗಾರ, ಲೇಖಕ, ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ| ನರೇಂದ್ರ ರೈ ದೇರ್ಲ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕ ಕರಾವಳಿಯ ಪ್ರಾದೇಶಿಕ ಅಧ್ಯಯನದ ವಿಭಿನ್ನ ಪ್ರವೃತ್ತಿಗಳು” ಎಂಬ ವಿ?ಯದ ಕುರಿತು ಸಿದ್ಧಪಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಪದವಿ ನೀಡಲಾಗಿದೆ. ಇವರು ೨೦೧೪ರಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ “ಗ್ರಾಮ ಚರಿತ್ರೆ ಕೋಶ” ಯೋಜನೆಗೆ ಹಿರಿಯ ಜಾನಪದ ವಿದ್ವಾಂಸ ಪ್ರೊ| ಎ.ವಿ. ನಾವಡ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ತಾಲೂಕಿನ ಕ್ಷೇತ್ರತಜ್ಞರಾಗಿ ಕಾರ್ಯನಿರ್ವಹಿಸಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳಲ್ಲಿ ನಿರತರಾಗಿರುವ ಇವರಿಗೆ ನೇಶನ್ ಬಿಲ್ಡರ್, ಯುವರತ್ನ ಪ್ರಶಸ್ತಿಗಳು ಲಭಿಸಿವೆ. ಇವರು ಕ್ರೋಢ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.10: ಕುಂದಾಪುರ ನಗರದ ಒಳಗೆ ವಾಹನ ದಟ್ಟಣೆ ಹೆಚ್ಚಿರುವ ಹಿನ್ನೆಲೆ, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳಾದ 1989ರ ಕಲಂ 221(ಎ)(2) &(5) ರ ಅನ್ವಯ ವಾಹನ ದಟ್ಟನೆ ಇರುವ ಈ ಕೆಳಕಂಡ ಮಾರ್ಗಗಳ ರಸ್ತೆಗಳಲ್ಲಿ ಏಕಮುಖ ಸಂಚಾರ ರಸ್ತೆ ಹಾಗೂ ಘನ ವಾಹನಗಳ ಸಂಚಾರ ನಿಷೇಧ ರಸ್ತೆಯನ್ನಾಗಿ ಮಾರ್ಪಡಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಕುಂದಾಪುರ ಪುರಸಭಾ ವ್ಯಾಪ್ತಿಯ ಚಿಕ್ಕನ್ ಸ್ಟಾಲ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿರುತ್ತದೆ. ಕುಂದಾಪುರ ಪುರಸಭೆ ವ್ಯಾಪ್ತಿಯ ಮಾಸ್ತಿಕಟ್ಟೆ ರಸ್ತೆಯಲ್ಲಿ ಪಶ್ಚಿಮದಿಂದ ಪೂರ್ವಕ್ಕೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಪೂರ್ವದಿಂದ ಪಶ್ಚಿಮಕ್ಕೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಕುಂದಾಪುರ ಶಾಸ್ತ್ರಿ ಸರ್ಕಲ್‌ನಿಂದ ಹೊಸ ಬಸ್ ನಿಲ್ದಾಣದ ವರೆಗೆ ಪುರಸಭೆ ರಸ್ತೆಯ ಪಶ್ಚಿಮ ಬದಿಯ ರಸ್ತೆಯಲ್ಲಿ ಎಲ್ಲಾ ವಾಹನಗಳು ಉತ್ತರಾಭಿಮುಖವಾಗಿ ಸಂಚರಿಸಬೇಕು. ಹೊಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವವನ್ನು ಜನವರಿ 14ರ ಭಾನುವಾರದಂದು ಸಂಸ್ಥೆಯ ಆವರಣದಲ್ಲಿ ಜರುಗಲಿದೆ. ಈ ಸುಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆ ಹಾಗೂ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಲಾಂಛನ ಅನಾವರಣಗೊಳ್ಳಲಿದೆ. ವಿಶ್ವಶಾಂತಿ ಸಂದೇಶ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಹೇಳಿದರು. ಅವರು ಕುಂದಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್, ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಶಾಸಕ ಕಿರಣ್ ಕುಮಾರ್ ಕೊಡ್ಲಿ ಭಾಗವಹಿಸಲಿದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ ಹೆಸರಾಂತ ಪರಿಸರವಾದಿಗಳಾದ ಪದ್ಮಶ್ರೀ ತುಳಸಿ ಗೌಡ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂಇಐಎಫ್ ಸಂಸ್ಥೆಯ ಅಧ್ಯಕ್ಷರಾದ ಮೂಸಬ್ಬ.ಪಿ. ಬ್ಯಾರಿ ಇವರು ಸನ್ಮಾನಿತಗೊಳ್ಳಲಿದ್ದಾರೆ ಎಂದರು. 1906ರಲ್ಲಿ ಶಿಕ್ಷಣದ ಮೊಳಕೆ ಎಂಬಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರಗತಿಗೆ ಮತ್ತು ಸ್ಪರ್ಧಾತ್ಮಕ ಜಗತ್ತಿಗೆ ಯುವ ನಾಯಕರನ್ನು ರೂಪಿಸುವ ನಿಟ್ಟಿನಲ್ಲಿ ಮತ್ತು ಯುವ ನಾಯಕತ್ವದ ಮಹತ್ವ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ಕಾಲೇಜು ಐ.ಎಮ್.ಜಿ.ಐಸ್.ಸಿ ಯಂಗ್ ಲೀಡರ್ ಅವಾರ್ಡ್ 2024 ಎಂಬ ಸ್ಪರ್ಧೆಯನ್ನು ನಡೆಯುತ್ತಿದ್ದು ಜನವರಿ 12ರಂದು ಮೂಡ್ಡಕಟ್ಟೆ ಕ್ಯಾಂಪಸ್ ಅಂತಿಮ ಸುತ್ತಿನ ಸ್ಪರ್ಧೆ ನಡೆಯಲಿದೆ ಎಂದು ಪ್ರಾಂಶುಪಾಲರಾದ ಡಾ. ಪ್ರತಿಭಾ ಪಟೇಲ್ ಎಮ್ ಅವರು ಹೇಳಿದರು. ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಯುವ ನಾಯಕತ್ವವನ್ನು ಉತ್ತೇಜಿಸುವುದು ಮತ್ತು ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಸ್ವರ್ಧೆಯ ಉದ್ದೇಶವಾಗಿದೆ. ಒಬ್ಬ ವಿದ್ಯಾರ್ಥಿ ಯುವ ನಾಯಕನಾಗಿ ರೂಪುಗೊಳ್ಳಬೇಕಾದರೆ ಅವನಿಗೆ ಇರಬೇಕಾದ ಅರ್ಹತೆ ಮತ್ತು ತಯಾರಿ ಹೇಗಿರಬೇಕು ಮತ್ತು ಸಂವಹನ ಕಲೆಯು ವಿದ್ಯಾರ್ಥಿ ಜೀವನದಲ್ಲಿ ಹೇಗೆ ಮಹತ್ವದ ಪಾತ್ರ ವಹಿಸುತ್ತದೆ ಎನ್ನುವುದು ಸ್ಪರ್ಧೆ ಆಯೋಜನೆಯ ಪರಿಕಲ್ಪನೆ ಎಂದರು. ಸಂಸ್ಥೆಯ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ| ರಾಮಕೃಷ್ಣ ಹೆಗ್ಡೆ ಅವರು ಮಾತನಾಡಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿನೂತನ ಬಗೆಯ ಸಂಗೀತ ರಸಮಂಜರಿಯ ಮೂಲಕ ಸಂಗೀತ ಪ್ರೀಯರ ಮನಗೆದ್ದ ಇನಿದನಿ ಕಾರ್ಯಕ್ರಮ ಜನವರಿ 14ರ ಸಂಜೆ 6 ಗಂಟೆಗೆ ಕುಂದಾಪುರ ಬೋರ್ಡ್ ಹೈಸ್ಕೂಲ್ ಆವರಣದ ಬಯಲು ರಂಗಮಂದಿರದಲ್ಲಿ ಜರುಗಲಿದ್ದು, ಪ್ರತಿಭಾರಿಯಂತೆಯೇ ಹಲವು ವಿಶೇಷತೆಗಳಿಂದ ಕೂಡಿರಲಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಹೇಳಿದರು. ಅವರು ಮಂಗಳವಾರ ಕುಂದಾಪುರ ಪ್ರೆಸ್‌ಕ್ಲಬ್‌ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಈ ಭಾರಿಯ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಬೆಂಗಳೂರಿನ ಗಾಯಕ/ಗಾಯಕಿಯರಾದ ಅಜೇಯ್ ವಾರಿಯರ್, ಮೋಹನಕೃಷ್ಣ, ಶಶಿಕಲಾ ಸುನೀಲ್, ಸಮನ್ವಿತಾ ಶರ್ಮ, ಭಾಗವಹಿಸಲಿದ್ದಾರೆ. ಇವರೊಂದಿಗೆ ಮಂಗಳೂರಿನ ವೈ ಎನ್. ರವೀಂದ್ರ, ಸ್ಥಳೀಯರಾದ ಅಶೋಕ ಸಾರಂಗ್, ಯುವ ಪ್ರತಿಭೆ ಧಾರಿಣಿ ಕುಂದಾಪುರ, ಪ್ರಾಪ್ತಿ ಹೆಗ್ಡೆ ಹಾಗೂ ಕಮಲ್ ಕಿಶೋರ್ ಕುಂದಾಪುರ ಭಾಗವಹಿಸಲಿದ್ದು, ಹಿಮ್ಮೇಳದಲ್ಲಿ ರಾಜೇಶ್ ಭಾಗವತ್-ತಬಲಾ, ವಾಮನ್ ಕಾರ್ಕಳ-ಪ್ಯಾಡ್ ಮತ್ತು ಡ್ರಮ್ಸ್, ಗಣೇಶ್ ನವಗಿರಿ-ಕಾಂಗೋ, ಭಾಸ್ಕರ ಕುಂಬ್ಳೆ- ಡೋಲಕ್, ಶಿಜಿಮೂನ್ ಕ್ಯಾಲಿಕಟ್ ಹಾಗೂ ದೀಪಕ್ ಶಿವಮೊಗ್ಗ-ಕೀಬೋರ್ಡ್, ವರುಣ್-ಕೊಳಲು, ಸುಮುಖ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಇಲ್ಲಿ 25 ವರ್ಷಗಳ ಸಂವತ್ಸರಗಳನ್ನ ಅಂಗವಾಗಿ ಆಯೋಜಿಸಲಾದ ರೌಪ್ಯೋತ್ಸವದ ಉದ್ಘಾಟನಾ ಸಮಾರಂಭವವು ಅದ್ದೂರಿಯಾಗಿ ನೆರವೇರಿತು. ಸಮಾರಂಭವನ್ನು ಉದ್ಘಾಟಿಸಿದ ಉದ್ಯಮಿ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಎಚ್.ಎಸ್. ಶೆಟ್ಟಿ ಅವರು ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 25 ವರ್ಷಗಳ ಪ್ರಗತಿಯನ್ನು ಕೊಂಡಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ನಿವೃತ್ತ ಲೋಕಾಯುಕ್ತರಾದ ಎನ್. ಸಂತೋಷ ಹೆಗ್ಡೆ ಅವರು ಮಾತನಾಡಿ ನಮ್ಮ ಸಮಾಜದಲ್ಲಿ ತುಂಬಿಕೊಂಡಿರುವ ಭ್ರಷ್ಟಾಚಾರ, ಅನ್ಯಾಯ, ಅಧರ್ಮ, ಮೋಸ,ವಂಚನೆಗಳ ಬಗ್ಗೆ ಖೇದವನ್ನು ವ್ಯಕ್ತಪಡಿಸುತ್ತಾ ಪೋಷಕರು ತಮ್ಮ ಮಕ್ಕಳಿಗೆ ಕೇವಲ ಶಿಕ್ಷಣವನ್ನು ನೀಡಿದರೆ ಸಾಲದು ಮಕ್ಕಳಲ್ಲಿ ಒಳ್ಳೆಯ ಗುಣಗಳನ್ನು ಬಿತ್ತಿ ಮಾನವರಂತೆ ಬದುಕುವ ಕಲೆಯನ್ನು ಕಲಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಾಚಾರ್ಯದ್ವಯರು ಏಳುಬೀಳುಗಳ ಬಗ್ಗೆ ಮಾತನಾಡುತ್ತಾ ಇಪ್ಪತ್ತೈದು ವರ್ಷಗಳ ಪ್ರಯಾಣದಲ್ಲಿ ತಮ್ಮೊಂದಿಗೆ ಕೈಜೋಡಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಿದರು. ರೌಪ್ಯೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಡುಕೋಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಜಿ ಫೌಂಡೇಶನ್, ಕುಂದಾಪುರ ಇವರ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಾಡ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪಡುಕೋಣೆ, ಶ್ರೀ ಮಹಾವಿಷ್ಣು ಫ್ರೆಂಡ್ಸ್ ಸರ್ಕಲ್, ಪಡುಕೋಣೆ ಫ್ರೆಂಡ್ಸ್ ಪಡುಕೋಣೆ, ವಿಶ್ವ ದೇವಾಡಿಗ ಮಹಾ ಮಂಡಲ ದೇವಾಡಿಗ ಅಕ್ಷಯ ಕಿರಣ ಸೇವಾ ಫೌಂಡೇಶನ್ ಪಡುಕೋಣೆ ಎಜುಕೇಶನ್ & ಸ್ಪೋಟ್ಸ್ ಪ್ರಮೋಟರ್ಸ್, ನಾಡ, ಜನ ಶಕ್ತಿ ಸೇವಾ ಟ್ರಸ್ಟ್ (ರಿ.), ನಾಡ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು. ಉದ್ಯಮಿ ಡಾ. ವಿಜಯಕೃಷ್ಣ ಪಡುಕೋಣೆ ಅವರು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರಿಗೂ ಅಗತ್ಯವಾಗಿದ್ದು,ಕಾಲ ಕಾಲಕ್ಕೆ ಸೂಕ್ತವಾದ ತಪಾಸಣೆ ಮಾಡಿಕೊಂಡಾಗ ಮಾತ್ರ ಪ್ರಾಥಮಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೊರಗ ಸಮುದಾಯದ ಹಾಡಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಸೇವೆ, ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಂಗಳವಾರ ಮಣಿಪಾಲ ರಜತಾದ್ರಿಯ ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ-ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅನುಷ್ಠಾನ ಕುರಿತ ಅಂತರ್ ಇಲಾಖೆಯ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದರು. ಸರ್ಕಾರ ಆದಿವಾಸಿ ಹಾಗೂ ಬುಡಕಟ್ಟುಗಳ ಜನಾಂಗದವರ ಸಮಗ್ರ ಅಭಿವೃದ್ಧಿ ಸೇರಿದಂತೆ ಅವರುಗಳ ಕಲ್ಯಾಣ ಅಭಿವೃದ್ಧಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕು. ಕೊರಗ ಸಮುದಾಯದವರು ಹೆಚ್ಚಿನ ಜನರು ಅನಕ್ಷರಸ್ಥರೇ ಇರುವ ಹಿನ್ನಲೆಯಲ್ಲಿ ಅವರುಗಳಿಗೆ ಯೋಜನೆಗಳ ಅರಿವು ಮೂಡಿಸಿ ಫಲಾನುಭವಿಗಳಾಗಿಸುವ ಕೆಲಸ ಆಗಬೇಕು ಎಂದರು. ಸರ್ಕಾರವು ವಿಶೇಷ ದುರ್ಬಲ ಬುಡಕಟ್ಟು ಜನಾಂಗದವರು ಹೆಚ್ಚಾಗಿ ವಾಸಿಸುತ್ತಿರುವ ಗ್ರಾಮಗಳನ್ನು ಗುರುತಿಸಿ ಅವರಿಗೆ ಅವಶ್ಯವಿರುವ ಆರೋಗ್ಯ ಸೇವೆಯನ್ನು…

Read More