Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ಕಳವಾಡಿ ಬೈಂದೂರು ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಮತ್ತು ಕಾರ್ಯದರ್ಶಿಯಾಗಿ ಪೂರ್ಣಚಂದ್ರ ಆಯ್ಕೆಯಾಗಿದ್ದಾರೆ. ನೂತನ ಸಮಿತಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ಕಳವಾಡಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಕಳವಾಡಿಯ ಎಂಪಿ.ಕೃಷ್ಣಯ್ಯ ಶೇರುಗಾರ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಯುವಕನೋರ್ವ ಜರ್ಮನಿಯ ಯುವತಿಯನ್ನು ವರಿಸಿದ್ದು, ಹಿಂದೂ ಸಂಪ್ರದಾಯದಂತೆ ಯುವಕನ ಹುಟ್ಟೂರಿನಲ್ಲಿಯೇ ನವಜೋಡಿ ಹಸೆಮಣೆ ಏರಿದ್ದಾರೆ. ಆಜ್ರಿ ಗ್ರಾಮದ ಕರಿಮನೆ ಸುವರ್ಣ ಹಾಗೂ ಪಂಜು ಪೂಜಾರಿ ದಂಪತಿಯ ಪುತ್ರನಾದ ಚಂದನ್ ಹಾಗೂ ಜರ್ಮನಿಯ ಕಾರಿನ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ತಾಲೂಕಿನ ಚಿತ್ತೇರಿ ಚೌಕಳಿಮಕ್ಕಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ವಿವಾಹ ಮಹೋತ್ಸವದಲ್ಲಿ ಎರಡು ಕಡೆಯ ಬಂಧುಗಳು ಉಪಸ್ಥಿತರಿದ್ದು ನವಜೋಡಿಗಳಿಗೆ ಹಾರೈಸಿದ್ದಾರೆ. ಚಂದನ್ ಜರ್ಮನಿಯ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರೊಂದಿಗೆ ಪ್ರೇಮಾಂಕುರವಾಗಿತ್ತು. ಬಳಿಕ ಎರಡೂ ಕುಟುಂಬಿಕರನ್ನು ಒಪ್ಪಿಸಿ ವಿವಾಹವಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಶ್ವಕರ್ಮರು ಸ್ಥಾನಕ್ಕಾಗಿ ಕೆಲಸಮಾಡದೇ ಆತ್ಮ ತೃಪ್ತಿಗಾಗಿ ಕೆಲಸಮಾಡುವವರಾಗಿದ್ದಾರೆ. ರಾಜಕೀಯವಾಗಿ ನಮಗೆ ಯಾವುದೇ ಬೆಂಬಲವಿಲ್ಲದಿದ್ದರೂ ಸರ್ಕಾರವನ್ನು ಅವಲಂಬಿಸದೇ ಸ್ವಂತ ಪ್ರತಿಭೆ, ಬಲ ಹಾಗೂ ಪರಿಶ್ರಮದಿಂದ ಬೆಳೆದು ಸರಕಾರ – ಸಮಾಜಕ್ಕೆ ಕೊಡುಗೆ ನೀಡುವಂತವರಾಗಬೇಕು ಎಂದು ಕಟಪಾಡಿ ಪಡುಕುತ್ಯಾರು ಶ್ರೀಮತ್ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠಾಧಿಪತಿ ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಅವರು ಬೈಂದೂರು ರೋಟರಿ ಭವನದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಬೈಂದೂರು ಇದರ 14ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ, ಆಶೀರ್ವಚಿಸಿ ಮಾತನಾಡಿ ಶಿಕ್ಷಣದ ಜೊತೆಗೆ ದೈವದತ್ತವಾಗಿ ಬಂದಿರುವ ಪಂಚ ಕುಲಕಸುಬನ್ನು ಸರಿಯಾಗಿ ಬಳಸಿ ಬೆಳೆಸಿ ನಮ್ಮ ಮುಂದಿನ ಜನಾಂಗಕ್ಕೆ ದೊಡ್ಡ ಆಸ್ತಿಯನ್ನು ನೀಡುವಂತಾಗಬೇಕು ಎಂದರು. ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರ ಆಚಾರ್ಯ ಮಾತನಾಡಿ, ವಿಶ್ವಕರ್ಮ ಜನಾಂಗಕ್ಕೆ ನೈಪುಣ್ಯತೆಯು ಪರಂಪರಾಗತವಾಗಿ, ರಕ್ತಗತವಾಗಿ ಬಂದಿರುವ ಕಲೆಯಾಗಿದೆ. ಹಲವಾರು ವಿಸ್ಮಯಗಳನ್ನು ಜಗತ್ತಿಗೆ ನೀಡಿರುವ ವಿಶ್ವಕರ್ಮರು ಬೇಲೂರು, ಹಳೆಬೀಡು, ಶ್ರವಣಬೆಳಗೂಳ, ಹಂಪಿ, ಅಜಂತ, ಎಲ್ಲೊರಾ ಮುಂತಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯ 4ನೇ ತರಗತಿಯ ವಿದ್ಯಾರ್ಥಿ ದಿವಿನ್ ಪಿ. ಶೆಟ್ಟಿ ಕಿರಿಯರ ಕರಾಟೆ ವಿಭಾಗದಲ್ಲಿ 35 ಸೆಕೆಂಡ್ನಲ್ಲಿ 50 ನುಂಚಾಕ್ಯೂ ಪಂಚ್ಗಳನ್ನು ಮಾಡಿ ಅತ್ಯಂತ ವೇಗದ ಪಂಚ್ ಮಾಡಿರುವ ಸಾಧನೆಯನ್ನು ಮಾಡಿ 2023-24ನೇ ಸಾಲಿನ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ತನ್ನ ಹೆಸರನ್ನು ದಾಖಲಿಸಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್ ಪ್ರಭಾಕರ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ ಹಾಗೂ ಶಿಕ್ಷಕರು ವಿದ್ಯಾರ್ಥಿಯ ಅಪ್ರತಿಮ ಸಾಧನೆಗೆ ಅಭಿನಂದಿಸಿ ಶುಭಹಾರೈಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂತರಾಷ್ಟ್ರೀಯ ಖ್ಯಾತಿ ವೈಮಾನಿಕ ಹಾಗೂ ಪ್ರವಾಸಿ ಮಾರ್ಗದರ್ಶಿ ಸಂಸ್ಥೆಯಾದ “ದಿ ಮೂಡಿ ಡೆವಿಟ್ ರಿಪೋರ್ಟ್” (The Moodie Davitt Report) ಸಂಸ್ಥೆ 2023ನೇ ಸಾಲಿನ 15 ಸಾಧಕರಲ್ಲಿ ದಿ. ಕೋ. ಮ. ಕಾರಂತರ ಪುತ್ರಿ ಮೈತ್ರೇಯಿ ಕಾರಂತರನ್ನು ಆಯ್ಕೆ ಮಾಡಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಮಾನವೀಯತೆ, ಸೇವಾಗುಣ, ಜನಾಭಿವೃದ್ಧಿ ಕೆಲಸಗಳ ಮೂಲಕ ಸಮಾಜದ ಅಭಿವೃದ್ಧಿಗೆ ಕಾರಣರಾಗುವವರನ್ನು ಮೂಡಿ ಡೆವಿಟ್ ಗುರುತಿಸಿ ತನ್ನ ಟಾವಲ್ ರಿಟೈಲ್ಸ್ ಲುಕ್ ಬುಕ್ ನಲ್ಲಿ ಪ್ರಕಟಿಸುತ್ತದೆ. ಸಾಧಕರನ್ನು ಗೌರವಿಸುತ್ತದೆ. ಕಳೆದ 21 ವರ್ಷಗಳಿಂದ ಈ ಕಾರ್ಯ ಸಂಸ್ಥೆ ನಡೆಸಿಕೊಂಡು ಬಂದಿದೆ. ಲಂಡನ್, ಹಾಂಕಾಂಗ್ಗಳಲ್ಲಿ ಕೇಂದ್ರ ಸ್ಥಾನ ಹೊಂದಿದೆ. ಹಾಂಕಾಂಗ್ನಲ್ಲಿದ್ದು ಕೋ. ಮ. ಕಾರಂತ ಫೌಂಡೇಶನ್ ಮೂಲಕ ಅಸಹಾಯಕರಿಗೆ ಫಿಲಿಫೈನ್ಸ್ನಲ್ಲಿ ಮನೆ ಕಟ್ಟಿ ಕೊಡುವುದು ಸೇರಿ ಹಲವಾರು ಸಮಾಜಾಭಿವೃದ್ಧಿ ಕೆಲಸ ಮಾಡುತ್ತಿರುವ ಮೈತ್ರೇಯಿ ಕಾರಂತರ ಕ್ರಿಯಾಶೀಲತೆಯನ್ನು “ಮೂಡಿ ಡೆವಿಟ್” ಗುರುತಿಸಿದೆ. ಉತ್ತಮ ವಾಕ್ಪಟುತ್ವ, ಸಾಹಿತ್ಯ ಹಾಗೂ ತರಬೇತಿ ಶಿಬಿರಗಳ ಮೂಲಕ ಖ್ಯಾತರಾಗಿರುವ ಮೈತ್ರೇಯಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇಶ ರಾಜ್ಯದ ಹಿತಕ್ಕೆ ಸತ್ಯ ಧರ್ಮದ ಪ್ರತಿಪಾದನೆಗೆ ತನ್ನದೇ ಆದ ಕೊಡುಗೆಯನ್ನು ಬ್ರಾಹ್ಮಣ ಸಮಾಜ ನೀಡಿದ್ದು ವಿವಿಧ ಸಾಮ್ರಾಜ್ಯಗಳ ಸ್ಥಾಪನೆಯಲ್ಲೂ ಸುಶಾಸನ ನೆಲೆಸುವಂತೆ ಮಾಡುವಲ್ಲಿಯೂ ಸಾವಿರಾರು ವರ್ಷಗಳಿಂದ ಆಳುವ ಪ್ರಭುಗಳಿಗೆ ಸಲಹೆ ನೀಡುತ್ತಾ ಸ್ಪೂರ್ತಿಯ ಸೆಲೆಯಾಗಿ ಲೋಕ ಹಿತಕ್ಕಾಗಿ ಶ್ರಮಿಸುತ್ತಾ ಬಂದಿದೆ. ಪ್ರಸ್ತುತ ಕಾಲಘಟ್ಟದಲ್ಲಿಯೂ ವಿಪ್ರರೂ ಗಾಯತ್ರಿ ಉಪಾಸನೆ, ನಿತ್ಯ ಕರ್ಮಾನುಷ್ಠಾನ ಮಾಡಿ ವಿಪ್ರರು ಬ್ರಾಹ್ಮಣ್ಯದ ಕುರಿತು ಜ್ಞಾನವನ್ನು ಹೊಂದಿರಬೇಕೆಂದು ವೇದಮೂರ್ತಿ, ಪ್ರಶಾಂತ ಅಡಿಗ ಸೌಕೂರು ಇವರು ಹೇಳಿದರು. ಅವರು ಅರೆಹೊಳೆ ಶಾಸ್ತ್ರೀಯ ಮನೆಯಲ್ಲಿ ನಡೆದ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ೨೯ನೇ ವಾರ್ಷಿಕ ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಉಪನ್ಯಾಸ ನೀಡಿದರು. ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು, ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಅಧ್ಯಕ್ಷ ಶುಭಚಂದ್ರ ಹತ್ವಾರ್ ಜ್ಯೋತಿ ಬೆಳಗಿಸಿ ಅಧಿವೇಶನ ಉದ್ಘಾಟಿಸಿ ಮಾತನಾಡುತ್ತಾ ಬ್ರಾಹ್ಮಣ ಸಂಘಟನೆಯ ವಿಚಾರವಾಗಿ ಮಹತ್ವದ ಮಹಿತಿಗಳನ್ನು ನೀಡುತ್ತಾ ಶ್ರೀ ಗಾಯತ್ರಿ ಟ್ರಸ್ಟ್ ಮೂಲಕ ವಿಪ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟçಕವಿ ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ನಗರದ ಸರಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟçಕವಿ ಕುವೆಂಪು ಅವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುವೆಂಪು ಒಬ್ಬ ಶ್ರೇಷ್ಠ ಕವಿ. ಅವರು ತಮ್ಮ ಆಲೋಚನೆಗಳನ್ನು ಸಾಹಿತ್ಯ ಹಾಗೂ ಕೃತಿಗಳ ಮೂಲಕ ಸಮಾಜಕ್ಕೆ ನೀಡಿದ್ದು, ಅವರ ಈ ಬರಹಗಳು ಹಲವಾರು ಸಾಮಾಜಿಕ ಸುಧಾರಣೆ ತಂದಿದೆ ದುಂದು ವೆಚ್ಚ ಮಾಡದೇ ಮದುವೆ ನಡೆಸುವ ಸಲುವಾಗಿ ಪ್ರಪಂಚಕ್ಕೆ ಮಂತ್ರಮಾಂಗಲ್ಯ ಪರಿಚಯಿಸಿದ್ದಾರೆ. ಕುವೆಂಪು ಅವರು ರಚಿಸಿದ ನಾಡಗೀತೆಯನ್ನು ದಿನನಿತ್ಯ ಹಾಡುವ ಮೂಲಕ ಪ್ರತಿದಿನ ಅವರನ್ನು ನಾವು ನೆನೆಯುತ್ತಿದ್ದೇವೆ. ಸಾಹಿತ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ಬದುಕಿನ ಯಶಸ್ಸು ಪಂಚ ’ವ’ ಕಾರಗಳಲ್ಲಿ ಅಡಗಿದೆ’ ಎಂದು ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹೊಸ ವಿದ್ಯಾರ್ಥಿಗಳ ಸ್ವಾಗತ ’ಪರಿಚಯ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ’ವಪು (ದೇಹ), ವಸ್ತ್ರ, ವಿದ್ಯೆ, ವಿನಯ, ವಾಕ್ (ಮಾತುಗಾರಿಕೆ) ಎಂಬ ಐದು ವಕಾರಗಳು ಪಂಚಸೂತ್ರಗಳಾಗಿವೆ’ ಎಂದು ವಿವರಿಸಿದ ಅವರು, ’ಪತ್ರಿಕೋದ್ಯಮ ವಿದ್ಯಾರ್ಥಿಗಳೂ ಪತ್ರಿಕಾ ಧiವನ್ನು ಪಾಲಿಸಬೇಕು. ಉತ್ತಮ ಪತ್ರಕರ್ತರಾಗಲು ಪ್ರಯತ್ನಿಸಬೇಕು’ ಎಂದರು. ’ಪ್ರತಿ ವ್ಯಕ್ತಿಯ ಜೀವನದಲ್ಲಿ ತಾಯಿ, ತಾಯಿನಾಡು, ತಾಯಿಭಾಷೆ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಗುರು ಬಹುಮುಖ್ಯ. ಇವುಗಳ ಅರಿವು ಬದುಕಿನ ಉನ್ನತಿಗೆ ಕಾರಣವಾಗುತ್ತವೆ’ ಎಂದರು. ’ಯಾವಾಗಲೂ ಆಂತರ್ಯದಲ್ಲಿ ವಿನಯವನ್ನು ಹೊಂದಿದ ವ್ಯಕ್ತಿಯೇ ಸಮಾಜದಲ್ಲಿ ಜಯಿಸುತ್ತಾನೆ. ಅಹಂ ಹೊಂದಿದ ವ್ಯಕ್ತಿಯು ವಿನಯವಂತಿಕೆಯನ್ನು ನಟಿಸಿದರೂ ಪ್ರಯೋಜನ ಆಗದು. ಅದು ಮನಸ್ಸಿನ ಅಂತರಾಳದಿಂದ ಬರಬೇಕು’ ಎಂದರು. ’ಎಲ್ಲರನ್ನೂ ಪ್ರೀತಿ- ಸಮಾನತೆಯಿಂದ ಕಾಣುವ, ಗೌರವಿಸುವ ವ್ಯಕ್ತಿತ್ವ ರೂಢಿಸಿಕೊಳ್ಳಿ. ನಿಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕ್ರಿಕೆಟ್, ಕಬ್ಬಡಿ ಮೊದಲಾದ ಕ್ರೀಡೆಗಳತ್ತ ಕ್ರೀಡಾಪಟುಗಳು ಒಲವು ತೋರುತ್ತಿದ್ದಾರೆ. ವಾಲಿಬಾಲ್ ಮತ್ತಿತರ ಪಂದ್ಯಗಳನ್ನು ಆಡಲು ಕ್ರೀಡಾಪಟುಗಳು ಹೆಚ್ಚಿನ ಆಸಕ್ತಿ ತೋರುತ್ತಿಲ್ಲ. ಯುವ ಜನರು ವಾಲಿಬಾಲ್ ಪಂದ್ಯಾಟಗಳಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು. ಈ ಮೂಲಕ ಈ ಕ್ರೀಡೆಯನ್ನು ಉಳಿಸುವ ಪ್ರಯತ್ನ ನಡೆಸಬೇಕು ಎಂದು ಹಿರಿಯ ವಾಲಿಬಾಲ್ ಆಟಗಾರ ರಾಜೇಶ ಕಾವೇರಿ ಕುಂದಾಪುರ ಹೇಳಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇದರ ೪೮ನೇ ವಾರ್ಷಿಕೋತ್ಸವದ ಅಂಗವಾಗಿ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಆಯೋಜಿಸಲಾಗಿದ್ದ 18 ವರ್ಷ ವಯೋಮಿತಿಯ ಮುಕ್ತ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿ, ಕೆಲಸ ಮಾಡುತ್ತಿದ್ದು, ಯುವ ಕ್ರೀಡಾಪಟುಗಳನ್ನು ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ 48 ವರ್ಷಗಳಿಂದ ಕ್ರೀಡೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಉಪಯೋಗವಾಗುವಂತಹ ಉತ್ತೇಜಿಸುವ ದೃಷ್ಟಿಯಿಂದ 18 ವರ್ಷ ವಯೋಮಿತಿಯ ವಾಲಿಬಾಲ್ ಪಂದ್ಯಾಟ ಆಯೋಜಿಸುವುದು ಸ್ತುತ್ಯಾರ್ಹವಾದುದು ಎಂದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸೊಸೈಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ದೇಶದ ಮೇಲೆ ಅದೆಷ್ಟೋ ಆಕ್ರಮಣಗಳು ನಡೆದಿದ್ದರೂ ನಮ್ಮ ದೇಶದ ಸಂಸ್ಕೃತಿ ಪರಂಪರೆ ಗಟ್ಟಿಯಾಗಿ ಉಳಿದಿದೆ. ಧರ್ಮ ಮತ್ತು ಸಂಸ್ಕೃತಿಯ ಭದ್ರ ತಳಹದಿಯ ಮೇಲೆ ನಮ್ಮ ದೇಶ ಸದೃಢವಾಗಿ ನಿಂತಿದ್ದು, ಜಗತ್ತಿನ ಎಲ್ಲಾ ರಾಷ್ಟ್ರಗಳು ನಮ್ಮ ಭಾರತ ದೇಶವನ್ನು ಎದುರು ನೋಡುತ್ತಿದೆ. ಮಾತೆಯನ್ನು ಪೂಜಿಸಿ ಗೌರವಿಸುವ ನಮ್ಮ ನಾಡು ಅತ್ಯಂತ ಶ್ರೇಷ್ಠವಾಗಿದ್ದು, ಪುಟ್ಟ ಮಕ್ಕಳಲ್ಲಿ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸುವ ದೃಷ್ಟಿಯಿಂದ ಅಜಿತ್ ಕುಮಾರರು ಶಿಶು ಮಂದಿರವನ್ನು ಪ್ರಾರಂಭಿಸಿದ್ದರು. ಇದರ ಫಲವಾಗಿ ಇಂದು ಸಹಸ್ರಾರು ಮಕ್ಕಳು ಸಂಸ್ಕಾರವಂತರಾಗಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸುವಲ್ಲಿ ಸಹಕಾರಿಯಾಗಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್ನ ವಿಶ್ವಸ್ಥ ಪ್ರಮೋದ ಮಂದಾರ್ತಿ ಹೇಳಿದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಮತ್ತು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಹಾಗೂ ಇಂದುಶ್ರೀ ಮಹಿಳಾ ಮಂಡಲ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ…

Read More