Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಶುಭಕರ ಆಚಾರಿ ಅವರನ್ನು ನೇಮಕ ಮಾಡಲಾಗಿದ್ದು, ಅವರು ಅ.1ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಳೆದ 30 ವರ್ಷಗಳ ಸುದೀರ್ಘ ಅವಧಿಯಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಕಾರ್ಕಳದ ಭುವನೇಂದ್ರ ಮತ್ತು ಮೂಡುಬಿದಿರೆ ಮಹಾವೀರ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ, ಭಂಡರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಡಾ.ಶುಭಕರಾಚಾರಿ ಅವರು ಮೂಲತಃ ತೀರ್ಥಹಳ್ಳಿಯ ಗಬಡಿ ಗ್ರಾಮದವರಾಗಿದ್ದು, ಸೀತಾರಾಮ ಆಚಾರ್ಯ ಮತ್ತು ಇಂದಿರಾ ಅವರ ಪುತ್ರ. ತೀರ್ಥಹಳ್ಳಿಯ ತುಂಗಭದ್ರಾ ಮಹಾವಿದ್ಯಾಲಯಲ್ಲಿ ಪದವಿ ಶಿಕ್ಷಣದ ನಂತರ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹಾಗೂ ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದು ಪಿಎಚ್‌ಡಿ ಪದವಿಯನ್ನು ಪಡೆದಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಅವರು 31 ಜುಲೈ 2023ರಂದು ನಿವೃತ್ತಿ ಹೊಂದಲಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ನಡೆದ ದೋಣಿ ದುರಂತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇನ್ನೋರ್ವ ನಾಪತ್ತೆಯಾದ ಘಟನೆ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಪಟ್ಟೆಬಲೆ ದೋಣಿಯ ಮೂಲಕ ಮೀನುಗಾರಿಕೆಗೆ ತೆರಳಿ ಸಂಜೆ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸಮುದ್ರದಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದು ದುರಂತ ನಡೆದಿದ್ದು, ದೋಣಿಯಡಿಗೆ ಸಿಲುಕಿದ್ದ ನಾಗೇಶ್ ಬಾಬು ಖಾರ್ವಿ [30] ಎಂಬುವವರು ಮೃತಪಟ್ಟಿದ್ದಾರೆ. ಸತೀಶ್ ಖಾರ್ವಿ [34] ಎಂಬುವವರು ನಾಪತ್ತೆಯಾಗಿದ್ದು ಹುಡುಕಾಟ ನಡೆಸಲಾಗುತ್ತಿದೆ. ಸಚಿನ್ ಖಾರ್ವಿ ಎಂಬುವವರಿಗೆ ಸೇರಿದ ಮಾಸ್ತಿ ಮರ್ಲಿಚಿಕ್ಕು ಪ್ರಸಾದ ಹೆಸರಿನ ದೋಣಿಯಲ್ಲಿ 8 ಮಂದಿ ಮೀನುಗಾರಿಕೆಗೆ ತೆರಳಿದ್ದು, ದಡಕ್ಕೆ ಸಮೀಪವಿರುವಾಗ ದುರಂತ ನಡೆದಿದೆ. 6 ಮಂದಿ ಈಜಿ ದಡ ಸೇರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಸ್ಪಸ್ಥರಾಗಿದ್ದ ದೋಣಿ ಮಾಲಿಕ ಸಚಿನ್ ಖಾರ್ವಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಮೀನುಗಾರರು ದುರಂತಕ್ಕೀಡದ ದೋಣಿ, ಬಲೆಯನ್ನು ದಡಕ್ಕೆ ಎಳೆದು ತರಲಾಗಿದೆ. ಬೈಂದೂರು ಠಾಣೆ ಪೊಲೀಸರು, ಗಂಗೊಳ್ಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ಕೋಣಿ ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲಿನ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಗೆದ್ದುಕೊಂಡಿದ್ದಾರೆ. ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ರೀದಾ ಫರ್ವಿನ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರೇ, 6ನೇ ತರಗತಿ ವಿದ್ಯಾರ್ಥಿ ಕಿಶನ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಿವಮೊಗ್ಗ,ಜು.30: ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದ ಬಳಿ ನೀರಿಗೆ ಬಿದ್ದು ಮೃತಪಟ್ಟ ಶರತ್ ಮನೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ ಪೋಷಕರಿಗೆ ಸಾಂತ್ವಾನ ಹೇಳಿದರು. ಜು.23ರಂದು ಘಟನೆ ನಡೆದಿದ್ದು, 8 ದಿನಗಳ ಬಳಿಕ ಯುವಕ ಶರತ್ ವೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕಿನ ಸುಣ್ಣದಹಳ್ಳಿ ಶರತ್ ಮನೆಗೆ ಭೇಟಿನೀಡಿ, ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅಧಿಕಾರಿಗಳೊಂದಿಗೆ ಮಾತನಾಡಿ ತಕ್ಷಣ ಪರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸುವಂತೆ ತಿಳಿಸಿದರು. ಇಂದು ಮೃತದೇಹ ಪತ್ತೆ, ಮರಣೋತ್ತರ ಪರೀಕ್ಷೆಗೆ ರವಾನೆಭದ್ರಾವತಿಯಲ್ಲಿ ಸ್ವಂತ ಉದ್ಯಮ ಮಾಡಿಕೊಂಡಿದ್ದ ಶರತ್, ತನ್ನ ಸ್ನೇಹಿತನೊಂದಿಗೆ ಅರಶಿನಗುಂಡಿ ಜಲಪಾತಕ್ಕೆ ತೆರಳಿದ ಸಂದರ್ಭ ಈ ಘಟನೆ ನಡೆದಿದೆ. ನಿರಂತರ ಒಂದು ವಾರದ ಹುಡುಕಾಟ ನಡೆದಿತ್ತಾದರೂ, ಬಿಡದೇ ಸುರಿದ ಮಳೆ ಕಾರ್ಯಾಚರಣೆಗೆ ಅಡ್ಡಿಯುಂಟುಮಾಡಿತ್ತು. ಮೃತದೇಹವನ್ನು ಭಾನುವಾರ ಬೆಳಿಗ್ಗೆ ಇಲಾಖೆಯೊಂದಿಗೆ ಸ್ಥಳೀಯರು ಹುಡುಕಾಟ ನಡೆಸುವಾಗಿ ಪತ್ತೆಹಚ್ಚಿದ್ದು, ನೀರಿಗೆ ತಾಕಿಕೊಂಡಿದ್ದ ಮರದ ದಿಮ್ಮಿಗಳ ನಡುವೆ ಸಿಲುಕಿಕೊಂಡಿತ್ತು. ಮಧ್ಯಾಹ್ನದ ವೇಳೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳಾವರದ ರಸ್ತೆಯಲ್ಲಿ ಸಾಗುತ್ತಿದ್ದ ಬೊಲೆನೋ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ದ್ವಿಚಕ್ರ ವಾಹನ ಸವಾರ, ಕಾಳವಾರದ ನಿವಾಸಿ ನರಸಿಂಹ ಶೆಟ್ಟಿ (75) ಮೃತ ದುರ್ದೈವಿ. ಭಾನುವಾರ ಸಂಜೆ ವೇಳೆಗೆ ಕೋಟೇಶ್ವರ ಕಡೆಯಿಂದ ಹಾಲಾಡಿ ಮಾರ್ಗವಾಗಿ ತೆರಳುತ್ತಿದ್ದ ಬೊಲೆನೋ ಕಾರಿಗೆ ಶಾಲೆ ಸಮೀಪದ ಅಡ್ಡ ರಸ್ತೆಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಠಾತ್ತನೇ ಬ್ರೇಕ್ ಹಾಕಿದ್ದರಿಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲು ಕಂಬವನ್ನು ತುಂಡರಿಸಿ ಮುಂದೆ ಸಾಗಿ ದೇವಸ್ಥಾನದ ಕಂಬವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ನರಸಿಂಹ ಶೆಟ್ಟಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಜಡ್ಕಲ್ ಗ್ರಾಮದ ಮೆಕ್ಕೆ ಕೊಳಕೆಹೊಳೆ ಎಂಬಲ್ಲಿ ಜು.23ರಂದು ಮನೆಯಿಂದ ನಾಪತ್ತೆಯಾಗಿದ್ದ ಸುರೇಶ (28) ಎಂಬುವವರ ಮೃತದೇಹ ಶನಿವಾರ ಸಂಜೆ ಹೊಳೆಯಲ್ಲಿ ಪತ್ತೆಯಾಗಿದೆ. ಸುರೇಶ್ ಅವರು ಮನೆಯಿಂದ ಬಹಿರ್ದಸೆಗೆ ಹೋದ ಸಂದರ್ಭ ಕಳೆದ ವಾರ ವಿಪರೀತ ಮಳೆಯಿದ್ದರಿಂದ ತುಂಬಿ ಹರಿಯುವ ಹೊಳೆಗೆ ಬಿದ್ದು ಕೊಚ್ಚಿಹೋಗಿ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಕಾನ್ಕಿ ಹಾಸ್ಕಲ್ ಪಾರೆಯ ಮೆಕ್ಕೆ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲ್ಲೂರು ಠಾಣೆ ಪಿಎಸ್ಐಗಳಾದ ಜಯಶ್ರೀ, ಸುಧಾರಾಣಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ► ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ – https://kundapraa.com/?p=68085 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.30: ಸ್ನೇಹಿತರೊಂದಿಗೆ ಕಳೆದ ಭಾನುವಾರ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದ ಸಂದರ್ಭ ಕಾಲುಜಾರಿ ನೀರಿನಲ್ಲಿ ಬಿದ್ದು ಕಾಣೆಯಾಗಿದ್ದ ಭದ್ರಾವತಿಯ ಯುವಕ ಶರತ್ ಕುಮಾರನ [23] ಮೃತದೇಹ ಜಲಪಾತದ ಸುಮಾರು 100 ರಿಂದ 70ಮೀ ದೂರದಲ್ಲಿ ಪತ್ತೆಯಾಗಿದೆ. ಶರತ್ ಹಾಗೂ ಸ್ನೇಹಿತ ಗುರುರಾಜ ಜೊತೆಗೂಡಿ ಜು.23ರ ಭಾನುವಾರದಂದು ಭದ್ರಾವತಿಯಿಂದ ಕೊಲ್ಲೂರು ಗ್ರಾಮದ ಅರಶಿನಗುಂಡಿ ಜಲಪಾತ ನೋಡಲು ತೆರಳಿದ್ದರು. ಮಧ್ಯಾಹ್ನ 3-30ರ ಹೊತ್ತಿಗೆ ಜಲಪಾತ ಬಳಿ ವೀಡೀಯೋ ಮಾಡಲು ಹೇಳಿ ಬಂಡೆಯ ಮೇಲೆ ನಿಂತಿದ್ದ ಶರತ್, ಕಾಲು ಜಾರಿ ಸೌಪರ್ಣಿಕ ನದಿಗೆ ಬಿದ್ದಿದ್ದು ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದನು. ಈ ಘಟನೆ ಸ್ನೇಹಿತನ ಮೊಬೈಲಿನಲ್ಲಿಯೂ ಸೆರೆಯಾಗಿತ್ತು. ಘಟನೆಯ ಮಾಹಿತಿ ದೊರೆತ ಬಳಿಕ, ಪ್ರಕರಣ ದಾಖಲಿಸಿಕೊಂಡು ಕಳೆದೊಂದು ವಾರದಿಂದ ಕೊಲ್ಲೂರು ಠಾಣೆಯ ಪೊಲೀಸ್ ತಂಡ, ಅರಣ್ಯ ಇಲಾಖೆ ಸಿಬ್ಬಂದಿಗಳು, ಉಡುಪಿಯ ಎಸ್‌ಡಿಆರ್‌ಎಫ್‌ ತಂಡ, ಕುಂದಾಪುರ ಹಾಗೂ ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಇವರಿಗೆ ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ಸದಸ್ಯರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಬೈಲ್ ಟೆಲಿಗ್ರಾಮ್ ಆ್ಯಪ್ ಮೂಲಕ ಆನ್‌ಲೈನ್‌ ಬುಕ್ಕಿಂಗ್ ಬ್ಯುಸಿನೆಸ್ ಹೆಸರಿನಲ್ಲಿ ವಂಚನೆ ಎಸಗಿದ ಪ್ರಕರಣವೊಂದು ಕೋಟ ವ್ಯಾಪ್ತಿಯಲ್ಲಿ ನಡೆದಿದೆ. ಶ್ರುತಿ ರಾಘವೇಂದ್ರ ಎಂಬ ಟೆಲಿಗ್ರಾಂ ಖಾತೆಯಿಂದ ಮೇಕ್ ಮೈ ಟ್ರಿಪ್ ಸಂದೇಶದಡಿ ಆನ್ಲೈನ್ ಬುಕ್ಕಿಂಗ್ ಬ್ಯುಸಿನೆಸ್‌ ಎಂದು ನಂಬಿ ಸೇರಿದ್ದ ಕಾರ್ಕಡ ನಿವಾಸಿ ಎಂ.ಎನ್.ರಾಜು (44) ಒಟ್ಟು 23 ಲಕ್ಷ ರೂ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೇಕ್ ಮೈ ಟ್ರಿಪ್ ಪ್ರೊಫೈಲ್ ಪೇಜ್ ಮೂಲಕ ಕಸ್ಟಮರ್ ಆನ್ ಲೈನ್ ಆಓರ್ಡರ್ ಮಾಡಿದ್ದನ್ನು ಬುಕ್ಕಿಂಗ್ ಮಾಡಿ ಅದರ ಮೊತ್ತವನ್ನು ಪಾವತಿಸಿದರೆ ಒಟ್ಟು ಹಣ ಹಾಗೂ ಕಮಿಷನ್ ಸಂದಾಯವಾಗುವ ವ್ಯವಹಾರ ಎಂದು ನಂಬಿಸಲಾಗಿದೆ. ಹಂತ ಹಂತವಾಗಿ ಅದಕ್ಕಾಗಿ ಹಣ ಪಾವತಿಸಿದ್ದು, 30ನೇ ಟಾಸ್ಕ್ ಪೂರ್ಣಗೊಂಡ ಬಳಿಕ ಹಣ ಹಿಂದಿರುಗಿಸುವಂತೆ ಸಂಬಂಧಿತರಿಗೆ ಸಂದೇಶ ಕಳಹಿಸಿದಾಗ, ಅವರು ಸರಕಾರದ ನಿಯಮಾನುಸಾರ ಈಗಾಗಲೆ ಪಾವತಿಸಿದ ಹಣದ ಅರ್ಧದಷ್ಟು 16,05,231 ರೂ. ಮೊತ್ತ ಪಾವತಿ ಮಾಡಬೇಕು. ಇಲ್ಲದಿದ್ದಲ್ಲಿ ಹೂಡಿಕೆ ಮಾಡಿದ ಹಣ ಲ್ಯಾಪ್ಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಆಶ್ರಯದಲ್ಲಿ ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಯೋಧ ಟಿ.ದಿನಕರ ಶೆಣೈ ಅವರು ಕಾರ್ಗಿಲ್ ಕದನದ ಬಗ್ಗೆ ಹಾಗೂ ಕಾರ್ಗಿಲ್ ಪರಿಸ್ಥಿತಿ ಬಗ್ಗೆ ಮಾತನಾಡಿದರು. ಇದೇ ಸಂದರ್ಭ ನಿವೃತ್ತ ಯೋಧರಾದ ರತ್ನಾಕರ ಬೈಂದೂರು ಮತ್ತು ಟಿ.ದಿನಕರ ಶೆಣೈ ಅವರನ್ನು ಗೌರವಿಸಲಾಯಿತು. ಕಾರ್ಗಿಲ್ನಲ್ಲಿ ಹುತಾತ್ಮರಾದ ಯೋಧರಿಗಾಗಿ ದೀಪ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ಗಂಗೊಳ್ಳಿ ರೋಟರ್ಯಾಕ್ಟ್ ಕ್ಲಬ್ ಕಾರ್ಯದರ್ಶಿ ಕ್ಷಮಾ, ರೋಟರಿ ಮತ್ತು ರೋಟರ್ಯಾಕ್ಟ್ ಸದಸ್ಯರು ಉಪಸ್ಥಿತರಿದ್ದರು. ಎಂ. ನಾಗೇಂದ್ರ ಪೈ ಸ್ವಾಗತಿಸಿದರು. ಕೆ.ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ರೋಟರಿ ಕಾರ್ಯದರ್ಶಿ ಕೃಷ್ಣ ಪೂಜಾರಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾವುದೇ ಕ್ಷೇತ್ರ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕ ಅಧಿವೇಶನವೆಂದರೆ ಅದು ಬಜೆಟ್ ಅಧಿವೇಶನ. ಆದರೆ ಈ ಭಾರಿಯ ಬಜೆಟ್ ಅಧಿವೇಶನದಲ್ಲಿ ಉಡುಪಿ ಜಿಲ್ಲೆಯ ಶಾಸಕರುಗಳ ಸಾಧನೆ ಶೂನ್ಯ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ವಿರೋಧ ಪಕ್ಷದ ಶಾಸಕರಾದರೂ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸರ್ಕಾರಕ್ಕೆ ತಮ್ಮ ಕ್ಷೇತ್ರದ ಹಾಗೂ ಜಿಲ್ಲೆಯ ಅತೀ ಅವಶ್ಯಕತೆಗಳ ಬಗ್ಗೆ ಗಮನಕ್ಕೆ ತಂದು ಅದನ್ನು ಮುಖ್ಯಮಂತ್ರಿಗಳ ಬಜೆಟ್ ಮೇಲಿನ ವಂದನಾ ಭಾಷಣದಲ್ಲಿ ಸೇರಿಸುವಲ್ಲಿ ಶ್ರಮವಹಿಸುವುದು ಹಿಂದಿನಿಂದ ನಡೆದು ಬಂದ ಕ್ರಮ. ಆದರೆ ಜಿಲ್ಲೆಯ ಶಾಸಕರು ಬಜೆಟ್ ಅಧಿವೇಶನವನ್ನು ಕೇವಲ ಪ್ರಚಾರ ಹಾಗೂ ರಾಜಕಾರಣಕ್ಕೆ ಬಳಸಿಕೊಂಡದ್ದು ಅವರ ಕ್ಷೇತ್ರ ಹಾಗೂ ಜಿಲ್ಲೆಗೆ ಮಾಡಿದ ಅನ್ಯಾಯ. ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಸಕ್ರಿಯ ಭಾಗವಹಿಸುವುದರ ಮೂಲಕ ಸದನದ ನೀತಿ, ನಿಯಮಗಳನ್ನು ಕಲಿಯ ಬೇಕಾದ ನೂತನ ಶಾಸಕರುಗಳು ಅದನ್ನು ಮಾಡದೆ ಕಾಗದ ಪತ್ರಗಳನ್ನು ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರ ಪೀಠದ ಮೇಲೆ…

Read More