Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಲೆಯಲ್ಲಿ ವರ್ಗಾವಣೆ ಪ್ರಮಾಣಪತ್ರ ನೀಡಲು ವಿಳಂಬ ಮಾಡಿದರೆಂಬ ಕಾರಣಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ಶಿರೂರು ಮೇಲ್ಪಂಕ್ತಿಯ ನಿತಿನ್ ಆಚಾರಿ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್ ಎಸ್.ಎಸ್.ಎಲ್.ಸಿ ಪೂರೈಸಿದ್ದು, ಸೋಮವಾರ ಕಾಲೇಜಿಗೆ ವರ್ಗಾವಣೆ ಪ್ರಮಾಣ ಪತ್ರ ಪಡೆಯಲು ತೆರಳಿದ್ದ. ಎಸ್.ಎಸ್.ಎಲ್.ಸಿ ತರಗತಿ ಮುಗಿಯುವ ಕೊನೆಯ ದಿನ ಕೆಲವು ವಿದ್ಯಾರ್ಥಿಗಳು ಶಾಲೆಯ ಹೊರಗಿನ ಸಿಸಿ ಕ್ಯಾಮರಾ ಹಾಗೂ ಗೇಟ್ ಬೀಗವನ್ನು ಮುರಿದಿರುವ ಬಗ್ಗೆ ಉಪಪ್ರಾಂಶುಪಾಲರು ನಿತಿನ್ ಬಳಿ ವಿಚಾರಿಸಿದ್ದು, ಪಾಲಕರನ್ನು ಕರೆದುಕೊಂಡು ಬರುವಂತೆ ತಿಳಿಸಿದ್ದಾರೆ. ಅವರ ಮಾತಿಗೆ ಒಪ್ಪಿ ಶಾಲೆಯಿಂದ ಮನೆಗೆ ತೆರಳಿದ್ದ ವಿದ್ಯಾರ್ಥಿ, ಈ ವಿಚಾರ ಮನೆಯವರಿಗೆ ತಿಳಿದರೆ ತೊಂದರೆಯಾಗಬಹುದು ಎಂದು ಹೆದರಿ ಮಧ್ಯಾಹ್ನದ ಬಳಿಕ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ಘಟನೆಯ ಮಾಹಿತಿ ಪಡೆದು ತನಿಕೆ ಕೈಗೆತ್ತಿಕೊಂಡಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಿಶ್ವ ರಾಮಕ್ಷತ್ರಿಯ ಮಹಾಸಂಘದ ನೇತೃತ್ವದಲ್ಲಿ ರಾಮಕ್ಷತ್ರಿಯ ಸಮಾಜದ ಶ್ರೇಯೋಭಿವೃದ್ಧಿಗಾಗಿ ಮೇ.26ರಂದು ಬಾಳೆಕುದ್ರು ಶ್ರೀಮಠದಲ್ಲಿ ಮಹಾಮೃತ್ಯುಂಜಯ ಹೋಮ, ಚಂಡಿಕಾ ಹೋಮ, 108 ಕಾಯಿ ಗಣಹೋಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ಗಂಟೆ 7-00ಕ್ಕೆ ಪ್ರಾರ್ಥನೆ, 11.30ಕ್ಕೆ ಪೂರ್ಣಾಹುತಿ, ಬಳಿಕ ಮುಕ್ಕಾ ಶ್ರೀನಿವಾಸ ಯುನಿವರ್ಸಿಟಿಯ ಸಂಶೋಧನಾ ಮಾರ್ಗದರ್ಶಕ ಡಾ. ಸೋಂದಾ ಭಾಸ್ಕರ ಭಟ್, ಕಟೀಲು ಅವರಿಂದ ಪ್ರವಚನ ಹಾಗೂ ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಅವರಿಂದ ಆಶೀರ್ವಚನ ನಡೆಯಲಿದೆ.ಮಧ್ಯಾಹ್ನ ಅನ್ನಪ್ರಸಾದ ವಿತರಣೆ ಇರಲಿದೆ. ಈ ಎಲ್ಲಾ ಕಾರ್ಯಕ್ರಮಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷ ಎಚ್, ಆರ್. ಶಶಿಧರ ನಾಯ್ಕ್, ಕಾರ್ಯಧ್ಯಕ್ಷ ಕೆ. ನಾಗರಾಜ ಅವರು ತಿಳಿಸಿದ್ದಾರೆ.

Read More

 ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂದಿಸಿದಂತೆ, ಭಾರತ ಚುನಾವಣಾ ಆಯೋಗವು ಮತದಾನ ಕೇಂದ್ರಗಳ ಪಟ್ಟಿಯನ್ನು ಅನುಮೋದಿಸಿದ್ದು, ಉಡುಪಿ ಜಿಲ್ಲೆಗೆ ಸಂಬಂಧಿಸಿದ ನೈರುತ್ಯ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾನ ಕೇಂದ್ರಗಳ ವಿವರವು ಈ ಕೆಳಗಿನಂತಿದೆ. ಕುಂದಾಪುರ ತಾಲೂಕಿಗೆ ಸಂಬಂಧಿಸಿದಂತೆ ಮತದಾನ ಕೇಂದ್ರ ಸಂಖ್ಯೆ 68 ರ ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು (ಪೂರ್ವ ಭಾಗ), 69 ರ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು (ಉತ್ತರ ಭಾಗ) ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 68 ರ ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ( ಪಶ್ಚಿಮ ಭಾಗ) ಮತ್ತು 69 ರ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜು (ದಕ್ಷಿಣ ಭಾಗ) ಇಲ್ಲಿ ಮತದಾನ ನಡೆಯಲಿದೆ.  ಬೈಂದೂರು ತಾಲೂಕಿಗೆ ಸಂಬಂಧಿಸಿದಂತೆ ನೈರುತ್ಯ ಪದವೀಧರರರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 67 ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳು ಶಾಲಾ ಪಠ್ಯದ ಜೊತೆ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಾಗ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಚಿತ್ರಕಲಾ ಶಿಕ್ಷಕಿ ಐಶ್ವರ್ಯ ಕೋಟ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಮೂರು ದಿನಗಳ ಆರ್ಟ್ ಕ್ಯಾಂಪ್ ಆರಾಧನಾ-2024 (ಬೆರಳುಗಳಲ್ಲಿ ಭಾವಗೀತೆ) ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಿಭಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಶಿಬಿರಾರ್ಥಿಗಳಾದ ಶರಧಿ ಎಸ್, ಮಾನಸ ಜಿ, ಮೇದಿನಿ ಅವರು ಆರ್ಟ್ ಕ್ಯಾಂಪ್ನ ಅನಿಸಿಕೆಯನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಬಣ್ಣಗಳ ಮಿಶ್ರಣದಿಂದ ಹೊಸ ಬಣ್ಣವಾಗುವಂತೆ ನೋವು ನಲಿವುಗಳನ್ನು ಸರಿಸಮವಾಗಿ ಸ್ವೀಕರಿಸಿ ನಮ್ಮ ಗುರಿಯತ್ತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪುತ್ತೂರು ವಿವೇಕಾನಂದ ಸ್ವಾಯತ್ತ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮಾಧ್ಯಮ ಹಬ್ಬ ವಿವೇಕ ಚೇತನದಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಒಟ್ಟು 12 ಸ್ಪರ್ಧೆಗಳಲ್ಲಿ ಆಳ್ವಾಸ್ನ ವಿದ್ಯಾರ್ಥಿಗಳು 6 ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ಒಂದು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದರು. ಲೋಗೋ ವಿನ್ಯಾಸದಲ್ಲಿ ಸಚಿನ್ ಆಚಾರ್ಯ ಪ್ರಥಮ, ರೇಡಿಯೋ ನಿರೂಪಣೆ ಪ್ರಖ್ಯಾತ ಬೆಳುವಾಯಿ ಪ್ರಥಮ, ಸರ್ಪ್ರೈಸ್ ಇವೆಂಟ್ ರಂಜಿತ್ ಪ್ರಥಮ, ಬೀದಿ ನಾಟಕ ಪ್ರಥಮ, ರಸಪ್ರಶ್ನೆ ಜಡೇಶ್ ಹಾಗೂ ತಬ್ರೀಸ್ ಪ್ರಥಮ, ಪಿ೨ಸಿ ಚಿದಾನಂದ ರುದ್ರಪುರಮಠ ಪ್ರಥಮ, ರೀಲ್ಸ್ ಮೇಕಿಂಗ್ ವಿನೀತ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಎಂಪಿಎಂ ಕಾಲೇಜು ಕಾರ್ಕಳದಲ್ಲಿ ಮುಕ್ತಾಯಗೊಂಡ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಸತತ 19ನೇ ಬಾರಿ ದಿವಂಗತ ಎಂಕೆ ಅನಂತ ರಾಜ್ ಮೆಮೋರಿಯಲ್ ಪರ್ಯಾಯ ಫಲಕವನ್ನು ತನ್ನದಾಗಿಸಿಕೊಂಡಿತು. ಸೆಮಿಪೈನಲ್ ಹಣಾಹಣಿಯಲ್ಲಿ ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಆಳ್ವಾಸ್ ತಂಡ 35-16, 35-13 ನೇರ ಸೆಟ್ ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿತು. ಪೈನಲ್ ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಶಾಲನಗರ ತಂಡವನ್ನು ೩೫-೦೯,೩೫-೦೪ ನೇರ ಸೆಟ್ ಗಳಿಂದ ಸೋಲಿಸಿ ಸತತ 19ನೇ ಬಾರಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಫ್ ಗೆದ್ದುಕೊಂಡಿತು. ಆಳ್ವಾಸ್ನ ಚೇತನ್ ಉತ್ತಮ ದಾಳಿಗಾರ ಹಾಗೂ ನಂದಕುಮಾರ್ ಉತ್ತಮ ರಕ್ಷಣಕಾರ ಪ್ರಶಸ್ತಿಗೆ ಭಾಜನರಾದರು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ವೀರೇಶ್ವರ ಸೇವಾ ಟ್ರಸ್ಟ್ನ ನೂತನ ಕಛೇರಿ ಉದ್ಘಾಟನೆ ಹಾಗೂ ಶವ ಸಂಸ್ಕರಿಸಿ ಇಡುವ ಫ್ರೀಜರ್ ಲೋಕಾರ್ಪಣೆ ಕಾರ್ಯಕ್ರಮ ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದ ಸಮೀಪದ ಕಟ್ಟಡದಲ್ಲಿ ಶುಕ್ರವಾರ ನಡೆಯಿತು. ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ಅರ್ಚಕ ಜಿ.ರವೀಶ್ ಭಟ್ ಅವರು ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿ ಶ್ರೀ ವೀರೇಶ್ವರ ಸೇವಾ ಟ್ರಸ್ಟ್ನ ನೂತನ ಕಛೇರಿಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಶವ ಸಂಸ್ಕರಿಸಿ ಇಡುವ ಫ್ರೀಜರ್ನ್ನು ಲೋಕಾರ್ಪಣೆ ಮಾಡಲಾಯಿತು. ಹಿಂಜಾವೇ ಮುಖಂಡ ವಾಸುದೇವ ಗಂಗೊಳ್ಳಿ, ಯಶವಂತ ಗಂಗೊಳ್ಳಿ, ನವೀನ್ ಗಂಗೊಳ್ಳಿ, ಟ್ರಸ್ಟ್ ಅಧ್ಯಕ್ಷ ಅಕ್ಷಯ್, ಕಾರ್ತಿಕ್, ಪ್ರೀತೇಶ್, ಮೋಹನ್, ಮಹೇಶ್ ದಾಕಹಿತ್ಲು ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿ ನಡೆಸಿದ ಅತ್ಯಂತ ಕಠಿಣಕರವಾದ ಸಿ.ಎಸ್.ಇ.ಇ.ಟಿ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್, ಜೀವನ್ ಗೌಡ, ಆಶೆಲ್,ಕೀರ್ತಿ ಪಾಟ್ಕರ್, ಅನ್ವಿತ, ಭವಿಷ್ಯ ಶೆಟ್ಟಿ, ರಾಹುಲ್, ಅನನ್ಯ ಜೈನ್, ಪ್ರತ್ವೀಕ್, ಪ್ರಥಮ್,ಚಿನ್ಮಯಿ, ಪ್ರಜ್ವಲ್ ರಾವ್, ಸುಖಿ ಸುಭಾಶ್, ಶ್ರೇಯಾ, ವಿನಯ್ ಪ್ರಶಾಂತ್, ಸುಪ್ರೀತ್ ಹೆಗ್ಡೆ, ಶ್ರೀ ಹರಿ ಹಾಗೂ ಸುವಿಕ್ಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್‌ನ ವಿದ್ಯಾರ್ಥಿಗಳು ಪಿ.ಯು.ಸಿ ಯಲ್ಲೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್‌ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌, ಆಡಳಿತ ಮಂಡಳಿಯವರು, ಸಿ.ಎಸ್.ಇ.ಇ.ಟಿ ಸಂಯೋಜಕರಾದ ರಾಘವೇಂದ್ರ ರಾವ್, ಉಪನ್ಯಾಸಕ ವರ್ಗದವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಜಮೀನುದಾರ, ಉದ್ಯಮಿ, ಕೃಷಿಕರಾದ ಎಚ್. ರಂಗನಾಥ ಕಾಮತ್ (89) ಗಂಗೊಳ್ಳಿಯ ಸ್ವಗೃಹದಲ್ಲಿ ನಿಧನರಾದರು. ಕುಂದಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೃಷಿ ಜಮೀನು ಹೊಂದಿದ್ದ ಇವರು ಗಂಗೊಳ್ಳಿಯಲ್ಲಿ ಸಾ ಮಿಲ್ ಉದ್ಯಮ ನಡೆಸಿದವರು. ಸಾಮಾಜಿಕ ಧುರೀಣರಾಗಿ ಧಾರ್ಮಿಕ, ಶೈಕ್ಷಣಿಕ, ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ತಮ್ಮ ಮನೆತನದ ಬಸ್ರೂರು ಶ್ರೀರಾಮಚಂದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು ಮೂವರು ಪುತ್ರಿಯರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಸ್.ಎಸ್.ಎಲ್.ಸಿ.ಯಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕಾಗಿ ಪಿಯುಸಿಯಲ್ಲಿ ವಿಜ್ಞಾನ ವಿಭಾಗಕ್ಕೆ ಸೇರಲು ಸಾಧ್ಯವಾಗುತ್ತಿಲ್ಲ ಎಂಬ ಕೊರಗು ನಿಮ್ಮಲ್ಲಿದ್ದರೇ, ಅದಕ್ಕೆ ಪರ್ಯಾಯ ಆಯ್ಕೆಯೂ ಇದೆ. ಗಣಿತ ವಿಷಯವನ್ನು ಆಯ್ಕುಕೊಳ್ಳದೇ ಬಯಾಲಜಿ ಮತ್ತು ಕೆಮಿಸ್ಟ್ರಿ ವಿಷಯಗಳೊಂದಿಗೆ ಪಿಯುಸಿ ವ್ಯಾಸಂಗ ಮಾಡವು ಅವಕಾಶವನ್ನು ಶಂಕರನಾರಾಯಣದ ಮದರ್ ತೆರೆಸಾ ಪದವಿಪೂರ್ವ ಕಾಲೇಜು ಒದಗಿಸುತ್ತಿದೆ. ಹೌದು ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದ ಬದಲು ಹೋಂ ಸಾಯನ್ಸ್ ಆಯ್ದುಕೊಂಡು ಬಯಾಲಜಿ ಮತ್ತು ಕೆಮಿಸ್ಟ್ರಿ ಸಂಯೋಜನೆಯೊಂದಿಗೆ ವಿದ್ಯಾರ್ಥಿಗಳು ವಿಜ್ಞಾನ ವಿಭಾಗಕ್ಕೆ ಸೇರಿಕೊಂಡು ಕನಸನ್ನು ನೆನಸಾಗಿಸಿಕೊಳ್ಳುವ ಆಯ್ಕೆಯೂ ಇದೆ. ಪದವಿಪೂರ್ವ ಹಂತದಲ್ಲಿ ಗಣಿತವನ್ನು ಜೀರ್ಣಿಸಿಕೊಳ್ಳಲಾಗದ ವಿದ್ಯಾರ್ಥಿಗಳು ವಿನೂತನ ವಿಜ್ಞಾನ ಸಂಯೋಜನೆ (ಬಯಾಲಜಿ + ಕೆಮಿಸ್ಟ್ರಿ + ಹೋಂ ಸಯನ್ಸ್) ಯನ್ನು ಆಯ್ದುಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಮದರ್ ತೆರೆಸಾ ಪದವಿಪೂರ್ವ ಕಾಲೇಜು, ಶಂಕರನಾರಾಯಣ+91-72593 24484, +91-94481 50093, +91-94481 50094

Read More