ಕುಂದಾಪ್ರ ಡಾಟ್ ಕಾಂ ಸುದ್ದಿ:ಗಂಗೊಳ್ಳಿ: ಕರ್ನಾಟಕ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲ ಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಬ್ರಹ್ಮಗಿರಿಯ ಜಿಲ್ಲಾ ಬಾಲ ಭವನದಲ್ಲಿ ನ.7ರಂದು ನಡೆದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ವಾದ್ಯ ಸಂಗೀತ (ಕೊಳಲು) ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ಯಾಮ್ ಜಿ.ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದು, ಸತತ ಎರಡನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈತ ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಉಪನ್ಯಾಸಕಿ ಮಾಲತಿ ಗಣೇಶ ಅವರ ಪುತ್ರ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಪರಿಸರ ಮತ್ತು ಮಣ್ಣಿನ ಸಂರಕ್ಷಣೆ ಹಾಗೂ ಗಿಡಗಳನ್ನು ನೆಡುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾದ ‘ಗ್ರೋ ಗ್ರೀನ್’ ಕಾರ್ಯಕ್ರಮ ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಸಸ್ಯಸಂಕುಲವನ್ನು ಉಳಿಸಿ ಬೆಳೆಸಿ ಆರೋಗ್ಯಕರ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕರೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎನ್.ಸಿ.ಸಿ ಘಟಕದ ವಿದ್ಯಾರ್ಥಿ ಸುಪ್ರಜ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ, ಉಪನ್ಯಾಸಕರಾದ ಸುಷ್ಮಾ ಶೆಣೈ, ದೀಪಾ ಶೆಟ್ಟಿ, ನಾಗರತ್ನಾ, ಜ್ಯೋತಿ, ರೂಪಾ, ಅಕ್ಷತಾ ಕೆ.ಎನ್, ಅರುಣಾ ಹೊಳ್ಳ,ರೇಖಾಪುತ್ರನ್, ಈಶ್ವರ್, ನಿತ್ಯಾನಂದ ದೇವಾಡಿಗ ಹಾಗೂ ಬೋಧಕೇತರ ಸಿಬ್ಬಂಧಿಯವರು ಉಪಸ್ಥಿತರಿದ್ದರು. ಎನ್.ಸಿ.ಸಿ ಲೆ| ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುವುದು. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು 35 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಆಸಕ್ತರು ಅರ್ಜಿ ನಮೂನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ “ವಿವಿಧತೆಯಲ್ಲಿ ಏಕತೆ”ಯ ಪರಿಕಲ್ಪನೆಯ ಆವಿರ್ಭವ – 2024 ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತವಾಗ್ಮಿ, ನಿರೂಪಕರಾದ ಎನ್. ಆರ್. ದಾಮೋದರ ಶರ್ಮ ಬಾರ್ಕೂರು ಮಾತನಾಡಿ, ಶಿಕ್ಷಣದ ಉದ್ದೇಶ ಸಂಸ್ಕಾರವನ್ನು ಗಳಿಸುವುದು ಮಾತಾ ಪಿತೃಗಳು ಹಾಗೂ ಕಲಿಸಿದ ಗುರುಗಳ ಮೇಲೆ, ವಿದ್ಯೆ ಕಲಿತ ಸಂಸ್ಥೆಯ ಮೇಲೆ ಸದಾ ಗೌರವ ಇರಿಸಿಕೊಳ್ಳಬೇಕು. ವಿದ್ಯಾರ್ಥಿಗಳೆಲ್ಲರೂ ಭವ್ಯ ಭಾರತದ ಸತ್ಪ್ರಜೆಗಳಾಗಿ ಬಾಳಬೇಕು. ಕಷ್ಟಪಟ್ಟು ಕಲಿತಾಗ ಅದಕ್ಕೆ ತಕ್ಕ ಫಲ ಸಿಗುತ್ತದೆ. ಆದ್ದರಿಂದ ಎಲ್ಲರೂ ವಿದ್ಯಾ ವಿನಯ ಸಂಪನ್ನ ರಾಗಬೇಕೆಂದು ಕರೆ ನೀಡಿದರು. ಇನ್ನೋರ್ವ ಮುಖ್ಯ ಅತಿಥಿ ಮಿಲಾಗ್ರೀಸ್ ಚರ್ಚ್ನ ಧರ್ಮಗುರುಗಳಾದ ಫಾದರ್ ಫರ್ಡಿನಾಂಡ್ ಗೋನ್ಸಾಲ್ವೀಸ್ ಅವರು ಮಾತನಾಡುತ್ತಾ ಕಲಿಕೆಗೆ ಪೂರಕವಾದ ವಾತಾವರಣವಿರುವಾಗ ನಾವು ಅದರ ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅತಿ ಮುಖ್ಯವಾದದ್ದು ಆದ್ದರಿಂದ ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ತಾಳ್ಮೆ ಶಿಸ್ತಿನಿಂದ ಯಶಸ್ಸು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ವೆಂಕಟರಾಮ್ ಭಟ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಮೊದಲು ಕೋಟೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ವಾಣಿಜ್ಯ ಶಾಸ್ತ್ರದಲ್ಲಿ ಪಿಎಚ್.ಡಿ ಪದವಿ, ಪಿಜಿಡಿಎಚ್ಆರ್ಎಂ ಮತ್ತು ಪಿಜಿಡಿಎಸ್ಬಿಎಸ್ಎ ಪದವಿಗಳಳನ್ನು ಪಡೆದಿದ್ದಾರೆ. ಅವರು ಉತ್ತಮ ಆಡಳಿತಗಾರರಾಗಿ, ವಿದ್ಯಾರ್ಥಿಗಳಿಗೆ ಪ್ರೇರಕ ಶಕ್ತಿಯಾಗಿ ಮತ್ತು ತರಬೇತುದಾರರಾಗಿಯೂ ಹೆಸರುವಾಸಿಯಾಗಿದ್ದಾರೆ. ನೂತನ ಪ್ರಾಂಶುಪಾಲರನ್ನು ಸಹೋದ್ಯೋಗಿಗಳಾದ ಗಂಗಾರಾಜು, ಶೇಖರ್ ಬಿ., ಶ್ರೀಕಾಂತ್, ರಾಜೇಂದ್ರ, ಸಂದೇಶ್ ಶೆಟ್ಟಿ, ಶೈಲಜಾ, ವಿನಯ್ ಅವರುಗಳು ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ ಆಶ್ರಯದಲ್ಲಿ ಶೈಕ್ಷಣಿಕ ವರ್ಷ 2024-25ನೇ ಸಾಲಿನ ಚಟುವಟಿಕೆ “ಎಮಿನೆನ್ಸ್ 24” ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದರಾದ ಡಾ.ಶುಭಕರಾಚಾರಿ ಅವರು ನೆರವೇರಿಸಿದರು. ಮಂಗಳೂರಿನ ವಿಸ್ಡಮ್ ಸಂಸ್ಥೆಯ ಅಭಿಲಾಷ್ ಕ್ಷತ್ರೀಯ ಉಪನ್ಯಾಸ ನೀಡಿದರು. “ಕೆರಿಯರ್ ಅಡ್ವಾನ್ಸ್ಮೆಂಟ್ ಇನ್ ಬಿಬಿಎ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ವಿಭಾಗದ ಅರ್ಚನಾ ಅರವಿಂದ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಐರೋಡಿ ಗ್ರಾಮದ ನಿವಾಸಿ ಕೃಷ್ಣ (49) ಅವರು ಬುಧವಾರದಂದು ಮನೆಯ ಪಕ್ಕದ ಕೊಟ್ಟಿಗೆಯ ಕಬ್ಬಿಣದ ಪಟ್ಟಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ. ಅವರು ಸುಮಾರು ಒಂದುವರೆ ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಉಸಿರಾಟದ ಸಮಸ್ಯೆಯಿದ್ದು ಕಾಲುಗಳು ಊದಿಕೊಂಡಿರುತ್ತದೆ. ಅದೇ ಬೇಸರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಗ್ರಾಮದ ಬೀಜಾಡಿ ಪೂಜಾ ಟೈಲ್ಸ್ ಎದುರಿನ ಹೆದ್ದಾರಿಯಲ್ಲಿ ಕುಂಭಾಶಿ – ಕುಂದಾಪುರ ಏಕಮುಖ ರಸ್ತೆಯ ಬಳಿ ಕಾರು ಬೈಕ್ಗೆ ಢಿಕ್ಕಿಯಾಗಿದೆ. ದೇವರಾಜ್ ಅವರ ಕಾರು ಕುಂದಾಪುರ ಕಡೆಗೆ ಹೋಗುತ್ತಿದ್ದಾಗ ಮುನ್ಸೂಚನೆ ನೀಡದೆ ಎಡಕ್ಕೆ ಚಲಾಯಿಸಿ ಏಕಮುಕ ರಸ್ತೆಯ ಅಂಚಿನಲ್ಲಿ ನಿಲ್ಲಿಸಿದ್ದ ಬೈಕ್ಗೆ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಗಾಯಗೊಂಡು ಕೋಟೇಶ್ವರ, ಮಣಿಪಾಲ ಆಸ್ಪತ್ರೆ ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ನಾಡು ನುಡಿಯ ಕುರಿತು ಅಭಿಮಾನವನ್ನು ಮೂಡಿಸುವ ಉದ್ದೇಶದಿಂದ “ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ”ಯು ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸವನ್ನು ಹೊಂದಿದ ಕನ್ನಡ ನಾಡು ಹಾಗೂ ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಕ್ಕೆ ಸ್ವಾಗತ ಕೋರಿ, ಚಂಡೆ ಬಾರಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಕನ್ನಡ ಪರಂಪರೆ ದೇಶದ ಪ್ರಾಚೀನ ಪರಂಪರೆಯಲ್ಲಿ ಒಂದಾಗಿದೆ ಸುಮಾರು 2000 ಕ್ಕೂ ಹೆಚ್ಚು ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ. ಕನ್ನಡ ನುಡಿಯನ್ನು ಕಟ್ಟುವ ಉಳಿಸಿ ಬೆಳೆಸುವ ಕಾಯಕದಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದ ಅವರು 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21 ಹಾಗೂ 22 ರಂದು ಮಂಡ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಉತ್ಸವ ನ. 11ರಿಂದ 18ರವರೆಗೆ ನಡೆಯಲಿದೆ. ನ.12ರಂದು ನಡೆಯುವ ಅದ್ಧೂರಿಯ ಮನ್ಮಹಾ ರಥೋತ್ಸವ ಅಂಗವಾಗಿ ಅದರ ಪೂರ್ವಬಾವಿ ಸಭೆ, ಶಾಸಕ ಗುರುರಾಜ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಂಗಣದಲ್ಲಿ ನಡೆಯಿತು. ಉಪ್ಪುಂದ ದೇವಳದ ಮನ್ಮಹಾ ರಥೋತ್ಸವ ತಾಲೂಕಿನ ಅತೀ ದೊಡ್ಡ ರಥೋತ್ಸವವಾಗಿದ್ದು, ಸುಮಾರು 35 ವರ್ಷಗಳ ಬಳಿಕ ಇಲ್ಲಿನ ದೇವಳದ ರಥೋತ್ಸವ ಕೋಟೇಶ್ವರ ಹಬ್ಬಕ್ಕಿಂತ ಮೊದಲು ಬಂದಿರುವುದರಿಂದ ಜಾತ್ರಗೆ ಬರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗುತ್ತದೆ ಆದ್ದರಿಂದ ಜನರಿಗೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮೆಸ್ಕಾಂ, ಅಗ್ನಿ ಶಾಮಕ ಇಲಾಖೆ, ಆರೋಗ್ಯ ಇಲಾಖೆಗಳು ಮುಂಜಾಗೃತ ಕ್ರಮ ಕೈಗೊಳ್ಳಬೇಕು, ಅಲ್ಲದೇ ಮುಂದಿನ ಶುಕ್ರವಾರದಿಂದ ಪ್ರತಿ ಶುಕ್ರವಾರ ಅನ್ನದಾನ ಸೇವೆ ಮಾಡಲು ಶೀಘ್ರ ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಸೂಚಿಸಿದರು. ರಥ ಬೀದಿ ಅಗಲೀಕರಣಗೊಳಿಸಿ:ಇಲ್ಲಿನ ದೇವಳದ ರಥೋತ್ಸವದ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ…
