ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಭಾಜನರಾದ ಅಭಿನಂದನ್ ಶೆಟ್ಟಿ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿರುವ ಯು.ಸುರೇಂದ್ರ ಶೆಣೈ ಅವರಿಗೆ ಇಂದು ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅಭಿನಂದನ್ ಶೆಟ್ಟಿ, ಯಶಸ್ಸು, ಹಣ ಸ್ಥಾನ ಮಾನ ಮತ್ತು ಸಂಪತ್ತಿಗಿಂತ ಮೊದಲು ಬದುಕಲು ಕಲಿಯಬೇಕು. ನಿಮ್ಮ ಮುಂದಿನ ಭವಿಷ್ಯ ರೂಪಿಸುವ ಅಂಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಜೀವನವನ್ನು ಸಾರ್ಥಕ್ಯಗೊಳಿಸುವತ್ತ ಗಮನ ಇರಬೇಕು. ನಕಾರಾತ್ಮಕವಾದ ಡ್ರಗ್ಸ್ ಮತ್ತು ಮಾದಕ ಜಗತ್ತಿನ ಕುರಿತು ಜಾಗೃತರಾಗಿರಬೇಕು. ಅವುಗಳಿಂದ ದೂರವಿದ್ದು ನಿಮ್ಮ ಹಿರಿಯರು ಪೋಷಕರು ಮತ್ತು ಶಿಕ್ಷಕರ ಒಳ್ಳೆಯ ಆಶಯವನ್ನು ಪರಿಪೂರ್ಣವಾಗಿ ಪೂರ್ಣಗೊಳಿಸಿ. ಶಿಕ್ಷಣ ಎಲ್ಲವನ್ನೂ ಕೊಡುತ್ತದೆ. ನೀವು ಈ ಶಿಕ್ಷಣದ ಮೂಲಕ ಶಿಸ್ತು ಮತ್ತು ಸಂಯಮ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಆಡಳಿತ ಮಂಡಳಿಯ ಸದಸ್ಯರಾದ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿರುವ ಯು. ಎಸ್ ಶೆಣೈ ಮಾತನಾಡಿ, ನೀತಿವಂತರಾಗಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಮತ್ತು ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ದೀಪದಿಂದ ಜ್ಯೋತಿ ಹಚ್ಚುವ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಭಾನುವಾರ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯ ಮುಡೂರ ಅಂಬಾಗಿಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿದರು. ದೇವಸ್ಥಾನದಲ್ಲಿ ಪ್ರತಿನಿತ್ಯ ಸ್ವಚ್ಛತಾ ಕಾರ್ಯವನ್ನು ನಡೆಸುತ್ತಿರುವ ಮಹಿಳೆಯರಿಗೆ ಸೀರೆಯನ್ನು ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ, ಗಂಗೊಳ್ಳಿ ಬಿಲ್ಲವ ಯುವ ಮುಖಂಡ ಗೋಪಾಲ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಮಾಜಿ ಅಧ್ಯಕ್ಷೆ ಸುಮಿತ್ರಾ ಗಂಗೊಳ್ಳಿ, ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಸರೋಜ ಜಿ.ಟಿ., ಸುಶೀಲಾ, ಕುಸುಮ, ಶಕುಂತಲಾ, ಗಂಗಾ ಜಿ.ಟಿ., ಜಿ. ಈಶ್ವರ, ನರಸಿಂಹ ಕೆ. ಮೊದಲಾದವರು ಉಪಸ್ಥಿತರಿದ್ದರು. ಸುಶೀಲಾ ಜಿ.ಟಿ ಸ್ವಾಗತಿಸಿದರು. ಸುಮಿತ್ರಾ ಜಿ. ಕಾರ್ಯಕ್ರಮ ನಿರ್ವಹಿಸಿದರು. ಕುಸುಮ ಜಿ.ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೀಪಾವಳಿ ಹಬ್ಬದ ವಿಶೇಷದಲ್ಲೊಂದಾದ ಗೋಪೂಜೆ ಕಾರ್ಯಕ್ರಮವನ್ನು ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆಯ ಪುಣ್ಯಕೋಟಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು. ಪುಣ್ಯಕೋಟಿ ಕೊಟ್ಟಿಗೆಯನ್ನು ಮಾವಿನ ತಳಿರು ತೋರಣದಿಂದ ಅಲಂಕರಿಸಲಾಗಿತ್ತು. ಗೋಮಾತೆಯರನ್ನು ಬಣ್ಣದ ಚಿತ್ತಾರದಿಂದ ಸಿಂಗರಿಸಿ, ಹೂವಿನ ಮಾಲೆಗಳನ್ನು ಹಾಕಲಾಗಿತ್ತು. ಬಾಂಡ್ಯ ಎಜುಕೇಷನಲ್ ಟ್ರಸ್ಟನ ಕಾರ್ಯ ನಿರ್ವಾಹಕರಾದ ಅನುಪಮ ಎಸ್. ಶೆಟ್ಟಿ ಗೋವಿನ ಪಾದ ತೊಳೆದು ಅರಿಶಿನ ಕುಂಕುಮವಿಟ್ಟು ಆರತಿ ಬೆಳಗಿ ಅಕ್ಕಿ ಬಾಳೆಹಣ್ಣು, ಅರಿಸಿನ ಎಲೆಯ ಕಡುಬು ನೀಡಿ ಪೂಜೆ ನೆರವೇರಿಸಿದರು. ಈ ಸುಂದರ ಕ್ಷಣದಲ್ಲಿ ಪಂಚವಟಿ ವಸತಿ ನಿಲಯದ ವಿದ್ಯಾರ್ಥಿಗಳು ಭಾಗಿಯಾಗಿದ್ದು ಗೋ ಪೂಜೆ ನೋಡಿ ಸಂಭ್ರಮಿಸುದರ ಜೊತೆಗೆ ತಾವು ಗೋಮಾತೆಗೆ ಅಕ್ಕಿ, ಹಣ್ಣುಗಳನ್ನು ನೀಡಿ ಕಾಮಧೇನುವಿನ ಪೂಜೆಯ ಮಹತ್ವವನ್ನು ಅರಿತರು . ಈ ಸಂದರ್ಭದಲ್ಲಿ ಶಾಲಾ ವಸತಿ ನಿಲಯದ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾಸ್ ಪಿ ಯು ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣ ಗೈದು ಕನ್ನಡಾಂಭೆಯ ಭಾವಚಿತ್ರಕ್ಕೆ ದೀಪಬೆಳಗಿಸಿ ಪುಷ್ಪನಮನ ಸಲ್ಲಿಸಲಾಯಿತು. ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಧ್ವಜಾರೋಹಣ ಗೈದು ಮಾತನಾಡಿ, ಕನ್ನಡ ಭಾಷೆ ಕಲಿಯಲು ಸುಲಭ, ಮಾತನಾಡಲು ಸರಳ, ಕನ್ನಡ ಲಿಪಿ ನೋಡಲು ಅಂದ, ಕನ್ನಡ ಮಾತು ಕೇಳಲು ಚೆಂದ, ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ ನೆಲೆಯಾಗಿದೆ ಕರುನಾಡಿಗೆ ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಪುರ್ಣಗೊಂಡಿದ್ದು ಈ ಸುವರ್ಣ ಸಂಭ್ರಮ ಇಡೀ ನಾಡು ಅದ್ದೂರಿಯಾಗಿ ಆಚರಿಸುತ್ತಿದೆ. ಕಳೆದ ಐವತ್ತು ವರ್ಷಗಳಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ ಈ ಅವಧಿಯಲ್ಲಿ ಕರ್ನಾಟಕ ತನ್ನದೇ ಆದ ಅಚ್ಚಳಿಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ಕಟ್ಟುವ ಕಾಯಕದ ನಡುವೆ ಪರಿಸರ ಉಳಿಸುವ ಪಂಚವರ್ಣ ಸಂಸ್ಥೆ ಕಾರ್ಯವೈಕರಿ ನಿಜಕ್ಕೂ ಪ್ರಶಂಸನೀಯ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 27ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೆರಿಸಿ ಮಾತನಾಡಿ, ಸಂಘಟನೆಗಳು ಕ್ರೀಯಾಶೀಲತೆಯನ್ನು ಮೈಗೂಡಿಸಿಕೊಂಡಾಗ ಸಾಧನೆಯ ಮಜಲುಗಳನ್ನು ಕಾಣಲು ಸಾಧ್ಯ, 229 ವಾರಗಳ ಪರಿಸರ ಸಂರಕ್ಷಣೆ ಬರಿ ಮಾತಿನಲ್ಲಿ ಬಣ್ಣಿಸಲು ಸಾಧ್ಯವಿಲ್ಲ ಅದೊಂದು ದೊಡ್ಡ ಸಾಧನೆ ಅಂತಹ ಕೈಂಕರ್ಯದಲ್ಲಿ ತೊಡಗಿಕೊಂಡ ಸಂಘಟನೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದರಲ್ಲದೆ ಕನ್ನಡ ಭಾಷೆ ಅದರ ಉಳಿವು ರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸಿಮಿತಗೊಳ್ಳದೆ ಮನೆ ಮನಗಳಲ್ಲಿ ನಿತ್ಯನಿರಂತೆಯನ್ನು ಕಾಣುವಂತ್ತಾಗಲಿ ಎಂದು ಶುಭಹಾರೈಸಿದರು. ಕೋಟ ಗ್ರಾ.ಪಂ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪರಿಸರವಾದಿ ಕೋ.ಗಿ.ನಾ,ಮಣೂರು ಫ್ರೆಂಡ್ಸ್ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಮ ಸುದ್ದಿ.ಬೈಂದೂರು: ಕಲೆ, ಸಾಹಿತ್ಯ, ಶಿಕ್ಷಣ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿನ ಶ್ರೀಮಂತಿಕೆಯನ್ನು ಹೊಂದಿರುವ ಬೈಂದೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ಆಯೋಜಿಸಿರುವ ಬೈಂದೂರು ಉತ್ಸವ ಊರಿನ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆಯಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಲ್ಲಿನ ಗಾಂಧಿ ಮೈದಾನದಲ್ಲಿ ಬೈಂದೂರು ಉತ್ಸವ – ಸಂಭ್ರಮದ ಗೆಜ್ಜೆ, ಸಮೃದ್ಧಿ ಹೆಜ್ಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಕರಾವಳಿ ಹಾಗೂ ಮಲೆನಾಡು ಪ್ರದೇಶವನ್ನೊಳಗೊಂಡಿರುವ ಬೈಂದೂರಿಗೆ ಸಂಪರ್ಕ ಕಲ್ಪಿಸುವ ಮೂರು ರಾಷ್ಟ್ರೀಯ ಹೆದ್ದಾರಿಗಳನ್ನು ಕಳೆದ 10 ವರ್ಷದೀಚೆಗೆ ಅಭಿವೃದ್ಧಿಪಡಿಸುವ ಕೆಲಸವಾಗುತ್ತಿದೆ. ಮುಂದಿನ ದಿನಗಳಲ್ಲಿ ಬೈಂದೂರನ್ನು ಪ್ರಮುಖ ಪ್ರವಾಸಿ ತಾಣವಾಗಿ ಹಾಗೂ ಆರಾಧನಾ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಅವರು ಬೈಂದೂರು ಉತ್ಸವಕ್ಕೆ ರಾಜ್ಯ ಸರಕಾರ ಕೂಡ ಅನುದಾನ ಬಿಡುಗಡೆ ಮಾಡಿ ಪ್ರೋತ್ಸಾಹಿಸಿದೆ ಎಂದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಬೈಂದೂರು ಅಭಿವೃದ್ಧಿಯ ಬಗ್ಗೆ ಕನಸು ಕಂಡ ಹಲವು…
ಕುಂದಾಫ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕಿನ ಪಂಚಾಯತ್ ಮಾಜಿ ಸದಸ್ಯ, ಕಾಳಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾಳಾವರ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನಿಧನವಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನವೆಂಬರ್ 1 ರಂದು ಭಂಡಾರ್ಕಾರ್ಸ್ ಕಾಲೇಜಿನ ಆವರ್ತ ವೇದಿಕೆ ಮತ್ತು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇವರ ಸಹಯೋಗದಲ್ಲಿ 69ನೇ ರಾಜ್ಯೋತ್ಸವ ತಾಳಮದ್ದಳೆ ಹಾಗೂ ಈ ವರ್ಷದ “ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ” ಪುರಸ್ಕೃತ ಬಡಗುತಿಟ್ಟು ಯಕ್ಷಗಾನದ ಯುವ ಕಲಾವಿದರಾದ ಚಂದ್ರಕಾಂತ ರಾವ್, ಮೂಡುಬೆಳ್ಳೆ ಅವರಿಗೆ ಪ್ರದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಹೆಚ್. ಶಾಂತಾರಾಮ್ ಮಾತನಾಡಿ, ಇದು ಯಕ್ಷಗಾನ ಪುರಸ್ಕಾರ ಇದು ಪ್ರಶಸ್ತಿ ಅಲ್ಲ. ಅವರ ಸಾಧನೆ ದೊಡ್ಡದು. ಅವರ ಸಾಧನೆ ವಿಶ್ವದ ಉದ್ದಗಲಕ್ಕೂ ಬೆಳೆಯಲಿ. ಈ ಯಕ್ಷಗಾನ ಪುರಸ್ಕಾರವು ಅವರ ಸಾಧನಾಪೂರ್ಣ ಯಶಸ್ಸಿಗೆ ಪ್ರೇರಣೆಯಾಗಲಿ. ಅವರು ಕೀರ್ತಿಶಾಲಿಯಾಗಲಿ ಎಂದು ಹೇಳಿದರು. ಸಾಲಿಗ್ರಾಮ ಮೇಳದ ಯಜಮಾನರಾದ ಕಿಶನ್ ಹೆಗ್ಡೆ ಅಭಿನಂದನಾ ಭಾಷಣವನ್ನು ಮಾಡಿದರು. ಈ ವರ್ಷದ “ಡಾ. ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ” ಪುರಸ್ಕೃತ ಬಡಗುತಿಟ್ಟು ಯಕ್ಷಗಾನದ ಯುವ ಕಲಾವಿದರಾದ ಚಂದ್ರಕಾಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಾ ಸಂಪದ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಚಲಿಸಬಲ್ಲ ಇ-ತ್ರಿಚಕ್ರ ವಿದ್ಯುತ್ ಚಾಲಿತ ಸುಸಜ್ಜಿತ ಪರಿಸರ ಸ್ನೇಹಿ ಕಿಯಾಸ್ಕ್ “ಮತ್ಸ್ಯಾವಾಹಿನಿ” ವಾಹನಗಳಲ್ಲಿ ತಾಜಾ ಮೀನು ಮಾರಾಟಕ್ಕೆ ಹಾಗೂ ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಪರವಾನಗಿ ಆಧಾರದಲ್ಲಿ ಪಡೆಯುವ ಬಗ್ಗೆ ಜಿಲ್ಲೆಯ ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದವರಿಗೆ 1 ಲಕ್ಷ ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ವರ್ಗದವರಿಗೆ 50 ಸಾವಿರ ಭದ್ರತಾ ಠೇವಣಿ ನಿಗದಿಪಡಿಸಲಾಗಿದ್ದು, ಆಯ್ಕೆಯಾದ ಪರವಾನಗಿದಾರರಿಗೆ ಪ್ರತಿ ವಾಹನಕ್ಕೆ 3000 ರೂ ಮಾಸಿಕ ಶುಲ್ಕ ನಿಗದಿಪಡಿಸಲಾಗುವುದು. ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಕ್ವಾಡಿ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಧ್ವಜಾರೋಹಣ ಮಾಡಿ ಮಾತನಾಡಿ, ನಮ್ಮ ಮಾತೃಭಾಷೆಯ ಮೇಲೆ ನಮಗೆ ಸಂಪೂರ್ಣ ಹಿಡಿತ ಮತ್ತು ಹೆಮ್ಮೆ ಜೊತೆಗೆ ಇತರ ಭಾಷೆಗಳ ಮೇಲೆ ಗೌರವ ಇರಬೇಕು ,ನಮ್ಮ ನಾಡು ನುಡಿಯನ್ನು ಗೌರವಿಸುವುದು ಕೇವಲ ಈ ತಿಂಗಳಿಗೆ ಸೀಮಿತವಾಗದೆ ಪ್ರತಿ ದಿನವೂ ಅದರ ಸವಿಯನ್ನು ಸವಿಯಬೇಕು ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನಿಲ್ ಪ್ಯಾಟ್ರಿಕ್, ಕಾಲೇಜು ಪ್ರಾಂಶುಪಾಲರಾದ ಅವಿನಾಶ್, ಉಪಾನ್ಯಾಸಕರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕ ಪ್ರಶಾಂತ್ ನಿರೂಪಿಸಿ, ಉಪನ್ಯಾಸಕಿ ದೀಪಾ ಕಾಮತ್ ವಂದಿಸಿದರು.
