Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇವರ ಆಶ್ರಯದಲ್ಲಿ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಪುಣ್ಯಸ್ಮರಣೆ -ನುಡಿ ನಮನ ಕಾರ್ಯಕ್ರಮ ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿಮಲಾ ಪೈ ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಅವರು ಮಾತೃಶ್ರೀ ರತ್ನಮ್ಮ ಹೆಗ್ಗಡೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಮಾತೃಶ್ರೀ ರತ್ನಮ್ಮ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ದೀನ ದಲಿತರಿಗೆ ಅದರಲ್ಲೂ ಶಿಕ್ಷಣಕ್ಕೆ ಒತ್ತು ನೀಡಿ ಕಾರ್ಯಕ್ರಮ ರೂಪಿಸಿದ್ದರು. ಮಹಿಳೆಯರಿಗೆ ಸ್ವಾವಲಂಬಿ ಜೀವನಕ್ಕೆ ಅನೇಕ ಕಾರ್ಯಕ್ರಮಗಳನ್ನು ನೀಡಿ ವಿಶ್ವವೇ ಧರ್ಮಸ್ಥಳವನ್ನು ನೋಡುವಂತೆ ಮಾಡಿದ್ದರು ಎಂದು ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗಂಗೊಳ್ಳಿ ಬಿ ಒಕ್ಕೂಟದ ಮಾಜಿ ಅಧ್ಯಕ್ಷೆ ಸುಮಿತ್ರಾ ಜಿ. ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರಾದ ಫಿಲೋಮಿನಾ ಫೆರ್ನಾಂಡಿಸ್, ರೇಖಾ ಖಾರ್ವಿ, ನಿಖಿತಾ, ಕಮಲ, ಶೇಷಮ್ಮ, ಶೋಭಾ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಪಠ್ಯ ಶಿಕ್ಷಣ ಕಲಿಸುವ ಒಳಾಂಗಣ ಚಟುವಟಿಕೆಗಳಷ್ಟೇ ಪ್ರಮುಖವಾಗುವುದು. ಆಟೋಟ- ಪಂದ್ಯಾಟಗಳಿಂದ ಮಕ್ಕಳ ಬೆಳವಣಿಗೆಗೆ ಹೊಸ ಆಯಾಮವನ್ನು ನೀಡುವ ಹೊರಾಂಗಣ ಚಟುವಟಿಕೆಗಳು. ಆರ್. ಎನ್ ಶೆಟ್ಟಿ ಪದವಿ‌ ಪೂರ್ವ ಕಾಲೇಜು ಈ ಎರಡೂ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿಸಿ ಮುಂಚೂಣಿಯಲ್ಲಿರುವುದು ಸಂತಸ ತಂದಿದೆ”  ಎಂದು ಉಡುಪಿ ಜಿಲ್ಲೆಯ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಉಪಾಧ್ಯಕ್ಷರಾದ ರವಿಶಂಕರ್ ಹೆಗ್ಡೆ ಅವರು ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟಿಸಿವುದರ ಮೂಲಕ ಕೆರ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ತಾಲೂಕು ಕ್ರೀಡಾ ಮತ್ತು ಯುವಜನ‌ ಅಧಿಕಾರಿಯಾದ ಕುಸುಮಾಕರ ಶೆಟ್ಟಿ ಮಾತನಾಡಿ, ಕ್ರೀಡೆ ಎನ್ನುವುದು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಮರು ಪ್ರಯತ್ನಗಳು ಮತ್ತು ಹಲವು ಅವಕಾಶಗಳಿಗೆ ತಾವು ತೆರೆದುಕೊಳ್ಳುವ ಬಗ್ಗೆ ಕಲಿಸುತ್ತದೆ‌ ಎಂದು ಅಭಿಪ್ರಾಯಪಟ್ಟರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರದ ಕಾಲೇಜು ಆಡಳಿತ ಮಂಡಳಿ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಸೀತಾರಾಮ ನಕ್ಕತ್ತಾ ಅವರು ಕ್ರೀಡಾಕೂಟಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಲ್ಲೂರು ಗ್ರಾಮದ ನಿವಾಸಿ ಗೀತಾ (41) ಅವರು ಕುಂದಾಪುರದ ಸಂಗಮ್ ಬಳಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಅತಿಯಾದ ಮಾತ್ರೆ ಹಾಗೂ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ  ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಂಗಡಿ ಗ್ರಾಮದ ಸುರೇಂದ್ರ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ. ಪರಿಣಾಮ ಸಹಸವಾರೆ ನಾಗರತ್ನಾ ಅವರು ಗಾಯಗೊಂಡಿದ್ದಾರೆ, ಸಿದ್ದಾಪುರ-ಅಮಾಸೆಬೈಲು ರಸ್ತೆಯಲ್ಲಿ ಜಡ್ಡಿನಬೈಲು ನಂದಿಕೇಶ್ವರ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ. ಗಾಯಾಳು ನಾಗರತ್ನಾ ಅವರಿಗೆ ಸಿದ್ದಾಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮದ ಕಾಡಿನಬೆಟ್ಟು ನಿವಾಸಿ ವಿಶ್ವನಾಥ ಅವರ ಪತ್ನಿ ಸುಶೀಲಾ (56) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ನಡೆದಿದೆ. ಪತಿ ವಿಶ್ವನಾಥ ಅವರು ಬೆಳಗ್ಗೆ 8 ಗಂಟೆಗೆ ಮನೆಯಿಂದ ಮೊಳಹಳ್ಳಿಗೆ ತೆರಳಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮನ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಎಂದು ತಿಳಿಯಲಾಗಿದೆ. ಅವರ ಸಹೋದರ ಕುಶಲ ಹಳ್ನಾಡು ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆನಗಳ್ಳಿಯ ಸೇತುವೆ ಬಳಿ ವಾರಾಹಿ ಹೊಳೆಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ಸಹದೇವ (69) ಅವರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರದಂದು ನಡೆದಿದೆ. ಅವರ ಅಳಿಯ ಉದಯ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ನಡೆದ ಕುಂದಾಪುರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸ. ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಎನ್. ಖಾರ್ವಿ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ಕುಂದಾಪುರ ಮೂಲದ ಬೀಜಾಡಿಯ ನಾಗೇಂದ್ರ ಗಾಣಿಗ ಇವರ ನಿರ್ದೇಶನದ ಕನ್ನಡ ಚಲನಚಿತ್ರ ಕುಂದಾಪುರ ಭಾಷೆಯ ಜತೆಗೆ ಕರಾವಳಿ ಸಂಸ್ಕೃತಿಯ ಸೊಗಡನ್ನು ಬಿಂಬಿಸುವ ದಿಂಸೋಲ್ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ತಲ್ಲೂರಿನ ರಾಜಾಡಿಯ ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಅಭಿರಾಮಚಂದ್ರ ಸಿನಿಮಾ ಮೂಲಕ ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ ಆ ಚಿತ್ರದಲ್ಲಿ ಬಾಲ್ಯ, ಸ್ನೇಹದ ಜೊತೆಗೆ ತ್ರಿಕೋನ ಪ್ರೇಮ ಕಥೆ ಹೇಳಿದ್ದ ಅವರಿಗೆ ಕರಾವಳಿ ಸಂಸ್ಕೃತಿಯ ಸೊಗಡನ್ನು ದಿಂಸೋಲ್ ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ. ದಿಂಸೋಲ್ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನ್ನು ವಕೀಲರಾದ ಟಿ.ಬಿ.ಶೆಟ್ಟಿ ಅವರು ಅನಾವರಣ ಮಾಡಿದ್ದಾರೆ. ನಟರಾದ ರಘು ಪಾಂಡೇಶ್ವರ್, ಯತೀಶ್ ಬೈಕಂಪಾಡಿ, ಸ್ಥಳೀಯ ಪ್ರಮುಖರು, ಗೋಪಾಡಿಯ ಮಹಿಳಾ ಭಜನಾ ಕುಣಿತ ತಂಡದವರು ಮತ್ತು ಕುಂದಾಪುರದ ಚಂಡೆ ತಂಡದ ಸದಸ್ಯರು ಉಪಸ್ಥಿತರಿದ್ದರು. ನಾಗೇಂದ್ರ ಗಾಣಿಗ ಇವರ ನಿರ್ದೆಶನದಲ್ಲಿ ಮೂಡಿಬಂದ ಈ ಸಿನಿಮಾಕ್ಕೆ ಕೆಜಿಎಫ್ ಮ್ಯೂಸಿಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಸಿಯ ಮಕ್ಕಳ ಮನೆಯಲ್ಲಿ ಕೊರಗ ಸಮುದಾಯದ ಸಂಸ್ಕೃತಿ ಹಾಗೂ ಸಂಪ್ರಾದಾಯ ಬೆಳಕಿನ ಹಬ್ಬ ದೀಪಾವಳಿ ಬೊಲ್ಪು ಎನ್ನುವ ಕಾರ್ಯಕ್ರಮದ ಮೂಲಕ ವಿಶಿಷ್ಟವಾಗಿ ಅನಾವರಣಗೊಂಡಿತು. ಆದಿವಾಸಿಗಳಾದ ಕೊರಗ ಸಮುದಾಯ ಕಾಡಿನ ಜೊತೆಗಿನ ನಂಟು, ಕರಾವಳಿಯ ಬದುಕಿನ ಜೊತೆ ಹಾಸುಹೊಕ್ಕಾದ ಅವರ ನಡೆ ನುಡಿ ಆಚಾರ ವಿಚಾರ ಪರಿಶುದ್ಧ ಸಂಪ್ರಾದಾಯಗಳನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಆಯೋಜಿಸಲಾದ ಕಾರ್ಯಕ್ರದಲ್ಲಿ ಕೊರಗ ಸಮುದಾಯದ ಯುವ ಪೀಳಿಗೆಗೆ ಸಮುದಾಯದ ಸಂಸ್ಕೃತಿ ಸಂಪ್ರದಾಯಗಳನ್ನು ಬೆಳಕು ಚೆಲ್ಲುವ ಮೂಲಕ ಹಿರಿಯರು ಈ ಹಿಂದೆ ನಡೆಸಿದ ಜೀವನದ ಪದ್ಧತಿ ಹಾಗೂ ದೈವಗಳ ಆರಾಧನೆ ಮತ್ತು ಅವರ ಕಟ್ಟಿಕೊಂಡ ಕಾನನದೊಳಗಿನ ಮಾನವೀಯ ಮೌಲ್ಯಗಳ ಪ್ರಕೃತಿಕ ಸಂಬಂಧಗಳು ಮತ್ತು ಬದುಕಿನ ಬುತ್ತಿಗೆ ದಾರಿ ತೋರಿಸಿದ ಪರಿಕರಗಳನ್ನು ತಯಾರಿಸುವ ಅವರ ಕರಕುಶಲ ಕಲೆಗಳ ವೈಶಿಷ್ಟ್ಯವನ್ನು ಪೂಜಿಸುವ ಮೂಲಕ ಕಾರ್ಯಕ್ರಮ ಸಂಪನ್ನಗೊಂಡಿತು. ಹಿಂದಿನ ಕಾಲದಲ್ಲಿ ಕೊರಗ ಸಮುದಾಯ ಕೃಷಿ ಕುಟುಂಬವಾಗಿಲ್ಲವಾದರೂ ಕೂಡ ಕೃಷಿ ಬೆಳೆದ ಸಂದರ್ಭದಲ್ಲಿ ಹಾಗೂ ಭತ್ತ ಕಟಾವು ಮಾಡಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ-ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರು, ಮೀನು ಕೃಷಿಕರು, ಮೀನು ಕಾರ್ಮಿಕರು, ಮೀನು ಮಾರಾಟಗಾರರು, ಮೀನು ಸಾಗಾಣಿಕೆ ಮಾಡುವವರು, ಮೀನು ಸಂಸ್ಕರಣಾ ಘಟಕಗಳು, ಮೀನು ಆಧಾರಿತ ಸೂಕ್ಷ್ಮ ಅಥವಾ ಸಣ್ಣ ಉದ್ಯಮಗಳು, ಐಸ್ ಪೂರೈಕೆದಾರರು ಹಾಗೂ ಮೀನುಗಾರಿಕೆ ವಲಯಕ್ಕೆ ಸಂಬಂಧಿಸಿದ ಇತರೆ ಚಟುವಟಿಕೆಗಳಲ್ಲಿ ನಿರತರಾದ ಪ್ರತಿಯೋರ್ವರೂ ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್ ಫಾರ್ಮ್ (ಓಈಆP) ಪೋರ್ಟಲ್ ನಲ್ಲಿ ನೇರವಾಗಿ ಅಥವಾ ಮೀನುಗಾರಿಕೆ ಸಹಕಾರಿ ಸಂಘಗಳ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರದ (ಅSಅ) ಮೂಲಕ ಶುಲ್ಕ ರಹಿತವಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್ ಫಾರ್ಮ್ (ಓಈಆP) ಪೋರ್ಟಲ್ ನಲ್ಲಿ ನೋಂದಾಯಿಸಲು ಹೆಚ್ಚುವರಿ ಶುಲ್ಕ ವಿಧಿಸುವ/ ವಿಧಿಸಿರುವ/ ವಿಧಿಸುತ್ತಿರುವ ಮೀನುಗಾರಿಕೆ ಸಹಕಾರಿ ಸಂಘಗಳು ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಮೇಲೆ ಉಡುಪಿ, ಕುಂದಾಪುರ ಮತ್ತು ಕಾರ್ಕಳ…

Read More