ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆಯಲ್ಲಿ ವೇಳೆ ಸಂಸದರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಅವರ ಅಭಿಮಾನಿಗಳು ಅಧಿಕಾರಿಗಳು ಹಾಗೂ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ ಘಟನೆ ಬುಧವಾರ ನಡೆದಿದೆ. ತಾಲೂಕು ಆಡಳಿತ ಸೌಧದ ಉದ್ಘಾಟನೆಯ ವೇದಿಕೆಯಲ್ಲಿ ಹಾಕಲಾಗಿದ್ದ ಕಾರ್ಯಕ್ರಮದ ಕಟೌಟ್ನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ ಪೋಟೋ ಚಿಕ್ಕದಾಗಿ ಮುದ್ರಿಸಿದ್ದು, ಉಸ್ತುವಾರಿ ಸಚಿವರು ಹಾಗೂ ಶಾಸಕರ ಪೋಟೋವನ್ನು ದೊಡ್ಡದಾಗಿ ಹಾಕಲಾಗಿತ್ತು. ಇದು ಆಡಳಿತ ಸೌಧಕ್ಕೆ ಅನುದಾನ ಮಂಜೂರು ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಸಂಸದರಿಗೆ ಮಾಡಿದ ಅವಮಾನ ಎಂದು ಅಭಿಮಾನಿಗಳು ಜಿಲ್ಲಾಧಿಕಾರಿಗಳನ್ನು ಸ್ಥಳದಲ್ಲಿಯೇ ಪ್ರಶ್ನಿಸಿದ್ದಾರೆ. ಅಲ್ಲದೇ ಸಂಸದರನ್ನು ನಿರ್ಲಕ್ಷ್ಯಿಸಿರುವುದನ್ನು ಖಂಡಿಸಿ ವೇದಿಕೆಯ ಕೆಳಗಿನಿಂದ ಸಂಸದರಿಗೆ ಜೈಕಾರ ಹಾಕಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮಾಜಿ ತಾಪಂ ಉಪಾಧ್ಯಕ್ಷ, ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ಶೆಟ್ಟಿ ಕಡ್ಕೆ ಮಾತನಾಡಿ, ಬೈಂದೂರು ತಾಲೂಕಿಗೆ ಅತಿ ಹೆಚ್ಚು ಅನುದಾನ ತಂದವರು ಸಂಸದ ಬಿ.ವೈ. ರಾಘವೇಂದ್ರ ಅವರು ಎಂಬುದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ಬೈಂದೂರು ಕ್ಷೇತ್ರದಲ್ಲಿ ನಡೆದ ವಿಜಯ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಬಾಳೆಹಿತ್ಲು ಮಲಿಯನಮನೆ ರಸ್ತೆಯ ಮನೆ ಭೇಟಿ ನೀಡಿ ಕರಪತ್ರ ನೀಡಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು. ಈ ವೇಳೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಶೆಟ್ಟಿ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಪ್ರಭಾರಿ ಉದಯ ಕುಮಾರ ಶೆಟ್ಟಿ, ರಾಜ್ಯ ಸಂಚಾಲಕ ರಾಜೇಂದ್ರ, ಸಹ ಸಂಚಾಲಕ ದತ್ತಾತ್ರೇಯ, ಕಿಶೋರ ಕುಮಾರ, ಬಿಜೆಪಿ ಮಂಡಲದ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರ್, ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಅನಿತಾ ಶ್ರೀಧರ್, ರಾಜೇಶ್ ಕಾವೇರಿ, ಸದಾನಂದ ಉಪ್ಪಿನಕುದ್ರು, ಸ್ಥಳೀಯರಾದ ರಾಜಶೇಖರ ದೇವಾಡಿಗ, ಚಂದ್ರಶೇಖರ ದೇವಾಡಿಗ, ದುರ್ಗ ದೇವಾಡಿಗ, ಉಮೇಶ ದೇವಾಡಿಗ, ಮಂಜುನಾಥ ಗಾಣಿಗ, ಕೆ.…
ಬೈಂದೂರು ಕ್ಷೇತ್ರಕ್ಕೆ ಅನುದಾನ ಬಂದಿದ್ದರೆ, ಅದಕ್ಕೆ ಶಾಸಕ ಸುಕುಮಾರ ಶೆಟ್ಟಿ ಅವರು ಕಾರಣರಲ್ಲ!ಗೋಪಾಲ ಪೂಜಾರಿ ಅವರ ಕಾಲದಲ್ಲೇ ಬೈಂದೂರು ಸರ್ವತೋಮುಖ ಅಭಿವೃದ್ಧಿಯತ್ತ ದಾಪುಗಾಲಿರಿಸಿತ್ತುಬೈಂದೂರು ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಈ ಭಾರಿ ಗೆಲುವು ನಮ್ಮದೇ – ಮದನ್ ಕುಮಾರ್ ಉಪ್ಪುಂದ
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಮಾ.14: ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾರ್ಚ್ 15ರಿಂದ ಮಾರ್ಚ್ 19ರವರೆಗೆ ಕರಾವಳಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳಕ್ಕೆ ಜನ ತತ್ತರಿಸಿ ಹೋಗಿದ್ದು, ಮಂಗಳೂರು, ಸುಳ್ಯ ಮುಂತಾದೆಡೆ ಪ್ರಖರ ಬಿಸಿಲಿಗೆ ಮನೆಯಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ಪ್ರಖರತೆ ಹೆಚ್ಚಿದ್ದು, ಕಳೆದ ಕೆಲವು ದಿನಗಳಲ್ಲಿ ಜನ ಬಿಸಿ ಗಾಳಿಯನ್ನೂ ಅನುಭವಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕಾರ್ಯನಿರತ ಸಂಘ ಉಡುಪಿ ಜಿಲ್ಲಾ ಸಂಘದ ಅಧೀನ ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇದರ ನೂತನ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆಯಾಗಿದ್ದಾರೆ. ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ನಾಗರಾಜ ರಾಯಪ್ಪನಮಠ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಜೊತೆ ಕಾರ್ಯದರ್ಶಿಗಳಾಗಿ ಯೋಗೀಶ ಕುಂಭಾಶಿ ಹಾಗೂ ರಾಘವೇಂದ್ರ ಬಳ್ಕೂರು, ಕೋಶಾಧಿಕಾರಿಯಾಗಿ ಲೋಕೇಶ್ ಆಚಾರ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಕುಮಾರ್, ಶಶಿಧರ ಹೆಮ್ಮಾಡಿ, ಮಂಜುನಾಥ ಶೆಣೈ ಜನ್ನಾಡಿ, ಸತೀಶ್ ಆಚಾರ್ಯ ಉಳ್ಳೂರು, ವಿನಯ್ ಪಾಯಸ್, ರಾಮಕೃಷ್ಣ ಹೇರಳೆ, ಶ್ರೀಕಾಂತ ಹೆಮ್ಮಾಡಿ, ಸಂತೋಷ್ ಕುಂದೇಶ್ವರ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಚುನಾವಣೆ ಪ್ರಕ್ರಿಯೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಗ್ರಾಮ ಪಂಚಾಯತ್ ಹಿಂಭಾಗದ ಅಶೋಕ ಪಾರ್ಕಿನಲ್ಲಿ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ ಎಂದು ಇತಿಹಾಸ ಸಂಶೋಧಕ ಫ್ರೊ.ಟಿ. ಮುರುಗೇಶ್ ಮಾಹಿತಿ ನೀಡಿದ್ದಾರೆ. ಈ ಕಲ್ಲಿನ ಬಗ್ಗೆ ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಚಾಲಕರು ಪ್ರದೀಪ ಕುಮಾರ್ ಬಸ್ರೂರು ಅವರು ಸಂಶೋಧಕರ ಗಮನಕ್ಕೆ ತಂದಿದ್ದಾರೆ. ಬಸ್ರೂರು ಗ್ರಾಮ ಪಂಚಾಯತ್ ಹಿಂಭಾಗದ ಅಶೋಕ ಪಾರ್ಕ್ ಜೀರ್ಣೋದ್ಧಾರ ಕಾರ್ಯವು ಸ್ಧಳೀಯರ ಸಹಕಾರದಲ್ಲಿ ನಡೆಯುತ್ತಿದ್ದು, ಈ ಪಾರ್ಕ ಅಭಿವೃದ್ಧಿ ಕಾರ್ಯದ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ಮೆಂಡನ್ ನೇತೃತ್ವದಲ್ಲಿ ಜಾಗ ಸಮತಟ್ಟು ಮಾಡುವ ಸಂಧರ್ಭ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ. ಕಲ್ಲಿನಲ್ಲಿ ಸೂಯ೯, ಚಂದ್ರ, ಶಿವಲಿಂಗ, ನಂದಿ ವಿಗ್ರಹ ಇರುವುದು ಕಂಡು ಬಂದಿದೆ. ಕಾಲ: ಕೆಳದಿಯ ಸ.ಸೂ ನಾಲ್ಕು ನೂರು ವಷ೯ದ ಹಳೆಯ ಲಿಂಗ ಮುದ್ರಿಕೆ ಕಲ್ಲು ವರದಿಯಂತೆ ಸೂರ್ಯ, ಚಂದ್ರ, ಇರುವ ತನಕ ಅಜರಾಮರವಾಗಿ ಇರಲಿ ಯೆನ್ನುವಂತ ಸಂದೇಶ ನೀಡುವಂತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ದುಬೈ: ಯುಎಇನಲ್ಲಿನ ಕರ್ನಾಟಕ ಸಂಘ ಶಾರ್ಜಾ ಎರಡು ದಶಕಗಳನ್ನು ಪೂರ್ತಿಗೊಳಿಸಿ, ಇಪ್ಪತ್ತೊಂದನೆಯ ವರ್ಷದತ್ತ ಮುನ್ನಡೆಯುತ್ತಿದ್ದು, ಇದರ ನೂತನ 12ನೇ ಅಧ್ಯಕ್ಷರಾಗಿ ಸತೀಶ್ ಪೂಜಾರಿಯವರು ಎರಡನೆಯ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 2023 ಮಾರ್ಚ್ 11ರಂದು ಸಂಜೆ ದುಬಾಯಿ ಫಾರ್ಚೂನ್ ಅಟ್ರಿಯಂ ಹೋಟೆಲ್ ಸಭಾಂಗಣದಲ್ಲಿ ಶಾರ್ಜಾ ಕರ್ನಾಟಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಮಹಾಸಭೆಯು ಪ್ರಾರ್ಥನೆ, ಸ್ವಾಗತದೊಂದಿಗೆ ಪ್ರಾರಂಭವಾಯಿತು. ಪೋಷಕರಾದ ಮಾರ್ಕ ಡೆನಿಸ್ ಡಿ’ಸೋಜಾ ಎರಡು ದಶಕಗಳು ನಡೆದುಬಂದ ಹಾದಿಯ ಸಾಧನೆಗಳ ಮಾಹಿತಿಯನ್ನು ಸಭೆಯ ಮುಂದಿಟ್ಟರು. ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿಯವರು ವಾರ್ಷಿಕ ವರದಿವಾಚಿಸಿ ಅನುಮೋದನೆಯನ್ನು ಪಡೆದುಕೊಂಡರು. ಖಜಾಂಚಿ ಮಹ್ಮದ್ ಅಬ್ರಾರ್ ಆಯವ್ಯಯ ಲೆಕ್ಕ ಪತ್ರವನ್ನು ಮಂಡಿಸಿ ಸರ್ವ ಸದಸ್ಯರ ಅನುಮತಿಯನ್ನು ಪಡೆದುಕೊಂಡರು. ಉಪಾಧ್ಯಕ್ಷರಾದ ನೋಯಲ್ ಅಲ್ಮೆಡಾ ಅವರು ತಮ್ಮ ಅವಧಿಯಲ್ಲಿ ನಡೆದ ಕಾರ್ಯಕ್ರಮಗಳ ಯಶಸ್ಸಿನ ಹಿಂದಿನ ರುವಾರಿಗಳ ಸಾಧನೆಗಳನ್ನು ಶ್ಲಾಘಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅಧ್ಯಕ್ಷರಾದ ಮಹ್ಮದ್ ಇಬ್ರಾಹಿಂ ಮೂಳೂರ್ ರವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ‘ಮಿನಿ ವಿಧಾನಸೌಧ’ ಮಾರ್ಚ್ 15ರಂದು ಉದ್ಘಾಟನೆಗೆ ಸಜ್ಜಾಗಿದೆ. ಮಾ.15ರ ಬೆಳಿಗ್ಗೆ 10-30ಕ್ಕೆ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ನೂತನ ಕಟ್ಟಡವನ್ನು ಉದ್ಘಾಟನೆಗೊಳಿಲಿದ್ದಾರೆ. ಈ ವೇಳೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಸಚಿವರುಗಳಾದ ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಆರ್. ಅಶೋಕ್, ವಿ. ಸೋಮಣ್ಣ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ. ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ. ಬೈಂದೂರಿಗೆ ಮುಕುಟಪ್ರಾಯ:ಅಭಿವೃದ್ಧಿಯ ಪಥದಲ್ಲಿರುವ ಬೈಂದೂರು ತಾಲೂಕಿಗೆ ಮುಕುಟಪ್ರಾಯದಂತೆ ಬೈಂದೂರು ಮಿನಿ ವಿಧಾನಸೌಧ ಕಂಗೊಳಿಸುತ್ತಿದೆ. ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ಅವಧಿಯಲ್ಲಿ ತಾಲೂಕು ಘೋಷಣೆಯಾಗಿ ಮಿನಿ ವಿಧಾನಸೌಧದ ನಿರ್ಮಿಸುವ ಪ್ರಕ್ರಿಯೆ ಆರಂಭಗೊಂಡರೇ, ಹಾಲಿ ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಶಾಸಕರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀರ್ವಾದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನದಲ್ಲಿ ಮಾ.೧೩ರಂದು ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಕೆಳಬನದಲ್ಲಿ ಜರುಗಲಿರುವ ಏಕಪವಿತ್ರ ನಾಗಮಂಡಲೋತ್ಸವದ ಅಂಗವಾಗಿ ಶನಿವಾರ ಹಸಿರು ಹೊರೆಕಾಣಿಕೆ ಪುರ ಮೆರವಣಿಗೆ ನಡೆಯಿತು. ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಿಂದ ಹೊರಟ ಹಸಿರು ಹೊರೆಕಾಣಿಕೆ ಪುರ ಮೆರವಣಿಗೆಗೆ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಿರಿಯ ಸದಸ್ಯ ಸುರೇಶ್ ಬೆಟ್ಟಿನ್ ಚಾಲನೆ ನೀಡಿ ಶುಭ ಹಾರೈಸಿದರು. ಸೇವಾಕರ್ತರಾದ ರಾಮಚಂದ್ರ ಮತ್ತು ಕುಟುಂಬಿಕರು, ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ನಾಗರಾಜ್, ಸದಸ್ಯರಾದ ವಾದಿರಾಜ್ ಹೆಬ್ಬಾರ್, ಚಂದ್ರ ಬಿ.ಎನ್, ಪುರಮೆರವಣಿಗೆ ಸಂಚಾಲಕ ರಾಮನಾಯ್ಕ್, ನಾಗಮಂಡಲೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ತಟ್ಟಿರಾಯ, ಕೀಲು ಕುದುರೆ, ಪಂಚವಾದ್ಯಗಳು, ಚಂಡೆವಾದನ, ಬ್ಯಾಂಡ್, ಭಜನೆ, ನಾಮಸಂಕೀರ್ತನೆ ಸೇರಿದಂತೆ ಕಳಸ ಹಿಡಿದ ಮಹಿಳೆಯರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬೈಂದೂರು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯೋಜನೆಯಲ್ಲಿ ಶೈಕ್ಷಣಿಕ ಕಾರ್ಯಗಾರ, ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮವು ಶುಕ್ರವಾರ ಸಾಧನಾ ಸಭಾಭವನ ಮರವಂತೆಯಲ್ಲಿ ಜರುಗಿತು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಉದ್ದೇಶ, ಶಿಕ್ಷಣದಲ್ಲಿ ದೈಹಿಕ ಶಿಕ್ಷಣದ ಪ್ರಾಮುಖ್ಯತೆ, ಏನೇ ಅಡೆ ತಡೆ ಇದ್ದರೂ ಕ್ರೀಡಾ ಪ್ರತಿಭೆಗಳನ್ನು ಹೊರತರುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರದ ಕುರಿತು ಮನಮುಟ್ಟುವಂತೆ ತಿಳಿಸಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಪ್ರೋತ್ಸಾಹ ನುಡಿಗಳನ್ನಾಡಿದರು. ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. 2022-23ನೇ ಸಾಲಿನಲ್ಲಿ ಕ್ರೀಡೆಯಲ್ಲಿ ವಿಭಾಗ, ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆಗೈದ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ನಗದು ಪುರಸ್ಕಾರದೊಂದಿಗೆ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಸಾಧನಾ ಸಂಸ್ಥೆಯ ಸ್ಥಾಪಕರು ಹಾಗೂ ನಿವೃತ್ತ ಉಪನ್ಯಾಸಕರಾಗಿರುವ ಎಸ್ ಜನಾರ್ದನ ಅವರು ವಿದ್ಯಾರ್ಥಿಗಳನ್ನು…
