ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಾಪುರಕ್ಕೆ 2024-2029ನೇ ಸಾಲಿನ ಅರಣ್ಯ ಇಲಾಖೆಯಿಂದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಛೇರಿಯ ದ್ವಿತೀಯ ದರ್ಜೆ ಸಹಾಯಕರಾದ ನಾಗರಾಜ ಪಟವಾಲ್ ಅವರು ಗೆಲುವು ಸಾಧಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 2020 ರಿಂದ 22 ರ ವರೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತವಾದ ಸ್ಥಳಗಳನ್ನು 20 ಬ್ಲಾಂಯಕ್ ಸ್ಪಾಟ್ ಗಳನ್ನಾಗಿ ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಸುರಕ್ಷಿತಾ ನಿರ್ವಹಣೆ ಕಾಮಗಾರಿಗಳಾದ ಕಪ್ಪುಚುಕ್ಕೆ ಸ್ಥಳಗಳಲ್ಲಿ ಪಾದಚಾರಿಗಳ ಕ್ರಾಸಿಂಗ್ ಹಾಗೂ ಜೀಬ್ರಾ ಕ್ರಾಸಿಂಗ್, ಸೂಚನಾ ಫಲಕಗಳು, ಹೈಮಾಸ್ಟ್ ದ್ವೀಪಗಳು, ಬ್ಲಿಂರಸ್ಗ್್ಳು, ರಸ್ತೆ ಬದಿಯಲ್ಲಿ ಮೆಟಲ್ ಕ್ರಾಸ್ ಬ್ಯಾರಿರಸ್, ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆಗಳಿಗೆ ಹಂಪ್ಸ್, ಫೂಟ್ಓವರ್ ಬ್ರಿಡ್ಜ್, ಕೆಲವು ಸ್ಥಳಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಒಳಚರಂಡಿ, ಎಂ.ಎಸ್ ರೈಲಿಂಗ್ಸ್, ಕಾಮಗಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಅ.28ರಂದು ಮೈಸೂರಿನ ಶಾರದಾ ವಿಲಾಸ್ ಶಿಕ್ಷಣ ಸಂಸ್ಥೆಗಳ ಶತಮಾನೋತ್ಸವ ಭವನದಲ್ಲಿ ನಡೆದ ಮೈಸೂರು ವಿಭಾಗಮಟ್ಟದ ಟಿಸಿಎಸ್ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ಸುಜನ್ ಶೆಟ್ಟಿ ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಟಿಸಿಎಸ್ ಗ್ರಾಮೀಣ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಅತ್ಯಂತ ಪೈಪೋಟಿಯಿಂದ ಕೂಡಿದ ಈ ಸ್ಪರ್ಧೆಯಲ್ಲಿ ಚಾಣಾಕ್ಷತನದಿಂದ ಉತ್ತರಿಸಿ ಆಯ್ಕೆ ಯಾಗಿರುತ್ತಾನೆ. ಮಾಹಿತಿ ತಂತ್ರಜ್ಞಾನದಲ್ಲಿ ವಿಶೇಷ ನೈಪುಣ್ಯತೆಯನ್ನು ಹೊಂದಿರುವ ಪ್ರತಿಭಾವಂತ ವಿದ್ಯಾರ್ಥಿಯ ಅಪ್ರತಿಮ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ & ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿರುತ್ತಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು, ಜೆಸಿಐ ಬೈಂದೂರು ಸಿಟಿ, ಜೆಸಿಐ ಉಪ್ಪುಂದ, ಜೆಸಿಐ ಶಿರೂರು ಮತ್ತು ಜೆಸಿಐ ಉಪ್ಪುಂದ ಸುಪ್ರಿಮ್ ನೇತೃತ್ವದಲ್ಲಿ ಕೆ.ಎಂ.ಸಿ ಮಣಿಪಾಲದ ಮೂಲಕ ಬೈಂದೂರು ಉತ್ಸವದ ಅಂಗವಾಗಿ ಮಂಗಳವಾರ ಆರೋಗ್ಯ ಮೇಳ – ದಂತ ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು. ಹಿರಿಯ ವೈದ್ಯ ಡಾ. ಕೆ. ಪ್ರಭಾಕರ ನಂಬಿಯಾರ್ ಅವರು ಕಾರ್ಯಕ್ರಮ ಉದ್ಘಾಟನಾ ಮಾತನಾಡಿ, ಧಾವಂತದ ಬದುಕಿನ ನಡುವೆ ಪ್ರತಿಯೊಬ್ಬರು ಆರೋಗ್ಯದ ಕಾಳಜಿ ವಹಿಸುವುದು ಮುಖ್ಯ. ಸಂಘ ಸಂಸ್ಥೆಗಳ ಮುಖಾಂತರ ನಡೆಯುವ ಉಚಿತ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷ ಮೋಹನ್ ರೇವಣ್ಕರ್ ವಹಿಸಿದ್ದರು. ಉತ್ಸವ ಸಮಿತಿ ಸಹ ಸಂಚಾಲಕ ಗಣೇಶ್ ಗಾಣಿಗ ಉಪ್ಪುಂದ, ಪುಪ್ಪರಾಜ ಶೆಟ್ಟಿ, ಅನುರಾಧ ಗುರುರಾಜ, ಕೆಎಂಸಿ ಮಣಿಪಾಲದ ದಂತ ವೈದ್ಯ ಡಾ. ಜಿಷ್ಣು, ಜೆಸಿಐ ಬೈಂದೂರು ಸಿಟಿ ಅಧ್ಯಕ್ಷೆ ಅನಿತಾ ಆರ್.ಕೆ., ಜೆಸಿಐ ಉಪ್ಪುಂದ ಸುಪ್ರಿಮ್ ಅಧ್ಯಕ್ಷೆ ಸುಮಾ ಆಚಾರ್ಯ, ಜೆಸಿಐ ಉಪ್ಪುಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೇರಳಕಟ್ಟೆ – ತಲ್ಲೂರು ರಸ್ತೆಯ ತಲ್ಲೂರು ಗ್ರಾಮದ ಸಹದೇವಿ ಹಾಲ್ ಬಳಿ ಸ್ಕೂಟಿಗೆ ಬೈಕ್ ಢಿಕ್ಕಿಯಾಗಿ, ಸ್ಕೂಟಿ ಸವಾರ ರಾಮಚಂದ್ರ (67) ಗಂಭೀರ ಗಾಯಗೊಂಡಿದ್ದು, ಬೈಕ್ ಸವಾರ ಶಶಾಂಕ್ ಸಹ ಗಾಯಗೊಂಡ ಘಟನೆ ನಡೆದಿದೆ. ಶಶಾಂಕ ಎಂಬುವವನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ರಾಮಚಂದ್ರ ಅವರ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅವರಿಗೆ ತಲೆ, ಮುಖ, ಕಾಲಿಗೆ ತೀವ್ರತರದ ಗಾಯಗೊಂಡು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಶಶಾಂಕ್ರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಬಾಲ ಪ್ರತಿಭೆ ವೃಷಾಂಕ್ ವಿ. ಭೋಮ್ಕರ್ ಅವರಿಂದ ಯಕ್ಷಗಾನ ನೃತ್ಯ ಸೇವೆ ಶ್ರೀ ಶಾರದಾ ಮಂಟಪದಲ್ಲಿ ನಡೆಯಿತು. ಅವನು ವಿವೇಕ್ ಭೋಮ್ಕರ್ ಮತ್ತು ಶಿವಾನಿ ದಂಪತಿ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅನಾರೋಗ್ಯ ಮತ್ತು ಕ್ಷೇಮ ಎಂಬುದು ಎರಡು ಭಿನ್ನ ವಿಚಾರಗಳು. ಕ್ಷೇಮ ತರಬೇತಿ ಕೇಂದ್ರವು ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಕ್ಷಮತೆ, ವೈಯಕ್ತಿಕ ಸಂಬಂಧಗಳು ಮತ್ತು ಒಟ್ಟಾರೆ ಯೋಗಕ್ಷೇಮವನ್ನು ವಿಚಾರಿಸಿ, ಸಮಾಲೋಚಿಸುವ ಕಾರ್ಯವನ್ನು ಮಾಡುತ್ತವೆ. ಇದೊಂದು ಮಾನಸಿಕ ಆರೋಗ್ಯವನ್ನು ಉನ್ನತೀಕರಣದ ಪರಿಕಲ್ಪನೆಯಾಗಿದೆ ಎಂದು ಉಡುಪಿಯ ಎವಿ ಬಾಳಿಗಾ ಸಂಸ್ಥೆಯ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಹೇಳಿದರು . ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆಳ್ವಾಸ್ ಸೆಂಟರ್ ಫಾರ್ ವೆಲ್ ನೆಸ್ ಟ್ರೈನಿಂಗ್ ಆಶ್ರಯದಲ್ಲಿ ಪದವಿ ಎವಿ ಕೊಠಡಿಯಲ್ಲಿ ಸೋಮವಾರ ನಡೆದ “ವೆಲ್ನೆಸ್ ರೂಮ್ನ ಉದ್ಘಾಟನೆ, ಬಡ್ಡಿಸ್ ಮೂಮೆಂಟ್ ಚಾಲನೆ ಮತ್ತು ಮಾನಸಿಕ ಸ್ವಾಸ್ಥ್ಯ ಕುರಿತ ಅಧಿವೇಶನ ಕಾರ್ಯಕ್ರಮ” ಉದ್ಘಾಟಿಸಿ ಅವರು ಮಾತನಾಡಿದರು . ಆತಂಕದ ಅಸ್ವಸ್ಥತೆಗಳು, ಖಿನ್ನತೆ, ನಿದ್ರಾ ಭಂಗಗಳು, ಮಾದಕ ವ್ಯಸನ, ಒತ್ತಡ ಸಂಬಂಧಿತ ಸಮಸ್ಯೆಗಳು ಹಾಗೂ ತಿನ್ನುವ ಕ್ರಮದಲ್ಲಿನ ಅಸ್ವಸ್ಥತೆ ಸಾಮಾನ್ಯ ಮಾನಸಿಕ ಆರೋಗ್ಯದ ಮುಖ್ಯ ಸವಾಲುಗಳಾಗಿವೆ ಎಂದರು. ಸಮಯ ನಿರ್ವಹಣೆ, ಒತ್ತಡ ನಿರ್ವಹಣೆ, ಸಾಮಾಜಿಕ ಸಂಪರ್ಕಗಳು, ಅಗತ್ಯವಿದ್ದಾಗ ಸಹಾಯವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಅಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದ ಮುರುಗಾ ಮಠದಲ್ಲಿ ನಡೆದ 19ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು 7ನೇ ರಾಜ್ಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಛಾಯಾ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕುಂದಾಪುರದ ಎಚ್ಎಮ್ಎಮ್ ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿರುವ ಕೋಡಿಯ ವಿಶ್ವನಾಥ ಮುನ್ನ ಹಾಗೂ ರಜನಿ ದಂಪತಿಯ ಪುತ್ರಿ. ಈಕೆ ಪ್ರಸನ್ನ, ಮಹಾಲಕ್ಷ್ಮೀ, ದೀಪಾ ಅವರಿಂದ ತರಬೇತಿ ಪಡೆದಿರುತ್ತಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಗ್ರಾಮೀಣ ಐ. ಟಿ ಕ್ವಿಜ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್ ಆಚಾರ್ಯ, ದಿಲೀಪ್ ಡಿ.ಕೆ, ಅಬು ಸಲಾಮ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ಕಳ್ಳತನಕ್ಕೆ ವಿಫಲಯತ್ನ ನಡೆಸಿದ್ದ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಇಂದ್ರನಗರ ನಿವಾಸಿ ಮೊಹಮ್ಮದ್ ಹುಸೇನ್ (22) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಬೈಕನ್ನು ಪೊಲೀಸರು ವಶಪಡಿಸಿದ್ದಾರೆ.
