ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಕೃತಿಯನ್ನು ಪ್ರೀತಿಸಿ ಅಲ್ಲಿನ ಮರಗಳನ್ನೆ ಮಕ್ಕಳಾಗಿಸಿಕೊಂಡು ಮನುಕುಲಕ್ಕೆ ಸ್ಪೂರ್ತಿಯ ಚಲುಮೆಯಾದ ಸಾಲು ಮರದ ತಿಮ್ಮಕ್ಕನ ಬದುಕೆ ಪ್ರಸ್ತುತ ಜನಾಂಗಕ್ಕೆ ಆದರ್ಶವಾಗಲಿ ಎಂದು ಸಾಹಿತಿ, ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಶುಕ್ರವಾರ ಪ್ರಕೃತಿ ಮಾತೆಯಲ್ಲಿ ಲೀನರಾದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ತಿಮ್ಮಕ್ಕನವರು ತಮ್ಮ ಸುಧೀರ್ಘ ಜೀವಿತ ಅವಧಿಯಲ್ಲಿ ಮರೆಯಲಾಗ ಅಧ್ಯಾಯವನ್ನು ಸೃಷ್ಠಿಸಿದ್ದಾರೆ ಇಂತಹ ಮಹಾನ್ ಕಾರ್ಯ ಇಂದಿನ ಯುವ ಜನಾಂಗಕ್ಕೆ ದಾರಿದೀಪವಾಗಬೇಕಿದೆ. ಪ್ರಸ್ತುತ ಪಂಚವರ್ಣ ಸಂಘಟನೆ ಅದೇ ದಾರಿಯಲ್ಲಿರುವುದು ತಿಮ್ಮಕ್ಕನವರಿಗೆ ಸಲ್ಲಿಸುವ ದೊಡ್ಡ ಸೇವೆಯಾಗಿದೆ ಎಂದರು. ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ ಜಯರಾಮ ಶೆಟ್ಟಿ ತಿಮ್ಮಕ್ಕನ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಭನಮನ ಸಲ್ಲಿಸಿದರು. ಇದೇ ವೇಳೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳು ಇರುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವುದನ್ನು ಕಲಿಯಬೇಕು. ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನದಿಂದ ಕಲಿಕೆಯಲ್ಲಿ ಹೆಚ್ಚಿನ ಉನ್ನತಿಯನ್ನು ಕಂಡುಕೊಳ್ಳಲು ಸಾಧ್ಯ ಎಂದು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷ ಜಿ. ಗೋಪಾಲ್ ಪೂಜಾರಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ನಾರಾಯಣಗುರು ಜನ ಸೇವಾ ಬಳಗ ಮತ್ತು ಸರಸ್ವತಿ ವಿದ್ಯಾಲಯದ ಎಸ್ ವಿ ಕಾಮರ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ನಡೆದ ಚಾರ್ಟೆಡ್ ಅಕೌಂಟೆಂಟ್ ಪ್ರಶಿಕ್ಷಣಾರ್ಥಿಗಳ ಅನುಭವ ಹಂಚಿಕೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾರ್ಟೆಡ್ ಅಕೌಂಟೆಂಟ್ ಕಲಿಕೆಯಲ್ಲಿ ನಿರಂತರಾಗಿರುವ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಪ್ರಿಯಾ ಜಿ.ಪೈ ಮತ್ತು ಕ್ಷಮಾ ಆರ್. ಆಚಾರ್ಯ ಕ್ರಮವಾಗಿ ಸಿ.ಎ ಮತ್ತು ಎ.ಸಿ.ಸಿ.ಎ ಕೋರ್ಸಿನ ಬಗೆಗೆ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮಾರ್ಗದರ್ಶನವನ್ನು ನೀಡಿದರು. ಗಂಗೊಳ್ಳಿಯ ಹಸಿ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಾಘವೇಂದ್ರ ಖಾರ್ವಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಳೆದ ವರ್ಷದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಧ್ಯಮಗಳು ಜನಪರ ಧ್ವನಿಯಾಗಬೇಕು ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಪತ್ರಿಕೋದ್ಯಮ ವಿಭಾಗ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ನಡೆದ “ರಾಷ್ಟ್ರೀಯ ಪತ್ರಿಕಾ ದಿನಾಚರಣೆ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಮಾಧ್ಯಮಗಳು ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳ ಮೇಲೆ ನಿಗಾ ಇಡಬೇಕು. ಪತ್ರಕರ್ತರು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು. ಅಲ್ಲದೆ ಜನರು ಮತ್ತು ಸರ್ಕಾರದ ನಡುವೆ ಸಂಪರ್ಕ ಶಕ್ತಿಯಾಗಿರುವ ಸಾಮರ್ಥ್ಯ ಮಾಧ್ಯಮಗಳಿಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ, ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ. ಜನರ ಧ್ವನಿಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್. ಶೆಣೈ ಅವರು ಭಾರತೀಯ ಪತ್ರಿಕಾ ಮಂಡಳಿ ಕುರಿತು ತಿಳಿಸಿದರು. ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ವಿದ್ಯಾರ್ಥಿಗಳು ಮೊಬೈಲ್ ನ ಅತಿಯಾದ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿಸಿಕೊಳ್ಳುವ ಸಮಯವನ್ನು ಕಡಿಮೆ ಮಾಡಿ ಮನೋದೈಹಿಕ ಉಲ್ಲಾಸ ತರುವ ಚಟುವಟಿಕೆಗಳಲ್ಲಿ ನಿರತರಾಗಬೇಕು. ನಿತ್ಯಜೀವನದಲ್ಲಿ ಆ ಮೂಲಕ ಹುರುಪು ಪಡೆದು ಪೋಷಕರು ಹೆಮ್ಮೆ ಪಡುವಂಥ ಸಾಧನೆ ಮಾಡಬೇಕು” ಎಂದು ಹೊಸೂರಿನ ಶ್ರೀ ಮೂಕಾಂಬಿಕಾ ಪ್ರೌಢ ಶಾಲೆಯ ದೈಹಿಕ ಶಿಕ್ಷಕರಾದ ಸಂತೋಷ್ ಕುಮಾರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಆರ್.ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟಿಸಿ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರಿನ ಮಾಜಿ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಸಿ.ಇ.ಎಸ್ ಸಂಸ್ಥೆಗಳ ಸುವರ್ಣ ಸಂಭ್ರಮದ ವಿಶೇಷ ವರ್ಷದಲ್ಲಿ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ತುಂಬು ಸಂಭ್ರಮದಿಂದ ಮುಂಬರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆನ್ನುತ್ತಾ ಕ್ರೀಡೋತ್ಸವಕ್ಕೆ ಶುಭಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ್ ಶೆಟ್ಟಿ ಅವರು ಅತಿಥಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶುಕ್ರವಾರದಂದು ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿಯವರಾದ ಸುಜಾತಾ ಸದಾರಾಮ್ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ, ನಮ್ಮ ಮಾತೃಭಾಷೆಯಾದ ಕನ್ನಡದ ಮಹತ್ವದ ಕುರಿತು ಹೇಳುತ್ತಾ ಭಾಷೆಯನ್ನು ಚೆನ್ನಾಗಿ ಬಳಸಿ ಬೆಳೆಸಬೇಕು; ಹೆಚ್ಚು ಹೆಚ್ಚು ಉತ್ತಮ ಸಾಹಿತ್ಯವನ್ನು ಓದಿ ಜ್ಞಾನವನ್ನು ಪಡೆಯಬೇಕು. ಮಕ್ಕಳ ದಿನಾಚರಣೆಯ ಪ್ರಾಮುಖ್ಯತೆಯನ್ನು ವಿವರಿಸುತ್ತಾ ಉತ್ತಮ ನಡವಳಿಕೆಯುಳ್ಳ ಮಕ್ಕಳು ಮುಂದೆ ಉತ್ತಮ ಭವಿಷ್ಯವನ್ನು ಹೊಂದಲಿರುವರು ಎಂದು ಹೇಳಿದರು. ಶಿಕ್ಷಕ ವೃಂದದವರಿಂದ ನೃತ್ಯ, ಸಂಗೀತ, ನಾಟಕ ಮೊದಲಾದ ಕಾರ್ಯಕ್ರಮಗಳು ಅದ್ಭುತವಾಗಿ ಮೂಡಿ ಬಂದವು. ಕೆಲವು ವಿದ್ಯಾರ್ಥಿಗಳು ವಿವಿಧ ಸಂಗೀತ ವಾದ್ಯ (ತಬಲ, ಚಂಡೆ, ಹಾರ್ಮೋನಿಯಮ್, ಪಿಯಾನೋ, ಕೊಳಲು, ವಯೋಲಿನ್ ಇತ್ಯಾದಿ)ಗಳನ್ನು ನುಡಿಸಿದರು. ಜೊತೆಗೆ ಯಕ್ಷಗಾನ, ಸಂಗೀತ, ನೃತ್ಯ ಪ್ರದರ್ಶನವನ್ನೂ ವಿದ್ಯಾರ್ಥಿಗಳು ನೀಡಿದರು. ವಿದ್ಯಾರ್ಥಿಗಳಾದ ನಿರಾಲಿ ಸರ್ವರನ್ನು ಸ್ವಾಗತಿಸಿದರೆ, ರಾಘವೇಂದ್ರ ಧನ್ಯವಾದ ಸಮರ್ಪಿಸಿದನು. ಶಮಾ, ಆರ್ವಿ, ರಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ಜೀವನವೇ ಅಮೂಲ್ಯವಾದದ್ದು. ಈ ಸಂದರ್ಭದಲ್ಲಿ ಏನನ್ನು ಕಲಿಯುತ್ತೀರೋ ಅದನ್ನು ಬದುಕಿನುದ್ದಕ್ಕೂ ಅಳವಡಿಸಿಕೊಂಡಾಗ ಬದುಕು ಉತ್ತಮವಾಗಿರಲು ಸಾಧ್ಯ. ಅದನ್ನು ಕಲಿತುಕೊಳ್ಳಬೇಕಾದ ಸೂಕ್ತ ಸಮಯವಿದು. ನಿಮ್ಮ ಗುರಿಯನ್ನು ನಿರ್ಧರಿಸಿಕೊಳ್ಳಿ, ಗುರಿಯೆಡೆಗೆ ಸಾಗುವ ಪರಿಶ್ರಮ ಇರಲಿ. ಮಾತು, ನಗು, ನಡತೆ ಸಂಸ್ಕಾರಯುತವಾಗಿರಲಿ ಎಂದು ಮಂಗಳೂರಿನ 92.7 ಬಿಗ್ ಆರ್ಜೆ ನಯನಾ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆ – 2ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಜೀವನ ಮೌಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆಯನ್ನು ತಿಳಿಸಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಮೀಳ ಅತಿಥಿಗಳನ್ನು ಪರಿಚಯಿಸಿ, ಮಾನ್ಯ ಪ್ರಾರ್ಥಿಸಿ, ಖುಷಿ ಸ್ವಾಗತಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕೆರೆಗೆ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಇತ್ತೀಚಿಗೆ ಆಲೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಲೂರು ಗ್ರಾಮದ ಮಂಜಯ್ಯ ಶೆಟ್ಟಿ (84) ಎಂದು ಗುರುತಿಸಲಾಗಿದೆ. ಮಂಜಯ್ಯ ಬೆಳಗ್ಗೆ ಜಾನುವಾರುಗಳನ್ನು ಮೇಯಿಸಲು ಹೋಗಿದ್ದು, ಈ ವೇಳೆ ಮನೆಯ ಬಳಿಯ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಬ್ರಹ್ಮಾವರ ರುಡ್ ಸೆಟ್ ಸಂಸ್ಥೆ, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮುಖ್ಯ ಪ್ರಭಂದಕರಾದ ರವಿಕಾಂತ್ ಮಲ್ಯ ಅವರು ಮಾತನಾಡಿ, ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ನೀವು ತರಬೇತಿಗೆಂದು ಆಯ್ಕೆ ಮಾಡಿಕೊಂಡ ಸಂಸ್ಥೆ ಬಹಳ ಉನ್ನತ ಮಟ್ಟದ ಸಂಸ್ಥೆಯಾಗಿದೆ.ಮೊದಲನೇ ಹಂತದಲ್ಲಿ ತಮ್ಮನ್ನು ತಾವೂ ಯಶಸ್ವಿಗೊಳಿಸಿದ್ದೀರಿ. ರುಡ್ ಸೆಟ್ ಸಂಸ್ಥೆಯು ತಮ್ಮನ್ನು ಸ್ವ ಉದ್ಯೋಗವನ್ನು ಕೈಗೊಳ್ಳಲು ಬೇಕಾಗುವ ಎಲ್ಲಾ ಮಾಹಿತಿಗಳನ್ನು ತರಬೇತಿಯ ಅವಧಿಯಲ್ಲಿ ಒದಗಿಸುತ್ತದೆ. ಮೊಬೈಲ್ ರಿಪೇರಿ ಮತ್ತು ಸೇವೆ ಉದ್ಯಮವು ದಿನದಿಂದ ದಿನಕ್ಕೆ ಬೇಡಿಕೆಯನ್ನು ಹಾಗೂ ಕುತೂಹಲವನ್ನು ಮೂಡಿಸುವ ಉದ್ಯಮವಾಗಿದೆ.ಹಾಗಾಗಿ ಉದ್ಯಮವನ್ನು ನಡೆಸಲು ಬೇಕಾಗುವ ಸಾಲಸೌಲಭ್ಯವನ್ನು ಸಂಸ್ಥೆಯ ಮುಖಾಂತರ ಒದಗಿಸುತ್ತೇವೆ. ಆದ್ದರಿಂದ ತಳಮಟ್ಟದ ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು ಸಮಾಜದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 37 ಚಿನ್ನ, 30 ಬೆಳ್ಳಿ ಮತ್ತು 16 ಕಂಚಿನ ಪದಕಗಳೊಂದಿಗೆ 83 ಪದಕದೊಂದಿಗೆ 02 ಕ್ರೀಡಾಕೂಟದ ನೂತನ ಕೂಟ ದಾಖಲೆಯನ್ನು ಮಾಡುವ ಮೂಲಕ 14 ವರ್ಷ ವಯೋಮಿತಿಯ ಬಾಲಕರ ತಂಡ ಪ್ರಶಸ್ತಿ, ಹಾಗೂ 17 ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಇದರ ಜೊತೆಗೆ 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ.14ವರ್ಷ ವಯೋಮಿತಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕಾಗಿ ವೆಬ್ಸೈಟ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ/ ಪ್ರೋತ್ಸಾಹಧನ ವಿವರ: ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, ಗುರಿ-ಒಲಂಪಿಕ್ ಪದಕ, ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿವೇತನ. ಅರ್ಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂ 0820-2521324, 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
