ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದ್ಯತಾ ಚದುರಂಗೋತ್ಸವ ಅಂತರ್ ಜಿಲ್ಲಾ ಪುರುಷರು ಮತ್ತು ಮಹಿಳೆಯರ ರ್ಯಾಪಿಡ್ ಚೆಸ್ ಪಂದ್ಯಾವಳಿ 2024ರ ಸಮಾರೋಪ ಸಮಾರಂಭದಲ್ಲಿ ತೆಕ್ಕಟ್ಟೆಯ ಸಮುದ್ಯತಾ ಸಭಾಂಗಣದಲ್ಲಿ ಜರುಗಿತು. ಈ ವೇಳೆ ಸಮುದ್ಯತಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಯೋಗೇಂದ್ರ ತಿಂಗಳಾಯ, ಪ್ರೆಸಿಡೆಂಟ್ ಗ್ರೂಪ್ ಬಹರೈನ್ನ ಸಿಇಒ ಅಬ್ದುಲ್ ಸತ್ತಾರ್, ಶಂಕರನಾರಾಯಣ ಸಬ್ ಇನ್ಸ್ಪೆಕ್ಟರ್ ನಾಸಿರ್ ಹುಸೇನ್, ಕಟೀಲೇಶ್ವರಿ ಡೆವಲಪರ್ಸ್ನ ವ್ಯವಸ್ಥಾಪಕ ನಿರ್ದೇಶಕ ಎಚ್. ಪ್ರಕಾಶ್ ಶೆಟ್ಟಿ, ಸಲೀಮ್ ಬೇಗಿ, ಇಂಟರ್ನ್ಯಾಷನಲ್ ಆರ್ಬಿರ್ಟರ್ ಬೆಂಗಳೂರು ಉಪಸ್ಥಿತರಿದ್ದರು. ಪಂದ್ಯಾವಳಿಯಲ್ಲಿ ಸುಮಾರು 220 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಶ್ವಿ ಚೆಸ್ ಸ್ಕೂಲ್ನ ವ್ಯವಸ್ಥಾಪಕರಾದ ನರೇಶ್ ರಾವ್, ಕಶ್ವಿ ಚೆಸ್ ಸ್ಕೂಲ್ ನ ಸಲಹೆಗಾರರಾದ ಅರುಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕಶ್ವಿ ಚೆಸ್ ಸ್ಕೂಲ್ ಕಾರ್ಯದರ್ಶಿಯಾದ ಪುರುಷೋತ್ತಮ್ ಕಾಮಾತ್ ಅವರು ಕಾರ್ಯಕ್ರಮ ನಿರೂಪಿಸಿದರು. ಮಹಿಳೆಯರ ವಿಭಾಗದಲ್ಲಿ ಪ್ರಸಿದ್ಧಿ ಭಟ್ ಮೈಸೂರು ಪ್ರಥಮ ಸ್ಥಾನವನ್ನು ಪಡೆದಿದ್ದು ಹಾಗೆ ಪುರುಷರ ವಿಭಾಗದಲ್ಲಿ ಅಜಿತ್ ಎಂ. ಪಿ. ಮೈಸೂರು ಇವರು ಪ್ರಥಮ ಸ್ಥಾನವನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಸಹಾಯಕಿ ದಾರು ದೇವಾಡಿಗ ಅವರನ್ನು ಸನ್ಮಾನಿಸಲಾಯಿತು ಹಾಗೂ ಅಂಗನವಾಡಿ ಮಕ್ಕಳಿಗೆ ಬಹುಮಾನ ಕಾರ್ಯಕ್ರಮ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಬಾಲ ವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಗಿರೀಶ್ ಶ್ಯಾನುಭಾಗ, ಸಂದೇಶ್ ಭಟ್, ಸುಬ್ರಹ್ಮಣ್ಯ ಖಾರ್ವಿ, ನಾಗಪ್ಪ ದೇವಾಡಿಗ, ಮಹಾಬಲೇಶ್ವರ, ಮಹಾಲಕ್ಷ್ಮಿ, ಪಾರ್ವತಿ ಕೆ. ಪೂಜಾರಿ, ದೀಪಾ, ಆಶಾ ಕಾರ್ಯಕರ್ತೆ ಗುಲಾಬಿ, ಅಂಗನವಾಡಿ ಕಾರ್ಯಕರ್ತೆ ಸುಶೀಲಾ ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಕ್ಕಳ ಪೋಷಕರು, ಸ್ತ್ರೀ ಶಕ್ತಿ ಸದಸ್ಯರು, ಊರ ನಾಗರಿಕರು ಕಾರ್ಯಕ್ರಮ ನೆರವೇರಿಸಿಕೊಟ್ಟರು. ಸತ್ಯನಾರಾಯಣ್ ಶೇಟ್ ಕಾರ್ಯಕ್ರಮಕ್ಕೆ ಪುಷ್ಪವನ್ನು ಒದಗಿಸಿದರು. ಶ್ರೀರಾಮ್ ಹೋಟೆಲ್ ಮಾಲಕರಾದ ನಂದೀಶ್ ದೇವಾಡಿಗ ಅವರು ಕಾರ್ಯಕ್ರಮಕ್ಕೆ ಲಘು ಉಪಹಾರ ಒದಗಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ದಾಪುರ ಗ್ರಾಮದ ಹರ್ಕೆಬಾಳು ಸಾದಮ್ಮ(62) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜೀಗುಪ್ಪೆಗೊಂಡು, ಮನೆಯಲ್ಲಿ ಅ.12ರಂದು ಇಲಿ ಪಾಷಣ ಸೇವಿಸಿದ್ದರು. ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಅ.21ರಂದು ನಿಧನ ಹೊಂದಿದರು ಎಂದು ಪುತ್ರಿ ಶ್ಯಾಮಲ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 17 ರಿಂದ 19ರ ತನಕ ಆಂಧ್ರ ಪ್ರದೇಶದ ಗುಂಟೂರಿನಲ್ಲಿನಡೆದ ರಾಷ್ಟ್ರ ಮಟ್ಟದ 35ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ ಚಾಂಪಿಯನ್ ಶಿಪ್ನ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಬೆಳ್ಳಿ ಪದಕ ಪಡೆದು ಅಪೂರ್ವ ಸಾಧನೆಗೆ ಸಾಕ್ಷಿಯಾಗಿದ್ದಾನೆ. ವಿದ್ಯಾರ್ಥಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಔಷಧಾಲಯ ಅಥವಾ ಔಷಧ ವಿಜ್ಞಾನ ಎಂಬುದು ಕೇವಲ ಕುಳಿತು ಮಾಡುವ ವ್ಯಾಪಾರಿ ವೃತ್ತಿಯಲ್ಲ, ಅದು ವೈದ್ಯರು ಮತ್ತು ರೋಗಿಗಳ ಮಧ್ಯದ ಸೇತು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಧನ್ವಂತರಿ ಸಭಾಭವನದಲ್ಲಿ ಸೋಮವಾರ ನಡೆದ ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಔಷಧಾಲಯ ಪರಿಣಿತರು ವೈದ್ಯರು ಸೂಚಿಸಿ ಬರೆದ ಔಷಧಗಳ ಸಂಪೂರ್ಣ ಜ್ಞಾನ ಹೊಂದಿರಬೇಕು. ಔಷಧಾಲಯ ಪರಿಣತರಿಗೆ ಜಗತ್ತಿನಾದ್ಯಂತ ಬೇಡಿಕೆ ಹೆಚ್ಚಿದೆ. ಆಳ್ವಾಸ್ನಲ್ಲಿ ’ಫಾರ್ಮಸಿ’ಎಲ್ಲ ಅಗತ್ಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು, ಅತ್ಯುನ್ನತ ಹುದ್ದೆಗಳಿಗೆ ತೆರಳಬೇಕು ಎಂದರು. ಭಾರತವು ಜಗತ್ತಿನ ಔಷಧ ಶಾಲೆ. ಕೋವಿಡ್ನಂತಹ ಸಂದರ್ಭದಲ್ಲಿ ವಿವಿಧ ದೇಶಗಳ ಔಷಧಗಳ ಬೇಡಿಕೆ ಪೂರೈಸಿದೆ ಎಂದರು. ಮೂಡುಬಿದಿರೆ ಸಿ.ಎಚ್ ಮೆಡಿಕಲ್ ಮಾಲಕ ಸಿ.ಎಚ್. ಅಬ್ದುಲ್ ಗಫೂರ್ ಮಾತನಾಡಿ, ಆಳ್ವಾಸ್ ಕಾಲೇಜು ಧನಾತ್ಮಕ ಯೋಚನೆಗಳಿಗೆ ಸಹಕಾರಿಯಾಗಿದೆ. ಫಾರ್ಮಸಿಯ ವಿಷಯಯಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿ ಗ್ರಾಮದ ನಿವಾಸಿ ಹೊನ್ನಾವರ ತಾಲೂಕು ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಮಂಜುನಾಥ ಶೆಟ್ಟಿ (58) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಡಾ. ಮಂಜುನಾಥ ಶೆಟ್ಟಿ ಭಟ್ಕಳ ಸೇರಿದಂತೆ ವಿವಿಧ ತಾಲೂಕು ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ 6 ವರ್ಷಗಳಿಂದ ಹೊನ್ನಾವರದ ತಾಲೂಕು ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದರು. ಅವರು ಯಕ್ಷಗಾನ ಹವ್ಯಾಸಿ ಕಲಾವಿದರಾಗಿಯೂ ಗಮನ ಸೆಳೆದಿದ್ದರು. ಅವರು ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರು ಹಾಗೂ ಬಂದುಗಳನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಬೆಂಗಳೂರಿನ ಇಂಡೋ ಗ್ಲೋಬ್ ಪಿಯು ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ -2024ರಲ್ಲಿ ಶಿಕ್ಷಕ ಗಣೇಶ ಪೂಜಾರಿ ಅವರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೂರ್ಯ ಫೌಂಡೇಶನ್ ಬೆಂಗಳೂರು, ಸ್ಪಾರ್ಕ್ ಅಕಾಡೆಮಿ ಬೆಂಗಳೂರು ವತಿಯಿಂದ ಇಂಡೋಗ್ಲೋಬ್ ಇನ್ಸಿಟ್ಯೂಷನ್ಸ್ ಬೆಂಗಳೂರು ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಹಕಾರದೊಂದಿಗೆ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಆಯೋಜಿಸಲಾಗಿತ್ತು. ಈ ವೇಳೆ ಕರ್ನಾಟಕ ಶಿಕ್ಷಕರ ಪ್ರತಿಭಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಪಿ. ಮಹೇಶ್, ಬೆಂಗಳೂರು ಇಂಡೋಗ್ಲೋಬ್ ಇನ್ಸಿಟ್ಯೂಷನ್ಸ್ ಕಾರ್ಯದರ್ಶಿಯಾದ ಸಂಗೀತ, ಇಂಡೋಗ್ಲೋಬ್ ಇನ್ಸಿಟ್ಯೂಷನ್ಸ್ ಹೆಸರುಘಟ್ಟ ಚೇರ್ಮನ್ ಟಿ.ಎಂ ಗೌಡ ಮತ್ತು ಬೆಂಗಳೂರು ಸೂರ್ಯ ಫೌಂಡೇಶನ್ ಅಧ್ಯಕ್ಷರಾದ ಸೋಮೇಶ್ ನವೋದಯ ಇನ್ನಿತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮದ್ದುಗುಡ್ಡೆಯ ಶ್ರೀ ಗುರು ರಾಘವೇಂದ್ರ ಭಜನ ಮಂದಿರದಲ್ಲಿ ಚಿನ್ನಾಭರಣ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ. ಅ.18ರ ಮಧ್ಯಾಹ್ನ 1.30 ರಿಂದ ಸಂಜೆ 6 ಗಂಟೆಯ ಮಧ್ಯದ ಅವಧಿಯಲ್ಲಿ ಕಳವು ಮಾಡಲಾಗಿರುವ ಬಗ್ಗೆ ದೂರು ದಾಖಲಾಗಿದೆ. ಸುಮಾರು 75 ಸಾವಿರ ರೂ. ಮೌಲ್ಯದ 12 ಗ್ರಾಂ ತೂಕದ ಚಿನ್ನದ ತಿಲಕವನ್ನು ಕಳವು ಮಾಡಲಾಗಿದೆ. ಶ್ರೀ ಗುರು ರಾಘವೇಂದ್ರ ಭಜನ ಮಂದಿರದ ಅಧ್ಯಕ್ಷ ರಮೇಶ್ ಮದ್ದುಗುಡ್ಡೆ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ ದ್ವಿತೀಯ ಪಿ.ಯು.ಸಿ.ಯ ಸತ್ಯವತಿ ಅವಳಿಗೆ ಕುಂದಾಪುರ ತಾಲೂಕಿನ ಕೋಟೇಶ್ವರದ ಮೇಲ್ಕಟ್ಕೆರೆಯಲ್ಲಿ ವಿದ್ವಾನ್ ಪಂಜ ಭಾಸ್ಕರ ಭಟ್ ಅವರ ಪ್ರಾಯೋಜಕತ್ವದಲ್ಲಿ ರೂ.6 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ಚಂದ್ರಿಕಾ ನಿಲಯ ಉದ್ಘಾಟನೆಗೊಂಡಿತು. ವೇ. ಮೂ ಕಡಂದಲೆ ಕೆ.ವಿ. ಕೃಷ್ಣ ಭಟ್ ಉದ್ಘಾಟಿಸಿದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕಲಾರಂಗದ ಕಾರ್ಯಕರ್ತರ ನಿಸ್ವಾರ್ಥ ಸಾಮಾಜಿಕ ಕಾರ್ಯ ಎಲ್ಲರಿಗೆ ಮಾದರಿಯಾಗಿದೆ. ಭಾಸ್ಕರ ಭಟ್ ಅಭಿಪ್ರಾಯ ವ್ಯಕ್ತಪಡಿಸಿ ಕಲಾರಂಗದ ಸಮಾಜ ಸೇವೆಯೆಂಬ ಬ್ರಹ್ಮರಥದ ಹಗ್ಗ ಹಿಡಿಯುವ ಅವಕಾಶ ನಮ್ಮ ಕುಟುಂಬಕ್ಕೊದಗಿದ ಭಾಗ್ಯ. ನಾನು ಕಲಾರಂಗದ ಸದಸ್ಯ ಎನ್ನಲು ಹೆಮ್ಮೆಪಡುತ್ತೇನೆ ಎಂದರು. ವೇ. ಮೂ. ಸೀತಾರಾಮ ಭಟ್ ಮಾತನಾಡಿ, ವಿದ್ವಾಂಸರಾದ ಭಾಸ್ಕರ್ ಭಟ್ಟರ ಸಾಮಾಜಿಕ ಸ್ಪಂದನೆ ನಮ್ಮಂತ ವೈದಿಕರಿಗೆ ಆದರ್ಶಪ್ರಾಯವಾದುದು ಎಂದರು. ಆನೆಗುಡ್ಡೆ ದೇವಳದ ನಿಕಟಪೂರ್ವ ಆಡಳಿತ ಮುಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯರು ಶುಭ ಹಾರೈಸಿದರು. ವಿದ್ವಾನ್ ಪಂಜ ಭಾಸ್ಕರ ಭಟ್ ಪತ್ನಿ ಚಂದ್ರಿಕಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ, ಪ್ರಥಮ ವರ್ಷದ ಪದವಿಯ ವಿದ್ಯಾರ್ಥಿಗಳಿಗಾಗಿ ರಕ್ಷಕ – ಶಿಕ್ಷಕ ಸಭೆಯನ್ನು ಆಯೋಜಿಸಲಾಯಿತು. ಸ್ಥಳೀಯ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ, ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕುಂದಾಪುರ ಎಜುಕೇಶನ್ ಸೊಸೈಟಿ ಸುವರ್ಣ ಸಂಭ್ರಮದ ಹೊಸ್ತಿಲಿನಲ್ಲಿದೆ. ಈ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ನಾಲ್ಕು ಶಿಕ್ಷಣ ಸಂಸ್ಥೆಗಳು ಕನ್ನಡ ಕರಾವಳಿ ಭಾಗದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವುದು ಸಂತೋಷದ ಸಂಗತಿ. ಕಾಲೇಜಿನ ಎಲ್ಲಾ ಕ್ರೀಯಾ ಚಟುವಟಿಕೆಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಿರುವ ಹೆತ್ತವರಿಗೆ ಹಾಗೂ ಪೋಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಮೊಳಹಳ್ಳಿ ಶಾಲೆಯ ಹಿರಿಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಅವರು ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ, ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಜಿಲ್ಲೆಯ ಸ್ತುತ್ಯಾರ್ಹ ಸಾಧನೆ ಮಾಡುತ್ತಿರುವುದು ಉಲ್ಲೇಖನೀಯ. ಈ ಸಂಸ್ಥೆಯಲ್ಲಿ…
