ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ ಮಂಗಳೂರು ಕರಂಗಲ್ಪಾಡಿ ನಿವಾಸಿ, ಪ್ರಸಿದ್ದ ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ಪತ್ನಿ, ವೃತ್ತಿಯಲ್ಲಿ ಉಪನ್ಯಾಸಕಿಯಾದ ಅರ್ಚನಾ ಕಾಮತ್(33) ಮೃತ ದುದೈವಿ. ಯಕೃತ್ತಿಗೆ(ಲಿವರ್) ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದ ತಮ್ಮ ಸಂಬಂಧಿಕರೊಬ್ಬರಿಗೆ ಯಕೃತ್ತಿನ ಕಸಿಗೆ ತನ್ನ ಯಕೃತ್ತನ್ನು ದಾನ ಮಾಡಿದ್ದರು. ಈ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ವೇಳೆ ಸೊಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಅರ್ಚನಾ ಮೂಲತಃ ಕೋಟೇಶ್ವರದವರಾಗಿದ್ದು ಮಂಗಳೂರಿನ ಚೇತನ್ ಕಾಮತ್ ಅವರನ್ನು ಮದುವೆಯಾಗಿದ್ದರು. ಮೃತದೇಹವನ್ನು ಕರಂಗಲ್ಪಾಡಿಯಯ ನಿವಾಸಕ್ಕೆ ತಂದು ವಿಧಿ ವಿಧಾನ ನೆರವೇರಿಸಿದ ಬಳಿಕ ಕೋಟೇಶ್ವರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್ ಸಕ್ರಿಯವಾಗಿದ್ದು ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನದ ಸುದ್ದಿ ಇಡೀ ಸಮಾಜವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಸಂಬಂಧಿಕರು, ಆತ್ಮೀಯರು ಆಘಾತಕಾರಿ ಸುದ್ದಿ ತಿಳಿದು ಕಂಬನಿ ಮಿಡಿದಿದ್ದಾರೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ – 3182ರ ಮಧ್ಯಮ ವರ್ಗದ ಕ್ಲಬ್ಗಳ ವಿಭಾಗದಲ್ಲಿ ಬೈಂದೂರು ರೋಟರಿ ಕ್ಲಬ್ ಒಟ್ಟು 20 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಶಿವಮೊಗ್ಗ ಕಾಸ್ಮೋ ಕ್ಲಬ್ ಆವರಣದಲ್ಲಿ ನಡೆದ 2023-24ನೇ ಸಾಲಿನ ಅವಾರ್ಡ್ಸ್ ನೈಟ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. 2023-24ನೇ ಸಾಲಿನ ರೋಟರಿ ವರ್ಷದಲ್ಲಿ ಬೈಂದೂರು ರೋಟರಿ ಕ್ಲಬ್ ಕಾರ್ಯಗಳನ್ನು ಹಾಗೂ ಕಾರ್ಯಕ್ರಮಗಳನ್ನು ಪರಿಗಣಿಸಿ 19 ಪ್ರಶಸ್ತಿ ಹಾಗೂ CITATION AWARD ಸೇರಿ ಒಟ್ಟು 20 ಪ್ರಶಸ್ತಿಗಳಿಗೆ ನಮ್ಮ ಕ್ಲಬ್ ಭಾಜನವಾಗಿದೆ. 2023-24ನೇ ಸಾಲಿನ ಗವರ್ನರ್ ಪ್ರಶಸ್ತಿ ಬಿ.ಸಿ ಗೀತಾ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಕಳೆದ ಸಾಲಿನ ಸಹಾಯಕ ಗವರ್ನರ್ ಸಂದೀಪ್ ಶೆಟ್ಟಿ, ಬೈಂದೂರು ರೋಟರಿ ಕ್ಲಬ್ 2023-24ನೇ ಸಾಲಿನ ಅಧ್ಯಕ್ಷ ಪ್ರಸಾದ್ ಪ್ರಭು ಶಿರೂರು, ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಉಪ್ಪುಂದ ಪ್ರಶಸ್ತಿ ಸ್ವೀಕರಿಸಿದರು. ಈ ವೇಳೆ 2024-25ನೇ ಸಾಲಿನ ಅಧ್ಯಕ್ಷ ಮೋಹನ್ ರೇವಣ್ಕರ್, ರೊಟೆರಿಯನ್ಗಳಾದ ಐ. ನಾರಾಯಣ್, ಹರೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ರಿಯಾಶೀಲ ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಸಾಕ್ಷಿಯಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಅವರು ಸೋಮವಾರ ನವೆಂಬರ್ 1ರಿಂದ 3ರವರೆಗೆ ಬೈಂದೂರು ಗಾಂಧಿ ಮೈದಾನದಲ್ಲಿ ಆಯೋಜಿಸಿರುವ ಬೈಂದೂರು ಉತ್ಸವ 2024ರ ಅಧಿಕೃತ ಲಾಂಛನವನ್ನು ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮೃದ್ದ ಬೈಂದೂರು ಮೂಲಕ ಬೈಂದೂರು ಕ್ಷೇತ್ರದ ಭಾಷೆ, ಕಲೆ ಸಂಸ್ಕೃತಿಯನ್ನು ಇಡೀ ಜಗತ್ತು ನೋಡಬೇಕು ಎನ್ನುವ ಕಾರಣಕ್ಕೆ ನಡೆಯುವ ಬೈಂದೂರು ಉತ್ಸವಕ್ಕೆ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ ಎಂದರು. ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಬೈಂದೂರು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವ ಕ್ಷೇತ್ರ. ಬೈಂದೂರು ಉತ್ಸವದಲ್ಲಿ ರಾಜ್ಯದಲ್ಲಿಯೇ ಕುಗ್ರಾಮವಾಗಿದ್ದ ಬೈಂದೂರು ಕ್ಷೇತ್ರ ಕಳೆದ ಹದಿನೈದು ವರ್ಷಗಳಿಂದ ಅಭಿವೃದ್ಧಿಯತ್ತ ಸಾಗುತ್ತಿದೆ. ಕುಂದಾಪ್ರ ಭಾಷೆಗೆ ಕಿರೀಟವಿಟ್ಟಂತೆ ನಮ್ಮ ಗ್ರಾಮೀಣ ಕಲೆ, ಸಂಸ್ಕೃತಿಗಳನ್ನು ಪ್ರತಿಬಿಂಬಿಸುವುದಕ್ಕಾಗಿ ಬೈಂದೂರು ಉತ್ಸವ ಸಜ್ಜಾಗುತ್ತಿದೆ ಎಂದರು. ಸಮೃದ್ಧ ಜನಸೇವಾ ಚಾರಿಟೇಬಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಾಬ್ರಕಟ್ಟೆಯ ರೋಹಿತ್ ನಾಯಕತ್ವದ ಬಾಲಕರ ತಂಡ ದೊಡ್ಡ ಅಂತರದಲ್ಲಿ ಎದುರಾಳಿ ತಂಡಗಳನ್ನು ಮಣಿಸಿ, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ, ಅಕ್ಟೋಬರ್ನಲ್ಲಿ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದ ವಂಶಿತ್ ಪಂದ್ಯಾಟದ ಬೆಸ್ಟ್ ಆಲ್ ರೌಂಡರ್ ಮತ್ತು ಮಹಾರಾಜ ಬೆಸ್ಟ್ ಡಿಫೆಂಡರ್ ಆಗಿ ವೈಯಕ್ತಿಕ ಪ್ರಶಸ್ತಿಯನ್ನು ಗೆದ್ದಿದ್ದಾರೆ. ವಿದ್ಯಾರ್ಥಿಗಳನ್ನು ದೈಹಿಕ ಶಿಕ್ಷಕರಾದ ಗಜೇಂದ್ರ ಶೆಟ್ಟಿ ಅವರು ತರಬೇತು ಗೊಳಿಸಿದ್ದಾರೆ. ಶಾಲೆಯ ಈ ತಂಡದ ಸಾಧನೆಯನ್ನು ಹಳೆ ವಿದ್ಯಾರ್ಥಿ ಸಂಘ, ಎಸ್ ಡಿ ಎಂ ಸಿ ಹಾಗೂ ಸ್ಥಳೀಯ ಸಂಘ ಸಂಸ್ಥೆಯವರು ಹರ್ಷ ವ್ಯಕ್ತ ಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಕರು ತಮಗೆ ದೊರೆಯುವ ವೇತನದಿಂದ ತೃಪ್ತರಾಗುವವರು. ಅವರದ್ದು ನಿಜ ಅರ್ಥದಲ್ಲಿ ಸೇವೆ. ಅವರು ಮಕ್ಕಳ ಭವಿಷ್ಯವನ್ನು ರೂಪಿಸುವ ಕಾಯಕ ನಡೆಸುವುದರಿಂದ ಅವರನ್ನು ಸಮುದಾಯವು ಗೌರವ ಮತ್ತು ಆದರದಿಂದ ನೋಡಿಕೊಳ್ಳಬೇಕು ಎಂದು ಮರವಂತೆ ಸಾಧನಾ ವೇದಿಕೆಯ ಸಂಸ್ಥಾಪಕ ಎಸ್. ಜನಾರ್ದನ ಮರವಂತೆ ಹೇಳಿದರು. ಇಲ್ಲಿನ ಸಾಧನಾ ಸಮುದಾಯ ಭವನದಲ್ಲಿ ಸಾಧನಾ ಏರ್ಪಡಿಸಿದ್ದ ಶಿಕ್ಷಕ ದಿನಾಚರಣೆಯಲ್ಲಿ ಸನ್ಮಾನಿತರಾದ ನಿವೃತ್ತ ಶಿಕ್ಷಕ ನಾರಾಯಣ ಬಿ. ಮತ್ತು ಸರ್ವೋತ್ತಮ ಭಟ್ ಅವರನ್ನು ಅಭಿನಂದಿಸಿದರು. ಭಾಗವಹಿಸಿದ್ದ ಮರವಂತೆಯ ಎಲ್ಲ ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಲಾಯಿತು ಮತ್ತು ಭೋಜನ ಕೂಟ ಏರ್ಪಡಿಸಲಾಗಿತ್ತು. ಸಾಧನಾ ಅಧ್ಯಕ್ಷ ಪುಟ್ಟ ಎಂ. ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಶಾಧಿಕಾರಿ ಚಂದ್ರ ಬಿಲ್ಲವ, ಸದಸ್ಯರು, ನಾಡ ಸತ್ಯಸಾಯಿ ಲೋಕಸೇವಾ ಗುರುಕುಲಂನ ಮುಖ್ಯಸ್ಥ ಅವಿನಾಶ್ ಉಪಸ್ಥಿತರಿದ್ದರು. ಜತೀಂದ್ರ ಮರವಂತೆ ನಿರೂಪಿಸಿದರು. ದೇವಿದಾಸ ಶ್ಯಾನುಭಾಗ್ ಸಹಕರಿಸಿದರು. ಜಿ. ಎಸ್. ಮಡಿವಾಳ್ ಸ್ವಾಗತಿಸಿದರು. ಕಾರ್ಯದರ್ಶಿ ಶೇಷಗಿರಿ ಆಚಾರ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೊಟೇಶ್ವರದ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇಗುಲಕ್ಕೆ ಭಕ್ತರು ಹಾಗೂ ದಾನಿಗಳು ನೀಡಿದ 125ಕೆ.ಜಿ ತೂಕದ ಬೆಳ್ಳಿಯಿಂದ 1.25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ರಜತ ರಥವನ್ನು ಭವ್ಯ ಪುರಮೆರವಣಿಗೆಯೊಂದಿಗೆ ಭಾನುವಾರ ದೇಗುಲಕ್ಕೆ ಕೊಂಡೊಯ್ಯಲಾಯಿತು. ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಳದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ರಜತ ರಥದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕುಂಭಾಶಿ, ಗೋಪಾಡಿ, ಬೀಜಾಡಿ, ಕೋಟೇಶ್ವರ, ಅಂಕದಕಟ್ಟೆ ಮೂಲಕ ದೇಗುಲಕ್ಕೆ ರಥವನ್ನು ಕೊಂಡೊಯ್ಯಲಾಯಿತು. ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆ, ತಟ್ಟಿರಾಯ, ಕೀಲು ಕುದುರೆ, ಟ್ಯಾಬ್ಲೊ, ಚಂಡೆ ವಾದನ ಸಹಿತ ಭವ್ಯ ಮೆರವಣಿಗೆಯಲ್ಲಿ ದೇಗುಲಕ್ಕೆ ಸಾಗಿಸಿ ಪೂಜೆ ಸಲ್ಲಿಸಲಾಯಿತು. ಸೆ.16ರ ರಾತ್ರಿ ರಜತರಥ ಸಮರ್ಪಣೆ ನಡೆಯಿಲಿದೆ. ದೇವಾಲಯದ ಪ್ರಧಾನ ತಂತ್ರಿ ಪ್ರಸನ್ನ ಕುಮಾರ್ ಐತಾಳ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಮೆರವಣಿಗೆಯಲ್ಲಿ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ, ಗ್ರಾಮಸ್ಥರು ಪಾಲ್ಗೊಂಡಿದ್ದರು. 1.25 ಕೋಟಿ ವೆಚ್ಚದ ರಜತ ರಥವನ್ನು ಭಕ್ತರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರೋಟರಿ ಕ್ಲಬ್ ಬೈಂದೂರು ವತಿಯಿಂದ ರೋಟರಿ ಸಮುದಾಯ ಭವನದಲ್ಲಿ ಭಾನುವಾರ ಎಂಜಿನಿಯರ್ಸ್ ಡೇ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಎಂಜಿನಿಯರ್, ಬೈಂದೂರು ಎಸ್.ಡಿ. ಅಸೋಸಿಯೇಟ್ಸ್ನ ಚಂದ್ರಶೇಖರ ಮೇಸ್ತ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಬೈಂದೂರು ರೋಟರಿ ಅಧ್ಯಕ್ಷ ಮೋಹನ್ ರೇವಣ್ಕರ್, ಕಾರ್ಯದರ್ಶಿ ಸುನಿಲ್ ಹೆಚ್. ಜಿ., ರೋಟೆರಿಯನ್ಗಳಾದ ಐ. ನಾರಾಯಣ. ಜತಿಂದ್ರ ಮರವಂತೆ, ರಾಘವೇಂದ್ರ ಉಡುಪ, ವಿಷ್ಣು ಆರ್. ಪೈ, ಶಾರದಾ ನಾರಾಯಣ್, ಚಂದ್ರಶೇಖರ್ ಪೂಜಾರಿ, ಸುಬ್ರಹ್ಮಣ್ಯ ಜಿ, ಆನ್ಸ್ ರೂಪ ರೇವಣ್ಕರ್, ಪೂರ್ಣಿಮಾ ಪೈ ಉಪಸ್ಥಿತರಿದ್ದರು.
ಸುರಭಿ ರಿ. ಬೈಂದೂರು ಸಂಸ್ಥೆಯ ರಜತಯಾನಕ್ಕೆ ಚಾಲನೆಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರೆಯುವ – ಮೆರೆಯುವ ಇಂದಿನ ಕಾಲಘಟ್ಟದಲ್ಲಿ ಉದಾತ್ತವಾಗಿ ಚಿಂತನೆ ಮಾಡುವ ಮನಸ್ಸುಗಳು ಬೇಕಾಗಿವೆ. ಮಕ್ಕಳಿಗೆ ನಿಜವಾಗಿಯೂ ಅಗತ್ಯವಿರುವ ಪ್ರೀತಿ, ವಿಶ್ವಾಸ, ವಿಶಾಲ ಮನೋಭಾವವನ್ನು ತುಂಬಲು ಮರೆತಿರುವ ನಾವುಗಳು ಪರಸ್ಪರ ನಂಬಿಕೆಯನ್ನು ಕಳೆದುಕೊಂಡು ಯಾಂತ್ರಿಕ ಜಗತ್ತಿನ ದಾಸರಾಗಿ ಬದುಕುತ್ತಿರುವುದು ವಿಪರ್ಯಾಸ ಎಂದು ಹಿರಿಯ ಸಾಹಿತಿ, ನಿವೃತ್ತ ಪ್ರಾಚಾರ್ಯ ಡಾ. ಜಯಪ್ರಕಾಶ್ ಮಾವಿನಕುಳಿ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಸಂಸ್ಥೆಯ ಬೆಳ್ಳಿ ಹಬ್ಬದ ರಜತ ಲಾಂಛನ ಅನಾವರಣಗೊಳಿಸಿ ಮಾತನಾಡಿದರು. ಧಾವಂತದ ಬದುಕಿನಲ್ಲಿ ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಹಿಂದಿಕ್ಕಿ ಹೋಗುತ್ತಿದ್ದೇವೆ. ನೆರೆಯವರ ಮೇಲೆ ಪ್ರೀತಿ ವಿಶ್ವಾಸವಿಡದ ಬದುಕು ನಮ್ಮದಾಗುವುದು ಬೇಡ. ಆಧುನಿಕ ಬದುಕಿನ ಅಗತ್ಯತೆಗಳ ನಡುವೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಬದುಕು ಸುಂದರವಾಗುತ್ತದೆ ಎಂದ ಅವರು ಸಾಹಿತಿ, ಕಲಾವಿದರು, ಚಿಂತಕರಿಂದ ಊರಿಗೆ ಘನತೆ ಹೆಚ್ಚುತ್ತದೆಯೇ ಹೊರತು ಹಣವಂತರಿಂದ ಅಲ್ಲ ಎಂಬುದನ್ನು ಮರೆಯಬಾರದು ಎಂದರು. ಜಿಲ್ಲಾ ಕನ್ನಡ ಸಾಹಿತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಸಸಿಹಿತ್ಲು ಸಮುದ್ರ ತಟದಲ್ಲಿ ಬೀಚ್ ಕ್ಲೀನಿಂಗ್ ಅಭಿಯಾನ ಹಾಗೂ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಭಾನುವಾರದಂದು ಆಚರಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್.ಸಿ.ಸಿ., ಎನ್.ಎಸ್.ಎಸ್. ನ 120 ವಿದ್ಯಾರ್ಥಿಗಳು ಪಾಲ್ಗೊಂಡು 30-40 ಚೀಲದಷ್ಟು ಕಸವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ, ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಪರವಾದ ಘೋಷಣೆಗಳನ್ನು ಒಟ್ಟಿಗೆ ಕೂಗುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಭಾರತ, ಮತ್ತು ಬಹುತ್ವದ ನೆಲೆಯಲ್ಲಿ ರೂಪುಗೊಂಡ ಭಾರತಕ್ಕೆ ಪ್ರಜಾಪ್ರಭುತ್ವ ಒಂದು ವರ. ನಾವು ಯಾವುದೇ ಜಾತಿ, ಮತ ಧರ್ಮ, ಭಾಷೆಗೆ ಸೇರಿದವರಾದರೂ ನಾವೆಲ್ಲ ಭಾರತೀಯರು ಎಂಬ ಹೆಮ್ಮೆ ಮತ್ತು ಐಕ್ಯತಾ ಭಾವ ನಮ್ಮಲ್ಲಿ ಸದಾ ಇರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ನುಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಾಣಿಕ್ಯ, ಐ.ಸಿ.ಸಿ. ಸಫಿಂಗ್ ಸ್ವಾಮಿ ಪ್ರತಿಷ್ಠಾನದ ನಿರ್ದೇಶಕರು ಹಾಗೂ ಸಫಿಂಗ್ ಸ್ವಾಮಿ ಪ್ರತಿಷ್ಠಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ 130.19 ಕೋಟಿಯಷ್ಟು ವ್ಯವಹಾರ ನಡೆಸಿ, ರೂ 37.29 ಲಕ್ಷ ನಿವ್ವಳ ಲಾಭಗಳಿಸಿದ್ದು, ಮುಂದಿನ ದಿನಗಳಲ್ಲಿ 150 ಕೋಟಿ ರೂ. ವ್ಯವಹಾರದ ಗುರಿ ಹೊಂದಿದೆ ಎಂದು ಸಂಘದ ಅಧ್ಯಕ್ಷ ಮೋಹನ ಪೂಜಾರಿ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಭಾನುವಾರ ನಡೆದ ಸಂಘದ 33ನೇ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು ಪ್ರಾರಂಭದಿಂದಲೂ ಲಾಭದಲ್ಲೆ ಮುನ್ನಡೆಯುತ್ತಿದ್ದು, ಕಳೆದ 32 ವರ್ಷಗಳಿಂದಲೂ ನಿರಂತರ ಡಿವಿಡೆಂಡ್ ನೀಡಿರುವ ಹೆಗ್ಗಳಿಕೆಯಿದೆ. ಈ ಬಾರಿ ಶೇ. 12ರಷ್ಟು ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ನಿರ್ಣಯಿಸಿದೆ. ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ರಚನೆಯಾದ ಕಲ್ಪತರು ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರುಗಳಿಗೆ ಮಾಹಿತಿ ಶಿಬಿರ ಹಾಗೂ ಸಂಘಗಳಿಗೆ ಸಾಲ ಸೌಲಭ್ಯ ನೀಡಿ ಈ ಮೂಲಕ ವ್ಯವಹಾರ ಹೆಚ್ಚಿಸಲಾಗುವುದು. ವರದಿ ವರ್ಷದ ಅಂತ್ಯಕ್ಕೆ ಒಟ್ಟು 173 ಕಲ್ಪತರು ಮಹಿಳಾ ಸ್ವ ಸಹಾಯ ಗುಂಪುಗಳನ್ನು ಹೊಂದಿದ್ದು,…
