ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪೇಟೆ ವೆಂಕಟರಮಣ ದೇವರಿಗೆ ಸ್ವರ್ಣ ಪಲ್ಲಕ್ಕಿ ಕಾಶಿ ಮಠ ಶ್ರೀ ಸಂಯಮೀಂದ್ರರ್ತೀ ಸ್ವಾಮೀಜಿ ಅರ್ಪಿಸಿ ಆರ್ಸೀವಚನ ನೀಡಿದರು. ಪಲ್ಲಕ್ಕಿ ಸವರ್ಮಣೆ ಮುನ್ನಾ ಸಮಾಜ ಬಾಂಧವರು ಮೆರವಣಿಗೆ ನಡೆಸಿದರು. ಪಲ್ಲಕ್ಕಿ ಸಮರ್ಪಣೆ ನಂತರ, ದೇವರ ಪೂಜೆ ಸ್ವಾಮೀಜಿ ನಡೆಸಿದ ನಂತರ ಉತ್ಸವಮೂರ್ತಿ ಶಿಬಿಕೆಯಲ್ಲಿಟ್ಟು ಪ್ರಕಾರೋತ್ಸವ ನೆಡೆಸಲಾಯಿತು. ಕಾಶಿ ಮಠ ಶ್ರೀ ಸುಮೀಂದ್ರತೀರ್ಥ ಸ್ವಾಮೀಜಿ ಸ್ವರ್ಣ ಪಲ್ಲಕ್ಕಿ ಅರ್ಪಿಸಿ ಆರ್ಶೀವಚನ ನೀಡಿ, ಭವಂತನಿಂದ ಪಡೆದಿದ್ದು, ಭಗವಂತನಿಗೆ ಅರ್ಪಿಸಿವ ಮೂಲಕ ನಮ್ಮಲ್ಲಿರುವ ಅನೇಕ ಲೋಪಗಳು ಮರೆಯಾಗುತ್ತವೆ. ಎಂದು ಹೇಳಿದರು. ತನು ಮನ ಧನದ ಮೂಲಕ ಭಗವಂತನ ಸೇವೆ ನಡೆದಿದ್ದು, ಭಕ್ತರ ಕನಸು ನನಸಾಗಿದೆ. ಉತ್ಸವದ ಮೂಲಕ ದೇವರನ್ನು ನೋಡುವಾಗ ಸಿಗುವ ಆನಂದದ ಭೂತಿಗೆ ಇದು ಪೂರಕವಾಗಲಿದೆ ಎಂದರು. ಶ್ರೀ ಸುಮೀಂದ್ರತೀರ್ಥ ಸ್ವಾಮೀಜಿ ಅವರಿಗೆ ಪಾದ ಪೂಜೆ ಸಲ್ಲಿಸಲಾಯಿತು. ದೇವಸ್ಥಾನ ಆಡಳಿತ ಮೊಕ್ತೇಸರ ಕೆ.ರಾಧಾಕೃಷ್ಣ ಶೆಣೈ, ಉದ್ಯಮಿಗಳಾದ ಪಿ.ದಯಾನಂದ ಪೈ., ಸುಭಾಶ್ ಕಾಮತ್, ಜತೆ ಮೊಕ್ತೇಸರ ಎಚ್.ಜನಾರ್ದನ ಮಲ್ಯ, ಪಿ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಚಾರೋಡಿ ಮೇಸ್ತ ಸಮಾಜದವರು ಬೆಣ್ಗೆರೆಯಲ್ಲಿ ಕಳೆದ ೪೮ ವರ್ಷಗಳಿಂದ ನಾಗಮಂಡಲೋತ್ಸವವನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ. ಮೇಸ್ತ ಸಮಾಜ ಬಾಂಧವರಲ್ಲಿನ ವಿಶೇಷ ಧಾರ್ಮಿಕ ಪ್ರಜ್ಞೆ, ಒಗ್ಗಟ್ಟು, ಪ್ರೀತಿ, ಸಂಸ್ಕಾರ ಇದರ ಪ್ರತಿಫಲವಾಗಿ ಸುಂದರ ಸಮುದಾಯ ಭವನ ನಿರ್ಮಾಣಗೊಂಡಿದೆ. ಸಂಸದ ಬಿ.ವೈ.ರಾಘವೇಂದ್ರ ಅವರ ವಿಶೇಷ ಕಾಳಜಿಯಿಂದ ಸರಕಾರದಿಂದ ಸುಮಾರು ೨೦ ಲಕ್ಷ ಅನುದಾನವನ್ನು ಒದಗಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಮುದಾಯ ಭವನದ ಅಭಿವೃದ್ಧಿಗೆ ೨೦ ಲಕ್ಷ ರೂ. ಅನುದಾನ ಒದಗಿಸಲು ನಿಮ್ಮೊಂದಿಗೆ ಕೈಜೋಡಿಸುವುದಾಗಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ವಠಾರದಲ್ಲಿ ಕರ್ನಾಟಕ ನೀರಾವರಿ ನಿಗಮದ ಸುಮಾರು ೨೦ ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿರುವ ಚಾರೋಡಿ ಮೇಸ್ತ ಸಮಾಜ ಸಮುದಾಯ ಭವನವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ದೇವಸ್ಥಾನಗಳ ಅಭಿವೃದ್ಧಿ ಮತ್ತು ಜೀಣೋದ್ಧಾರ ಕಾರ್ಯಗಳಿಗೆ ಸುಮಾರು ೧೦ ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಸರಕಾರದಿಂದ ಮಂಜೂರಾತಿ ದೊರೆತ ಬಳಿಕ ಅನುದಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ವೈ. ವಿಠ್ಠಲ ಪ್ರಭು (85) ಅವರು ಮಾ.22ರಂದು ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ , ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಹಿರಿಯ ಪುತ್ರ ಕೃಷ್ಣಮೂರ್ತಿ ಪ್ರಭು ಆದಾಯ ತೆರಿಗೆ ಇಲಾಖೆಯ ನಿವ್ರತ್ತ ಅಧಿಕಾರಿ ಮತ್ತು 2 ನೇ ಪುತ್ರ ಬಿ. ಸದಾಶಿವ ಪ್ರಭು ಐಎಎಸ್ ವಿಜಯನಗರ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಅಂತ್ಯಕ್ರೀಯೆಯು ಎಳ್ಳಾರೆಯ ಬೆಂಬರಬೈಲಿನ ಅವರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬುಧವಾರ ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಭೇಟಿನೀಡಿ ದೇವರ ದರ್ಶನ ಪಡೆದು ಪ್ರಧಾನ ಅರ್ಚಕ ಪ್ರಕಾಶ ಉಡುಪ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇತ್ತಿಚಿಗಷ್ಟೆ ಈ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಾಹಾರಥೋತ್ಸವ ನಡೆದಿತು. ಈ ಉತ್ಸವ ಸಮಿತಿಯ ಗೌರವಾಧ್ಯಕ್ಷರಾಗಿದ್ದ ಸಂಸದರು ಕಾರಣಾಂತರದಿಂದ ಭಾಗವಹಿಸಲು ಸಾಧ್ಯವಾಗಿಲ್ಲದ ಹಿನ್ನೆಯಲ್ಲಿ ಸಮಿತಿಯ ಮನವಿ ಮೇರೆಗೆ ಬುಧವಾರ ಭೇಟಿ ನೀಡಿದ ಸಂಸದರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಅಷ್ಟಬಂಧ ಉತ್ಸವಕ್ಕೆ ತಮ್ಮ ವಯಕ್ತಿಕ ದೇಣಿಗೆ ನೀಡಿದ ಸಂಸದರು, ದೇವಳದಲ್ಲಿ ಸುಮಾರು ೩೮ ಲಕ್ಷ ವೆಚ್ಚದಲ್ಲಿ ನೂತನ ಅನ್ನಛತ್ರಕ್ಕೆ ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಕೊಡಿಸುವ ಭರವಸೆ ನೀಡಿದರು. ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ. ಎಸ್. ಸುರೇಶ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯು. ಪಾಂಡುರಂಗ ಪಡಿಯಾರ್, ದೇವಳದ ಮಾಜಿ ಧರ್ಮದರ್ಶಿ ಬಿಜೂರು ಜಯರಾಮ ಶೆಟ್ಟಿ, ಉದ್ಯಮಿ ಕುಂಜಾಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಷಾ ಕ್ಷೇತ್ರಗಳಂತೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದಲ್ಲಿಯೂ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಹೆಚ್ಚುತ್ತಿದೆ. ಈ ಭಾರಿ ಯಾರಿಗೆ ಪಕ್ಷ ಟಿಕೆಟ್ ನೀಡಲಿದೆ. ಯಾವ ಸಮುದಾಯಕ್ಕೆ ಅವಕಾಶ ದೊರೆಯಲಿದೆ ಎಂಬ ಕುತೂಹಲ ಸದ್ಯ ಮತದಾರರಲಿಲ್ಲದೆ. ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ:ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಈ ಭಾರಿಯೂ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಕಳೆದ 5 ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಟಿಕೆಟ್ ನಿರಾಕರಿಸಲು ಕಾರಣಗಳಿಲ್ಲ. ಹಾಗಾಗಿಯೇ ಮತ್ತೆ ಟಿಕೆಟ್ ನಿರೀಕ್ಷೆಯಲ್ಲಿದ್ದೇನೆ ಎಂದು ಶಾಸಕರು ಹೇಳಿಕೊಂಡಿದ್ದಾರೆ. ಮತ್ತೆ ಟಿಕೆಟ್ ಪಡೆಯಲು ಸಾಕಷ್ಟು ಪ್ರಯತ್ನವನ್ನೂ ನಡೆಸುತ್ತಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಪ್ರಣಯಕುಮಾರ್ ಶೆಟ್ಟಿ:ಬೈಂದೂರು ಮಂಡಲ ಬಿಜೆಪಿ ಮಾಜಿ ಅಧ್ಯಕ್ಷ ಪ್ರಣಯಕುಮಾರ್ ಶೆಟ್ಟಿ ಅವರು ಈ ಭಾರಿ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ. ಪಕ್ಷ ಸಂಘಟನೆಯ ಕಲೆ ಹಾಗೂ ಆರ್.ಎಸ್.ಎಸ್ ಬೆಂಬಲ ಹೊಂದಿರುವ ಪ್ರಣಯ ಶೆಟ್ಟಿ ಅವರು ಕಳೆದೊಂದು ವರ್ಷದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ನಾಗರತ್ನ ಭುಜಂಗ ಶೆಟ್ಟಿ ಟ್ರಸ್ಟ್ ನಡೆಸುತ್ತಿರುವ ವಿದ್ಯಾ ಅಕಾಡೆಮಿಯು ಮಾರ್ಚ್ 26 ರ ರವಿವಾರ ಸಂಜೆ 4 ಗಂಟೆಗೆ ಚಿಕ್ಕ ಮಕ್ಕಳಿಗಾಗಿ ಕುಂದಾಪುರಲ್ಲಿ ಮೊದಲ ಬಾರಿಗೆ ಕಿಡ್ಸ್ ಕಾರ್ನಿವಲ್ ಅನ್ನು ಆಯೋಜಿಸಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಸಲಹೆಗರಾರು ಮತ್ತು ಎಂಐಟಿಕೆ ಉಪ ಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿ ಸೋಜಾ ಮಾಹಿತಿ ನೀಡಿ ಈ ಕಾರ್ನಿವಲ್ ಮುಖಾಂತರ ಚಿಕ್ಕ ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸಿ, ವಿವಿಧ ಸ್ಥಳಗಳ ಮತ್ತು ವಿವಿಧ ಶಾಲೆಗಳ ಮಕ್ಕಳೊಂದಿಗೆ ಬೆರೆತು, ಹಲವು ಮನೋರಂಜನೆ ಮತ್ತು ಆಟೋಟ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂತೋಷ ಪಡಲು ಅವಕಾಶ ಮಾಡಿ ಕೊಡಲಾಗಿದೆ. ಈ ಕಾರ್ಯಕ್ರಮದಲ್ಲಿ ಮಕ್ಕಳ ಜೊತೆಗೆ, ಅವರ ಪೋಷಕರಿಗೂ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಮಕ್ಕಳಲ್ಲಿ ಅತೀವಸಂತೋಷದ ವಾತಾವರಣ ಉಂಟುಮಾಡಲು ಪ್ರಯತ್ನಿಸಲಾಗುವುದು. ಹಲವು ಆಟೋಟಗಳ ಜೊತೆಗೆ ಮಕ್ಕಳ ಪ್ರತಿಭೆಗಳನ್ನ ಪ್ರದರ್ಶಿಸಲು ಮುಕ್ತ ಅವಕಾಶ ನೀಡಲಾಗುವುದು. ಹಾಗೆ ಮಕ್ಕಳಿಗೆ ಇಷ್ಟ ಆಗುವ ತಿಂಡಿ ತಿನಿಸುಗಳ ಸ್ಮಾಲ್ ಗಳ…
ಪತ್ರಿಕಾಗೋಷ್ಠಿಯಲ್ಲಿ ಮನಸ್ಮಿತ ಫೌಂಡೇಶನ್ನ ಆಡಳಿತ ನಿರ್ದೇಶಕ ಡಾ. ಪ್ರಕಾಶ್ ಸಿ. ತೋಳಾರ್, ನಿರ್ದೇಶಕ ಡಾ. ಸತೀಶ್ ಪೂಜಾರಿ, ಕಾರ್ಯಕ್ರಮ ಸಹ ಪ್ರಾಯೋಜಕರಾದ ಯುವ ಮೆರೀಡಿಯನ್ ಆಡಳಿತ ಪಾಲುದಾರರಾದ ಉದಯ ಕುಮಾರ್ ಶೆಟ್ಟಿ, ವಿನಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ, ಗ್ರಾಮ ಪಂಚಾಯತ್ ಮರವಂತೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ, ಆಸರೆ ಚಾರಿಟೇಬಲ್ ಟ್ರಸ್ಟ್ (ರಿ) ಮರವಂತೆ, ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಇಲ್ಲಿ ಕೆ ಎಂ ಸಿ ಮಣಿಪಾಲದ ಖ್ಯಾತ ದಂತ ವೈದ್ಯರ ತಂಡದಿಂದ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ಗಣೇಶ್ ಭಟ್ ಉದ್ಘಾಟಿಸಿದರು. ದಂತ ಚಿಕಿತ್ಸೆಯ ಕುರಿತು ಡಾ. ರಾಜಾರಾಮ್ ಶೆಟ್ಟಿ ಮಾಹಿತಿಯನ್ನು ನೀಡಿದ್ದಾರೆ, ಕೆಎಂಸಿ ಮಣಿಪಾಲ ಆಸ್ಪತ್ರೆಯ ಡಾ. ಹರಿಣಿ ಇವರು ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ್ ನಾವುಂದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಗಣೇಶ್ ಐತಾಳ್, ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಆಸರೆ ಚಾರಿಟೇಬಲ್ ಟ್ರಸ್ಟ್ ನ ರಾಜೇಶ್ ಆಚಾರ್ಯ ಗ್ರಾಮ ಪಂಚಾಯತ ಸದಸ್ಯರಾದ ಕರುಣಾಕರ್ ಆಚಾರ್ಯ ಉಪಸ್ಥಿತರಿದ್ದರು. ರಾಜಾರಾಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ಭಾರತೀಯ ಸಂಸ್ಕೃತಿಯ ಬುನಾದಿ ನಾಥಪಂಥ. ಇದು ಕ್ರಿಸ್ತಪೂರ್ವದ ಅಂಚಿನಿಂದಲೂ ಆರಾಧನೆಯಿತ್ತು. ವಸ್ತುತಃ ಭೈರವನ ಆರಾಧನೆ ವೈದಿಕ ಸಂಸ್ಕೃತಿಯಲ್ಲಿಲ್ಲ. ಇದು ದ್ರಾವಿಡ ಪರಂಪರೆಯಿಂದ ಬಂದಿರುವ ಆತ್ಮಸಾಧನೆಗೆ ಮೂಲವಾಗಿರುವ ತಂತ್ರ ಸಂಸ್ಕೃತಿಯಲ್ಲಿದೆ. ಇದರ ಮೂಲ ತತ್ವ ಸಿದ್ದಾಂತ ಹಾಗೂ ಅನ್ವೇಷಣೆಯನ್ನು ಸರಿಯಾಗಿ ಅಧ್ಯಯನ ಮಾಡಿದರೆ ಈ ಪಂಥದಲ್ಲಿರುವ ಅನೇಕ ವಿಚಾರಧಾರೆಗಳ ಬಗ್ಗೆ ಅರ್ಥವಾಗುತ್ತದೆ ಎಂದು ಆದಿಚುಂಚನಗಿರಿ ಕಾವೂರು ಶಾಖಾ ಮಠಾಧೀಶ ಡಾ.ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಖಂಬದಕೋಣೆ ಗ್ರಾಮದ ಶ್ರೀ ಕ್ಷೇತ್ರ ಹಳಗೇರಿ ಶ್ರೀ ಕಾಲಭೈರೇಶ್ವರ ದೇವಸ್ಥಾನದ ಪುನರ್ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ 48ನೇ ದಿನದ ಪ್ರಯುಕ್ತ ಧೃಡಸಂಪ್ರೋಕ್ಷಣೆ ಹಾಗೂ ದೇವರ ಉತ್ಸವಮೂರ್ತಿ ಸಮರ್ಪಣಾ ಮಹೋತ್ಸವದಲ್ಲಿ ಆಶೀರ್ವಚನ ನೀಡಿದರು. ಉತ್ತರ ಭಾರತದಲ್ಲಿ ನಾಥ ಪರಂಪರೆ ಬಹಳ ಚೆನ್ನಾಗಿ ಬೆಳೆಯುತ್ತಿದ್ದು, ಈ ಭಾಗದಲ್ಲಿ ಮಾತ್ರ ಕುಂಟಿತವಾಗುತ್ತಿದೆ. ಕರ್ನಾಟಕದಲ್ಲಿ ಬಹಳ ವರ್ಷಗಳ ಹಿಂದಿನ ಇತಿಹಾಸವುಳ್ಳ ಭೈರವ ದೇವಾಲಯಗಳಿದ್ದು, ತನ್ನದೇ ಆದ ಅಂತರ್ಹಿತಗಳನ್ನು ಹೊಂದಿದೆ. ದುದೃಷ್ಟವಶಾತ್ ಇವುಗಳಲ್ಲಿ ಕೆಲವಾರು ದೇವಸ್ಥಾನಗಳು ಅವಸಾನದ ಅಂಚಿನಲ್ಲಿವೆ. ಧರ್ಮ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನವೀಕರಣಗೊಂಡ ನಗರದ ಹೂವಿನ ಮಾರುಕಟ್ಟೆ, ಶೆಣೈ ಪಾರ್ಕ್ ಇತ್ತೀಚಿಗೆ ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಮಾತನಾಡಿ, ಕುಂದಾಪುರ ಪುರಸಭೆಗೆ ಲಭ್ಯವಾದ 6.5 ಕೋಟಿ ನಗರೋತ್ಥಾನ ಯೋಜನೆಯ ಅನುದಾನದ ಕ್ರಿಯಾಯೋಜನೆ ಸಿದ್ಧಪಡಿಸುವ ಸಂದರ್ಭ ಸ್ಥಳೀಯ ಸದಸ್ಯೆ ದೇವಕಿ ಸಣ್ಣಯ್ಯ ಅವರು ಹೂವಿನ ಮಾರುಕಟ್ಟೆ ನವೀಕರಣಕ್ಕೆ ಸಲಹೆ ನೀಡಿದಂತೆ ನವೀಕರಣ ಕಾರ್ಯ ಕೈಗೊಳ್ಳಲಾಯಿತು ಎಂದರು. ಕುಂದಾಪುರ ಪುರಸಭೆಯ ಸದಸ್ಯೆ ಹಾಗೂ ಮಾಜಿ ಅಧ್ಯಕ್ಷೆ ದೇವಕಿ ಸಣ್ಣಯ್ಯ ಉದ್ಘಾಟಿಸಿ, ನಗರೋತ್ಥಾನ ಯೋಜನೆಯ ಅನುದಾನ ಬಳಸಿಕೊಂಡು ಹೂವಿನ ಮಾರುಕಟ್ಟೆ ನವೀಕರಣ ಮಾಡಲಾಗಿದೆ. ಕುಂದಾಪುರ ಪೇಟೆಯ ನಡುವೆ ಇರುವ ಹೂವಿನ ಮಾರುಕಟ್ಟೆಯನ್ನು ಸುಂದರವಾಗಿ ನವೀಕರಣ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಶೆಣೈ ಪಾರ್ಕನ್ನು ಪುರಸಭಾ ಉಪಾಧ್ಯಕ್ಷ ಸಂದೀಪ್ ಖಾರ್ವಿ ಉದ್ಘಾಟಿಸಿದರು. ಪುರಸಭೆಯ ಸದಸ್ಯರಾದ ಪ್ರಭಾಕರ, ಶ್ರೀಧರ ಶೇರುಗಾರ್, ಚಂದ್ರಶೇಖರ ಖಾರ್ವಿ, ಪ್ರಭಾವತಿ ಶೆಟ್ಟಿ, ಶೇಖರ ಪೂಜಾರಿ, ರಾಘವೇಂದ್ರ ಖಾರ್ವಿ, ನಾಮನಿರ್ದೇಶನ ಸದಸ್ಯರಾದ ಪುಷ್ಪಾ…
