ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೆಪಿ ಸರಕಾರ ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನಗಳನ್ನು ಒದಗಿಸಿರುವ ಹಿನ್ನೆಲೆಯಲ್ಲಿ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆಯವರನ್ನು ಬೆಂಬಲಿಸುವಂತೆ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ನಿರ್ದೇಶಕ ಕಳಿ ಚಂದ್ರಯ್ಯ ಆಚಾರ್ಯ ಅವರು ಮನವಿ ಮಾಡಿದ್ದಾರೆ. ಬೈಂದೂರು ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರಕಾರ ವಿಶ್ವಕರ್ಮ ಸಮುದಾಯದ ಮಠ ಮಂದಿರಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿರುವುದು ಮಾತ್ರವಲ್ಲದೆ ಸಮುದಾಯದ ದೇವಸ್ಥಾನಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೂ ಸಹಕರಿಸಿದೆ. ಈ ನಿಟ್ಟಿನಲ್ಲಿ ಸಮುದಾಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರನ್ನು ಬೆಂಬಲಿಸುವುದು ಸೂಕ್ತ ಎಂದು ಅವರು ತಿಳಿಸಿದರು. ಉಪ್ರಳ್ಳಿ ಶ್ರೀ ಕಾಳಿಕಾಂಬ ದೇವಸ್ಥಾನದ ಮುಂಭಾಗದ ರಸ್ತೆ ಕಾಂಕ್ರೀಟೀಕರಣ, ಕಾಂಕ್ರೀಟ್ ಸೈಡ್ ವಾಲ್, ಶೀಟ್ ಮಾಡು, ಕಚೇರಿ ಹಾಗೂ ಗುರುಗಳ ವಾಸ್ತವ್ಯ ಕಟ್ಟಡ ಹಾಗೂ ಸಭಾಂಗಣಕ್ಕೆ 2 ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ಬಿಜೆಪಿ ಸರಕಾರ ಒದಗಿಸಿದೆ. ಇದರ ಜೊತೆಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಭಾನುವಾರ ಸಿದ್ಧಾಪುರ ಪೇಟೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ತಲ್ಲೂರು ನೇರಳಕಟ್ಟೆ, ತ್ರಾಸಿ – ಗುಜ್ಜಾಡಿ, ವಂಡ್ಸೆ ಪೇಟೆ ಹಾಗೂ ಸಿದ್ಧಾಪುರದಲ್ಲಿ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. ವಂಡ್ಸೆ ಸಿದ್ಧಾಪುರದ ರೋಡ್ ಶೋ ವೇಳೆ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರುಗಳಾದ ಸಂಪಿಗೇಡಿ ಸಂಜೀವ ಶೆಟ್ಟಿ, ಕೆ. ಬಾಬು ಶೆಟ್ಟಿ, ಪ್ರಸನ್ನಕುಮಾರ್ ಶೆಟ್ಟಿ ಸೇರಿದಂತೆ ಹಲವರು ಜೊತೆಗಿದ್ದರು.
ಕುಂದಾಪ್ರ ಡಾಟ್ ಕಂ ಸುದ್ದಿ.ಕುಂದಾಪುರ: ಕುಂದಾಪುರ ಬಿಜೆಪಿ ಅಭ್ಯರ್ಥಿ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಪರವಾಗಿ ಶನಿವಾರ ಕುಂದಾಪುರ ನಗರದಲ್ಲಿ ಭರ್ಜರಿ ರೋಡ್ ಶೋ ನಡೆಯಿತು. ಸಾವಿರಾರು ಕಾರ್ಯಕರ್ತರು ಬಿಜೆಪಿ ಹಾಗೂ ಕೇಸರಿ ಧ್ವಜ ಹಿಡಿದ ರೋಡ್ ಶೋನಲ್ಲಿ ಹೆಜ್ಜೆ ಹಾಕಿದರು. ಕುಂದಾಪುರ ನೆಹರು ಮೈದಾನದಿಂದ ಆರಂಭಗೊಂಡು ಹೊಸ ಬಸ್ ನಿಲ್ದಾಣದ ಮುಖಾಂತರ ತಿರುಗಿ ಮತ್ತೆ ಶಾಸ್ತ್ರೀ ವೃತ್ತದಲ್ಲಿ ಸಮಾಪನಗೊಂಡಿತು. ಬಜರಂಗದಳ ನಿಶೇಧದ ವಿರುದ್ಧ ಸಂಘಟನೆಗಳ ವಿರೊಧದ ಕೂಗು ಮರೆವಣಿಗೆಯಲ್ಲಿ ಕೇಳಿಬಂತು. ಕುಂದಾಪುರ ಶಾಸಕರ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಸೇರಿದಂತೆ ವಿವಿಧ ಪದಾಧಿಕಾರಿಗಳು ಈ ವೇಳೆ ಜೊತೆಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರವಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ಉಡುಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ ಅವರು ಉಪ್ಪುಂದದ ಅಳುವೆಕೋಡಿಯಿಂದ ಕರ್ಕಿಕಾಳಿಯವರೆಗೂ ಶನಿವಾರ ಸಂಜೆ ರೋಡ್ ಶೋ ನಡೆಸಿ, ಮತ ಯಾಚಿಸಿದರು. ಈ ವೇಳೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಮಾತನಾಡಿ, ಗುರುರಾಜ ಗಂಟಿಹೊಳೆಯವರೊಂದಿಗೆ ಯುವ ಸಮೂಹವೇ ಇದೆ. ಅವರ ಗೆಲುವಿಗೆ ಎಲ್ಲರೂ ಒಟ್ಟಾಗಿ ಶ್ರಮೀಸಬೇಕು. ಮೀನುಗಾರರ ಸೀಮೆಎಣ್ಣೆ ಸಮಸ್ಯೆಗೆ ಕೇಂದ್ರ ಸರಕಾರ ಶಾಶ್ವತ ಪರಿಹಾರ ನೀಡಲಿದೆ. ಇದಕ್ಕಾಗಿ ರಾಜ್ಯದಲ್ಲೂ ಅಧಿಕಾರಕ್ಕೆ ಬರಬೇಕು. ಬೈಂದೂರಿನಲ್ಲೂ ಗುರುಅಣ್ಣ ಜಯ ಸಾಧಿಸಬೇಕು ಎಂದರು. ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ, ಬಿಜೆಪಿ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗೋವಿಂದ ಬಾಬು ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಶನಿವಾರ ಶಿರೂರಿನಿಂದ ಮುದೂರು ತನಕ ವಿವಿಧ ಭಾಗಗಳಲ್ಲಿ ರೋಡ್ ಶೋ ನಡೆಸಿ ನಡೆಸಿ ಮತಯಾಚನೆ ಮಾಡಿದರು. ಈ ವೇಳೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪ್ರಥ್ವಿರಾಜ್ ಚೌಹಾಣ್ ರೋಡ್ ಶೋಗೆ ಸಾಥ್ ನೀಡಿದರು. ದೊಂಬೆ, ಶಿರೂರು, ಹಡವಿನಕೋಣೆ, ಉಪ್ಪುಂದ, ಬಿಜೂರು, ಹೊಸಕೋಟೆ, ನಾಯ್ಕನಕಟ್ಟೆ, ಕಂಬದಕೋಣೆ, ಕಾಲ್ತೋಡು, ತಗ್ಗರ್ಸೆ, ವಸ್ರೆ, ಯಳಜಿತ, ಗೋಳಿಹೊಳೆ, ಅರೆಶಿರೂರು, ಕೊಲ್ಲೂರು, ಜಡ್ಕಲ್ ಮುದೂರು ಭಾಗದಲ್ಲಿ ಅವರು ರೋಡ್ ಶೋ ನಡೆಸಿದರು. ಈ ವೇಳೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನಕುಮಾರ್ ಉಪ್ಪುಂದ, ಪ್ರಚಾರ ಸಮಿತಿ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಕೆ. ಬಾಬು ಶೆಟ್ಟಿ, ಸದಾಶಿವ ಪಡುವರಿ, ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಗಾಣಿಗ ಬಂಕೇಶ್ವರ, ಸತೀಶ್ ಕೆ.ವಿ, ಶೇಖರ ಪೂಜಾರಿ ಉಪ್ಪುಂದ, ರವೀಂದ್ರ ಶೆಟ್ಟಿ, ಉದಯ ಪೂಜಾರಿ, ರಿಯಾಜ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಮೇ 5ರಂದು ಸಹಸ್ರ ಕಲಶಗಳೊಂದಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು. ಬೆಳಗ್ಗೆ ಯಾಗೇಶ್ವರಿ ಹೋಮ, ಸಹಸ್ರಕಲಶಗಳೊಂದಿಗೆ ಬ್ರಹ್ಮ ಕಲಶಾಭಿಷೇಕ ಮಹಾಪೂಜೆ ಧ್ವಜಪೂಜೆ, ಕ್ಷೇತ್ರಪಾಲ ಪೂಜೆ, ಚತುರ್ವೇದ ಪಾರಾಯಣ ಸಹಿತ ಭೇರಿತಾಡನ, ಪಳಹ ಪೂಜೆ, ವಿಶೇಷ ಬಲಿ, ಪಲ್ಲಕ್ಕಿ ಉತ್ಸವ ಮಯೂರ ಆರೋಹಣೋತ್ಸವ, ಡೋಲಾರೋಹಣೋತ್ಸವ, ತಂತ್ರಿ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ನಡೆಯಿತು. ಧಾರ್ಮಿಕ ವಿಧಿಗಳೊಂದಿಗೆ ಗರ್ಭಗುಡಿಯ ಶಿಖರಕ್ಕೆ ಕಲಶಾಭಿಷೇಕ ನೆರವೇರಿಸಲಾಯಿತು. ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಕಾರ್ಯನಿರ್ವಹಣಾಕಾರಿ ಎಸ್ ಸಿ. ಕೋಟಾರಗಸ್ತಿ, ಸದಸ್ಯರಾದ ಡಾ. ರಾಮಚಂದ್ರ ಅಡಿಗ, ಡಾ. ಅತುಲ್ ಕುಮಾರ್ ಶೆಟ್ಟಿ, ಜಯಾನಂದ ಹೋಬಳಿದಾರ್, ಗಣೇಶ ಕಿಣಿ ಬೆಳ್ವೆ, ಗೋಪಾಲಕೃಷ್ಣ ನಾಡ, ಶೇಖರ ಶೇಖರ ಪೂಜಾರಿ, ಸಂಧ್ಯಾ ರಮೇಶ, ರತ್ನ ಆರ್.ಕುಂದರ್, ಅರ್ಚಕರಾದ ಡಾ. ನಿತ್ಯಾನಂದ ಅಡಿಗ, ಡಾ. ಕೆ.ಎನ್. ನರಸಿಂಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನು ಪ್ರಣಾಳಿಕೆ ಮೂಲಕ ತೋರಿಸಿದೆ. ಮೇ 10ರಂದ ನಡೆಯಲಿರುವ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ. ಹಿಂದು ಸಮಾಜ ಒಂದಾಗಿ ಕಾಂಗ್ರೆಸ್ ಈ ಕುಟಿಲ ತಂತ್ರದ ವಿರುದ್ಧ ಸಮರ ಸಾರಬೇಕು ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು ಹೇಳದರು. ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವುದು ಮತ್ತು ಪಿಎಫ್ಐ ಜೊತೆ ಬಜರಂಗದಳವನ್ನು ಹೋಲಿಕೆ ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಬೈಂದೂರು ಪೇಟೆಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಗೋ ಹತ್ಯೆ ಮತ್ತು ಮತಾಂತರದ ವಿರುದ್ಧ ಹೋರಾಟ ನಡೆಸುತ್ತಿರುವ ಬಜರಂಗದಳವನ್ನು ಹತ್ತಿಕ್ಕಲು ಮತ್ತು ಭಯೋತ್ಪಾದಕರಿಗೆ ಕುಮ್ಮಕ್ಕು ನೀಡಲು ಕಾಂಗ್ರೆಸ್ ಪಕ್ಷ ಬಜರಂಗದಳವನ್ನು ಬ್ಯಾನ್ ಮಾಡಲು ಮುಂದಾಗಿದೆ. ಕಾಂಗ್ರೆಸ್ ಈ ನೀತಿಯನ್ನು ಸಹಿಸಲು ಸಾಧ್ಯವೇ ಇಲ್ಲ. ಗೋಪಾಲ ಪೂಜಾರಿಯವರೇ ನೀವು ಕೇಸರಿ ಸಾಲು ಧರಿಸಿ ನಮ್ಮದೇನು ಅಭ್ಯಂತರ ಇಲ್ಲ. ಆದರೆ ಡೋಂಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕನ್ನಡದ ನಟ ಪ್ರಮೋದ್ ಶೆಟ್ಟಿ ಹಾಗೂ ಶೈನ್ ಶೆಟ್ಟಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರ ಮತ ಚಲಾಯಿಸಿದರು. ಬೈಂದೂರಿನ ಪೇಟೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಅಂಗಡಿ ಹೋಟೆಲ್ ಗಳಿಗೆ ಭೇಟಿ ನೀಡಿ ಗುರುರಾಜ ಗಂಟೆಹೊಳೆ ಅವರಿಗೆ ಮತ ನೀಡುವಂತೆ ಕೋರಿಕೊಂಡರು. ಶಿರೂರು, ಬೈಂದೂರು, ಕೊಲ್ಲೂರು, ಗಂಗೊಳ್ಳಿ ಸೇರಿದಂತೆ ವಿವಿಧೆಡೆ ದಿನವಿಡಿ ಪ್ರಚಾರ ಕಾರ್ಯದಲ್ಲಿ ಭಾಗಿಯಾದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕಚುನಾವಣೆಯಲ್ಲಿ ಮತದಾರರುಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮಅಭ್ಯರ್ಥಿಗೆ ಮತಚಲಾಯಿಸುವಂತೆಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಅವರು ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮದರ್ಜೆಕಾಲೇಜು ಮತ್ತು ಸ್ನಾತಕೋತ್ತರಅಧ್ಯಯನಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ನಡೆದ ಮತದಾನಜಾಗೃತಿಕಾರ್ಯಕ್ರಮದಲ್ಲಿ, ಮತದಾನಜಾಗೃತಿ ಸಾರುವಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಚುನಾವಣೆಯಲ್ಲಿ ಬಹುತೇಕಯುವಜನತೆ ಮೊದಲ ಬಾರಿಗೆ ಮತ ಚಲಾಯಿಸುವ ಸಂಭ್ರಮದಲ್ಲಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಭವಿಷ್ಯಕ್ಕೆಉತ್ತಮಯೋಜನೆರೂಪಿಸುವ, ಉದ್ಯೋಗ ಸೃಷ್ಠಿಸುವ ಆಲೋಚನೆಯಿರುವ, ಪ್ರಾಮಾಣಿಕ ಮತ್ತು ನೈತಿಕತೆಯಿರುವಅಭ್ಯರ್ಥಿಗೆ ಮತ ನೀಡುವುದರ ಮೂಲಕ ತಮ್ಮ ಹಕ್ಕು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ವಿದ್ಯಾರ್ಥಿನಿಯರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದ ಜಿಲ್ಲಾಧಿಕಾರಿಕೂರ್ಮಾರಾವ್ ಎಂ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಯುವಜನತೆ ಮತದಾರರ ಪಟ್ಟಿಗೆತಮ್ಮ ಹೆಸರು ನೊಂದಣಿ ಮಾಡಿದ್ದು, ಇದರಿಂದಜಿಲ್ಲೆಗೆಚುನಾವಣಾಆಯೋಗದಿAದರಾಜ್ಯಮಟ್ಟದಲ್ಲಿ ಪ್ರಶಸ್ತಿ ಸಹ ಬಂದಿದೆ. ಮತದಾನ ದಿನದಂದುಜಿಲ್ಲೆಯಎಲ್ಲಾಯುವಜನತೆತಪ್ಪದೇತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಜಿಲ್ಲೆಯಲ್ಲಿ…
