ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೂನ್ ತಿಂಗಳು ಮಗಿಯುತ್ತಾ ಬಂದರೂ ಕಣ್ಣಾಮುಚ್ಚಾಲೆಯಾಡುತ್ತಿದ್ದ ಮಳೆ ಮಂಗಳವಾರ ರಾತ್ರಿ ಹಾಗೂ ಬುಧವಾರ ಕೆಲ ಹೊತ್ತು ಸುರಿದಿದೆ. ಮಳೆಯ ವಿಳಂಬದಿಂದಾಗಿ ಕಂಗಾಲಾಗಿದ್ದ ರೈತಾಪಿ ವರ್ಗ ಮತ್ತೆ ಕೃಷಿ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಜೂನ್ 1 ರಿಂದ ವಾಡಿಕೆಯಂತೆ 100ಮೀ. ಮೀ ಮಳೆಯಾಗಬೇಕಿದ್ದು, ಈತನಕ ಕೇವಲ 30ಮಿ.ಮೀ. ಮಳೆಯಾಗಿದೆ. ನೀರಿನ ಮೂಲಗಳು ಬತ್ತಿದ್ದು ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿತ್ತು. ಮಳೆಗಾಲ ಆರಂಭಗೊಂಡರೂ ನಿರೀಕ್ಷಿತ ಮಳೆಯಾಗದೇ ಇದ್ದುದರಿಂದ ಬೀಜ ಬಿತ್ತನೆಯೂ ಕಷ್ಟವಾಗಿತ್ತು. ಕೆಲವೆಡೆ ಕೃತಕ ನೀರಿನ ಮೂಲಗಳನ್ನು ಬಳಸಿ ಬಿತ್ತನೇ ಮಾಡಿದ್ದರೂ, ನಾಟಿ ಕಾರ್ಯಕ್ಕೆ ಮಳೆ ನಿರೀಕ್ಷೆಯಲ್ಲಿದ್ದರು. ಇದೀಗ ಮಳೆಯ ಛಾಯೆ ಕಾಣಿಸಿಕೊಂಡಿರುವುದು ರೈತರಲ್ಲಿ ಕೊಂಚ ನೆಮ್ಮದಿ ಕಾಣುವಂತಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪುಸ್ತಕ ಪ್ರೀತಿ ಬೆಳೆಸಿಕೊಳ್ಳುವ ಮುಖೇನ ಸ್ವತಂತ್ರ ಯೋಚನೆ ಹಾಗೂ ಯೋಜನೆಗಳಿಗೆ ಮುಂದಾಗ ಬೇಕು. ಆಗ ಮಾತ್ರ ತಮ್ಮದೇ ಆದ ಬದುಕು ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬಹುದು ಎಂದು ರೋಟರಿ ಕ್ಲಬ್ ಕುಂದಾಪುರದ ಡಿಸ್ಟಿಕ್ ಚೇರ್ಮನ್ ಆವರ್ಸೆ ಮುತ್ತಯ್ಯ ಶೆಟ್ಟಿ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯಕ್ಕೆ ಕುಂದಾಪುರದ ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕಿ ಡಾ| ಪಾರ್ವತಿ ಜಿ. ಐತಾಳ್ ನೀಡಿದ ಸುಮಾರು 60 ಪುಸ್ತಕಗಳನ್ನು ಪಾಂಶುಪಾಲರಿಗೆ ಹಸ್ತಾಂತರಿಸಿ ಮಾತನಾಡಿದರು. ಈ ಸಂದರ್ಭ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ವೆಂಕಟೇಶ್ ನಾವುಂದ, ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅತಿಥಿ ನೆಲೆಯ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಸಾಹಿತ್ಯದ ಓದು ವಿದ್ಯಾರ್ಥಿಗಳ ಬದುಕಿನಲ್ಲಿ ತಾಳ್ಮೆ, ಸಹನೆಯೊಂದಿಗೆ ಮಾನಸಿಕ ಖಿನ್ನತೆಯನ್ನು ದೂರ ಮಾಡುತ್ತದೆ ಎಂದರು. ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಶಸ್ವಿ 12ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ನಿಮ್ಮ ’ಕುಂದಾಪ್ರ ಡಾಟ್ ಕಾಂ’, ಪ್ರಗತಿಯ ದೃಷ್ಟಿ, ಹೊಸ ಆಲೋಚನೆಗಳ ಸೃಷ್ಟಿಗೆ ವೇದಿಕೆ ಕಲ್ಪಿಸುವ ಆಶಯದೊಂದಿಗೆ ವಿಷನ್ ಬೈಂದೂರು ಎಂಬ ಕಾರ್ಯಕ್ರಮವನ್ನು ಜೂನ್.24ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಉಪ್ಪುಂದದ ನಂದನವನ – ದೇವಕಿ ಬಿ.ಆರ್. ಸಭಾಂಗಣದಲ್ಲಿ ಆಯೋಜಿಸಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಅಭಿವೃದ್ಧಿಯ ಕನಸು ಹೊತ್ತ ನಾಗರಿಕರೊಂದಿಗೆ ಮಾತು – ಚರ್ಚೆ – ಮಂಥನ ನಡೆಯಲಿದೆ. ಕಾರ್ಯಕ್ರಮವನ್ನು ಬೈಂದೂರಿನ ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಅಭಿವೃದ್ಧಿಯ ಪರಿಕಲ್ಪನೆ ಎಂಬ ವಿಷಯದ ಬಗ್ಗೆ ರಾಜ್ಯ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ಹಾಗೂ ಅಭಿವೃದ್ಧಿ ಸಮಸ್ಯೆ ಮತ್ತು ಸವಾಲುಗಳು ಎಂಬ ವಿಷಯದ ಬಗ್ಗೆ ಕೇಂದ್ರ ರೈಲ್ವೆ ಬೋರ್ಡ್ ಮಾಜಿ ಸದಸ್ಯ ಕೆ. ವೆಂಕಟೇಶ್ ಕಿಣಿ ವಿಚಾರ ಮಂಡನೆ ಮಾಡಲಿದ್ದಾರೆ. ಬಳಿಕ ಬೈಂದೂರು ಶಾಸಕ…
ಕುಂದಾಪ್ರ ಡಾಟ್ ಕಾಂ ಸುದ್ದಿಕಾರ್ಕಳ: ಕ್ರಿಯಾಶೀಲ ಮನಸ್ಸುಗಳನ್ನು ಕಟ್ಟುವುದರ ಮೂಲಕ ಸಮಾಜಮುಖಿ ಚಿಂತನೆ ಹಾಗೂ ಶೈಕ್ಷಣಿಕ ಕ್ರಾಂತಿಯ ಮಹಾತ್ವಾಕಾಂಕ್ಷೆಯೊಂದಿಗೆ ಆರಂಭಿಸಲಾದ “ಕ್ರಿಯೇಟಿವ್ ನಿನಾದ”ದ ನಾಲ್ಕನೇ ಸಂಚಿಕೆ ಹಾಗೂ ವಿಶೇಷ ಪುರವಣಿಯನ್ನು ಬಿಡುಗಡೆಗೊಳಿಸಲಾಯಿತು. ಪತ್ರಿಕೆಯನ್ನು ಅನಾವರಣಗೊಳಿಸಿ ಮಾತನಾಡಿದ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಕ್ರಿಯಾತ್ಮಕ ಮತ್ತು ಸೃಜನ ಶೀಲತೆಯನ್ನು ಒಂದುಗೂಡಿಸಿ ಹೊಸ ವಿಚಾರವಂತಿಕೆಗಳನ್ನು ಮೂಡಿಸುವ ಸಂಚಿಕೆ ಸಮಾಜದಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಹಾರೈಸಿದರು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಒಂದೇ ಸೂರಿನಡಿ ಯಶಸ್ಸಿನ ಆಯ್ಕೆಗೆ ಕ್ರಿಯೇಟಿವ್ ಮುಂಚೂಣಿಯಲ್ಲಿದೆ ಎಂದು ಅಭಿಪ್ರಾಯ ಪಟ್ಟರು. ಸಂಸ್ಥಾಪಕರಾದ ಅಮೃತ್ ರೈ ಮಾತನಾಡಿ ಕ್ರಿಯಾಶೀಲ ವ್ಯಕ್ತಿತ್ವಗಳಿಗೆ ವಿಶೇಷ ಅಭಿವ್ಯಕ್ತಿ ನೀಡುವ ಮೂಲಕ ನಿನಾದ ಮುನ್ನಡಿಯಾಗಿದೆ. ಹೊಸ ಯೋಚನೆ, ಯೋಜನೆಗಳೊಂದಿಗೆ ಕಾರ್ಯ ಪ್ರವೃತ್ತರಾಗಲಿದ್ದೇವೆ ಎಂದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್, ಆದರ್ಶ ಎಂ. ಕೆ, ವಿಮಲ್ ರಾಜ್ ಹಾಗೂ “ನಿನಾದ” ಸಂಪಾದಕರಾದ ರಾಘವೇಂದ್ರ ರಾವ್, ಉಪನ್ಯಾಸಕರಾದ ವಿನಾಯಕ ಜೋಗ್, ರಾಜೇಶ್ ಶೆಟ್ಟಿ, ರಾಮಕೃಷ್ಣ ಹೆಗಡೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕರಾಟೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗುತ್ತದೆ ಮತ್ತು ಸ್ವಯಂ ರಕ್ಷಣೆಗೆ ಕರಾಟೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ಕರಾಟೆ ಕಲೆಯನ್ನು ಕಲಿಯಲು ಉತ್ಸಾಹ ತೋರಬೇಕು. ಇದರಿಂದ ನಮ್ಮಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕೋಡಿ ವಿಠಲ ಕಾಮತ್ ಹೇಳಿದರು. ಗಂಗೊಳ್ಳಿಯ ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯಾ ವತಿಯಿಂದ ಗಂಗೊಳ್ಳಿಯಲ್ಲಿ ಕರಾಟೆ ತರಗತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಮ್ಮಾಡಿ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ.ರಾಘವೇಂದ್ರ ಪೈ, ಹೆಮ್ಮಾಡಿ ಜನತಾ ಹೈಸ್ಕೂಲಿನ ಉಪನ್ಯಾಸಕ ಜಗದೀಶ ಶೆಟ್ಟಿ, ಉದ್ಯಮಿ ಸಂತೋಶ ಗುಡ್ರಿ ಶುಭ ಹಾರೈಸಿದರು. ಗಂಗೊಳ್ಳಿಯ ಮತ್ಸ್ಯೋದ್ಯಮಿ ರಾಘವೇಂದ್ರ ಖಾರ್ವಿ (ಇಂದ), ರಾಘವೇಂದ್ರ ಖಾರ್ವಿ, ವೆಂಕಟೇಶ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಕರಾಟೆ ಶಿಕ್ಷಕ ಅಕ್ಷಯ್ ಪೂಜಾರಿ ಸ್ವಾಗತಿಸಿದರು. ಶಿಕ್ಷಕ ಸಂತೋಷ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ಹರೀಶ ಆರ್. ಸೋಮವಾರ ಅಧಿಕಾರ ಸ್ವೀಕರಿಸಿದರು. ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ವಿನಯ್ ಕೊರ್ಲಹಳ್ಳಿ ಅವರು ಹರೀಶ್ ಆರ್. ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ವಿನಯ್ ಕೊರ್ಲಹಳ್ಳಿ ಕುಂದಾಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕಡೂರು ಸಂಚಾರ ಠಾಣೆಯ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹರೀಶ್ ಆರ್. ಅವರನ್ನು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತರ ಜೀವನವೇ ನಮಗೊಂದು ಪಾಠವಿದ್ದಂತೆ, ಅವರ ಬದುಕು ಬರಹವನ್ನು ಮುಂದಿನ ಜನಾಂಗಕ್ಕೆ ತಲುಪಿಸಲು ಕಾರಂತ ಥೀಮ್ ಸಹಕಾರಿ, ಅಲ್ಲದೇ ಮಕ್ಕಳಿಗಾಗಿ ಇಲ್ಲಿ ನಡೆಸುವ ಚಟುವಟಿಕೆಗಳು ಅನುಕರಣೀಯ ಎಂದು ಕಾರವಾರ ಸಹಾಯಕ ಆಯುಕ್ತರು ಜಯಲಕ್ಷ್ಮೀ ರಾಯಕೋಡ್ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಭೇಟಿ ನೀಡಿ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗ್ರಂಥಾಲಯ, ಅಂಗನವಾಡಿ, ಆರ್ಟ್ ಗ್ಯಾಲರಿ, ಕಿರು ಸಭಾಂಗಣ, ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಭಟ್ಕಳ ಸಹಾಯಕ ಆಯುಕ್ತರು ಮಮತಾ ದೇವಿ ಜಿ.ಎಸ್ ಮಾತನಾಡಿ ಸಾಹಿತ್ಯ ಕ್ಷೇತ್ರಕ್ಕೆ ಕಾರಂತರ ಕೊಡುಗೆ ಅಪಾರವಾದುದು, ಅವರ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹತ್ತಿರವಾಗಿದೆ, ಥೀಮ್ ಪಾರ್ಕ್ ಇನ್ನಷ್ಟು ಪ್ರಸಿದ್ಧಿ ಪಡೆಯಲಿ ಎಂದರು. ಈ ಸಂದರ್ಭದಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಶ್ರೀ ಸುಬ್ರಾಯ ಆಚಾರ್ಯ, ಮಾಜಿ ಕುಂದಾಪುರ ತಾಲ್ಲೂಕು ಪಂಚಾಯತ್ ಸದಸ್ಯ ಶ್ರೀ ಕರಣ್ ಪೂಜಾರಿ, ಕೋಟ ಶ್ರೀನಿವಾಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸುತ್ತಲಿನ ಸ್ಪಚ್ಛತೆ ಹಾಗೂ ಪಾವಿತ್ರತೆಯನ್ನು ಕಾಪಾಡಿಕೊಳ್ಳುವುದು ಅತಿ ಅಗತ್ಯವಾಗಿದೆ. ಅದನ್ನು ಸಾಧ್ಯವಾಗಿಸಲು ಮೊದಲು ಮನವೊಲಿಕೆ, ಸಾಧ್ಯವಾಗದಿದ್ದರೆ ಹೋರಾಟದ ಹಾದಿಯನ್ನೇ ಹಿಡಿಯಬೇಕಾಗುತ್ತದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಕೊಲ್ಲೂರು ಕಾಶಿಹೊಳೆಯಲ್ಲಿ ಆರ್.ಎಸ್. ವೆಂಚರ್ ಹಾಗೂ ಮೂಕಾಂಬಿಕಾ ಡೆವಲಪರ್ಸ್ ಜಂಟಿಯಾಗಿ ನಿರ್ಮಿಸಿದ ದೇವಿ ಮೂಕಾಂಬಿ ಸರ್ವಿಸ್ ಅಪಾರ್ಟ್ಮೆಂಟ್ ಹಾಗೂ ರಾಜ್ಯದ ಮೊದಲ ಬಯೋ ಡೈಜಿಸ್ಟ್ ಎಸ್ಟಿಪಿ ಉದ್ಘಾಟಿಸಿ ಮಾತನಾಡಿ ಸ್ವಚ್ಛತೆಯ ಬಗ್ಗೆ ನಾವು ಮಾತನಾಡುತ್ತಿರುವಾಗಲೇ ಬಯೋ ಡೈಜಿಸ್ಟರ್ ಸೆಫ್ಟಿಕ್ ಟ್ಯಾಂಕ್ ಉಪಯೋಗಿಸಿ ನೈರ್ಮಲ್ಯತೆಗೆ ಒಂದು ಮಾದರಿ ಸಿದ್ಧಪಡಿಸಿಕೊಟ್ಟಿದೆ. ಇದರ ಬಳಕೆ ಎಲ್ಲೆಡೆಯೂ ಆದರೆ ನೈರ್ಮಲ್ಯ ತಾನಾಗಿಯೇ ಬರಲಿದೆ ಎಂದರು. ಬೈಂದೂರು ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದಂತಿದೆ. ಇಕೋ ಟೂರಿಸಂ, ಟೆಂಪಲ್ ಟೂರಿಸಂ ಅಭಿವೃದ್ಧಿಗೆ ಸರಕಾರ, ಜನಪ್ರತಿನಿಧಿಗಳೊಂದಿಗೆ ಜನರೂ ಕೂಡ ಮನಸ್ಸು ಮಾಡಬೇಕಿದೆ. ಮನಸ್ಥಿತಿ ಬದಲಾಗದ ಅಭಿವೃದ್ಧಿ ಸಾಧ್ಯವಿಲ್ಲ. ಸಮೃದ್ದ ಬೈಂದೂರಿನ ಕನಸನ್ನು ಸಾಕಾರಗೊಳಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆ ಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ G H ರಾಷ್ಟ ಮಟ್ಟದಲ್ಲಿ category wise(ವರ್ಗವಾರು )2126 ನೇ ರ್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಕನಸಿನ ಯೋಜನೆಯಾದ ಸಮೃದ್ಧ ಬೈಂದೂರಿನ ಭಾಗವಾದ ಕ್ಲೀನ್ ಕಿನಾರದ ಮೂರನೇ ವಾರ ಕಿರಿಮಂಜೇಶ್ವರದ ಗಂಗೆಬೈಲು ಸಮುದ್ರ ತೀರ ಸ್ವಚ್ಛತೆಯಲ್ಲಿ ಪಾಲ್ಗೊಂಡರು. ಈ ವೇಳೆ ಕೇಸರಿ ದಳದ ಕಾರ್ಯಕರ್ತರು, ಸ್ಥಳೀಯರ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು. ಕಳೆದರಡು ವಾರ ಬೈಂದೂರು ಸೋಮೇಶ್ವರ ಹಾಗೂ ಉಪ್ಪುಂದ ಮಡಿಕಲ್ ಬೀಚ್ ಸ್ವಚ್ಛತಾ ಕಾರ್ಯ ಜರುಗಿತ್ತು.
