ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ. ಕುಟುಂಬದವರೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಸಮೀಪ ತಾಂತ್ರಿಕ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಲಾಯಿತು. ನಂತರ ಅವರು ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿರುವ ಬಸ್ಸೊಂದು ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.ಕೂಡಲೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡದೋಣಿ ಮೀನುಗಾರರು ಒಟ್ಟಾಗಿ ಬುಲ್ ಟ್ರಾಲ್ ಮೀನುಗಾರಿಕೆ ಮಾಡುತ್ತಿರುವ ಬೋಟುಗಳನ್ನು ತಡೆದು ನಿಲ್ಲಿಸಿ ಅವೈಜ್ಞಾನಿಕವಾಗಿ ಮೀನುಗಾರಿಕೆ ನಡೆಸುತ್ತಿರುವ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿದೆ. ಬೈಂದೂರು ವಲಯ ನಾಡದೋಣಿ ಮತ್ತು ಗಂಗೊಳ್ಳಿ ನಾಡದೋಣಿ ಮೀನುಗಾರರು ಒಂದುಗೂಡು ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟುಗಳನ್ನು ತಡೆದಿದ್ದಾರೆ. ಟ್ರಾಲ್ ಬೋಟಿಂಗ್ನಲ್ಲಿ ಸುಮಾರು 45 ಪೊಸಿಷನ್ 29 ಲಾಂಗ್ನಲ್ಲಿ ಬುಲ್ಟ್ರೋಲ್ ಮಾಡುತ್ತಿದ್ದು ಕಂಡುಬಂದಿದೆ. ನಾಡದೋಣಿಯುವರು ಇದನ್ನು ಪ್ರತಿಭಟಿಸಿದ್ದಾರೆ. ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ. ಬುಲ್ಟ್ರಾಲ್ ಲೈಟ್ ಫಿಶಿಂಗ್ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ. ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮಂಗಳೂರಿನಿಂದ ಕಾರವಾರದ ತನಕ ನಾಡ ದೋಣಿ ಮೀನುಗಾರರು ಸಭೆ ನಡೆಸಿ ಬುಲ್ಟ್ರೋಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಈಗಾಗಲೇ ನಾಡದೋಣಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಎಚ್.ಐ.ವಿ.ಏಡ್ಸ್ ಅರಿವು ಆಂದೋಲನ ಕಾರ್ಯಕ್ರಮದ ಕುರಿತು ಯಕ್ಷಗಾನ ಪ್ರದರ್ಶನ ನಡೆಯಿತು. ಉತ್ತರ ಕನ್ನಡ ಸಿದ್ದಾಪುರದ ಯಕ್ಷಗಾನ ತಂಡದವರಯ ಯಕ್ಷಗಾನ ಪ್ರದರ್ಶನದ ಮೂಲಕ ಏಡ್ಸ್ ಕುರಿತಾಗಿ ಜಾಗ್ರತಿ ಸಂದೇಶವನ್ನು ಸಾರಿದರು. ಕಾರ್ಯಕ್ರಮದಲ್ಲಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ-ಯಡ್ತಾಡಿ ಆಶ್ರಯದಲ್ಲಿ ಅಕ್ಟೋಬರ್ 9 ರಿಂದ 12ರ ತನಕ ನಡೆಯುವ ಹದಿಮೂರನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ ನಮ್ಮೂರ ದಸರಾ-2024(ಭಾವ ಭಕ್ತಿಯ ಸಂಗಮ)” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವೇದಮೂರ್ತಿ ಶ್ರೀ ರಾಜೇಶ್ ಐತಾಳ್ ಅವರು ಅನಾವರಣಗೊಳಿಸಿದರು. ನಂತರ ಮಾತನಾಡಿ, ಯುವಕ ಮಂಡಲಗಳು ಸಾಮಾಜಿಕ ಜವಬ್ದಾರಿಯೊಂದಿಗೆ ಸಮಾಜದಲ್ಲಿ ತನ್ನನ್ನು ತೊಡಗಿಸಿಕೊಂಡಾಗ ಸ್ಥಾಪನೆ ಉದ್ದೇಶಗಳು ಸಾಕಾರಗೊಳ್ಳುತ್ತದೆ. ಧಾರ್ಮಿಕ ಚಿಂತನೆಗಳೊಂದಿಗೆ ಯುವಕರು ಒಂದುಗೂಡಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗಳ ಅನಾವರಣ ಸಾಧ್ಯ ಎಂದರು. ಈ ಸಂದರ್ಭದಲ್ಲಿ ಯುವಕ ಮಂಡಲದ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಾದ, ಕೆ.ಶ್ರೀನಿತಾ ಎಸ್ ಕಾಮತ್, ಶ್ರೇಯಾ ಶೆಟ್ಟಿ, ದಿವ್ಯಶ್ರೀ, ಅಮೂಲ್ಯ, ವನಿ̧ಷಾ ಸಂಜನಾ, ಕುನಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪ.ಜಾ ಮತ್ತು ಪ,ಪಂ. ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿ ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಜಲಚರಗಳ ಅಸ್ತಿತ್ವಕ್ಕೆ ತೊಂದರೆಯಾಗುತ್ತಿದೆ. ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಡಲ ತೀರ ಸ್ವಚ್ಛತಾ ದಿನವನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತರಾಷ್ಟ್ರೀಯ ಕಡಲ ತೀರ ಸ್ವಚ್ಚತಾ ದಿನದ ಅಂಗವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ನಡೆದ ಕಡಲ ತೀರ ಸ್ವಚ್ಚತಾ ದಿನ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಸಾರ್ವಜನಿಕರು ಅನುಪಯುಕ್ತ ಪ್ಲಾಸ್ಟಿಕ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೀದಿ ಬದಿ ಎಸೆಯುವುದರಿಂದ ಪರಿಸರ ಮಾಲಿನ್ಯ ಆಗುವುದಲ್ಲದೇ, ಅವುಗಳು ಸಮುದ್ರ ತಲುಪಿ ಜಲಚರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದಂತೆ 2 ವಾರಗಳ ಕಾಲ ಸ್ವಚ್ಚತಾ ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೊಲೀಸರ ಹೆಸರಿನಲ್ಲಿ ಮಹಿಳೆಗೆ ಕರೆ ಮಾಡಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದೆ. ಕುಂದಾಪುರದ ಹಂಗಳೂರಿನ ಭವಿಷ್ಯ ಎ. (30) ವಂಚನೆಗೆ ಒಳಗಾದವರು. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯು ಫೆಡೆಕ್ಸ್ ನಿಂದ ಮಾತನಾಡುತ್ತಿರುವುದಾಗಿ ತಿಳಿಸಿ ಭವಿಷ್ಯ ಅವರ ಆಧಾರ್ ನಂಬರ್ನಿಂದ ಮುಂಬಯಿಯಿಂದ ಇರಾನ್ಗೆ ಒಂದು ಪಾರ್ಸೆಲ್ ಹೋಗುತ್ತಿದ್ದು, ಅದರಲ್ಲಿ ಕಾನೂನುಬದ್ಧವಲ್ಲದ ವಸ್ತುಗಳು ಇರುವುದರಿಂದ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದ. ಸೈಬರ್ ಕ್ರೈಂಗೆ ದೂರು ನೀಡುವಂತೆ ತಿಳಿಸಿ ಮುಂಬಯಿ ಕ್ರೈಂ ಬ್ರ್ಯಾಂಚ್ಗೆ ಕರೆ ಸಂಪರ್ಕಗೊಳಿಸುವುದಾಗಿ ಹೇಳಿ, ಮಹಿಳೆಯೊಂದಿಗೆ ಮಾತನಾಡಿದ್ದಾನೆ. ಭವಿಷ್ಯ ಅವರ ಆಧಾರ್ ಕಾರ್ಡ್ ಇತ್ಯಾದಿ ವಿವರಗಳನ್ನು ಕಳುಹಿಸುವಂತೆ ತಿಳಿಸಿ, ಆಧಾರ್ ನಂಬರ್ನಿಂದ 25 ಬ್ಯಾಂಕ್ ಆಕೌಂಟ್ ಇದ್ದು, ನಿಮ್ಮ ಖಾತೆಯಿಂದ ಮನಿ ಲ್ಯಾಂಡರಿಂಗ್ ಆಗುತ್ತಿರುವುದಾಗಿ ಹೇಳಿದ್ದಾರೆ. ಆ ಅಕೌಂಟ್ನಿಂದ ಇನ್ಸ್ಟಂಟ್ ಲೋನ್ ಮಾಡಿದರೆ ಮೋಸಗಾರರನ್ನು ಪತ್ತೆ ಮಾಡಬಹುದು ಎಂದು ಯಾಮಾರಿಸಿ 8,78,760 ರೂ. ಲೋನ್ ಮಾಡಿಸಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣ ಉಪಯೋಗಿಸಿಕೊಂಡು ಭವಿಷ್ಯ ಅವರ ಬ್ಯಾಂಕ್ ಖಾತೆಯಲ್ಲಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬ್ರಹ್ಮಾವರದ ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಾನದ ಪ್ರೌಢ ಶಾಲಾ ಬಾಲಕಿಯರ ಕ್ರಿಕೆಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಪ್ರಣವಿ ದೇವೇಂದ್ರ ಖಾರ್ವಿ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಬಿಂದುಶ್ರೀ ಸುರೇಶ ಖಾರ್ವಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ ಹಾಗೂ ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಣವಿ ಬಿಂದುಶ್ರೀ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ನಕಲಿ ಆಭರಣ ತೊಡಿಸಿದ್ದ ಅರ್ಚಕನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ತಾಲೂಕಿನ ಸಾಲಕಣಿ ಗ್ರಾಮದ ಮೊರೆಗಾರದ ನರಸಿಂಹ ಭಟ್( 43) ಬಂಧಿತ ಆರೋಪಿ. ದೇವಳದ ಆಡಳಿತ ಮಂಡಳಿ ಹಾಗೂ ಭಕ್ತರು ಜೊತೆಗೂಡಿ ಸೇವಾ ರೂಪದಲ್ಲಿ 21 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಸಮರ್ಪಿಸಿದ್ದು, ಮತ್ತು ಈ ಆಭರಣಗಳಿಂದ ನಿತ್ಯವೂ ದೇವರ ಅಲಂಕಾರ ನಡೆಸುತ್ತಾ ಬಂದಿದ್ದಾರೆ. ದೇವಳದಲ್ಲಿ ನವರಾತ್ರಿ ಉತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದು, ಈ ಸಲುವಾಗಿ ಸೆಪ್ಟೆಂಬರ್ 21ರಂದು ಶುಚಿಗೊಳಿಸುವುದಕ್ಕಾಗಿ ದೇವರ ಆಭರಣಗಳನ್ನು ಅರ್ಚಕರಿಂದ ಪಡೆಯಲಾಯಿತು. ಈ ಸಂದರ್ಭ ಆಭರಣಗಳನ್ನು ಪರೀಕ್ಷಿಸಿದಾಗ ನಕಲಿ ಚಿನ್ನಾಭರಣ ಎಂಬುದಾಗಿ ಬೆಳಕಿಗೆ ಬಂದಿದೆ. ವಿಚಾರಣೆ ನಡೆಸಿದಾಗ ಆಭರಣಗಳನ್ನು ತಾನು ತೆಗೆದಿರುವುದಾಗಿ ಅರ್ಚಕರು ಒಪ್ಪಿಕೊಂಡಿದ್ದಾರೆ. ಆಡಳಿತ ಮಂಡಳಿ ಮತ್ತು ಭಕ್ತರಿಗೆ ಸಂಶಯ ಬಾರದೆಂಬ ಉದ್ದೇಶದಿಂದ ನಕಲಿ ಚಿನ್ನಾಭರಣಗಳನ್ನು ದೇವರ ಮೂರ್ತಿಯ ಮೇಲೆ ಅಲಂಕರಿಸಿದ್ದಾನೆ. ಬಳಿಕ ಕದ್ದ ಆಭರಣಗಳನ್ನು ಸ್ವಂಯ ಉಪಯೋಗಕ್ಕಾಗಿ ವಿವಿಧ ಬ್ಯಾಂಕುಗಳಲ್ಲಿ ಅಡವು…
