Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬುಡಕಟ್ಟು ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿ ಸುಧಾರಿಸಲು ಅವರುಗಳ ಕಲ್ಯಾಣಕ್ಕೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸರಕಾರ ಜಾರಿಗೆ ತಂದಿದೆ. ಇವುಗಳ ಸಮರ್ಪಕ ಅನುಷ್ಠಾನ ಮಾಡುವುದರೊಂದಿಗೆ ಅವರುಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯ ಕಾರ್ಯಕ್ರಮ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದುರ್ಬಲ ಬುಡಕಟ್ಟು ಜನರಿಗೆ ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ, ಶಿಕ್ಷಣ, ಆರೋಗ್ಯ, ರಸ್ತೆ, ಟೆಲಿಕಾಂ ಸಂಪರ್ಕ ಸೇರಿದಂತೆ ಮತ್ತಿತರ ಸುಸ್ಥಿರ ಜೀವನೋಪಾಯದ ಅವಕಾಶ ದಂತಹ ಮೂಲಭೂತ ಸೌಲಭ್ಯಗಳನ್ನು ಅವರುಗಳಿಗೆ ಕಲ್ಪಿಸಲು ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಸಮರ್ಪಕ ಅನುಷ್ಠಾನಗೊಳಿಸಬೇಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ ಹಾಗೂ ಸಿಖ್ಖ್ಲಿಗಾರ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಆಝಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574990 ಅಥವಾ ಸಹಾಯವಾಣಿ ಸಂಖ್ಯೆ : 8277799990 ಮತ್ತು ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ ಅವರ ನಿರ್ದೇಶನದಂತೆ ಒಂದು ದಿನದ ಪ್ರಥಮ ಭಾಷಾ ಶಿಕ್ಷಕರ ಕಾರ್ಯಗಾರವು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ರಿ. ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಿಕ್ಷಕರು ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಂಡು ವಿದ್ಯಾರ್ಥಿಗಳ ಫಲಿತಾಂಶವನ್ನು ಉನ್ನತೀಕರಿಸಬೇಕು ಎಂದು ಹೇಳಿದರು ಹಾಗೂ ಉಡುಪಿ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಫಲಿತಾಂಶಕ್ಕಾಗಿ ಶಿಕ್ಷಕರನ್ನು ಅಭಿನಂದಿಸಿದರು. ಕುಂದಾಪುರ ವಲಯದ ಇ. ಸಿ. ಓ ಆಗಿರುವ ಶೇಖರ್ ಅವರು ಕಾರ್ಯಗಾರದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭಾಷಾ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾದ ಜಯಶೀಲ ಶೆಟ್ಟಿ, ಸಹಶಿಕ್ಷಕರು, ಸರಕಾರಿ ಪ್ರೌಢ ಶಾಲೆ ಅಲ್ಬಾಡಿ ಆರ್ಡಿ, ಹರಿಶ್ಚಂದ್ರ ಸಹಶಿಕ್ಷಕರು, ಸರಕಾರಿ ಪ್ರೌಢ ಶಾಲೆ ಹಾಲಾಡಿ ಹಾಗೂ ರಮೇಶ್ ಕುಲಾಲ್, ಸಹಶಿಕ್ಷಕರು, ಸರಕಾರಿ ಪ್ರೌಢ ಶಾಲೆ ಕೆದೂರು ಇವರುಗಳು ಕಲಿಕೆಯಲ್ಲಿ ಹಿಂದುಳಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಡಾ. ಬಿ. ಆರ್. ಅಂಬೇಡ್ಕರ್ ಯುವಕ ಮಂಡಲ, ಅಮೃತಾ ಯುವತಿ ಮಂಡಲ, ಅರ್ಚನಾ ಮಹಿಳಾ ಮಂಡಲ ಮೇಲ್‌ ಗಂಗೊಳ್ಳಿ ಮತ್ತು ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 12ನೇ ವರ್ಷದ ಮುದ್ದು ಕೃಷ್ಣ ವೇಷ ಸ್ಪರ್ಧೆ ಮೇಲ್‌ ಗಂಗೊಳ್ಳಿಯ ಡಾ.ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ನಿರ್ದೇಶಕಿ ಯಾಮಿನಿ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಮಾಜಿ ಅಧ್ಯಕ್ಷೆ ಸವಿತಾ ಯು. ದೇವಾಡಿಗ ಶುಭಾಶಂಸನೆಗೈದರು. ನಿವೃತ್ತ ಶಿಕ್ಷಕ ಪ್ರೇಮಾನಂದ ಕೆ. ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ಆಶಾ ಮತ್ತು ಜ್ಯೋತಿ ಹಾಗೂ ಸವಿತಾ ಉಮಾನಾಥ ದೇವಾಡಿಗ ತೀರ್ಪುಗಾರರಾಗಿ ಸಹಕರಿಸಿದರು. ಯುವಕ ಮಂಡಲದ ಅಧ್ಯಕ್ಷ ನಾಗೇಶ ಸ್ವಾಗತಿಸಿದರು. ಯುವತಿ ಮಂಡಲದ ಕಾರ್ಯದರ್ಶಿ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ಭಾಸ್ಕರ ಎಚ್.ಜಿ. ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಕೊಡಪಾಡಿಯ ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತ್ರಾಸಿಯ ಅಂಬೇಡ್ಕರ್ ಭವನದಲ್ಲಿ ಇತ್ತೀಚಿಗೆ ಜರಗಿತು. ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ಸಾಲಿನ ಲಾಭಾಂಶದಲ್ಲಿ ಸದಸ್ಯರಿಗೆ ಶೇ.5 ಡಿವಿಡೆಂಡ್ ನೀಡಲು ನಿರ್ಧರಿಸಲಾಯಿತು. ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೀಪಾ ಅವರು ಸರಕಾರದಿಂದ ಮಹಿಳಾ ಸದಸ್ಯರಿಗೆ ಸಿಗುವ ಹೊಸ ಯೋಜನೆಗಳ ಮಾಹಿತಿ ನೀಡಿದರು. ಸಂಘದ ನಿರ್ದೇಶಕರಾದ ವಿಜಯಾ ಬಿ., ಸುರೇಖಾ ಕಾನೋಜಿ, ಮಹಾಲಕ್ಷ್ಮೀ, ರೇಖಾ ಖಾರ್ವಿ, ಶಾಂತ, ಶಾಂತಿ ಖಾರ್ವಿ, ಸುನೀತಾ ಪೂಜಾರಿ, ರೇಣುಕಾ, ಶ್ಯಾಮಲಾದೇವಿ, ಲಲಿತಾ ಖಾರ್ವಿ, ಶಾಂತಾ ಮರಾಠಿ ನಾಯ್ಕ್ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಶ್ರೀಲವಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿಲಿಂಗೇಶ್ವರ್ ಅವರು 2023-24ನೇ ಸಾಲಿನ ಲೆಕ್ಕಪರಿಶೋಧನಾ ವರದಿ ಮಂಡಿಸಿದರು. ಭಾಸ್ಕರ ಗಾಣಿಗ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷೆ ರತ್ನ ಟಿ. ದೇವಾಡಿಗ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಂಡ್ಸೆ ಬಳಿಯ ಕೆಂಚನೂರಿನಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ಬಿದ್ದು ಮಹಿಳೆ ಮತ್ತು ಎರಡು ದನ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಕೆಂಚನೂರು ಗ್ರಾಮದ ಮಲ್ಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರ್ಯ ಅವರ ಪತ್ನಿ ಸುಜಾತಾ ಆಚಾರ್ಯ(44) ಮೃತಪಟ್ಟವರು. ಮನೆಯ ಸಮೀಪ ಮೇಯಲು ಕಟ್ಟಿರುವ ದನವನ್ನು ತರಲು ಬಂದಿದ್ದಾಗ ಗಾಳಿ ಮಳೆಯಿಂದಾಗಿ ಮರ ಬುಡಸಹಿತ ಆಕೆಯ ಮೇಲೆ ಮತ್ತು ಎರಡು ದಿನಗಳ ಮೇಲೆ ಬಿದ್ದಿದೆ. ಸುಜಾತಾ ಅವರು ಪತ್ನಿ ಅಣ್ಣಪ್ಪಯ್ಯ ಆಚಾರ್ಯ ಅಂಗಡಿ ಮಾಡಿಕೊಂಡಿದ್ದು, ನಷ್ಟ ಅನುಭವಿಸಿದ ಕಾರಣ ನಿತ್ಯ ಜೀವನಕ್ಕೆ ದಿನಕೂಲಿ ಕೆಲಸವನ್ನು ಮಾಡುತ್ತಿದ್ದರು.ಅವರಿಗೆ ಓರ್ವ ಪುತ್ರ ಮನೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಖಾಸಗಿ ಶಾಲೆ ಶಿಕ್ಷಕಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಸುಗಳ ಹಾಲನ್ನು ಮಾರಿ ಹಣ ಸಂಪಾದಿಸುತ್ತಿದ್ದರು. ಕಷ್ಟಪಟ್ಟು ದುಡಿದ ಹಣವನ್ನು ಮನೆ ಕಟ್ಟಲು ಬಳಸುತ್ತಿದ್ದರು. ಈ ದುರ್ಘ‌ಟನೆಯಿಂದಾಗಿ ಇಡೀ ಕುಟುಂಬ ಕಂಗಾಲಾಗಿದೆ. ಘಟನಾ ಸ್ಥಳಕ್ಕೆ ಗ್ರಾ.ಪಂ. ಸದಸ್ಯರಾದ ರಾಜೀವ ಶೆಟ್ಟಿ…

Read More

ಕುಂದಾಪ್ರ‌ ಡಾಟ್ ಕಾಂ ಸುದ್ದಿ.ಕುಂದಾಪುರ: ಚೆನ್ನೈನಲ್ಲಿ ನಡೆದ ದಕ್ಷಿಣ ವಲಯ ಕರಾಟೆ ಚಾಂಪಿಯನ್‌ಶಿಪ್‌ -2024ರಲ್ಲಿ ಶಿಖಾ 3 ಸುತ್ತಿನ ಗೆಲುವಿನೊಂದಿಗೆ ಚಿನ್ನದ ಪದಕವನ್ನು ಗಳಿಸಿದ್ದಾಳೆ. ಕರಾಟೆ ಚಾಂಪಿಯನ್‌ಶಿಪ್‌ -2024ರ ಅಂತಿಮ ಪಂದ್ಯದಲ್ಲಿ 7-0 ಪಾಂಯಿಟ್‌ನೊಂದಿಗೆ ಗೆಲುವು ಸಾಧಿಸಿದ್ದಾರೆ. ಶಿಖಾ ಕರಾಟೆ ತರಬೇತಿಯನ್ನು ಕುಂದಾಪುರದ ಇವೊಲ್ಯೂಷನ್ ಅಕಾಡೆಮಿ ಆಫ್ ಮೆಟೀರಿಯಲ್ ಆರ್ಟ್ಸ್ & ಫಿಟ್‌ನೆಸ್ ಸಂಸ್ಥೆಯಲ್ಲಿ ಗುರು ಗ್ರಷಮೇಶ್ ಕುಂದರ್ ಅವರಿಂದ ತರಬೇತಿ ಪಡೆದಿದ್ದಾಳೆ. ಬ್ರಹ್ಮಾವರ ಲಿಟಲ್‌ರಾಕ್ ಇಂಡಿಯನ್ ಸ್ಕೂಲ್‌ನ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ ಶಿಖಾ, ಕುಂದಾಪುರದ ಶ್ರೀದರ್‌ ಬಿಜೂರು ಹಾಗೂ ದೀಪಿಕಾ ಅವರ ದಂಪತಿಯ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023ನೇ ಸಾಲಿನ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಾಗಿ ಸಾಧನೆ ಮಾಡಿರುವ ರಾಜ್ಯದ ಹಿರಿಯ ಕ್ರೀಡಾಪಟುಗಳು ಹಾಗೂ ತರಬೇತುದಾರರಿಂದ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಮೊ. ನಂ: 0820-2521324, 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುರುಕುಲ ಸಂಸ್ಥೆಯಲ್ಲಿ  ಗೋಕುಲಾಷ್ಟಮಿಯನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಸ್ವಪ್ನ ಆಪ್ತ ಸಮಾಲೋಚಕರು ಅವರು ಭಗವದ್ಗೀತೆಯ ವಿವಿಧ ಸಂದೇಶಗಳನ್ನು ಅರ್ಥಪೂರ್ಣವಾಗಿ ತಿಳಿಸುವುದರ ಜೊತೆಗೆ ಪೋಷಕರು ತಮ್ಮ ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯಬೇಕು, ಅದರಲ್ಲೂ ಸಣ್ಣ ವಯಸ್ಸಿನಲ್ಲೇ ಹೆಚ್ಚಿನ ಕಥೆಗಳನ್ನು ಹೇಳಿ ಅವರನ್ನು ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಮಾಡಿದಾಗ ಮುಂದೆ ಎಂದು ಅವರು ತಮ್ಮ ಬದುಕಿನಲ್ಲಿ ಎಡುವುದಿಲ್ಲ ಎಂದರು. ಮಕ್ಕಳನ್ನು ಬೆಳೆಸುವಲ್ಲಿ ಶಾಲೆಯ ಶಿಕ್ಷಕರ ಪಾತ್ರಕ್ಕಿಂತಲೂ ಪೋಷಕರ ಪಾತ್ರ ಹಿರಿದಾದ್ದದ್ದು ಅದನ್ನು ಅರಿತು ಮಕ್ಕಳನ್ನು ಬೆಳೆಸಿದ್ದಾದರೆ ಒಂದು ಉತ್ತಮ ಸಮಾಜ ನಿರ್ಮಾಣಕ್ಕೆ ಬೇರೆ ಏನು ಬೇಕಿಲ್ಲ ಎಂಬುದನ್ನು ಅರ್ಥಪೂರ್ಣವಾಗಿ ತಮ್ಮ ಅತಿಥಿ ಭಾಷಣದಲ್ಲಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಾಂಡ್ಯ ಎಜುಕೇಶನಲ್ ಟ್ರಸ್ಟನ್‍ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ನಮ್ಮ ಸನಾತನ ಧರ್ಮದ ಉಳಿವಿಗಾಗಿ ಇಂತಹ ಆಚರಣೆಗಳು ತುಂಬಾ ಮುಖ್ಯ,ಅದರ ಮಹತ್ವವನ್ನು ಈ ಹಂತದಲ್ಲಿ ಮಕ್ಕಳಿಗೆ ತಿಳಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಥಬೀದಿ ಗಂಗೊಳ್ಳಿ ಇವರ ಆಶ್ರಯದಲ್ಲಿ ಪಿಎಂ ಪೋಷಣ್ ಅಭಿಯಾನ್ ಕಾರ್ಯಕ್ರಮದಡಿಯಲ್ಲಿ ತಾಯಂದಿರ ಕೈತುತ್ತು ಕಾರ್ಯಕ್ರಮವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಎಸ್‌ಡಿಎಂಸಿ ಅಧ್ಯಕ್ಷೆ ಶೋಭಾ ಖಾರ್ವಿ, ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ದಾಕುಹಿತ್ಲು ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಎಸ್‌ಡಿಎಂಸಿ ಸದಸ್ಯರು, ರೋಟರಿ ಸದಸ್ಯರು, ಪೋಷಕರು ಮೊದಲಾದವರು ಉಪಸ್ಥಿತರಿದ್ದರು. ರೋಟರಿ ಕ್ಲಬ್ ವತಿಯಿಂದ ಲಕ್ಕಿ ಮದರ್ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ 45 ತಾಯಂದಿರು ತಮ್ಮ ಮಕ್ಕಳಿಗೆ ಇಷ್ಟವಾದ ವಿಶಿಷ್ಟ ತಿನಿಸುಗಳನ್ನು ತಯಾರಿಸಿ ತಂದು ತಮ್ಮ ಮಕ್ಕಳಿಗೆ ಕೈಯರೆ ಉಣಬಡಿಸಿದರು.

Read More