ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ವತಿಯಿಂದ ರೆಸ್ಟ್ ಕೊಡರ್ ಅಕಾಡೆಮಿಯ ಸಹಯೋಗದಲ್ಲಿ “ಎಂ.ಇ.ಆರ್.ಎನ್. ಸ್ಟಾಕ್ ” ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ರೆಸ್ಟ್ ಕೊಡರ್ ಅಕಾಡೆಮಿ, ಸೀನಿಯರ್ ಸಾಫ್ಟ್ ವೇರ್ ಡೆವೆಲಪರ್ ಸಯ್ಯದ್ ಇಮ್ರಾನ್ ಆಗಮಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಸಿದ್ದಾರ್ಥ ಜೆ. ಶೆಟ್ಟಿ , ಪ್ರಾಚಾರ್ಯರಾದ ಡಾ. ರಾಮಕೃಷ್ಣ ಹೆಗಡೆ, ವಿಭಾಗದ ಮುಖ್ಯಸ್ಥರಾದ ಮುರಳೀಧರ ಬಿ.ಕೆ., ಕಾರ್ಯಕ್ರಮದ ಸಂಚಾಲಕರಾದ ಡಾ. ಮಂಜುನಾಥ ಲಮಾಣಿ, ಪ್ಲೇಸ್ಮೆಂಟ್ ಡೀನ್ ಡಾ. ಅಣ್ಣಾಮಲೈ ಹಾಗು ಪ್ಲೇಸ್ಮೆಂಟ್ ಆಫೀಸರ್ ಪ್ರಸಾದ್ ಸಮ್ಮುಖದಲ್ಲಿ ಎಂಐಟಿಕೆ ರೆಸ್ಟ್ ಕೊಡರ್ ಅಕಾಡೆಮಿಯ ಜೊತೆಗೆ ಒಡಂಬಡಿಕೆ ಮಾಡಿಕೊಂಡಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸನಾತನ ಧರ್ಮವನ್ನು ಹೊಂದಿದ ಭಾರತೀಯರಿಗೆ ಸಂಸ್ಕೃತಿಯ ಬೇರು ಗಟ್ಟಿಯಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು, ಮಾನವ ಧರ್ಮವನ್ನು ಅರ್ಥೈಸಿಕೊಳ್ಳುವ ಮೂಲಕ ಜೀವನದ ಅರ್ಥವನ್ನು ತಿಳಿಯಬಹುದು ಎಂದು ಉಡುಪಿಯ ಉಜ್ವಲ್ ಗ್ರೂಪ್ಸ್ ನ ಆಡಳಿತ ನಿರ್ದೇಶಕರಾದ ಅಜಯ್ ಪಿ. ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ಶಯನ ಅತಿಥಿಗಳನ್ನು ಪರಿಚಯಿಸಿದರು. ಅಭಿಷೇಕ್ ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಮಿಥಿಲೇಶ್ ನಿರೂಪಿಸಿ, ರೇಷ್ಮಾ ಸ್ವಾಗತಿಸಿ, ಮೇಘನಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಹೆಸರಾಂತ ಮೊಬೈಲ್ ಮಾರಾಟ ಮಳಿಗೆ ‘ಪ್ರೀತಿ ಮೊಬೈಲ್ಸ್’ನಲ್ಲಿ ‘ದೀಪಾವಳಿ’ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ. ಪ್ರತಿ ಸ್ಮಾರ್ಟ್ ಪೋನ್ ಖರೀದಿಯ ಮೇಲೆಯೂ ಖಚಿತ ಕೊಡುಗೆಗಳು, ಇಎಂಐ ಸೌಲಭ್ಯ, ಜೊತೆಗೆ ಲಕ್ಕಿ ಕೂಪನ್, ಮೆಗಾ ಎಕ್ಸ್’ಚೆಂಚ್ ಆಫರ್, ಉಚಿತ ಸ್ಕ್ರೀನ್ ಬದಲಾವಣೆ ಸೇರಿದಂತೆ ಹಲವು ಕೊಡುಗೆಗಳನ್ನು ಒಳಗೊಂಡಿದೆ. ಲಕ್ಕಿ ಕೂಪನ್ನಲ್ಲಿ ಕಾರು, ಬೈಕ್, ಸ್ಮಾರ್ಟ್ ಟಿವಿ ಸಹಿತ ಹಲವು ಕೊಡುಗೆಗಳನ್ನು ಗೆಲ್ಲುವ ಅವಕಾಶವಿದೆ. ಐಫೋನ್, ಮೋಟೋರೊಲ, ವಿವೋ, ರೆಡ್ಮಿ, ಒಪ್ಪೋ, ರೀಯಲ ಮೀ, ಸಾಮಸಾಂಗ್, ಐಟೇಲ್, ಲಾವಾ, ಗೂಗಲ್ ಪಿಕ್ಸೆಲ್, ನಥಿಂಗ್ ನೋಕಿಯಾ, ಸೇರಿದಂತೆ ಎಲ್ಲಾ ಸ್ಮಾರ್ಟ್ ಮತ್ತು ನಾರ್ಮಲ್ ಮೊಬೈಲ್ ಸಹಿತ ಎಸ್ಸರೀಸ್ ಐಟಂಗಳೂ,ಬಜಾಜ್,ಎಚ್ ಡಿ ಬಿ,ಐಡಿಎಫ್ಸಿ,ಹೋಮ್ ಕ್ರೆಡಿಟ್, ಸಾಮಸಾಂಗ್ ಫೈನಾನ್ಸ್, ವಹನರೆಡ್ಮಿ ಫೈನಾನ್ಸ್ ಟಿವಿಎಸ್ ಫೈನಾನ್ಸ್ ಸೇರಿದಂತೆ ಎಲ್ಲಾ ಕಂಪನಿಗಳಿಂದ ಇಐಎಂಐ ಸೌಲಭ್ಯ ಕೂಡ ಇದೆ. ವಿಶೇಷವಾಗಿ ಎಲ್ಲಾ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ನ ಮೇಲೇ 10% ಡಿಸ್ಕೌಂಟ್ ಆಫರ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಅಬಕಾರಿ ಸೇವಾ ಇಲಾಖೆಯ ವತಿಯಿಂದ ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಕ್ರಮವು ಶುಕ್ರವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕುಂದಾಪುರ ಅಬಕಾರಿ ಉಪ ಅಧೀಕ್ಷಕರಾಗಿದ್ದ ಪ್ರಭುಗೌಡ ಪಾಟೀಲ್ ಅವರು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ತಿಳಿಸಿ ಅದರಿಂದ ದೂರ ಇರಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕರಾದ ರವಿ ನಾರಾಯಣ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಎನ್ಎಸ್ಎಸ್ ನ ಸಂಯೋಜನಾಧಿಕಾರಿ ಅರುಣ್ ಎ.ಎಸ್. ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಪುಷ್ಪಲತಾ ಸ್ವಾಗತಿಸಿ, ರಾಜ್ಯಶಾಸ್ತ್ರ ವಿಭಾಗದಉಪನ್ಯಾಸಕಿ ಅಕ್ಷತಾ ನಿರೂಪಿಸಿ, ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಮಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಂದಿನ ಕಲುಷಿತ ವಾತಾವರಣದಲ್ಲಿ ಜೀವನವನ್ನು ಸುಂದರವಾಗಿಸಬಲ್ಲ. ಪ್ರೀತಿಗೆ, ಬದಲಾಗಿ ಮನುಷ್ಯ-ಮನುಷ್ಯರ ನಡುವೆ ದ್ವೇಷದ ಬೆಂಕಿ ಹಬ್ಬುತ್ತಿದೆ. ಜಾತಿ-ಧರ್ಮಗಳ ಹೆಸರಿನಲ್ಲಿ ಕಲಹಗಳು ಮತ್ತು ಹಿಂಸೆ-ರಕ್ತಪಾತಗಳು ಹೆಚ್ಚುತ್ತಿವೆ. ಈ ಸಮಸ್ಯೆಗೆ ಪರಿಹಾರ ನೀಡಲು ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಕೋಟ-ಪಡುಕೆರೆಯ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ್ ಹೇಳಿದರು. ಅವರು ಕೋಟ-ಪಡುಕೆರೆಯ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕುಂದಾಪುರದ ಜೆಸ್ಸಿ ಎಲಿಜಬೆತ್ ಜೋಸೆಫ್ ಮಲೆಯಾಳದಿಂದ ಅನುವಾದಿಸಿದ ಹೆಂಡತಿ ಕಾದಂಬರಿಯ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಯುವಜನರು ಹೆಚ್ಚು ಹೆಚ್ಚು ಸಾಹಿತ್ಯ ಅಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಬಾವಿಯೊಳಗಿನ ಕಪ್ಪೆಗಳ ಹಾಗಿರದೆ ವಿಶಾಲವಾದ ಪ್ರಪಂಚದ ಬಗ್ಗೆ ತಿಳಿದುಕೊಳ್ಳಲು ಕನ್ನಡ ಸಾಹಿತ್ಯ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಅನುವಾದವಾದ ಸಾಹಿತ್ಯವನ್ನೂ ಓದಿಕೊಳ್ಳುವುದು ಹೆಚ್ಚು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅಲ್ಪಸಂಖ್ಯಾತ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ರೇಷ್ಮೆ ನೂಲು ಬಿಚ್ಚಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರ ಸಾಲ ಯೋಜನೆ ಹಾಗೂ ಸಾಂತ್ವನ ಯೋಜನೆಗಳಿಗೆ ಸಾಲ ಸಹಾಯಧನ ಸೌಲಭ್ಯ ಪಡೆಯಲು ವೆಬ್ಸೈಟ್ https://kmdconline.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯ ಹತ್ತಿರ, ಶಿವಳ್ಳಿ, ಮಣಿಪಾಲ ದೂ.ಸಂಖ್ಯೆ: 0820-2574990, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ತಾಲೂಕು ದೂ.ಸಂಖ್ಯೆ: 0820-2574596, ಕಾರ್ಕಳ ತಾಲೂಕು ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನ ಆಶ್ರಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಂಗಳೂರು ವಲಯ ವಾಲಿಬಾಲ್ ಟೂರ್ನಮೆಂಟ್ನ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ಸ್ ಆದರೆ, ಮಹಿಳೆಯರ ವಿಭಾಗದಲ್ಲಿ ಮಂಗಳೂರಿನ ಫಾದರ್ ಮುಲ್ರ್ಸ್ ನರ್ಸಿಂಗ್ ಕಾಲೇಜು ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷ ವಿಭಾಗ ವಿಜೇತರು:ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಮೂಡುಬಿದಿರೆರನ್ನರ್: ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ಮೂಡುಬಿದಿರೆಮೊದಲ ರನ್ನರ್-ಅಪ್: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು, ಮೂಡುಬಿದಿರೆಎರಡನೇ ರನ್ನರ್-ಅಪ್: ಕೆ.ವಿ.ಜಿ ಮೆಡಿಕಲ್ ಕಾಲೇಜು, ಸುಳ್ಯಮಹಿಳಾ ವಿಭಾಗ ವಿಜೇತರು:ಫಾದರ್ ಮುಲ್ರ್ಸ್ ನರ್ಸಿಂಗ್ ಕಾಲೇಜು, ಮಂಗಳೂರುರನ್ನರ್: ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು, ಮೂಡುಬಿದಿರೆಮೊದಲ ರನ್ನರ್-ಅಪ್: ಎಂ.ವಿ ಶೆಟ್ಟಿ ಫಿಸಿಯೋಥೆರಪಿ ಕಾಲೇಜು, ಮಂಗಳೂರುಎರಡನೇ ರನ್ನರ್-ಅಪ್: ಕೊಡಗು ಮೆಡಿಕಲ್ ಕಾಲೇಜು, ಮಡಿಕೇರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ್ ಆಳ್ವ, ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿಕುಮಾರ್ಸ್ವಾಮಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ತಲಾಂತರಗಳಿಂದ ಬಳುವಳಿಯಾಗಿ ಬಂದ ರೈತ ಕಾಯಕ ಮುಂದೊಂದು ದಿನ ದೊಡ್ಡ ಆಸ್ತಿಯಾಗಿ ಹೊರಹೊಮ್ಮಲ್ಲಿದೆ ಎಂದು ಕೆ.ಎಂ ಎಫ್ ನಿರ್ದೇಶಕ ಕೆ. ಶಿವಮೂರ್ತಿ ಉಪಾಧ್ಯಾ ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ , ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರ ಸಹಯೋಗದೊಂದಿಗೆ 49ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಯುವ ಸಮುದಾಯ ಕೃಷಿ ಕಾಯಕದಲ್ಲಿ ಮಂಚೂಣಿಗೆ ನಿಲ್ಲಬೇಕು, ಸರಕಾರ ಕೃಷಿ ಕಾರ್ಯ ಉಳಿಯಲು ವಿವಿಧ ಯೋಜನೆಗಳನ್ನು ರೂಪಿಸಬೇಕು. ಪ್ರಸ್ತುತ ಭತ್ತದ ಬೆಳೆಗೆ ನೈಜ ಬೆಲೆ ನೀಡಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರಲ್ಲದೆ ಕೃಷಿಕರನ್ನು ಗುರುತಿಸುವ ಪಂಚವರ್ಣದ ಕಾರ್ಯ ಅತ್ಯಂತ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು. ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಮಾತನಾಡಿ, ಕೃಷಿ ಕಾರ್ಯದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ಕಚೇರಿಯಲ್ಲಿ ತಾಲೂಕಿನ ಜನ ಸಾಮಾನ್ಯರು ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನೀಡಿರುವ ಅರ್ಜಿಗಳನ್ನು ವಿಲೇವಾರಿ ಮಾಡದೇ ವಿನಾಕಾರಣ ವಿಳಂಬ ಮಾಡುತ್ತಿರುವ ಬಗ್ಗೆ ಇತ್ತೀಚಿಗೆ ಹಲವು ದೂರುಗಳು ಬಂದ ಹಿನ್ನಲೆಯಲ್ಲಿ ತಾಲೂಕು ಕಚೇರಿಗೆ ಬರುವ ಜನ ಸಾಮಾನ್ಯರ ಕೆಲಸವನ್ನು ಮಾಡಿಕೊಡಲು ವಿಳಂಬ ಮಾಡಿದರೆ ಹಾಗೂ ಸತಾಯಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಎಚ್ಚರಿಕೆ ನೀಡಿದರು. ಅವರು ತಾಲೂಕು ಕಚೇರಿ ಪ್ರಜಾ ಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಿಬ್ಬಂದಿಗಳ ಕಾರ್ಯ ವೈಖರಿ ಬಗ್ಗೆ ವಿವಿಧ ವಿಷಯ ನಿರ್ವಾಹಕ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಮಾತನಾಡಿದರು. ಕಚೇರಿಗೆ ಸಿಬ್ಬಂದಿಗಳು ತಮ್ಮ ಸ್ವಭಾವ ಹಾಗೂ ಕಾರ್ಯ ವೈಖರಿಯನ್ನು ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಬದಲಾಯಿಸಿಕೊಳ್ಳಬೇಕು ಎಂದು ತಾಕೀತು ಮಾಡಿದರು. ಕಚೇರಿಗೆ ಬರುವ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡದೇ ಕಚೇರಿಯೊಳಗೆ ಅಲೆದಾಡಿಸದೇ ಸರಿಯಾದ ಮಾಹಿತಿ ನೀಡಲು ಮಾಹಿತಿ ಕೇಂದ್ರದ ವ್ಯವಸ್ಥೆ ಮಾಡಬೇಕು. ಆರ್.ಆರ್.ಟಿ, 11 ಇ, ಸಾಕಷ್ಟು ಅರ್ಜಿಗಳು ಬಾಕಿ ಇದ್ದು ಅದನ್ನು ತ್ವರಿತವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬ್ರಹ್ಮಾವರ ತಾಲೂಕಿನ ಹೇರಾಡಿ ಗ್ರಾಮದ ಕೂಡ್ಲಿ ಸಮೀಪ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೋಳಿಗಳ ಕಾಲಿಗೆ ಕತ್ತಿ ಕಟ್ಟಿ ಮನೋರಂಜನೆ ಹಾಗೂ ಹಣ ಪಣವಾಗಿ ಕಟ್ಟಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಬ್ರಹ್ಮಾವರ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಪ್ರಶಾಂತ್ ಮತ್ತು ರಾಘವೇಂದ್ರ. ಇತರ ಮಂದಿ ಓಡಿ ಹೋಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಆರೋಪಿಗಳಿಂದ ₹2,120 ನಗದು, ಎರಡು ಕೋಳಿಗಳು, ಕೋಳಿಯ ಕಾಲಿಗೆ ಕಟ್ಟಿದ್ದ ಬಾಲ್ಗಳು ಹಾಗೂ ನೈಲಾನ್ ಹಗ್ಗಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
